ರಾಜಕೀಯ

ಸಿದ್ದರಾಮಯ್ಯ ಮಣಿಸಲು ಕೋಲಾರ ಜನ ಶಪಥ! ಸಂಸದ ಮುನಿಸ್ವಾಮಿ

45

‘ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ಅಷ್ಟೇ ಅಲ್ಲ, ಅವರ ನಾಯಕ ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ಬಂದರೂ ಭಯವಿಲ್ಲ. ಅವರನ್ನು ಸೋಲಿಸಿ ಮನೆಗೆ ಕಳುಹಿಸಲು ಕ್ಷೇತ್ರದ ಜನ ಶಪಥ ಮಾಡಿದ್ದಾರೆ! ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು.

ವಕ್ಕಲೇರಿ ಗ್ರಾಮದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ನೇತೃತ್ವದಲ್ಲಿ ಭಾನುವಾರ ಆಯೋಜಿಸಿದ್ದ ಬಿಜೆಪಿ ಸಮಾವೇಶದಲ್ಲಿ ಅವರು ಮಾತನಾಡಿದರು.

‘ವರ್ತೂರು ಪ್ರಕಾಶ್‌ ಅಧಿಕಾರ ಇಲ್ಲದಿದ್ದರೂ ಕ್ಷೇತ್ರದ ಹಳ್ಳಿಹಳ್ಳಿಗೂ ಹೋಗಿ ಜನರ ಕಷ್ಟ ಆಲಿಸುತ್ತಿದ್ದಾರೆ. ಇದನ್ನು ಬಿಜೆಪಿ ಹೈಕಮಾಂಡ್ ಗಮನಿಸುತ್ತಿದೆ. ಕೆಲಸ ಮಾಡುವವರಿಗೆ ಟಿಕೆಟ್ ನೀಡುವುದು ಖಚಿತ’ ಎಂದರು.

‘ಸಿದ್ದರಾಮಯ್ಯ ಹಾಗೂ ಅವರ ಕಾಂಗ್ರೆಸ್ ಪಕ್ಷವು ಕುರುಬ, ಒಕ್ಕಲಿಗ, ದಲಿತ ಹಾಗೂ ಅಲ್ಪಸಂಖ್ಯಾತರ ವಿರೋಧಿ. ಇವರೆಲ್ಲರೂ ಸಿದ್ದರಾಮಯ್ಯ ಕೋಲಾರಕ್ಕೆ ಬರಲಿ ಎಂದು ಕಾಯುತ್ತಿದ್ದಾರೆ’ ಎಂದು ಹೇಳಿದರು.

‘ಕಾಂಗ್ರೆಸ್ ಪಕ್ಷವು ದಲಿತರ ವಿರೋಧಿ. ಅಂಬೇಡ್ಕರ್‌ ಅವರನ್ನು ಸೋಲಿಸಿದ್ದು ಯಾರು? ನೆಹರೂ, ಇಂದಿರಾ ಗಾಂಧಿ, ರಾಜೀವ್‌ ಗಾಂಧಿ ಅವರ ಅಂತ್ಯಸಂಸ್ಕಾರಕ್ಕೆ ನೂರಾರು ಎಕರೆ ಜಾಗ ಕೊಟ್ಟ ಕಾಂಗ್ರೆಸ್ಸಿಗರು ಅಂಬೇಡ್ಕರ್ ವಿಧಿವಶರಾದಾಗ ದೆಹಲಿ
ಯಲ್ಲಿ ಅಂತ್ಯ ಸಂಸ್ಕಾರಕ್ಕೆ ಜಾಗ ನೀಡಲಿಲ್ಲ’ ಎಂದು ಟೀಕಿಸಿದರು.

‘ಕೇಂದ್ರ ಸರ್ಕಾರ ₹ 100 ಅನುದಾನ ಬಿಡುಗಡೆ ಮಾಡಿದರೆ ಜನತೆಗೆ ₹20 ಮಾತ್ರ ತಲುಪುತ್ತಿದೆ ಎಂಬುದಾಗಿ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ರಾಜೀವ್‌ ಗಾಂಧಿ ಹೇಳಿದ್ದರು. ಮೂರು ತಲೆಮಾರಿಗಾಗುವಷ್ಟು ಆಸ್ತಿ ಮಾಡಿಕೊಂಡಿರುವುದಾಗಿ ಈಚೆಗೆ ಶ್ರೀನಿವಾಸಪುರ ಶಾಸಕರ ಘೋಷಿಸಿದ್ದರು. ಜನರ ದುಡ್ಡು ತಿಂದು ತೇಗಿದ್ದೇ ಇವರ ಸಾಧನೆ’ ಎಂದುಆರೋಪಿಸಿದರು.

