News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ರೈಲ್ವೆ ನಿಲ್ದಾಣದಲ್ಲಿ ಹೂವು ಮಾರುತ್ತಿದ್ದ ಬಾಲಕಿಯನ್ನು ವಸತಿ ಶಾಲೆಗೆ ಸೇರಿಸಿ ಸಚಿವ. ಈ ಸುದ್ದಿ ನೋಡಿ.!

243

ಸಿಲಿಕಾನ್ ಸಿಟಿಯ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಹೂವು ಮಾರುತ್ತಿದ್ದ ಬಾಲಕಿಯನ್ನು ವಸತಿ ಶಾಲೆಗೆ ಸೇರಿಸಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಸಂಗೀತಾಳ ತಂದೆ, ತಾಯಿಯ ಮನವೊಲಿಸಿ ಕೊನೆಗೂ ಬಾಲಕಿಗೆ ಶಿಕ್ಷಣ ಕಲ್ಪಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಬಾಲಕಿ ರಾಮನಗರದ ಕೈಲಾಂಚದಲ್ಲಿರುವ ವಸತಿ ಶಾಲೆಯಲ್ಲಿ 7ನೇ ತರಗತಿಗೆ ದಾಖಲಾತಿ ಪಡೆದಿದ್ದಾಳೆ.

ಮನೆಯಲ್ಲಿ ಕಡು ಬಡತನವಿರುವ ಕಾರಣಕ್ಕೆ ತಂದೆ ತಾಯಿ ಇದ್ದರೂ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಸಂಗೀತಾ ಹೂವು ಮಾರುತ್ತಿದ್ದಳು. ಸಂಗೀತ ತಂದೆ ಆಕೆಯನ್ನು ಕಾಟಾಚಾರಕ್ಕೆ ಸರ್ಕಾರಿ ಶಾಲೆಗೆ ಸೇರಿಸಿದ್ದರು. ಆದರೆ ಶಾಲೆ ಮುಗಿದ ಮೇಲೆ ಸಂಗೀತಾ ರೈಲ್ವೆ ನಿಲ್ದಾಣದಲ್ಲಿ ಹೂವು ಮಾರುತ್ತ ಕುಟುಂಬಕ್ಕೆ ಸಹಾಯ ಮಾಡುತ್ತಿದ್ದಳು. ಶಾಲೆ ಕಡೆ ಹೆಚ್ಚು ಗಮನ ಕೊಡಲಾಗದೇ, ಕಷ್ಟ ಪಟ್ಟು ಚಿಕ್ಕ ವಯಸ್ಸಿನಲ್ಲಿಯೇ ತಂದೆ, ತಾಯಿಗೆ ಕುಟುಂಬ ನಡೆಸಲು ಸಹಾಯ ಮಾಡುತ್ತಿದ್ದ ಸಂಗೀತಾಳನ್ನು ಕಂಡ ಸಚಿವರು ಆಕೆಯನ್ನು ವಸತಿ ಶಾಲೆಗೆ ಸೇರಿಸಿ ಶಿಕ್ಷಣ ಕೊಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು. 

ಈ ಬಗ್ಗೆ ಸ್ವತಃ ಶಿಕ್ಷಣ ಸಚಿವರೇ ಟ್ವೀಟ್ ಮಾಡಿ ತಿಳಿಸಿದ್ದಾರೆ. ಸಂಗೀತ ಎಂಬ ಈ ಬಾಲಕಿ ಕೆಂಗೇರಿ ರೈಲ್ವೇ ನಿಲ್ದಾಣದ ಬಳಿ ಹೂವು ಮಾರುತ್ತಿದ್ದಳು. ನಮ್ಮ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಆಕೆಯ ಪೋಷಕರ ಮನ ಒಪ್ಪಿಸಿ ಸಂಗೀತ ಳನ್ನು ರಾಮನಗರದ ಮೊರಾರ್ಜೀ ದೇಸಾಯಿ ವಸತಿ ಶಾಲೆಗೆ ಸೇರಿಸಿ ಶಿಕ್ಷಣ ಕೊಡಿಸಲು ಸಜ್ಜಾಗಿದ್ದಾರೆ.ಇಂತಹ ಇನ್ನೂ ಅನೇಕ ಬಾಲ ಕಾರ್ಮಿಕರಿಗೆ ಶಿಕ್ಷಣ ಕೊಡಿಸುವ ಯೋಜನೆ ನಮ್ಮ ಇಲಾಖೆಯದ್ದು..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್, ತಂತ್ರಜ್ಞಾನ

