News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಹೆಚ್ಚಾಗಿ ಮೊಬೈಲ್ ಬಳಕೆ ಮಾಡುವವರಿಗೆ ಎಚ್ಚ್ಚರಿಕೆ, ನಿಮ್ಮ ಜೀವಕ್ಕೆ ದೊಡ್ಡ ಅಪಾಯ.

276

ಈಗಿನ ಕಾಲದಲ್ಲಿ ಮೊಬೈಲ್ ಬಳಕೆ ಮಾಡದೆ ಇರುವವರು ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಹಿಂದಿನ ಕಾಲದಲಿ ಮೊಬೈಲ್ ಫೋನ್ ಗಳು ಇರಲಿಲ್ಲ ಮತ್ತು ಜನರು ಯಾರ ಬಳಿ ಆದರೂ ಮಾತನಾಡಬೇಕು ಅಂದರೆ ಲ್ಯಾಂಡ್ ಲೈನ್ ಅಥವಾ ಅಂಚೆ ಕಚೇರಿಯ ಮೊರೆ ಹೋಗುತ್ತಿದ್ದರು, ಆದರೆ ಈಗ ಒಬ್ಬ ವ್ಯಕ್ತಿ ಎಷ್ಟೇ ದೂರ ಇದ್ದರು ಆತನ ಜೊತೆ ಮೊಬೈಲ್ ಮೂಲಕ ಮಾತನಾಡಬಹುದಾಗಿದೆ. ಇನ್ನು ಕೆಲವು ಮೊಬೈಲ್ ಗಳನ್ನ ಮಾತನಾಡುವುದಕ್ಕೆ ಬಳಸಿದರೆ ಹೆಚ್ಚು ತೊಂದರೆ ಇರುವುದಿಲ್ಲ ಆದರೆ ಇಂದಿನ ಕಾಲದಲ್ಲಿ ಜನರು ಇಂಟೆರ್ ನೆಟ್ ಮೂಲಕ ಆಟವಾಡಲು ಮತ್ತು ಸಾಮಾಜಿಕ ಜಾಲತಾಣವನ್ನ ಬಳಸಲು ಹೆಚ್ಚಿನ ಸಮಯವನ್ನ ಕೊಡುತ್ತಿದ್ದಾರೆ.

ಇನ್ನು ಜನರು ಹೆಚ್ಚಾಗಿ ಮೊಬೈಲ್ ಗಳನ್ನ ಬಳಕೆ ಮಾಡುತ್ತಿರುವುದರಿಂದ ನಾನಾ ರೀತಿಯ ಖಾಯಿಲೆಗಳಿಗೆ ಗುರಿಯಾಗುತ್ತಿದ್ದಾರೆ ಅನ್ನುವುದು ತುಂಬಾ ಬೇಸರದ ಸಂಗತಿ ಆಗಿದೆ. ದಿನದ 24 ಘಂಟೆಯಲ್ಲಿ ಹೆಚ್ಚಿನ ಜನರು 10 ಘಂಟೆಗಳನ್ನ ಮೊಬೈಲ್ ಬಳಕೆ ಮಾಡಲು ಸೀಮಿತವಾಗಿ ಇಡುತ್ತಿದ್ದಾರೆ ಅನ್ನುವುದು ವಿಷಾದದ ಸಂಗತಿಯಾಗಿದೆ. ಇನ್ನು ಕೆಲವರು ಬೆಳಿಗ್ಗೆ ಕಣ್ಣು ಬಿಟ್ಟ ಕೂಡಲೇ ಮೊಬೈಲ್ ಬಳಸಲು ಶುರು ಮಾಡುತ್ತಾರೆ ಮತ್ತು ಮಲಗುವಾಗ ಕೂಡ ತುಂಬಾ ಸಮಯ ಮೊಬೈಲ್ ಬಳಕೆ ಮಾಡುತ್ತಾರೆ, ಇನ್ನು ಕೆಲವರು ಕೆಲಸದ ವಿಷಯವಾಗಿ ಹೆಚ್ಚು ಸಮಯ ಮೊಬೈಲ್ ಬಳಸಿದರೆ ಇನ್ನೂ ಕೆಲವರು ಟೈಮ್ ಪಾಸ್ ಮಾಡುವ ಸಲುವಾಗಿ ಮೊಬೈಲ್ ಬಳಕೆ ಮಾಡುತ್ತಾರೆ.

