News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ, ನೀತಿ ಕಥೆ

ಕೋತಿಯಿಂದ ಶ್ರೀಮಂತನಾದ. ನಿಜಕ್ಕೂ ರೋಚಕ ಕಥೆ.!

152

ಹಣಗಳಿಸುವುದಕ್ಕೆ ಶಕ್ತಿಯೊಂದಿದ್ದರೆ ಸಾಕಾಗುವುದಿಲ್ಲ, ಯುಕ್ತಿಯೂ ಇರಬೇಕು. ತಮ್ಮ ಕಠಿಣ ಪರಿಶ್ರಮದೊಂದಿಗೆ ಚಾಣುಕ್ಯ ತನವಿದ್ದರೆ, ಹಣಗಳಿಸುವುದರ ಜೊತೆ ಹೆಸರನ್ನು ಕೂಡ ಸಂಪಾದಿಸಬಹುದು! ಹೀಗೆ ಒಬ್ಬ ವ್ಯಕ್ತಿ ಹಳ್ಳಿಯ ಜನರ ಮನಸ್ಥಿತಿಯನ್ನು ಅರಿತು ಅವರಿಂದ ಹೇಗೆ ಹಣವನ್ನು ಸಂಪಾದಿಸುತ್ತಾನೆ ಎಂಬುದನ್ನು ತಿಳಿದುಕೊಳ್ಳಲು ಮುಂದೇ ಓದಿ.. ಇದನ್ನು ಮೋಸ ಎನ್ನಬೇಕಾ? ಅಥವಾ ಅವನ ಚಾಣಕ್ಷತನ ಎನ್ನಬೇಕಾ? ನೀವೇ ನಿರ್ಧರಿಸಿ !

ಚಿಕ್ಕದೊಂದು ಹಳ್ಳಿ, ಅಲ್ಲಿಯ ಜನತೆಗೆ ಕೃಷಿಯೆ ಬಂಡವಾಳ, ಬಾಳೆ, ತೆಂಗು, ಮಾವು ಸೇರಿದಂತೆ ಅನೇಕ ಬೆಳೆಗಳನ್ನು ಬೆಳೆದು ಜೀವನ ಸಾಗಿಸುತ್ತಿರುತ್ತಾರೆ, ಎಲ್ಲವೂ ಚೆನ್ನಾಗಿ ನಡೆಯುತ್ತಿದೆ ಎಂದು ನೆಮ್ಮದಿಯಿಂದ ಬದುಕುವ ಸಂದರ್ಭದಲ್ಲಿ ಆ ಹಳ್ಳಿಗೆ ಕೋತಿಗಳ ದಂಡೆ ಬಂದು ಸೇರುತ್ತವೆ, ದಿನದಿಂದ ದಿನಕ್ಕೆ ಕೋತಿಗಳ ಹಾವಳಿ ಜಾಸ್ತಿಯಾಗುತ್ತಾ ಹೋಗುತ್ತದೆ, ರೈತರು ಬೆಳೆದಿದ್ದ ಎಳನೀರುಗಳನ್ನು ಕುಡಿದು, ಮಾವು ಮತ್ತು ಬಾಳೆಗಳನ್ನು ಚಪ್ಪರಿಸಿ ತಿನ್ನುತ್ತಾ ರೈತರ ಬೆಳೆಗಳನ್ನು ನಾಶ ಮಾಡುತ್ತಿರುತ್ತವೆ.. ಅಂಜನೇಯ ಎಂದು ಪೂಜಿಸುವ ಮಂಗಗಳು, ಆ ಹಳ್ಳಿಯ ಜನತೆಗೆ ರಾವಣನಂತಾಗಿರುತ್ತವೆ!

