ಸುದ್ದಿ

ಶ್ರೀರಾಮನ ಬಂಟ ಹನುಮನನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿ ಭಕ್ತಿ ಮೆರೆದ ಅಯೋಧ್ಯೆಯ ಮುಸ್ಲಿಂ ಕುಟುಂಬ.

80

ಹಿಂದೂ, ಮುಸ್ಲಿಂ ಎಂಬ ಭೇದವಿಲ್ಲದೆ ಅಯೋಧ್ಯೆಯಲ್ಲಿ ಶ್ರೀರಾಮನನ್ನು ಆರಾಧಿಸಲಾಗುತ್ತಿದೆ. ಇದಕ್ಕೆ ಅಯೋಧ್ಯೆಯ ಮುಸ್ಲಿಂ ಕುಟುಂಬವೊಂದು ಸಾಕ್ಷಿಯಾಗಿದೆ. ತಮ್ಮ ಮಗ, ಮಗಳ ಮದುವೆ ಆಮಂತ್ರಣ ಪ್ರತಿಕೆಯಲ್ಲಿ ರಾಮನ ಭಂಟ ಹನುಮನ ಚಿತ್ರವನ್ನು ಮುದ್ರಿಸಿ ಕುಟುಂಬ ಭಕ್ತಿ ಮೆರೆದಿದೆ.

ಹೌದು. ಉತ್ತರ ಪ್ರದೇಶ ಚಾರೇರ ಗ್ರಾಮದ ಮುಸ್ಲಿಂ ಕುಟುಂಬ ಶ್ರೀರಾಮನ ಬಂಟ ಹನುಮನ ಚಿತ್ರವುಳ್ಳ ಕ್ಯಾಲೆಂಡರ್ ಒಂದನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿದೆ. ಅಷ್ಟೇ ಅಲ್ಲದೆ ಈ ಪತ್ರಿಕೆಯಲ್ಲಿ ಬ್ರಹ್ಮ, ವಿಷ್ಣು, ಶಿವ ಹಾಗೂ ನಾರದರ ಚಿತ್ರವನ್ನೂ ಕೂಡ ಕುಟುಂಬ ಮುದ್ರಿಸಿದೆ. ರಸೂಲಾಬಾದ್‍ನ ಹೋಮಿಯೋಪತಿ ಆಸ್ಪತ್ರೆಯಲ್ಲಿ ವಾರ್ಡ್ ಬಾಯ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಮೊಹಮ್ಮದ್ ಮುಬೀನ್ ಅವರು ತಮ್ಮ ಮಗ ಮತ್ತು ಮಗಳು ಲಗ್ನ ಪತ್ರಿಕೆಯಲ್ಲಿ ಹಿಂದೂ ದೇವರ ಚಿತ್ರ ಮುದ್ರಿಸಿದ್ದಾರೆ. ಮುಬೀನ್ ಅವರ ಮಗ ಮೊಹಮದ್ ನಸೀರ್ ಹಾಗೂ ಮಗಳು ಅಮೀನಾ ಬಾನೋ ಅವರ ಮದುವೆ ನಡೆಯಲಿದೆ. ಶುಕ್ರವಾರ ನಸೀರ್ ಮದುವೆಯಾದರೆ, ರವಿವಾರದಂದು ಅಮೀನಾ ಮದುವೆ ನಡೆಯಲಿದೆ. ಹೀಗಾಗಿ ಮುಬೀನ್ ಅವರು ತಮ್ಮ ಮಕ್ಕಳ ಮದುವೆಗೆ ಹಿಂದೂ ದೇವರುಗಳುಳ್ಳ ವಿಶೇಷ ಲಗ್ನ ಪತ್ರಿಕೆ ಮುದ್ರಿಸಿದ್ದಾರೆ.

