ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣಗಳಿಸುವುದಕ್ಕೆ ಶಕ್ತಿಯೊಂದಿದ್ದರೆ ಸಾಕಾಗುವುದಿಲ್ಲ, ಯುಕ್ತಿಯೂ ಇರಬೇಕು. ತಮ್ಮ ಕಠಿಣ ಪರಿಶ್ರಮದೊಂದಿಗೆ ಚಾಣುಕ್ಯ ತನವಿದ್ದರೆ, ಹಣಗಳಿಸುವುದರ ಜೊತೆ ಹೆಸರನ್ನು ಕೂಡ ಸಂಪಾದಿಸಬಹುದು! ಹೀಗೆ ಒಬ್ಬ ವ್ಯಕ್ತಿ ಹಳ್ಳಿಯ ಜನರ ಮನಸ್ಥಿತಿಯನ್ನು ಅರಿತು ಅವರಿಂದ ಹೇಗೆ ಹಣವನ್ನು ಸಂಪಾದಿಸುತ್ತಾನೆ ಎಂಬುದನ್ನು ತಿಳಿದುಕೊಳ್ಳಲು ಮುಂದೇ ಓದಿ.. ಇದನ್ನು ಮೋಸ ಎನ್ನಬೇಕಾ? ಅಥವಾ ಅವನ ಚಾಣಕ್ಷತನ ಎನ್ನಬೇಕಾ? ನೀವೇ ನಿರ್ಧರಿಸಿ !

ಚಿಕ್ಕದೊಂದು ಹಳ್ಳಿ, ಅಲ್ಲಿಯ ಜನತೆಗೆ ಕೃಷಿಯೆ ಬಂಡವಾಳ, ಬಾಳೆ, ತೆಂಗು, ಮಾವು ಸೇರಿದಂತೆ ಅನೇಕ ಬೆಳೆಗಳನ್ನು ಬೆಳೆದು ಜೀವನ ಸಾಗಿಸುತ್ತಿರುತ್ತಾರೆ, ಎಲ್ಲವೂ ಚೆನ್ನಾಗಿ ನಡೆಯುತ್ತಿದೆ ಎಂದು ನೆಮ್ಮದಿಯಿಂದ ಬದುಕುವ ಸಂದರ್ಭದಲ್ಲಿ ಆ ಹಳ್ಳಿಗೆ ಕೋತಿಗಳ ದಂಡೆ ಬಂದು ಸೇರುತ್ತವೆ, ದಿನದಿಂದ ದಿನಕ್ಕೆ ಕೋತಿಗಳ ಹಾವಳಿ ಜಾಸ್ತಿಯಾಗುತ್ತಾ ಹೋಗುತ್ತದೆ, ರೈತರು ಬೆಳೆದಿದ್ದ ಎಳನೀರುಗಳನ್ನು ಕುಡಿದು, ಮಾವು ಮತ್ತು ಬಾಳೆಗಳನ್ನು ಚಪ್ಪರಿಸಿ ತಿನ್ನುತ್ತಾ ರೈತರ ಬೆಳೆಗಳನ್ನು ನಾಶ ಮಾಡುತ್ತಿರುತ್ತವೆ.. ಅಂಜನೇಯ ಎಂದು ಪೂಜಿಸುವ ಮಂಗಗಳು, ಆ ಹಳ್ಳಿಯ ಜನತೆಗೆ ರಾವಣನಂತಾಗಿರುತ್ತವೆ!
ಮಂಗಗಳ ಚೇಷ್ಟೆಗೆ ಹಳ್ಳಿಯ ಜನತೆ ಬೇಸತ್ತಿರುತ್ತಾರೆ, ಈ ವಿಚಾರವನ್ನು ಪೊಲೀಸ್ ಅಧಿಕಾರಿಗಳಿಗೆ ಮತ್ತು ರಾಜಕೀಯ ನಾಯಕರಿಗೆ ದೂರು ನೀಡಿದ್ದರು, ಅವರು ಇದನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ ಮತ್ತು ಅವರ ಸಹಾಯಕ್ಕೆ ಯಾರು ಬರುವುದಿಲ್ಲ. ಹಳ್ಳಿಯ ಮಂದಿ ನಮ್ಮನ್ನು ರಕ್ಷಿಸಲು ಯಾರು ಇಲ್ಲವೇ ಎಂದು ದೇವರ ಬಳಿ ಕೇಳಿಕೊಳ್ಳುವ ಸಂದರ್ಭದಲ್ಲಿ, ನಗರದಿಂದ ಸುಶಿಕ್ಷಿತ ವ್ಯಕ್ತಿಯೊಬ್ಬ ಆ ಹಳ್ಳಿಗೆ ಬಂದು ಸೇರಿಕೊಳ್ಳುತ್ತಾನೆ. ದಿನಗಳುರುಳಿದಂತೆ ಆ ಹಳ್ಳಿಯಲ್ಲಿ ಆಗುತ್ತಿರುವ ಸಮಸ್ಯೆಗಳನ್ನು ತಿಳಿದುಕೊಳ್ಳುತ್ತಾನೆ..