ಹಾಗಾದರೆ ಹೆಚ್ಚು ಮೊಬೈಲ್ ಬಳಕೆ ಮಾಡುವುದರಿಂದ ಮನುಷ್ಯನ ದೇಹಕ್ಕೆ ಆಗುವ ತೊಂದರೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ. ಮೊಬೈಲ್ ಫೋನ್ ಗಳನ್ನ ಹೆಚ್ಚಾಗಿ ಬಳಕೆ ಮಾಡುವುದರಿಂದ ಮನುಷ್ಯನ ಮಾನಸಿಕ ಒತ್ತಡ ಜಾಸ್ತಿ ಆಗುತ್ತದೆ ಮತ್ತು ಯಾವುದೇ ಕೆಲಸವನ್ನ ಪೂರ್ತಿ ಮಾಡಲು ನಿಮಗೆ ಬಹಳ ಹೆಚ್ಚಿನ ಸಮಯ ಬೇಕಾಗುತ್ತದೆ. ಇನ್ನು ಮೊಬೈಲ್ ಫೋನ್ ಗಳನ್ನ ಜಾಸ್ತಿ ಬಳಕೆ ಮಾಡಿದರೆ ನಿಮ್ಮ ಕೆಲಸಕ್ಕಿಂತ ಜಾಸ್ತಿ ಬೆರೆ ಕಡೆ ನಮ್ಮ ಗಮನ ಹೆಚ್ಚಾಗಿ ಹೋಗುತ್ತದೆ, ಚಾರ್ಜ್ ಕಡಿಮೆ ಆಗಿ ಕೆಲವು ಸಮಯ ನಿಮಗೆ ಮೊಬೈಲ್ ಬಳಸಲು ಆಗಲಿಲ್ಲ ಅಂದರೆ ಹುಚ್ಚು ಹಿಡಿದ ಅನುಭವ ಆಗುತ್ತದೆ ಮತ್ತು ಇದರ ಪರಿಣಾಮ ಜೀವನದಲ್ಲಿ ಹತಾಶೆ ಜಾಸ್ತಿ ಆಗಿ ಯಾವುದೇ ಕೆಲಸದಲ್ಲಿ ಆಸಕ್ತಿ ಇರುವುದಿಲ್ಲ.

ಮೊಬೈಲ್ ಬಳಕೆ ಹೆಚ್ಚು ಬಳಕೆ ಮಾಡುವವರಿಗೆ ಸಣ್ಣ ಸಣ್ಣ ವಿಚಾರಗಳಿಗೂ ಹೆಚ್ಚು ಕೋಪ ಬರುತ್ತದೆ ಮತ್ತು ಭಾವನೆಗಳ ಮೇಲೆ ನಿಯಂತ್ರಣ ಕಡಿಮೆ ಆಗುತ್ತದೆ ಮತ್ತು ಎದುರುಗಡೆ ಇರುವ ವ್ಯಕ್ತಿಯ ಭಾವನೆಗಳು ನಮಗೆ ಅರ್ಥ ಆಗುವುದಿಲ್ಲ. ಇನ್ನು ಇಷ್ಟು ಮಾತ್ರವಲ್ಲದೆ ಮೆದುಳಿನಲ್ಲಿನ ಡೊಫೋಮೈನ್ ರಿಸೆಪ್ಟರ್ಸ್ ಕಡಿಮೆ ಆಗಿ ಮಾನಸಿಕ ಖಿನ್ನತೆ ಅಥವಾ ಡಿಪ್ರೆಶನ್ ಉಂಟಾಗುತ್ತದೆ. ಇನ್ನು ಮೊಬೈಲ್ ಹೆಚ್ಚಾಗಿ ಬಳಸುವವರಿಗೆ ಪದೇ ಪದೇ ಕಾಫಿ ಬೇಕು, ಟೀ ಬೇಕು ಅಥವಾ ಎಣ್ಣೆ ಹೊಡಿಬೇಕು ಮತ್ತು ಹೋಗೆ ಎಳಿಬೇಕು ಅನಿಸುವುದು ಆಗುತ್ತದೆ ಮತ್ತು ಅದನ್ನ ನಿಯಂತ್ರಣಕ್ಕೆ ತರಲು ಆಗುವುದಿಲ್ಲ. ಇನ್ನು ಮೊಬೈಲ್ ಗಳಿಂದ ಬರುವ ವಿಕಿರಣಗಳಿಂದ ಕಣ್ಣಿನ ದೃಷ್ಟಿ ಕಡಿಮೆ ಆಗುತ್ತದೆ ಮತ್ತು ತಲೆ ನೋವು ಹಾಗೆ ಮೈಗ್ರೇನ್ ಪೇನ್ ಕೂಡ ಜಾಸ್ತಿ ಆಗುತ್ತದೆ.

