ಸುದ್ದಿ

ಬಾಲಕನಿಂದ ಮೋದಿಯವರಿಗೆ 37ನೇ ಪತ್ರ….ಕಾರಣ ಏನು?

106

ಉತ್ತರ ಪ್ರದೇಶದ ಕಾನ್ಪುರದಲ್ಲಿ 8ನೇ ತರಗತಿಯ ಬಾಲಕನೊಬ್ಬ ತನ್ನ ತಂದೆಯ ಕೆಲಸವನ್ನು ಮರಳಿ ಕೊಡಿಸುವಂತೆ ಪ್ರಧಾನಿ ಮೋದಿ ಅವರಿಗೆ ಬರೋಬ್ಬರಿ 37 ಪತ್ರವನ್ನು ಬರೆದಿದ್ದಾನೆ.13 ವರ್ಷದ ಈ ಬಾಲಕ 2016ರಿಂದ ಮೋದಿಗೆ ಪತ್ರಗಳನ್ನು ಬರೆಯುತ್ತಿದ್ದಾನೆ. ಇದುವರೆಗೆ 36 ಪತ್ರಗಳನ್ನು ಬರೆದಿದ್ದಾನೆ. ಆದರೆ ಪ್ರಧಾನಿ ಮೋದಿ ಅವರಿಂದ ಪತ್ರಕ್ಕೆ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ.

ಸರ್ಥಕ್ ತ್ರಿಪಾಠಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಬಾಲಕ. ಈತನ ತಂದೆ ಉತ್ತರ ಪ್ರದೇಶದಲ್ಲಿ ಸ್ಟಾಕ್ ಎಕ್ಸ್ ಚೇಂಜ್‍ನಲ್ಲಿ(ಯುಪಿಎಸ್‍ಇ)ಯಲ್ಲಿ ಕೆಲಸ ಮಾಡುತ್ತಿದ್ದರು. ಇದೀಗ ತಂದೆ ಕೆಲಸ ಕಳೆದುಕೊಂಡಿದ್ದರಿಂದ ನಮ್ಮ ಕುಟುಂಬದವರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಬಾಲಕ ಪತ್ರದಲ್ಲಿ ತಿಳಿಸಿದ್ದಾನೆ. ಜೊತೆಗೆ ತನ್ನ ತಂದೆಗೆ ಕೆಲಸವನ್ನು ಮರಳಿ ಕೊಡಿಸುವಂತೆ ಮನವಿ ಮಾಡಿಕೊಂಡಿದ್ದಾನೆ. ತಮ್ಮ ತಂದೆಯನ್ನು ಯುಪಿಎಸ್‍ಇ ಕೆಲಸದಿಂದ ಬಲವಂತವಾಗಿ ಕಳುಹಿಸಿದ್ದಾರೆ ಎಂದು ಬಾಲಕ ತಿಳಿಸಿದ್ದಾನೆ.

ಬಾಲಕ ಪತ್ರದಲ್ಲಿ ನಾನು “ಮೋದಿ ಹೈ ತೊ ಮಮ್ಕಿನ್ ಹೈ”(ಮೋದಿ ಇದ್ದರೆ ಎಲ್ಲವೂ ಸಾಧ್ಯ) ಎಂಬ ಘೋಷಣೆಯನ್ನು ಕೇಳಿದ್ದೇನೆ. ಹಾಗಾಗಿ ನಿಮಗೆ ಪತ್ರ ಬರೆಯುತ್ತಿದ್ದೇನೆ. ದಯವಿಟ್ಟು ಒಂದು ಸಾರಿ ನನ್ನ ಮನವಿಯನ್ನು ಕೇಳಿ ಮತ್ತು ನನಗೆ ಸಹಾಯ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾನೆ.

