ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಕಾಲದಲ್ಲಿ ಮೊಬೈಲ್ ಬಳಕೆ ಮಾಡದೆ ಇರುವವರು ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಹಿಂದಿನ ಕಾಲದಲಿ ಮೊಬೈಲ್ ಫೋನ್ ಗಳು ಇರಲಿಲ್ಲ ಮತ್ತು ಜನರು ಯಾರ ಬಳಿ ಆದರೂ ಮಾತನಾಡಬೇಕು ಅಂದರೆ ಲ್ಯಾಂಡ್ ಲೈನ್ ಅಥವಾ ಅಂಚೆ ಕಚೇರಿಯ ಮೊರೆ ಹೋಗುತ್ತಿದ್ದರು, ಆದರೆ ಈಗ ಒಬ್ಬ ವ್ಯಕ್ತಿ ಎಷ್ಟೇ ದೂರ ಇದ್ದರು ಆತನ ಜೊತೆ ಮೊಬೈಲ್ ಮೂಲಕ ಮಾತನಾಡಬಹುದಾಗಿದೆ. ಇನ್ನು ಕೆಲವು ಮೊಬೈಲ್ ಗಳನ್ನ ಮಾತನಾಡುವುದಕ್ಕೆ ಬಳಸಿದರೆ ಹೆಚ್ಚು ತೊಂದರೆ ಇರುವುದಿಲ್ಲ ಆದರೆ ಇಂದಿನ ಕಾಲದಲ್ಲಿ ಜನರು ಇಂಟೆರ್ ನೆಟ್ ಮೂಲಕ ಆಟವಾಡಲು ಮತ್ತು ಸಾಮಾಜಿಕ ಜಾಲತಾಣವನ್ನ ಬಳಸಲು ಹೆಚ್ಚಿನ ಸಮಯವನ್ನ ಕೊಡುತ್ತಿದ್ದಾರೆ.

ಇನ್ನು ಜನರು ಹೆಚ್ಚಾಗಿ ಮೊಬೈಲ್ ಗಳನ್ನ ಬಳಕೆ ಮಾಡುತ್ತಿರುವುದರಿಂದ ನಾನಾ ರೀತಿಯ ಖಾಯಿಲೆಗಳಿಗೆ ಗುರಿಯಾಗುತ್ತಿದ್ದಾರೆ ಅನ್ನುವುದು ತುಂಬಾ ಬೇಸರದ ಸಂಗತಿ ಆಗಿದೆ. ದಿನದ 24 ಘಂಟೆಯಲ್ಲಿ ಹೆಚ್ಚಿನ ಜನರು 10 ಘಂಟೆಗಳನ್ನ ಮೊಬೈಲ್ ಬಳಕೆ ಮಾಡಲು ಸೀಮಿತವಾಗಿ ಇಡುತ್ತಿದ್ದಾರೆ ಅನ್ನುವುದು ವಿಷಾದದ ಸಂಗತಿಯಾಗಿದೆ. ಇನ್ನು ಕೆಲವರು ಬೆಳಿಗ್ಗೆ ಕಣ್ಣು ಬಿಟ್ಟ ಕೂಡಲೇ ಮೊಬೈಲ್ ಬಳಸಲು ಶುರು ಮಾಡುತ್ತಾರೆ ಮತ್ತು ಮಲಗುವಾಗ ಕೂಡ ತುಂಬಾ ಸಮಯ ಮೊಬೈಲ್ ಬಳಕೆ ಮಾಡುತ್ತಾರೆ, ಇನ್ನು ಕೆಲವರು ಕೆಲಸದ ವಿಷಯವಾಗಿ ಹೆಚ್ಚು ಸಮಯ ಮೊಬೈಲ್ ಬಳಸಿದರೆ ಇನ್ನೂ ಕೆಲವರು ಟೈಮ್ ಪಾಸ್ ಮಾಡುವ ಸಲುವಾಗಿ ಮೊಬೈಲ್ ಬಳಕೆ ಮಾಡುತ್ತಾರೆ.

