ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದ ಹಲವಾರು ಆಚರಣೆಗಳು, ಸಂಪ್ರದಾಯಗಳನ್ನು ಮೂಢನಂಬಿಕೆಯೆಂದು ಜರಿಯುವವರು ಹಲವು. ಆದರೆ, ವಿಜ್ಞಾನ ಮುಂದುವರಿದಂತೆಲ್ಲ ಈ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆ ದೊರೆಯುತ್ತ ಹೋಗುತ್ತಿದೆ.ಈ ವೈಜ್ಞಾನಿಕ ಜ್ಞಾನವನ್ನೇ ಸಂಪ್ರದಾಯದ ಹೆಸರಿನಲ್ಲಿ ತಲೆಮಾರಿನಿಂದ ತಲೆಮಾರಿಗೆ ಹರಿಯಬಿಡಲಾಗಿದೆ ಸಾಮಾನ್ಯ ಜನರಿಗೆ ಈ ಆಚರಣೆಗಳ ಹಿಂದಿನ ವಿಜ್ಞಾನದ ಅರಿವು ಇಲ್ಲವಾದರೂ, ಅವರಿದನ್ನು ನಂಬಿಕೆಯ ತಳಹದಿ ಮೇಲೆ ಸಾವಿರಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ. ಅಂಥ ಕೆಲವು ಆಚರಣೆಗಳು ಹಾಗೂ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆಗಳನ್ನಿಲ್ಲಿ ಕೊಡಲಾಗಿದೆ.
ನಾಣ್ಯಗಳನ್ನು ನದಿಗೆಸೆಯುವುದು : ನಾಣ್ಯಗಳನ್ನುದೇವಸ್ಥಾನದ ಸಮೀಪದ ಕಲ್ಯಾಣಿಗೆ, ಕೆರೆಗೆ, ನದಿಗೆ ಎಸೆಯುವುದರಿಂದ ಅದೃಷ್ಟಒಲಿಯುತ್ತದೆ ಎಂಬ ನಂಬಿಕೆ ಇದೆ. ಇದೇ ನಂಬಿಕೆ ಮೇಲೆ ಈಗಲೂ ಹಲವರು ಹೀಗೆ ನಾಣ್ಯಗಳನ್ನು ಕಲ್ಯಾಣಿಗೆಸೆಯುವುದನ್ನುಕಾಣಬಹುದು .ಆದರೆ, ಹೀಗೆ ಸಾವಿರಾರು ಕೈಗಳನ್ನು ದಾಟಿ ಬ್ಯಾಕ್ಟೀರಿಯಾಗಳ ಆಗರವಾಗಿರುವ ನಾಣ್ಯಗಳನ್ನು ನೀರಿಗೆಸೆದು, ನೀರನ್ನು ಮಲಿನಗೊಳಿಸಲಾಗುತ್ತಿದೆ ಎಂಬ ಆರೋಪ ಇದಕ್ಕಿದೆ.
ಆದರೆ, ಈ ಅಭ್ಯಾಸ ಶುರುವಾದದ್ದು ಹೀಗಲ್ಲ,ಹಿಂದಿನ ಕಾಲದಲ್ಲಿ ತಾಮ್ರದ ನಾಣ್ಯಗಳನ್ನು ಬಳಸಲಾಗುತ್ತಿತ್ತು.ಈ ಕಾಪರ್ ಮನುಷ್ಯನ ದೇಹಕ್ಕೆ ಬಹಳಷ್ಟು ಆರೋಗ್ಯ ಲಾಭಗಳನ್ನು ತಂದುಕೊಡುತ್ತದೆ. ಅದೇಕಾರಣಕ್ಕೆ ಈಗೀಗ ಎಲ್ಲರೂ ಕಾಪರ್ ಬಾಟಲ್, ಲೋಟಗಳನ್ನು ಬಳಸುವುದು ಟ್ರೆಂಡ್ ಕೂಡಾ ಆಗಿದೆ ಹೀಗೆ ಕಾಪರ್ ನಾಣ್ಯಗಳನ್ನು ನೀರಿಗೆಹಾಕಿ, ನಂತರದಲ್ಲಿ ಆ ನೀರಿನ ಸೇವನೆಯಿಂದ ಮನುಷ್ಯನ ದೇಹಕ್ಕೆ ಅಗತ್ಯವಿರುವಷ್ಟು ಕಾಪರ್ಸೇರಿಸುವುದು ಹಿರಿಯರ ಉದ್ದೇಶವಾಗಿತ್ತು. ಆಗನದಿಯ ನೀರು ಮಾತ್ರ ಕುಡಿಯುವ ನೀರಿನ ಮೂಲವಾಗಿತ್ತು. ಇದನ್ನುದೇವರ ಹೆಸರಿನಲ್ಲೊಂದು ಆಚರಣೆಯಾಗಿಸಿದರೆ,ಎಲ್ಲರೂ ಈ ಮಾರ್ಗ ಅನುಸರಿಸುತ್ತಾರೆ, ಎಲ್ಲರಿಗೂಅಗತ್ಯವಾದ ಕಾಪರ್ ದೊರೆಯುತ್ತದೆ ಎಂಬುದುಈ ಆಚರಣೆ ಹಿಂದಿನ ಉದ್ದೇಶ.