ಈಗಾಗಲೇ 700 ಮಂದಿಗೆ ಲಗ್ನ ಪತ್ರಿಕೆ ಹಂಚಿದ್ದೇನೆ. ಹಿಂದೂ ಮಿತ್ರರಿಗೂ ಲಗ್ನ ಪತ್ರಿಕೆ ಹಂಚಿ ಮದುವೆಗೆ ಕರೆದಿದ್ದೇನೆ. ಯಾರೂ ಕೂಡ ಈವರೆಗೆ ಇದಕ್ಕೆ ವಿರೋಧಿಸಿಲ್ಲ. ನನ್ನ ಸಂಬಂಧಿಕರು ಕೂಡ ಇದಕ್ಕೆ ವಿರೋಧ ವ್ಯಕ್ತಪಡಿಸಿಲ್ಲ. ಮಕ್ಕಳು ಕೂಡ ಖುಷಿಯಿಂದ ಲಗ್ನ ಪತ್ರಿಕೆಯನ್ನು ಒಪ್ಪಿದ್ದಾರೆ. ಎಲ್ಲರೂ ಇದು ಒಳ್ಳೆಯ ವಿಚಾರ ಎಂದು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ ಎಂದು ಖುಷಿಯಿಂದ ಮುಬೀನ್ ಹೇಳಿದ್ದಾರೆ. 
ಹಿಂದೂಗಳು ಮತ್ತು ಮುಸ್ಲಿಮರು ಯಾವಾಗಲೂ ಇಲ್ಲಿ ಪರಿಪೂರ್ಣ ಸಾಮರಸ್ಯದಿಂದ ವಾಸಿಸುತ್ತಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಕುಟುಂಬ, ನಮ್ಮ ಅಲ್ಲಾಹುವಿನ ಮೇಲೆ ನಮಗೆ ಎಷ್ಟು ನಂಬಿಕೆ ಇದೆಯೋ ಅಷ್ಟೇ ನಂಬಿಕೆ ಹಿಂದೂ ದೇವ, ದೇವತೆಯರ ಮೇಲಿದೆ ಎಂದು ಹೇಳಿ ಎಲ್ಲರ ಮನ ಗೆದ್ದಿದ್ದಾರೆ. 
ಮುಬೀನ್ ಅವರು ಈ ಬಗ್ಗೆ ಮಾತನಾಡಿ, ಲಗ್ನ ಪತ್ರಿಕೆ ಮುದ್ರಿಸುವ ವಿಚಾರದಲ್ಲಿ ಯಾರೂ ನನ್ನ ಮೇಲೆ ಒತ್ತಡ ಹೇರಿರಲಿಲ್ಲ. ಕುಟುಂಬ ಸದಸ್ಯರ ಅನುಮತಿ, ಅಭಿಪ್ರಾಯ ಪಡೆದು ನಾನು ಪತ್ರಿಕೆ ಆಯ್ಕೆ ಮಾಡಿದ್ದೇನೆ ಎಂದಿದ್ದಾರೆ. ಈ ಸಾಮರಸ್ಯ ಎರಡು ಸಮುದಾಯಗಳ ನಡುವಿನ ಬಾಂಧವ್ಯವನ್ನು ಬಲಪಡಿಸಿದೆ ಎಂದು ಸ್ಥಳೀಯರೊಬ್ಬರು ಮುಬೀನ್ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕರ್ನಾಟಕ

    ನೋಡಿ, ನಮ್ಮ ರೈತರು ಮನಸ್ಸು ಮಾಡಿದ್ರೆ, ತೋಟದಿಂದ ಹೀಗೂ ಹಣ ಮಾಡಬಹುದು! ಹೇಗಂತೀರಾ?ಈ ಲೇಖನಿ ಓದಿ…

    ಸೆಲ್ಫಿ ಫೋಟೋ, ಇದರ ಬಗ್ಗೆ ನಿಮಗೆ ಹೇಳೋ ಅವಶ್ಯಕತೆಯಿಲ್ಲ. ಇವತ್ತಿನ ದಿನಗಳಲ್ಲಿ ಅಸ್ಟೊಂದು ಕ್ರೇಜ್ ಆಗಿದೆ ಈ ಸೆಲ್ಫಿ. ಅದರಲ್ಲೂ ಈ ನಮ್ಮ ಯುವ ಸುಮೂಹದಲ್ಲಿ ಹೆಚ್ಚಾಗಿದೆ. ಎಲ್ಲಿ ಚೆಂದ ಕಾಣುತ್ತೋ ಅಲ್ಲಿ ಸೆಲ್ಫಿ ಫೋಟೋ ತೆಗೆದುಕೊಳ್ಳತಾರೆ.
    ಎಲ್ಲಿ ನೋಡಿದರು ಸೆಲ್ಫಿ ಸೆಲ್ಫಿ ಅದರಲ್ಲೂ ಚಂದ ಚಿಹ್ನದ ಕಾಣುವ ಹೊಲದಲ್ಲಿ ಗಿಡ ಮರಗಳ ಮದ್ಯೆ ಹೀಗೆ ಎಲ್ಲಿ ಅಂದರೆ ಅಲ್ಲಿ ಸೆಲ್ಫಿ ಕ್ರೇಜ್.