ನಂತರ ಹಳ್ಳಿಯ ಜನರೆನೆಲ್ಲಾ ಪಂಚಾಯಿತಿ ಕಟ್ಟೆ ಸೇರಿಸಿ, ನಿಮ್ಮ ಊರಿನಲ್ಲಿ ಆಗುತ್ತಿರುವ ಸಮಸ್ಯೆಯನ್ನು ತಡೆಯಲು ನನ್ನನ್ನು ಅಧಿಕಾರಿಗಳು ಕಳುಹಿಸಿದ್ದಾರೆ, ಅದುದರಿಂದ ನಾನು ಬಂದಿದ್ದೇನೆ, ನನ್ನೊಟ್ಟಿಗೆ ಯಾರು ಬಂದಿಲ್ಲ, ಒಬ್ಬನೇ ಬಂದಿದ್ದೇನೆ, ನಿಮ್ಮ ಸಮಸ್ಯೆಯನ್ನು ತೀರಿಸುವ ಜೊತೆಗೆ ಒಂದಿಷ್ಟು ಹಣವನ್ನು ಗಳಿಸಿಕೊಳ್ಳಲು ಅವಕಾಶ ಮಾಡಿಕೊಡುತ್ತೇನೆ, ಎಂದು ನಗರದ ಸುಶಿಕ್ಷಿತ ವ್ಯಕ್ತಿ ಹೇಳುತ್ತಾನೆ.. ಇವನ ಮಾತನ್ನು ಕೇಳಿದ ಹಳ್ಳಿಯ ಜನತೆ ಬಹಳ ಖುಷಿಯಾಗುತ್ತಾರೆ !
ನಿಮ್ಮ ಊರಿನಲ್ಲಿ ಕೋತಿಗಳ ದಂಡೆ ಇದೆ, ಆ ಕೋತಿಗಳು ನನಗೆ ಬೇಕು, ಅವುಗಳಿಂದ ನಮಗೆ ಉಪಯೋಗಗಳಿವೆ, ಆದುದರಿಂದ ನಿಮಗೆಲ್ಲರಿಗೂ ಒಂದು ಅವಕಾಶ ಕಲ್ಪಿಸಿಕೊಡುತ್ತೇನೆ, ನೀವೆಲ್ಲಾ ಒಟ್ಟುಗೂಡಿ ಕೋತಿಗಳನ್ನು ಹಿಡಿದುಕೊಂಡು ನನಗೆ ತಂದು ಕೊಡಿ, ಒಂದು ಕೋತಿಗೆ 20 ರೂಪಾಯಿಯಂತೆ ನಿಮಗೆ ಪಾವತಿಸುತ್ತೇನೆ ಎಂದು ಹೇಳುತ್ತಾನೆ. ಈ ಮಾತನ್ನು ಕೇಳಿದ ಹಳ್ಳಿಯವರು, ಆಶ್ಚರ್ಯ ಮತ್ತು ಖುಷಿಯಿಂದ ಕೋತಿಗಳನ್ನು ಹಿಡಿಯಲು ಮುಂದಾಗುತ್ತಾರೆ..

