ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಕಾಲದಲ್ಲಿ ಮೊಬೈಲ್ ಬಳಕೆ ಮಾಡದೆ ಇರುವವರು ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಹಿಂದಿನ ಕಾಲದಲಿ ಮೊಬೈಲ್ ಫೋನ್ ಗಳು ಇರಲಿಲ್ಲ ಮತ್ತು ಜನರು ಯಾರ ಬಳಿ ಆದರೂ ಮಾತನಾಡಬೇಕು ಅಂದರೆ ಲ್ಯಾಂಡ್ ಲೈನ್ ಅಥವಾ ಅಂಚೆ ಕಚೇರಿಯ ಮೊರೆ ಹೋಗುತ್ತಿದ್ದರು, ಆದರೆ ಈಗ ಒಬ್ಬ ವ್ಯಕ್ತಿ ಎಷ್ಟೇ ದೂರ ಇದ್ದರು ಆತನ ಜೊತೆ ಮೊಬೈಲ್ ಮೂಲಕ ಮಾತನಾಡಬಹುದಾಗಿದೆ. ಇನ್ನು ಕೆಲವು ಮೊಬೈಲ್ ಗಳನ್ನ ಮಾತನಾಡುವುದಕ್ಕೆ ಬಳಸಿದರೆ ಹೆಚ್ಚು ತೊಂದರೆ ಇರುವುದಿಲ್ಲ ಆದರೆ ಇಂದಿನ ಕಾಲದಲ್ಲಿ ಜನರು ಇಂಟೆರ್ ನೆಟ್ ಮೂಲಕ ಆಟವಾಡಲು ಮತ್ತು ಸಾಮಾಜಿಕ ಜಾಲತಾಣವನ್ನ ಬಳಸಲು ಹೆಚ್ಚಿನ ಸಮಯವನ್ನ ಕೊಡುತ್ತಿದ್ದಾರೆ.

ಇನ್ನು ಜನರು ಹೆಚ್ಚಾಗಿ ಮೊಬೈಲ್ ಗಳನ್ನ ಬಳಕೆ ಮಾಡುತ್ತಿರುವುದರಿಂದ ನಾನಾ ರೀತಿಯ ಖಾಯಿಲೆಗಳಿಗೆ ಗುರಿಯಾಗುತ್ತಿದ್ದಾರೆ ಅನ್ನುವುದು ತುಂಬಾ ಬೇಸರದ ಸಂಗತಿ ಆಗಿದೆ. ದಿನದ 24 ಘಂಟೆಯಲ್ಲಿ ಹೆಚ್ಚಿನ ಜನರು 10 ಘಂಟೆಗಳನ್ನ ಮೊಬೈಲ್ ಬಳಕೆ ಮಾಡಲು ಸೀಮಿತವಾಗಿ ಇಡುತ್ತಿದ್ದಾರೆ ಅನ್ನುವುದು ವಿಷಾದದ ಸಂಗತಿಯಾಗಿದೆ. ಇನ್ನು ಕೆಲವರು ಬೆಳಿಗ್ಗೆ ಕಣ್ಣು ಬಿಟ್ಟ ಕೂಡಲೇ ಮೊಬೈಲ್ ಬಳಸಲು ಶುರು ಮಾಡುತ್ತಾರೆ ಮತ್ತು ಮಲಗುವಾಗ ಕೂಡ ತುಂಬಾ ಸಮಯ ಮೊಬೈಲ್ ಬಳಕೆ ಮಾಡುತ್ತಾರೆ, ಇನ್ನು ಕೆಲವರು ಕೆಲಸದ ವಿಷಯವಾಗಿ ಹೆಚ್ಚು ಸಮಯ ಮೊಬೈಲ್ ಬಳಸಿದರೆ ಇನ್ನೂ ಕೆಲವರು ಟೈಮ್ ಪಾಸ್ ಮಾಡುವ ಸಲುವಾಗಿ ಮೊಬೈಲ್ ಬಳಕೆ ಮಾಡುತ್ತಾರೆ.

