ಸುದ್ದಿ

ಟ್ರೆಂಡ್ ಸೃಷ್ಟಿಮಾಡಿದ ಮೋದಿ – ಕೇದಾರನಾಥ ಗುಹೆಯಲ್ಲಿ ಧ್ಯಾನಕ್ಕೆ ಮುಗಿಬಿದ್ದ ಯಾತ್ರಿಕರು

92

ಕೇದಾರನಾಥ ಗುಹೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ಯಾನ ಮಾಡುವ ಮೂಲಕ ಹೊಸ ಟ್ರೆಂಡ್ ಸೃಷ್ಟಿಸಿದ್ದರು. ಈಗ ಪ್ರಧಾನಿ ಅವರ ನಡೆಯನ್ನೇ ಇಲ್ಲಿಗೆ ಬರುವ ಯಾತ್ರಿಕರು ಅನುಸರಿಸುತ್ತಿದ್ದಾರೆ.ಹೌದು, ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಕ್ಕೂ ಮೊದಲು ಮೇ 18ರಂದು ಮೋದಿ ಅವರು ಕೇದಾರನಾಥದಲ್ಲಿರುವ ಗುಹೆಯಲ್ಲಿ 24 ಗಂಟೆಗಳು ಸುದೀರ್ಘ ಧ್ಯಾನ ಮಾಡಿ ಎಲ್ಲೆಡೆ ಸುದ್ದಿಯಾಗಿದ್ದರು. ಹಾಗೆಯೇ ಹಲವರ ಗಮನ ಸೆಳೆದಿದ್ದರು. ಈಗ ಈ ಗುಹೆಯಲ್ಲಿ ಧ್ಯಾನ ಮಾಡಲು ಯಾತ್ರಿಕರು ತಾ ಮುಂದು ನಾ ಮುಂದು ಅಂತ ಮುಗಿಬಿದ್ದಿದ್ದಾರೆ.

ಕೇದಾರನಾಥ ಗುಹೆಯಲ್ಲಿ ಧ್ಯಾನ ಮಾಡಲು ಯಾತ್ರಿಕರು www.gmvnl.in ಮೂಲಕ 1,500 ರೂ. ಪಾವತಿಸಿ ಬುಕ್ ಮಾಡಬೇಕು. ಬಳಿಕ ಗುಪ್ತಾಕ್ಷಿ ಹಾಗೂ ಕೇದಾರನಾಥದಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಬೇಕು. ತದನಂತರ ಯಾತ್ರಿಕರು ಆರೋಗ್ಯವಾಗಿದ್ದರೆ ಮಾತ್ರ ಅವರಿಗೆ ಗುಹೆಯಲ್ಲಿ 24 ಗಂಟೆಗಳ ಕಾಲ ಏಕಾಂಗಿಯಾಗಿ ಧ್ಯಾನ ಮಾಡಲು ಅವಕಾಶ ನೀಡಲಾಗುತ್ತದೆ. ಸದ್ಯ ಮುಂದಿನ 10 ದಿನಗಳ ತನಕ ಕೇದಾರನಾಥ ಗುಹೆ ಯಾತ್ರಿಕರ ಧ್ಯಾನಕ್ಕೆ ಬುಕ್ ಆಗಿದೆ.

ಹಾಗೆಯೇ ಮೂರು ದಿನಕ್ಕಿಂತ ಹೆಚ್ಚು ದಿನಗಳ ಕಾಲ ಗುಹೆ ಬುಕ್ ಮಾಡುವಂತಿಲ್ಲ. ಒಂದು ಬಾರಿಗೆ ಕೇವಲ ಓರ್ವ ಯಾತ್ರಿಕರಿಗೆ ಮಾತ್ರ ಗುಹೆಗೆ ಪ್ರವೇಶ ನೀಡಲಾಗುತ್ತದೆ. ಜೊತೆಗೆ ಗುಹೆಯಲ್ಲಿ ಫೋನ್ ವ್ಯವಸ್ಥೆ ಕೂಡ ಇದೆ. ಒಂದು ವೇಳೆ ತುರ್ತು ಪರಿಸ್ಥಿತಿ ಎದುರಾದರೆ ಫೋನ್ ಮೂಲಕ ಜಿಎಂವಿಎನ್ ಸಿಬ್ಬಂದಿಯನ್ನು ಸಂಪರ್ಕಿಸಬಹುದು. ಇದೇ ರೀತಿ ಆಧುನಿಕ ಗುಹೆಗಳು ಕೂಡ ಕೇದಾರನಾಥ ಹಾಗೂ ಬದರಿನಾಥ ದೇಗುಲದ ಅಕ್ಕಪಕ್ಕದ ಪರ್ವತಗಳಲ್ಲಿ ನಿರ್ಮಾಣ ಮಾಡಲಾಗಿದೆ.

