ಉಪಯುಕ್ತ ಮಾಹಿತಿ

ನೀವು ನಂದಿನಿ ಹಾಲನ್ನು ಬಳಸುತ್ತಾ ಇದ್ದೀರಾ, ತಪ್ಪದೆ ಇದನ್ನು ನೋಡಲೆಬೇಕು ಮಿಸ್ ಮಾಡ್ಕೊಬೇಡಿ.

409

ರಾತ್ರಿ ಮಾಡಿದ ಅನ್ನ ಹಾಗೆಯೇ ಉಳಿದು ಬಿಟ್ಟದೆ, ಸುಮ್ಮನೆ ವ್ಯರ್ಥ ಆಯಿತು ಎಂದು ಚಿಂತಿಸಬೇಡಿ. ಉಳಿದ ಅನ್ನದಲ್ಲಿ ನಿಮ್ಮ ಆರೋಗ್ಯಕ್ಕೆ ಉತ್ತಮವಾದ ಕೆಲವು ಅಂಶಗಳಿವೆ. ಇಲ್ಲಿದೆ ನೋಡಿ ಉಳಿದ ಅನ್ನದಲ್ಲಿನ ನಿಮ್ಮ ಆರೋಗ್ಯದ ಗುಟ್ಟು. ಎಲ್ಲಾದಕ್ಕೂ ನೀಲಿ ಪ್ಯಾಕೆಟ್ಟೇ ಸರಿಯಲ್ಲಕರ್ನಾಟಕದ ನಂದಿನಿ ಹಾಲು ಸಂಘದವರು ವೆರ್-ವೆರೈಟಿ ಹಾಲಿನ ಪ್ಯಾಕೆಟ್ಗಳನ್ನ ಮಾಡಿ ಜನರಿಗೆಲ್ಲಾ ಸಿಗೋ ಹಾಗೆ ಮಾಡಿದ್ದಾರೆ.

ಹಸಿರು, ಹಳದಿ, ಕೆಂಪು, ನೀಲಿ ಅಂತ ಬೇರೆ ಬೇರೆ ಬಣ್ಣದ ಪ್ಯಾಕೆಟ್ಗಳು ಕರ್ನಾಟಕದ ಮೂಲೆ ಮೂಲೆಯಲ್ಲೂ ಸಿಗ್ತವೆ. ಯಾವ ಉಪಯೋಗಕ್ಕೆ ಯಾವ ಬಣ್ಣದ ಪ್ಯಾಕೆಟ್ ತರ್ಬೇಕು ಅನ್ನೋ ಪ್ರಶ್ನೇನ ಎಲ್ಲರೂ ಹಾಕಿಕೊಳ್ಳೋದಿಲ್ಲ. ಎಲ್ಲರೂ ಯಾವುದು ಕೊಂಡ್ಕೋತಾರೋ ಅದನ್ನೇ ತರೋದು ವಾಡಿಕೆ. ಅದು ಸಾಮಾನ್ಯವಾಗಿ ನೀಲಿ ಬಣ್ಣದ ಪ್ಯಾಕೆಟ್ಟೇ ಆಗಿರುತ್ತೆ!

ಆದರೆ ನಂದಿನಿ ಹಾಲ್ನ ಸರಿಯಾಗಿ ಬಳಸಬೇಕು, ಅದರಿಂದ ಆದಷ್ಟು ಹೆಚ್ಚು ಉಪಯೋಗ ಪಡ್ಕೋಬೇಕು ಅನ್ನೋದಾದರೆ ಕೆಳಗಿನ ಮಾಹಿತಿ ಗಮನದಲ್ಲಿಡಿ…

