News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಕಾಡಿನ ನಾಶವಾಗುತ್ತಿರುವ ಹಿನ್ನೆಲೆ ಬಗ್ಗೆ ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ಹೇಳಿದ್ದೇನು..?

133

ನೀರಿನ  ಸಂರಕ್ಷಣೆಗಾಗಿ ನ್ಯೂಸ್ ​18 ಹಮ್ಮಿಕೊಂಡಿರುವ  #Mission Paani ಆಂದೋಲನ  ಸಾಕಷ್ಟು ಪರಿಣಾಮಕಾರಿಯಾಗಿದೆ. ಇಶಾ ಫೌಂಡೇಶನ್​ ಸಂಸ್ಥಾಪಕ ಸದ್ಗುರು ನೀರಿನ ಸಂರಕ್ಷಣೆ ಕುರಿತು ನ್ಯೂಸ್​ 18 ನಡೆಸಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ. ನೀರನ್ನು ಸಂರಕ್ಷಿಸುವುದು ಹೇಗೆ? ಬರಗಾಲದಿಂದ ತತ್ತರಿಸಿ ಹೋಗಿರುವ ಭೂಮಿಯನ್ನು ಉಳಿಸಿಕೊಳ್ಳುವುದರ ಬಗ್ಗೆ ಮಾಹಿತಿ ನೀಡಿದ್ದಾರೆ. ಕಾಡಿನ ನಾಶವಾಗುತ್ತಿರುವ ಹಿನ್ನೆಲೆ, ಮಳೆ ನೀರು ನದಿಗಳಿಗೆ ಬೇಗನೇ ಹರಿದು ಪ್ರವಾಹಕ್ಕೆ ಕಾರಣವಾಗುತ್ತಿದೆ ಎಂದೂ ಸಹ ತಿಳಿಸಿದರು.

ತಮಿಳುನಾಡಿನಲ್ಲಿ ಈ ವರ್ಷ ಬರಗಾಲ ಸೃಷ್ಟಿಯಾಗಿದ್ದು, ಎಲ್ಲೆಡೆ ನೀರಿಗೆ ಹಾಹಾಕಾರ ಶುರುವಾಗಿದೆ. 2016ರಲ್ಲಿಯೂ ಸಹ ತಮಿಳುನಾಡಿನಲ್ಲಿ ಬರಗಾಲ ಬಂದಿತ್ತು. ಇದು ಹೀಗೆಯೇ ಮುಂದುವರೆದರೆ ನಮ್ಮ ವಿನಾಶ ನಿಶ್ಚಿತ. ಹಾಗಾಗಿ ನೀರನ್ನು ಉಳಿಸುವ ಕೆಲವೊಂದು ಕಾರ್ಯಗಳನ್ನು ಮಾಡಬೇಕಿದೆ ಎಂದರು.

ಮಳೆ ನೀರು ಕೊಯ್ಲು: ನೀರು ಅತ್ಯಮೂಲ್ಯ ಸಂಪನ್ಮೂಲವಾಗಿದೆ. ನದಿ, ಕೊಳ, ಕೆರೆ, ಬಾವಿಯ ನೀರನ್ನು ಸಂರಕ್ಷಿಸುವುದರ ಜೊತೆಗೆ ಮುಖ್ಯವಾಗಿ ನೀರಿನ ಮೂಲವಾದ ಮಳೆ ನೀರನ್ನು ಉಳಿಸಿಕೊಳ್ಳಬೇಕಾಗಿದೆ. ಈ ಮಳೆನೀರು ಕೊಯ್ಲು ಮೂಲಕ ಮಳೆ ನೀರನ್ನು ವರ್ಷಪೂರ್ತಿ ನಮ್ಮ ಬಳಕೆಗೆ ಹಿಡಿದಿಟ್ಟುಕೊಳ್ಳಬೇಕು ಎಂದು ತಿಳಿಸಿದರು. ಸದ್ಗುರು ಅವರು ಮಾತನಾಡುತ್ತಾ ತಮಿಳಿನ ಗಾದೆಯೊಂದನ್ನು ಹೇಳಿದರು. ‘ಕಾವೇರಿ ನಡೆದುಕೊಂಡು ಬಂದರೆ ಮಾತ್ರ ಅವಳು ಅದೃಷ್ಟಲಕ್ಷ್ಮಿ. ಅವಳೇನಾದರೂ ಧಾವಿಸಿ ಬಂದರೆ ಭದ್ರಕಾಳಿ’ ಎಂದು ಹೇಳಿದರು. ಕಾಡು ನಾಶವಾಗುತ್ತಿರುವ ಹಿನ್ನೆಲೆ, ಮಳೆ ನೀರು ನದಿಗಳಿಗೆ ಬೇಗನೇ ಹರಿದು ಪ್ರವಾಹಕ್ಕೆ ಕಾರಣವಾಗುತ್ತಿದೆ ಎಂದೂ ಸಹ ತಿಳಿಸಿದರು.