    ಈಗ ಯೂಟ್ಯೂಬ್ ವಿಡಿಯೋವನ್ನು ವಾಟ್ಸ್‌ಆಪ್‌ನಲ್ಲೇ ನೋಡಬಹುದು..!ಹೇಗೆ ಗೊತ್ತಾ..?ತಿಳಿಯಲು ಇದನ್ನು ಓದಿ ..

    ದೇಶದಲ್ಲಿ ನಡೆಯುತ್ತಿರುವ ಮೊಬೈಲ್ ಡೇಟಾ ಕ್ರಾಂತಿ ಇಡೀ ವಿಶ್ವವನ್ನು ನಮ್ಮ ಕಡೆಗೆ ತಿರುಗುವಂತೆ ಮಾಡಿದೆ. ಈ ಹಿನ್ನಲೆಯಲ್ಲಿ ಗೂಗಲ್-ಫೇಸ್‌ಬುಕ್‌ ಸೇರಿದಂತೆ ಎಲ್ಲಾ ದೈತ್ಯ ಕಂಪನಿಗಳು ಭಾರತದ ಕಡೆಗೆ ಹೆಚ್ಚಿನ ಒಲವು ತೋರಿಸುತ್ತಿದ್ದು, ಭಾರತೀಯರಿಗಾಗಿಗೇ ಸೇವೆಗಳನ್ನು ನೀಡಲು ಮುಂದಾಗಿವೆ.

  • ಜ್ಯೋತಿಷ್ಯ

    ಶನಿವಾರದ ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಶನಿವಾರ, 24/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಆರೋಗ್ಯದ ಕಡೆಗೆ ಗಮನ ಇರಲಿ. ಮನೆಯಲ್ಲಿ ಸಮಾಧಾನದ ವಾತಾವರಣ. ಬಂಧುಗಳೊಡನೆ ಆಕಸ್ಮಿಕ ಪ್ರಯಾಣ. ಆಗಾಗ ಸಂಚಾರ. ಯೋಗ್ಯ ವಯಸ್ಕರಿಗೆ ಮದುವೆ ಯೋಗ. ಗ್ರಹಸ್ಥಿತಿಗಳು ಉತ್ತಮವಾಗಿರುವುದರಿಂದ ಪ್ರತಿದಿನವೂ ಸಂತೋಷ. ಆಸ್ತಿ ವಿವಾದ. ಮಕ್ಕಳು ಮತ್ತು ಮಡದಿಯೊಂದಿಗೆ ಸಂತಸ. ವೃಷಭ:- ದೂರದ ಪ್ರಯಾಣ ಸಾಧ್ಯತೆ. ವಸ್ತ್ರಾಭರಣಗಳ ಖರೀದಿ. ಕಲಹಾದಿಗಳಿಂದ ಕಿರಿಕಿರಿ. ಮಕ್ಕಳ ಬಗ್ಗೆ ಗಮನ ಇರಲಿ. ಧರ್ಮಬಾಹಿರ ಕೆಲಸಗಳ ಬಗ್ಗೆ ಆಸಕ್ತಿ.ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆ ಇಎಅಲಿ….

  • ಉಪಯುಕ್ತ ಮಾಹಿತಿ

    ಭೀಮ್ ಆ್ಯಪ್ ಇದ್ದವರಿಗೆ ಬಂಪರ್ ಆಫರ್.!1ರೂ ಕಳಿಸಿ 51ರೂಪಾಯಿಗಳ ಕ್ಯಾಶ್ಬ್ಯಾಕ್ ಪಡೆಯಿರಿ.!ಹೇಗೆಂದು ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ..

