News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ರೈಲ್ವೆ ನಿಲ್ದಾಣದಲ್ಲಿ ಹೂವು ಮಾರುತ್ತಿದ್ದ ಬಾಲಕಿಯನ್ನು ವಸತಿ ಶಾಲೆಗೆ ಸೇರಿಸಿ ಸಚಿವ. ಈ ಸುದ್ದಿ ನೋಡಿ.!

243

ಸಿಲಿಕಾನ್ ಸಿಟಿಯ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಹೂವು ಮಾರುತ್ತಿದ್ದ ಬಾಲಕಿಯನ್ನು ವಸತಿ ಶಾಲೆಗೆ ಸೇರಿಸಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಸಂಗೀತಾಳ ತಂದೆ, ತಾಯಿಯ ಮನವೊಲಿಸಿ ಕೊನೆಗೂ ಬಾಲಕಿಗೆ ಶಿಕ್ಷಣ ಕಲ್ಪಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಬಾಲಕಿ ರಾಮನಗರದ ಕೈಲಾಂಚದಲ್ಲಿರುವ ವಸತಿ ಶಾಲೆಯಲ್ಲಿ 7ನೇ ತರಗತಿಗೆ ದಾಖಲಾತಿ ಪಡೆದಿದ್ದಾಳೆ.

ಮನೆಯಲ್ಲಿ ಕಡು ಬಡತನವಿರುವ ಕಾರಣಕ್ಕೆ ತಂದೆ ತಾಯಿ ಇದ್ದರೂ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಸಂಗೀತಾ ಹೂವು ಮಾರುತ್ತಿದ್ದಳು. ಸಂಗೀತ ತಂದೆ ಆಕೆಯನ್ನು ಕಾಟಾಚಾರಕ್ಕೆ ಸರ್ಕಾರಿ ಶಾಲೆಗೆ ಸೇರಿಸಿದ್ದರು. ಆದರೆ ಶಾಲೆ ಮುಗಿದ ಮೇಲೆ ಸಂಗೀತಾ ರೈಲ್ವೆ ನಿಲ್ದಾಣದಲ್ಲಿ ಹೂವು ಮಾರುತ್ತ ಕುಟುಂಬಕ್ಕೆ ಸಹಾಯ ಮಾಡುತ್ತಿದ್ದಳು. ಶಾಲೆ ಕಡೆ ಹೆಚ್ಚು ಗಮನ ಕೊಡಲಾಗದೇ, ಕಷ್ಟ ಪಟ್ಟು ಚಿಕ್ಕ ವಯಸ್ಸಿನಲ್ಲಿಯೇ ತಂದೆ, ತಾಯಿಗೆ ಕುಟುಂಬ ನಡೆಸಲು ಸಹಾಯ ಮಾಡುತ್ತಿದ್ದ ಸಂಗೀತಾಳನ್ನು ಕಂಡ ಸಚಿವರು ಆಕೆಯನ್ನು ವಸತಿ ಶಾಲೆಗೆ ಸೇರಿಸಿ ಶಿಕ್ಷಣ ಕೊಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು. 

ಈ ಬಗ್ಗೆ ಸ್ವತಃ ಶಿಕ್ಷಣ ಸಚಿವರೇ ಟ್ವೀಟ್ ಮಾಡಿ ತಿಳಿಸಿದ್ದಾರೆ. ಸಂಗೀತ ಎಂಬ ಈ ಬಾಲಕಿ ಕೆಂಗೇರಿ ರೈಲ್ವೇ ನಿಲ್ದಾಣದ ಬಳಿ ಹೂವು ಮಾರುತ್ತಿದ್ದಳು. ನಮ್ಮ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಆಕೆಯ ಪೋಷಕರ ಮನ ಒಪ್ಪಿಸಿ ಸಂಗೀತ ಳನ್ನು ರಾಮನಗರದ ಮೊರಾರ್ಜೀ ದೇಸಾಯಿ ವಸತಿ ಶಾಲೆಗೆ ಸೇರಿಸಿ ಶಿಕ್ಷಣ ಕೊಡಿಸಲು ಸಜ್ಜಾಗಿದ್ದಾರೆ.ಇಂತಹ ಇನ್ನೂ ಅನೇಕ ಬಾಲ ಕಾರ್ಮಿಕರಿಗೆ ಶಿಕ್ಷಣ ಕೊಡಿಸುವ ಯೋಜನೆ ನಮ್ಮ ಇಲಾಖೆಯದ್ದು..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಭಾರತೀಯ ಸೇನೆಗಾಗಿ ವಿಶೇಷವಾಗಿ ತಯಾರಾದ ಈ ಬೈಕ್ ವಿಶೇಷತೆ ಏನು ಗೊತ್ತಾ?