ಹಾಗಾದರೆ ಹೆಚ್ಚು ಮೊಬೈಲ್ ಬಳಕೆ ಮಾಡುವುದರಿಂದ ಮನುಷ್ಯನ ದೇಹಕ್ಕೆ ಆಗುವ ತೊಂದರೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ. ಮೊಬೈಲ್ ಫೋನ್ ಗಳನ್ನ ಹೆಚ್ಚಾಗಿ ಬಳಕೆ ಮಾಡುವುದರಿಂದ ಮನುಷ್ಯನ ಮಾನಸಿಕ ಒತ್ತಡ ಜಾಸ್ತಿ ಆಗುತ್ತದೆ ಮತ್ತು ಯಾವುದೇ ಕೆಲಸವನ್ನ ಪೂರ್ತಿ ಮಾಡಲು ನಿಮಗೆ ಬಹಳ ಹೆಚ್ಚಿನ ಸಮಯ ಬೇಕಾಗುತ್ತದೆ. ಇನ್ನು ಮೊಬೈಲ್ ಫೋನ್ ಗಳನ್ನ ಜಾಸ್ತಿ ಬಳಕೆ ಮಾಡಿದರೆ ನಿಮ್ಮ ಕೆಲಸಕ್ಕಿಂತ ಜಾಸ್ತಿ ಬೆರೆ ಕಡೆ ನಮ್ಮ ಗಮನ ಹೆಚ್ಚಾಗಿ ಹೋಗುತ್ತದೆ, ಚಾರ್ಜ್ ಕಡಿಮೆ ಆಗಿ ಕೆಲವು ಸಮಯ ನಿಮಗೆ ಮೊಬೈಲ್ ಬಳಸಲು ಆಗಲಿಲ್ಲ ಅಂದರೆ ಹುಚ್ಚು ಹಿಡಿದ ಅನುಭವ ಆಗುತ್ತದೆ ಮತ್ತು ಇದರ ಪರಿಣಾಮ ಜೀವನದಲ್ಲಿ ಹತಾಶೆ ಜಾಸ್ತಿ ಆಗಿ ಯಾವುದೇ ಕೆಲಸದಲ್ಲಿ ಆಸಕ್ತಿ ಇರುವುದಿಲ್ಲ.

ಮೊಬೈಲ್ ಬಳಕೆ ಹೆಚ್ಚು ಬಳಕೆ ಮಾಡುವವರಿಗೆ ಸಣ್ಣ ಸಣ್ಣ ವಿಚಾರಗಳಿಗೂ ಹೆಚ್ಚು ಕೋಪ ಬರುತ್ತದೆ ಮತ್ತು ಭಾವನೆಗಳ ಮೇಲೆ ನಿಯಂತ್ರಣ ಕಡಿಮೆ ಆಗುತ್ತದೆ ಮತ್ತು ಎದುರುಗಡೆ ಇರುವ ವ್ಯಕ್ತಿಯ ಭಾವನೆಗಳು ನಮಗೆ ಅರ್ಥ ಆಗುವುದಿಲ್ಲ. ಇನ್ನು ಇಷ್ಟು ಮಾತ್ರವಲ್ಲದೆ ಮೆದುಳಿನಲ್ಲಿನ ಡೊಫೋಮೈನ್ ರಿಸೆಪ್ಟರ್ಸ್ ಕಡಿಮೆ ಆಗಿ ಮಾನಸಿಕ ಖಿನ್ನತೆ ಅಥವಾ ಡಿಪ್ರೆಶನ್ ಉಂಟಾಗುತ್ತದೆ. ಇನ್ನು ಮೊಬೈಲ್ ಹೆಚ್ಚಾಗಿ ಬಳಸುವವರಿಗೆ ಪದೇ ಪದೇ ಕಾಫಿ ಬೇಕು, ಟೀ ಬೇಕು ಅಥವಾ ಎಣ್ಣೆ ಹೊಡಿಬೇಕು ಮತ್ತು ಹೋಗೆ ಎಳಿಬೇಕು ಅನಿಸುವುದು ಆಗುತ್ತದೆ ಮತ್ತು ಅದನ್ನ ನಿಯಂತ್ರಣಕ್ಕೆ ತರಲು ಆಗುವುದಿಲ್ಲ. ಇನ್ನು ಮೊಬೈಲ್ ಗಳಿಂದ ಬರುವ ವಿಕಿರಣಗಳಿಂದ ಕಣ್ಣಿನ ದೃಷ್ಟಿ ಕಡಿಮೆ ಆಗುತ್ತದೆ ಮತ್ತು ತಲೆ ನೋವು ಹಾಗೆ ಮೈಗ್ರೇನ್ ಪೇನ್ ಕೂಡ ಜಾಸ್ತಿ ಆಗುತ್ತದೆ.

