News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಟ್ರೆಂಡ್ ಸೃಷ್ಟಿಮಾಡಿದ ಮೋದಿ – ಕೇದಾರನಾಥ ಗುಹೆಯಲ್ಲಿ ಧ್ಯಾನಕ್ಕೆ ಮುಗಿಬಿದ್ದ ಯಾತ್ರಿಕರು

95

ಕೇದಾರನಾಥ ಗುಹೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ಯಾನ ಮಾಡುವ ಮೂಲಕ ಹೊಸ ಟ್ರೆಂಡ್ ಸೃಷ್ಟಿಸಿದ್ದರು. ಈಗ ಪ್ರಧಾನಿ ಅವರ ನಡೆಯನ್ನೇ ಇಲ್ಲಿಗೆ ಬರುವ ಯಾತ್ರಿಕರು ಅನುಸರಿಸುತ್ತಿದ್ದಾರೆ.ಹೌದು, ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಕ್ಕೂ ಮೊದಲು ಮೇ 18ರಂದು ಮೋದಿ ಅವರು ಕೇದಾರನಾಥದಲ್ಲಿರುವ ಗುಹೆಯಲ್ಲಿ 24 ಗಂಟೆಗಳು ಸುದೀರ್ಘ ಧ್ಯಾನ ಮಾಡಿ ಎಲ್ಲೆಡೆ ಸುದ್ದಿಯಾಗಿದ್ದರು. ಹಾಗೆಯೇ ಹಲವರ ಗಮನ ಸೆಳೆದಿದ್ದರು. ಈಗ ಈ ಗುಹೆಯಲ್ಲಿ ಧ್ಯಾನ ಮಾಡಲು ಯಾತ್ರಿಕರು ತಾ ಮುಂದು ನಾ ಮುಂದು ಅಂತ ಮುಗಿಬಿದ್ದಿದ್ದಾರೆ.

ಕೇದಾರನಾಥ ಗುಹೆಯಲ್ಲಿ ಧ್ಯಾನ ಮಾಡಲು ಯಾತ್ರಿಕರು www.gmvnl.in ಮೂಲಕ 1,500 ರೂ. ಪಾವತಿಸಿ ಬುಕ್ ಮಾಡಬೇಕು. ಬಳಿಕ ಗುಪ್ತಾಕ್ಷಿ ಹಾಗೂ ಕೇದಾರನಾಥದಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಬೇಕು. ತದನಂತರ ಯಾತ್ರಿಕರು ಆರೋಗ್ಯವಾಗಿದ್ದರೆ ಮಾತ್ರ ಅವರಿಗೆ ಗುಹೆಯಲ್ಲಿ 24 ಗಂಟೆಗಳ ಕಾಲ ಏಕಾಂಗಿಯಾಗಿ ಧ್ಯಾನ ಮಾಡಲು ಅವಕಾಶ ನೀಡಲಾಗುತ್ತದೆ. ಸದ್ಯ ಮುಂದಿನ 10 ದಿನಗಳ ತನಕ ಕೇದಾರನಾಥ ಗುಹೆ ಯಾತ್ರಿಕರ ಧ್ಯಾನಕ್ಕೆ ಬುಕ್ ಆಗಿದೆ.

ಹಾಗೆಯೇ ಮೂರು ದಿನಕ್ಕಿಂತ ಹೆಚ್ಚು ದಿನಗಳ ಕಾಲ ಗುಹೆ ಬುಕ್ ಮಾಡುವಂತಿಲ್ಲ. ಒಂದು ಬಾರಿಗೆ ಕೇವಲ ಓರ್ವ ಯಾತ್ರಿಕರಿಗೆ ಮಾತ್ರ ಗುಹೆಗೆ ಪ್ರವೇಶ ನೀಡಲಾಗುತ್ತದೆ. ಜೊತೆಗೆ ಗುಹೆಯಲ್ಲಿ ಫೋನ್ ವ್ಯವಸ್ಥೆ ಕೂಡ ಇದೆ. ಒಂದು ವೇಳೆ ತುರ್ತು ಪರಿಸ್ಥಿತಿ ಎದುರಾದರೆ ಫೋನ್ ಮೂಲಕ ಜಿಎಂವಿಎನ್ ಸಿಬ್ಬಂದಿಯನ್ನು ಸಂಪರ್ಕಿಸಬಹುದು. ಇದೇ ರೀತಿ ಆಧುನಿಕ ಗುಹೆಗಳು ಕೂಡ ಕೇದಾರನಾಥ ಹಾಗೂ ಬದರಿನಾಥ ದೇಗುಲದ ಅಕ್ಕಪಕ್ಕದ ಪರ್ವತಗಳಲ್ಲಿ ನಿರ್ಮಾಣ ಮಾಡಲಾಗಿದೆ.