ಯಾರನ್ನಾದರೂ ನೋಡಿದೊಡನೆ ನಮಸ್ಕರಿಸುವುದು : ಹಿಂದೂಸಂಸ್ಕೃತಿಯಲ್ಲಿ ಜನರು ಮತ್ತೊಬ್ಬರನ್ನು ಭೇಟಿಯಾದಕೂಡಲೇ ಎರಡೂ ಕೈ ಜೋಡಿಸಿ ನಮಸ್ಕರಿಸುವುದು ಪದ್ಧತಿಸಾಮಾನ್ಯವಾಗಿ ಹೀಗೆ ನಮಸ್ಕರಿಸುವುದು ಗೌರವಿಸುವಪ್ರತೀಕ ಎಂಬ ನಂಬಿಕೆಯಿದೆ. ಆದರೆ, ವೈಜ್ಞಾನಿಕವಾಗಿ ಹೇಳಬೇಕೆಂದರೆಹೀಗೆಕೈ ಜೋಡಿಸಿದಾಗ ಎರಡೂ ಕೈಗಳ ಎಲ್ಲ ಬೆರಳುಗಳೂ ಪ್ರೆಸ್ ಆಗುತ್ತವೆ. ಎಲ್ಲ ಬೆರಳುಗಳ ತುದಿಯಲ್ಲಿ ನರತಂತುಗಳಿವೆ. ಇವುಕಣ್ಣು, ಕಿವಿ, ಮನಸ್ಸಿನ ಪ್ರೆಶರ್ ಪಾಯಿಂಟ್ಗಳು.
ಕಾಲುಂಗುರ ಧರಿಸುವುದು : ಹೆಂಗಸಿಗೆ ಮದುವೆಯಾಗಿದೆ ಎಂಬುದನ್ನುಸೂಚಿಸಲು ಆಕೆ ಕಾಲುಂಗುರ ಧರಿಸಬೇಕೆಂದು ನಾವುನಂಬಿದ್ದೇವೆ. ಆದರೆ ಈಆಚರಣೆ ಜಾರಿಗೆ ತಂದ ಹಿಂದೆ ಬೇರೆ ಸದುದ್ದೇಶವಿದೆ. ಸಾಮಾನ್ಯವಾಗಿಕಾಲುಂಗುರವನ್ನು ಮಹಿಳೆಯರು ಎರಡನೇ ಬೆರಳಿಗೆ ಧರಿಸುತ್ತಾರೆ.ಈ ಬೆರಳಿನಲ್ಲಿರುವ ನರತಂತುಗಳುಗರ್ಭಕೋಶ ಹಾಗೂ ಹೃದಯಕ್ಕೆ ಸಂಪರ್ಕ ಹೊಂದಿರುತ್ತವೆ. ಹಾಗಾಗಿ ಈಬೆರಳಿಗೆ ಉಂಗುರ ತೊಡುವುದರಿಂದ ಗರ್ಭಕೋಶವನ್ನುಬಲಪಡಿಸುತ್ತದೆ….
ದೇವಸ್ಥಾನಗಳಲ್ಲಿ ಗಂಟೆ : ಗರ್ಭಗುಡಿಯ ಬಳಿಹೋಗುವಾಗ ಗಂಟೆ ಬಡಿಯುವ ಪದ್ಧತಿ ಹಿಂದಿನಿಂದಲೂ ನಡೆದುಕೊಂಡುಬಂದಿದೆ. ಈ ಗಂಟೆಯ ಶಬ್ದ ಕೆಟ್ಟ ಶಕ್ತಿಗಳನ್ನು ದೂರವಿರಿಸುತ್ತದೆಎಂಬ ನಂಬಿಕೆ ಇದೆಯಾದರೂ, ವೈಜ್ಞಾನಿಕವಾಗಿ, ಈಗಂಟೆ ಹೊಮ್ಮಿಸುವ ನಿನಾದ ಹಾಗೂ ಅದರ ಮೊಳಗುವಿಕೆ ಮನಸ್ಸಿನಿಂದ ಬೇರೆಲ್ಲ ಯೋಚನೆ ದೂರವಾಗಿಸಿ, ಏಕಾಗ್ರಚಿತ್ತ ನೀಡುತ್ತದೆ.
ಅಶ್ವತ್ಥ ಮರ ಪೂಜೆ : ಅಶ್ವತ್ಥ ಮರವು ಸಾಮಾನ್ಯ ಜನರಿಗೆ ಅಷ್ಟೇನು ಪ್ರಯೋಜನವಿಲ್ಲ. ಅದರಹಣ್ಣನ್ನು ನಾವು ತಿನ್ನುವುದಿಲ್ಲ. ಇದರಕಟ್ಟಿಗೆ ಯಾವುದಕ್ಕೂಬಳಸುವಷ್ಟು ಗಟ್ಟಿಯಿರುವುದಿಲ್ಲ. ಹಾಗಿದ್ದರೂ,ಅಶ್ವತ್ಥ ಮರವನ್ನು ದೇವರೆಂದು ಪೂಜಿಸುವುದೇಕೆ? ಏಕೆಂದರೆಇದೊಂದೇ ಮರ ರಾತ್ರಿ ಹೊತ್ತಿನಲ್ಲೂ ಆಮ್ಮಜನಕವನ್ನೇಹೊರಸೂಸುತ್ತದೆ. ಈ ಕಾರಣಕ್ಕಾಗಿ ಈ ಮರವನ್ನು ರಕ್ಷಿಸಬೇಕಾಗಿರುವುದರಿಂದಅದಕ್ಕೆ ದೇವರ ಪಟ್ಟ ಕಟ್ಟಿ ಪೂಜಿಸುವ ಯೋಚನೆ ಹಿರಿಯರಿಗೆ ಬಂದಿದೆ.
ಸೂರ್ಯ ನಮಸ್ಕಾರ : ಹಿಂದೂಗಳು ಬೆಳಗ್ಗೆ ಹಾಗೂ ಸಂಜೆಯ ಹೊತ್ತಿನಲ್ಲಿ ಸೂರ್ಯನಮಸ್ಕಾರ ಹಾಗೂ ಸಂಧ್ಯಾವಂದನೆ ಆಚರಿಸಿಕೊಂಡುಬರುತ್ತಿದ್ದಾರೆ. ಇದಕ್ಕೆ ಕಾರಣವೆಂದರೆ ಬೆಳಗಿನ ಹಾಗೂ ಸಂಜೆಯ ಬಿಸಿಲು ಮನುಷ್ಯನ ದೇಹಕ್ಕೆ ಅತ್ಯಗತ್ಯ. ಇದು ವಿಟಮಿನ್ ಡಿ ನೀಡುವ ಜೊತೆಗೆ ದೇಹವನ್ನು ಚೇತೋಹಾರಿಯಾಗಿಸುತ್ತದೆ.ಇದರೊಂದಿಗೆ ಬೆಳಗ್ಗೆ ಬೇಗ ಏಳುವುದು ಅಭ್ಯಾಸವೂ ಆಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ಪತ್ನಿ ಪ್ರಿಯಾ ಸುದೀಪ್ ಅವರು ಇಂದು ತಮ್ಮ 18ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಸುದೀಪ್ ಹಾಗೂ ಪ್ರಿಯಾ ಅಕ್ಟೋಬರ್ 18, 2001ರಲ್ಲಿ ಮದುವೆಯಾಗಿದ್ದರು. ಇಂದಿಗೆ ಸುದೀಪ್ ಮತ್ತು ಪ್ರಿಯಾ ಅವರು ಮದುವೆಯಾಗಿ 18 ವರ್ಷಗಳು ಕಳೆದಿವೆ. ಹೀಗಾಗಿ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಇಬ್ಬರಿಗೂ ಶುಭಾಶಯ ತಿಳಿಸುತ್ತಿದ್ದಾರೆ. ನೆಚ್ಚಿನ ನಟ ವಿವಾಹ ವಾರ್ಷಿಕೋತ್ಸವ ಇರುವ ಹಿನ್ನೆಲೆಯಲ್ಲಿ ಸುದೀಪ್ ಅಭಿಮಾನಿಗಳ ಸಂಘಗಳು ಸಾಮಾಜಿಕ ಜಾಲತಾಣಗಳಲ್ಲಿ ವಿಧ ವಿಧವಾದ ಪೋಸ್ಟರ್ ಗಳನ್ನು ಪೋಸ್ಟ್…
ನಮ್ಮ ದೇಶದಲ್ಲಿ ಮಳೆ ಬರುವಂತೆ ಪ್ರಾರ್ಥಿಸಿ ಕತ್ತೆ, ಕಪ್ಪೆ ಹಾಗೂ ಇತರ ಪ್ರಾಣಿಗಳ ಜೊತೆ ಮಾಡುವೆ ಮಾಡುವುದು ಸಾಮಾನ್ಯವಾಗಿದೆ. ಈ ಪ್ರಾಣಿಗಳ ಜೊತೆ ಮದುವೆ ಮಾಡಿಕೊಂಡು ಮೆರೆವಣಿಗೆ ಮಾಡೋದು ಎಲ್ಲರಿಗು ಗೊತ್ತಿರುವ ವಿಚಾರ.ಹೀಗೆ ವಿದೇಶಗಳಲ್ಲಿ ಇಂತಹ ಸಂಪ್ರದಾಯಗಳು ಚಾಲ್ತಿಯಲ್ಲಿವೆ.
ಒಂದು ರಾತ್ರಿ ಕಾಂಪ್ರಮೈಸ್ ಮಾಡಿಕೋ ಎಂದು ಹೇಳಿದ ನಿರ್ಮಾಪಕನಿಗೆ ಮರಾಠಿ ಚಿತ್ರದ ನಟಿ ಶ್ರುತಿ ಮರಾಠೆ ಜಾಣತನದ ಉತ್ತರ ನೀಡಿದ್ದು, ಈಗ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹ್ಯುಮನ್ಸ್ ಆಫ್ ಮುಂಬೈ ಬಗ್ಗೆ ಮಾತನಾಡಿದ ನಟಿ ಶ್ರುತಿ, ಚಿತ್ರಕ್ಕೆ ಆಡಿಶನ್ ಮಾಡುವಾಗ ಆದಂತಹ ಕಾಸ್ಟಿಂಗ್ ಕೌಚ್ ಬಗ್ಗೆ ಹೇಳಿಕೊಂಡಿದ್ದಾರೆ. ನಿರ್ಮಾಪಕ ಮಾಡಿದ ಇಂಟರ್ ವ್ಯೂವ್ ನಲ್ಲಿ ಶ್ರುತಿ ಭಾಗವಹಿಸಿದ್ದರು. ಈ ವೇಳೆ ನಿರ್ಮಾಪಕ, “ಕಾಂಪ್ರಮೈಸ್”, ಹಾಗೂ “ಒಂದು ರಾತ್ರಿ” ಎಂಬ ಪದಗಳನ್ನು ಬಳಸಲು ಶುರು ಮಾಡಿದ್ದರು. ನಿರ್ಮಾಪಕನ ಮಾತನ್ನು…
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಪುನೀತ್ ರಾಜ್ ಕುಮಾರ್ ಅಭಿನಯದ ‘ಯುವರತ್ನ’ ಚಿತ್ರೀಕರಣ ಭರದಿಂದ ಸಾಗಿದೆ. ‘ರಾಜಕುಮಾರ’ ಬಳಿಕ ಸಂತೋಷ್ ಆನಂದರಾಮ್ ಮತ್ತು ಪುನೀತ್ ರಾಜ್ ಕುಮಾರ್ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ‘ಯುವರತ್ನ’ ಭಾರಿ ನಿರೀಕ್ಷೆ ಮೂಡಿಸಿದೆ. ‘ಯುವರತ್ನ’ ಚಿತ್ರೀಕರಣ ನಡೆದಿರುವಾಗಲೇ ಪುನೀತ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ‘ಭರ್ಜರಿ’ ಚೇತನ್ ಕುಮಾರ್ ನಿರ್ದೇಶನದ ‘ಜೇಮ್ಸ್’ ಚಿತ್ರದಲ್ಲಿ ಪುನೀತ್ ಅಭಿನಯಿಸಲಿದ್ದಾರೆ. ಬಹಳ ಹಿಂದೆಯೇ ‘ಜೇಮ್ಸ್’ ಚಿತ್ರದ ಮೋಷನ್ ಪೋಸ್ಟರ್…
ಚಂದನವನದ ರೆಬೆಲ್, ಕಲಿಯುಗದ ಕರ್ಣ ಅಂಬರೀಶ್ ರವರಿಗೆ ಭಾರತೀಯ ಚಿತ್ರರಂಗ ಸೇರಿದಂತೆ, ರಾಜಕ್ಕಿಯ ನಾಯಕರು ಹಲವಾರು ದಿಗ್ಗಜರು ಕಂಬನಿ ಮಿಡಿದಿದ್ದಾರೆ.ಅಷ್ಟಲ್ಲದೇ ಕನ್ನಡ ಚಿತ್ರರಂಗದ ಪುನಿತ್, ಯಶ್, ಶಿವಣ್ಣ, ಸುದೀಪ್, ಉಪೇಂದ್ರ ದರ್ಶನ್ ಸೇರಿದಂತೆ ಎಲ್ಲಾ ಟಾಪ್ ಸ್ಟಾರ್ ಗಳು ಅಂತಿಮ ದರ್ಶನ ಮಾಡಿದ್ದಾರೆ. ಇದರ ಜೊತೆಗೆ ರಜನಿಕಾಂತ್ ಸೇರಿದಂತೆ ಮೆಗಾಸ್ಟಾರ್ ಚಿರಂಜೀವಿ, ಮೋಹನ್ ಬಾಬು, ಶರತ್ ಕುಮಾರ್ ಇನ್ನೂ ಹಲವಾರು ಗಣ್ಯ ಮಿತ್ರರು ಅವರ ಅಗಲಿಕೆಗೆ ಕಂಬನಿ ಮಿಡಿದು ಅಂತಿಮ ನಮನ ಸಲ್ಲಿಸಿದ್ದಾರೆ. ಇದರ ನಡುವೆ ಮಾಜಿ…
ಪ್ರಸ್ತುತ ನಾವೆಲ್ಲರೂ ಇರುವುದು ಕಲಿಯುಗದಲ್ಲಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ ಈ ಯುಗದಲ್ಲೇ ಯುಗಾಂತ್ಯವಾಗುತ್ತದೆ ಎಂದು ಪುರಾಣಗಳು ಹೇಳುತ್ತಿವೆ. ಕಲಿಯುಗದಲ್ಲಿ ಮನುಷ್ಯರು ಉನ್ನತ ಸ್ಥಾನಕ್ಕೆ ಸೇರಿಕೊಳ್ಳಲು ವಿಧವಿಧವಾಗಿ ಪ್ರಯತ್ನಿಸುತ್ತಾರೆಂದು, ಅಗತ್ಯ ಬಿದ್ದರೆ ಅಡ್ಡದಾರಿ ಸಹ ತುಳಿಯುತ್ತಾರೆ, ವಯಸ್ಸು, ಎತ್ತರ, ಬಲ, ಜ್ಞಾನ, ಆಕರ್ಷಣೆಯಂತಹವು ಬರುಬರುತ್ತಾ ಕಲಿಯುಗದಲ್ಲಿ ಕಡಿಮೆಯಾಗುತ್ತವೆ ಎಂದು ಪುರಾಣಗಳು ಹೇಳುತ್ತಿವೆ. ಅವೆಲ್ಲಾ ನಡೆಯುತ್ತಿರುವುದನ್ನು ನೋಡುತ್ತಿದ್ದೇವೆ.