ಅಂತೆಯೇ ಹಗಲು ರಾತ್ರಿಯೆಂದು ಲೆಕ್ಕಿಸಿದೇ, ಗೌಪ್ಯವಾಗಿ ಕಾಯುತ್ತಾ, ಹೊಲದಲ್ಲೆಲ್ಲಾ ಒದ್ದಾಡಿ ಸಾಕಷ್ಟು ಕೋತಿಗಳನ್ನು ಹಿಡಿದು ಆತನಿಗೆ ತಂದು ಕೊಟ್ಟು, ಅವನ ಮಾತಿನಂತೆ ತಲಾ ಒಂದು ಕೋತಿಗೆ 20ರೂ ಅಂತೆ ಪಡೆದುಕೋಳ್ಳುತ್ತಾರೆ, ಹಳ್ಳಿಯಲ್ಲಿ ಶೇಕಡ 70 ಭಾಗದಷ್ಟು ಕೋತಿಗಳನ್ನು ಸೆರೆಹಿಡಿಯಲಾಗಿರುತ್ತದೆ, ಇನ್ನುಳಿದ ಕೋತಿಗಳು ಸ್ವಲ್ಪ ಬುದ್ದಿವಂತ ಕೋತಿಗಳು, ಯಾರ ಕೈಗೂ ಸಿಗುತ್ತಿರಲಿಲ್ಲ.. ಮತ್ತೇ ಆ ವ್ಯಕ್ತಿ ಪಂಚಾಯಿತಿ ಸೇರಿಸಿ, ನೋಡಿ ಇನ್ನು ಸ್ವಲ್ಪ ಕೋತಿಗಳಿರುವುದನ್ನು ನಾನು ನೋಡಿದ್ದೇನೆ, ಅವುಗಳನ್ನು ಹಿಡಿದು ಕೊಟ್ಟರೆ, ಒಂದು ಕೋತಿಗೆ ತಲಾ 40 ರೂಪಾಯಿ ನೀಡುತ್ತಾನೆ ಎಂದು ಹೇಳುತ್ತಾನೆ !
ಹಳ್ಳಿಯ ಮಂದಿ ಅವನ ಮಾತನ್ನು ಕೇಳಿ ಸಂತಸದ ತುತ್ತ ತುದಿಗೇರುತ್ತಾರೆ, ಅವನ ಮಾತಿನಂತೆ ಕಠಿಣ ಪರಿಶ್ರಮ ವಹಿಸಿ ಮೂರ್ನಾಲ್ಕು ದಿನಗಳು ಕಾಯ್ದು, ಇನ್ನೊದಷ್ಟು ಕೋತಿಗಳನ್ನು ಹಿಡಿದು ತಂದು ತಲಾ 40 ರೂಪಾಯಿನಂತೆ ಒಂದೊಂದು ಕೋತಿಗಳಿಗೆ ಪಡಿದುಕೊಳ್ಳುತ್ತಾರೆ, ಅಲ್ಲಿಗೆ ಶೇಕಡ 90 ಭಾಗದಷ್ಟು ಕೋತಿಗಳನ್ನು ಸೆರೆಹಿಡಿಯಲಾಗಿತ್ತು.. ಇನ್ನು ನಾಲ್ಕು ಕೋತಿಗಳನ್ನು ಹಿಡಿಯಲು ಎಷ್ಟೆ ಪ್ರಯ್ನಿಸಿದರು ಸಾಧ್ಯವಾಗುತ್ತಿರಲಿಲ್ಲ, ಆಗ ಮತ್ತೆ ಆವ್ಯಕ್ತಿ ಈ ನಾಲ್ಕು ಕೋತಿಗಳನ್ನು ಹಿಡಿದು ತಂದವರಿಗೆ ಒಂದು ಕೋತಿಗೆ 80 ರೂಪಾಯಿನಂತೆ ನೀಡುತ್ತೇನೆ ಎಂಬ ದೊಡ್ಡ ಆಫರ್ ನೀಡುತ್ತಾನೆ.. !

ಈ ಭಾರಿ ಹಳ್ಳಿಯ ಜನರು ಶಕ್ತಿಯ ಜೊತೆ ತಮ್ಮ ಯುಕ್ತಿಯನ್ನು ಸಹ ಉಪಯೋಗಿಸಿ, ಬಲೆಗಳ ಮೂಖಾಂತರ ನಾಲ್ಕು ಕೋತಿಗಳನ್ನು ಹಿಡಿದು ಆತನಿಗೆ ಕೊಟ್ಟು ತಮ್ಮ ಹಣವನ್ನು ಪಡೆದುಕೊಂಡು ಸಂಭ್ರಮಿಸುತ್ತಾರೆ.. ನಂತರ ಹಳ್ಳಿಯ ಜನರು, ನಮ್ಮ ಊರಿಗೆ ದೇವರಂತೆ ಬಂದ್ರಿ, ಕೋತಿಗಳ ಹಾವಳಿಯಿಂದ ಬೇಸತ್ತಿದ್ದೆವು, ಅವುಗಳ್ಳನ್ನು ನಮ್ಮ ಕೈಯಿಂದನೆ ಹಿಡಿಸಿ, ಅವುಗಳನ್ನು ನೀವು ಕೊಂಡು, ನಮ್ಮ ಸಮಸ್ಯೆಯನ್ನು ತೀರಿಸುವ ಜೊತೆಗೆ ಹಣವನ್ನು ಕೂಡ ಕೊಟ್ರಿ, ಧನ್ಯವಾದಗಳು.. ಎಂದು ಹೃದಯ ಪೂರ್ವಕವಾಗಿ ಹೇಳುತ್ತಾರೆ !
