ಉಪಯುಕ್ತ ಮಾಹಿತಿ

ಹೆಚ್ಚಾಗಿ ಮೊಬೈಲ್ ಬಳಕೆ ಮಾಡುವವರಿಗೆ ಎಚ್ಚ್ಚರಿಕೆ, ನಿಮ್ಮ ಜೀವಕ್ಕೆ ದೊಡ್ಡ ಅಪಾಯ.

238

ಈಗಿನ ಕಾಲದಲ್ಲಿ ಮೊಬೈಲ್ ಬಳಕೆ ಮಾಡದೆ ಇರುವವರು ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಹಿಂದಿನ ಕಾಲದಲಿ ಮೊಬೈಲ್ ಫೋನ್ ಗಳು ಇರಲಿಲ್ಲ ಮತ್ತು ಜನರು ಯಾರ ಬಳಿ ಆದರೂ ಮಾತನಾಡಬೇಕು ಅಂದರೆ ಲ್ಯಾಂಡ್ ಲೈನ್ ಅಥವಾ ಅಂಚೆ ಕಚೇರಿಯ ಮೊರೆ ಹೋಗುತ್ತಿದ್ದರು, ಆದರೆ ಈಗ ಒಬ್ಬ ವ್ಯಕ್ತಿ ಎಷ್ಟೇ ದೂರ ಇದ್ದರು ಆತನ ಜೊತೆ ಮೊಬೈಲ್ ಮೂಲಕ ಮಾತನಾಡಬಹುದಾಗಿದೆ. ಇನ್ನು ಕೆಲವು ಮೊಬೈಲ್ ಗಳನ್ನ ಮಾತನಾಡುವುದಕ್ಕೆ ಬಳಸಿದರೆ ಹೆಚ್ಚು ತೊಂದರೆ ಇರುವುದಿಲ್ಲ ಆದರೆ ಇಂದಿನ ಕಾಲದಲ್ಲಿ ಜನರು ಇಂಟೆರ್ ನೆಟ್ ಮೂಲಕ ಆಟವಾಡಲು ಮತ್ತು ಸಾಮಾಜಿಕ ಜಾಲತಾಣವನ್ನ ಬಳಸಲು ಹೆಚ್ಚಿನ ಸಮಯವನ್ನ ಕೊಡುತ್ತಿದ್ದಾರೆ.

ಇನ್ನು ಜನರು ಹೆಚ್ಚಾಗಿ ಮೊಬೈಲ್ ಗಳನ್ನ ಬಳಕೆ ಮಾಡುತ್ತಿರುವುದರಿಂದ ನಾನಾ ರೀತಿಯ ಖಾಯಿಲೆಗಳಿಗೆ ಗುರಿಯಾಗುತ್ತಿದ್ದಾರೆ ಅನ್ನುವುದು ತುಂಬಾ ಬೇಸರದ ಸಂಗತಿ ಆಗಿದೆ. ದಿನದ 24 ಘಂಟೆಯಲ್ಲಿ ಹೆಚ್ಚಿನ ಜನರು 10 ಘಂಟೆಗಳನ್ನ ಮೊಬೈಲ್ ಬಳಕೆ ಮಾಡಲು ಸೀಮಿತವಾಗಿ ಇಡುತ್ತಿದ್ದಾರೆ ಅನ್ನುವುದು ವಿಷಾದದ ಸಂಗತಿಯಾಗಿದೆ. ಇನ್ನು ಕೆಲವರು ಬೆಳಿಗ್ಗೆ ಕಣ್ಣು ಬಿಟ್ಟ ಕೂಡಲೇ ಮೊಬೈಲ್ ಬಳಸಲು ಶುರು ಮಾಡುತ್ತಾರೆ ಮತ್ತು ಮಲಗುವಾಗ ಕೂಡ ತುಂಬಾ ಸಮಯ ಮೊಬೈಲ್ ಬಳಕೆ ಮಾಡುತ್ತಾರೆ, ಇನ್ನು ಕೆಲವರು ಕೆಲಸದ ವಿಷಯವಾಗಿ ಹೆಚ್ಚು ಸಮಯ ಮೊಬೈಲ್ ಬಳಸಿದರೆ ಇನ್ನೂ ಕೆಲವರು ಟೈಮ್ ಪಾಸ್ ಮಾಡುವ ಸಲುವಾಗಿ ಮೊಬೈಲ್ ಬಳಕೆ ಮಾಡುತ್ತಾರೆ.

