ಸುದ್ದಿ

ಟ್ರೆಂಡ್ ಸೃಷ್ಟಿಮಾಡಿದ ಮೋದಿ – ಕೇದಾರನಾಥ ಗುಹೆಯಲ್ಲಿ ಧ್ಯಾನಕ್ಕೆ ಮುಗಿಬಿದ್ದ ಯಾತ್ರಿಕರು

98

ಕೇದಾರನಾಥ ಗುಹೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ಯಾನ ಮಾಡುವ ಮೂಲಕ ಹೊಸ ಟ್ರೆಂಡ್ ಸೃಷ್ಟಿಸಿದ್ದರು. ಈಗ ಪ್ರಧಾನಿ ಅವರ ನಡೆಯನ್ನೇ ಇಲ್ಲಿಗೆ ಬರುವ ಯಾತ್ರಿಕರು ಅನುಸರಿಸುತ್ತಿದ್ದಾರೆ.ಹೌದು, ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಕ್ಕೂ ಮೊದಲು ಮೇ 18ರಂದು ಮೋದಿ ಅವರು ಕೇದಾರನಾಥದಲ್ಲಿರುವ ಗುಹೆಯಲ್ಲಿ 24 ಗಂಟೆಗಳು ಸುದೀರ್ಘ ಧ್ಯಾನ ಮಾಡಿ ಎಲ್ಲೆಡೆ ಸುದ್ದಿಯಾಗಿದ್ದರು. ಹಾಗೆಯೇ ಹಲವರ ಗಮನ ಸೆಳೆದಿದ್ದರು. ಈಗ ಈ ಗುಹೆಯಲ್ಲಿ ಧ್ಯಾನ ಮಾಡಲು ಯಾತ್ರಿಕರು ತಾ ಮುಂದು ನಾ ಮುಂದು ಅಂತ ಮುಗಿಬಿದ್ದಿದ್ದಾರೆ.

ಕೇದಾರನಾಥ ಗುಹೆಯಲ್ಲಿ ಧ್ಯಾನ ಮಾಡಲು ಯಾತ್ರಿಕರು www.gmvnl.in ಮೂಲಕ 1,500 ರೂ. ಪಾವತಿಸಿ ಬುಕ್ ಮಾಡಬೇಕು. ಬಳಿಕ ಗುಪ್ತಾಕ್ಷಿ ಹಾಗೂ ಕೇದಾರನಾಥದಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಬೇಕು. ತದನಂತರ ಯಾತ್ರಿಕರು ಆರೋಗ್ಯವಾಗಿದ್ದರೆ ಮಾತ್ರ ಅವರಿಗೆ ಗುಹೆಯಲ್ಲಿ 24 ಗಂಟೆಗಳ ಕಾಲ ಏಕಾಂಗಿಯಾಗಿ ಧ್ಯಾನ ಮಾಡಲು ಅವಕಾಶ ನೀಡಲಾಗುತ್ತದೆ. ಸದ್ಯ ಮುಂದಿನ 10 ದಿನಗಳ ತನಕ ಕೇದಾರನಾಥ ಗುಹೆ ಯಾತ್ರಿಕರ ಧ್ಯಾನಕ್ಕೆ ಬುಕ್ ಆಗಿದೆ.

ಹಾಗೆಯೇ ಮೂರು ದಿನಕ್ಕಿಂತ ಹೆಚ್ಚು ದಿನಗಳ ಕಾಲ ಗುಹೆ ಬುಕ್ ಮಾಡುವಂತಿಲ್ಲ. ಒಂದು ಬಾರಿಗೆ ಕೇವಲ ಓರ್ವ ಯಾತ್ರಿಕರಿಗೆ ಮಾತ್ರ ಗುಹೆಗೆ ಪ್ರವೇಶ ನೀಡಲಾಗುತ್ತದೆ. ಜೊತೆಗೆ ಗುಹೆಯಲ್ಲಿ ಫೋನ್ ವ್ಯವಸ್ಥೆ ಕೂಡ ಇದೆ. ಒಂದು ವೇಳೆ ತುರ್ತು ಪರಿಸ್ಥಿತಿ ಎದುರಾದರೆ ಫೋನ್ ಮೂಲಕ ಜಿಎಂವಿಎನ್ ಸಿಬ್ಬಂದಿಯನ್ನು ಸಂಪರ್ಕಿಸಬಹುದು. ಇದೇ ರೀತಿ ಆಧುನಿಕ ಗುಹೆಗಳು ಕೂಡ ಕೇದಾರನಾಥ ಹಾಗೂ ಬದರಿನಾಥ ದೇಗುಲದ ಅಕ್ಕಪಕ್ಕದ ಪರ್ವತಗಳಲ್ಲಿ ನಿರ್ಮಾಣ ಮಾಡಲಾಗಿದೆ.