ಗುಹೆಗೆ ಬಂದ ಯಾತ್ರಿಕರಿಗೆ ಜಿಎಂವಿಎನ್ ಕುಡಿಯುವ ನೀರಿನ ವ್ಯವಸ್ಥೆ, ಊಟ, ಶೌಚಾಲಯ, ವಿದ್ಯುತ್ ಸಂಪರ್ಕ ಹಾಗೂ ಮಲಗಲು ಹಾಸಿಗೆ ಹೀಗೆ ಮೂಲಭೂತ ಸೌಕರ್ಯವನ್ನು ಕಲ್ಪಿಸಿಕೊಡುತ್ತದೆ. ಆದರೆ ಒಂದು ಸಲ ಗುಹೆಯನ್ನು ಆನ್‍ಲೈನ್ ಬುಕ್ ಮಾಡಿದ ಬಳಿಕ ಬುಕ್ಕಿಂಗ್ ಅನ್ನು ರದ್ದು ಮಾಡಿದರೆ ಅಥವಾ ಕಾರಣಾಂತರಗಳಿಂದ ಗುಹೆಯಲ್ಲಿ ಇರಲು ಯಾತ್ರಿಕರು ನಿರಾಕರಿಸಿದರೆ ಪಾವತಿಸಿದ ಹಣವನ್ನು ವಾಪಸ್ ನೀಡುವುದಿಲ್ಲ. ಹಾಗೆಯೇ ಒಂದು ವೇಳೆ ಮಾಡಿದ್ದ ಬುಕ್ಕಿಂಗ್ ರದ್ದಾದಲ್ಲಿ ಆ ದಿನ ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಸ್ಥಳದಲ್ಲಿದ್ದ ಯಾತ್ರಿಕರಿಗೆ 990 ರೂಪಾಯಿಯಲ್ಲಿ ಗುಹೆಯಲ್ಲಿ ಧ್ಯಾನ ಮಾಡಲು ಅವಕಾಶ ನೀಡಲಾಗುತ್ತದೆ ಎಂದು ಅಲ್ಲಿನ ಆಡಳಿತ ಮಂಡಳಿ ತಿಳಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೆಲವು ವಸ್ತುಗಳ ಬೆಲೆ ಏರಿಕೆ ! ಕೆಲವು ವಸ್ತುಗಳ ಬೆಲೆ ಇಳಿಕೆ! ಮೋದಿ ಬಜೆಟ್​ ಏನೇನಿದೆ ಗೊತ್ತಾ…ತಿಳಿಯಿರಿ?

    ಎರಡನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಚೊಚ್ಚಲ ಬಜೆಟ್ ಮಂಡನೆ ಮಾಡಿದ್ದಾರೆ. ಕೆಲ ವಸ್ತುಗಳು ಹಾಗೂ ಸೇವೆಗಳು ದುಬಾರಿಯಾದರೆ ,ಕೆಲವಸ್ತುಗಳ ಬೆಲೆಯಲ್ಲಿ ಇಳಿಕೆಯಾಗಿದೆ.ಯಾವ ವಸ್ತುಗಳ ಬೆಲೆ ಏರಿಕೆಯಾಗಲಿದೆ? ಯಾವ ವಸ್ತುಗಳ ಬೆಲೆ ಇಳಿಕೆಯಾಗಲಿದೆ? ಎಂಬುದರ ಪೂರ್ತಿ ವಿವರ ಇಲ್ಲಿದೆ ನೋಡಿ.. ಯಾವ ವಸ್ತುಗಳ ಬೆಲೆ ಏರಿಕೆಯಾಗಿದೆ ಎಂಬುದರ ವಿವರ ಇಲ್ಲಿದೆ. ಪ್ರಮುಖವಾಗಿ ಚಿನ್ನ ಮತ್ತು ಆಭರಣಗಳ ದರ ಏರಿಕೆಯಾಗಿದ್ದು, ಪೆಟ್ರೋಲ್ ಮತ್ತು ಡಿಸೇಲ್​ ಮೇಲಿನ ಸೆಸ್ ಏರಿಕೆಯಾಗಿದ್ದು, ಒಂದು…

