ಸುದ್ದಿ

ಕಪ್ಪು ಹಣ ಆಯ್ತು, ಬಂಗಾರದ ಬೇಟೆಗಿಳಿದ ಮೋದಿ ಸರ್ಕಾರ : ಚಿನ್ನ ರೂಪದ ಕಾಳಧನದ ಮೇಲೆ ಮೋದಿ ಸರ್ಜಿಕಲ್ ಸ್ಟ್ರೈಕ್…!

44

ನೋಟು ನಿಷೇಧದ ಬಳಿಕ ಮೋದಿ ಸರ್ಕಾರ ಕಪ್ಪು ಹಣ ನಿಯಂತ್ರಿಸಲು ಬಂಗಾರದ ಮೇಲೆ ಭಾರೀ ಪ್ರಮಾಣದ ತೆರಿಗೆ ಹೇರಲು ಚಿಂತನೆ ನಡೆಸಿದೆ. ನಗದು ರೂಪದ ಕಾಳಧನ ನಿಗ್ರಹಕ್ಕೆಂದು ನೋಟುರದ್ದತಿಯ ಸರ್ಜಿಕಲ್‌ ದಾಳಿ ನಡೆಸಿದ ಕೇಂದ್ರ ಸರಕಾರ ಸದ್ಯವೇ ಚಿನ್ನದ ರೂಪದಲ್ಲಿ ಸಂಗ್ರಹವಾಗಿರುವ ಕಾಳಧನವನ್ನು ಬಯಲಿಗೆಳೆಯಲು ಹೊಸ ಯೋಜನೆ ಆರಂಭಿಸಲಿದೆ.

ಹೌದು. ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮವೊಂದು ವರದಿ ಮಾಡಿದ್ದು ಕಪ್ಪು ಹಣವನ್ನು ಸಕ್ರಮಗೊಳಿಸಲು ಹೇಗೆ ಯೋಜನೆ ತರಲಾಗಿತ್ತೋ ಅದೇ ರೀತಿಯಾಗಿ ದಾಖಲೆ ಇಲ್ಲದ ಚಿನ್ನವನ್ನುನಿಗದಿ ಪಡಿಸಿದ ತೆರಿಗೆ ಪಾವತಿಸಿ ಸಕ್ರಮಗೊಳಿಸಲು ಮುಂದಾಗಿದೆ. ‘ಚಿನ್ನ ಕ್ಷಮಾದಾನ ಯೋಜನೆ’(ಗೋಲ್ಡ್‌ ಅಮ್ನೆಸ್ಟಿ ಸ್ಕೀಮ್‌) ಮೂಲಕ ದೇಶದಲ್ಲಿ ಸಂಗ್ರಹವಾಗಿರುವ ಚಿನ್ನದ ಲೆಕ್ಕವನ್ನು ಹೊರತೆಗೆಯಲು ಸರಕಾರ ನಿರ್ಧರಿಸಿದೆ.

ಕಾಳಧನ ಬಳಸಿ ಚಿನ್ನದಲ್ಲಿ ಹೂಡಿಕೆ ಮಾಡಿದವರು ಅದನ್ನು ಸ್ವಯಂ ಆಗಿ ಘೋಷಿಸಿಕೊಳ್ಳಲು ಹೊಸ ಯೋಜನೆಯಿಂದ ಸಾಧ್ಯವಾಗಲಿದೆ. ಸೂಕ್ತ ತೆರಿಗೆಯನ್ನು ಪಾವತಿಸಿ ಅಕ್ರಮವನ್ನು ಸಕ್ರಮ ಮಾಡಿಕೊಳ್ಳಬಹುದು. ಅಕ್ರಮ ಆಸ್ತಿಗೆ ಸಂಬಂಧಿಸಿದ ಶಿಕ್ಷೆಗಳಿಂದ ಪಾರಾಗಬಹುದು. ಕ್ಷಮಾದಾನ ಯೋಜನೆಯಲ್ಲಿ ಒಬ್ಬ ವ್ಯಕ್ತಿ ಇಟ್ಟುಕೊಳ್ಳಬಹುದಾದ ಕನಿಷ್ಠ ಚಿನ್ನದ ಪ್ರಮಾಣವನ್ನು ನಿಗದಿ ಪಡಿಸುವ ಸಾಧ್ಯತೆಗಳಿವೆ. ಅದಕ್ಕಿಂತ ಹೆಚ್ಚಿನ ಚಿನ್ನಕ್ಕೆ ತೆರಿಗೆ ಅನ್ವಯ. ತೆರಿಗೆ ದರ ಇನ್ನೂ ಅಂತಿಮವಾಗಿಲ್ಲ. ಬಹುಶಃ ಶೇಕಡಾ 30 ಮತ್ತು ಶಿಕ್ಷಣ ಸೆಸ್‌ ಸೇರಿ ಶೇ.33 ಆಗ ಬಹುದು ಎಂಬ ನಿರೀಕ್ಷೆ ಇದೆ.