1. ಹಾಗೇ (ಕಾಯಿಸದೆ) ಕುಡಿಯೋಕ್ಕೆ: ಬೆಳಗ್ಗೆ ಎದ್ದು ಹಾಲು ಕಾಯಿಸಿ ಕುಡಿಯಕ್ಕೆ ಟೈಮ್ ಇಲ್ವಾ? ಹಾಗಾದರೆ ನಂದಿನಿ ಗುಡ್ ಲೈಫ್ ಮಿಲ್ಕ್ ಪ್ಯಾಕೆಟ್ ತೊಗೊಂಡು ಹಾಗೆಯೇ ಕುಡಿಬೋದು. ಯಾಕೆ ಗೊತ್ತಾ? ಈ ಹಾಲನ್ನು ಪ್ಯಾಕೆಟಿಗೆ ಹಾಕೋ ಮುಂಚೆನೇ 137 ಡಿಗ್ರಿ ಸೆಲ್ಶಿಯಸ್ ತಾಪಮಾನದಲ್ಲಿ 4 ನಿಮಿಷಗಳ ತನಕ ಕಾಯಿಸಿ ತಕ್ಷಣವೇ ತಣ್ಣಗೆ ಮಾಡಿರುತ್ತಾರೆ. ಅದ್ದರಿಂದ ಈ ಹಾಲಿನಲ್ಲಿ ಬ್ಯಾಕ್ಟೀರಿಯಾ ಬೆಳೆಯಕ್ಕೆ ಅವಕಾಶವಿಲ್ಲ. ಟೆಟ್ರಾ ಪ್ಯಾಕಿನಲ್ಲಿ ಹಾಕುವುದರಿಂದ ಹೊರಗಿನ ಯಾವ ಉಷ್ಣಾಂಶದಿಂದ ಹಾಲು ಒಡೆಯುವುದಿಲ್ಲ.

2. ಗಟ್ಟಿ ಕಾಫಿ ಮಾಡೋಕ್ಕೆ: ನಂದಿನಿಯ ತುಸು ನೇರಳೆ ಬಣ್ಣದ ಪ್ಯಾಕೆಟ್ ಅಂದರೆ ನಂದಿನಿ ಸಮೃದ್ಧಿ ಪಾಸ್ಚರೀಕರಿಸಿದ ಹಾಲು ತಂದು ಗಟ್ಟಿ ಕಾಫಿ ಮಾಡಿಕೊಳ್ಳಬಹುದು. ಪೂರ್ತಿ ಕೆನೆಯ ಅಂಶ ಈ ಹಾಲಿನಲ್ಲಿ ಇರೋ ಹಾಗೆ ಮಾಡಿರುತ್ತಾರೆ. ಆದ್ರೇನೂ ಕೆನೆ-ಕೆನೆ ಕಟ್ಟಿಕೊಳ್ಳುವುದಿಲ್ಲ. ಯಾಕಂದ್ರೆ ಹೊಮೊಜಿನೈಸ್ಡ್ ಹದಕ್ಕೆ ಮಾಡಿರುತ್ತಾರೆ.

3. ಹಿರಿಯರಿಗೆ ಕುಡಿಯಲು: ನಂದಿನಿಯ ಗುಡ್ ಲೈಫ್ ಸ್ಲಿಮ್ಡ್ ಸ್ಕಿನ್ ಮಿಲ್ಕ್ ಪ್ಯಾಕೆಟ್ ಕೂಡ ತೊಗೊಬಹುದು. ಇದರಲ್ಲಿ ಹೆಸರೇ ಹೇಳುವಂತೆ ಕೊಬ್ಬಿನಂಶ ಕಡಿಮೆ ಇರುವುದರಿಂದ ವಯಸ್ಸಾದವರಿಗೆ ಜೀರ್ಣಿಸಿಕೊಳ್ಳಲು ಸುಲಭ. ಇದಲ್ಲದೆ ಹಳದಿ/ಕಿತ್ತಳೆ ಬಣ್ಣದ ಪ್ಯಾಕೆಟ್ – ಪಾಸ್ಚರೀಕರಿಸಿದ ಡಬಲ್ ಟೋನ್ಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ. ಯಾಕಂದ್ರೆ ಇದರಲ್ಲೂ ಕಡಿಮೆ ಕೊಬ್ಬಿನಂಶ ಇರತ್ತೆ.