ಗುಹೆಗೆ ಬಂದ ಯಾತ್ರಿಕರಿಗೆ ಜಿಎಂವಿಎನ್ ಕುಡಿಯುವ ನೀರಿನ ವ್ಯವಸ್ಥೆ, ಊಟ, ಶೌಚಾಲಯ, ವಿದ್ಯುತ್ ಸಂಪರ್ಕ ಹಾಗೂ ಮಲಗಲು ಹಾಸಿಗೆ ಹೀಗೆ ಮೂಲಭೂತ ಸೌಕರ್ಯವನ್ನು ಕಲ್ಪಿಸಿಕೊಡುತ್ತದೆ. ಆದರೆ ಒಂದು ಸಲ ಗುಹೆಯನ್ನು ಆನ್‍ಲೈನ್ ಬುಕ್ ಮಾಡಿದ ಬಳಿಕ ಬುಕ್ಕಿಂಗ್ ಅನ್ನು ರದ್ದು ಮಾಡಿದರೆ ಅಥವಾ ಕಾರಣಾಂತರಗಳಿಂದ ಗುಹೆಯಲ್ಲಿ ಇರಲು ಯಾತ್ರಿಕರು ನಿರಾಕರಿಸಿದರೆ ಪಾವತಿಸಿದ ಹಣವನ್ನು ವಾಪಸ್ ನೀಡುವುದಿಲ್ಲ. ಹಾಗೆಯೇ ಒಂದು ವೇಳೆ ಮಾಡಿದ್ದ ಬುಕ್ಕಿಂಗ್ ರದ್ದಾದಲ್ಲಿ ಆ ದಿನ ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಸ್ಥಳದಲ್ಲಿದ್ದ ಯಾತ್ರಿಕರಿಗೆ 990 ರೂಪಾಯಿಯಲ್ಲಿ ಗುಹೆಯಲ್ಲಿ ಧ್ಯಾನ ಮಾಡಲು ಅವಕಾಶ ನೀಡಲಾಗುತ್ತದೆ ಎಂದು ಅಲ್ಲಿನ ಆಡಳಿತ ಮಂಡಳಿ ತಿಳಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಸುದ್ದಿ

    ಇಲ್ಲಿದೆ ಸಿಹಿ ಸುದ್ದಿ! ಪೆಟ್ರೋಲ್-ಡಿಸೇಲ್ ಬೆಲೆ ಇಳಿಕೆ…!

    ಲೋಕಸಭಾ ಚುನಾಣಾ ಫಲಿತಾಂಶ ಬಂದ ನಂತರದ ದಿನಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ, ರಾಜ್ಯದಲ್ಲಿ ಮೇ 23 ರಿಂದ 28ವರೆಗೆ ಕೇವಲ ಆರು ದಿನಗಳಲ್ಲಿ 72 ಪೈಸೆ ಪೇಟ್ರೊಲ್ ದರ ಏರಿಕೆ ಕಂಡಿತ್ತು. ಆದರೆ ಕಳೆದೆರಡು ದಿನಗಳಿಂದ ತೈಲ ದರ ಇಳಿಕೆಯೆತ್ತ ಮುಖ ಮಾಡಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕಂಡಾಗ ವಾಹನ ಸವಾರರ ಆಕ್ರೋಶ ಹೆಚ್ಚಾಗತ್ತೆ, ಇಳಿಕೆ ಕಂಡರೆ ಅವರ ಮೊಗದಲ್ಲಿ ಮಂದಹಾಸ ಮೂಡುತ್ತದೆ. ದೇಶದ ಪ್ರಮುಖ ನಗರಗಳಲ್ಲಿ…

