ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಮಕೂರು, ಜು. 27- ಬಾಣಂತನಕ್ಕೆ ಹೋಗಿದ್ದ ಪತ್ನಿಯನ್ನು ಮನೆಗೆ ಕರೆಸದ ತಾಯಿ ಜತೆ ಜಗಳವಾಡಿ ಪದೇ ಪದೇ ಅವರ ಮೇಲೆ ಹಲ್ಲೆ ನಡೆಸುತ್ತಿದ್ದ ಅಣ್ಣನ ವರ್ತನೆಯಿಂದ ಕುಪಿತಗೊಂಡ ತಮ್ಮ ರಾತ್ರಿ ಅಣ್ಣನ ಕುತ್ತಿಗೆಗೆ ಚಾಕುವಿನಿಂದ ಬಲವಾಗಿ ಇರಿದು ಕೊಲೆ ಮಾಡಿರುವ ಧಾರುಣ ಘಟನೆ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ರಾಮಗೊಂಡನಹಳ್ಳಿಯ ಮಹೇಶ್ (35) ಕೊಲೆಯಾದ ದುರ್ದೈವಿಯಾಗಿದ್ದು, ಆರೋಪಿ ತಮ್ಮ ಅಂಜನಮೂರ್ತಿ ಪೊಲೀಸರ ಅತಿಥಿಯಾಗಿದ್ದಾನೆ. ಚಿಕ್ಕಹನುಮಯ್ಯ-ಗಂಗಮ್ಮ ದಂಪತಿಯ ಮೊದಲ ಮಗನಾದ ಮಹೇಶ್ ನಿಗೆ ಮದುವೆಯಾಗಿದ್ದು ಬಾಣಂತನಕ್ಕೆಂದು ಪತ್ನಿ ತನ್ನ ತವರು ಮನೆಯಾದ ಆಂಧ್ರಪ್ರದೇಶಕ್ಕೆ 8 ತಿಂಗಳ ಹಿಂದೆ ಹೋಗಿದ್ದು ವಾಪಸಾಗಿಲ್ಲ.

ಲಾರಿ ಚಾಲಕ ವೃತ್ತಿ ಮಾಡುತ್ತಿದ್ದ ಮಹೇಶ ತನ್ನ ಪತ್ನಿಯನ್ನು ಕರೆಸುವಂತೆ ತಾಯಿ ಜತೆ ಆಗಾಗ್ಗೆ ಕುಡಿದು ಬಂದು ಜಗಳವಾಡುತ್ತಿದನು. ಸಹೋದರ್ಮ ಅಂಜನಮೂರ್ತಿ ಬುದ್ದಿವಾದ ಹೇಳಿದರೂ ತನ್ನ ಚಾಳಿ ಮುಂದುವರೆಸಿದನು. ನಿನ್ನೆ ಮಧ್ಯಾಹ್ನ 3 ಗಂಟೆ ಸುಮಾರಿನಲ್ಲಿ ಕುಡಿದುಕೊಂಡು ಮನೆಗೆ ಬಂದ ಮಹೇಶ ಪತ್ನಿಯನ್ನು ಕರೆಸಿಲ್ಲ ಎಂದು ಮತ್ತೊಮ್ಮೆ ಜಗಳವಾಡಿ ತಾಯಿಗೆ ಮನಬಂದಂತೆ ಹೊಡೆದಿದ್ದಾನೆ.

ನೆರೆಮನೆಯವರು ಜಗಳ ಬಿಡಿಸಿ ಸಮಾಧಾನ ಪಡಿಸಿದ್ದಾರೆ. ಆದರೆ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಮನೆಯಿಂದ ಹೊರಗೆ ಹೋದ ಮಹೇಶ ರಾತ್ರಿ 8 ಗಂಟೆ ಸುಮಾರಿನಲ್ಲಿ ಮತ್ತೆ ಕುಡಿದು ಬಂದು ತಾಯಿಯನ್ನು ಹುಡುಕಾಡಿದ್ದಾನೆ. ಈತನ ವರ್ತನೆಯಿಂದ ಭಯಗೊಂಡ ತಾಯಿ ಮನೆಯ ಹಿಂಬದಿ ಬಚ್ಚಿಟ್ಟುಕೊಂಡಿದ್ದಾರೆ. ಕೆಲ ಸಮಯದ ನಂತರ ಮಹೇಶ ನಿದ್ರೆಗೆ ಜಾರಿದ್ದಾನೆ.ರಾತ್ರಿ 9ಗಂಟೆ ಸುಮಾರಿನಲ್ಲಿ ಎರಡನೇ ಮಗ ಅಂಜನಮೂರ್ತಿ ಮನೆಗೆ ಬಂದಾಗ ಮನೆಯಲ್ಲಿ ತಾಯಿ ಇಲ್ಲದಿರುವುದನ್ನು ಗಮನಿಸಿ ಎಲ್ಲ ಕಡೆ ಹುಡುಕಾಡಿದ್ದಾನೆ. ಮಗನ ಧ್ವನಿ ಕೇಳಿದ ಗಂಗಮ್ಮ ಬಚ್ಚಿಟ್ಟುಕೊಂಡಿದ್ದ ಸ್ಥಳದಿಂದ ಬಂದು ಮಧ್ಯಾಹ್ನ ನಡೆದ ಘಟನೆಯ ವಿವರವನ್ನು ತಿಳಿಸಿದ್ದಾರೆ.
