ಉಪಯುಕ್ತ ಮಾಹಿತಿ

ಹೆಚ್ಚಾಗಿ ಮೊಬೈಲ್ ಬಳಕೆ ಮಾಡುವವರಿಗೆ ಎಚ್ಚ್ಚರಿಕೆ, ನಿಮ್ಮ ಜೀವಕ್ಕೆ ದೊಡ್ಡ ಅಪಾಯ.

212

ಈಗಿನ ಕಾಲದಲ್ಲಿ ಮೊಬೈಲ್ ಬಳಕೆ ಮಾಡದೆ ಇರುವವರು ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಹಿಂದಿನ ಕಾಲದಲಿ ಮೊಬೈಲ್ ಫೋನ್ ಗಳು ಇರಲಿಲ್ಲ ಮತ್ತು ಜನರು ಯಾರ ಬಳಿ ಆದರೂ ಮಾತನಾಡಬೇಕು ಅಂದರೆ ಲ್ಯಾಂಡ್ ಲೈನ್ ಅಥವಾ ಅಂಚೆ ಕಚೇರಿಯ ಮೊರೆ ಹೋಗುತ್ತಿದ್ದರು, ಆದರೆ ಈಗ ಒಬ್ಬ ವ್ಯಕ್ತಿ ಎಷ್ಟೇ ದೂರ ಇದ್ದರು ಆತನ ಜೊತೆ ಮೊಬೈಲ್ ಮೂಲಕ ಮಾತನಾಡಬಹುದಾಗಿದೆ. ಇನ್ನು ಕೆಲವು ಮೊಬೈಲ್ ಗಳನ್ನ ಮಾತನಾಡುವುದಕ್ಕೆ ಬಳಸಿದರೆ ಹೆಚ್ಚು ತೊಂದರೆ ಇರುವುದಿಲ್ಲ ಆದರೆ ಇಂದಿನ ಕಾಲದಲ್ಲಿ ಜನರು ಇಂಟೆರ್ ನೆಟ್ ಮೂಲಕ ಆಟವಾಡಲು ಮತ್ತು ಸಾಮಾಜಿಕ ಜಾಲತಾಣವನ್ನ ಬಳಸಲು ಹೆಚ್ಚಿನ ಸಮಯವನ್ನ ಕೊಡುತ್ತಿದ್ದಾರೆ.

ಇನ್ನು ಜನರು ಹೆಚ್ಚಾಗಿ ಮೊಬೈಲ್ ಗಳನ್ನ ಬಳಕೆ ಮಾಡುತ್ತಿರುವುದರಿಂದ ನಾನಾ ರೀತಿಯ ಖಾಯಿಲೆಗಳಿಗೆ ಗುರಿಯಾಗುತ್ತಿದ್ದಾರೆ ಅನ್ನುವುದು ತುಂಬಾ ಬೇಸರದ ಸಂಗತಿ ಆಗಿದೆ. ದಿನದ 24 ಘಂಟೆಯಲ್ಲಿ ಹೆಚ್ಚಿನ ಜನರು 10 ಘಂಟೆಗಳನ್ನ ಮೊಬೈಲ್ ಬಳಕೆ ಮಾಡಲು ಸೀಮಿತವಾಗಿ ಇಡುತ್ತಿದ್ದಾರೆ ಅನ್ನುವುದು ವಿಷಾದದ ಸಂಗತಿಯಾಗಿದೆ. ಇನ್ನು ಕೆಲವರು ಬೆಳಿಗ್ಗೆ ಕಣ್ಣು ಬಿಟ್ಟ ಕೂಡಲೇ ಮೊಬೈಲ್ ಬಳಸಲು ಶುರು ಮಾಡುತ್ತಾರೆ ಮತ್ತು ಮಲಗುವಾಗ ಕೂಡ ತುಂಬಾ ಸಮಯ ಮೊಬೈಲ್ ಬಳಕೆ ಮಾಡುತ್ತಾರೆ, ಇನ್ನು ಕೆಲವರು ಕೆಲಸದ ವಿಷಯವಾಗಿ ಹೆಚ್ಚು ಸಮಯ ಮೊಬೈಲ್ ಬಳಸಿದರೆ ಇನ್ನೂ ಕೆಲವರು ಟೈಮ್ ಪಾಸ್ ಮಾಡುವ ಸಲುವಾಗಿ ಮೊಬೈಲ್ ಬಳಕೆ ಮಾಡುತ್ತಾರೆ.