ಕಾರಣ ಇಲ್ಲದೆ ಕೆಲ ಜನರು ಸೇರಿ ನನ್ನ ತಂದೆಯನ್ನು ಕೆಲಸದಿಂದ ವಜಾಗೊಳಿಸಿದ್ದಾರೆ. ಹಾಗಾಗಿ ನನ್ನ ತಂದೆಗೆ ಸಹಾಯ ಮಾಡುವಂತೆ ನಾನು ಮೋದಿಯ ಬಳಿ ಕೋರಿದ್ದೇನೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾನೆ. ಜೊತೆಗೆ ನನ್ನ ತಂದೆಗೆ ಅನ್ಯಾಯ ಮಾಡಿದವರಿಗೆ ಕಾನೂನಿನ ಅಡಿಯಲ್ಲಿ ಶಿಕ್ಷೆಯಾಗಬೇಕು ಎಂದು ಬಾಲಕ ಒತ್ತಾಯಿಸಿದ್ದಾನೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಮಾರ್ಚ್, 2019) ನಿಮಗೆ ಆಕರ್ಷಕವಾಗಿ ತೋರುವ ಯಾವುದೇ ಹೂಡಿಕೆಯ ಯೋಜನೆಯ ಬಗ್ಗೆ ಹೆಚ್ಚು ಕಂಡುಹಿಡಿಯಲು ಮೇಲ್ಮೈಗಿಂತ…

  • ಸುದ್ದಿ

    ಟಿಕ್ ಟಾಕ್ ಖಾತೆ ಡಿಲಿಟ್ ಮಾಡಿ ದೇಶಪ್ರೇಮ ತೋರಿದ ಚಾಲೆಂಜಿಂಗ್ ಸ್ಟಾರ್. ಅಭಿಮಾನಿಗಳು ಖಾತೆ ಡಿಲೀಟ್.

    ಕನ್ನಡದ ಹೆಮ್ಮೆಯ ನಟ, ಅಭಿಮಾನಿಗಳ ಡಿ.ಬಾಸ್ ಸ್ಯಾಂಡಲ್ ವುಡ್ ನ ಬ್ರಾಂಡ್ ಅಂತೆಲ್ಲ ಕರೆಸಿಕೊಳ್ಳುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಗಳು ಕೂಡ ಚೀನಾ ವಸ್ತು ಹಾಗೂ ಅಪ್ಲಿಕೇಷನ್ ಅನ್ನು ಬ್ಯಾನ್ ಮಾಡುವ ನಿರ್ಧಾರ ಕೈಗೊಂಡಿದ್ದು, ಈ ವಿಚಾರವಾಗಿ ದರ್ಶನ್ ಫ್ಯಾನ್ಸ್ ಮೊದಲು ಟಿಕ್ ಟಾಕ್ ಗೆ ಗುಡ್ ಬೈ ಹೇಳಿದ್ದಾರೆ. ಟಿಕ್ ಟಾಕ್ ನಲ್ಲಿಯೂ ಡಿಬಾಸ್ ಹೆಸರು ದಾಖಲೆ ನಿರ್ಮಿಸಿತ್ತು. ಆದರೆ ಇದ್ಯಾವುದನ್ನು ಲೆಕ್ಕಿಸದೆ ದರ್ಶನ್ ಅಭಿಮಾನಿಗಳು ಖಾತೆ ಡಿಲೀಟ್ ಮಾಡಿ ರಾಷ್ಟ್ರ ಪ್ರೇಮ ಮೆರೆದಿದ್ದಾರೆ….

  • Uncategorized

    ಮಾಲೂರಿನ ಯಶವಂತಪುರ ರಾಜ್ಯದ ಮೊದಲ ಡಿಜಿಟಲ್ ಹಳ್ಳಿ

    ಮಾಲೂರಿನ ‘ಯಶವಂತಪುರ’ ಗ್ರಾಮ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಆಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಹಯೋಗದಲ್ಲಿ ರೂಪಿಸಿರುವ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಇದನ್ನು ಮಾಲೂರಿನ ಶಾಸಕ ಎಸ್.ಮಂಜುನಾಥ್ ಗೌಡ ಉದ್ಘಾಟನೆ ಮಾಡುವ ಮೂಲಕ ಲೋಕಾರ್ಪಣೆ ಮಾಡಿದರು.

