News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ನೀವು ನಂದಿನಿ ಹಾಲನ್ನು ಬಳಸುತ್ತಾ ಇದ್ದೀರಾ, ತಪ್ಪದೆ ಇದನ್ನು ನೋಡಲೆಬೇಕು ಮಿಸ್ ಮಾಡ್ಕೊಬೇಡಿ.

416

ರಾತ್ರಿ ಮಾಡಿದ ಅನ್ನ ಹಾಗೆಯೇ ಉಳಿದು ಬಿಟ್ಟದೆ, ಸುಮ್ಮನೆ ವ್ಯರ್ಥ ಆಯಿತು ಎಂದು ಚಿಂತಿಸಬೇಡಿ. ಉಳಿದ ಅನ್ನದಲ್ಲಿ ನಿಮ್ಮ ಆರೋಗ್ಯಕ್ಕೆ ಉತ್ತಮವಾದ ಕೆಲವು ಅಂಶಗಳಿವೆ. ಇಲ್ಲಿದೆ ನೋಡಿ ಉಳಿದ ಅನ್ನದಲ್ಲಿನ ನಿಮ್ಮ ಆರೋಗ್ಯದ ಗುಟ್ಟು. ಎಲ್ಲಾದಕ್ಕೂ ನೀಲಿ ಪ್ಯಾಕೆಟ್ಟೇ ಸರಿಯಲ್ಲಕರ್ನಾಟಕದ ನಂದಿನಿ ಹಾಲು ಸಂಘದವರು ವೆರ್-ವೆರೈಟಿ ಹಾಲಿನ ಪ್ಯಾಕೆಟ್ಗಳನ್ನ ಮಾಡಿ ಜನರಿಗೆಲ್ಲಾ ಸಿಗೋ ಹಾಗೆ ಮಾಡಿದ್ದಾರೆ.

ಹಸಿರು, ಹಳದಿ, ಕೆಂಪು, ನೀಲಿ ಅಂತ ಬೇರೆ ಬೇರೆ ಬಣ್ಣದ ಪ್ಯಾಕೆಟ್ಗಳು ಕರ್ನಾಟಕದ ಮೂಲೆ ಮೂಲೆಯಲ್ಲೂ ಸಿಗ್ತವೆ. ಯಾವ ಉಪಯೋಗಕ್ಕೆ ಯಾವ ಬಣ್ಣದ ಪ್ಯಾಕೆಟ್ ತರ್ಬೇಕು ಅನ್ನೋ ಪ್ರಶ್ನೇನ ಎಲ್ಲರೂ ಹಾಕಿಕೊಳ್ಳೋದಿಲ್ಲ. ಎಲ್ಲರೂ ಯಾವುದು ಕೊಂಡ್ಕೋತಾರೋ ಅದನ್ನೇ ತರೋದು ವಾಡಿಕೆ. ಅದು ಸಾಮಾನ್ಯವಾಗಿ ನೀಲಿ ಬಣ್ಣದ ಪ್ಯಾಕೆಟ್ಟೇ ಆಗಿರುತ್ತೆ!

ಆದರೆ ನಂದಿನಿ ಹಾಲ್ನ ಸರಿಯಾಗಿ ಬಳಸಬೇಕು, ಅದರಿಂದ ಆದಷ್ಟು ಹೆಚ್ಚು ಉಪಯೋಗ ಪಡ್ಕೋಬೇಕು ಅನ್ನೋದಾದರೆ ಕೆಳಗಿನ ಮಾಹಿತಿ ಗಮನದಲ್ಲಿಡಿ…

1. ಹಾಗೇ (ಕಾಯಿಸದೆ) ಕುಡಿಯೋಕ್ಕೆ: ಬೆಳಗ್ಗೆ ಎದ್ದು ಹಾಲು ಕಾಯಿಸಿ ಕುಡಿಯಕ್ಕೆ ಟೈಮ್ ಇಲ್ವಾ? ಹಾಗಾದರೆ ನಂದಿನಿ ಗುಡ್ ಲೈಫ್ ಮಿಲ್ಕ್ ಪ್ಯಾಕೆಟ್ ತೊಗೊಂಡು ಹಾಗೆಯೇ ಕುಡಿಬೋದು. ಯಾಕೆ ಗೊತ್ತಾ? ಈ ಹಾಲನ್ನು ಪ್ಯಾಕೆಟಿಗೆ ಹಾಕೋ ಮುಂಚೆನೇ 137 ಡಿಗ್ರಿ ಸೆಲ್ಶಿಯಸ್ ತಾಪಮಾನದಲ್ಲಿ 4 ನಿಮಿಷಗಳ ತನಕ ಕಾಯಿಸಿ ತಕ್ಷಣವೇ ತಣ್ಣಗೆ ಮಾಡಿರುತ್ತಾರೆ. ಅದ್ದರಿಂದ ಈ ಹಾಲಿನಲ್ಲಿ ಬ್ಯಾಕ್ಟೀರಿಯಾ ಬೆಳೆಯಕ್ಕೆ ಅವಕಾಶವಿಲ್ಲ. ಟೆಟ್ರಾ ಪ್ಯಾಕಿನಲ್ಲಿ ಹಾಕುವುದರಿಂದ ಹೊರಗಿನ ಯಾವ ಉಷ್ಣಾಂಶದಿಂದ ಹಾಲು ಒಡೆಯುವುದಿಲ್ಲ.