ಅಣ್ಣನ ವರ್ತನೆ ಪ್ರತಿದಿನ ಮಿತಿಮೀರುತ್ತಿದೆ, ಎಷ್ಟು ಬುದ್ಧಿ ಹೇಳಿದರೂ ಕೇಳುವುದಿಲ್ಲ ಎಂದು ಆಕ್ರೋಶಗೊಂಡ ಅಂಜನಮೂರ್ತಿ ಅಡುಗೆಮನೆಯಲ್ಲಿದ್ದ ಚಾಕುವನ್ನು ತಂದು ಮಲಗಿದ್ದ ಅಣ್ಣನ ಮೇಲೆ ಕುಳಿತು ಕುತ್ತಿಗೆ ಕುಯ್ದು ಕೊಲೆ ಮಾಡಿ ನಂತರ ಮನೆ ಹೊರಗೆ ಕುಳಿತಿದ್ದ ತಾಯಿಗೆ ಅಣ್ಣನನ್ನು ಕೊಲೆ ಮಾಡಿರುವುದಾಗಿ ಹೇಳಿ ಅಲ್ಲಿಂದ ಪರಾರಿಯಾಗಿದ್ದಾನೆ.ಈ ಘಟನೆಯಿಂದ ಕಂಗಾಲಾದ ತಾಯಿ ಚೀರುತ್ತಾ ಮನೆಯೊಳಗೆ ಹೋಗಿದ್ದನ್ನು ಗಮನಿಸಿದ ನೆರೆಹೊರೆಯವರು ಮನೆ ಬಳಿ ಬಂದು ನೋಡಿದಾಗ ಮಹೇಶ ಕೊಲೆಯಾಗಿರುವುದುನ್ನು ಕಂಡು ತಕ್ಷಣ ಕೋರಾ ಠಾಣೆ ಪೆÇಲೀಸರಿಗೆ ವಿಷಯ ತಿಳಿಸಿದ್ದಾರೆ. ಸಬ್ ಇನ್ಸ್ಪೆಕ್ಟರ್ ಶೇಷಾದ್ರಿ ಸಿಬ್ಬಂದಿಗಳೊಂದಿಗೆ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಸ್ಥಳಕ್ಕೆ ಹೆಚ್ಚುವರಿ ಪೆÇಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ, ಡಿವೈಎಸ್ಪಿ ತಿಪ್ಪೇಸ್ವಾಮಿ, ವೃತ್ತನಿರೀಕ್ಷಕ ಮಧುಸೂಧನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಎಸ್ಪಿ ಕೋನವಂಶಿಕೃಷ್ಣ ಅವರು, ಆರೋಪಿ ಪತ್ತೆಗೆ ಡಿವೈಎಸ್ಪಿ ಮಾರ್ಗದರ್ಶನದಲ್ಲಿ ಗ್ರಾಮಾಂತರ ವೃತ್ತ ನಿರೀಕ್ಷಕ ಮಧುಸೂಧನ್, ಸಬ್ ಇನ್ಸ್ಪೆಕ್ಟರ್ ಶೇಷಾದ್ರಿ, ಸಿಬ್ಬಂದಿ ಶ್ರೀನಿವಾಸ್ ಅವರನ್ನೊಳಗೊಂಡ ವಿಶೇಷ ತಂಡ ರಚಿಸಿದ್ದರು.ಈ ತಂಡ ಆರೋಪಿ ಬಗ್ಗೆ ಮಾಹಿತಿ ಕಲೆ ಹಾಕಿದಾಗ ಈತ ಆಂಧ್ರಪ್ರದೇಶಕ್ಕೆ ಪರಾರಿಯಾಗುತ್ತಿದ್ದಾನೆಂಬ ಸುಳಿವಿನ ಮೇರೆಗೆ ತಕ್ಷಣ ಕಾರ್ಯಪ್ರವೃತ್ತರಾಗಿ ರಾತ್ರಿಯಿಡಿ ಕಾರ್ಯಾಚರಣೆ ನಡೆಸಿ ಬೆಳಗಿನ ಜಾವ ಆರೋಪಿ ಅಂಜನಮೂರ್ತಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇವರ ವಯಸ್ಸು ಇನ್ನು 20 ವರ್ಷ ದಾಟಿಲ್ಲ ಆದ್ರೆ ಇವರ ನಿತ್ಯದ ಸಂಬಳದ ಗಳಿಕೆಯ ಸುದ್ದಿ ಕೇಳಿದ್ರೆ ಅಚ್ಚರಿಪಡ್ತೀರಿ. ಯಾರು ಅಂತ ಊಹೆ ಮಾಡ್ತಿರಾ ನೋಡೋಣ..? ಅವರೇ ನೋಡಿ ನಮ್ಮ ಕಿರುತೆರೆಯ ಧಾರವಾಹಿ ನಟಿಯರು. ಅವರ ಉದ್ಯೋಗ ಬಹಳ ಕಷ್ಟ, ರಜೆ ಇರುವುದಿಲ್ಲ, ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯೋದು ಕೂಡ ಕಷ್ಟವಾಗುತ್ತದೆ. ನಮ್ಮ ಜೀವನಕ್ಕಿಂತ ಅವರ ಜೀವನ ಬಹಳ ಕಷ್ಟ.ಆದ್ರೆ ಎಲ್ಲರೂ ತಮ್ಮ ಕನಸಿನ ಜೀವನ ಮಾಡುತ್ತ, ಕೈ ತುಂಬ ಸಂಪಾದನೆ ಮಾಡುತ್ತಿದ್ದಾರೆ. ಬಹುತೇಕ ಸೆಲೆಬ್ರಿಟಿಗಳು ವಯಸ್ಸು…
ನಿಂತುಕೊಂಡು ತಿಂದರೆ ಅದರಿಂದ ನಮ್ಮ ಆರೋಗ್ಯದ ಮೇಲೆ ಯಾವ ಪರಿಣಾಮಗಳು ಬೀರಬಹುದು ಎಂದು ನಾವು ತಿಳಿದುಕೊಳ್ಳಬೇಕು. ಇಂದಿನ ಸೂಪರ್ ಫಾಸ್ಟ್ ಯುಗದಲ್ಲಿ ನಮಗೆ ಕುಳಿತುಕೊಂಡು ಆರಾಮವಾಗಿ ತಿನ್ನಲು ಪುರುಸೊತ್ತೇ ಇಲ್ಲ. ಅದು ಹೋಟೆಲ್ ಗಳಿಗೆ ಹೋದರೂ ಅಲ್ಲಿ ಕಾರ್ಮಿಕರ ಕೊರತೆಯಿಂದಾಗಿ ಸೆಲ್ಫ್ ಸರ್ವೀಸ್ ಮಾಡಿ, ನಿಂತುಕೊಂಡೇ ತಿನ್ನುವ ವ್ಯವಸ್ಥೆ ಮಾಡಿರುವರು. ಆದರೆ ನಿಂತುಕೊಂಡು ತಿನ್ನುವುದು ನಮ್ಮ ದೇಹಕ್ಕೆ ಒಳ್ಳೆಯದೇ ಅಥವಾ ಕೆಟ್ಟದೇ ಎನ್ನುವ ಪ್ರಶ್ನೆ ಮೂಡುವುದು. ಆದರೆ ನೆಲದ ಮೇಲೆ ಕುಳಿತುಕೊಂಡು, ಕಾಲುಗಳನ್ನು ಮಡಚಿಟ್ಟು ತಟ್ಟೆಯಲ್ಲಿ ಬಡಿಸಿಟ್ಟ…
ಮದುವೆ ಎಂಬುದೇ ವಿಚಿತ್ರ ನಂಟು. ಎಲ್ಲಿಯೋ ಇದ್ದ ಹುಡುಗ – ಹುಡುಗಿ ಮದುವೆ ಎಂಬ ಸಂಬಂಧ ದೊಂದಿಗೆ ಬೆಸೆಯುತ್ತದೆ. ಹುಡುಗ ಏನೋ ಸಂತಸದಲ್ಲೇ ಮದುವೆಯಾಗುತ್ತಾನೆ. ಆದರೆ