ಮೊಬೈಲ್ ಹೆಚ್ಚು ಬಳಕೆ ಮಾಡಿದರೆ ದೇಹದಲ್ಲಿ ಕೊಬ್ಬಿನ ಅಂಶಗಳ ಸಂಗ್ರಹ ಜಾಸ್ತಿ ಆಗಿ ದೇಹ ದಪ್ಪ ಆಗುತ್ತದೆ, ಇನ್ನು ಇದರ ಜೊತೆಗೆ ಕುತ್ತಿಗೆ ನೋವು, ಬೆನ್ನು ನೋವಿನಂತಹ ಸಮಸ್ಯೆಗಳು ಬರುತ್ತದೆ. ಇನ್ನು ಮೊಬೈಲ್ ಹೆಚ್ಚಾಗಿ ಬಳಕೆ ಮಾಡುವವರಿಗೆ ರಾತ್ರಿಯ ಸಮಯದಲ್ಲಿ ಹೆಚ್ಚಾಗಿ ನಿದ್ರೆ ಬರುವುದಿಲ್ಲ, ಸ್ನೇಹಿತರೆ ಮೊಬೈಲ್ ಗಳನ್ನ ಹೆಚ್ಚು ಬಳಕೆ ಮಾಡುವುದರಿಂದ ಹೀಗೆ ಅನೇಕ ರೀತಿಯ ಸಮಸ್ಯೆಗಳು ಉಂಟಾಗುತ್ತದೆ. ಈಗಿನ ಕಾಲದಲ್ಲಿ ಯುವಕರು ಮತ್ತು ಯುವತಿಯರು ಪಬ್ ಜಿ ಆಟವನ್ನ ಆಡಲು ಹೆಚ್ಚಿನ ಸಮಯ ಹಾಳು ಮಾಡುತ್ತಿದ್ದು ಅದೂ ಅವರ ಆರೋಗ್ಯದ ಮೇಲೆ ತುಂಬಾ ಪ್ರಭಾವನ್ನ ಬೀರುತ್ತಿದೆ, ಸ್ನೇಹಿತರೆ ಇನ್ನಾದರೂ ಸ್ವಲ್ಪ ಎಚ್ಛೆತ್ತುಕೊಳ್ಳಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • govt, nation, ಉಪಯುಕ್ತ ಮಾಹಿತಿ, ಸರ್ಕಾರದ ಯೋಜನೆಗಳು, ಸರ್ಕಾರಿ ಯೋಜನೆಗಳು

    ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ

    ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ ಎಂದರೇನು? ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 6,000 ರೂಪಾಯಿಗಳನ್ನು ಕೇಂದ್ರ ಸರ್ಕಾರವು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸುತ್ತದೆ ನೋಂದಣಿಗೆ ಯಾವ ದಾಖಲೆ ಬೇಕು? ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯ ಲಾಭ ಪಡೆಯುವ ರೈತನಿಗೆ ಆಧಾರ್ ಸಂಖ್ಯೆಯನ್ನು ನೀಡುವುದು ಕಡ್ಡಾಯವಾಗಿದೆ. ನೀವು ಆಧಾರ್ ಕಾರ್ಡ್ ನೀಡದಿದ್ದರೆ ಈ ಯೋಜನೆಯ ಲಾಭ ಪಡೆಯಲು ಸಾಧ್ಯವಾಗುವುದಿಲ್ಲ. ಜೊತೆಗೆ ಕಂತು ಪಡೆಯಲು, ನೀವು ಬ್ಯಾಂಕ್ ಖಾತೆ…

  • ಸುದ್ದಿ

    ಕೊರೋನಾ ವೈರಸ್ ಭಯದಲ್ಲಿದ್ದ ಜನರಿಗೆ ಮತ್ತೊಂದು ಶಾಕ್, ಬಂದಿದೆ ಇನ್ನೊಂದು ಖಾಯಿಲೆ!

