ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ, ಮುಸ್ಲಿಂ ಎಂಬ ಭೇದವಿಲ್ಲದೆ ಅಯೋಧ್ಯೆಯಲ್ಲಿ ಶ್ರೀರಾಮನನ್ನು ಆರಾಧಿಸಲಾಗುತ್ತಿದೆ. ಇದಕ್ಕೆ ಅಯೋಧ್ಯೆಯ ಮುಸ್ಲಿಂ ಕುಟುಂಬವೊಂದು ಸಾಕ್ಷಿಯಾಗಿದೆ. ತಮ್ಮ ಮಗ, ಮಗಳ ಮದುವೆ ಆಮಂತ್ರಣ ಪ್ರತಿಕೆಯಲ್ಲಿ ರಾಮನ ಭಂಟ ಹನುಮನ ಚಿತ್ರವನ್ನು ಮುದ್ರಿಸಿ ಕುಟುಂಬ ಭಕ್ತಿ ಮೆರೆದಿದೆ.

ಹೌದು. ಉತ್ತರ ಪ್ರದೇಶ ಚಾರೇರ ಗ್ರಾಮದ ಮುಸ್ಲಿಂ ಕುಟುಂಬ ಶ್ರೀರಾಮನ ಬಂಟ ಹನುಮನ ಚಿತ್ರವುಳ್ಳ ಕ್ಯಾಲೆಂಡರ್ ಒಂದನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿದೆ. ಅಷ್ಟೇ ಅಲ್ಲದೆ ಈ ಪತ್ರಿಕೆಯಲ್ಲಿ ಬ್ರಹ್ಮ, ವಿಷ್ಣು, ಶಿವ ಹಾಗೂ ನಾರದರ ಚಿತ್ರವನ್ನೂ ಕೂಡ ಕುಟುಂಬ ಮುದ್ರಿಸಿದೆ. ರಸೂಲಾಬಾದ್ನ ಹೋಮಿಯೋಪತಿ ಆಸ್ಪತ್ರೆಯಲ್ಲಿ ವಾರ್ಡ್ ಬಾಯ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಮೊಹಮ್ಮದ್ ಮುಬೀನ್ ಅವರು ತಮ್ಮ ಮಗ ಮತ್ತು ಮಗಳು ಲಗ್ನ ಪತ್ರಿಕೆಯಲ್ಲಿ ಹಿಂದೂ ದೇವರ ಚಿತ್ರ ಮುದ್ರಿಸಿದ್ದಾರೆ. ಮುಬೀನ್ ಅವರ ಮಗ ಮೊಹಮದ್ ನಸೀರ್ ಹಾಗೂ ಮಗಳು ಅಮೀನಾ ಬಾನೋ ಅವರ ಮದುವೆ ನಡೆಯಲಿದೆ. ಶುಕ್ರವಾರ ನಸೀರ್ ಮದುವೆಯಾದರೆ, ರವಿವಾರದಂದು ಅಮೀನಾ ಮದುವೆ ನಡೆಯಲಿದೆ. ಹೀಗಾಗಿ ಮುಬೀನ್ ಅವರು ತಮ್ಮ ಮಕ್ಕಳ ಮದುವೆಗೆ ಹಿಂದೂ ದೇವರುಗಳುಳ್ಳ ವಿಶೇಷ ಲಗ್ನ ಪತ್ರಿಕೆ ಮುದ್ರಿಸಿದ್ದಾರೆ.
ಈಗಾಗಲೇ 700 ಮಂದಿಗೆ ಲಗ್ನ ಪತ್ರಿಕೆ ಹಂಚಿದ್ದೇನೆ. ಹಿಂದೂ ಮಿತ್ರರಿಗೂ ಲಗ್ನ ಪತ್ರಿಕೆ ಹಂಚಿ ಮದುವೆಗೆ ಕರೆದಿದ್ದೇನೆ. ಯಾರೂ ಕೂಡ ಈವರೆಗೆ ಇದಕ್ಕೆ ವಿರೋಧಿಸಿಲ್ಲ. ನನ್ನ ಸಂಬಂಧಿಕರು ಕೂಡ ಇದಕ್ಕೆ ವಿರೋಧ ವ್ಯಕ್ತಪಡಿಸಿಲ್ಲ. ಮಕ್ಕಳು ಕೂಡ ಖುಷಿಯಿಂದ ಲಗ್ನ ಪತ್ರಿಕೆಯನ್ನು ಒಪ್ಪಿದ್ದಾರೆ. ಎಲ್ಲರೂ ಇದು ಒಳ್ಳೆಯ ವಿಚಾರ ಎಂದು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ ಎಂದು ಖುಷಿಯಿಂದ ಮುಬೀನ್ ಹೇಳಿದ್ದಾರೆ.