2. ಗಟ್ಟಿ ಕಾಫಿ ಮಾಡೋಕ್ಕೆ: ನಂದಿನಿಯ ತುಸು ನೇರಳೆ ಬಣ್ಣದ ಪ್ಯಾಕೆಟ್ ಅಂದರೆ ನಂದಿನಿ ಸಮೃದ್ಧಿ ಪಾಸ್ಚರೀಕರಿಸಿದ ಹಾಲು ತಂದು ಗಟ್ಟಿ ಕಾಫಿ ಮಾಡಿಕೊಳ್ಳಬಹುದು. ಪೂರ್ತಿ ಕೆನೆಯ ಅಂಶ ಈ ಹಾಲಿನಲ್ಲಿ ಇರೋ ಹಾಗೆ ಮಾಡಿರುತ್ತಾರೆ. ಆದ್ರೇನೂ ಕೆನೆ-ಕೆನೆ ಕಟ್ಟಿಕೊಳ್ಳುವುದಿಲ್ಲ. ಯಾಕಂದ್ರೆ ಹೊಮೊಜಿನೈಸ್ಡ್ ಹದಕ್ಕೆ ಮಾಡಿರುತ್ತಾರೆ.

3. ಹಿರಿಯರಿಗೆ ಕುಡಿಯಲು: ನಂದಿನಿಯ ಗುಡ್ ಲೈಫ್ ಸ್ಲಿಮ್ಡ್ ಸ್ಕಿನ್ ಮಿಲ್ಕ್ ಪ್ಯಾಕೆಟ್ ಕೂಡ ತೊಗೊಬಹುದು. ಇದರಲ್ಲಿ ಹೆಸರೇ ಹೇಳುವಂತೆ ಕೊಬ್ಬಿನಂಶ ಕಡಿಮೆ ಇರುವುದರಿಂದ ವಯಸ್ಸಾದವರಿಗೆ ಜೀರ್ಣಿಸಿಕೊಳ್ಳಲು ಸುಲಭ. ಇದಲ್ಲದೆ ಹಳದಿ/ಕಿತ್ತಳೆ ಬಣ್ಣದ ಪ್ಯಾಕೆಟ್ – ಪಾಸ್ಚರೀಕರಿಸಿದ ಡಬಲ್ ಟೋನ್ಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ. ಯಾಕಂದ್ರೆ ಇದರಲ್ಲೂ ಕಡಿಮೆ ಕೊಬ್ಬಿನಂಶ ಇರತ್ತೆ.

4. ಕಾಫಿ ಅಥವಾ ಟೀ ಮಾಡೋಕ್ಕೆ: ನಂದಿನಿಯ ಹಸಿರು ಬಣ್ಣದ ಪ್ಯಾಕೆಟ್- ಹೊಮೊಜಿನೈಸೆಡ್, ಪಾಸ್ಚರೀಕರಿಸಿದ ಹಸುವಿನ ಹಾಲು ತಂದು ಮಾಡಿದರೆ ಹಾಲು ಒದಗುತ್ತದೆ. ಹೆಚ್ಚು ಲೋಟ ಕಾಫಿ/ಟೀ ಮಾಡಬಹುದು. ರುಚಿಯೂ ಚೆನ್ನ.

5. ಗಟ್ಟಿ ಮೊಸರು ಮಾಡೋಕ್ಕೆ: ನಂದಿನಿಯ ಸ್ಪೆಶಲ್ ಹಸಿರು ಬಣ್ಣದ ಪ್ಯಾಕೆಟ್ ಅಂದರೆ ಸ್ಪೆಶಲ್ ಟೋನ್ಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ.

6. ಬೆಳೆಯುವ ಮಕ್ಕಳಿಗೆ: ಕಿತ್ತಳೆ ಬಣ್ಣದ ನಂದಿನಿಯ ಶುಭಂ ಪ್ಯಾಕೆಟ್. ಅಥವಾ ಸಂಪೂರ್ಣ ಸ್ಟ್ಯಾಂಡರ್ಡೈಸ್ಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ. ಯಾಕಂದ್ರೆ ಇದರಲ್ಲಿ ಬೆಳೆಯುವ ಮಕ್ಕಳಿಗೆ ಬೇಕಾಗುವ ಕೊಬ್ಬಿನಂಶ ಇರತ್ತೆ. ಅವರ ದಿನ ನಿತ್ಯದ ಚಟುವಟುಕೆಗಳಿಗೆ ಸಾಕಷ್ಟು ಶಕ್ತಿ ಕೊಡತ್ತೆ.