ಗುಹೆಗೆ ಬಂದ ಯಾತ್ರಿಕರಿಗೆ ಜಿಎಂವಿಎನ್ ಕುಡಿಯುವ ನೀರಿನ ವ್ಯವಸ್ಥೆ, ಊಟ, ಶೌಚಾಲಯ, ವಿದ್ಯುತ್ ಸಂಪರ್ಕ ಹಾಗೂ ಮಲಗಲು ಹಾಸಿಗೆ ಹೀಗೆ ಮೂಲಭೂತ ಸೌಕರ್ಯವನ್ನು ಕಲ್ಪಿಸಿಕೊಡುತ್ತದೆ. ಆದರೆ ಒಂದು ಸಲ ಗುಹೆಯನ್ನು ಆನ್‍ಲೈನ್ ಬುಕ್ ಮಾಡಿದ ಬಳಿಕ ಬುಕ್ಕಿಂಗ್ ಅನ್ನು ರದ್ದು ಮಾಡಿದರೆ ಅಥವಾ ಕಾರಣಾಂತರಗಳಿಂದ ಗುಹೆಯಲ್ಲಿ ಇರಲು ಯಾತ್ರಿಕರು ನಿರಾಕರಿಸಿದರೆ ಪಾವತಿಸಿದ ಹಣವನ್ನು ವಾಪಸ್ ನೀಡುವುದಿಲ್ಲ. ಹಾಗೆಯೇ ಒಂದು ವೇಳೆ ಮಾಡಿದ್ದ ಬುಕ್ಕಿಂಗ್ ರದ್ದಾದಲ್ಲಿ ಆ ದಿನ ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಸ್ಥಳದಲ್ಲಿದ್ದ ಯಾತ್ರಿಕರಿಗೆ 990 ರೂಪಾಯಿಯಲ್ಲಿ ಗುಹೆಯಲ್ಲಿ ಧ್ಯಾನ ಮಾಡಲು ಅವಕಾಶ ನೀಡಲಾಗುತ್ತದೆ ಎಂದು ಅಲ್ಲಿನ ಆಡಳಿತ ಮಂಡಳಿ ತಿಳಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸೀಮಂತ ಸಂಭ್ರಮದಲ್ಲಿ ಸಿಂಡ್ರೆಲ್ಲಾರಂತೆ ಸ್ಯಾಂಡಲ್ ವುಡ್ ರಾಧಿಕಾ….!

    ಸ್ಯಾಂಡಲ್‍ವುಡ್ ಸಿಂಡ್ರೆಲ್ಲಾ ರಾಧಿಕಾ ಪಂಡಿತ್ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಅವರು ಸೀಮಂತ ಮಾಡಿಸಿಕೊಂಡಿದ್ದು, ಕಾರ್ಯಕ್ರಮದಲ್ಲಿ ಸಿಂಡ್ರೆಲ್ಲಾರಂತೆ ಮಿಂಚಿದ್ದಾರೆ.ರಾಕಿಂಗ್ ಸ್ಟಾರ್ ಪತ್ನಿ ಸೀಮಂತ ಸಂಭ್ರಮದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸ್ಯಾಂಡಲ್ ವುಡ್ ಸಿಂಡ್ರೆಲ್ಲಾ ಅಂತಾನೆ ಖ್ಯಾತಿಗಳಿಸಿರುವ ರಾಧಿಕಾ ಸೀಮಂತ ಸಂಭ್ರಮದಲ್ಲಿ ಸಿಂಡ್ರೆಲ್ಲಾ ಕಾಸ್ಟ್ಯೂಮ್ ನಲ್ಲಿ ಮಿಂಚಿದ್ದಾರೆ. ಇತ್ತೀಚಿಗೆ ರಾಧಿಕಾ ಪಂಡಿತ್ ಸ್ನೇಹಿತರು ರಾಧಿಕಾಗೆ ಸೀಮಂತ ಶಾಸ್ತ್ರವನ್ನು ಮಾಡಿದ್ದಾರೆ. ಈ ಬಗ್ಗೆ ರಾಧಿಕಾ ಸಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. “ನನ್ನ ಸ್ನೇಹಿತರು ನನಗೆ ಅದ್ಭುತವಾದ ಬೇಬಿ ಶವರ್…

  • ಸುದ್ದಿ

    ಆಹಾರಗಳನ್ನು ಫ್ರಿಜ್ಜಿನಲ್ಲಿ ಇಟ್ಟ ಮಾತ್ರಕ್ಕೆ ಅದು ಸುರಕ್ಷಿತವೇ…?