ಮಾಜಿ ಸಚಿವ ವರ್ತೂರು ಪ್ರಕಾಶ್ ಮಾತನಾಡಿ, ‘ವಕ್ಕಲೇರಿ ಹೋಬಳಿಯ ಜನತೆ ಬುದ್ಧಿವಂತರು. ಈ ಕ್ಷೇತ್ರದಲ್ಲಿ ಈ ಹಿಂದಿನ ಎರಡೂ ಚುನಾವಣೆಗಳಲ್ಲಿ ನನಗೆ ಮುನ್ನಡೆ ನೀಡಿದ್ದಾರೆ. ಕೋಲಾರ ಕ್ಷೇತ್ರದಲ್ಲಿ 50 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತೇವೆ. ಈ ಕ್ಷೇತ್ರದಲ್ಲಿ ಗೆದ್ದ ಶಾಸಕರು ಜನರು ಹಾಗೂ ಗ್ರಾಮಗಳನ್ನು ಮರೆತಿದ್ದಾರೆ’ ಎಂದರು.

 

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಂಬಂಧ

    ಈ 6 ಗುಣಗಳು ನಿಮ್ಮಲ್ಲಿದ್ರೆ, ಯಾರಾದರಾಗಿರಲಿ ನಿಮ್ಮನ್ನು ನಂಬುತ್ತಾರೆ…

    ಈಗಂತೂ ಈ ಜಗತ್ತಿನಲ್ಲಿ ಒಬ್ಬರೊನ್ನೊಬ್ಬರು ನಂಬುವುದು ತುಂಬಾ ಕಷ್ಟ. ಯಾರ ಮೇಲೂ ಯಾರಿಗೂ ನಂಬಿಕೆ ಅನ್ನುವುದೇ ಇಲ್ಲ.ಇದಕ್ಕೆ ಕಾರಣಗಳು ಬೇಕಾದಷ್ಟು ಇವೆ. ನಮ್ಮಲ್ಲಿರುವ ಅಥವಾ ಬೇರೆಯವರಲ್ಲಿರುವ ಕೆಲವೊಂದು ನ್ಯೂನತೆಗಳು ಬೇರೆಯವರನ್ನು ನಂಬದಂತೆ ಮಾಡಿರುತ್ತವೆ.

  • ಮನರಂಜನೆ

    ಸಿರಿಯಲ್’ಗಳಲ್ಲಿ ಮನೆ ಮಾತಾಗಿದ್ದ ಈ ನಟಿ,ದೋಸೆ ಕ್ಯಾಂಟಿನಲ್ಲಿ ಕೆಲಸಮಾಡುತ್ತಿರೋದು ಯಾಕೆ ಗೊತ್ತಾ .?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಈ ಕಿರುತೆರೆ ನಟಿ ಮಲೆಯಾಳಂ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ನಟ ನಟಿಯರು ಎಂದರೆ ತಮ್ಮ ಜೀವನದ ಶೈಲಿಯೇ ಬೇರೆ ತರಹ ರೂಪಿಸಿ ಕೊಂಡಿರುತ್ತಾರೆ. ಎಲ್ಲದರಲ್ಲೂ ವೈಭವದ ಜೀವನ ನಡೆಸುತ್ತಾರೆ… ಅಂತದ್ರಲ್ಲಿ ಈ ನಟಿ ದೋಸೆ ಕ್ಯಾಂಟಿನಲ್ಲಿ ಕೆಲಸಮಾಡುವಂತದ್ದು ಯಾಕೆ ಗೊತ್ತಾ .? ಮುಂದೆ ಹೇಳ್ತಿವಿ ನೋಡಿ… ಈ ಕಿರುತೆರೆ ನಟಿಯು ಮಗನ ಶಿಕ್ಷಣಕ್ಕಾಗಿ ಕ್ಯಾಂಟೀನ್ ಓಪನ್ ಮಾಡಿ ಅದರಲ್ಲಿ ದೋಸೆ ಹಾಕುವಂತ ಕೆಲಸವನ್ನು ಮಾಡುತ್ತಿದ್ದಾರೆ. ಜೀವನದಲ್ಲಿ ಈಗ ಆರ್ಥಿಕ ಸಂಕಷ್ಟ ಎದುರಾಗಿದ್ದು ಇದರಿಂದಾಗಿ ಮೆಟ್ಟಿನಿಲ್ಲಲು ಹೈವೇ ಪಕ್ಕದಲ್ಲಿ ಕ್ಯಾಂಟಿನ್…