ಈ ಮಾತುಗಳಿಗೆ ಉತ್ತರಿಸಿದ ಆ ಸುಶಿಕ್ಷಿತ ವ್ಯಕ್ತಿ, ನಿಮ್ಮ ಸಮಸ್ಯೆಗಳು ಇಲ್ಲಿಗೆ ತೀರಿತು, ಇನ್ನು 15 ದಿನಗಳನ್ನು ಬಿಟ್ಟು ಮತ್ತೆ ಬರುತ್ತೇನೆ, ಆಗ ನಿಮ್ಮ ಊರಿನಲ್ಲಿ ಕೋತಿಗಳೇನಾದರು ನಿಮಗೆ ಕಂಡು ಬಂದು ಅವುಗಳನ್ನು ನೀವು ಹಿಡಿದು ಇಟ್ಟುಕೊಂಡಿದ್ದರೆ, ಅವುಗಳನ್ನು ನನಗೆ ಕೊಡಿ, ಆಗ ನಾನು ಒಂದು ಕೋತಿಗೆ ಸಾವಿರ ರೂ ನೀಡುತ್ತೇನೆ, ಎಂದು ಹೇಳಿ ಹೊರಟು ಹೋಗುತ್ತಾನೆ.. ನಂತರ 10 ದಿನಗಳ ಕಾಲ ಹಳ್ಳಿಯ ಜನರು ಕೋತಿಗಳನ್ನು ಹಡುಕುತ್ತಲೇ ಇರುತ್ತಾರೆ, ಆದರೆ ಒಂದು ಸಿಕ್ಕುವುದಿಲ್ಲ..

ನಂತರ ಆ ವ್ಯಕ್ತಿ ತನ್ನ ಹುಡುಗನನ್ನು ಕರೆದು, ನೋಡು ಎರಡು ಕೋತಿ ಕೊಡುತ್ತೇನೆ, ಆ ಕೋತಿಯನ್ನು ತೆಗೆದುಕೊಂಡು ನಾನು ಹೇಳುವ ಹಳ್ಳಿಗೆ ಹೋಗಿ ಒಂದು ಕೋತಿಗೆ ತಲಾ 200 ರೂಪಾಯಿ ನಂತೆ ಮಾರಿ ಬಾ, ಅವರು ತೆಗೆದುಕೊಂಡೆ ಕೊಳ್ಳುತ್ತಾರೆ ಎಂದು ಹೇಳುತ್ತಾನೆ, ತನ್ನ ಯಜಮಾನನ ಮಾತಿನಂತೆ ಆ ಹುಡುಗ ಆ ಹಳ್ಳಿಗೆ ಮಂಗಗಳನ್ನು ತೆಗೆದುಕೊಂಡು ಹೋಗುತ್ತಾನೆ, ನಂತರ ವಿಪರ್ಯಾಸವೇನೆಂದರೆ ಆ ವ್ಯಕ್ತಿಯ ಮಾತಿನಂತೆ ಹಳ್ಳಿಯನೊಬ್ಬ ಎರಡು ಕೋತಿಗಳನ್ನು ತೆಗೆದುಕೊಳ್ಳುತ್ತಾನೆ, ನಂತರ ಎರಡನೇ ದಿನ ಹಳ್ಳಿಯ ಜನರ ಹತ್ತಿರ ಹಿಡಿಸಿ ತಂದಿದ್ದ ಎಲ್ಲಾ ಮಂಗಗಳನ್ನು ತಲಾ 200 ರೂಪಾಯಿ ನಂತೆ ಆ ಹುಡುಗ ಅವರಿಗೆ ಮಾರಿ ಬಿಡುತ್ತಾನೆ..!
