News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಟ್ರೆಂಡ್ ಸೃಷ್ಟಿಮಾಡಿದ ಮೋದಿ – ಕೇದಾರನಾಥ ಗುಹೆಯಲ್ಲಿ ಧ್ಯಾನಕ್ಕೆ ಮುಗಿಬಿದ್ದ ಯಾತ್ರಿಕರು

98

ಕೇದಾರನಾಥ ಗುಹೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ಯಾನ ಮಾಡುವ ಮೂಲಕ ಹೊಸ ಟ್ರೆಂಡ್ ಸೃಷ್ಟಿಸಿದ್ದರು. ಈಗ ಪ್ರಧಾನಿ ಅವರ ನಡೆಯನ್ನೇ ಇಲ್ಲಿಗೆ ಬರುವ ಯಾತ್ರಿಕರು ಅನುಸರಿಸುತ್ತಿದ್ದಾರೆ.ಹೌದು, ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಕ್ಕೂ ಮೊದಲು ಮೇ 18ರಂದು ಮೋದಿ ಅವರು ಕೇದಾರನಾಥದಲ್ಲಿರುವ ಗುಹೆಯಲ್ಲಿ 24 ಗಂಟೆಗಳು ಸುದೀರ್ಘ ಧ್ಯಾನ ಮಾಡಿ ಎಲ್ಲೆಡೆ ಸುದ್ದಿಯಾಗಿದ್ದರು. ಹಾಗೆಯೇ ಹಲವರ ಗಮನ ಸೆಳೆದಿದ್ದರು. ಈಗ ಈ ಗುಹೆಯಲ್ಲಿ ಧ್ಯಾನ ಮಾಡಲು ಯಾತ್ರಿಕರು ತಾ ಮುಂದು ನಾ ಮುಂದು ಅಂತ ಮುಗಿಬಿದ್ದಿದ್ದಾರೆ.

ಕೇದಾರನಾಥ ಗುಹೆಯಲ್ಲಿ ಧ್ಯಾನ ಮಾಡಲು ಯಾತ್ರಿಕರು www.gmvnl.in ಮೂಲಕ 1,500 ರೂ. ಪಾವತಿಸಿ ಬುಕ್ ಮಾಡಬೇಕು. ಬಳಿಕ ಗುಪ್ತಾಕ್ಷಿ ಹಾಗೂ ಕೇದಾರನಾಥದಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಬೇಕು. ತದನಂತರ ಯಾತ್ರಿಕರು ಆರೋಗ್ಯವಾಗಿದ್ದರೆ ಮಾತ್ರ ಅವರಿಗೆ ಗುಹೆಯಲ್ಲಿ 24 ಗಂಟೆಗಳ ಕಾಲ ಏಕಾಂಗಿಯಾಗಿ ಧ್ಯಾನ ಮಾಡಲು ಅವಕಾಶ ನೀಡಲಾಗುತ್ತದೆ. ಸದ್ಯ ಮುಂದಿನ 10 ದಿನಗಳ ತನಕ ಕೇದಾರನಾಥ ಗುಹೆ ಯಾತ್ರಿಕರ ಧ್ಯಾನಕ್ಕೆ ಬುಕ್ ಆಗಿದೆ.

ಹಾಗೆಯೇ ಮೂರು ದಿನಕ್ಕಿಂತ ಹೆಚ್ಚು ದಿನಗಳ ಕಾಲ ಗುಹೆ ಬುಕ್ ಮಾಡುವಂತಿಲ್ಲ. ಒಂದು ಬಾರಿಗೆ ಕೇವಲ ಓರ್ವ ಯಾತ್ರಿಕರಿಗೆ ಮಾತ್ರ ಗುಹೆಗೆ ಪ್ರವೇಶ ನೀಡಲಾಗುತ್ತದೆ. ಜೊತೆಗೆ ಗುಹೆಯಲ್ಲಿ ಫೋನ್ ವ್ಯವಸ್ಥೆ ಕೂಡ ಇದೆ. ಒಂದು ವೇಳೆ ತುರ್ತು ಪರಿಸ್ಥಿತಿ ಎದುರಾದರೆ ಫೋನ್ ಮೂಲಕ ಜಿಎಂವಿಎನ್ ಸಿಬ್ಬಂದಿಯನ್ನು ಸಂಪರ್ಕಿಸಬಹುದು. ಇದೇ ರೀತಿ ಆಧುನಿಕ ಗುಹೆಗಳು ಕೂಡ ಕೇದಾರನಾಥ ಹಾಗೂ ಬದರಿನಾಥ ದೇಗುಲದ ಅಕ್ಕಪಕ್ಕದ ಪರ್ವತಗಳಲ್ಲಿ ನಿರ್ಮಾಣ ಮಾಡಲಾಗಿದೆ.