    ಆಹಾರಗಳನ್ನು ತಾಜಾರೂಪದಲ್ಲಿ ಸೇವಿಸಿದಷ್ಟೂಉತ್ತಮ. ಏಕೆಂದರೆ ಒಮ್ಮೆ ತಯಾರಿಸಿದ ಆಹಾರ ಕೊಂಚಹೊತ್ತಿನ ಬಳಿಕ ಹಳಸಲು ತೊಡಗುತ್ತದೆ. ಈ ಹಳಸುವಿಕೆಯನ್ನುತಡವಾಗಿಸಲು ಈಗ ನಮ್ಮೆಲ್ಲರ ಮನೆಗಳಲ್ಲಿ ಫ್ರಿಜ್ಜುಗಳಿವೆ. ಆದ್ದರಿಂದ ನಾವೆಲ್ಲಾ ಕೊಂಚ ಹೆಚ್ಚಿನ ಪ್ರಮಾಣವನ್ನುತಯಾರಿಸಿ ಫ್ರಿಜ್ಜಿನಲ್ಲಿಟ್ಟು ಮುಂದಿನ ಒಂದೆರಡು ದಿನಗಳವರೆಗೆ ಸೇವಿಸುತ್ತೇವೆ. ಆದರೆ ಫ್ರಿಜ್ಜಿನಲ್ಲಿಟ್ಟಆಹಾರವನ್ನೇ ಪ್ರತಿ ಬಾರಿ ಸೇವಿಸಲು ಮೂರು ಅಥವಾ ನಾಲ್ಕು ಬಾರಿ ಬಿಸಿ ಮಾಡಿ ಮತ್ತೆ ತಣಿಸಿ ಇಡುವುದುಖಂಡಿತಾ ಆರೋಗ್ಯಕರವಲ್ಲ. ಆರೋಗ್ಯವೇ ಭಾಗ್ಯ ನಾಣ್ಣುಡಿ ಮರೆತು, ಕೊರಗಬೇಡಿ! ಫ್ರಿಜ್ಜಿನಲ್ಲಿಟ್ಟರೂಪ್ರತಿ ಆಹಾರವಸ್ತು ತಾಜಾ ಇರುವ ಅವಧಿ ಬೇರೆಬೇರೆಯಾಗಿರುತ್ತದೆ. ಕೆಲವು ಒಂದೆರಡು…

  • ಸುದ್ದಿ, ಸ್ಪೂರ್ತಿ

    ಒಬ್ಬ ಹುಡುಗನ ನಿಯತ್ತು ಮೆಚ್ಚಿ ಈ ಪೋಲಿಸ್ ಆಫೀಸರ್ ಮಾಡಿದ್ದೇನು ಗೊತ್ತಾ.

    ಕೆಲವು ಸಮಯಗಳ ಹಿಂದೆ ರಾತ್ರಿ ಸುಮಾರು 10 ಘಂಟೆ ಸುಮಾರಿಗೆ ನೈಟ್ ಡ್ಯೂಟಿ ಮಾಡುವ ಸಲುವಾಗಿ ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ನಾಗಮಲ್ಲು ಅವರು ಸಿಂಗಲ್ ಬಳಿ ಬಂದರು, ಇನ್ನು ಈ ಸಮಯದಲ್ಲಿ 11 ವರ್ಷದ ಒಬ್ಬ ಹುಡುಗ ಅಳುತ್ತ ರೋಡ ನಲ್ಲಿ ತಿರುಗಾಡುತ್ತಿದ್ದ. ಹಾಗಾದರೆ ಆ ಹುಡುಗ ಅಲ್ಲಿ ಯಾಕೆ ತಿರುಗಾಡುತ್ತಿದ್ದ ಮತ್ತು ಆತನಿಗೆ ಆದ ತೊಂದರೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ…

  • ಉಪಯುಕ್ತ ಮಾಹಿತಿ

    ಪ್ಯಾನ್ ಕಾರ್ಡ್ ಗೆ ಆಧಾರ್ ಲಿಂಕ್: ಕೊನೆಯ ದಿನಾಂಕವನ್ನು ವಿಸ್ತರಿಸಿದ ಕೇಂದ್ರ ಸರ್ಕಾರ!