  • ಪ್ರೇಮ, ಸ್ಪೂರ್ತಿ

    ಕೈ, ಕಾಲು ಇಲ್ಲದಿದ್ರೂ ಆಕೆಯನ್ನೇ ಮದುವೆಯಾಗ್ತೀನಿ ಎಂದ ಪ್ರೇಮಿ…ಆದರೆ ವಿಧಿಬರಹ..!

    ಗುಜರಾತ್‍ನ ಜಾಮ್‍ನಗರದಲ್ಲಿ ಇದೇ ರೀತಿಯ ಲವ್‍ಸ್ಟೋರಿಯೊಂದು ಬೆಳಕಿಗೆ ಬಂದಿದೆ. ಬಹುತೇಕ ಲವ್ ಸ್ಟೋರಿಗಳಂತೆ ಈ ಕಥೆ ಕೂಡಾ ದುರಂತ ಅಂತ್ಯ ಕಂಡಿದೆ. ನಿಶ್ಚಿತಾರ್ಥವಾಗಿ ಎರಡು ತಿಂಗಳ ನಂತ್ರ ಭಾವಿ ಪತ್ನಿಗೆ ಎಲೆಕ್ಟ್ರಿಕಲ್ ಶಾಕ್ ಹೊಡದಿತ್ತು. ಇದ್ರಿಂದ ಯುವತಿಯ ಎರಡು ಕಾಲು, ಕೈ ಕತ್ತರಿಸಬೇಕಾಯ್ತು. ಇಷ್ಟಾದ್ರೂ ಆಕೆಯನ್ನೇ ಮದುವೆಯಾಗ್ತೇನೆಂದು ಭರವಸೆ ನೀಡಿದ್ದ ಭಾವಿ ಪತಿ ಆರು ತಿಂಗಳು ಆಕೆ ಜೊತೆ ಆಸ್ಪತ್ರೆಯಲ್ಲಿದ್ದ. ಆದ್ರೆ ಯುವತಿ ಬದುಕಿ ಬರಲಿಲ್ಲ. ಯುವತಿ ಶವಕ್ಕೆ ವಧುವಿನಂತೆ ಸಿಂಗಾರ ಮಾಡಿ ಅಂತ್ಯಸಂಸ್ಕಾರ ಮಾಡಲಾಯ್ತು. ಕಣ್ಣೀರಿನ…

  • ಗ್ಯಾಜೆಟ್

    ರೆಡ್‌ಮಿ ನೋಟ್ 4 ಸ್ಮಾರ್ಟ್‌ಪೋನಿನ ಫ್ಯೂಚರ್ಸ್ ಹಾಗೋ ಡಿಸ್ಕೌಂಟ್ ವಿವರವನ್ನು ಕನ್ನಡದಲ್ಲಿ ತಿಳಿಯಿರಿ..!

    ಆನ್‌ಲೈನಿನಲ್ಲಿ ಮಾರಕಟ್ಟಗೆ ಬಂದ ಶಿಯೋಮಿ ರೆಡ್‌ಮಿ ನೋಟ್ 4 ಸ್ಮಾರ್ಟ್‌ಪೋನು ಈ ಹಿಂದಿನ ನೋಟ್ 3 ಮಾರಾಟದ ದಾಖಲೆಯನ್ನು ಅನಾಯಸವಾಗಿ ಆಳಿಸಿ ಹಾಕಿತ್ತು. ಮೂರು ವಿಧದಲ್ಲಿ ಈ ಪೋನು ಲಭ್ಯವಿದ್ದು, 4 GB RAM ಮತ್ತು 64 GB ROM ಮಾದರಿಗಳಲ್ಲಿ ಮಾರಾಟವಾಗುತ್ತಿದೆ….