ಹಾಗಾದರೆ ಹೆಚ್ಚು ಮೊಬೈಲ್ ಬಳಕೆ ಮಾಡುವುದರಿಂದ ಮನುಷ್ಯನ ದೇಹಕ್ಕೆ ಆಗುವ ತೊಂದರೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ. ಮೊಬೈಲ್ ಫೋನ್ ಗಳನ್ನ ಹೆಚ್ಚಾಗಿ ಬಳಕೆ ಮಾಡುವುದರಿಂದ ಮನುಷ್ಯನ ಮಾನಸಿಕ ಒತ್ತಡ ಜಾಸ್ತಿ ಆಗುತ್ತದೆ ಮತ್ತು ಯಾವುದೇ ಕೆಲಸವನ್ನ ಪೂರ್ತಿ ಮಾಡಲು ನಿಮಗೆ ಬಹಳ ಹೆಚ್ಚಿನ ಸಮಯ ಬೇಕಾಗುತ್ತದೆ. ಇನ್ನು ಮೊಬೈಲ್ ಫೋನ್ ಗಳನ್ನ ಜಾಸ್ತಿ ಬಳಕೆ ಮಾಡಿದರೆ ನಿಮ್ಮ ಕೆಲಸಕ್ಕಿಂತ ಜಾಸ್ತಿ ಬೆರೆ ಕಡೆ ನಮ್ಮ ಗಮನ ಹೆಚ್ಚಾಗಿ ಹೋಗುತ್ತದೆ, ಚಾರ್ಜ್ ಕಡಿಮೆ ಆಗಿ ಕೆಲವು ಸಮಯ ನಿಮಗೆ ಮೊಬೈಲ್ ಬಳಸಲು ಆಗಲಿಲ್ಲ ಅಂದರೆ ಹುಚ್ಚು ಹಿಡಿದ ಅನುಭವ ಆಗುತ್ತದೆ ಮತ್ತು ಇದರ ಪರಿಣಾಮ ಜೀವನದಲ್ಲಿ ಹತಾಶೆ ಜಾಸ್ತಿ ಆಗಿ ಯಾವುದೇ ಕೆಲಸದಲ್ಲಿ ಆಸಕ್ತಿ ಇರುವುದಿಲ್ಲ.

ಮೊಬೈಲ್ ಬಳಕೆ ಹೆಚ್ಚು ಬಳಕೆ ಮಾಡುವವರಿಗೆ ಸಣ್ಣ ಸಣ್ಣ ವಿಚಾರಗಳಿಗೂ ಹೆಚ್ಚು ಕೋಪ ಬರುತ್ತದೆ ಮತ್ತು ಭಾವನೆಗಳ ಮೇಲೆ ನಿಯಂತ್ರಣ ಕಡಿಮೆ ಆಗುತ್ತದೆ ಮತ್ತು ಎದುರುಗಡೆ ಇರುವ ವ್ಯಕ್ತಿಯ ಭಾವನೆಗಳು ನಮಗೆ ಅರ್ಥ ಆಗುವುದಿಲ್ಲ. ಇನ್ನು ಇಷ್ಟು ಮಾತ್ರವಲ್ಲದೆ ಮೆದುಳಿನಲ್ಲಿನ ಡೊಫೋಮೈನ್ ರಿಸೆಪ್ಟರ್ಸ್ ಕಡಿಮೆ ಆಗಿ ಮಾನಸಿಕ ಖಿನ್ನತೆ ಅಥವಾ ಡಿಪ್ರೆಶನ್ ಉಂಟಾಗುತ್ತದೆ. ಇನ್ನು ಮೊಬೈಲ್ ಹೆಚ್ಚಾಗಿ ಬಳಸುವವರಿಗೆ ಪದೇ ಪದೇ ಕಾಫಿ ಬೇಕು, ಟೀ ಬೇಕು ಅಥವಾ ಎಣ್ಣೆ ಹೊಡಿಬೇಕು ಮತ್ತು ಹೋಗೆ ಎಳಿಬೇಕು ಅನಿಸುವುದು ಆಗುತ್ತದೆ ಮತ್ತು ಅದನ್ನ ನಿಯಂತ್ರಣಕ್ಕೆ ತರಲು ಆಗುವುದಿಲ್ಲ. ಇನ್ನು ಮೊಬೈಲ್ ಗಳಿಂದ ಬರುವ ವಿಕಿರಣಗಳಿಂದ ಕಣ್ಣಿನ ದೃಷ್ಟಿ ಕಡಿಮೆ ಆಗುತ್ತದೆ ಮತ್ತು ತಲೆ ನೋವು ಹಾಗೆ ಮೈಗ್ರೇನ್ ಪೇನ್ ಕೂಡ ಜಾಸ್ತಿ ಆಗುತ್ತದೆ.