4. ಕಾಫಿ ಅಥವಾ ಟೀ ಮಾಡೋಕ್ಕೆ: ನಂದಿನಿಯ ಹಸಿರು ಬಣ್ಣದ ಪ್ಯಾಕೆಟ್- ಹೊಮೊಜಿನೈಸೆಡ್, ಪಾಸ್ಚರೀಕರಿಸಿದ ಹಸುವಿನ ಹಾಲು ತಂದು ಮಾಡಿದರೆ ಹಾಲು ಒದಗುತ್ತದೆ. ಹೆಚ್ಚು ಲೋಟ ಕಾಫಿ/ಟೀ ಮಾಡಬಹುದು. ರುಚಿಯೂ ಚೆನ್ನ.

5. ಗಟ್ಟಿ ಮೊಸರು ಮಾಡೋಕ್ಕೆ: ನಂದಿನಿಯ ಸ್ಪೆಶಲ್ ಹಸಿರು ಬಣ್ಣದ ಪ್ಯಾಕೆಟ್ ಅಂದರೆ ಸ್ಪೆಶಲ್ ಟೋನ್ಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ.

6. ಬೆಳೆಯುವ ಮಕ್ಕಳಿಗೆ: ಕಿತ್ತಳೆ ಬಣ್ಣದ ನಂದಿನಿಯ ಶುಭಂ ಪ್ಯಾಕೆಟ್. ಅಥವಾ ಸಂಪೂರ್ಣ ಸ್ಟ್ಯಾಂಡರ್ಡೈಸ್ಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ. ಯಾಕಂದ್ರೆ ಇದರಲ್ಲಿ ಬೆಳೆಯುವ ಮಕ್ಕಳಿಗೆ ಬೇಕಾಗುವ ಕೊಬ್ಬಿನಂಶ ಇರತ್ತೆ. ಅವರ ದಿನ ನಿತ್ಯದ ಚಟುವಟುಕೆಗಳಿಗೆ ಸಾಕಷ್ಟು ಶಕ್ತಿ ಕೊಡತ್ತೆ.

8. ಪಾಯಸ ಅಥವಾ ಹಾಲಿನಿಂದ ಮಾಡುವ ಸಿಹಿ ಪದಾರ್ಥಗಳಿಗೆ: ನಂದಿನಿಯ ತುಸು ನೇರಳೆ ಬಣ್ಣದ ಪ್ಯಾಕೆಟ್ ಅಂದರೆ ನಂದಿನಿ ಸಮೃದ್ಧಿ ಪಾಸ್ಚರೀಕರಿಸಿದ ಹಾಲು ತಂದರೆ ತುಂಬಾ ಚೆನ್ನಾಗಿ ಆಗತ್ತೆ. “ಮಿಲ್ಕ್ ಮೈಡ್” ತರುವ ಬದಲು.

7. ಕಾಯಿಸಿ ಕುಡಿಯಲು: ಉಕ್ಕು ಬರುವ ತನಕ ಕಾಯಿಸಿಕೊಂಡು ಕುಡಿಯುವುದಕ್ಕೆ ನಂದಿನಿಯ ಯಾವ ಬಣ್ಣದ ಪ್ಯಾಕೆಟ್ ಬೇಕಾದರೂ ತರಬಹುದು.

9. ಪುಟ್ಟ ಮಕ್ಕಳಿಗೆ ಕುಡಿಸೋಕೆ: ನಂದಿನಿಯ ಹಸಿರು ಬಣ್ಣದ ಪ್ಯಾಕೆಟ್- ಹೊಮೊಜಿನೈಸೆಡ್, ಪಾಸ್ಚರೀಕರಿಸಿದ ಹಸುವಿನ ಹಾಲು ತಂದರೆ ಒಳ್ಳೆಯದು. ಯಾಕಂದ್ರೆ ಬೇರೆ ಪ್ಯಾಕೆಟ್ನಲ್ಲಿ ಹಸು ಹಾಲಿನ ಜೊತೆ ಎಮ್ಮೆ ಹಾಲು ಸೇರಿಕೊಂಡಿರತ್ತೆ.