  • ಜ್ಯೋತಿಷ್ಯ

    150 ವರ್ಷಗಳಿಗೆ ಒಮ್ಮೆ ಮಾತ್ರ ಬರುವ ಈ ಗ್ರಹಣದಿಂದ ಯಾವ ರಾಶಿಗೆ ಏನು ಫಲ..?ತಿಳಿಯಲು ಈ ಲೇಖನ ಓದಿ..

    ಈ ತಿಂಗಳ 31ರಂದು ಸಂಪೂರ್ಣ ಚಂದ್ರಗ್ರಹಣದ ಇದೆ. 150 ವರ್ಷಗಳಿಗೆ ಒಮ್ಮೆ ಮಾತ್ರ ಬರುವ ಈ ಗ್ರಹಣ ತುಂಬಾ ವರ್ಚ್ಯುವಲ್ ಎಂದು ಹೇಳುತ್ತಾರೆ. ಹುಣ್ಣಿಮೆ ದಿನ ಉಂಟಾಗುವ ಚಂದ್ರಗ್ರಹಣ ಸಂದರ್ಭದಲ್ಲಿ ಚಂದ್ರನು ’ಸೂಪರ್ ಬ್ಲೂ ಬ್ಲಡ್ ಮೂನ್’ ಆಗಿ ಕಾಣಿಸುತ್ತಾನೆಂದು, ಇದು ಅತ್ಯಂತ ಅಪರೂಪ ಎನ್ನುತ್ತಿದ್ದಾರೆ ತಜ್ಞರು.

  • ತಂತ್ರಜ್ಞಾನ

    ಚಾಲಕನಿಲ್ಲದ ವಿಮಾನ!!!

    ಪೈಲಟ್ ಇಲ್ಲದ ವಿಮಾನ ತಯಾರಿಸಲು ಬೋಯಿಂಗ್ ಕಂಪನಿ ಮುಂದೆ ಬಂದಿದೆ. ವಿಮಾನ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿರುವ ಬೋಯಿಂಗ್ ಕಂಪನಿ ಮುಂದಿನ ವರ್ಷದ ವೇಳೆಗೆ ಪೈಲಟ್ ಇಲ್ಲದ ವಿಮಾನ ನಿರ್ಮಾಣದ ಕನಸು ನನಸಾಗಿರುವ ಗುರಿ ಹೊಂದಿದೆ.

  • ಸುದ್ದಿ

    ಜೆಡಿಎಸ್ ಪಕ್ಷ ಬಿಜೆಪಿ ಜತೆ ಕೈ ಜೋಡಿಸಲು ಮುಂದಾಗಿದೆ…ಕಾರಣ?

    ಕಾಂಗ್ರೆಸ್ ಪಕ್ಷದ ಶಾಸಕರು ಸಾಲು ಸಾಲು ರಾಜೀನಾಮೆ ನೀಡಿ ಮೈತ್ರಿ ಸರ್ಕಾರವನ್ನು ಪತನದ ಅಂಚಿಗೆ ಕೊಂಡೊಯ್ಯುತ್ತಿರುವ ಸಂದರ್ಭದಲ್ಲೇ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆದಿದ್ದು, ಆಡಳಿತಾರೂಢ ಜೆಡಿಎಸ್ ಪಕ್ಷ ಬಿಜೆಪಿ ಜತೆ ಕೈ ಜೋಡಿಸಲು ಮುಂದಾಗಿದೆ.ನಿನ್ನೆ ತಡರಾತ್ರಿವರೆಗೂ ಜೆಡಿಎಸ್ ಹಾಗೂ ಬಿಜೆಪಿಯ ರಾಷ್ಟ್ರಮಟ್ಟದ ನಾಯಕರು ಸುದೀರ್ಘ ಸಮಾಲೋಚನೆ ನಡೆಸಿದ್ದು, ಉಭಯ ಪಕ್ಷಗಳು ತಮ್ಮೆಲ್ಲ ಹಿಂದಿನ ಮನಸ್ತಾಪಗಳನ್ನು ಬದಿಗೊತ್ತಿ ಹೊಸದಾಗಿ ಮೈತ್ರಿ ಸರ್ಕಾರ ರಚನೆ ಮಾಡುವ ನಿಟ್ಟಿನಲ್ಲಿ ಚರ್ಚೆ ನಡೆಸಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ. ಕಾಂಗ್ರೆಸ್ ಹಾಗೂ ಜೆಡಿಎಸ್…