ಕಾಳಧನಿಕರು ಚಿನ್ನದಲ್ಲಿ ಅಕ್ರಮವಾಗಿ ದೊಡ್ಡ ಪ್ರಮಾಣದಲ್ಲಿ ಹಣವನ್ನು ಹೂಡಿಕೆ ಮಾಡಿದ್ದಾರೆ. ಚಿನ್ನದ ಅಕ್ರಮ ಸಕ್ರಮ ಯೋಜನೆಯಿಂದ ಕಾಳಧನವು ಸರಕಾರದ ಲೆಕ್ಕಕ್ಕೆಸಿಗುತ್ತದೆ. ತೆರಿಗೆ ಆದಾಯವೂ ಸರಕಾರಕ್ಕೆ ದೊರೆಯುತ್ತದೆ. 2017ರಲ್ಲಿ ಆದಾಯ ಘೋಷಣೆ ಯೋಜನೆ(ಐಡಿಎಸ್‌)-2 ಅಂದರೆ, ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ ಯೋಜನೆಯನ್ನು (ಪಿಎಂಜಿಕೆವೈ) ಆರಂಭಿಸಲಾಗಿತ್ತು. ನೋಟು ಅಮಾನ್ಯತೆ ಬಳಿಕ ಜಾರಿಯಾದ ಯೋಜನೆಗೆ ಅಷ್ಟೇನೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿರಲಿಲ್ಲ. ಆದಾಗ್ಯೂ, ಇದೇ ಮಾದರಿಯಲ್ಲಿ ಚಿನ್ನದ ಕ್ಷಮಾದಾನ ಯೋಜನೆ ಆರಂಭಿಸಲು ಸರಕಾರ ಸಜ್ಜಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Animals

    ಕೋಲಾರದಲ್ಲಿಆನೆಗಳ ಆರೈಕೆ ಕೇಂದ್ರ ಸ್ಥಾಪನೆ!

    ಕೋಲಾರ: ಕೋಲಾರ ತಾಲೂಕಿನ ಖಾಜಿಕಲ್ಲಹಳ್ಳಿ ಗ್ರಾಮದ ಬಳಿಯ ಮಾಲೂರು ಅರಣ್ಯ ವಲಯದಲ್ಲಿ ಸುಮಾರು 20 ಎಕರೆ ಪ್ರದೇಶದಲ್ಲಿ WRRC (Wildlife Rescue and Rehabilitation Centre) ಅವರು ಆನೆಗಳ ಆರೈಕೆ ಕೇಂದ್ರವನ್ನು ಸ್ಥಾಪನೆ ಮಾಡಿದ್ದಾರೆ. ಈ ಕೇಂದ್ರದಲ್ಲಿ ದುರ್ಗಾ, ಅನೀಶಾ, ಗೌರಿ ಹಾಗೂ ಜಾನುಮಣಿ ಎಂಬ ನಾಲ್ಕು ಹೆಣ್ಣಾನೆಗಳಿವೆ. ಬೆಂಗಳೂರಿನಿಂದ ದುರ್ಗಾ, ತಮಿಳುನಾಡಿನ ತೂತುಕುಡಿಯಿಂದ ಅನಿಶಾ, ನಂಜನಗೂಡಿನಿಂದ ಗೌರಿ ಹಾಗೂ ಗೋವಾದಿಂದ ಜಾನುಮಣಿ ಎಂಬ ಆನೆಗಳನ್ನು ಇಲ್ಲಿಗೆ ತಂದು ಆರೈಕೆ ಮಾಡಲಾಗುತ್ತಿದೆ. ಸದ್ಯ ನಾಲ್ಕು ಆನೆಗಳಿದ್ದು, ಮುಂದಿನ…