10. ಫಿಟ್ನೆಸ್ ಬಗ್ಗೆ ಹೆಚ್ಚು ಕಾಳಜಿ ಇರುವವರಿಗೆ: ನಂದಿನಿ  ಸ್ಮಾರ್ಟ್ ಡಬಲ್ ಟೋನ್ಡ್ ಹೊಮೊಜಿನೈಸೆಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ.

11. ಕೊಬ್ಬು ಇಳಿಸೋಕೆ: ಕೊಬ್ಬು ಕರಗಬೇಕು ಅಂತ ಹಾಲು ಕುಡಿಯೋದನ್ನ ನಿಲ್ಲಿಸಬಿಟ್ಟರೆ ಬೇರೆ ಪೌಷ್ಟಿಕಾಂಶಗಳ ಕೊರತೆ ಉಂಟಾಗತ್ತೆ. ಇದಕ್ಕೆ ಸುಲಭವಾಗಿ ಸಿಗುವ ನಂದಿನಿಯ ಹಳದಿ/ಕಿತ್ತಳೆ ಬಣ್ಣದ ಪ್ಯಾಕೆಟ್ – ಪಾಸ್ಚರೀಕರಿಸಿದ ಡಬಲ್ ಟೋನ್ಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ. ಯಾಕಂದ್ರೆ ಇದರಲ್ಲಿ ಕಡಿಮೆ ಕೊಬ್ಬಿನಂಶ ಇರತ್ತೆ.

12. ತುಂಬಾ ದಿನ ಇಟ್ಟುಕೊಳ್ಳಬೇಕಾದರೆ: ಪ್ರವಾಸಕ್ಕೆ ಹೋಗ್ಬೇಕು, ಮಕ್ಕಳಿಗೆ ಹಾಲು ಸಿಗಲ್ವಲ್ಲಾ ಅಂತ ಚಿಂತೆ ಬಂದರೆ ನಂದಿನಿಯ ಗುಡ್ ಲೈಫ್ ಟೆಟ್ರಾ ಪ್ಯಾಕ್ ತೊಗೊಳ್ಳಿ. 10 ದಿನದ ತನಕ ಹಾಲನ್ನು ಹಾಗೆ ಕುಡಿಯಬಹುದು. ಕಾಯಿಸುವುದೂ ಬೇಡ. ಟೆಟ್ರಾ ಪ್ಯಾಕಿನಲ್ಲಿ ಇರುವುದರಿಂದ ಹಾಲು ಒಡೆಯುವುದಿಲ್ಲ.

13. ಬರೀ ಹಸುವಿನ ಹಾಲು ಬೇಕು ಅನ್ನುವವರಿಗೆ: ನಂದಿನಿಯ ಹಸಿರು ಬಣ್ಣದ ಪ್ಯಾಕೆಟ್- ಹೊಮೊಜಿನೈಸೆಡ್, ಪಾಸ್ಚರೀಕರಿಸಿದ ಹಸುವಿನ ಹಾಲು ತಂದರೆ ಒಳ್ಳೆಯದು. ಯಾಕಂದ್ರೆ ಬೇರೆ ಪ್ಯಾಕೆಟ್ನಲ್ಲಿ ಹಸು ಹಾಲಿನ ಜೊತೆ ಎಮ್ಮೆ ಹಾಲು ಸೇರಿಕೊಂಡಿರತ್ತೆ.