ಮೊಬೈಲ್ ಹೆಚ್ಚು ಬಳಕೆ ಮಾಡಿದರೆ ದೇಹದಲ್ಲಿ ಕೊಬ್ಬಿನ ಅಂಶಗಳ ಸಂಗ್ರಹ ಜಾಸ್ತಿ ಆಗಿ ದೇಹ ದಪ್ಪ ಆಗುತ್ತದೆ, ಇನ್ನು ಇದರ ಜೊತೆಗೆ ಕುತ್ತಿಗೆ ನೋವು, ಬೆನ್ನು ನೋವಿನಂತಹ ಸಮಸ್ಯೆಗಳು ಬರುತ್ತದೆ. ಇನ್ನು ಮೊಬೈಲ್ ಹೆಚ್ಚಾಗಿ ಬಳಕೆ ಮಾಡುವವರಿಗೆ ರಾತ್ರಿಯ ಸಮಯದಲ್ಲಿ ಹೆಚ್ಚಾಗಿ ನಿದ್ರೆ ಬರುವುದಿಲ್ಲ, ಸ್ನೇಹಿತರೆ ಮೊಬೈಲ್ ಗಳನ್ನ ಹೆಚ್ಚು ಬಳಕೆ ಮಾಡುವುದರಿಂದ ಹೀಗೆ ಅನೇಕ ರೀತಿಯ ಸಮಸ್ಯೆಗಳು ಉಂಟಾಗುತ್ತದೆ. ಈಗಿನ ಕಾಲದಲ್ಲಿ ಯುವಕರು ಮತ್ತು ಯುವತಿಯರು ಪಬ್ ಜಿ ಆಟವನ್ನ ಆಡಲು ಹೆಚ್ಚಿನ ಸಮಯ ಹಾಳು ಮಾಡುತ್ತಿದ್ದು ಅದೂ ಅವರ ಆರೋಗ್ಯದ ಮೇಲೆ ತುಂಬಾ ಪ್ರಭಾವನ್ನ ಬೀರುತ್ತಿದೆ, ಸ್ನೇಹಿತರೆ ಇನ್ನಾದರೂ ಸ್ವಲ್ಪ ಎಚ್ಛೆತ್ತುಕೊಳ್ಳಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರುಚಿ ರುಚಿ ಕರ್ಜೂರ ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ ಕರ್ಜೂರ ತಿನ್ನುವುದರಿಂದ ಸಾಕಷ್ಟು ಲಾಭಗಳಿವೆ. ಮಿನರಲ್, ಫೈಬರ್, ವಿಟಮಿನ್ ಇದ್ರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಕೇವಲ ಮೂರು ಕರ್ಜೂರ ತಿನ್ನುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಪೋಷಕಾಂಶ ನಮ್ಮ ದೇಹ ಸೇರುತ್ತದೆ.
ಬಿಗ್ ಬಾಸ್ ಸೀಸನ್ 6 ರ ವಿನ್ನರ್ ಆಗಿ ಮಾಡರ್ನ್ ರೈತ ಶಶಿಕುಮಾರ್ ಹೊರಹೊಮ್ಮಿದ್ದಾರೆ. ಇವರಿಗೆ ಪ್ರಬಲ ಸ್ಪರ್ಧೆ ಒಡ್ಡಿದ್ದ ಗಾಯಕ ನವೀನ್ ಸಜ್ಜು ಎರಡನೇ ಸ್ಥಾನ ಪಡೆದಿದ್ದಾರೆ. ಭಾನುವಾರ ರಾತ್ರಿ ನಡೆದ ಗ್ರ್ಯಾಂಡ್ ಫಿನಾಲೆಯ ಕೊನೆಯಲ್ಲಿ ಉಳಿದಿದ್ದ ಗಾಯಕ ನವೀನ್ ಸಜ್ಜು ಮತ್ತು ಶಶಿಕುಮಾರ್ ನಡುವೆ ವಿನ್ನರ್ ಆಗಲು ಬಿಗ್ಫೈಟ್ ನಡೆದಿತ್ತು. ಕಡೆಯದಾಗಿ ಜನಾಭಿಪ್ರಾಯದ ಮೇಲೆ ಶಶಿಯನ್ನು ಬಿಗ್ಬಾಸ್ ನಿರೂಪಕ ಕಿಚ್ಚ ಸುದೀಪ್ ವಿನ್ನರ್ ಎಂದು ಘೋಷಿಸಿದರು. ನವೀನ್ ಸಜ್ಜು ರನ್ನರ್ ಆಗಿ ಹೊರಹೊಮ್ಮಿದ್ರು. ದಿ…
ಸಾಮಾನ್ಯವಾಗಿ ಹೊಸ ವರ್ಷ ಬಂತೆಂದರೆ ಆಚರಣೆಯ ಜೊತೆಗೆ ಎಷ್ಟು ದಿನ ರಜೆ ಇರುವುದು ಎಂಬ ಕುತೂಹಲ ಇದ್ದೇ ಇರುತ್ತದೆ..
2018 ರಲ್ಲಿ ರಜೆ ಬಯಸುವವರಿಗೆ ಬಂಪರ್ ಕೊಡುಗೆ ಎಂದರೇ ತಪ್ಪಾಗಲಾರದು.. ಏಕೆಂದರೆ ಬರೋಬ್ಬರಿ 23 ದಿನಗಳ ಸರ್ಕಾರಿ ರಜೆ ಬಂದಿದೆ..