ಮೊಬೈಲ್ ಹೆಚ್ಚು ಬಳಕೆ ಮಾಡಿದರೆ ದೇಹದಲ್ಲಿ ಕೊಬ್ಬಿನ ಅಂಶಗಳ ಸಂಗ್ರಹ ಜಾಸ್ತಿ ಆಗಿ ದೇಹ ದಪ್ಪ ಆಗುತ್ತದೆ, ಇನ್ನು ಇದರ ಜೊತೆಗೆ ಕುತ್ತಿಗೆ ನೋವು, ಬೆನ್ನು ನೋವಿನಂತಹ ಸಮಸ್ಯೆಗಳು ಬರುತ್ತದೆ. ಇನ್ನು ಮೊಬೈಲ್ ಹೆಚ್ಚಾಗಿ ಬಳಕೆ ಮಾಡುವವರಿಗೆ ರಾತ್ರಿಯ ಸಮಯದಲ್ಲಿ ಹೆಚ್ಚಾಗಿ ನಿದ್ರೆ ಬರುವುದಿಲ್ಲ, ಸ್ನೇಹಿತರೆ ಮೊಬೈಲ್ ಗಳನ್ನ ಹೆಚ್ಚು ಬಳಕೆ ಮಾಡುವುದರಿಂದ ಹೀಗೆ ಅನೇಕ ರೀತಿಯ ಸಮಸ್ಯೆಗಳು ಉಂಟಾಗುತ್ತದೆ. ಈಗಿನ ಕಾಲದಲ್ಲಿ ಯುವಕರು ಮತ್ತು ಯುವತಿಯರು ಪಬ್ ಜಿ ಆಟವನ್ನ ಆಡಲು ಹೆಚ್ಚಿನ ಸಮಯ ಹಾಳು ಮಾಡುತ್ತಿದ್ದು ಅದೂ ಅವರ ಆರೋಗ್ಯದ ಮೇಲೆ ತುಂಬಾ ಪ್ರಭಾವನ್ನ ಬೀರುತ್ತಿದೆ, ಸ್ನೇಹಿತರೆ ಇನ್ನಾದರೂ ಸ್ವಲ್ಪ ಎಚ್ಛೆತ್ತುಕೊಳ್ಳಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಮ್ಮಡಿಗಳಲ್ಲಿ ಬಿರುಕು ಏಕೆ ಬರುತ್ತದೆ ಎಂಬುದನ್ನು ಅರಿಯುವ ಮುನ್ನ ನಮ್ಮ ಪಾದಗಳ ಚರ್ಮದ ಬಗ್ಗೆ ಅರಿಯುವುದು ಉತ್ತಮ. ನಮ್ಮ ಯಾವುದೇ ಪ್ರಶ್ನೆಗಳಿಗೆ ನಿಮ್ಮ ಉತ್ತರ ಹೌದು ಎಂದಾದರೆ ಕೆಳಗೆ ವಿವರಿಸಿರುವ ಮನೆಮದ್ದು ನಿಮ್ಮ ತೊಂದರೆಯನ್ನು ನಿವಾರಿಸಲಿದೆ.
ಈ ಸುದ್ದಿಯ ಶೀರ್ಷಿಕೆ ಓದುವಾಗಲೇ ಓದುಗರಿಗೆ ಗೊಂದಲವಾಗಿರಬಹುದು. ಹೌದು ಇಂತಹದ್ದೊಂದು ಘಟನೆಯು ಉತ್ತರಪ್ರದೇಶ ರಾಜ್ಯದ ಬದೌನ್ ಎಂಬ ನಗರದಲ್ಲಿ ನಡೆದಿದೆ. ಆದರೆ ನೆರೆಮನೆಯ ವ್ಯಕ್ತಿಗಳು ಜಗಳವಾಡಿದರೆ ನಾಯಿ ಹೇಗೆ ಜೈಲು ಸೇರುತ್ತದೆ ಎಂಬುವುದರ ಕುರಿತು ಕುತೂಹಲವಿರಬಹುದು.