    ಈಗಾಗಲೇ ಕೊರೊನ ವೈರಸ್ ಪ್ರಕರಣಗಳು ಭಾರತದಲ್ಲಿ ಬೆಳಕಿಗೆ ಬಂದಿವೆ, ಈ ಬಗ್ಗೆ ಹಲವು ನ್ಯೂಸ್ ಚಾನೆಲ್ ಗಳು ಒಂದೊಂದು ರೀತಿಯ ವರದಿ ಮಾಡುತ್ತಿವೆ. ದೇಶದಲ್ಲಿ ಈಗಾಗಲೇ ಈ ವೈರಸ್ ಬಗ್ಗೆ ಭಾರಿ ಪ್ರಮಾಣದ ಜಾಗ್ರತೆ ವಹಿಸಲಾಗಿದೆ, ಏಕೆಂದರೆ ಈ ಮಹಾಮಾರಿ ವೈರಸ್ ಈಗಾಗಲೇ ಚೀನಾದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನರ ಪ್ರಾಣ ತೆಗೆದುಕೊಂಡಿದೆ. ಕೊರೋನಾ ವೈರಸ್ ಎಂಬ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವವರ ಸಂಖ್ಯೆ ವಿಶ್ವದಾದ್ಯಂತ 100,000 ಮೀರಿದೆ ಎಂದು ಶನಿವಾರ ಬಿಡುಗಡೆಯಾದ ಅಧಿಕೃತ ಮಾಹಿತಿ ತಿಳಿಸಿದೆ. ಇನ್ನು…

  • ಸ್ಪೂರ್ತಿ

    ಜನರ ಮನ ಗೆದ್ದಿರುವ ಸರಿಗಪಮ ಲಕ್ಷ್ಮಿ ರಾಮಪ್ಪರವರ ಬಗ್ಗೆ ನಿಮ್ಗೆ ಗೊತ್ತಿಲ್ಲದ ಸತ್ಯ ಏನು ಗೊತ್ತಾ..?

    ಬಡತನದಲ್ಲಿ ಅರಳಿದ ಪ್ರತಿಭೆಗಳು ನಮ್ಮ ರಾಜ್ಯದಲ್ಲಿ ಹಾಗು ದೇಶದಲ್ಲಿ ತುಂಬಾನೇ ಜನ ಇದ್ದಾರೆ ಅವರಲ್ಲಿ ಈ ಲಕ್ಷಿ ಕೂಡ ಒಬ್ಬರು ಅನ್ನಬಹುದು. ನಮ್ಮ ನೆಲದ ಸೊಗಡು ಅಥವಾ ನಮ್ಮ ನೆಲದ ಸಂಸ್ಕೃತಿಯ ಮೂಲ ಅಂದರೆ ಅದುವೇ ಜಾನಪದ ಎಂಬುದಾಗಿ ಹೇಳಲಾಗುತ್ತದೆ. ಅಂತಹ ಜಾನಪದ ಸೊಗಡು ಹೆಚ್ಚಿನದಾಗಿ ಗ್ರಾಮೀಣ ಪ್ರದೇಶದಲ್ಲಿ ಹಾಗು ಹಳ್ಳಿಗಳಲ್ಲಿ ಕಾಣಬಹುದು.

  • ಸಿನಿಮಾ

    “ಸಂಜಯ್ ದತ್”ಗೂ “ವಿಲನ್”ಗೂ ಸಂಬಂಧವೇನು ???