ಅನ್ನ ನೈಸರ್ಗಿಕವಾಗಿ ತಂಪು ಉಂಟುಮಾಡುತ್ತದೆ. ಬೆಳಗ್ಗೆ ರಾತ್ರಿಯ ಅನ್ನವನ್ನು ಊಟ ಮಾಡುವುದರಿಂದ ದೇಹ ತಂಪಾಗಿರುತ್ತದೆ. ರಾತ್ರಿ ಮಿಕ್ಕಿದ ಅನ್ನವನ್ನು ಬೆಳಗ್ಗೆ ಸೇವಿಸುವುದರಿಂದ ಉದರ ಸಂಬಂಧಿ ಕಾಯಿಲೆಗಳು ದೂರವಾಗುತ್ತದೆ. ದೇಹದಲ್ಲಿ ಎಲ್ಲಾದರೂ ಹುಣ್ಣುಗಳಾಗಿದ್ದರೆ ರಾತ್ರಿ ಮಿಕ್ಕಿದ ಅನ್ನವನ್ನು ಅದಕ್ಕೆ ಹಚ್ಚುವುದರಿಂದ ಹುಣ್ಣು ಬೇಗ ವಾಸಿಯಾಗುತ್ತದೆ. ರಾತ್ರಿ ಉಳಿದ ಅನ್ನವನ್ನು ಸೇವಿಸುವುದರಿಂದ ಕೊಬ್ಬು ಕಡಿಮೆಯಾಗಿ ದೇಹದ ತೂಕ ಕಡಿಮೆಯಾಗಿತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಈ ಊರಲ್ಲಿ ಕಪ್ಪೆಗಳಿಗೆ ಮದುವೆ ಮಾಡಿದ್ರು, ಆಮೇಲೆ ಏನಾಯ್ತು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ಮಳೆ ಬಂದಿಲ್ಲ ಅಂದ್ರೆ ಹಳ್ಳಿಗಳ ಕಡೆ ಮಳೆರಾಯನ ಪೂಜೆ ಮತ್ತು  ಕಪ್ಪೆಗಳಗೆ ಮದುವೆ ಮಾಡಿಸುವುದು ವಾಡಿಕೆ. ಹಾಗೂ ಕಪ್ಪೆಗಳಿಗೆ ಮದುವೆ ಮಾಡಿಸಿ ಮಳೆರಾಯನ ಮೊರೆಹೊದರೆ ಖಂಡಿತ ಮಳೆ ಬರುತ್ತದೆ ಎಂಬ ನಂಬಿಕೆ ಇದೆ… ಹೌದು, ಕೋಲಾರ ತಾಲ್ಲೂಕಿನ ತೊಟ್ಲಿ ಗ್ರಾಮಸ್ಥರು ಹೀಗೆ ಕಪ್ಪೆಗಳಗೆ ಮದುವೆ ಮಾಡಿಸಿ ಮೂರೇ ದಿನದಲ್ಲಿ ಮಳೆ ಬರಿಸಿದ್ದಾರೆ. ಕಪ್ಪೆ ಮದುವೆ ಮಾಡಿಸುವುದು ಹೇಗೆ? ಊರಿನ ಜನರು ಮಳೆರಾಯನಿಗೆ ಪ್ರಾರ್ಥಿಸಿ ಹೆಣ್ಣು ಮತ್ತು ಗಂಡು ಕಪ್ಪೆಗಳಿಗೆ ಸಿಂಗಾರ ಮಾಡಿ ಗ್ರಾಮದ ಮುಖ್ಯಬೀದಿಗಳಲ್ಲಿ ತಮಟೆವಾದ್ಯಗಳೊಂದಿಗೆ ಕಪ್ಪೆ ಜೊಡಿಯ ಮೆರವಣಿಗೆ…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(25 ಡಿಸೆಂಬರ್, 2018) ಸಕಾರಾತ್ಮಕವಾಗಿರುವ ಮತ್ತು ಬೆಂಬಲ ನೀಡುವ ಸ್ನೇಹಿತರೊಂದಿಗೆಹೊರಗೆ ಹೋಗಿ. ಇಂದು ನೀವು ನೀವು ಸುತ್ತಲೂ ನಿಮ್ಮ ಪ್ರಿಯತಮೆಯ ಪ್ರೀತಿಯನ್ನು…

  • ಸುದ್ದಿ

    ಮನೆಯಲ್ಲಿ ಶನಿದೇವನ ಸ್ಥಾಪನೆ ಯಾವ ಕಾರಣಕ್ಕೆ ಮಾಡಬಾರದು ಗೊತ್ತ..!