ಚಿಕ್ಕಮಗಳೂರಿನ ಖ್ಯಾತ ಉದ್ಯಮಿಯಾದ ಸಿದ್ದಾರ್ಥ್ ರವರು ನಿಗೂಢವಾಗಿ ಕಣ್ಮರೆಯಾಗಿರುವುದು ಅವರ ಹುಟ್ಟೂರು ಚಿಕ್ಕಮಗಳೂರಿನ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸಿದ್ಧಾರ್ಥ್ ಅವರ ಸಂಸ್ಥೆಯಲ್ಲಿ ಮೊದಲಿನಿಂದಲೂ ವಿದ್ಯುತ್ ಕಂಟ್ರಾಕ್ಟರ್ ಆಗಿ ಕೆಲಸ ಮಾಡುತ್ತಿರುವ ರುದ್ರೇಶ್ ಕಡೂರು ಕೆಲವೊಂದು ವಿಚಾರಗಳನ್ನು ನಮ್ಮ ಜೊತೆಗೆ ಹಂಚಿಕೊಂಡು ಕಣ್ಣೀರನ್ನು ಹಾಕಿದ್ದಾರೆ. ಸಿದ್ಧಾರ್ಥ್ ಅವರ ತಂದೆ ನೀಡಿದ ಮಾಹಿತಿ ಪ್ರಕಾರ, 1983ರಲ್ಲಿ ಸಿದ್ಧಾರ್ಥ್ 2 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದರು. ಅಲ್ಲಿ ಉದ್ಯಮ ಆರಂಭಿಸಿ ನಷ್ಟ ಅನುಭವಿಸಿ ಮನೆಗೆ ವಾಪಸ್ ಬಂದಿದ್ದರು. ಕೆಲ ದಿನಗಳ…
ಸೌತೆಕಾಯಿಗಳು 95% ನೀರನ್ನು ಒಳಗೊಂಡಿರುತ್ತವೆ ಮತ್ತು ಇದು ಅವರಿಗೆ ಸೂಕ್ತವಾದ ಹೈಡ್ರೇಟಿಂಗ್ ಮತ್ತು ತಂಪಾಗಿಸುವ ಆಹಾರವಾಗಿಸುತ್ತದೆ. ಸೌತೆಕಾಯಿಗಳು ಫಿಸೆಟಿನ್ ಎಂಬ ಉರಿಯೂತದ ಫ್ಲೇವನಾಲ್ ಅನ್ನು ಹೊಂದಿರುತ್ತವೆ, ಇದು ನಿಮ್ಮ ಮೆದುಳಿನ ಆರೋಗ್ಯವನ್ನು ನೋಡಿಕೊಳ್ಳುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಸೌತೆಕಾಯಿಗಳಲ್ಲಿ ಲಿಗ್ನಾನ್ಸ್ ಎಂಬ ಪಾಲಿಫಿನಾಲ್ಗಳಿವೆ, ಇದು ಸ್ತನ, ಗರ್ಭಾಶಯ, ಅಂಡಾಶಯ ಮತ್ತು ಪ್ರಾಸ್ಟೇಟ್ ಕ್ಯಾನ್ಸರ್ ಅಪಾಯಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಸೌತೆಕಾಯಿ ಸಾರವು ಅನಗತ್ಯ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಉರಿಯೂತದ ಪರ ಕಿಣ್ವಗಳ ಚಟುವಟಿಕೆಯನ್ನು ತಡೆಯುವ…
ಭಾರತ ಮತ್ತು ಚೀನಾಗಳ ನಡುವಿನ ರಾಜಕೀಯ ಪರಿಸ್ತಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು ಯುದ್ದದ ಕಾರ್ಮೋಡದ ಛಾಯೆ ಉಭಯ ದೇಶಗಳ ಮೇಲೆ ಕಾಡುತ್ತಿದೆ.
ಮಂಗಳಮುಖಿಯರು ಕೂಡ ನಮ್ಮ ಸಮಾಜದ ಒಂದು ಭಾಗವಾಗಿದ್ದಾರೆ, ಆದರೆ ಎಷ್ಟೋ ಮಂದಿ ಇಂದು ಅವರಿಗೆ ಸಲ್ಲಬೇಕಾದ ಸ್ಥಾನಮಾನ ನೀಡಲು ಒಪ್ಪಿಕೊಳ್ಳುವುದಿಲ್ಲ ಮತ್ತು ಅವರನ್ನು ಕೀಳಾಗಿ ಅಥವಾ ಕೆಟ್ಟ ಕೆಲಸಗಳನ್ನು ಮಾಡಲು ಉಪಯೋಗಿಸಿಕೊಳ್ಳುತ್ತಾರೆ. ನಿಮಗೆ ಗೊತ್ತಿರಲಿ ಹಿಂದೊಂದುದಿನ ಅಂದರೆ ಪುರಾಣ ಕಾಲದಲ್ಲಿಯೂ ಕೂಡ ಮಂಗಳ ಮುಖಿಯರಿಗೆ ಉತ್ತಮ ಸ್ಥಾನ ನೀಡಲಾಗಿತ್ತು,ಶಾಸ್ತ್ರಗಳ ಪಕಾರ ಮಂಗಳಮುಖಿಯರಿಗೆ ದಾನಮಾಡುವುದರಿಂದ ಭಗವಾನ್ ವಿಷ್ಣುವಿನ ಕ್ರಪೆಸಿಗುತ್ತದೆ ಎಂದು ಹೇಳಲಾಗುತ್ತದೆ ಮತ್ತುವಿಷ್ಣುವಿನ ಆಶೀರ್ವಾದ ಮತ್ತು ಗ್ರಹಗಳ ಸಂಚಾರದಲ್ಲಿಸಿಗುತ್ತದೆ ಎಂದು ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ. ಇಷ್ಟೇ ಅಲ್ಲದೆ ಇವರಿಗೆ ಯಾವವಸ್ತುಗಳನ್ನು…