ಹಾಗಾದರೆ ಹೆಚ್ಚು ಮೊಬೈಲ್ ಬಳಕೆ ಮಾಡುವುದರಿಂದ ಮನುಷ್ಯನ ದೇಹಕ್ಕೆ ಆಗುವ ತೊಂದರೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ. ಮೊಬೈಲ್ ಫೋನ್ ಗಳನ್ನ ಹೆಚ್ಚಾಗಿ ಬಳಕೆ ಮಾಡುವುದರಿಂದ ಮನುಷ್ಯನ ಮಾನಸಿಕ ಒತ್ತಡ ಜಾಸ್ತಿ ಆಗುತ್ತದೆ ಮತ್ತು ಯಾವುದೇ ಕೆಲಸವನ್ನ ಪೂರ್ತಿ ಮಾಡಲು ನಿಮಗೆ ಬಹಳ ಹೆಚ್ಚಿನ ಸಮಯ ಬೇಕಾಗುತ್ತದೆ. ಇನ್ನು ಮೊಬೈಲ್ ಫೋನ್ ಗಳನ್ನ ಜಾಸ್ತಿ ಬಳಕೆ ಮಾಡಿದರೆ ನಿಮ್ಮ ಕೆಲಸಕ್ಕಿಂತ ಜಾಸ್ತಿ ಬೆರೆ ಕಡೆ ನಮ್ಮ ಗಮನ ಹೆಚ್ಚಾಗಿ ಹೋಗುತ್ತದೆ, ಚಾರ್ಜ್ ಕಡಿಮೆ ಆಗಿ ಕೆಲವು ಸಮಯ ನಿಮಗೆ ಮೊಬೈಲ್ ಬಳಸಲು ಆಗಲಿಲ್ಲ ಅಂದರೆ ಹುಚ್ಚು ಹಿಡಿದ ಅನುಭವ ಆಗುತ್ತದೆ ಮತ್ತು ಇದರ ಪರಿಣಾಮ ಜೀವನದಲ್ಲಿ ಹತಾಶೆ ಜಾಸ್ತಿ ಆಗಿ ಯಾವುದೇ ಕೆಲಸದಲ್ಲಿ ಆಸಕ್ತಿ ಇರುವುದಿಲ್ಲ.

ಮೊಬೈಲ್ ಬಳಕೆ ಹೆಚ್ಚು ಬಳಕೆ ಮಾಡುವವರಿಗೆ ಸಣ್ಣ ಸಣ್ಣ ವಿಚಾರಗಳಿಗೂ ಹೆಚ್ಚು ಕೋಪ ಬರುತ್ತದೆ ಮತ್ತು ಭಾವನೆಗಳ ಮೇಲೆ ನಿಯಂತ್ರಣ ಕಡಿಮೆ ಆಗುತ್ತದೆ ಮತ್ತು ಎದುರುಗಡೆ ಇರುವ ವ್ಯಕ್ತಿಯ ಭಾವನೆಗಳು ನಮಗೆ ಅರ್ಥ ಆಗುವುದಿಲ್ಲ. ಇನ್ನು ಇಷ್ಟು ಮಾತ್ರವಲ್ಲದೆ ಮೆದುಳಿನಲ್ಲಿನ ಡೊಫೋಮೈನ್ ರಿಸೆಪ್ಟರ್ಸ್ ಕಡಿಮೆ ಆಗಿ ಮಾನಸಿಕ ಖಿನ್ನತೆ ಅಥವಾ ಡಿಪ್ರೆಶನ್ ಉಂಟಾಗುತ್ತದೆ. ಇನ್ನು ಮೊಬೈಲ್ ಹೆಚ್ಚಾಗಿ ಬಳಸುವವರಿಗೆ ಪದೇ ಪದೇ ಕಾಫಿ ಬೇಕು, ಟೀ ಬೇಕು ಅಥವಾ ಎಣ್ಣೆ ಹೊಡಿಬೇಕು ಮತ್ತು ಹೋಗೆ ಎಳಿಬೇಕು ಅನಿಸುವುದು ಆಗುತ್ತದೆ ಮತ್ತು ಅದನ್ನ ನಿಯಂತ್ರಣಕ್ಕೆ ತರಲು ಆಗುವುದಿಲ್ಲ. ಇನ್ನು ಮೊಬೈಲ್ ಗಳಿಂದ ಬರುವ ವಿಕಿರಣಗಳಿಂದ ಕಣ್ಣಿನ ದೃಷ್ಟಿ ಕಡಿಮೆ ಆಗುತ್ತದೆ ಮತ್ತು ತಲೆ ನೋವು ಹಾಗೆ ಮೈಗ್ರೇನ್ ಪೇನ್ ಕೂಡ ಜಾಸ್ತಿ ಆಗುತ್ತದೆ.