ಹಾಗಾದರೆ ಹೆಚ್ಚು ಮೊಬೈಲ್ ಬಳಕೆ ಮಾಡುವುದರಿಂದ ಮನುಷ್ಯನ ದೇಹಕ್ಕೆ ಆಗುವ ತೊಂದರೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ. ಮೊಬೈಲ್ ಫೋನ್ ಗಳನ್ನ ಹೆಚ್ಚಾಗಿ ಬಳಕೆ ಮಾಡುವುದರಿಂದ ಮನುಷ್ಯನ ಮಾನಸಿಕ ಒತ್ತಡ ಜಾಸ್ತಿ ಆಗುತ್ತದೆ ಮತ್ತು ಯಾವುದೇ ಕೆಲಸವನ್ನ ಪೂರ್ತಿ ಮಾಡಲು ನಿಮಗೆ ಬಹಳ ಹೆಚ್ಚಿನ ಸಮಯ ಬೇಕಾಗುತ್ತದೆ. ಇನ್ನು ಮೊಬೈಲ್ ಫೋನ್ ಗಳನ್ನ ಜಾಸ್ತಿ ಬಳಕೆ ಮಾಡಿದರೆ ನಿಮ್ಮ ಕೆಲಸಕ್ಕಿಂತ ಜಾಸ್ತಿ ಬೆರೆ ಕಡೆ ನಮ್ಮ ಗಮನ ಹೆಚ್ಚಾಗಿ ಹೋಗುತ್ತದೆ, ಚಾರ್ಜ್ ಕಡಿಮೆ ಆಗಿ ಕೆಲವು ಸಮಯ ನಿಮಗೆ ಮೊಬೈಲ್ ಬಳಸಲು ಆಗಲಿಲ್ಲ ಅಂದರೆ ಹುಚ್ಚು ಹಿಡಿದ ಅನುಭವ ಆಗುತ್ತದೆ ಮತ್ತು ಇದರ ಪರಿಣಾಮ ಜೀವನದಲ್ಲಿ ಹತಾಶೆ ಜಾಸ್ತಿ ಆಗಿ ಯಾವುದೇ ಕೆಲಸದಲ್ಲಿ ಆಸಕ್ತಿ ಇರುವುದಿಲ್ಲ.

ಮೊಬೈಲ್ ಬಳಕೆ ಹೆಚ್ಚು ಬಳಕೆ ಮಾಡುವವರಿಗೆ ಸಣ್ಣ ಸಣ್ಣ ವಿಚಾರಗಳಿಗೂ ಹೆಚ್ಚು ಕೋಪ ಬರುತ್ತದೆ ಮತ್ತು ಭಾವನೆಗಳ ಮೇಲೆ ನಿಯಂತ್ರಣ ಕಡಿಮೆ ಆಗುತ್ತದೆ ಮತ್ತು ಎದುರುಗಡೆ ಇರುವ ವ್ಯಕ್ತಿಯ ಭಾವನೆಗಳು ನಮಗೆ ಅರ್ಥ ಆಗುವುದಿಲ್ಲ. ಇನ್ನು ಇಷ್ಟು ಮಾತ್ರವಲ್ಲದೆ ಮೆದುಳಿನಲ್ಲಿನ ಡೊಫೋಮೈನ್ ರಿಸೆಪ್ಟರ್ಸ್ ಕಡಿಮೆ ಆಗಿ ಮಾನಸಿಕ ಖಿನ್ನತೆ ಅಥವಾ ಡಿಪ್ರೆಶನ್ ಉಂಟಾಗುತ್ತದೆ. ಇನ್ನು ಮೊಬೈಲ್ ಹೆಚ್ಚಾಗಿ ಬಳಸುವವರಿಗೆ ಪದೇ ಪದೇ ಕಾಫಿ ಬೇಕು, ಟೀ ಬೇಕು ಅಥವಾ ಎಣ್ಣೆ ಹೊಡಿಬೇಕು ಮತ್ತು ಹೋಗೆ ಎಳಿಬೇಕು ಅನಿಸುವುದು ಆಗುತ್ತದೆ ಮತ್ತು ಅದನ್ನ ನಿಯಂತ್ರಣಕ್ಕೆ ತರಲು ಆಗುವುದಿಲ್ಲ. ಇನ್ನು ಮೊಬೈಲ್ ಗಳಿಂದ ಬರುವ ವಿಕಿರಣಗಳಿಂದ ಕಣ್ಣಿನ ದೃಷ್ಟಿ ಕಡಿಮೆ ಆಗುತ್ತದೆ ಮತ್ತು ತಲೆ ನೋವು ಹಾಗೆ ಮೈಗ್ರೇನ್ ಪೇನ್ ಕೂಡ ಜಾಸ್ತಿ ಆಗುತ್ತದೆ.