  • ಸೌಂದರ್ಯ

    ಕಪ್ಪು ವರ್ತುಲಕ್ಕೆ ಕನ್ನಡಿಯಲ್ಲಿಲ್ಲ ಮದ್ದು..!ಇಲ್ಲಿದೆ ಮನೆ ಮದ್ದು…ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಕಣ್ಣಿನ ಸುತ್ತ ಕಪ್ಪು ವರ್ತುಲ ನಿಜಕ್ಕೂ ಹಲವರ ಪಾಲಿಗೆ ತೀರಾ ಕಿರಿಕಿರಿಯ ಸಮಸ್ಯೆ. ಎಷ್ಟೇ ಮೇಕಪ್ ಮಾಡಿದ್ರೂ ಕಪ್ಪು ಕಲೆಯನ್ನು ಮಾತ್ರ ಹೋಗಲಾಡಿಸೋದು ಕಷ್ಟ. ಏಕೆಂದರೆ ಇದು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆ ಎಂಬುದಕ್ಕಿಂತ ಹೆಚ್ಚಾಗಿ ದೇಹ ನಿಶ್ಶಕ್ತವಾದಾಗ ಮತ್ತು ರಕ್ತಹೀನತೆಯುಂಟಾದಾದಾಗ ಆರಂಭವಾಗುವ ಸಮಸ್ಯೆ. ದೇಹಕ್ಕೆ ಪೌಷ್ಟಿಕಾಂಶಯುಕ್ತ ಆಹಾರದ ಕೊರತೆ ಉಂಟಾದಾಗ ದೇಹಕ್ಕೆ ಮತ್ತಷ್ಟು ಪೋಷಕಾಂಶ ಬೇಕು ಎಂಬ ಸಂದೇಶವನ್ನು ಕಪ್ಪು ವರ್ತುಲ ನೀಡುತ್ತದೆ. ನಿದ್ರಾಹೀನತೆಯಿಂದ ಬಳಲುವವರಲ್ಲೂ ಈ ಸಮಸ್ಯೆ ಕಾಣಬಹುದು. ಈ ಸಮಸ್ಯೆಯ ಪರಿಹಾರಕ್ಕೆ ಈಗಾಗಲೇ ಹಲವು…

  • ಸುದ್ದಿ

    ಮೆಜೆಸ್ಟಿಕ್ ರೈಲ್ವೇ ನಿಲ್ದಾಣದಲ್ಲಿ ಅನುಮಾನಾಸ್ಪದ ವಸ್ತು ಪತ್ತೆಯಾಗಿದೆ,…ಏನೆಂದು ತಿಳಿಯಿರಿ?

    ರಾಜ್ಯ ರಾಜಧಾನಿಯ ಮೆಜೆಸ್ಟಿಕ್ ರೈಲ್ವೇ ನಿಲ್ದಾಣಕ್ಕೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಕರೆ ಬಂದಿದ್ದು, ನಿಲ್ದಾಣದಲ್ಲಿದ್ದ ರೈಲಿನಲ್ಲಿ ಅನುಮಾನಾಸ್ಪದ ಬ್ಯಾಗೊಂದು ಪತ್ತೆಯಾಗಿದೆ.ಇಂದು ಮೆಜೆಸ್ಟಿಕ್ ರೈಲ್ವೇ ನಿಲ್ದಾಣಕ್ಕೆ ದುಷ್ಕರ್ಮಿಗಳು ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆಯನ್ನು ಮಾಡಿದ್ದರು. ಇದೇ ವೇಳೆ ನಿಲ್ದಾಣದಲ್ಲಿದ್ದ ಪಾಟ್ನಾ ಎಕ್ಸ್ ಪ್ರೆಸ್ ರೈಲಿನ ಬೋಗಿಯೊಂದಲ್ಲಿ ಅನುಮಾನಾಸ್ಪದ ಬ್ಯಾಗೊಂದು ಪತ್ತೆಯಾಗಿದೆ. ಈ ವಿಷಯ ತಿಳಿಯುತ್ತಿದ್ದಂತೆ ಪ್ರಯಾಣಿಕರು ಭಯಭೀತರಾಗಿದ್ದು, ಸ್ಥಳಕ್ಕೆ ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸರು ಬಂದು ಬ್ಯಾಗ್ ಪರಿಶೀಲನೆ ಮಾಡಿದ್ದಾರೆ. ಬಾಂಬ್ ಬೆದರಿಕೆ ಕರೆ…