    ಜೋಗಿ ಪ್ರೇಮ್ ನಿರ್ದೇಶನದ “ದಿ ವಿಲನ್” ಈಗಾಗಲೇ ಬಾರಿ ಸುದ್ದಿ ಮಾಡುತ್ತಿದೆ. ಇದರಲ್ಲಿ ಅಭಿನಯಿಸುತ್ತಿರುವ ಶಿವರಾಜ್ ಕುಮಾರ್ ಹಾಗೂ ಕಿಚ್ಹ ಸುದೀಪ್ ವಿಭಿನ್ನ ಹೇರ್ ಸ್ಟೈಲ್ ಗಳಲ್ಲಿ ಕಾಣಿಸಿಕೊಳ್ಳುತ್ತಿರುವುದೇ ಅದಕ್ಕೆ ಕಾರಣ.

  • ಸುದ್ದಿ

    ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ one plus 7t…!

    ಒನ್‌ಪ್ಲಸ್‌ನ ಜನಪ್ರಿಯ  ಸ್ಮಾರ್ಟ್‌ಫೋನ್ ಒನ್‌ಪ್ಲಸ್ 7 ಮತ್ತು ಒನ್‌ಪ್ಲಸ್ 7 ಪ್ರೊ ಮಾರುಕಟ್ಟೆಯಲ್ಲಿ ವಿಶೇಷವಾಗಿ ಸದ್ದು ಮಾಡಿದ್ದು, ಪ್ರೀಮಿಯಂ ಸ್ಮಾರ್ಟ್‌ಫೋನ್ ಬ್ರ್ಯಾಂಡ್ ಎಂಬ ಹೆಸರು ಕೂಡ ಗಳಿಸಿದೆ. ಒನ್‌ಪ್ಲಸ್ 7 ಸರಣಿಯ ಬಳಿಕ ಒನ್‌ಪ್ಲಸ್ 7T ಮತ್ತು 7T Pro ಎಂಬ ಎರಡು ನೂತನ ಮಾದರಿಗಳನ್ನು ಮಾರುಕಟ್ಟೆಗೆ ಪರಿಚಯಿಸಲಿದೆ.  ಹೊಸ ಸ್ನ್ಯಾಪ್‌ಡ್ರ್ಯಾಗನ್ 855 Plus ಚಿಪ್‌ಸಹಿತ ನೂತನ ಸ್ಮಾರ್ಟ್‌ಫೋನ್ ಒನ್‌ಪ್ಲಸ್ 7T ಮತ್ತು 7T Pro ಬಿಡುಗಡೆಯಾಗುವ ನಿರೀಕ್ಷೆಯಿದೆ.  ಈಗಾಗಲೇ ಒನ್‌ಪ್ಲಸ್ ಈ ಕುರಿತು ಸಿದ್ಧತೆ ನಡೆಸಿದ್ದು, ಸೋರಿಕೆಯಾದ ಚಿತ್ರದ ಪ್ರಕಾರ,…

  • corona

    ಕೋಲಾರ ಜಿಲ್ಲೆ ಯಲ್ಲಿ ವಾರದೊಳಗೆ 78ಸಾವಿರ ಮಕ್ಕಳಿಗೆ ಉಚಿತ ಲಸಿಕೆ

    ಜಿಲ್ಲೆಯಾದ್ಯಂತ 15ರಿಂದ18ವರ್ಷದ 78,357 ಮಕ್ಕಳಿದ್ದು ಒಂದು ವಾರದೊಳಗೆ ಉಚಿತ ಲಸಿಕೆ ಹಾಕುವ ಮೂಲಕ ಅಭಿಯಾನ ಪೂರ್ಣ ಗೊಳಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಗದೀಶ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಜ.3ರಿಂದ 15ರಿಂದ18 ವರ್ಷದೊಳಗಿನ ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು ಮೊದಲ ದಿನ 2600ಮಕ್ಕಳಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು. ಕೋಲಾರ ಜಿಲ್ಲೆ ಯಲ್ಲಿ 15ರಿಂದ18 ವರ್ಷದ ಮಕ್ಕಳ ಸಂಖ್ಯೆ ಕೋಲಾರ:- 23,381 ಬಂಗಾರಪೇಟೆ:-10,662 ಕೆಜಿಎಫ್:- 11,231 ಮಾಲೂರು:- 11,743…

    Loading