    ಹಿಂದೂ ಧರ್ಮದಲ್ಲಿ ದೇವರ ಪೂಜೆಗೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ನಿಯಮಿತ ಪೂಜೆಗೆ ವಿಶೇಷ ಮಹತ್ವವಿದೆ. ದೇವರನ್ನು ಆರಾಧಿಸುವ ಮೂಲಕ ಮನಸ್ಸಿನಲ್ಲಿ ಸಕಾರಾತ್ಮಕ ಭಾವನೆಗಳು ಉದ್ಭವಿಸುತ್ತವೆ. ಹಾಗಾಗಿ ಜನರು ಬೆಳಿಗ್ಗೆ ಮತ್ತು ಸಂಜೆ ದೇವರ ಪೂಜೆ, ಮಂತ್ರ ಪಠಣ ಮಾಡುತ್ತಾರೆ. ಪ್ರತಿಯೊಬ್ಬರ ದೇವರ ಮನೆಯಲ್ಲೂ ಅನೇಕ ದೇವರುಗಳ ಫೋಟೋಗಳನ್ನು ಇಡಲಾಗುತ್ತದೆ. ಆದ್ರೆ ಕೆಲ ದೇವರ ಫೋಟೋಗಳನ್ನು ಮನೆಯಲ್ಲಿ ಇಡುವಂತಿಲ್ಲ. ಶನಿ ದೇವರ ಫೋಟೋವನ್ನು ಕೂಡ ಮನೆಗೆ ತರಬಾರದು. ಹಿಂದೂ ಧರ್ಮದ ಪ್ರಕಾರ ಶನಿದೇವರ ಫೋಟೋ, ವಿಗ್ರಹವನ್ನು ಮನೆಯಲ್ಲಿ ಇಡಬಾರದು….

  • ಉಪಯುಕ್ತ ಮಾಹಿತಿ

    ಫೇಸ್ಬುಕ್’ನಲ್ಲಿ ಸಿಗಲಿದೆ ನಿರುದ್ಯೋಗಿಗಳಿಗೆ ಕೆಲಸ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡೇಟಾ ಲೀಕ್ ಪ್ರಕರಣದಲ್ಲಿ ವಿಶ್ವದಾದ್ಯಂತ ಫೇಸ್ಬುಕ್ ಟೀಕೆಗೆ ಗುರಿಯಾಗಿದೆ. ಈ ಮಧ್ಯೆಯೇ ವಿಶ್ವದಾದ್ಯಂತ ಫೇಸ್ಬುಕ್ ದೊಡ್ಡ ಮಟ್ಟದಲ್ಲಿ ನೇಮಕಾತಿಗೆ ಮುಂದಾಗಿದೆ. ಫೇಸ್ಬುಕ್ ಒಟ್ಟೂ 20000 ಜನರನ್ನು ಕೆಲಸಕ್ಕೆ ನೇಮಿಸಿಕೊಳ್ಳಲು ಮುಂದಾಗಿದೆ. ಕಂಪನಿ ವಿಷಯ ಪರಿಶೀಲನೆ ಹಾಗೂ ಭದ್ರತೆ ವಿಭಾಗಕ್ಕಾಗಿ 15000 ಜನರನ್ನು ನೇಮಿಸಿಕೊಳ್ಳಲಿದೆ. ಉಳಿದ 5000 ಮಂದಿ ಇತರ ಕೆಲಸ ಮಾಡಲಿದ್ದಾರೆ. ಈ ಬಗ್ಗೆ ಫೇಸ್ಬುಕ್ ಸಿಇಓ ಮಾರ್ಕ್ ಜ್ಯೂಕರ್ಬರ್ಗ್ ಅಧಿಕೃತ ಮಾಹಿತಿ ನೀಡಿದ್ದಾರೆ. ಯುಎಸ್ ಸೆನೆಟ್ ನಲ್ಲಿ ಮಾರ್ಕ್ ಜ್ಯೂಕರ್ಬರ್ಗ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ….