ಮೊಬೈಲ್ ಹೆಚ್ಚು ಬಳಕೆ ಮಾಡಿದರೆ ದೇಹದಲ್ಲಿ ಕೊಬ್ಬಿನ ಅಂಶಗಳ ಸಂಗ್ರಹ ಜಾಸ್ತಿ ಆಗಿ ದೇಹ ದಪ್ಪ ಆಗುತ್ತದೆ, ಇನ್ನು ಇದರ ಜೊತೆಗೆ ಕುತ್ತಿಗೆ ನೋವು, ಬೆನ್ನು ನೋವಿನಂತಹ ಸಮಸ್ಯೆಗಳು ಬರುತ್ತದೆ. ಇನ್ನು ಮೊಬೈಲ್ ಹೆಚ್ಚಾಗಿ ಬಳಕೆ ಮಾಡುವವರಿಗೆ ರಾತ್ರಿಯ ಸಮಯದಲ್ಲಿ ಹೆಚ್ಚಾಗಿ ನಿದ್ರೆ ಬರುವುದಿಲ್ಲ, ಸ್ನೇಹಿತರೆ ಮೊಬೈಲ್ ಗಳನ್ನ ಹೆಚ್ಚು ಬಳಕೆ ಮಾಡುವುದರಿಂದ ಹೀಗೆ ಅನೇಕ ರೀತಿಯ ಸಮಸ್ಯೆಗಳು ಉಂಟಾಗುತ್ತದೆ. ಈಗಿನ ಕಾಲದಲ್ಲಿ ಯುವಕರು ಮತ್ತು ಯುವತಿಯರು ಪಬ್ ಜಿ ಆಟವನ್ನ ಆಡಲು ಹೆಚ್ಚಿನ ಸಮಯ ಹಾಳು ಮಾಡುತ್ತಿದ್ದು ಅದೂ ಅವರ ಆರೋಗ್ಯದ ಮೇಲೆ ತುಂಬಾ ಪ್ರಭಾವನ್ನ ಬೀರುತ್ತಿದೆ, ಸ್ನೇಹಿತರೆ ಇನ್ನಾದರೂ ಸ್ವಲ್ಪ ಎಚ್ಛೆತ್ತುಕೊಳ್ಳಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಗ್ರಾಹಕರಿಗೆ ಶಾಕ್ ನೀಡಿದ ಏರ್‌ಟೆಲ್, ವೊಡಾಫೋನ್; ಡಿಸೆಂಬರ್‌ 1ರಿಂದ ಕರೆ ದುಬಾರಿ!