ಗರ್ಭಿಣಿಯರು ಹೆಚ್ಚಾಗಿ ಕಾಫಿ ಸೇವಿಸುವುದು ಅವರ ಆರೋಗ್ಯಕ್ಕೆ ಒಳ್ಳೆಯದಲ್ಲ. ಹೃದಯದ ಆರೋಗ್ಯಕ್ಕೂ ಇದು ಒಳ್ಳೆಯದಲ್ಲ. ದಿನಕ್ಕೊಮ್ಮೆಯೋ, ಎರಡು ಬಾರಿಯೋ ಕಾಫಿ ಸೇವಿಸಿದರೆ ಅದು ಚೈತನ್ಯ ನೀಡುವುದಲ್ಲದೆ, ಚಟುವಟಿಕೆಯಿಂದ ಇರಲು ಸಹಕರಿಸುತ್ತದೆ. ಆದರೆ ಇದೇ ಅಭ್ಯಾಸ ಅತಿಯಾಗಿ, ದಿನಕ್ಕೆ ಐದಾರು ಬಾರಿ ಅಥವಾ ಇನ್ನೂ ಹೆಚ್ಚು ಬಾರಿ ಕಾಫಿ ಸೇವಿಸುತ್ತಲೇ ಇರುವುದರಿಂದ ಶರೀರದ ಆರೋಗ್ಯ ಸಂಪೂರ್ಣ ಹದಗೆಡುವುದು ಖಂಡಿತ. ಮಾನಸಿಕ ಆರೋಗ್ಯದ ಮೇಲೂ ಇದು ಪ್ರಭಾವ ಬೀರುತ್ತದೆ ಎಂಬುದೂ ಸಹ ಇತ್ತೀಚೆಗೆ ದೃಢಪಟ್ಟಿದೆ. ಅತಿಯಾಗಿ ಕಾಫಿ ಸೇವಿಸುವ ವ್ಯಕ್ತಿ…
ಮುಂದಿನ ತಿಂಗಳಿಂದ 500 ಕಿ.ಮೀ.ಗಿಂತ ಹೆಚ್ಚು ದೂರ ಸಂಚರಿಸುವ ರೈಲುಗಳ ಪ್ರಯಾಣದ ಅವಧಿಯನ್ನು ಸ್ವಲ್ಪ ಕಡಿಮೆ ಮಾಡಲು ಭಾರತೀಯ ರೈಲ್ವೆ ನಿರ್ಧರಿಸಿದೆ ಎಂದು ಹಿರಿಯ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದಿನನಿತ್ಯ ವ್ಯಾಯಾಮ, ಡಯಟ್, ಕಟ್ಟುನಿಟ್ಟಾದ ಆಹಾರ ಮಾಡಿದರೂ ಸಹ ಬೊಜ್ಜು ಕರಗುವುದಿಲ್ಲ. ಹಲವು ಪ್ರಯತ್ನ ಮಾಡಿದರು ಕೆಲವರಿಗೆ ಬೊಜ್ಜು ಕರಗಿಸಲು ಹಾಗುವುದಿಲ್ಲ. ಆದರೆ ಕೆಲವು ಹಣ್ಣುಗಳನ್ನು ಸೇವಿಸಿದರೆ ತೂಕ ಕಡಿಮೆ ಮಾಡಬಹುದು ಎಂದು ಇತ್ತೀಚಿನ ಅಧ್ಯಯನಗಳು ತಿಳಿಸಿದೆ. ಹೌದು ನಿಮಗೆ ಇಷ್ಟವಾದ ರುಚಿಕರವಾದ ಕೆಲವು ಹಣ್ಣುಗಳಿಂದ ಬೊಜ್ಜನ್ನು ಕರಗಿಸಿ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರ ಜೊತೆಗೆ ಈ ಹಣ್ಣುಗಳಲ್ಲಿ ನಮ್ಮ ದೇಹಕ್ಕೆ ಬೇಕಾದ ಆರೋಗ್ಯಕರ ಫೈಬರ್ ಮತ್ತು ಪೋಷಕಾಂಶಗಳಿರುತ್ತವೆ. ಈಗ ನಾವು ದಿನನಿತ್ಯ ಸೇವನೆ…