ಮೊಬೈಲ್ ಹೆಚ್ಚು ಬಳಕೆ ಮಾಡಿದರೆ ದೇಹದಲ್ಲಿ ಕೊಬ್ಬಿನ ಅಂಶಗಳ ಸಂಗ್ರಹ ಜಾಸ್ತಿ ಆಗಿ ದೇಹ ದಪ್ಪ ಆಗುತ್ತದೆ, ಇನ್ನು ಇದರ ಜೊತೆಗೆ ಕುತ್ತಿಗೆ ನೋವು, ಬೆನ್ನು ನೋವಿನಂತಹ ಸಮಸ್ಯೆಗಳು ಬರುತ್ತದೆ. ಇನ್ನು ಮೊಬೈಲ್ ಹೆಚ್ಚಾಗಿ ಬಳಕೆ ಮಾಡುವವರಿಗೆ ರಾತ್ರಿಯ ಸಮಯದಲ್ಲಿ ಹೆಚ್ಚಾಗಿ ನಿದ್ರೆ ಬರುವುದಿಲ್ಲ, ಸ್ನೇಹಿತರೆ ಮೊಬೈಲ್ ಗಳನ್ನ ಹೆಚ್ಚು ಬಳಕೆ ಮಾಡುವುದರಿಂದ ಹೀಗೆ ಅನೇಕ ರೀತಿಯ ಸಮಸ್ಯೆಗಳು ಉಂಟಾಗುತ್ತದೆ. ಈಗಿನ ಕಾಲದಲ್ಲಿ ಯುವಕರು ಮತ್ತು ಯುವತಿಯರು ಪಬ್ ಜಿ ಆಟವನ್ನ ಆಡಲು ಹೆಚ್ಚಿನ ಸಮಯ ಹಾಳು ಮಾಡುತ್ತಿದ್ದು ಅದೂ ಅವರ ಆರೋಗ್ಯದ ಮೇಲೆ ತುಂಬಾ ಪ್ರಭಾವನ್ನ ಬೀರುತ್ತಿದೆ, ಸ್ನೇಹಿತರೆ ಇನ್ನಾದರೂ ಸ್ವಲ್ಪ ಎಚ್ಛೆತ್ತುಕೊಳ್ಳಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಫುಡ್ ಡೆಲಿವರಿಗೆ ಮಾಡುತ್ತಿದ್ದೀರಾ ಹಾಗಾದರೆ ಇದನ್ನು ನೀವು ತಪ್ಪದೆ ಓದಲೇಬೇಕಾದ ವಿಷಯ,.!!

    ಮನೆ ಬಾಗಿಲಿಗೆ ಆಹಾರ ವಿತರಿಸುವ ಜೊಮ್ಯಾಟೋ ವಿತರಕ ವ್ಯವಸ್ಥೆ ಆರಂಭವಾದಾಗಿನಿಂದಲೂ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇದೆ. ಇದೀಗ ಜೊಮ್ಯಾಟೋ ಡೆಲಿವರಿ ಬಾಯ್ ವಿರುದ್ಧ‌ ವಿಚಿತ್ರ ಆರೋಪವೊಂದು ಕೇಳಿಬಂದಿದ್ದು ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.‌ ಹೌದು ಮಹಾರಾಷ್ಟ್ರದ ಪುಣೆಯಲ್ಲಿ ಇಂತಹದೊಂದು ವಿಚಿತ್ರ ಘಟನೆ ನಡೆದಿದ್ದು ಫುಡ್ ಡೋರ್ ಸ್ಟೆಪ್ ಡೆಲಿವರಿ ಮಾಡುವ ಜೊಮ್ಯಾಟೋ ಡೆಲಿವರಿ ಬಾಯ್ ವಿರುದ್ಧ ನಾಯಿ ಕಳ್ಳತನದ ಆರೋಪ ಕೇಳಿ ಬಂದಿದೆ. ಪುಣೆಯ ಕಾವೇರಿ ರಸ್ತೆಯಲ್ಲಿ ವಾಸವಾಗಿರುವ ವಂದನಾ ಎಂಬಾಕೆ‌ ಜೊಮ್ಯಾಟೋದಲ್ಲಿ ಫುಡ್ ಆರ್ಡರ್ ಮಾಡಿದ್ದು…

  • ಸುದ್ದಿ

    ಮನೆಯಲ್ಲಿ ಶನಿದೇವನ ಸ್ಥಾಪನೆ ಯಾವ ಕಾರಣಕ್ಕೆ ಮಾಡಬಾರದು ಗೊತ್ತ..!