  • ಸ್ಪೂರ್ತಿ

    ಓದಿಲ್ಲ,ಬರೆದಿಲ್ಲ ಈ ಅಜ್ಜಿಗೆ ಸಿಕ್ಕಿದೆ ರಾಷ್ಟ್ರ ಪ್ರಶಸ್ತಿ ಗರಿಮೆ..!ಎಲ್ಲರಿಗೂ ಸ್ಪೂರ್ತಿ ಈ ಅಜ್ಜಿ…ತಿಳಿಯಲು ಈ ಲೇಖನ ಓದಿ…

    ಈ ಅಜ್ಜಿಗೆ ಬರೋಬ್ಬರಿ 80 ವರ್ಷ ವಯಸ್ಸು ಆದ್ರೂ ಇವರು ಛಲ ಬಿಡದೆ ಕೃಷಿಯಲ್ಲಿ ಸಾಧನೆಯನ್ನು ಮಾಡಿದ್ದಾರೆ. ಇವರ ಒಂದು ಸಾಧನೆಯು ಪ್ರತಿಯೊಬ್ಬ ರೈತನಿಗೆ ಸ್ಫೂರ್ತಿ ಅನ್ನಬಹುದು .ಈ ಅಜ್ಜಿಯ ಹೆಸರು ಲಕ್ಷ್ಮೀಬಾಯಿ ಮಲ್ಲಪ್ಪ ಜುಲ್ಪಿ ಎಂಬುದಾಗಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಲ್ಯಾಳ ಗ್ರಾಮದವರು ಇವರಿಗೆ 80 ವರ್ಷ ವಯಸ್ಸು. ಮತ್ತೆ ಇವರಿಗೆ ಹೆಣ್ಣು ಮಕ್ಕಳು ಸೇರಿದಂತೆ ಮೊಮ್ಮಕ್ಕಳಿದ್ದಾರೆ. ಈ ವಯಸ್ಸಿನಲ್ಲೂ ಕೂಡ ಇವರ ಕಾರ್ಯ ವೈಖರಿಯನ್ನು ನೋಡಿದರೆ ಎಂತವರಿಗೂ ಕೂಡ ಅಚ್ಚರಿ ಮೂಡಿಸುತ್ತದೆ. ಆ…

  • ಉಪಯುಕ್ತ ಮಾಹಿತಿ

    ಶೂನ್ಯ ಬಂಡವಾಳದಲ್ಲಿ ಶುರುಮಾಡುಬಹುದಾದ 7 ಬುಸಿನೆಸ್..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಉಪಯೋಗವಾಗಲಿ…

    ಸಾಮಾನ್ಯವಾಗಿ ಸ್ವಂತ ಉದ್ಯೋಗ ಮಾಡುವವರು ಮೊದಲು ನೋಡುವುದು ಬಂಡವಾಳ‌.. ಹೌದು ದೊಡ್ಡ ಮಟ್ಟದ ಬಂಡವಾಳ ಹಾಕುವುದು ಎಲ್ಲರಿಂದಲೂ ಸಾಧ್ಯವಿಲ್ಲ ಅಂತವರು ಒಂದು ಹತ್ತು ಸಾವಿರ ರೂಪಾಯಿಗಳ ಒಳಗೆ ಬಂಡವಾಳ ಹೂಡಿ ಸ್ವಂತ ಉದ್ಯೋಗ ಮಾಡಬಹುದು.. ಆ ಉದ್ಯೋಗಗಳು ಇಲ್ಲಿವೆ ನೋಡಿ.. ಬ್ಲಾಗಿಂಗ್ ಎಲ್ಲರಿಗೂ ಓದಲು ಅನುಕೂಲವಾಗುವಂತೆ ಅಂತರಜಾಲದಲ್ಲಿ (ಇಂಟರ್ನೆಟ್ನಲ್ಲಿ) ಇಟ್ಟಂತಹ ತೆರೆದ ದಿನಚರಿ ಅಥವಾ ಡೈರಿಯನ್ನು ಬ್ಲಾಗ್ ಎನ್ನುತ್ತಾರೆ. ಬ್ಲಾಗ್ ಎಂದರೆ ಒಂದು ರೀತಿಯಲ್ಲಿ ಸಾರ್ವಜನಿಕ ಸ್ವಗತ ಎನ್ನಬಹುದು. ಬ್ಲಾಗ್ನ ಕ್ರಿಯಾರೂಪವೇ ಬ್ಲಾಗಿಂಗ್ ಅಂದರೆ ಬ್ಲಾಗ್ ನಡೆಸುವ…