ಆ ಸುಶಿಕ್ಷಿತ ವ್ಯಕ್ತಿ 20,40,80 ರೂಪಾಯಿ ಕೊಟ್ಟು ಖರೀದಿಸಿದ ಕೋತಿಗಳನ್ನು ಅದೇ ಊರಿನವರಿಗೆ 200 ರೂಪಾಯಿಯಂತೆ ಮಾರಿ, ಸಿಕ್ಕಾಪಟ್ಟೆ ಹಣ ಸಂಪಾದಿಸತ್ತಾನೆ. ಇತ್ತ ಹಳ್ಳಿಯವರು ಕೊಂಡು ಕೊಂಡ ಮಂಗಗಳನ್ನು ಮನೆಯಲ್ಲೇ ಸಾಕುತ್ತಾ ಈ ವ್ಯಕ್ತಿಗಾಗಿ ಎದುರು ನೋಡುತ್ತಿರುತ್ತಾರೆ.. ಹಿರಿಯರ ಮಾತಿನಂತೆ ಕೊಟ್ಟೋನು ಕೋಡಂಗಿ ಇಸ್ಕೊಂಡೋನು ವೀರಭದ್ರ ಎಂಬಂತೆ ಆ ಕೋಡಂಗಿಗಳಿಂದಲೆ ಹಳ್ಳಿಯ ಅಸಾಧರಣ ಮನಸನ್ನು ಉಪೋಯೋಗಿಸಿಕೊಂಡು ಅವನು ವೀರಭದ್ರನಾಗುತ್ತಾನೆ (ಶ್ರೀಮಂತನಾಗುತ್ತಾನೆ).

ಅದಕ್ಕೇ ಹೇಳುವುದು ನಮ್ಮ ಕೆಲಸವನ್ನು ನಾವೇ ಮಾಡಿಕೊಳ್ಳಬೇಕು, ಸುಮ್ಮನೇ ಆ ಕೋತಿಗಳಿಗೆ ಭಯ ಪಡಿಸಿ ಓಡಿಸಿಯೋ ಅಥವಾ ತಾವೇ ಹಿಡಿದು ಬೇರೆ ಎಲ್ಲಾದರು ಬಿಟ್ಟು ಬಂದ್ದಿದ್ದರೋ ಅವರ ಸಮಸ್ಯೆ ತೀರುವುದರ ಜೊತೆಗೆ ಹಣವೂ ಸಹ ಉಳಿಯುತ್ತಿತ್ತು, ಈಗ ಕಾಸು ಹಾಳು ತಲೆಯೂ ಬೋಳು ಎಂಬಂತೆ, ತಮಗೆ ಸಮಸ್ಯೆಯಾಗಿದ್ದ ಕೋತಿಗಳನ್ನು ತಾವೇ ಸಾಕುತ್ತಾ, ಹಣವನ್ನು ಕಳೆದುಕೊಂಡು, ಆ ವ್ಯಕ್ತಿಯಿಂದ ಒಳ್ಳೆಯ ಪಾಠ ಕಲ್ಲಿತಿದ್ದಾರೆ.. ಹೀಗೆ ನಮ್ಮ ಜೀವನದಲ್ಲಿ ಕೋತಿಗಳಂತೆ ಅದೇಷ್ಟೋ ಜನರು ಬಂದು ನಮ್ಮನ್ನು ಕೆಣಕುತ್ತಾರೆ, ಆಗ ನಾವು ಯಾರ ಸಹಾಯವಿಲ್ಲದೇ ಅವರನ್ನು ಹೆದರಿಸಿ ನಿಲ್ಲಬೇಕು.. ಇಲ್ಲವಾದಲ್ಲಿ ಈ ಹಳ್ಳಿಯವರಿಗಾದಂತೆ ನಮಗೂ ಆಗುತ್ತದೆ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರಿನ ಜನರಿಗೆ ದಿನದಿಂದ ದಿನಕ್ಕೆ ಆಪ್ತವಾಗುತ್ತಿರುವ ನಮ್ಮ ಮೆಟ್ರೋ ಇನ್ನು ಮುಂದೆ ಇನ್ನಷ್ಟು ಹತ್ತಿರವಾಗಲಿದೆ. ಡಿಸೆಂಬರ್ ವೇಳೆಗೆ ನಮ್ಮ ಮೆಟ್ರೋದಲ್ಲಿ ಮಹಿಳಾ ಬೋಗಿ ಸಹ ಆರಂಭವಾಗಲಿದೆ.