  • ಆರೋಗ್ಯ

    ವೀಳ್ಯದೆಲೆ ಸೇವಿಸುವುದರಿಂದ ಆಗುವ ಉಪಯೋಗಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ವೀಳ್ಯದೆಲೆ ಸೇವಸುವುದು ಹಳೆ ಕಾಲದವರು ಎಂದು ಬಹಳ ಮಂದಿ ಮೂಗು ಮುರಿಯಬಹುದು. ಆದರೆ ಅಂತಹವರು ವೀಳ್ಯದೆಲೆಯಲ್ಲಿ ಇಷ್ಟೊಂದು ಆರೋಗ್ಯ ವೃದ್ಧಿಸುವು ಅಂಶಗಳು ಇವೆ ಎಂದು ತಿಳಿದರೆ ಆಶ್ಚರ್ಯ ಮಾಡುತ್ತಾರೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ಹಾರ್ಟ್ ಅಟ್ಯಾಕ್ ಆದ 5 ನಿಮಿಷದ ಒಳಗಡೆ ಈ ಕೆಲಸ ಮಾಡಿದ್ರೆ ಆ ವ್ಯಕ್ತಿ ಬದುಕುವ ಸಾಧ್ಯತೆ ಹೆಚ್ಚು…

    ಮನುಧ್ಯನಿಗೆ ಆರೋಗ್ಯವೇ ಮಹಾ ಭಾಗ್ಯ ಎಂದು ಹೇಳಲಾಗುತ್ತೆ. ಆದ್ರೆ ಅಂತಹ ಆರೋಗ್ಯದ ಬಗ್ಗೆ ನಾವು ನಿರ್ಲಕ್ಷ್ಯ ಮಾಡಲೇಬಾರದು.ಅದರಲ್ಲೂ ಕೆಲವೊಂದು ಕಾಯಿಲೆಗಳ ಬಗ್ಗೆ ಎಚ್ಚರಿಕೆ ಇರಲೇಬೇಕು.ಹೃದಯಾಘಾತದಂತಹ ಅಪಾಯಕಾರಿ ರೋಗಗಳ ಬಗ್ಗೆ ಸದಾ ಎಚ್ಚರಕೆ ಇಂದ ಇರಲೇ ಬೇಕು. ಆದರೆ ಅನೇಕರಿಗೆ ಯಾವುದೇ ಮನುಷ್ಯನಿಗೆ ಹಾರ್ಟ್ ಅಟ್ಯಾಕ್ ಆದ ಕೂಡಲೇ ಪ್ರಥಮ ಚಿಕಿತ್ಸೆಯಾಗಿ ಏನು ಮಾಡಬೇಕು ಎಂದು ಗೊತ್ತಿರುವುದಿಲ್ಲ. ಗೊತ್ತಿದ್ದರೂ ಗಾಬರಿಯಿಂದ ಮಾಡಲು ಹೋಗುವುದಿಲ್ಲ.ಆದರೆ ಹೃದಯಾಘಾತವಾದ ಐದು ನಿಮಿಷದೊಳಗೆ ಈ ಕೆಲಸ ಮಾಡಿದ್ರೆ ಮನುಷ್ಯ ಬದುಕುವ ಸಾಧ್ಯತೆ ಹೆಚ್ಚಿರುತ್ತದೆ. *ಹಾರ್ಟ್…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಮಂಗಳವಾಗಿದೆಯೇ ನೋಡಿ ತಿಳಿಯಿರಿ…ಶೇರ್ ಮಾಡಿ