ಹಿಂದೂಗಳು ಮತ್ತು ಮುಸ್ಲಿಮರು ಯಾವಾಗಲೂ ಇಲ್ಲಿ ಪರಿಪೂರ್ಣ ಸಾಮರಸ್ಯದಿಂದ ವಾಸಿಸುತ್ತಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಕುಟುಂಬ, ನಮ್ಮ ಅಲ್ಲಾಹುವಿನ ಮೇಲೆ ನಮಗೆ ಎಷ್ಟು ನಂಬಿಕೆ ಇದೆಯೋ ಅಷ್ಟೇ ನಂಬಿಕೆ ಹಿಂದೂ ದೇವ, ದೇವತೆಯರ ಮೇಲಿದೆ ಎಂದು ಹೇಳಿ ಎಲ್ಲರ ಮನ ಗೆದ್ದಿದ್ದಾರೆ.
ಮುಬೀನ್ ಅವರು ಈ ಬಗ್ಗೆ ಮಾತನಾಡಿ, ಲಗ್ನ ಪತ್ರಿಕೆ ಮುದ್ರಿಸುವ ವಿಚಾರದಲ್ಲಿ ಯಾರೂ ನನ್ನ ಮೇಲೆ ಒತ್ತಡ ಹೇರಿರಲಿಲ್ಲ. ಕುಟುಂಬ ಸದಸ್ಯರ ಅನುಮತಿ, ಅಭಿಪ್ರಾಯ ಪಡೆದು ನಾನು ಪತ್ರಿಕೆ ಆಯ್ಕೆ ಮಾಡಿದ್ದೇನೆ ಎಂದಿದ್ದಾರೆ. ಈ ಸಾಮರಸ್ಯ ಎರಡು ಸಮುದಾಯಗಳ ನಡುವಿನ ಬಾಂಧವ್ಯವನ್ನು ಬಲಪಡಿಸಿದೆ ಎಂದು ಸ್ಥಳೀಯರೊಬ್ಬರು ಮುಬೀನ್ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಸಿನಿಮಾ ಯಾರಿಗೇನು ಕಡಿಮೆ ಇಲ್ಲದಂತೆ ಒಂದರ ಮೇಲೊಂದು ಹಿಟ್ ಆಗುತ್ತಲೇ ಇವೆ.. ಕಿರಿಕ್ ಪಾರ್ಟಿ, ರಾಜಕುಮಾರ, ಹೆಬ್ಬುಲಿ, ತಾರಕ್, ಈಗ ಇದೇ ಲಿಸ್ಟ್ ಗೆ ಸೇರ್ಪಡೆಯಾಗಲು ಯೂತ್ಸ್ ಸಿನಿಮಾ #ಕಾಲೇಜ್ ಕುಮಾರ್ ಬರುತ್ತಿದೆ.
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಸರಿಗಮಪ’ ಗ್ರಾಂಡ್ ಫಿನಾಲೆಯಲ್ಲಿ ಮಂಗಳೂರಿನ ಕೀರ್ತನ್ ಹೊಳ್ಳ ವಿನ್ನರ್ ಆಗಿದ್ದಾರೆ. ಹಾವೇರಿಯ ಚೀಲೂರು ಬಡ್ನಿ ತಾಂಡಾದ ಹನುಮಂತ ಅವರು ರನ್ನರ್ ಆಗಿದ್ದಾರೆ.ಕೀರ್ತನ್ ಹೊಳ್ಳ ಆರಂಭದಿಂದಲೂ ಅದ್ಭುತವಾಗಿ ಹಾಡುವ ಮೂಲಕ ಜಡ್ಜಸ್ ಗಳು ಹಾಗೂ ಮಹಾಗುರುಗಳ ಮೆಚ್ಚುಗೆ ಗಳಿಸಿದ್ದರು. ಅದೇ ರೀತಿ ಹನುಮಂತ ತಮ್ಮ ಮುಗ್ಧತೆಯಿಂದಲೇ ಜನಪ್ರಿಯರಾಗಿದ್ದರು. ಶನಿವಾರ ನಡೆದ ಗ್ರಾಂಡ್ ಫಿನಾಲೆಯಲ್ಲಿ ನಿಹಾಲ್ ತಾವ್ರೊ, ಹನುಮಂತ, ಕೀರ್ತನ ಹೊಳ್ಳ, ವಿಜೇತ್, ಹೃತ್ವಿಕ್ ಹಾಗೂ ಸಾಧ್ವಿನಿ ಅವರು ಫಿನಾಲೆಗೆ ಎಂಟ್ರಿ ಕೊಟ್ಟಿದ್ದರು. ಅವರಲ್ಲಿ…
ಫೇಸ್ಬುಕ್ನಲ್ಲಿ ಪ್ರೊಫೈಲ್ ಚಿತ್ರವನ್ನು ನಾವು ಹಾಕುವುದಕ್ಕೆ ಮುಂಚೆ ಹಿಂಜರಿಯುವುದು ಸಹಜ.ನಿಮಗೆಲ್ಲಾ ಗೊತ್ತಿರುವ ಹಾಗೆ ಕೆಲವರು ಪ್ರೊಫೈಲ್ ಫೋಟೋಗಳನ್ನು ದುರುಪಯೋಗ ಮಾಡಿಕೊಳ್ಳುವ ತುಂಬಾ ಘಟನೆಗಳು ನಡೆಯುತ್ತಿರುತ್ತವೆ.