ಮಂಗಗಳ ಚೇಷ್ಟೆಗೆ ಹಳ್ಳಿಯ ಜನತೆ ಬೇಸತ್ತಿರುತ್ತಾರೆ, ಈ ವಿಚಾರವನ್ನು ಪೊಲೀಸ್ ಅಧಿಕಾರಿಗಳಿಗೆ ಮತ್ತು ರಾಜಕೀಯ ನಾಯಕರಿಗೆ ದೂರು ನೀಡಿದ್ದರು, ಅವರು ಇದನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ ಮತ್ತು ಅವರ ಸಹಾಯಕ್ಕೆ ಯಾರು ಬರುವುದಿಲ್ಲ. ಹಳ್ಳಿಯ ಮಂದಿ ನಮ್ಮನ್ನು ರಕ್ಷಿಸಲು ಯಾರು ಇಲ್ಲವೇ ಎಂದು ದೇವರ ಬಳಿ ಕೇಳಿಕೊಳ್ಳುವ ಸಂದರ್ಭದಲ್ಲಿ, ನಗರದಿಂದ ಸುಶಿಕ್ಷಿತ ವ್ಯಕ್ತಿಯೊಬ್ಬ ಆ ಹಳ್ಳಿಗೆ ಬಂದು ಸೇರಿಕೊಳ್ಳುತ್ತಾನೆ. ದಿನಗಳುರುಳಿದಂತೆ ಆ ಹಳ್ಳಿಯಲ್ಲಿ ಆಗುತ್ತಿರುವ ಸಮಸ್ಯೆಗಳನ್ನು ತಿಳಿದುಕೊಳ್ಳುತ್ತಾನೆ..

ನಂತರ ಹಳ್ಳಿಯ ಜನರೆನೆಲ್ಲಾ ಪಂಚಾಯಿತಿ ಕಟ್ಟೆ ಸೇರಿಸಿ, ನಿಮ್ಮ ಊರಿನಲ್ಲಿ ಆಗುತ್ತಿರುವ ಸಮಸ್ಯೆಯನ್ನು ತಡೆಯಲು ನನ್ನನ್ನು ಅಧಿಕಾರಿಗಳು ಕಳುಹಿಸಿದ್ದಾರೆ, ಅದುದರಿಂದ ನಾನು ಬಂದಿದ್ದೇನೆ, ನನ್ನೊಟ್ಟಿಗೆ ಯಾರು ಬಂದಿಲ್ಲ, ಒಬ್ಬನೇ ಬಂದಿದ್ದೇನೆ, ನಿಮ್ಮ ಸಮಸ್ಯೆಯನ್ನು ತೀರಿಸುವ ಜೊತೆಗೆ ಒಂದಿಷ್ಟು ಹಣವನ್ನು ಗಳಿಸಿಕೊಳ್ಳಲು ಅವಕಾಶ ಮಾಡಿಕೊಡುತ್ತೇನೆ, ಎಂದು ನಗರದ ಸುಶಿಕ್ಷಿತ ವ್ಯಕ್ತಿ ಹೇಳುತ್ತಾನೆ.. ಇವನ ಮಾತನ್ನು ಕೇಳಿದ ಹಳ್ಳಿಯ ಜನತೆ ಬಹಳ ಖುಷಿಯಾಗುತ್ತಾರೆ !

ನಿಮ್ಮ ಊರಿನಲ್ಲಿ ಕೋತಿಗಳ ದಂಡೆ ಇದೆ, ಆ ಕೋತಿಗಳು ನನಗೆ ಬೇಕು, ಅವುಗಳಿಂದ ನಮಗೆ ಉಪಯೋಗಗಳಿವೆ, ಆದುದರಿಂದ ನಿಮಗೆಲ್ಲರಿಗೂ ಒಂದು ಅವಕಾಶ ಕಲ್ಪಿಸಿಕೊಡುತ್ತೇನೆ, ನೀವೆಲ್ಲಾ ಒಟ್ಟುಗೂಡಿ ಕೋತಿಗಳನ್ನು ಹಿಡಿದುಕೊಂಡು ನನಗೆ ತಂದು ಕೊಡಿ, ಒಂದು ಕೋತಿಗೆ 20 ರೂಪಾಯಿಯಂತೆ ನಿಮಗೆ ಪಾವತಿಸುತ್ತೇನೆ ಎಂದು ಹೇಳುತ್ತಾನೆ. ಈ ಮಾತನ್ನು ಕೇಳಿದ ಹಳ್ಳಿಯವರು, ಆಶ್ಚರ್ಯ ಮತ್ತು ಖುಷಿಯಿಂದ ಕೋತಿಗಳನ್ನು ಹಿಡಿಯಲು ಮುಂದಾಗುತ್ತಾರೆ..

ಅಂತೆಯೇ ಹಗಲು ರಾತ್ರಿಯೆಂದು ಲೆಕ್ಕಿಸಿದೇ, ಗೌಪ್ಯವಾಗಿ ಕಾಯುತ್ತಾ, ಹೊಲದಲ್ಲೆಲ್ಲಾ ಒದ್ದಾಡಿ ಸಾಕಷ್ಟು ಕೋತಿಗಳನ್ನು ಹಿಡಿದು ಆತನಿಗೆ ತಂದು ಕೊಟ್ಟು, ಅವನ ಮಾತಿನಂತೆ ತಲಾ ಒಂದು ಕೋತಿಗೆ 20ರೂ ಅಂತೆ ಪಡೆದುಕೋಳ್ಳುತ್ತಾರೆ, ಹಳ್ಳಿಯಲ್ಲಿ ಶೇಕಡ 70 ಭಾಗದಷ್ಟು ಕೋತಿಗಳನ್ನು ಸೆರೆಹಿಡಿಯಲಾಗಿರುತ್ತದೆ, ಇನ್ನುಳಿದ ಕೋತಿಗಳು ಸ್ವಲ್ಪ ಬುದ್ದಿವಂತ ಕೋತಿಗಳು, ಯಾರ ಕೈಗೂ ಸಿಗುತ್ತಿರಲಿಲ್ಲ.. ಮತ್ತೇ ಆ ವ್ಯಕ್ತಿ ಪಂಚಾಯಿತಿ ಸೇರಿಸಿ, ನೋಡಿ ಇನ್ನು ಸ್ವಲ್ಪ ಕೋತಿಗಳಿರುವುದನ್ನು ನಾನು ನೋಡಿದ್ದೇನೆ, ಅವುಗಳನ್ನು ಹಿಡಿದು ಕೊಟ್ಟರೆ, ಒಂದು ಕೋತಿಗೆ ತಲಾ 40 ರೂಪಾಯಿ ನೀಡುತ್ತಾನೆ ಎಂದು ಹೇಳುತ್ತಾನೆ !

ಹಳ್ಳಿಯ ಮಂದಿ ಅವನ ಮಾತನ್ನು ಕೇಳಿ ಸಂತಸದ ತುತ್ತ ತುದಿಗೇರುತ್ತಾರೆ, ಅವನ ಮಾತಿನಂತೆ ಕಠಿಣ ಪರಿಶ್ರಮ ವಹಿಸಿ ಮೂರ್ನಾಲ್ಕು ದಿನಗಳು ಕಾಯ್ದು, ಇನ್ನೊದಷ್ಟು ಕೋತಿಗಳನ್ನು ಹಿಡಿದು ತಂದು ತಲಾ 40 ರೂಪಾಯಿನಂತೆ ಒಂದೊಂದು ಕೋತಿಗಳಿಗೆ ಪಡಿದುಕೊಳ್ಳುತ್ತಾರೆ, ಅಲ್ಲಿಗೆ ಶೇಕಡ 90 ಭಾಗದಷ್ಟು ಕೋತಿಗಳನ್ನು ಸೆರೆಹಿಡಿಯಲಾಗಿತ್ತು.. ಇನ್ನು ನಾಲ್ಕು ಕೋತಿಗಳನ್ನು ಹಿಡಿಯಲು ಎಷ್ಟೆ ಪ್ರಯ್ನಿಸಿದರು ಸಾಧ್ಯವಾಗುತ್ತಿರಲಿಲ್ಲ, ಆಗ ಮತ್ತೆ ಆವ್ಯಕ್ತಿ ಈ ನಾಲ್ಕು ಕೋತಿಗಳನ್ನು ಹಿಡಿದು ತಂದವರಿಗೆ ಒಂದು ಕೋತಿಗೆ 80 ರೂಪಾಯಿನಂತೆ ನೀಡುತ್ತೇನೆ ಎಂಬ ದೊಡ್ಡ ಆಫರ್ ನೀಡುತ್ತಾನೆ.. !

ಈ ಭಾರಿ ಹಳ್ಳಿಯ ಜನರು ಶಕ್ತಿಯ ಜೊತೆ ತಮ್ಮ ಯುಕ್ತಿಯನ್ನು ಸಹ ಉಪಯೋಗಿಸಿ, ಬಲೆಗಳ ಮೂಖಾಂತರ ನಾಲ್ಕು ಕೋತಿಗಳನ್ನು ಹಿಡಿದು ಆತನಿಗೆ ಕೊಟ್ಟು ತಮ್ಮ ಹಣವನ್ನು ಪಡೆದುಕೊಂಡು ಸಂಭ್ರಮಿಸುತ್ತಾರೆ.. ನಂತರ ಹಳ್ಳಿಯ ಜನರು, ನಮ್ಮ ಊರಿಗೆ ದೇವರಂತೆ ಬಂದ್ರಿ, ಕೋತಿಗಳ ಹಾವಳಿಯಿಂದ ಬೇಸತ್ತಿದ್ದೆವು, ಅವುಗಳ್ಳನ್ನು ನಮ್ಮ ಕೈಯಿಂದನೆ ಹಿಡಿಸಿ, ಅವುಗಳನ್ನು ನೀವು ಕೊಂಡು, ನಮ್ಮ ಸಮಸ್ಯೆಯನ್ನು ತೀರಿಸುವ ಜೊತೆಗೆ ಹಣವನ್ನು ಕೂಡ ಕೊಟ್ರಿ, ಧನ್ಯವಾದಗಳು.. ಎಂದು ಹೃದಯ ಪೂರ್ವಕವಾಗಿ ಹೇಳುತ್ತಾರೆ !

ಈ ಮಾತುಗಳಿಗೆ ಉತ್ತರಿಸಿದ ಆ ಸುಶಿಕ್ಷಿತ ವ್ಯಕ್ತಿ, ನಿಮ್ಮ ಸಮಸ್ಯೆಗಳು ಇಲ್ಲಿಗೆ ತೀರಿತು, ಇನ್ನು 15 ದಿನಗಳನ್ನು ಬಿಟ್ಟು ಮತ್ತೆ ಬರುತ್ತೇನೆ, ಆಗ ನಿಮ್ಮ ಊರಿನಲ್ಲಿ ಕೋತಿಗಳೇನಾದರು ನಿಮಗೆ ಕಂಡು ಬಂದು ಅವುಗಳನ್ನು ನೀವು ಹಿಡಿದು ಇಟ್ಟುಕೊಂಡಿದ್ದರೆ, ಅವುಗಳನ್ನು ನನಗೆ ಕೊಡಿ, ಆಗ ನಾನು ಒಂದು ಕೋತಿಗೆ ಸಾವಿರ ರೂ ನೀಡುತ್ತೇನೆ, ಎಂದು ಹೇಳಿ ಹೊರಟು ಹೋಗುತ್ತಾನೆ.. ನಂತರ 10 ದಿನಗಳ ಕಾಲ ಹಳ್ಳಿಯ ಜನರು ಕೋತಿಗಳನ್ನು ಹಡುಕುತ್ತಲೇ ಇರುತ್ತಾರೆ, ಆದರೆ ಒಂದು ಸಿಕ್ಕುವುದಿಲ್ಲ..

ನಂತರ ಆ ವ್ಯಕ್ತಿ ತನ್ನ ಹುಡುಗನನ್ನು ಕರೆದು, ನೋಡು ಎರಡು ಕೋತಿ ಕೊಡುತ್ತೇನೆ, ಆ ಕೋತಿಯನ್ನು ತೆಗೆದುಕೊಂಡು ನಾನು ಹೇಳುವ ಹಳ್ಳಿಗೆ ಹೋಗಿ ಒಂದು ಕೋತಿಗೆ ತಲಾ 200 ರೂಪಾಯಿ ನಂತೆ ಮಾರಿ ಬಾ, ಅವರು ತೆಗೆದುಕೊಂಡೆ ಕೊಳ್ಳುತ್ತಾರೆ ಎಂದು ಹೇಳುತ್ತಾನೆ, ತನ್ನ ಯಜಮಾನನ ಮಾತಿನಂತೆ ಆ ಹುಡುಗ ಆ ಹಳ್ಳಿಗೆ ಮಂಗಗಳನ್ನು ತೆಗೆದುಕೊಂಡು ಹೋಗುತ್ತಾನೆ, ನಂತರ ವಿಪರ್ಯಾಸವೇನೆಂದರೆ ಆ ವ್ಯಕ್ತಿಯ ಮಾತಿನಂತೆ ಹಳ್ಳಿಯನೊಬ್ಬ ಎರಡು ಕೋತಿಗಳನ್ನು ತೆಗೆದುಕೊಳ್ಳುತ್ತಾನೆ, ನಂತರ ಎರಡನೇ ದಿನ ಹಳ್ಳಿಯ ಜನರ ಹತ್ತಿರ ಹಿಡಿಸಿ ತಂದಿದ್ದ ಎಲ್ಲಾ ಮಂಗಗಳನ್ನು ತಲಾ 200 ರೂಪಾಯಿ ನಂತೆ ಆ ಹುಡುಗ ಅವರಿಗೆ ಮಾರಿ ಬಿಡುತ್ತಾನೆ..!

ಆ ಸುಶಿಕ್ಷಿತ ವ್ಯಕ್ತಿ 20,40,80 ರೂಪಾಯಿ ಕೊಟ್ಟು ಖರೀದಿಸಿದ ಕೋತಿಗಳನ್ನು ಅದೇ ಊರಿನವರಿಗೆ 200 ರೂಪಾಯಿಯಂತೆ ಮಾರಿ, ಸಿಕ್ಕಾಪಟ್ಟೆ ಹಣ ಸಂಪಾದಿಸತ್ತಾನೆ. ಇತ್ತ ಹಳ್ಳಿಯವರು ಕೊಂಡು ಕೊಂಡ ಮಂಗಗಳನ್ನು ಮನೆಯಲ್ಲೇ ಸಾಕುತ್ತಾ ಈ ವ್ಯಕ್ತಿಗಾಗಿ ಎದುರು ನೋಡುತ್ತಿರುತ್ತಾರೆ.. ಹಿರಿಯರ ಮಾತಿನಂತೆ ಕೊಟ್ಟೋನು ಕೋಡಂಗಿ ಇಸ್ಕೊಂಡೋನು ವೀರಭದ್ರ ಎಂಬಂತೆ ಆ ಕೋಡಂಗಿಗಳಿಂದಲೆ ಹಳ್ಳಿಯ ಅಸಾಧರಣ ಮನಸನ್ನು ಉಪೋಯೋಗಿಸಿಕೊಂಡು ಅವನು ವೀರಭದ್ರನಾಗುತ್ತಾನೆ (ಶ್ರೀಮಂತನಾಗುತ್ತಾನೆ).

ಅದಕ್ಕೇ ಹೇಳುವುದು ನಮ್ಮ ಕೆಲಸವನ್ನು ನಾವೇ ಮಾಡಿಕೊಳ್ಳಬೇಕು, ಸುಮ್ಮನೇ ಆ ಕೋತಿಗಳಿಗೆ ಭಯ ಪಡಿಸಿ ಓಡಿಸಿಯೋ ಅಥವಾ ತಾವೇ ಹಿಡಿದು ಬೇರೆ ಎಲ್ಲಾದರು ಬಿಟ್ಟು ಬಂದ್ದಿದ್ದರೋ ಅವರ ಸಮಸ್ಯೆ ತೀರುವುದರ ಜೊತೆಗೆ ಹಣವೂ ಸಹ ಉಳಿಯುತ್ತಿತ್ತು, ಈಗ ಕಾಸು ಹಾಳು ತಲೆಯೂ ಬೋಳು ಎಂಬಂತೆ, ತಮಗೆ ಸಮಸ್ಯೆಯಾಗಿದ್ದ ಕೋತಿಗಳನ್ನು ತಾವೇ ಸಾಕುತ್ತಾ, ಹಣವನ್ನು ಕಳೆದುಕೊಂಡು, ಆ ವ್ಯಕ್ತಿಯಿಂದ ಒಳ್ಳೆಯ ಪಾಠ ಕಲ್ಲಿತಿದ್ದಾರೆ.. ಹೀಗೆ ನಮ್ಮ ಜೀವನದಲ್ಲಿ ಕೋತಿಗಳಂತೆ ಅದೇಷ್ಟೋ ಜನರು ಬಂದು ನಮ್ಮನ್ನು ಕೆಣಕುತ್ತಾರೆ, ಆಗ ನಾವು ಯಾರ ಸಹಾಯವಿಲ್ಲದೇ ಅವರನ್ನು ಹೆದರಿಸಿ ನಿಲ್ಲಬೇಕು.. ಇಲ್ಲವಾದಲ್ಲಿ ಈ ಹಳ್ಳಿಯವರಿಗಾದಂತೆ ನಮಗೂ ಆಗುತ್ತದೆ..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತಾಯಂದಿರು ಪರೀಕ್ಷೆ ಬರೆಯಲು ಹೋದಾಗ ಪೇದೆಗಳು ಮಾಡಿದ ಕೆಲಸವೇನು ಗೊತ್ತಾ?

    ಪರೀಕ್ಷೆ ಬರೆಯಲು ಹೋದ ತಾಯಂದಿರ ಮಕ್ಕಳನ್ನು ನೋಡಿಕೊಂಡ ಅಸ್ಸಾಂನ ಮಹಿಳಾ ಪೇದೆಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಸ್ಸಾಂನ ಮಹಿಳಾ ಪೇದೆಗಳು ಮಕ್ಕಳನ್ನು ಎತ್ತಿಕೊಂಡು ಅವರನ್ನು ನೋಡಿಕೊಳ್ಳುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಫೋಟೋ ಸಾಕಷ್ಟು ಶೇರ್ ಆಗುತ್ತಿದ್ದು, ಅನೇಕರು ಪೇದೆಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅಸ್ಸಾಂ ಪೊಲೀಸರು, ಇಬ್ಬರು ಮಹಿಳಾ ಪೇದೆಗಳು ಮಗುವನ್ನು ಎತ್ತಿಕೊಂಡು ಸಂತೈಸುತ್ತಿರುವ ಫೋಟೋವನ್ನು ಟ್ವೀಟ್ ಮಾಡಿದ್ದಾರೆ. ಅಲ್ಲದೆ ಅದಕ್ಕೆ, “ತಾಯಿ ಯಾಗುವುದು ಒಂದು ಕ್ರಿಯೆ. ನೀವು ಅದನ್ನು…

  • ಸುದ್ದಿ

    1 ಗ್ರಾಂ ಮೀನಿಗೆ, 40 ನಿಮಿಷ ಆಪರೇಶನ್ ಮಾಡಿದ ವೈದ್ಯೆ ಸೋನ್ಯಾ ಮೈಲ್ಸ್, ಶಸ್ತ್ರಚಿಕಿತ್ಸೆಗೆ 8,800 ರೂ ಖರ್ಚು,.!

    ಇಂಗ್ಲೆಂಡ್, ವೈದ್ಯ ಲೋಕ ಅದೆಷ್ಟು ಮುಂದುವರೆದಿದೆ ಎಂದರೆ ಮಾನವನ ರೋಗಗಳಿಗೇನು? ಪ್ರಾಣಿ, ಜಲಚರಗಳ ರೋಗಗಳಿಗೂ ಇದೀಗ ವೈದ್ಯರು ಚಿಕಿತ್ಸೆ ನೀಡುತ್ತಾರೆ. 1 ಗ್ರಾಂ ಮೀನಿನ ಯಶಸ್ವಿ ಶಸ್ತ್ರ ಚಿಕಿತ್ಸೆ  ಮೌಲಿ ಪ್ರಜಾತಿಯ ಗೋಲ್ಡ್ ಫಿಶ್’ಗೆ ಯಶಸ್ವಿ ಶಸ್ತ್ರಚಿಕಿತ್ಸೆ, ಗೋಲ್ಡ್ ಫಿಶ್ ಹೊಟ್ಟೆಯಲ್ಲಿದ್ದ  ಟ್ಯೂಮರ್ ಹೊರ ತೆಗೆದ ವೈದ್ಯೆ ಸೋನ್ಯಾ ಮೈಲ್ಸ್  ಶಸ್ತ್ರಚಿಕಿತ್ಸೆಗೆ 8,800 ರೂ ಖರ್ಚು. ಅದರಂತೆ ಇಂಗ್ಲೆಂಡ್’ನ ಬ್ರಿಸ್ಟಸ್’ನ ವೈದ್ಯೆ ಸೋನ್ಯಾ ಮೈಲ್ಸ್ ಕೇವಲ 1 ಗ್ರಾಂ ತೂಕದ ಮೌಲಿ ಪ್ರಜಾತಿಯ ಗೋಲ್ಡ್ ಫಿಶ್’ಗೆ ಶಸ್ತ್ರ…

  • ಜ್ಯೋತಿಷ್ಯ

    ಅರ್ಧನಾರೀಶ್ವರನನ್ನು ನೆನೆಯುತ್ತ ನಿಮ್ಮ ಇಂದಿನ ಭವಿಷ್ಯದಲ್ಲಿ ಏನಿದೆ ಎಂದು ನೋಡಿರಿ

    ಮೇಷ ರಾಶಿ ಭವಿಷ್ಯ (Monday, December 13, 2021) ಇಂದು ನಿಮ್ಮನ್ನು ಆವರಿಸುವ ಭಾವನಾತ್ಮಕ ಮನಸ್ಥಿತಿಯಿಂದ ನೀವು ಹೊರಬರಲು ಬಯಸಿದರೆ ಹಿಂದಿನದ್ದೆಲ್ಲವನ್ನೂ ಮರೆತುಬಿಡಬೇಕು. ಆರ್ಥಿಕ ಜೀವನದ ಸ್ಥಿತಿ ಇಂದು ಉತ್ತಮವಾಗಿದೆ ಎಂದು ಹೇಳಲಾಗುವುದಿಲ್ಲ, ಇಂದು ನಿಮ್ಮನ್ನು ಉಳಿಸಲು ನಿಮಗೆ ಕಷ್ಟವಾಗಬಹುದು. ಒಂದು ಮಂಕು ಕವಿದ ಮತ್ತು ಒತ್ತಡದ ದಿನದಲ್ಲಿ ಸ್ನೇಹಿತರು ಮತ್ತು ಸಂಗಾತಿ ನಿಮಗೆ ಆರಾಮ ಮತ್ತು ಸಂತೋಷ ತರುತ್ತಾರೆ. ನೀವು ಇಂದು ಪ್ರೀತಿ ಮಾಡುವ ಅವಕಾಶವನ್ನು ಕಳೆದುಕೊಳ್ಳದಿದ್ದಲ್ಲಿ, ನಿಮ್ಮ ಇಡೀ ಜೀವನದಲ್ಲಿ ಈ ದಿನವನ್ನು ಎಂದಿಗೂ…

  • ಸುದ್ದಿ

    ನಂದಿ ಬೆಟ್ಟಕ್ಕೆ ರೋಪ್ ವೇ ,ಬೆಂಗಳೂರಿಗೆ ಮೆಟ್ರೋ ನಕ್ಷೆ ರೆಡಿ ಮಾಡಿದ್ದ ಶಂಕರ್ ನಾಗ್. ಈ ಸ್ಟೋರಿ ನೋಡಿ.

    ನವೆಂಬರ್, 1954 ರಂದು ಕರ್ನಾಟಕದ ಹೊನ್ನಾವರ ತಾಲೂಕಿನ ಮಲ್ಲಾಪುರ ಎಂಬ ಪುಟ್ಟ ಹಳ್ಳಿಯಲ್ಲಿ ಶಂಕರ್ ನಾಗ್ ಅವರು ಹುಟ್ಟಿದರು. ನಕ್ಷತ್ರ ನಾಮ’ಅವಿನಾಶ’.ಹೀಗೆಂದರೆ ವಿನಾಶವಿಲ್ಲದವನು ಎಂದರ್ಥ.ತಂದೆ ಹೊನ್ನಾವರದ ನಾಗರ ಕಟ್ಟೆಯ ಸದಾನಂದ, ಬಾಲ್ಯದಲ್ಲಿ ಪ್ರೀತಿಯಿಂದ ಮಗನನ್ನು ಕರೆಯುತಿದ್ದ ಹೆಸರು ಭವಾನಿ ಶಂಕರ್. ಶಂಕರ್ ನಾಗ್ ತನ್ನ ವಿದ್ಯಾಬ್ಯಾಸದ ನಂತರ ಮುಂಬೈಗೆ ತೆರಳಿದರು. ಮುಂಬೈನ ಮರಾಠಿ ಚಿತ್ರಮಂದಿರದ ಕಡೆಗೆ ಆಕಷಿ೯ತರಾದ ಶಂಕರ್ ತಮಗರಿವಿಲ್ಲದಂತೆ ಮರಾಠಿ ರಂಗಭೂಮಿ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಾ ಮರಾಠಿ ರಂಗಭೂಮಿಯಲ್ಲಿ ತೀವ್ರವಾಗಿ ತೊಡಗಿಕೊಂಡಿದ್ದರು. ತಮ್ಮ ಗೆಳೆಯರೊಂದಿಗೆ ಅವರು ಚಿತ್ರಕತೆ…