    ಮಂಗಳವಾರ, 24/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅನಿರೀಕ್ಷಿತ ಸಂಚಾರ. ಹೂವು ವ್ಯಾಪಾರಿಗಳಿಗೆ ಲಾಭ.ನಿರುದ್ಯೋಗಿಗಳಿಗೆ ಶುಭವಾರ್ತೆ. ಬಂದುಗಳ ಆಗಮನ. ಜೀವನದಲ್ಲಿ ಹೆಚ್ಚು ಧನಾತ್ಮಕ ಬದಲಾವಣೆಗಳನ್ನು ಪಡೆಯುತ್ತೀರಿ. ವೃಷಭ:- ಮನೆಯಲ್ಲಿ ದೇವತಾಕಾರ್ಯಗಳು ನಡೆಯಲಿವೆ. ಮನೆಯವರ ಹಾಗೂ ಸ್ನೇಹಿತರ ಸಹಕಾರ ಇರಲಿದೆ. ಹಣಕಾಸಿನ ವಿಷಯದಲ್ಲಿ  ಜಾಗ್ರತೆ ಇರಲಿ.ನಿಮ್ಮ ಹಣದ ಖರ್ಚಿನ ಬಗ್ಗೆ ಜಾಗ್ರತೆ ಇರಲಿ. ದೀರ್ಘ ಪ್ರಯಾಣ ಅನುಕೂಲಕರವಾಗಿರುತ್ತದೆ.ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಮಿಥುನ:– ವ್ಯಾಪಾರ, ವ್ಯವಹಾರಗಳಲ್ಲಿ ಅಧಿಕ ಆದಾಯ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ವೃತ್ತಿರಂಗದಲ್ಲಿ…

  • inspirational

    ನಟ ನಾಗಾರ್ಜುನ ಫಾರ್ಮ್ ಹೌಸ್‍ನಲ್ಲಿ ಪತ್ತೆಯಾದ ಅಸ್ಥಿಪಂಜರ….!

    ಟಾಲಿವುಡ್ ನಟ ನಾಗಾರ್ಜುನ ಅಕ್ಕಿನೇನಿ ಅವರ ಫಾರ್ಮ್ ಹೌಸ್‍ನಲ್ಲಿ ವ್ಯಕ್ತಿಯ ಅಸ್ಥಿಪಂಜರ ಪತ್ತೆಯಾಗಿದೆ.ಪಾಪಿರೆಡ್ಡಿಗುಡ್ಡ ಗ್ರಾಮದಲ್ಲಿ ನಾಗಾರ್ಜುನ ಅವರ 40 ಎಕರೆ ಜಮೀನಿದೆ. ಸುಮಾರು ದಿನಗಳಿಂದ ಈ ಜಮೀನ್ ಅನ್ನು ಉಪಯೋಗಿಸುತ್ತಿರಲಿಲ್ಲ. ಆದರೆ ಈಗ ಇದೇ ಜಮೀನಿನಲ್ಲಿ ಸಿಕ್ಕ ಅಜ್ಞಾತ ಶವವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪೊಲೀಸರ ಪ್ರಕಾರ 40 ಎಕರೆ ಜಮೀನಿನಲ್ಲಿ ನಾಗಾರ್ಜುನ ಪತ್ನಿ ಅಮಲಾ ಅವರು ಕೃಷಿ ಮಾಡುವ ಆಸಕ್ತಿ ವಹಿಸಿದ್ದರು. ಹೀಗಾಗಿ ಅವರು ಕೆಲಸಗಾರರನ್ನು ಜಮೀನಿಗೆ ಕಳುಹಿಸಿ ಭೂಮಿ ಸಿದ್ಧಪಡಿಸಲು ಹೇಳಿದ್ದರು. ಕೆಲಸಗಾರರು ಜಮೀನು ಸಿದ್ಧಪಡಿಸಲು…

  • ಸಿನಿಮಾ

    ಸ್ಯಾಂಡಲ್ ವುಡ್ ಗೆ ಬರಲಿದ್ದಾರೆ ‘ಪ್ರೇಮಂ’ ಬೆಡಗಿ ‘ಸಾಯಿಪಲ್ಲವಿ’..!ತಿಳಿಯಲು ಈ ಲೇಖನ ಓದಿ …

    ‘ಸಾಯಿಪಲ್ಲವಿ’ಯನ್ನ ಸ್ಯಾಂಡಲ್ ವುಡ್ ಸಿನಿಮಾಗಾಗಿ ಕರೆತರಲು ಸಿನಿಮಾ ತಂಡವೊಂದು ಸಜ್ಜಾಗಿದೆ. ಚಿತ್ರತಂಡ ‘ಪ್ರಜ್ವಲ್ ದೇವರಾಜ್’ ಜೊತೆಯಲ್ಲಿ ‘ಪ್ರೇಮಂ’ ಬೆಡಗಿಯನ್ನ ಜೋಡಿ ಮಾಡಲು ಸಿದ್ದತೆ ನಡೆಸಿದೆ.