    ಹಿಂದೂ ಧರ್ಮದಲ್ಲಿ ದೇವರ ಪೂಜೆಗೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ನಿಯಮಿತ ಪೂಜೆಗೆ ವಿಶೇಷ ಮಹತ್ವವಿದೆ. ದೇವರನ್ನು ಆರಾಧಿಸುವ ಮೂಲಕ ಮನಸ್ಸಿನಲ್ಲಿ ಸಕಾರಾತ್ಮಕ ಭಾವನೆಗಳು ಉದ್ಭವಿಸುತ್ತವೆ. ಹಾಗಾಗಿ ಜನರು ಬೆಳಿಗ್ಗೆ ಮತ್ತು ಸಂಜೆ ದೇವರ ಪೂಜೆ, ಮಂತ್ರ ಪಠಣ ಮಾಡುತ್ತಾರೆ. ಪ್ರತಿಯೊಬ್ಬರ ದೇವರ ಮನೆಯಲ್ಲೂ ಅನೇಕ ದೇವರುಗಳ ಫೋಟೋಗಳನ್ನು ಇಡಲಾಗುತ್ತದೆ. ಆದ್ರೆ ಕೆಲ ದೇವರ ಫೋಟೋಗಳನ್ನು ಮನೆಯಲ್ಲಿ ಇಡುವಂತಿಲ್ಲ. ಶನಿ ದೇವರ ಫೋಟೋವನ್ನು ಕೂಡ ಮನೆಗೆ ತರಬಾರದು. ಹಿಂದೂ ಧರ್ಮದ ಪ್ರಕಾರ ಶನಿದೇವರ ಫೋಟೋ, ವಿಗ್ರಹವನ್ನು ಮನೆಯಲ್ಲಿ ಇಡಬಾರದು….

  • inspirational

    ಗರ್ಭಿಣಿ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ ಮಾಡಿದ ಪೊಲೀಸರು.

     ಪೊಲೀಸ್ ಮಹಿಳಾ ಸಿಬ್ಬಂದಿಯ ಮಾನಸಿಕ ಒತ್ತಡ ಕಡಿಮೆ ಮಾಡಲು ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸರು ವಿಭಿನ್ನ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಗರ್ಭಿಣಿಯರಿಗೆ ಪೊಲೀಸ್ ಠಾಣೆಯಲ್ಲಿ ಸೀಮಂತ ಮಾಡಿದ್ದಾರೆ. ಪೊಲೀಸರು ಗರ್ಭಿಣಿ ಸಿಬ್ಬಂದಿಗೆ ಆರೋಗ್ಯಕರ ವಾತಾವರಣ ನಿರ್ಮಾಣ ಮಾಡುವ ಪ್ರಯತ್ನ ಮಾಡಿದ್ದು, ಠಾಣೆಯ ಎಲ್ಲಾ ಸಿಬ್ಬಂದಿ ಸೇರಿ ಶಾಸ್ತ್ರೋಕ್ತವಾಗಿ ಸೀಮಂತ ನೆರವೇರಿಸಿದ್ದಾರೆ. ಠಾಣೆಯ ಮಹಿಳಾ ಪೊಲೀಸ್ ಪೇದೆಯಾಗಿದ್ದ ಲಕ್ಷ್ಮೀ ಹಾಗೂ ಮತ್ತೊಬ್ಬ ಮಹಿಳಾ ಪೇದೆ ವೀರಮ್ಮ ಅವರಿಗೆ ಸೀಮಂತ ಮಾಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಗೆ ಕೆಲಸದ ಒತ್ತಡ, ಮಾನಸಿಕ…

  • inspirational

    ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 520 ವರ್ಷ! ಹೇಗಿತ್ತು ಆತನ ಪ್ರಯಾಣ?