  • ಉಪಯುಕ್ತ ಮಾಹಿತಿ

    ನಿಮ್ಗೆ ಹಾಗೂ ನಿಮ್ಗೆ ಗೊತ್ತಿರುವವರಿಗೆ ಮಧುಮೇಹ ಹಾಗೂ ಮಂಡಿ ನೋವು ಸಮಸ್ಯೆ ಇದ್ರೆ 4 ತಲೆಮಾರಿನ ರಾಮಭಾಣದಂತಹ ಔಷಧಿಗಾಗಿ ಈ ಪುತ್ತೂರು ನಾಟಿ ವೈದ್ಯರನ್ನು ಸಂಪರ್ಕಿಸಿ…

    ನನ್ನ ಹೆಸರು ಮಂಜುನಾಥ್ ನನ್ನ ಮೊಬೈಲ್ ನಂಬರ್ 9740093720,ನಮ್ಮದು ಶಿಡ್ಲಘಟ್ಟ ಬಳಿ ಯಣ್ಣಂಗುರೂ,ವೃತ್ತಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುವುದು,ನಮ್ಮ ತಾಯಿಯವರಿಗೆ ಸುಮಾರು ವರ್ಷಗಳಿಂದ ಮಂಡಿ ನೋವು ಇತ್ತು,ಆರು ತಿಂಗಳ ಹಿಂದೆ ನೋವು ಹೆಚ್ಚಾಗಿ

  • ದೇಶ-ವಿದೇಶ

    ಇವು ಜಿಎಸ್ಟಿ ಅಡಿಯಲ್ಲಿ ಕಡಿಮೆಯಾಗಲಿವೆ.ಏನು ಅಂತ ಗೊತ್ತಾ ನಿಮಗೆ ???

    ಪಶ್ಚಿಮ ಬಂಗಾಳವನ್ನು ಹೊರತುಪಡಿಸಿ ಜುಲೈ 1 ರೊಳಗೆ ಜಿಎಸ್ಟಿ ಹೊರತರಲು  ಕೇಂದ್ರ ಮತ್ತು ರಾಜ್ಯಸರ್ಕಾರಗಳು ನಿರ್ಧರಿಸಿವೆ. ಹಾಗಾದರೆ GST ಎಂದರೇನು?                                                                                  …

  • ಸಿನಿಮಾ

    ಇಲ್ಲಿದೆ ನೋಡಿ ಯಶ್ ರಾಧಿಕಾ ಪಂಡಿತ್ ರವರ ಮುದ್ದು ಮಗಳ ಫೋಟೋ…

    ನಟ ರಾಕಿಂಗ್ ಸ್ಟಾರ್ ಯಶ್ ರವರಿಗೆ ಅವರು ಅಂದುಕೊಂಡಂತೆ ಪತ್ನಿ ರಾಧಿಕಾ ಪಂಡಿತ್ ರವರಿಗೆ ಮುದ್ದಾದ ಹೆಣ್ಣು ಮಗು ಜನಿಸಿದೆ.ತಮ್ಮ ಮುದ್ದಿನ ಮಗಳು ಕೈ ಬೆರಳನ್ನು ಬಿಗಿದಪ್ಪಿದ್ದ ವೇಳೆ ಪುಳಗೊಂಡಿರುವ ನಟ ಯಶ್, ತಮ್ಮ ಮನದಾಳದ ಮಾತನ್ನು ಬಿಚ್ಚಿಟ್ಟಿದ್ದಾರೆ. ತಮ್ಮ ಆಸೆಯಂತೆ ಹೆಣ್ಣು ಮಗುವಿಗೆ ತಂದೆಯಾದ ಯಶ್ ಮಗಳ ಬಗ್ಗೆ, “ನನ್ನ ಬೆರಳುಗಳನ್ನು ಬಿಗಿಹಿಡಿದು ತಂದೆತನದೆಡೆಗೆ ದಾರಿ ತೋರಿಸಿದ ನನ್ನ ದೇವತೆಯ ಪುಟ್ಟಹಸ್ತ! ಯಾರನ್ನಾದರೂ ಕನಿಷ್ಠ ನೋಡದೆಯೇ ಪ್ರೀತಿಸುವುದು ಒಂದು ಅದ್ಭುತ ಭಾವ. ಇನ್ನು ಅವಳನ್ನು ಕಣ್ತುಂಬಿಕೊಂಡ…