    ಜಿಯೋ ಗ್ರಾಹಕರ ಬೆನ್ನಲ್ಲೇ ಏರ್‌ಟೆಲ್‌ ಮತ್ತು ವೊಡಾಫೋನ್‌ ಗ್ರಾಹಕರಿಗೆ ಮುಂದಿನ ತಿಂಗಳಿಂದ ಫೋನ್‌ ಬಿಲ್‌ ಶಾಕ್‌ ತಟ್ಟಲಿದೆ. ವೊಡಾಫೋನ್‌ ಐಡಿಯಾ ಹಾಗೂ ಭಾರ್ತಿ ಏರ್‌ಟೆಲ್‌ ಕಂಪನಿಗಳು ಡಿಸೆಂಬರ್‌ 1ರಿಂದ ತನ್ನ ಸೇವೆಗಳ ದರಗಳನ್ನು ಏರಿಕೆ ಮಾಡುವುದಾಗಿ ಘೋಷಿಸಿವೆ. ಕೆಲವೇ ವರ್ಷಗಳ ಹಿಂದೆ ಹತ್ತಾರು ದೂರ ಸಂಪರ್ಕ ಕಂಪೆನಿಗಳು ಗ್ರಾಹಕರನ್ನು ಸೆಳೆಯಲು ತರಹೇವಾರಿ ಆಫರ್‌ಗಳ ಮೂಲಕ ಕಡಿಮೆ ದರ ಸೇವೆಗಳನ್ನು ಘೋಷಿಸುತ್ತಿದ್ದವು. ಆದರೆ ಈಗ ಬಹುತೇಕ ದೂರಸಂಪರ್ಕ ಕಂಪೆನಿಗಳು ಮುಚ್ಚಿ ಹೋಗಿವೆ ಅಥವಾ ವಿಲೀನಗೊಂಡಿವೆ. ಜಿಯೋ, ಏರ್‌ಟೆಲ್, ವೊಡಾಫೊನ್ ಐಡಿಯಾ ಹಾಗೂ ಸರ್ಕಾರಿ ಸ್ವಾಮ್ಯ…

  • ಜ್ಯೋತಿಷ್ಯ

    ದಿನ ಭವಿಷ್ಯ ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಸುದ್ದಿ

    ಪ್ರತಿಪಕ್ಷದ ನಾಯಕರಾದ ಮೇಲೆ ತಮ್ಮ ವರಸೆಯನ್ನು ಬದಲಾಯಿಸಿಕೊಂಡ ಸಿದ್ದರಾಮಯ್ಯ,.!!

     ಪ್ರತಿಪಕ್ಷದ ನಾಯಕರಾದ ಮೇಲೆ ಸಿದ್ದರಾಮಯ್ಯ ತಮ್ಮ ವರಸೆ ಬದಲಾಯಿಸಿದ್ದಾರೆ. ಎಲ್ಲ ಶಾಸಕರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಕಳೆದೆರಡು ದಿನಗಳಲ್ಲಿ ಐದು ಬಾರಿ ಶಾಸಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಅಧಿವೇಶನದಲ್ಲಿ ಹಿರಿಯ ಮುಖಂಡರಾದ ಎಚ್.ಕೆ.ಪಾಟೀಲ್, ರಮೇಶ್‍ಕುಮಾರ್ ಹಾಗೂ ಶಾಸಕರ ಸಲಹೆ ಪಡೆದು ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರತಿಪಕ್ಷದ ನಾಯಕ ಸ್ಥಾನ ಪಡೆಯಲು ಸಿದ್ದರಾಮಯ್ಯನವರು ನಡೆಸಿದ ಪ್ರಯತ್ನದ ಸಂದರ್ಭದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕೆಂದು ಹೈಕಮಾಂಡ್ ಷರತ್ತು ವಿಧಿಸಿದ ಹಿನ್ನೆಲೆಯಲ್ಲಿ ಸಿದ್ದು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಇವರ ಆಪ್ತರು ಹಾಗೂ…