    ಭಾರತೀಯ ಸೇನಗಾಗಿ ಟಾಟಾ ಮೋಟಾರ್ಸ್ ತಮ್ಮ ಸಫಾರಿ ಸ್ಟೋರ್ಮ್ ಕಾರನ್ನು ತಯಾರಿಸಿ ನೀಡುತ್ತಿರುವ ಬಗ್ಗೆ ನಾವು ಈಗಾಗಲೇ ತಿಳಿದಿದ್ದೇವೆ. ಆದ್ರೆ ಸೇನೆಯಲ್ಲಿ ಬಳಸಲಾಗುತ್ತಿರವ ದ್ವಿಚಕ್ರ ವಾಹನಗಳು ಕಡಿಮೆ ಶಕ್ತಿಶಾಲಿಯಾದ ಕಾರಣ ಚತ್ತೀಸ್‍ಗಢ್‍ನ ಯುವಕನೊಬ್ಬ 800ಸಿಸಿ ಸಾಮರ್ಥ್ಯವಿರುವ ವಿಶೇಷ ಬೈಕ್ ಒಂದನ್ನ ತಯಾರು ಮಾಡಿದ್ದಾನೆ.ಪ್ರಸ್ತುತ ಭಾರತೀಯ ಸೇನೆಯಲ್ಲಿ ರಾಯಲ್ ಎನ್‍ಫೀಲ್ಡ್ ಸಂಸ್ಥೆಯ 350ಸಿಸಿ ಮತ್ತು 500ಸಿಸಿ ಬೈಕ್‍ಗಳನ್ನು ಬಳಸಲಾಗುತ್ತಿದ್ದು, ಅಮೆರಿಕನ್ ಸೇನೆಯು ಹೆಚ್ಚು ಸಾಮರ್ಥ್ಯವಿರುವ ಯುನೈಟೆಡ್ ಮೋಟಾರ್ಸ್‍ನ ಮತ್ತು ಹಾರ್ಲೇ ಡೇವಿಡ್ಸನ್ ಸಂಸ್ಥೆಯ ಅಧಿಕ ಸಾಮರ್ಥ್ಯವಿರುವ ಬೈಕ್‍ಗಳನ್ನು ಬಳಸುತ್ತಿದ್ದಾರೆ….

  • ಸುದ್ದಿ

    ತಪ್ಪಿನ ಅರಿವಾಗಿ ಜೈ ಜಗದೀಶ್ ಅವರ ಬಳಿ ಕ್ಷಮೆ ಯಾಚಿಸಿದ ಕಿಶನ್…!

    ಬಿಗ್ ಬಾಸ್ ಸೀಸನ್-7ನ ಸ್ಪರ್ಧಿ ಡ್ಯಾನ್ಸರ್ ಕಿಶನ್ ಹಿರಿಯ ನಟ ಜೈ ಜಗದೀಶ್ ಅವರ ಬಳಿ ಕ್ಷಮೆ ಕೇಳಿದ್ದಾರೆ. ಕಿಶನ್ ಸೋಮವಾರ ಜೈ ಜಗದೀಶ್ ಅವರ ಜೊತೆ ಜಗಳವಾಡಿದ್ದರು. ಇದಾದ ಬಳಿಕ ಮನೆಯ ಸದಸ್ಯರು ಹಿರಿಯರನ್ನು ಎಲ್ಲರ ಮುಂದೆ ಈ ರೀತಿ ಪ್ರಶ್ನಿಸಬಾರದು ಇದು ಅವರನ್ನು ಅವಮಾನ ಮಾಡಿದಂತೆ ಎಂದು ಕಿಶನ್ ಬಳಿ ಹೇಳಿದ್ದರು. ಹೀಗಾಗಿ ಕಿಶನ್ ಮಂಗಳವಾರ ಜೈ ಜಗದೀಶ್ ಅವರ ಬಳಿ ಹೋಗಿ ಕ್ಷಮೆ ಕೇಳಿದ್ದಾರೆ. ಜೈ ಜಗದೀಶ್ ಅಡುಗೆ ಮನೆಯಲ್ಲಿದ್ದ ವೇಳೆ  ನಾನು…

  • ವಿಚಿತ್ರ ಆದರೂ ಸತ್ಯ

    ಈ ವಿಮಾನದಲ್ಲಿ ಪ್ರಯಾಣಿಸಲು ಬಟ್ಟೆ ಬಿಚ್ಚಿ ಹೋಗ ಬೇಕು..!ತಿಳಿಯಲು ಈ ಲೇಖನ ಓದಿ..