ಹೌದು ಹುಟ್ಟಿದ ಮಕ್ಕಳಿಗೆ ಒಂದು ತಿಂಗಳಿನಿಂದ ವಿಳ್ಯೆದೆಲೆಯನ್ನು ಹೊಟ್ಟೆಗೆ ಅಂಟಿಸುತ್ತಾರೆ.. ಇದನ್ನು ಸಾಮಾನ್ಯವಾಗಿ 1 ವರ್ಷದವರೆಗೂ ಮುಂದುವರೆಸುತ್ತಾರೆ.. ಇದಕ್ಕೆ ಕಾರಣ ಮತ್ತು ಉಪಯೋಗ ಇಲ್ಲಿದೆ ನೋಡಿ.. ಹುಟ್ಟಿದ ಮಕ್ಕಳು ಸೂಕ್ಷ್ಮವಾಗಿರುತ್ತವೆ.. ಜೊತೆಗೆ ಗರ್ಭದಿಂದ ಹೊರ ಬಂದು ವಾತಾವರಣಕ್ಕೆ ಹೊಂದಿಕೊಳ್ಳಬೇಕು.. ಪುಟ್ಟ ಮಕ್ಕಳಿಗೆ ಆರೋಗ್ಯ ಕೆಟ್ಟರೆ ಚೇತರಿಸಿಕೊಳ್ಳುವುದು ಬಲು ಕಷ್ಟ.. ಅದಕ್ಕಾಗಿಯೇ ಮಕ್ಕಳ ಆರೋಗ್ಯ ಕೆಡದೇ ಇರುವ ರೀತಿಯಲ್ಲಿ ನೋಡಿಕೊಳ್ಳಬೇಕು. ಸಾಮಾನ್ಯವಾಗಿ ಅಜೀರ್ಣದ ಸಮಸ್ಯೆ ಮಕ್ಕಳಲ್ಲಿ ಬೇಗ ಕಾಣಿಸಿಕೊಳ್ಳುತ್ತವೆ. ಮಲ ಮೂತ್ರ ವಿಸರ್ಜಿಸಲು ತುಂಬಾ ಕಷ್ಟ ಪಡುತ್ತವೆ.. ಇದಕ್ಕಾಗಿಯೇ…
ಪುಲ್ವಾಮ ಉಗ್ರರ ದಾಳಿಯಲ್ಲಿ 40 ಸೈನಿಕರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ , ಹುತಾತ್ಮ ಯೋಧನ ತಂದೆಯ ಮಾತುಗಳು ಎಲ್ಲರ ಹೃದಯ ಸ್ಪರ್ಶಿಸುತ್ತಿವೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದಲ್ಲಿ ಉಗ್ರರ ಆತ್ಮಾಹುತಿ ದಾಳಿಗೆ ಹುತಾತ್ಮರಾದ ಯೋಧರೊಬ್ಬರ ತಂದೆ ಮಗನ ಸಾವಿನ ನೋವಿನಲ್ಲೂ ದೇಶದ ಮೇಲೆ ತಮಗಿರುವ ಪ್ರೀತಿಯನ್ನು ತೋರಿಸಿದ್ದಾರೆ. ಗುರುವಾರ ಸಂಜೆ ಸಿಆರ್ಪಿಎಫ್ ಯೋಧ ರತನ್ ಠಾಕೂರ್ ಜೈಶ್-ಇ-ಮೊಹಮ್ಮದ್ ಉಗ್ರರು ನಡೆಸಿದ ಆತ್ಮಾಹುತಿ ದಾಳಿಯಿಂದ ಹುತಾತ್ಮರಾಗಿದ್ದಾರೆ. ರಜೆ ಮುಗಿಸಿ ಮತ್ತೆ ಕರ್ತವ್ಯಕ್ಕೆ ಮರಳುತ್ತಿದ್ದ ಯೋಧನ ಅಂತ್ಯ…