 ರಾಷ್ಟ್ರ ರಾಜಧಾನಿಯಲ್ಲೇ ನೀರಿನ ಬವಣೆ ಹೆಚ್ಚು; ಬಡವರ ಗೋಳು ಕೇಳುವವರಿಲ್ಲ, ನೀರಿನ ಕೊರತೆ ಬೇಸಿಗೆಯಲ್ಲಿ ಮಾತ್ರ ಗಮನಹರಿಸಬೇಕಾದ ವಿಷಯವಲ್ಲ. ಮಳೆಗಾಲದಲ್ಲಿಯೇ ಹರಿದು ಹೋಗುವ ನೀರನ್ನು ಸಂರಕ್ಷಿಸಿ, ಮುಂದಿನ ದಿನಗಳಿಗೆ ಹಿಡಿದಿಟ್ಟುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಇದಕ್ಕೆ ಚೆನ್ನೈ ನಗರವನ್ನು ಉದಾಹರಣೆಯನ್ನಾಗಿ ನೀಡಿದ ಅವರು, ಒಂದಾನೊಂದು ಕಾಲದಲ್ಲಿ ಚೆನ್ನೈನಲ್ಲಿ 1500 ಕೆರೆಗಳಿದ್ದವು. ಆದರೆ ಈಗ ಒಂದು ಕೆರೆಯೂ ಸಹ ಇಲ್ಲ. ಇದಕ್ಕೆ ಕಾರಣ ಕೆರೆಗಳಿದ್ದ ಜಾಗದಲ್ಲಿ ನಗರಗಳನ್ನು ನಿರ್ಮಿಸಿರುವುದು ಎಂದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇನ್ನುಮುಂದೆ ಮೇಘಾಲಯದಲ್ಲಿ ಒಂದು ದಿನಕ್ಕಿಂತ ಹೆಚ್ಚು ದಿನ ಉಳಿಯಬೇಕೆಂದರೆ ಇದನ್ನು ಪಾಲಿಸಲೇಬೇಕು..!ಏನದು?

    ಇನ್ನು ಮುಂದೆ ಮೇಘಾಲಯದಲ್ಲಿ ಒಂದು ದಿನಕ್ಕಿಂತ ಹೆಚ್ಚು ದಿನ ಉಳಿಯುವುದಾದರೆ ಮೇಘಾಲಯಕ್ಕೆ ಬರುವ ಮುನ್ನ ನೋಂದಾಯಿಸಿಕೊಳ್ಳಬೇಕು. ಅಲ್ಲಿನ ಬುಡಕಟ್ಟು ಜನಾಂಗದವರ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಶುಕ್ರವಾರ ನಡೆದ ಮೇಘಾಲಯ ಸಚಿವ ಸಂಪುಟ ಸಭೆಯಲ್ಲಿ ಅಮೆಂಡ್‌ಮೆಂಟ್ ಗೆ ಒಪ್ಪಿಗೆ ಸಿಕ್ಕಿದೆ. 2016ರ ಮೇಘಾಲಯ ರೆಸಿಡೆಂಟ್  ಕಾಯ್ದೆ ಪ್ರಕಾರ ಈ ವರದಿಯನ್ನು ಮನ್ನಿಸಲಾಗಿದೆ. ತಕ್ಷಣದಿಂದ ಕಾನೂನು ಜಾರಿಯಾಗುವಂತೆ ಆದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ತಿಳಿಸಿದ್ದಾರೆ. ಒಂದೊಮ್ಮೆ 24 ಗಂಟೆಗಿಂತ ಹೆಚ್ಚು ಇರುವುದಾದರೆ ಸರ್ಕಾರಕ್ಕೆ ದಾಖಲೆಗಳನ್ನು ಸಲ್ಲಿಸಬೇಕು. ತಕ್ಷಣದಿಂದ ಜಾರಿಗೆ…