  • ಸುದ್ದಿ

    ಸಹಕಾರಿ ಬ್ಯಾಂಕ್ ಗಳಿಂದ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ‘ಬಿಗ್ ಶಾಕ್’

    ಹೊಸ ಬೆಳೆ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಸರ್ಕಾರದಿಂದ ಬಿಗ್ ಶಾಕ್ ನೀಡಿದ್ದು, ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಬ್ರೇಕ್ ಹಾಕಲಾಗಿದೆ. ಸಂಪನ್ಮೂಲ ಕೊರತೆ ಕಾರಣದಿಂದ ರೈತರ ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಸರ್ಕಾರ ತಾತ್ಕಾಲಿಕ ಬ್ರೇಕ್ ಹಾಕಿದೆ ಎನ್ನಲಾಗಿದ್ದು, ಇದರಿಂದಾಗಿ ಸಹಕಾರಿ ಬ್ಯಾಂಕುಗಳಿಗೆ ಸಂಕಷ್ಟ ಎದುರಾಗಿದೆ. ಪರಿಣಾಮ ರೈತರು ಹೊಸದಾಗಿ ಬೆಳೆ ಸಾಲ ಸಾಧ್ಯವಾಗುತ್ತಿಲ್ಲ ಎಂದು ಹೇಳಲಾಗಿದೆ. ಸರ್ಕಾರದ ಸೂಚನೆ ಮೇರೆಗೆ ರೈತರ ಸಾಲ ಮನ್ನಾ ಯೋಜನೆಯಡಿ ಮರುಪಾವತಿ ಮೊತ್ತ ಬಿಡುಗಡೆಯನ್ನು ಹಣಕಾಸು ಇಲಾಖೆ ತಡೆಹಿಡಿದಿದೆ. ಸಹಕಾರ…

  • ಉದ್ಯೋಗ

    ಕಡಿಮೆ ಬಂಡವಾಳದಲ್ಲಿ ತಿಂಗಳಿಗೆ 50 ಸಾವಿರದಿಂದ 1 ಲಕ್ಷ ರೂಪಾಯಿಗಳ ವರೆಗೆ ಸಂಪಾದಿಸಬಹುದು..! ತಿಳಿಯಲು ಈ ಲೇಖನ ಓದಿ …

    ನಗರ ಮತ್ತು ಪಟ್ಟಣಗಳಲ್ಲಿ ನೀರಿನ ಅವಶ್ಯಕತೆಯೇ ನೀರಿನ ಒಂದು ದೊಡ್ಡ ಬಿಜನೆಸ್ ನ ಮೂಲವಾಗಿದೆ. ಜನರಿಗೆ ಸ್ವಚ್ಛವಾದ ಶುದ್ಧ ನೀರಿನ ಉಪಲಬ್ಧವನ್ನು ಮಾಡಿ ಕೊಡುವ ಒಳ್ಳೆಯ ವ್ಯವಸಾಯ ಮಾಡಬಹುದು ಜೊತೆಗೆ ತಿಂಗಳಿಗೆ ಸಮಾಧಾನವೆನ್ನುವದಕ್ಕಿಂತ ಹೆಚ್ಚಿಗೆ ಆದಾಯ ಗಳಿಸಬಹುದು.

  • ಉಪಯುಕ್ತ ಮಾಹಿತಿ

    ವಾರದಲ್ಲಿ ಯಾವದಿನ ಯಾವ ಬಣ್ಣದ ಬಟ್ಟೆಗಳನ್ನು ಧರಿಸಿದರೆ ಒಳ್ಳೆಯದು.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ wha ಈ ಪ್ರಪಂಚ ವಿಭಿನ್ನವಾದ…