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡಿಜಿಟಲ್‌ ಪೇಮೆಂಟ್‌ ಮೊಬೈಲ್‌ ಆ್ಯಪ್‌ ಆಗಿರುವ ಭೀಮ್‌ ಅನ್ನು ಪ್ರಚಾರ ಪಡಿಸುವ ಸಲುವಾಗಿ ಕೇಂದ್ರ ಸರಕಾರ ಏ.14ರಿಂದ ನಾನಾ ಬಗೆಯ ಕ್ಯಾಶ್‌ ಬ್ಯಾಕ್‌ ಮತ್ತು ಇನ್ಸೆಂಟಿವ್‌ಗಳನ್ನು ನೀಡಲಿದೆ. ಭೀಮ್ ಆ್ಯಪ್’ನ್ನು ಪ್ರಧಾನಿ ನರೇಂದ್ರ ಮೋದಿಯವರು 30 ಡಿಸೆಂಬರ್ 2016ರಂದು ಬಿಡುಗಡೆ ಮಾಡಿದ್ದರು. ಯುಪಿಐ (ಯುನಿಫೈಡ್ ಪೇಮೆಂಟ್ ಇಂಟರ್ ಫೇಸ್) ಮೂಲಕ ಹಣ ಪಾವತಿ ಮಾಡಲು ಬಳಸುವ ಆ್ಯಪ್ ಇದಾಗಿದೆ.   ಈಗಾಗಲೇ ಒಂದು ವರ್ಷ ಪೂರೈಸಿರುವ ಈ ಭೀಮ್…

  • Health, ಆರೋಗ್ಯ, ಉಪಯುಕ್ತ ಮಾಹಿತಿ

    ಸೇಬುಗಳ ಕುರಿತ೦ತೆ ಪ್ರಮುಖವಾದ ಕೆಲವು ಆರೋಗ್ಯ ಸ೦ಬ೦ಧಿ ಪ್ರಯೋಜನಗಳು!!

    ಸೇಬು ಗುಲಾಬಿ ಕುಟುಂಬದಲ್ಲಿನ (ರೋಸೇಸೀ) ಜಾತಿಯಾದ  ಮೇಲಸ್ ಡೊಮೆಸ್ಟಿಕಾಕ್ಕೆ ಸೇರಿದ ಪೋಮ್ ಲಕ್ಷಣಗಳಿರುವ ಸೇಬಿನ ಮರದ ಹಣ್ಣು  ಅದು ಅತ್ಯಂತ ವ್ಯಾಪಕವಾಗಿ ಬೇಸಾಯಮಾಡಲಾದ ಮರಹಣ್ಣುಗಳ ಪೈಕಿ ಒಂದು, ಮತ್ತು ಮಾನವರಿಂದ ಬಳಸಲಾಗುವ ಮೇಲಸ್ಪಂಗಡದ ಅನೇಕ ಸದಸ್ಯಗಳ ಪೈಕಿ ಅತ್ಯಂತ ವ್ಯಾಪಕವಾಗಿ ಪರಿಚಿತವಾಗಿರುವ ಸದಸ್ಯವಾಗಿದೆ. ಈ ಮರವು ಮಧ್ಯ ಏಷ್ಯಾದ ಮೂಲದ್ದು, ಮತ್ತು ಇಂದೂ ಕೂಡ ಇದರ ಕಾಡುಪೂರ್ವಜವನ್ನು ಇಲ್ಲಿ ಕಾಣಬಹುದು. ಸೇಬು ಮೂಲತಃ ಸಮಶೀತೋಷ್ಣ ವಲಯದ ಬೆಳೆ. ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರ ನಡುವಿನ ಭೂಭಾಗವು ಇದರ ಮೂಲ ಪ್ರದೇಶವೆಂದು ತಿಳಿಯಲಾಗಿದ್ದು,ನಂತರ ಈ ಬೆಳೆ ಸಮಶೀತೋಷ್ಣ ವಲಯದ ಎಲ್ಲ…