    ನೀವು ಹೊಟೇಲುಗಳಲ್ಲಿ ಹೆಸರಿಗೆ ತೋರಿಸಿಕೊಳ್ಳಲು ಬಟ್ಟೆ ಧರಿಸಿದವರನ್ನು ನೀವು ನೋಡಿರಬಹುದು. ಆದರೆ ಜರ್ಮನಿಯಲ್ಲಿ ಟ್ರಾವೆಲ್ ಏಜೆನ್ಸಿಯೊಂದು ಜಗತ್ತಿನ ಮೊದಲ ನ್ಯೂಡ್ ಏರ್‌ಲೈನ್ಸನ್ನು ಲಾಂಚ್ ಮಾಡಿದೆ. ಇದರಲ್ಲಿ ನೀವು ಬಟ್ಟೆಹಾಕಿಕೊಂಡು ಪ್ರಯಾಣಿಸುವಂತಿಲ್ಲ. ಇದರಲ್ಲಿ ಪ್ರಯಾಣಿಸುವವರು 30 ಸಾವಿರ ಅಡಿ ಎತ್ತರಕ್ಕೆ ಹಾರಿದ ಮೇಲೆ ಬಟ್ಟೆ ತೆಗೆಯುತ್ತಾರೆ.

  • ಕರ್ನಾಟಕ

    ನೋಂದಾಯಿತ ಕಟ್ಟಡ ಕಾರ್ಮಿಕ ಮಕ್ಕಳಿಗೆ ಶಾಲಾ ಕಿಟ್ ವಿತರಣೆ

    ಕೋಲಾರ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸರ್ಕಾರದ ಮಟ್ಟದಲ್ಲಿ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ 01ನೇ ತರಗತಿಯಿಂದ 05 ತರಗತಿಯವರೆಗೆ ಶಾಲಾ ಕಿಟ್‌ಗಳನ್ನು ಕೋಲಾರ ಜಿಲ್ಲೆÀಯ ನೋಂದಾಯಿತ ಕಟ್ಟಡ ಕಾರ್ಮಿಕ ಮಕ್ಕಳಿಗೆ ನೇರವಾಗಿ ಆಯಾ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಛೇರಿಯಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಸೆಂಟ್ರ‍್ರಿAಗ್ ಮತ್ತು ಇತರೆ ಕಟ್ಟಡ ಕಾರ್ಮಿಕರ ಸಂಘ ಅಧ್ಯಕ್ಷರಾದ ನವೀನ್ ಕುಮಾರ್…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ…ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ …

    ಇಂದು  ಶನಿವಾರ , 31/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಲೋಹಗಳ ಉದ್ಯಮಿಗಳಿಗೆ ಹೆಚ್ಚಿನ ಪ್ರಗತಿ. ಕಲಾವಿದರಿಗೆ ಕನಸು ನನಸಾಗುವ ದಿನ. ವಿದೇಶ ಪ್ರಯಾಣಕ್ಕೆ ಯೋಜನೆ ನಿರ್ಮಾಣ ಮಾಡಲಿದ್ದೀರಿ. ಆರೋಗ್ಯ ವಿಷಯದಲ್ಲಿ ಉತ್ತಮ ದಿನವಾಗಿದೆ. ಯೋಗ್ಯ ವಯಸ್ಕರು ಕಂಕಣಧಾರಿಗಳಾದಾರು. ಚಿಲ್ಲರೆ ವ್ಯಾಪಾರಿಗಳಿಗೆ ತೃಪ್ತಿಕರ ಲಾಭ ವಿರುತ್ತದೆ. ದೈವಸಾನ್ನಿಧ್ಯದ ಬಗ್ಗೆ ಯಾತ್ರಾದಿಗಳಿರುತ್ತವೆ. ಭೂ ಖರೀದಿಗಳಿಗೆ ಅನುಕೂಲಕರ ವಾತಾವರಣ.   ವೃಷಭ:- ಕಾರ್ಯಗಳು ಮುನ್ನಡೆಯನ್ನು ಸಾಧಿಸಲಿವೆ. ಅವಿರತ ಶ್ರಮದ ಬೆಲೆ ನಿಮಗೆ ನಿಶ್ಚಿತ ರೂಪದಲ್ಲಿ ಗೋಚರಕ್ಕೆ…

  • ಕರ್ನಾಟಕ

    ಕನ್ನಡಿಗರಾಗಿ ನಮ್ಮ ಮಾತೃ ಭಾಷೆ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ?ಈ ಲೇಖನಿ ಓದಿ…

    ದಿನಬೆಳಗಾದ್ರೆ ನಾವು ಕನ್ನಡಿಗರು ನಮ್ಮ ಕರ್ನಾಟಕ, ಭಾಷೆ ಕನ್ನಡದ ಬಗ್ಗೆ ಹಾಗೆ ಹೀಗೆ ಅಂತ ಮಾತನಾಡುತ್ತೇವೆ. ಆದ್ರೆ ಕನ್ನಡಿಗರಾಗಿ ನಮ್ಮ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ.