ಆರೋಗ್ಯ, ಉಪಯುಕ್ತ ಮಾಹಿತಿ

ಅಪ್ಪಿ ತಪ್ಪಿಯೂ ಬೆಳಗಿನ ‘ವಾಕಿಂಗ್’ ವೇಳೆ ಈ ತಪ್ಪುಗಳನ್ನು ಮಾಡಬೇಡಿ..?ಇದರಿಂದ ಆರೋಗ್ಯಕ್ಕಿಂತ ಅನಾರೋಗ್ಯವೇ ಹೆಚ್ಚು…

247

ಫಿಟ್ನೆಸ್ ಕಾಯ್ದುಕೊಳ್ಳಲು ಜನರು ಇನ್ನಿಲ್ಲದ ಕಸರತ್ತು ಮಾಡ್ತಾರೆ. ಉತ್ತಮ ಆಹಾರದಿಂದ ಹಿಡಿದು ವ್ಯಾಯಾಮದವರೆಗೆ ಎಲ್ಲವೂ ಫಿಟ್ನೆಸ್ ಗೆ ಸಹಕಾರಿ. ಬೆಳಿಗ್ಗಿನ ವಾಕ್ ಕೂಡ ಆರೋಗ್ಯಕ್ಕೆ ಬಹಳ ಒಳ್ಳೆಯದು. ಜಿಮ್, ಯೋಗಕ್ಕಿಂತ ವಾಕಿಂಗ್ ಬೆಸ್ಟ್ ಎನ್ನುವವರಿದ್ದಾರೆ. ಆದ್ರೆ ಈ ವಾಕ್ ವೇಳೆ ನಾವು ಮಾಡುವ ಸಣ್ಣಪುಟ್ಟ ತಪ್ಪುಗಳು ನಮ್ಮ ಆರೋಗ್ಯವನ್ನು ಸುಧಾರಿಸುವ ಬದಲು ಹಾಳು ಮಾಡುತ್ತವೆ.

ವಾಕಿಂಗ್ ಮಾಡಲು ವಾಹನ ಓಡಾಡದ ಹಾಗೂ ಹಸಿರು ಪ್ರದೇಶವನ್ನು ಆಯ್ಕೆ ಮಾಡಿಕೊಳ್ಳಬೇಕು. ಅನೇಕರು ತಡವಾಗಿ ಏಳ್ತಾರೆ. ಪಾರ್ಕ್ ಗೆ ಹೋಗಲು ಸಮಯವಿರುವುದಿಲ್ಲ. ರಸ್ತೆಯಲ್ಲಿಯೇ ವಾಕಿಂಗ್ ಮಾಡಿ ಬರ್ತಾರೆ. ಆದ್ರೆ ವಾಹನದ ಹೊಗೆ ಬೆಳ್ಳಂಬೆಳಿಗ್ಗೆ ನಮ್ಮ ದೇಹ ಸೇರುವುದ್ರಿಂದ ಲಾಭಕ್ಕಿಂತ ನಷ್ಟವೇ ಜಾಸ್ತಿಯಾಗುತ್ತದೆ.

ಸೂರ್ಯೋದಯಕ್ಕಿಂತ ಮೊದಲು ಮಾಡುವ ವಾಕಿಂಗ್ ಹೆಚ್ಚು ಪ್ರಯೋಜನಕಾರಿ. ಯಾಕೆಂದ್ರೆ ಈ ವೇಳೆ ಮಾಲಿನ್ಯ ಕಡಿಮೆಯಿರುತ್ತದೆ. ಬೆಳಿಗ್ಗೆ ಬೇಗ ಏದ್ದು ವಾಕಿಂಗ್ ಗೆ ಹೋಗ ಬಯಸುವವರು ರಾತ್ರಿ ಬೇಗ ಮಲಗಬೇಕು. ಪ್ರತಿದಿನ ಮಲಗುವ ಹಾಗೂ ಏಳುವ ಸಮಯ ಸರಿಯಾಗಿದ್ದಲ್ಲಿ ನಿದ್ರೆ ಸರಿಯಾಗಿ ಬರುತ್ತದೆ.

ವಾಕಿಂಗ್ ಗೆ ಸೂಕ್ತ ಬಟ್ಟೆ ಹಾಗೂ ಬೂಟ್ ಆಯ್ಕೆ ಮಾಡಿಕೊಳ್ಳಿ. ವಾಕಿಂಗ್ ಮಾಡುವ ವೇಳೆ ಕಿರಿಕಿರಿ ಎನ್ನಿಸುವ ಬಟ್ಟೆ ತೊಡಬೇಡಿ. ಇದ್ರ ಜೊತೆಗೆ ಕೇವಲ ವಾಕಿಂಗ್ ಗಾಗಿಯೇ ಶೂ ಒಂದನ್ನು ಮೀಸಲಿಡಿ.

ಕೆಲವರು ವಾಕಿಂಗ್ ಮಧ್ಯೆಯೇ ನೀರು ಕುಡಿಯುತ್ತಾರೆ. ಇದು ತಪ್ಪು ವಿಧಾನ. ವಾಕಿಂಗ್ ಗೆ ಹೋಗುವ ಮುನ್ನ 2-3 ಗ್ಲಾಸ್ ನೀರು ಕುಡಿಯಿರಿ. ವಾಕಿಂಗ್ ಮುಗಿದ ನಂತ್ರ ಸ್ವಲ್ಪ ಸಮಯ ಬಿಟ್ಟು ನೀರು ಕುಡಿಯುವುದು ಒಳ್ಳೆಯ ಪದ್ಧತಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಕೊನೆಗೂ ಕಾಮನ್ ಮ್ಯಾನ್’ಗೆ ಸಿಗದ ಬಿಗ್ ಬಾಸ್ ಪಟ್ಟ..!ಕೇವಲ ಒಂದು ಲಕ್ಷ ಕೊಟ್ಟಿದ್ದು ಸರಿಯೇ..?ಏನಾಯ್ತು ಮುಂದೆ ನೋಡಿ…

    ಕೊನೆಗೂ ಬಿಗ್ ಬಾಸ್ ಕನ್ನಡ ಸಂಚಿಕೆ 5 ಕಾರ್ಯಕ್ರಮಕ್ಕೆ ಭರ್ಜರಿಯಾಗಿ ತೆರೆ ಬಿದ್ದಿದೆ.ಈ ಸಲದ ಬಿಗ್ ಬಾಸ್ ಸಂಚಿಕೆಯಲ್ಲಿ ಕಾಮಾನ್ ಮ್ಯಾನ್’ಗೂ ಕೂಡ ಕಲರ್ಸ್ ಕನ್ನಡ ವಾಹಿನಿಯವರು ಅವಕಾಷ ಕೊಟ್ಟಿದ್ದರು.ಕಾಮಾನ್ ಮ್ಯಾನ್’ಗಳಾಗಿ ದಿವಾಕರ್,ಸಮೀರ್ ಆಚಾರ್ಯ ಮತ್ತು ರಿಯಾಜ್ ರವರು ಭಾಗವಹಿಸಿ

  • ಸುದ್ದಿ

    ಹಿಮಪಾತದ ನಡುವೆ ದೇಶ ಸೇವೆ ಸಲ್ಲಿಸುತ್ತಿರುವ ಈ ವೀರಯೋಧನಿಗೊಂದು ಸಲಾಂ. ಜಾಲತಾಣಗಳಲ್ಲಿ ಸಖತ್ ವೈರಲ್.