  • ಸುದ್ದಿ

    ‘ಸೋಷಿಯಲ್ ಮೀಡಿಯಾ’ ಬಳಸುವ ಮುನ್ನಾ ಬಾರಿ ಎಚ್ಚರದಿಂದಿರಿ..!ಯಾಕೆ ಗೊತ್ತಾ?

    ಸೋಷಿಯಲ್‌ ಮೀಡಿಯಾಗಳಿಗೆ ಲಗಾಮು ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ. ಪ್ರಚೋದನೆ, ಸುಳ್ಳು ಸುದ್ದಿ, ಮಾನಹಾನಿ ಮತ್ತು ದೇಶದ್ರೋಹಿಗಳಂಥ ಪೋಸ್ಟ್‌ ಹಾಕುವವರ ವಿರುದ್ಧ ಕ್ರಮ ಕೈಗೊಳ್ಳುವುದಕ್ಕಾಗಿ ಜನವರಿ 15ರಿಂದ ಹೊಸ ನಿಯಮ ಜಾರಿಗೆ ತರುತ್ತಿದೆ ನಮ್ಮ ಭಾರತ. ಈ ಬಗ್ಗೆ ಸುಪ್ರೀಕೋರ್ಟ್‌ಗೆ ಇಂದು ವರದಿ ಕೂಡ ಸಲ್ಲಿಸಿದೆ. ಸೋಷಿಯಲ್ ಮೀಡಿಯಾ ಪ್ರೊಫೈಲ್‌ಗಳ ಡೀಕ್ರಿಪ್ಟ್ ಮಾಡಿದ ಡೇಟಾ ಹಂಚಿಕೊಳ್ಳುವ ಬೇಡಿಕೆಗೆ ಸಂಬಂಧಿಸಿದಂತೆ ಮದ್ರಾಸ್, ಬಾಂಬೆ ಮತ್ತು ಮಧ್ಯಪ್ರದೇಶದ ಹೈಕೋರ್ಟ್‌ಗಳಲ್ಲಿ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು ಸುಪ್ರೀಂಕೋರ್ಟ್ ವರ್ಗಾಯಿಸಿಕೊಂಡಿದೆ. ರಾಷ್ಟ್ರೀಯ ಭದ್ರತೆ…

  • ವಿಜ್ಞಾನ

    ಐಐಟಿ ಪ್ರಯೋಗ ಯಶಸ್ವಿಗೊಂಡಿದ್ದು, ಇನ್ಮುಂದೆ ಕೋಳಿಯ ಬದಲು ಗಿಡದಲ್ಲಿ ಮೊಟ್ಟೆಗಳು ಬೆಳೆಯಲಿವೆ ,.!

    ನವದೆಹಲಿ, ಇಷ್ಟು ದಿನ ಮೊಟ್ಟೆ ಮಾಂಸಾಹಾರಿಯೋ,ಸಸ್ಯಾಹಾರಿಯೋ ಎಂಬ ವಾದ, ಪ್ರತಿವಾದಗಳು ಯಥೇಚ್ಚವಾಗಿ ನಡೆಯುತ್ತಿದ್ದವು. ಕೆಲವರು ಕೋಳಿಯ ಭ್ರೂಣವಾಗಿರುವುದರಿಂದ ಇದು ಮಾಂಸಾಹಾರ ಎಂದು ಹೇಳಿದರೆ, ಅದುಪೂರ್ತಿ ಕೋಳಿಯ ರೂಪು ಪಡೆದುಕೊಳ್ಳದ ಕಾರಣ ಅದು ಸಸ್ಯಾಹಾರಿ ಎಂದು ವಾದಿಸುವವರು ಅಧಿಕ ಸಂಖ್ಯೆಯಲ್ಲಿದ್ದರು. ಆದರೆ ಈಗ ಈ ಎಲ್ಲ ವಾದ ಪ್ರತಿವಾದಗಳಿಗೆ ಬ್ರೇಕ್​ ಹಾಕುವ ಮೂಲಕ ಶುದ್ಧ ಸಸ್ಯ ಜನ್ಯ ಮೊಟ್ಟೆಯನ್ನು ಬೆಳೆಯಬಹುದಾಗಿದೆ! ದೆಹಲಿಯ ಇಂಡಿಯನ್​ ಇನ್​ಸ್ಟಿಟ್ಯೂಟ್​ ಆಫ್​ಟೆಕ್ನಾಲಜಿಯ (ಐಐಟಿ) ಸಂಶೋಧಕರು ಗಿಡದಲ್ಲಿಮೊಟ್ಟೆಯನ್ನು ಬೆಳೆದಿದ್ದಾರೆ. ನಾನ್​ ಸಾಯ್​, ಗ್ಲುಟೆನ್​ಮುಕ್ತವಾಗಿರುವ ಈ ಮೊಟ್ಟೆಯನ್ನು…