    ಆಧಾರ್ ಕಾರ್ಡ್ ನೊಂದಿಗೆ ಪಾನ್‌ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ) ನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ  ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್  ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ. ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ  ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್  ಜೋಡಿಸಲು…

  • ಸಿನಿಮಾ

    ಡೇಟ್ ಫಿಕ್ಸ್ ಆಯ್ತು ಜೂನಿಯರ್ ರಾಕಿಂಗ್ ಸ್ಟಾರ್ ಆಗಮನಕ್ಕೆ..!

    ಕನ್ನಡದ ಅದ್ದೂರಿ ಚಿತ್ರ KGF ಚಿತ್ರದ ಬಿಡುಗಡೆಗೆ ಕಾದಿರುವ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಇನ್ನೊಂದು ಸಿಹಿ ಸುದ್ದಿ ಹೊರಬಿದ್ದಿದೆ. ಜೂನಿಯರ್ ರಾಕಿಂಗ್ ಸ್ಟಾರ್ ಎಂಟ್ರಿಗೆ ಡೇಟ್ ಫಿಕ್ಸ್ ಆಗಿದ್ದು, ಸ್ವತಃ ನಟಿ ರಾಧಿಕಾ ಪಂಡಿತ್ ಈ ಬಗ್ಗೆ ಹೇಳಿಕೊಂಡಿದ್ದಾರೆ. ಮದುವೆ ವಾರ್ಷಿಕೋತ್ಸವ ಒಂದಾದರೆ, ರಾಧಿಕಾ ಪಂಡಿತ್ ಅವರು ಇದೀಗ ಎಂಟು ತಿಂಗಳ ತುಂಬು ಗರ್ಭಿಣಿಯಾಗಿದ್ದು, ಯಶ್ ಜೀವನದಲ್ಲಿ ಈ ಡಿಸೆಂಬರ್ ಅತ್ಯಮೂಲ್ಯ ಸಂದರ್ಭಕ್ಕೆ ಸಾಕ್ಷಿಯಾಗಲಿದೆ. ಡಿಸೆಂಬರ್ 9ರಂದು ಯಶ್ ಹಾಗೂ ರಾಧಿಕಾ ಅವರ ಮದುವೆ ವಾರ್ಷಿಕೋತ್ಸವದ…

  • Place

    ಕೇದಾರನಾಥ ದೇವಾಲಯ

    ಹಿಂದುಗಳು ನಡೆದುಕೊಳ್ಳುವ ಪವಿತ್ರ ನಾಲ್ಕು ಧಾಮಗಳ ಯಾತ್ರೆಯಲ್ಲಿ ಕೇದಾರನಾಥವೂ ಸಹ ಒಂದು, ಅಲ್ಲದೆ, ಸಮುದ್ರ ಮಟ್ಟದಿಂದ ಅತಿ ಎತ್ತರದಲ್ಲಿ ನೆಲೆಸಿರುವ ದೇವಾಲಯವೂ ಸಹ ಇದೆ. ಮೂಲತಃ ಈ ದೇವಾಲಯವು ಪಾಂಡವರಿಂದ ನಿರ್ಮಿಸಲಾಗಿದೆ ಎನ್ನುತ್ತಾರಾದರೂ ಪ್ರಸ್ತುತ ರಚನೆಯು ಆದಿ ಗುರು ಶಂಕರಾಚಾರ್ಯರಿಂದ ನಿರ್ಮಿಸಲ್ಪಟ್ಟಿದೆ ಎನ್ನಲಾಗುತ್ತದೆ. ಪ್ರಾಯಶ: ಕೇದಾರನಾಥ ತಲುಪುವುದು ಬಹುತೇಕರಿಗೆ ಬಲು ಕಷ್ಟಕರವಾಗಿದೆ. ಏಕೆಂದರೆ ಇಲ್ಲಿರುವ ವಿಪರೀತ ಹವಾಮಾನ. ಒಮ್ಮೊಮ್ಮೆ ಮೇಘಗಳ ಸ್ಫೋಟವಾಯಿತೆಂದರೆ ಸಾಕಷ್ಟಿ ನೀರು ಹಾಗೂ ಕಲ್ಲು ಬಂಡೆಗಳು ಕೇದಾರನಾಥಕ್ಕೆ ನುಗ್ಗುವುದು ಸಾಮಾನ್ಯ. ಕಳೆದ 2013 ರಲ್ಲಿ…