    ಸದ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತವಾಗುತ್ತಿದೆ. ಈ ನಡುವೆ ಸಿಆರ್‌ಪಿಎಫ್ ಯೋಧರೊಬ್ಬರು ಕರ್ತವ್ಯ ಸಲ್ಲಿಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಈ ಫೋಟೋ ನೋಡಿದವರು ಆ ಚಳಿಯಲ್ಲೂ ಎದೆಗುಂದದೆ ಕರ್ತವ್ಯ ಸಲ್ಲಿಸುತ್ತಿರುವ ಯೋಧನಿಗೆ ಸಲಾಂ ಎಂದಿದ್ದಾರೆ. ನಮ್ಮ ಸೈನಿಕರು ನಮ್ಮ ಹೆಮ್ಮೆ ಎಂದು ನಾವು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಆದರೆ ನಮ್ಮ ಸೈನಿಕರು ನಮಗಾಗಿ ಪ್ರತಿದಿನ ಪಡುವ ಕಷ್ಟ ಅಷ್ಟಿಷ್ಟಲ್ಲ. ಚಳಿಗಾಳಿ ಹಿಮಮಳೆ ಯಾವುದನ್ನೂ ಲೆಕ್ಕಿಸದೆ ಸೈನಿಕರು ಬಾರ್ಡರ್ ನಲ್ಲಿ ನಮಗಾಗಿ ಪ್ರಾಣ ಒತ್ತೆಯಿಟ್ಟು…

  • ಕಾನೂನು

    ಭಾರತದಲ್ಲಿ ಇದೇ ಮೊದಲ ಬಾರಿಗೆ,ಕೋತಿಯನ್ನು ಹಿಂಸಿಸಿ ಕೊಂದ ಆರೋಪಿಗೆ ಬೇಲ್ ನಿರಾಕರಿಸಿದ ಕೋರ್ಟ್,ಆತನಿಗೆ ವಿಧಿಸಿದ ಶಿಕ್ಷೆ ಏನು ಗೊತ್ತಾ..?

    ಮನುಷ್ಯತ್ವ ಮರೆತು ಮಂಗವನ್ನು ಹಗ್ಗದಿಂದ ಮರಕ್ಕೆ ಕಟ್ಟಿ ಬಡಿಗೆಯಿಂದ ಹೊಡೆದು ಅಮಾನುಷವಾಗಿ ಹಲ್ಲೆ ಮಾಡಿ ಕೊಂದಿದ್ದ ಆರೋಪಿ ಪವನ್ ಬಂಗಾರ್ ಗೆ ಕೋರ್ಟ್ ಎರಡು ಬಾರಿ ಜಾಮೀನು ನಿರಾಕರಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

  • Sports

    ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ…!

    ಬೆಂಗಳೂರು: ಭಾರತ-ಪಾಕ್ ಹೈ ವೋಲ್ಟೇಜ್ ಪಂದ್ಯಕ್ಕೆ ತೆರೆ ಬಿದ್ದಿದೆ. ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ ಮನೆ ಮಾಡಿದೆ. ಈ ನಡುವೆ ಗೆಲುವು ತಂದು ಕೊಟ್ಟ ಟೀಂ ಇಂಡಿಯಾಗೆ ಕೋಟಿ ಕೋಟಿ ಭಾರತೀಯರು ಭೇಷ್, ಇಂಡಿಯಾ ಭೇಷ್ ಎಂದು ಬೆನ್ನು ತಟ್ಟಿದರು. ಹೌದು. ಬದ್ಧ ವೈರಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದೆ. ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲೇ ಏಳನೇ ಬಾರಿಗೆ ಪಾಕ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ ಲಭಿಸಿದೆ. ಟೀಂ…