  • ಸುದ್ದಿ

    ಎಂದಿನಂತೆ ಮರಳಿ ಬಂದ ಫೇಸ್ಬುಕ್ ಮತ್ತು ವಾಟ್ಸಪ್….! ತೊಂದರೆಯಾಗಿದ್ದಕ್ಕೆ ಕ್ಷಮೆ ಯಾಚನೆ…

    ವಿಶ್ವದೆಲ್ಲೆಡೆ ಡೌನ್ ಆಗಿದ್ದ ಫೇಸ್‍ಬುಕ್, ವಾಟ್ಸಪ್, ಇನ್‍ಸ್ಟಾಗ್ರಾಮ್ ಮತ್ತೆ ಎಂದಿನಂತೆ ಕೆಲಸ ಮಾಡುತ್ತಿವೆ. ಈ ಬಗ್ಗೆ ಫೇಸ್‍ಬುಕ್ ಇಂದು ಬೆಳಗ್ಗೆ ಸ್ಪಷ್ಟನೆ ನೀಡಿ, ನಮ್ಮ ಕೆಲ ಬಳಕೆದಾರರಿಗೆ ಫೋಟೋ, ವಿಡಿಯೋ ಅಪ್ಲೋಡ್ ಮತ್ತು ಕಳುಹಿಸಲು ಕಷ್ಟವಾಗಿತ್ತು. ಈಗ ಈ ಸಮಸ್ಯೆ ಬಗೆಹರಿದಿದ್ದು ನಾವು ಮರಳಿ ಬಂದಿದ್ದೇವೆ. ಈ ತೊಂದರೆ ಆಗಿದ್ದಕ್ಕೆ ಕ್ಷಮೆ ಕೇಳುತ್ತೇವೆ ಎಂದು ಟ್ವೀಟ್ ಮಾಡಿದೆ. ನಮ್ಮ ಕೆಲ ಬಳಕೆದಾರರಿಗೆ ಫೋಟೋ, ವಿಡಿಯೋ ಅಪ್ಲೋಡ್ ಮತ್ತು ಕಳುಹಿಸಲು ಕಷ್ಟವಾಗುತ್ತಿದೆ ಎನ್ನುವ ವಿಚಾರ ನಮ್ಮ ಗಮನಕ್ಕೆ ಬಂದಿದೆ….

  • ಆರೋಗ್ಯ

    ಕಾಲುಗಳ ಸೆಳೆತದಿಂದ ನಿಮ್ಮ ನಿದ್ದೆ ಹಾಳಾಗಿದೆಯೇ..? ಪರಿಹಾರ ತಿಳಿಯಲು ಈ ಲೇಖನ ಓದಿ ..

    ರಾತ್ರಿ ಹೊತ್ತು ಕಾಲುಸೆಳೆತವುಂಟಾಗಿ ನಿಮಗೆ ಮಧ್ಯೆ ಮಧ್ಯೆ ಎಚ್ಚರವಾಗುತ್ತಿದೆಯೇ..? ಹೀಗೆ ಸೆಳೆತ ಉಂಟಾಗಲು ಹಲವಾರು ಕಾರಣಗಳಿವೆ. ಮಧುಮೇಹ, ನರಗಳ ಬಲಹೀನತೆ, ಗರ್ಭಧಾರಣೆ ಹಾಗೂ ಡೀಹೈಡ್ರೇಶನ್(ನಿರ್ಜಲೀಕರಣ) ಮುಂತಾದ ಕಾರಣಗಳಿಂದ ಕಾಲುಗಳ ಸೆಳೆತ ಉಂಟಾಗಬಹುದು.

  • ಮನರಂಜನೆ

    ಬಿಗ್ ಬಾಸ್’ನಿಂದ ಮಧ್ಯರಾತ್ರಿ ಶಾಕಿಂಗ್ ಎಲಿಮನೇಷನ್..!ರಾತ್ರೋರಾತ್ರಿ ಮನೆಯಿಂದ ಹೊರಹೋದವರು ಯಾರು?ತಿಳಿಯಲು ಮುಂದೆ ಓದಿ…

    ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ‌ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 6 ದಿನಗಳು ಬಾಕಿ ಉಳಿದಿವೆ. ಕೆಲ ವೀಕ್ಷಕರಿಂದ ‘ಡ್ರಾಮಾ ಕ್ವೀನ್’ ಅಂತಲೇ ಕರೆಯಿಸಿಕೊಂಡಿದ್ದ ಅನುಪಮಾ ಗೌಡ ಭಾನುವಾರ ನಡೆದ ಎಲಿಮಿನೇಷನ್ ಪಂಚಾಯ್ತಿಯಲ್ಲಿ ಮನೆಗೆ ಕಳುಹಿಸಲಾಗಿತ್ತು.