  • ವಿಚಿತ್ರ ಆದರೂ ಸತ್ಯ, ಸೌಂದರ್ಯ

    ಈ ಕುಟುಂಬ ಹೇಗಿತ್ತು ಈಗ ಹೇಗಾಗಿದೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಫಿಟ್ ಅಂಡ್ ಫೈನ್ ಆಗಿರಬೇಕೆಂದು ಹೊಸ ವರ್ಷಕ್ಕೆ ಬಹುತೇಕರು ನಿರ್ಣಯ ತೆಗೆದುಕೊಂಡಿರುತ್ತಾರೆ. ಆದರೆ ನಂತರದಲ್ಲಿ ಇದನ್ನು ಪಾಲಿಸುವವರು ಮಾತ್ರ ಕೆಲವೇ ಕೆಲವು ಮಂದಿ. ಆದರೆ ಚೀನಾದ ಕುಟುಂಬವೊಂದು ಇಂತಹ ನಿರ್ಧಾರ ಕೈಗೊಂಡು ಅದನ್ನು ಸಾಕಾರಗೊಳಿಸಿದ್ದಾರೆ. 2 ವರ್ಷದ ಪೋಟೋಗ್ರಾಫರ್ ಜೆಸ್ಸಿಗೆ 6 ತಿಂಗಳ ಹಿಂದೆ ಸಧೃಡ ಮೈಕಟ್ಟನ್ನು ಹೊಂದಬೇಕೆಂಬ ಬಯಕೆ ಉಂಟಾಗಿತ್ತು. ಇದನ್ನು ಆತ ತನ್ನ ಪತ್ನಿ ಬಳಿ ಹೇಳಿಕೊಂಡಿದ್ದ. ಮಗನ ನಿರ್ಧಾರವನ್ನು ಆತನ ತಾಯಿಯೂ ಬೆಂಬಲಿಸಿದ್ದಾರೆ. ಇವರೆಲ್ಲರು ಸೇರಿ ಜೆಸ್ಸಿಯ ತಂದೆಯನ್ನೂ ಒಪ್ಪಿಸಿದ್ದು. ನಾಲ್ವರು ಜಾಗಿಂಗ್ ನಿಂದ…

  • ಆರೋಗ್ಯ

    ತಾಮ್ರದ ಪಾತ್ರೆಯಲ್ಲಿಟ್ಟ ನೀರು ಎಷ್ಟು ಆರೋಗ್ಯಕರ? ಈ ಅರೋಗ್ಯ ಮಾಹಿತಿ ನೋಡಿ

    ತಾಮ್ರದ ಪಾತ್ರೆಗಳಿಂದ ನೀರು ಕುಡಿಯುವ ಪ್ರಾಚೀನ ಭಾರತೀಯ ಅಭ್ಯಾಸದ ಹಿಂದಿನ ವಿಜ್ಞಾನವನ್ನು ಇತರ ಹಲವಾರು ಅಧ್ಯಯನಗಳೂ ಬೆಂಬಲಿಸಿವೆ ಹಾಗೂ ಎಲ್ಲವೂ ಸಕಾರಾತ್ಮಕ ತೀರ್ಮಾನವನ್ನೇ ನೀಡಿವೆ. ಸಾವಿರಾರು ವರ್ಷಗಳಿಂದ ನಮ್ಮ ಪೂರ್ವಜರು ತಾಮ್ರದ ಪಾತ್ರೆಗಳಿಂದ ನೀರು ಕುಡಿಯುತ್ತಾ ಬಂದಿದ್ದಾರೆ ಹಾಗೂ ಇದರ ಪ್ರಯೋಜನಗಳನ್ನು ಪಡೆದಿದ್ದಾರೆ. ಇಂದಿಗೂ ಹಲವು ಹಿರಿಯರು ತಾಮ್ರದ ಲೋಟಗಳಿಂದಲೇ ನೀರು ಕುಡಿಯುವುದನ್ನು ಬೆಂಬಲಿಸುತ್ತಾರೆ. ಆದರೆ ಯುವಜನತೆ ಕೈಗೆ ಸಿಕ್ಕಿದ ಪ್ಲಾಸ್ಟಿಕ್ ಅಥವಾ ಇತರ ಲೋಹಗಳ ಲೋಟಗಳಿಂದಲೇ ನೀರು ಕುಡಿಯುತ್ತಾರೆ. ಇಂದು ನಮ್ಮ ಹಳೆಯ ಸಂಪ್ರದಾಯಗಳು ವೈಜ್ಞಾನಿಕ ಕಾರಣಗಳಿಂದಾಗಿ…