  • ಸಿನಿಮಾ

    ಶೆಟ್ಟರ ಕಥೆಯಲ್ಲಿ, ಬರವಣಿಗೆಯೇ ರಾಜ.. ಗರುಡ ಗಮನ ವೃಷಭ ವಾಹನ ಚಿತ್ರದ ವಿಮರ್ಶೆ

    ಒಬ್ಬೊಬ್ಬ ನಿರ್ದೇಶಕನಿಗೂ ಒಂದೊಂದು ಶೈಲಿ ಇದ್ದರೂ, ಸಿನಿಮಾ ನಿರ್ದೇಶಕರನ್ನು ಎರಡು ವರ್ಗವಾಗಿ ವಿಂಗಡಿಸಬಹುದು. ಮೊದಲನೆಯ ವರ್ಗದ ನಿರ್ದೇಶಕರು ಸಿನಿರಸಿಕರನ್ನು ರಂಜಿಸಲೆಂದೇ ಸಿದ್ದಸೂತ್ರದ ಅಂಶಗಳನ್ನು ಇಟ್ಟುಕೊಂಡು, ಜನ ಬಯಸುವ ಅಂಶಗಳನ್ನೇ ಗ್ರಹಿಸಿ, ಅಳೆದು ತೂಗಿ ಅಂಥದ್ದೇ ಸಿನಿಮಾ ಮೂಲಕ ಜನರನ್ನು ರಂಜಿಸಬಯಸುವವರು. ಹೊಸ ಪ್ರಯೋಗಗಳಿಗೆ ಹಾತೊರೆಯುವ‌ ಮನಸು ಮಾಡದವರು. ಎರಡನೆಯ ವರ್ಗದ ನಿರ್ದೇಶಕರು ತಮ್ಮೊಳಗಿನ‌ ಕಥೆಯನ್ನು ಚೌಕಟ್ಟಿನ ಹಂಗಿಲ್ಲದೆ, ಸಿದ್ಧ ಸೂತ್ರಗಳಿಗೆ ಮೊರೆ ಹೋಗದೇ, ತಮ್ಮದೇ ರೀತಿಯಲ್ಲಿ, ರೂಪಿಸಿ, ನಿರೂಪಿಸಿ ತೆರೆಗೆ ತರುವವರು. ಸದಾ ಹೊಸ ಪ್ರಯೋಗಗಳಿಗೆ‌ ಮಿಡಿಯುವವರು,…

  • ಸುದ್ದಿ

    ಅಪರೂಪದ ದೃಶ್ಯ ಪ್ರತಿನಿತ್ಯ ಬೆಕ್ಕಿನ ಮರಿಗೆ ಹಾಲುಣಿಸುತ್ತಿರುವ ನಾಯಿ.

    ಬೆಕ್ಕು ಮತ್ತು ನಾಯಿ ಪರಮ ಶತ್ರುಗಳು ಎಂದು ಹೇಳುತ್ತಾರೆ. ಆದರೆ ಇಲ್ಲೊಂದು ನಾಯಿ ಬೆಕ್ಕಿನ ಮರಿಗೆ ಹಾಲುಣಿಸಿ ತಾಯಿಯ ಪ್ರೀತಿಯನ್ನು ತೋರಿಸುತ್ತಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನೆಮ್ಮಲೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಚೆಟ್ಟಂಗಡ ಗಿಣಿ ತಿಮ್ಮಯ್ಯ ಅವರ ಮನೆಯಲ್ಲಿ ಈ ಅಪರೂಪದ ದೃಶ ಕಂಡು ಬಂದಿದೆ. ಈ ನಾಯಿ ಪ್ರತಿನಿತ್ಯ ಬೆಕ್ಕಿನಮರಿಗೆ ಹಾಲು ನೀಡುತ್ತಿದೆ. ಈ ನಾಯಿ ಬೆಕ್ಕಿನ ಮರಿಗಳಿಗೆ ಪ್ರತಿದಿನ ಹಾಲನ್ನು ಕುಡಿಸುತ್ತದೆ. ತಾಯಿಯ ಮಮತೆಯನ್ನು ಬಯಸಿ ಬರುವ ಬೆಕ್ಕಿನ ಮರಿಗೆ…