    ಯುರೋಪ್​ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್​ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 520 ವರ್ಷ ಕಳೆದಿವೆ. ವಾಸ್ಕೋಡಿಗಾಮ ಭಾತರಕ್ಕೆ ಬಂದು 523 ವರ್ಷಗಳು ಸಂದಿವೆ. 1460ರ ಸುಮಾರಿಗೆ ಜನಿಸಿದ ಪೋರ್ಚುಗೀಸ್​ ಕುಲೀನ ವಾಸ್ಕೋಡಿಗಾಮ 1497ರ ಜುಲೈ 8ರಂದು ಲಿಸ್ಬನ್​ನಿಂದ ಪ್ರಯಾಣ ಕೈಗೊಂಡು 1498 ಮೇ 20ರಂದು ಕ್ಯಾಲಿಕಟ್​ಗೆ ತಲುಪಿದನು. ಯುರೋಪ್​ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್​ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 523 ವರ್ಷ ಕಳೆದಿವೆ. ಭಾರತವನ್ನು ವಾಸ್ಕೋಡಿಗಾಮನಿಗಿಂತ…

  • ಸಿನಿಮಾ

    ತೆರಿಗೆಯಲ್ಲಿ ಕೂಡ “ಬಾಹುಬಲಿ” ಮುಂದೆ

    ಕನ್ನಡ ಪರ ಸಂಘಟನೆಗಳ ಪ್ರತಿಭಟನೆಯ ಹಿನ್ನಲೆಯಲ್ಲಿ ಬಾಹುಬಲಿ 2 ಚಿತ್ರ ರಾಜ್ಯದಲ್ಲಿ ಬಿಡುಗಡೆಯಾಗವ ಬಗ್ಗೆಯೇ ಹಲವು ಪ್ರಶ್ನೆಗಳು ಎದ್ದಿದ್ದವು. ಕಡೆಗೂ ಕಟ್ಟಪ್ಪ ಪಾತ್ರಧಾರಿ ಸತ್ಯರಾಜ್ ತಮ್ಮ ಹೇಳಿಕೆಯ ಕುರಿತು ಕ್ಷಮೆಯಾಚಿಸಿದ ಬಳಿಕ ಚಿತ್ರ ಬಿಡುಗೆಡೆಯಾಗಿ ಚಿತ್ರಮಂದಿಗಳು ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿಕೊಂಡಿದ್ದವು.

  • ಆಧ್ಯಾತ್ಮ

    ರುದ್ರಾಕ್ಷಿ ಧರಿಸುವುದರ ಹಿಂದಿದೆ ನಿಮಗೆ ಗೊತ್ತಿಲ್ಲದ ವೈಜ್ಞಾನಿಕ ಸತ್ಯ! ಹಾಗಾದ್ರೆ ರುದ್ರಾಕ್ಷಿ ಮಹತ್ವ ಏನು ಗೊತ್ತಾ???

    ಶಿವಪರಮಾತ್ಮನ ಉಪಾಸನೆಯಲ್ಲಿ ರುದ್ರಾಕ್ಷಕ್ಕೆ ಅತ್ಯಂತ ಪ್ರಮುಖ ಸ್ಥಾನ.”ರುದ್ರ” ಹಾಗೂ “ಅಕ್ಷ” ಈ ಎರಡು ಪದಗಳಿರುವ ಶಬ್ದ ರುದ್ರಾಕ್ಷ,ಅಂದರೆ ರುದ್ರನ ಕಣ್ಣು.”ರುದ್ರಸ್ಯ ಅಕ್ಷಿಃ ರುದ್ರಾಕ್ಷಃ”. ರುದ್ರಾಕ್ಷವೆಂಬುದು ಒಂದು ಮರ.ಆ ಮರದ ಬೀಜವೇ ರುದ್ರಾಕ್ಷಿ.ಶಿವ ಪುರಾಣ,ವಿದ್ಯೇಶ್ವರ ಸಂಹಿತಾ ಹಾಗೂ ಶ್ರೀ ದೇವೀಭಾಗವತಗಳಲ್ಲಿ ರುದ್ರಾಕ್ಷಕ್ಕೆ ಸಂಬಂಧಿಸಿದ ವಿಷಯಗಳಿವೆ.ಅನೇಕ ವರ್ಷಗಳ ಸತತ ಧ್ಯಾನದ ನಂತರ ಸದಾಶಿವ ತನ್ನ ಕಣ್ಣುಗಳನ್ನು ತೆರೆದ.ಆಗ ಕಣ್ಣುಗಳಿಂದ ಅಶ್ರು ಸುರಿಯಿತು.ಆ ಕಣ್ಣಿರಿನಿಂದಲೇ ಜನ್ಯವಾದದ್ದು ರುದ್ರಾಕ್ಷವೃಕ್ಷ ಎಂಬ ಪೌರಾಣಿಕ ಕಥೆಯಿದೆ.