ಕೊರೊನಾ ಹಿನ್ನೆಲೆಯಲ್ಲಿ ಲಾಕ್ಡೌನ್ ಶುರುವಾದಾಗಿನಿಂದ ಒಡಿಶಾದ ಸುಮಾರು 177 ಯುವತಿಯರು ಕೇರಳದಲ್ಲಿ ಸಿಲುಕಿಕೊಂಡಿದ್ದರು. ಅಂದಿನಿಂದ ಯುವತಿಯರು ತಮ್ಮ ಊರಿಗೆ ಹೋಗಲು ಯಾವುದೇ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದರು. ಈ ಯುವತಿಯ ಬಗ್ಗೆ ಭುವನೇಶ್ವರದಲ್ಲಿರುವ ಸ್ನೇಹಿತರೊಬ್ಬರ ಮೂಲಕ ಸೋನು ಸೂದ್ ತಿಳಿದುಕೊಂಡಿದ್ದರು. ತಕ್ಷಣ ಯುವತಿಗೆ ಸಹಾಯ ಮಾಡಲು ಮುಂದಾಗಿದ್ದು, ನಂತರ ವಿಮಾನ ನಿಲ್ದಾಣಗಳನ್ನು ತೆರೆಯಲು ಕೇರಳ ಮತ್ತು ಒಡಿಶಾ ಸರ್ಕಾರಗಳಿಂದ ಅನೇಕ ಅನುಮತಿಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ಸೋನು ಸೂದ್ ಯುವತಿಯರ ರಕ್ಷಣೆ ಮಾಡಿದ್ದು, ಅಲ್ಲಿಂದ ಅವರನ್ನು ವೈಮಾನಿಕ ಮಾರ್ಗದ ಮೂಲಕ…
ಬೆಂಗಳೂರು:ಗೃಹಜ್ಯೋತಿ ಯೋಜನೆ ಜಾರಿಗೆ ಎಲ್ಲಾ ಸಿದ್ದತೆ ಕೈಗೊಳ್ಳಲಾಗಿದ್ದು, ಒಟ್ಟು ಅಂದಾಜು ಸರಾಸರಿ 13ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು. ಬೆಸ್ಕಾಂ ಕಚೇರಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಗೃಹಬಳಕೆದಾರರ ಸರಾಸರಿ ಒಂದು ವರ್ಷದ ವಿದ್ಯುತ್ ಬಳಕೆಯ ಪ್ರಮಾಣವನ್ನು ಪಡೆದುಕೊಂಡ ಬಳಿಕ ಉಚಿತವಾಗಿ ವಿದ್ಯುತ್ ಪ್ರಮಾಣವನ್ನು ನಿಗದಿಪಡಿಸಲಾಗುವುದು ಎಂದು ತಿಳಿಸಿದರು. ರಾಜ್ಯದಲ್ಲಿಒಟ್ಟು 2.16 ಕೋಟಿ ಗ್ರಾಹಕರಿದ್ದು, ಈ ಪೈಕಿ 200 ಯೂನಿಟ್…
ಭಗವಾನ್ ಮಹಾವಿಷ್ಣುವಿನ ಎ೦ಟನೆಯ ಅವತಾರವಾಗಿ ಶ್ರೀ ಕೃಷ್ಣನು ಅ೦ದು ರೋಹಿಣಿ ನಕ್ಷತ್ರದಲ್ಲಿ ಚ೦ದ್ರೋದಯ ಸಮಯದಲ್ಲಿ ಮಥುರಾದ ವಸುದೇವ ಮತ್ತು ದೇವಕಿಯರ ಮಗನಾಗಿ ಜನಿಸಿದ. ಅ೦ತೆಯೇ ಮಧ್ಯರಾತ್ರಿಯಲ್ಲಿ ಶ್ರೀ ಕೃಷ್ಣ ದೇವಾಲಯಗಳಲ್ಲಿ ಶ್ರೀ ಕೃಷ್ಣನ ಜನನದ ಅ೦ಗವಾಗಿ ವಿಶೇಷ ಪೂಜೆ, ಪುನಸ್ಕಾರ, ಅಭಿಷೇಕ ಹಾಗೂ ಧಾರ್ಮಿಕ ಪ್ರವಚನಗಳು ಜರುಗುತ್ತವೆ