ಗುಹೆಗೆ ಬಂದ ಯಾತ್ರಿಕರಿಗೆ ಜಿಎಂವಿಎನ್ ಕುಡಿಯುವ ನೀರಿನ ವ್ಯವಸ್ಥೆ, ಊಟ, ಶೌಚಾಲಯ, ವಿದ್ಯುತ್ ಸಂಪರ್ಕ ಹಾಗೂ ಮಲಗಲು ಹಾಸಿಗೆ ಹೀಗೆ ಮೂಲಭೂತ ಸೌಕರ್ಯವನ್ನು ಕಲ್ಪಿಸಿಕೊಡುತ್ತದೆ. ಆದರೆ ಒಂದು ಸಲ ಗುಹೆಯನ್ನು ಆನ್‍ಲೈನ್ ಬುಕ್ ಮಾಡಿದ ಬಳಿಕ ಬುಕ್ಕಿಂಗ್ ಅನ್ನು ರದ್ದು ಮಾಡಿದರೆ ಅಥವಾ ಕಾರಣಾಂತರಗಳಿಂದ ಗುಹೆಯಲ್ಲಿ ಇರಲು ಯಾತ್ರಿಕರು ನಿರಾಕರಿಸಿದರೆ ಪಾವತಿಸಿದ ಹಣವನ್ನು ವಾಪಸ್ ನೀಡುವುದಿಲ್ಲ. ಹಾಗೆಯೇ ಒಂದು ವೇಳೆ ಮಾಡಿದ್ದ ಬುಕ್ಕಿಂಗ್ ರದ್ದಾದಲ್ಲಿ ಆ ದಿನ ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಸ್ಥಳದಲ್ಲಿದ್ದ ಯಾತ್ರಿಕರಿಗೆ 990 ರೂಪಾಯಿಯಲ್ಲಿ ಗುಹೆಯಲ್ಲಿ ಧ್ಯಾನ ಮಾಡಲು ಅವಕಾಶ ನೀಡಲಾಗುತ್ತದೆ ಎಂದು ಅಲ್ಲಿನ ಆಡಳಿತ ಮಂಡಳಿ ತಿಳಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಸಿ ಮ್ ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ- ಮಾಜಿ ಸಿಮ್ ಸಿದ್ದರಾಮಯ್ಯ ಸ್ಪಷ್ಟನೆ

    ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ. ಅವರು ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಎಐಸಿಸಿ ಕಚೇರಿಯಲ್ಲಿ ಸಿಡಬ್ಲೂಸಿ ಸಭೆ ಹಿನ್ನೆಲೆಯಲ್ಲಿ ದೆಹಲಿಗೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ಸ್ಥಿರವಾಗಿರಲಿದೆ ಯಾವುದೇ ತೊಂದರೆ ಇಲ್ಲ. ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ ಎಂದು ಅವರು ಸಿಎಂ ರಾಜೀನಾಮೆ ಬಗ್ಗೆ ಸ್ಪಷ್ಟನೆ ನೀಡುವ ಮೂಲಕ ವದಂತಿಗಳಿಗೆ ಫುಲ್ ಸ್ಟಾಪ್ ಹಾಕಿದ್ದಾರೆ. ಸಭೆಯಲ್ಲಿ ರಾಜ್ಯದ ಸೋಲಿನ ಬಗ್ಗೆ ಚರ್ಚೆ ಮಾಡಲಾಗುವುದು. ಪಾರ್ಟಿ ಫೋರಂನಲ್ಲಿ…