  • ಸಿನಿಮಾ

    ಅಭಿಮಾನಿಗಳು ಕೊಟ್ಟ ಹೆಸರನ್ನೇ ತಮ್ಮ ಮಗಳಿಗೆ ಇಡಲಿದ್ದಾರೆ ದಂಪತಿ ಯಶ್ ಹಾಗೂ ರಾಧಿಕಾ ಪಂಡಿತ್!ಆ ಹೆಸರೇನು ಗೊತ್ತಾ?

    ಸ್ಯಾಂಡಲ್ವುಡ್ ತಾರಾ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅವರ ಜೀವನದಲ್ಲಿ ಮುದ್ದಾದ ಹೆಣ್ಣು ಮಗು ಎಂಟ್ರಿ ಕೊಟ್ಟು ಮೂರು ತಿಂಗಳಾಗಿದೆ. ಮೂರು ತಿಂಗಳಾದರೂ ಯಶ್ ಹಾಗೂ ರಾಧಿಕಾ ತಮ್ಮ ಮಗಳ ನಾಮಕರಣವನ್ನು ಮಾಡಲಿಲ್ಲ. ಈಗ ಅಭಿಮಾನಿಗಳು ಸೂಚಿಸಿದ ಹೆಸರನ್ನೇ ತಮ್ಮ ಮಗಳಿಗೆ ನಾಮಕರಣ ಮಾಡುತ್ತಿದ್ದಾರೆ. ಯಶ್ ಹಾಗೂ ರಾಧಿಕಾ ಪಂಡಿತ್ ಅವರು ಹೆಣ್ಣು ಮಗುವಿಗೆ ತಂದೆ-ತಾಯಿ ಆಗಿದ್ದಾರೆ ಎಂಬ ಸುದ್ದಿ ಹೊರ ಬರುತ್ತಿದ್ದಂತೆ, ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮಗಳಿಗೆ ಹೆಸರು ಸೂಚಿಸಲು ಪ್ರಾರಂಭಿಸಿದ್ದಾರೆ. ಯಶ್…

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • Sports

    ಪಾಕಿಸ್ತನದ ಅಭಿಮಾನಿಗೆ ಟಿಕೆಟ್ ಕೊಡಿಸಿದ ಧೋನಿ….!

    ಪಾಕಿಸ್ತಾನ ಮೂಲದ ಕ್ರಿಕೆಟ್ ಅಭಿಮಾನಿ ಮೊಹಮ್ಮದ್ ಬಶೀರ್ (ಚಾಚಾ ಶಿಕಾಗೋ) ಅವರಿಗೆ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್. ಧೋನಿ ಭಾನುವಾರ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ಪಂದ್ಯದ ಟಿಕೆಟ್ ಕೊಡಿಸಿದ್ದಾರೆ. ಧೋನಿ ಮತ್ತು ಬಶೀರ್ ಅವರದ್ದು 9 ವರ್ಷದ ಗೆಳತನ. ಜೂನ್ 16ರಂದು ಇಂಗ್ಲೆಂಡ್‍ನ ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಮೈದಾನದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ಪಂದ್ಯಕ್ಕೆ ಧೋನಿ ಚಾಚಾ ಶಿಕಾಗೋ ಅವರಿಗೆ ಟಿಕೆಟ್‍ನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ. ಅಮೆರಿಕದ…