  • ಶ್ರದ್ಧಾಂಜಲಿ

    ಖ್ಯಾತ ನಟ ನಂದಮೂರಿ ತಾರಕರತ್ನ ನಿಧನ

    ಬೆಂಗಳೂರು: ಟಾಲಿವುಡ್​ ಖ್ಯಾತ ನಟ ನಂದಮೂರಿ ತಾರಕರತ್ನ (Nandamuri Taraka Ratna) ನಿಧನರಾಗಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಇಂದು(ಫೆ.18) ಬೆಂಗಳೂರಿನ ನಾರಾಯಣ ಹೃದಯಾಲದಲ್ಲಿ ತಾರಕರತ್ನ(39) ಕೊನೆಯುಸಿರೆಳೆದಿದ್ದಾರೆ.  ಜನವರಿ 27ರಂದು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಕುಪ್ಪಂ ಬಳಿ ಟಿಡಿಪಿ ಪಾದಯಾತ್ರೆ ವೇಳೆ ಕುಸಿದುಬಿದ್ದಿದ್ದರು. ಆ ವೇಳೆ ತಾರಕರತ್ನಗೆ ಹೃದಯಸ್ತಂಭನವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಬೆಂಗಳೂರಿನ ನಾರಾಯಣ ಹೃದಯಾಲಕ್ಕೆ ಶಿಫ್ಟ್​ ಮಾಡಲಾಗಿತ್ತು.  23 ದಿನಗಳಿಂದ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತಾರಕರತ್ನ ಅವರಿಗೆ, ಬೆಂಗಳೂರಿನ ನಾರಾಯಣ ಆಸ್ಪತ್ರೆಯಲ್ಲಿ ನುರಿತ…

  • ಆರೋಗ್ಯ

    ಈಗಿನ ಚಳಿಗಾಲದಲ್ಲಿ ಆರೋಗ್ಯದ ಮೇಲೆ ಪ್ರಭಾವ ಬೀರುವ ಅನೇಕ ಸಮಸ್ಯೆಗಳಿಗೆ ಇಲ್ಲಿದೆ ನೋಡಿ ಪರಿಹಾರ.

    ನಮ್ಮ ಆರೋಗ್ಯದ ಮೇಲೆ, ನಾವು ಸೇವಿಸುವ ಆಹಾರದ ಜೊತೆಗೆ ವಾತಾವರಣ ಹಾಗೂ ಋತುವಿನ ಪ್ರಭಾವವೂ ಉಂಟಾಗುತ್ತದೆ. ಆರೋಗ್ಯದ ದೃಷ್ಟಿಯಿಂದ ಚಳಿಗಾಲ ತುಂಬಾ ಒಳ್ಳೆಯ ಋತು. ಹೀಗಾಗಿ ಈ ಕಾಲವನ್ನು `ಆರೋಗ್ಯಕರ ಋತು’ ಎಂದು ಹೇಳಲಾಗುತ್ತದೆ.  ಆಯುರ್ವೇದ ಶಾಸ್ತ್ರದ ಅನುಸಾರವಾಗಿ ಸಂತುಲಿತ ಆಹಾರ ಸೇವನೆ, ನಿಯಮಿತ ವ್ಯಾಯಾಮ, ಬಲವರ್ಧಕ ಆಹಾರ ಸೇವನೆಯಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಚಳಿಗಾಲದಲ್ಲಿ ಆರೋಗ್ಯವಂತರಾಗಿ ಇರಲು ಆಯುರ್ವೇದವು ಹಲವು ಸೂತ್ರಗಳನ್ನು ನೀಡಿದೆ. ಅವುಗಳನ್ನು ಪಾಲಿಸುವುದರಿಂದ ಈ ಕಾಲದಲ್ಲಿ ನಿರೋಗಿಗಳಾಗಿ ಇರಬಹುದು. ಆಯುರ್ವೇದ ಹೇಳುವಂತೆ ಚಳಿಗಾಲದಲ್ಲಿ…