  • ಜೀವನಶೈಲಿ

    ಬಾರ್ಬಿಯಂತೆ ಕಾಣಲು ತಿಂಗಳಿಗೆ ಈ ಯುವತಿ ಭಾರೀ ಹಣ ಖರ್ಚು..!ತಿಳಿಯಲು ಈ ಲೇಖನ ಓದಿ…

    ಬಾರ್ಬಿ ಡಾಲ್ ಅನ್ನು ಎಲ್ರೂ ಇಷ್ಟಪಡ್ತಾರೆ. ಕೆಲವು ಯುವತಿಯರು ಬಾರ್ಬಿಯಂತೆ ಸ್ಲಿಮ್ & ಬ್ಯೂಟಿಫುಲ್ ಆಗಿ ಕಾಣಲು ಸರ್ಕಸ್ ಮಾಡ್ತಾರೆ. ಇದಕ್ಕಾಗಿ ಚಿತ್ರ ವಿಚಿತ್ರ ಕಾಸ್ಮೆಟಿಕ್ ಚಿಕಿತ್ಸೆ ತೆಗೆದುಕೊಳ್ತಾರೆ.ಜೆಕ್ ರಿಪಬ್ಲಿಕ್ ದೇಶದ ಯುವತಿಯೊಬ್ಬಳು ಬಾರ್ಬಿಯಂತೆ ಕಾಣಲು ತಿಂಗಳಿಗೆ ಬರೋಬ್ಬರಿ ಸಾವಿರ ಪೌಂಡ್(90 ಸಾವಿರ ರೂ.) ಖರ್ಚು ಮಾಡಿ ಸುದ್ದಿಯಾಗಿದ್ದಾಳೆ.

  • ರಾಜಕೀಯ

    ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯಗೆ ಮನೆಯಲ್ಲೇ ಕ್ಲಾಸ್ ತೆಗೆದುಕೊಂಡ ತೇಜಸ್ವಿನಿ ಅನಂತ್ ಕುಮಾರ್..!

    ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಭಾಗದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರಿಗೆ ದಿವಂಗತ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಮನೆಯಲ್ಲೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಅಭ್ಯರ್ಥಿ ಘೋಷಣೆಯಾದ ಬಳಿಕ ಇಂದು ತೇಜಸ್ವಿ ಸೂರ್ಯ ಅವರು ತೇಜಸ್ವಿನಿ ಅನಂತ್ ಕುಮಾರ್ ಮನೆಗೆ ಆಶೀರ್ವಾದ ಪಡೆಯಲು ಹೋಗಿದ್ದರು. ಈ ಸಂದರ್ಭದಲ್ಲಿ ತೇಜಸ್ವಿನಿ ಅನಂತ್ ಕುಮಾರ್ ಅವರು ತೇಜಸ್ವಿ ಸೂರ್ಯಗೆ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಮಾತುಕತೆಯ ಬಳಿಕ ತೇಜಸ್ವಿ ಸೂರ್ಯ ಅವರು…

  • ಮನರಂಜನೆ

    ಅನುಶ್ರೀಗೆ ಮರೆಯಲಾರದ ಗಿಫ್ಟ್ ಕೊಟ್ಟ ಹನುಮಂತಪ್ಪ..ಸಾರಿ ಕೇಳಿದ ಅನುಶ್ರೀ!

    ಕುರಿಗಾಯಿ ಹನುಮಂತ ಅವರು ಜೀ ಕನ್ನಡ ವಾಹಿನಿಯ ‘ಸರಿಗಮಪ’ ಕಾರ್ಯಕ್ರಮದಲ್ಲಿ ಹಾಡುವ ಮೂಲಕ ವೀಕ್ಷಕರ ಮನಗೆದ್ದಿದ್ದಾರೆ. ತಮ್ಮದೇ ಶೈಲಿಯಲ್ಲಿ ಹಾಡುವ ಮೂಲಕ ಹನುಮಂತ ಅವರು ಮನೆ ಮಾತಾಗಿದ್ದಾರೆ. ಅವರಿಗೆ ಸಿನಿಮಾದಲ್ಲಿ ಹಾಡುವ ಅವಕಾಶ ಕೊಡುವುದಾಗಿ ನಿರ್ದೇಶಕ ಯೋಗರಾಜ ಭಟ್ ಈಗಾಗಲೇ ಭರವಸೆ ನೀಡಿದ್ದಾರೆ. ‘ಸರಿಗಮಪ’ ಕಾರ್ಯಕ್ರಮದ ನಿರೂಪಕಿ ಅನುಶ್ರೀ ಲಂಬಾಣಿ ಉಡುಗೆ ತಂದುಕೊಡುವಂತೆ ಕೇಳಿಕೊಂಡಿದ್ದರಂತೆ. ಹನುಮಂತ ಅವರ ತಾಯಿ ಲಂಬಾಣಿ ಉಡುಗೆ ತಂದುಕೊಟ್ಟಿದ್ದು, ಅದನ್ನು ಧರಿಸಿ ಸಂತಸ ಹಂಚಿಕೊಂಡ ಅನುಶ್ರೀ ಕ್ಷಮೆ ಕೂಡ ಕೇಳಿದ್ದಾರೆ. ‘ತಮ್ಮ ಹನುಮಂತ…

  • ಉಪಯುಕ್ತ ಮಾಹಿತಿ

    ಕನ್ಯಾದಾನ ಯೋಜನೆ ಅಡಿಯಲ್ಲಿ ದಿನಾಲೂ 121 ರೂಪಾಯಿ ಇನ್ವೆಸ್ಟ್ಮೆಂಟ್ ಮಾಡಿದ್ರೆ ಸಿಗುತ್ತೆ 27 ಲಕ್ಷ ರೂಪಾಯಿಗಳು..!