  • ಸುದ್ದಿ

    ದಂಡಕ್ಕೆ ಹೆದರಿ ರಸ್ತೆಗಿಳಿಯದ ವಾಹನಗಳು, ಪೆಟ್ರೋಲ್ ಮತ್ತು ಡೀಸೆಲ್ ಬೇಡಿಕೆ ಕುಸಿತ,.!

    ರಾಜ್ಯದಲ್ಲಿ ಹೊಸ ಮೋಟಾರು ವಾಹನ ಕಾಯ್ದೆ ಮಂಗಳವಾರವೇ ಜಾರಿಗೆ ಬಂದಿದೆ. ಸಂಚಾರ ನಿಯಮಗಳನ್ನು ಕೇರ್ ಮಾಡದ ವಾಹನ ಸವಾರರು ಭಾರೀ ದಂಡ. ದಂಡಕ್ಕೆ ಹೆದರಿ ರಸ್ತೆಗಿಳಿಯದ ವಾಹನಗಳು, ಒಡಿಶಾದಲ್ಲಿ ಪೆಟ್ರೋಲ್, ಡೀಸೆಲ್ ಬೇಡಿಕೆ ಕುಸಿತಹೊಸ ಮೋಟಾರು ವಾಹನ ಕಾಯ್ದೆ ಜಾರಿಯಾದ ನಂತರ ಟ್ರಾಫಿಕ್ ಪೊಲೀಸರು ವಿಧಿಸುತ್ತಿರುವ ದಂಡಗಳನ್ನು ನೋಡಿ ಬೆಚ್ಚ ಬಿದ್ದಿರುವ ವಾಹನ ಸವಾರರು ಹಲವರು ತಮ್ಮ ವಾಹನಗಳನ್ನು ಮನೆಯಿಂದ ಹೊರಗೆ ತರುತ್ತಿಲ್ಲವಂತೆ. ಇದರ ಪರಿಣಾಮ ಪೆಟ್ರೋಲ್, ಡೀಸೆಲ್ ಬೇಡಿಕೆಯಲ್ಲಿ ಗಣನೀಯವಾಗಿ ಕಡಿಮೆಯಾಗಿದೆಯಂತೆ. ಹೌದು ಒಡಿಶಾದಲ್ಲಿ ಪೆಟ್ರೋಲ್…

  • inspirational

    ರೈತರಿಂದ ನೇರವಾಗಿ ಬೆಳೆ ಖರೀದಿಗೆ ಮುಂದಾದ ಉಪೇಂದ್ರ

    Mayoon N ಕೊರೊನಾ ವೈರಸ್ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಸಲುವಾಗಿ ಉಪೇಂದ್ರ ಅವರು ತಮ್ಮ ಉಪ್ಪಿ ಫೌಂಡೇಶನ್ ಮೂಲಕ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ದೇಣಿಗೆ ಬಂದ ಹಣದ ಬಗ್ಗೆ ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡುತ್ತಿದ್ದು, ಬಾಲನಟನೊಬ್ಬ 10 ಸಾವಿರ ಸಹಾಯ ಮಾಡಿರುವ ವಿಚಾರ ತಿಳಿಸಿದ್ದಾರೆ. ತಮ್ಮ ಸಂಭಾವನೆ ಹಣದಲ್ಲಿ ಕೊರೊನಾ ಸಂಕಷ್ಟದಲ್ಲಿರುವವರಿಗೆ ಸಹಾಯವಾಗಲಿ ಉದ್ದೇಶದಿಂದ ಬಾಲನಟ ಅನೀಶ್ ಸಾಗರ್ ದೇಣಿಗೆ ನೀಡಿದ್ದಾರೆ ಎಂದು ಉಪ್ಪಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದು, ‘ಜೀವನಾನೆ ನಾಟಕ ಸ್ವಾಮಿ’ ಮತ್ತು ‘ಸಾಲುಗಾರ’…