ಈವರೆಗೆ ವಾಸ್ತುವಿಗೆ ಸಂಬಂಧಿಸಿದಂತೆ ಅನೇಕ ವಿಷಯಗಳನ್ನು ಹೇಳಿದ್ದೇವೆ. ಫೆಂಗ್ ಶೂಯಿಯಲ್ಲಿ ಯಾವ ವಸ್ತು ಮನೆಯಲ್ಲಿದ್ದರೆ ಶುಭ ಹಾಗೆ ಯಾವ ಜಾಗದಲ್ಲಿ ಯಾವ ವಸ್ತು ಇರಬೇಕು ಎಂಬೆಲ್ಲ ವಿಷಯಗಳನ್ನು ಹೇಳಲಾಗಿದೆ. ಇದ್ರ ಜೊತೆಗೆ ಫೆಂಗ್ ಶೂಯಿಯಲ್ಲಿ ಬಟ್ಟೆಗೂ ಮಹತ್ವ ನೀಡಲಾಗಿದೆ. ಯಾವ ಬಟ್ಟೆ ಧರಿಸ್ತೇವೆ ಹಾಗೆ ಬಟ್ಟೆಯನ್ನು ಹೇಗೆ ಬಳಸ್ತೇವೆ ಎಂಬುದು ಫೆಂಗ್ ಶೂಯಿಯಲ್ಲಿ ಮಹತ್ವ ಪಡೆದಿದೆ. ನೀವು ಧರಿಸುವ ಬಟ್ಟೆ ನಿಮ್ಮ ಸೌಂದರ್ಯವನ್ನು ಹೆಚ್ಚಿಸಬಹುದು. ಆದ್ರೆ ಇದೇ ಬಟ್ಟೆ ನಿಮ್ಮ ದುರಾದೃಷ್ಟಕ್ಕೆ ಕಾರಣವಾಗಬಹುದು. ಮನೆಯಿಂದ ಹೊರ ಹೋಗುವಾಗಲ್ಲ…
ಇದು ಭಾರತದ ಜೈಪುರ್ನಲ್ಲಿರುವ ಒಂದು ಅರಮನೆ. ಇದನ್ನು 1799ರಲ್ಲಿ ಮಹಾರಾಜ ಸವಾಯಿ ಪ್ರತಾಪ್ ಸಿಂಗ್ ಅವರು ಕಟ್ಟಿಸಿದ್ದರು, ಮತ್ತು ಲಾಲ್ ಛಂದ್ ಉಸ್ತಾರವರು ಹಿಂದೂ ದೇವರಾದ ಕೃಷ್ಣ ನ ಕಿರೀಟದ ಆಕಾರದಲ್ಲಿ ಇದರ ವಿನ್ಯಾಸಗೊಳಿಸಿದ್ದರು. ಜಟಿಲ ಜಾಲರಿ ಕಾಮಗಾರಿಯಿಂದ ಅಲಂಕೃತ ಝರೊಕಾ ಎಂದು ಕರೆಯಲಾದ 953 ಚಿಕ್ಕ ಕಿಟಕಿಗಳು ಒಳಗೊಂಡಇದರ ಅದ್ವಿತೀವಾದ ಐದು-ಅಂತಸ್ತಿನ ಹೊರರೂಪ ಜೇನುಗೂಡಿನ ಜೇನುಹಟ್ಟಿಗೆ ಕೂಡ ಸದೃಶ್ಯವಾಗಿದೆ. ಈ ಜಲರಿಯ ಮುಖ್ಯ ಉದ್ದೇಶವೆಂದರೆ ರಾಜ ಮನೆತನದ ಮಹಿಳೆಯರಿಗೆ ಅವರು ಕಾಣದಂತೆ ಕೆಳಗಿನ ರಸ್ತೆಯ ದಿನನಿತ್ಯದ ಜೀವನವನ್ನು ನೋಡಲು ಸಾಧ್ಯವಾಗಬೇಕೆಂದು,…
ನಮಗೆ ಬೇಕಾಗಿರೋದು ಕನ್ನಡ, ಎಲ್ಲವನ್ನೂ ಕನ್ನಡದಲ್ಲೇ ಪಡೆಯುವುದು, ಆದರೆ ಕೆಲವರ ಪ್ರಕಾರ ಕನ್ನಡಕ್ಕೆ ಅನ್ಯ ಭಾಷೆಯಿಂದ ಬರುವುದು ತಪ್ಪಂತೆ, ಡಬ್ಬಿಂಗ್ ಭೂತವಂತೆ.