ಇತ್ತೀಚಿನ ದಿನಗಳಲ್ಲಿ ಗೋವುಗಳನ್ನು ಸಾಕುವ ಜಮಾನ ಕಡಿಮೆಯಾಗುತ್ತಾ ಬರುತ್ತಿದೆ. ಹೀಗಾಗಿ ಕೃಷಿಗೆ ಬೇಕಾದ ಗೊಬ್ಬರಕ್ಕಾಗಿ ಜನ ಅಲೆದಾಡುತ್ತಾರೆ. ಸಗಣಿಯನ್ನು ರಸಗೊಬ್ಬರವಾಗಿ ಕೃಷಿಗಳಿಗೆ ಬಳಸುವುದರಿಂದ ಸದ್ಯ ಇದಕ್ಕೆ ಬೇಡಿಕೆ ಇದೆ. ಇದರಂತೆಯೇ ಇದೀಗ ನಾಯಿಗಳ ಮಲಕ್ಕೂ ಬೇಡಿಕೆಯಿದೆ. ಹೌದು. ಪಿಲಿಫೈನ್ಸ್ ಶಾಲೆಯೊಂದರ ವಿದ್ಯಾರ್ಥಿಗಳು ಹೊಸ ಆವಿಷ್ಕಾರವೊಂದನ್ನು ಮಾಡಿದ್ದು, ಅದರಲ್ಲಿ ನಾಯಿಗಳ ಮಲದಿಂದಲೂ ಉಪಯೋಗವಿದೆ ಎಂಬುದನ್ನು ಸಾಬೀತುಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ನಾಯಿಗಳ ಮಲಕ್ಕೂ ಹೆಚ್ಚಿನ ಬೇಡಿಕೆ ಬರಬಹುದಾದ ಸಾಧ್ಯತೆಗಳಿವೆ. ಸಿಮೆಂಟ್ ನೊಂದಿಗೆ ನಾಯಿ ಮಲವನ್ನು ಮಿಕ್ಸ್ ಮಾಡಿ ಇಟ್ಟಿಗೆ…
ನವದೆಹಲಿ, ಅಕ್ಟೋಬರ್ 04:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 2.0 ಸರ್ಕಾರದ ಮೊದಲ ಬಜೆಟ್ ನಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ7ನೇ ವೇತನ ಆಯೋಗದ ಶಿಫಾರಸ್ಸಿನಂತೆ ತುಟ್ಟಿಭತ್ಯೆ ಹೆಚ್ಚಳವಾಗಲಿದೆ. ಶೇ 05ರಷ್ಟು ತುಟ್ಟಿಭತ್ಯೆ ಹೆಚ್ಚಳಖಾತ್ರಿಯಾಗಿದೆ. ಇದರ ಜೊತೆಗೆ 7ನೇ ವೇತನಾ ಆಯೋಗದ ಅನ್ವಯ ಕೇಂದ್ರ ಸರ್ಕಾರ ಸ್ವಾಮ್ಯದ ಆರೋಗ್ಯ ಸಂಸ್ಥೆಗಳನೌಕರರಿಗೆ ಸಂಬಳ ಏರಿಕೆ, ಬಾಕಿ ಮೊತ್ತ(Arrears) ಕೂಡಾ ಲಭಿಸುತ್ತಿದೆ. ಆದರೆ, ಸರ್ಕಾರಿ ನೌಕರರ ಬೇಡಿಕೆಗಳುಇನ್ನು ಕಡಿಮೆಯಾಗಿಲ್ಲ. ಪ್ರಮುಖ ಬೇಡಿಕೆಗಳು ಈಡೇರಿಲ್ಲ. ಬೇಡಿಕೆಗೆ ಅನುಸಾರವಾಗಿ ಮೂಲ ವೇತನವನ್ನುಏರಿಕೆ ಮಾಡುವುದು ಹಾಗೂ ಫಿಟ್ಮೆಂಟ್…
ವಯಸ್ಸಿಗೂ ಬುದ್ದಿವನ್ತಿಕೆಗೂ ಏನೂ ಸಂಭಂದವಿಲ್ಲ ಅಂತಾರೆ. ಇಂತಹವರನ್ನೂ ನೋಡಿಯೇ ಇಂತಹ ಮಾತು ಹೇಳಿದ್ದಾರೆ ಅನಿಸುತ್ತದೆ. ಏಕೆಂದರೆ, ನೀವು ಶಾಕ್ ಆಗ್ತೀರ, ಇನ್ನೂ ಹತ್ತನೇ ತರಗತಿ ಓದುತ್ತಿರುವ ಹರ್ಷವರ್ಧನ್ ಜಾಲಾ ಏರೋಬಾಟಿಕ್ಸ್ 7 ಟೆಕ್ ಸೊಲ್ಯೂಷನ್ಸ್ ಎಂಬ ಸಂಸ್ಥೆಯ ವ್ಯವಸ್ಥಾಪಕ, ಸಿಇಓ.