  • ಉಪಯುಕ್ತ ಮಾಹಿತಿ, ಜೀವನಶೈಲಿ

    ಅಕ್ಕಿ ತೊಳೆದ ನೀರನ್ನು ಚೆಲ್ಲಬೇಡಿ..!ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಸಾಮಾನ್ಯವಾಗಿ ನಾವು ಮನೆಯಲ್ಲಿ ಅನ್ನ ಮಾಡುವಾಗ ಅಕ್ಕಿಯನ್ನು ತೊಳೆದು ಆ ನೀರನ್ನು ಚೆಲ್ಲುತ್ತೇವೆ‌ ಅಥವಾ ಹಸುಗಳಿಗೆ ಕುಡಿಸುತ್ತೇವೆ. ಇದು ಎಲ್ಲರೂ ಮಾಡುವುದೇ… ಆದರೆ ಆ ನೀರಿನಿಂದ ನಮ್ಮ ಮುಖದ ಮೇಲಿನ ಮೊಡವೆಗಳನ್ನು ದೂರ ಮಾಡಿಕೊಳ್ಳುಬಹುದಲ್ಲದೇ ನಮ್ಮ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಬಹುದಂತೆ.

  • inspirational, ಆರೋಗ್ಯ

    ಗೆಣಸು ನಮ್ಮ ಶರೀರದ ಆಂತರಿಕ ಅಂಗಾಂಗಗಳಿಗೆ ಎಷ್ಟು ಉಪಯೋಗಕಾರಿ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಬಿಟಾ-ಕೆರೋಟಿನ್, ವಿಟಾಮಿನ್ ಇ,ಸಿ ಮತ್ತು ಬಿ-6, ಪೊಟ್ಯಾಷಿಯಂ ಮತ್ತು ಕಬ್ಬಿಣವನ್ನು ಪುಷ್ಕಳವಾಗಿ ಹೊಂದಿರುವ ಗೆಣಸು ಬಟಾಟೆಗೆ ಹೋಲಿಸಿದರೆ ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್‌ನ್ನು ಹೊಂದಿದೆ. ಹೀಗಾಗಿ ಅದು ಮಧುಮೇಹಿಗಳ ಸ್ನೇಹಿತನಾಗಿದೆ. ನಾವು ಸೇವಿಸುವ ಆಹಾರದಲ್ಲಿನ ಕಾರ್ಬೊಹೈಡ್ರೇಟ್‌ಗಳು ರಕ್ತದಲ್ಲಿನ ಸಕ್ಕರೆಯ ಮಟ್ಟದ ಮೇಲೆ ಬೀರುವ ಪ್ರಮಾಣವನ್ನು ತಿಳಿಯಲು ಗ್ಲೈಸೆಮಿಕ್ ಇಂಡೆಕ್ಸ್ ಮಾನದಂಡವಾಗಿದೆ.

  • ಸುದ್ದಿ

    Video Game; 4 ತಿಂಗಳಲ್ಲಿ 30 ಗೇಮ್‌ ರಚಿಸಿ ಅಚ್ಚರಿ ಮೂಡಿಸಿದ ಬಾಲಕ,.!!

    ಮಕ್ಕಳು ಮೊಬೈಲ್‌ ಹಿಡಿದುಕೊಂಡರೆ, ಮೊದಲು ಹುಡುಕುವುದು ಗೇಮ್ಸ್ ಇದೆಯೇ ಎಂದು! ಅದಾದ ಬಳಿಕ ವಿಡಿಯೋ, ಕ್ಯಾಮರಾ ಎಂದೆಲ್ಲ ವಿವಿಧ ಆಯ್ಕೆಗಳನ್ನು ಹುಡುಕುತ್ತಾರೆ. ಅಲ್ಲದೆ ಮೊಬೈಲ್, ಕಂಪ್ಯೂಟರ್ ಮತ್ತು ಟ್ಯಾಬ್ ಬಳಕೆಯನ್ನು ಕೂಡ ಬಹಳ ಬೇಗನೆ ಕಲಿತುಕೊಂಡು ಬಿಡುತ್ತಾರೆ. ಹೀಗೆ ಸ್ಮಾರ್ಟ್ ಆಗಿರುವ ನೈಜೀರಿಯಾದ 9 ವರ್ಷದ ಬಾಲಕನೊಬ್ಬ ನಾಲ್ಕೇ ತಿಂಗಳಲ್ಲಿ ಸ್ಮಾರ್ಟ್‌ಫೋನ್‌ ಮತ್ತು ಟ್ಯಾಬ್‌ಗಳಿಗಾಗಿ 30 ಗೇಮ್‌ಗಳನ್ನು ಅಭಿವೃದ್ಧಿ ಮಾಡುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾನೆ. ಈ ಬಾಲಕನ ಹೆಸರು ಬೇಸಿಕ್‌ ಓಕ್ಪರಾ ಜ್ಯೂ. ಲಾಗೋಸ್‌ ನಿವಾಸಿಯಾಗಿರುವ…

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…