    ಕಡಿಮೆ ಹಣ ಹೂಡಿಕೆ ಮಾಡಿ ಹೆಚ್ಚಿನ ಹಣ ವಾಪಸ್ ಪಡೆಯಲು ಯಾರು ಬಯಸುವುದಿಲ್ಲ ಹೇಳಿ. ಪ್ರತಿಯೊಬ್ಬರೂ ಕೈತುಂಬ ಸಂಪಾದನೆ ಮಾಡುವ ಬಗ್ಗೆ ಆಲೋಚನೆ ಮಾಡ್ತಾರೆ. ಕಡಿಮೆ ಹಣ ಹೂಡಿ ಹೆಚ್ಚು ಲಾಭ ಪಡೆಯಲು ಬಯಸುವವರಿಗೆ ಎಲ್ಐಸಿ ಹೊಸ ಪಾಲಿಸಿಯೊಂದನ್ನು ಶುರು ಮಾಡಿದೆ. ಎಲ್ಐಸಿ ಈ ಪ್ಲಾನ್ ನಲ್ಲಿ ಪ್ರತಿ ದಿನ 121 ರೂಪಾಯಿ ಹಣ ಹೂಡಿದ್ರೆ 25 ವರ್ಷಗಳ ನಂತ್ರ 27 ಲಕ್ಷ ರೂಪಾಯಿ ನಿಮ್ಮ ಕೈ ಸೇರುತ್ತದೆ. ಮಗಳ ಮದುವೆಗೆ ಸಹಾಯವಾಗಲಿ ಎನ್ನುವ ಕಾರಣಕ್ಕೆ ಎಲ್ಐಸಿ…

  • ಸುದ್ದಿ

    ನೀರಿನ ಕೊರತೆಯನ್ನು ನೀಗಿಸಲು 25 ಲಕ್ಷ ಲೀಟರ್‌ ಕಾವೇರಿ ನೀರು ಹೊತ್ತ ಮೊದಲ ‘ಭಗೀರಥ’ ರೈಲು ಚನ್ನೈ ಗೆ ಆಗಮಿಸಿದೆ…!

    ಚೆನ್ನೈನಲ್ಲಿ ಎದುರಾಗಿರುವ ನೀರಿನ ತೀವ್ರ ಕೊರತೆಯನ್ನು ನಿರ್ವಹಿಸಲು ನಿತ್ಯ 1 ಕೋಟಿ ಲೀಟರ್‌ ನೀರು ಪೂರೈಸುವುದಾಗಿ ಈ ಹಿಂದೆ ತಮಿಳುನಾಡು ಸರ್ಕಾರ ಘೋಷಿಸಿತ್ತು. ಇದಕ್ಕಾಗಿ 68 ಕೋಟಿ ರೂ. ಅನುದಾನ ಮೀಸಲಿರಿಸಿತ್ತು. ಇದೀಗ ಈ ಯೋಜನೆಯ ಭಾಗವಾಗಿ ಚೆನ್ನೈಗೆ ಮೊದಲ ನೀರಿನ ರೈಲು ಆಗಮಿಸಿದೆ. ಕುಡಿಯುವ ನೀರಿನ ತೀವ್ರ ಕೊರತೆ ಎದುರಿಸುತ್ತಿರುವ ತಮಿಳನಾಡು ರಾಜಧಾನಿ ಚೆನ್ನೈಗೆ ಶುಕ್ರವಾರ 25 ಲಕ್ಷ ಲೀಟರ್‌ ಕಾವೇರಿ ನೀರು ಹೊತ್ತ ಮೊದಲ ರೈಲು ಆಗಮಿಸಿದೆ.ವೆಲ್ಲೂರು ಜಿಲ್ಲೆಯ ಜೋಲಾರ್‌ ಪೇಟೆಯಿಂದ ಬರೊಬ್ಬರಿ 25…