  • ಸುದ್ದಿ

    ಜಾರಿಯಾಯ್ತು ಕೇಂದ್ರ ಸರ್ಕಾರದ ಹೊಸ ರೂಲ್ಸ್ ಮನೆ ಮುಂದೆ ಕಾರು, ಶಾಲಾ ಹೊರಗಡೆ ಬಸ್ಸು ನಿಲ್ಸಿದ್ರೆ ದಂಡ, ಇಲ್ಲಿದೆ ನೋಡಿ ಮಾಹಿತಿ,.!

    ಕೇಂದ್ರ ಸರ್ಕಾರ ಜಾರಿ ಮಾಡಿರುವ ನೂತನ ಟ್ರಾಫಿಕ್ ನಿಯಮ ಹಾಗೂ ದಂಡ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲೂ ಜಾರಿಯಾಗಿದೆ. ಈ ಕುರಿತು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ನಿಯಮ ಉಲ್ಲಂಘನೆ, ದಂಡ ಹಾಗೂ ನೂತನ ನಿಯಮದ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ. ಬೆಂಗಳೂರು, ನೂತನ ಟ್ರಾಫಿಕ್ ನಿಯಮ ಇದೀಗ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಜಾರಿಯಾಗಿದೆ. ಸರ್ಕಾರದಿಂದ ಯಾವುದೇ ನೊಟಿಫಿಕೇಶನ್ ಬಾರದ ಹಿನ್ನಲೆಯಲ್ಲಿ ಆರಂಭಿಕ 4 ದಿನ ಹಳೆ ನಿಯಮ ಮುಂದುವರಿದಿತ್ತು. ಇದೀಗ…

  • ಸುದ್ದಿ

    ವಾಟ್ಸಪ್ ಪಡೆದ ಆದಾಯವೇಷ್ಟು ಅಂತ ಗೊತ್ತಾದರೆ ಶಾಕ್ ಆಗುವುದಂತೂ ಖಂಡಿತಾ ,.!

    ಸಾಮಾಜಿಕ ಜಾಲತಾಣಗಳಲ್ಲಿ ಒಂದಾಗಿರುವ ವಾಟ್ಸಪ್ ಭಾರತದಲ್ಲಿ ತನ್ನ ಬಿಸಿನೆಸ್‌ ಆ್ಯಪ್‌ ಅನ್ನು ಬಿಡುಗಡೆಗೊಳಿಸಿದ ಮೊದಲ ವರ್ಷದಲ್ಲಿ  6.84 ಕೋಟಿ ರೂ. ಆದಾಯ ಗಳಿಸುವಲ್ಲಿ ಯಶಸ್ವಿಯಾಗಿದೆ. ಅತ್ಯಧಿಕ ಸಂಖ್ಯೆಯ ಬಳಕೆದಾರರನ್ನು ಹೊಂದಿರುವ ವಾಟ್ಸಪ್ ದೇಶದಲ್ಲಿ ಈಗ ಆದಾಯ ಗಳಿಕೆಯ ಹಾದಿಯತ್ತ ಹೊರಳಿದೆ. ಬಿಸಿನೆಸ್ ಆವೃತ್ತಿ ಮೂಲಕ ವಾಟ್ಸಪ್ ಮೊದಲ ವರ್ಷದ ಗಳಿಕೆಯನ್ನು ಬಹಿರಂಗಪಡಿಸಿದೆ. ರಿಜಿಸ್ಟ್ರಾರ್‌ ಆಫ್‌ ಕಂಪನೀಸ್‌ಗೆ ವಾಟ್ಸಪ್ ಸಲ್ಲಿಸಿರುವ ದಾಖಲಾತಿಗಳ ಪ್ರಕಾರ, 2019 ರಲ್ಲಿಕಂಪನಿ 6.84 ಕೋಟಿ ರೂ. ಆದಾಯ ಮತ್ತು 57 ಲಕ್ಷ ರೂ. ಲಾಭ ಗಳಿಸಿದೆ. ತನ್ನ…