8. ಪಾಯಸ ಅಥವಾ ಹಾಲಿನಿಂದ ಮಾಡುವ ಸಿಹಿ ಪದಾರ್ಥಗಳಿಗೆ: ನಂದಿನಿಯ ತುಸು ನೇರಳೆ ಬಣ್ಣದ ಪ್ಯಾಕೆಟ್ ಅಂದರೆ ನಂದಿನಿ ಸಮೃದ್ಧಿ ಪಾಸ್ಚರೀಕರಿಸಿದ ಹಾಲು ತಂದರೆ ತುಂಬಾ ಚೆನ್ನಾಗಿ ಆಗತ್ತೆ. “ಮಿಲ್ಕ್ ಮೈಡ್” ತರುವ ಬದಲು.

7. ಕಾಯಿಸಿ ಕುಡಿಯಲು: ಉಕ್ಕು ಬರುವ ತನಕ ಕಾಯಿಸಿಕೊಂಡು ಕುಡಿಯುವುದಕ್ಕೆ ನಂದಿನಿಯ ಯಾವ ಬಣ್ಣದ ಪ್ಯಾಕೆಟ್ ಬೇಕಾದರೂ ತರಬಹುದು.

9. ಪುಟ್ಟ ಮಕ್ಕಳಿಗೆ ಕುಡಿಸೋಕೆ: ನಂದಿನಿಯ ಹಸಿರು ಬಣ್ಣದ ಪ್ಯಾಕೆಟ್- ಹೊಮೊಜಿನೈಸೆಡ್, ಪಾಸ್ಚರೀಕರಿಸಿದ ಹಸುವಿನ ಹಾಲು ತಂದರೆ ಒಳ್ಳೆಯದು. ಯಾಕಂದ್ರೆ ಬೇರೆ ಪ್ಯಾಕೆಟ್ನಲ್ಲಿ ಹಸು ಹಾಲಿನ ಜೊತೆ ಎಮ್ಮೆ ಹಾಲು ಸೇರಿಕೊಂಡಿರತ್ತೆ.

10. ಫಿಟ್ನೆಸ್ ಬಗ್ಗೆ ಹೆಚ್ಚು ಕಾಳಜಿ ಇರುವವರಿಗೆ: ನಂದಿನಿ  ಸ್ಮಾರ್ಟ್ ಡಬಲ್ ಟೋನ್ಡ್ ಹೊಮೊಜಿನೈಸೆಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ.

11. ಕೊಬ್ಬು ಇಳಿಸೋಕೆ: ಕೊಬ್ಬು ಕರಗಬೇಕು ಅಂತ ಹಾಲು ಕುಡಿಯೋದನ್ನ ನಿಲ್ಲಿಸಬಿಟ್ಟರೆ ಬೇರೆ ಪೌಷ್ಟಿಕಾಂಶಗಳ ಕೊರತೆ ಉಂಟಾಗತ್ತೆ. ಇದಕ್ಕೆ ಸುಲಭವಾಗಿ ಸಿಗುವ ನಂದಿನಿಯ ಹಳದಿ/ಕಿತ್ತಳೆ ಬಣ್ಣದ ಪ್ಯಾಕೆಟ್ – ಪಾಸ್ಚರೀಕರಿಸಿದ ಡಬಲ್ ಟೋನ್ಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ. ಯಾಕಂದ್ರೆ ಇದರಲ್ಲಿ ಕಡಿಮೆ ಕೊಬ್ಬಿನಂಶ ಇರತ್ತೆ.

12. ತುಂಬಾ ದಿನ ಇಟ್ಟುಕೊಳ್ಳಬೇಕಾದರೆ: ಪ್ರವಾಸಕ್ಕೆ ಹೋಗ್ಬೇಕು, ಮಕ್ಕಳಿಗೆ ಹಾಲು ಸಿಗಲ್ವಲ್ಲಾ ಅಂತ ಚಿಂತೆ ಬಂದರೆ ನಂದಿನಿಯ ಗುಡ್ ಲೈಫ್ ಟೆಟ್ರಾ ಪ್ಯಾಕ್ ತೊಗೊಳ್ಳಿ. 10 ದಿನದ ತನಕ ಹಾಲನ್ನು ಹಾಗೆ ಕುಡಿಯಬಹುದು. ಕಾಯಿಸುವುದೂ ಬೇಡ. ಟೆಟ್ರಾ ಪ್ಯಾಕಿನಲ್ಲಿ ಇರುವುದರಿಂದ ಹಾಲು ಒಡೆಯುವುದಿಲ್ಲ.

13. ಬರೀ ಹಸುವಿನ ಹಾಲು ಬೇಕು ಅನ್ನುವವರಿಗೆ: ನಂದಿನಿಯ ಹಸಿರು ಬಣ್ಣದ ಪ್ಯಾಕೆಟ್- ಹೊಮೊಜಿನೈಸೆಡ್, ಪಾಸ್ಚರೀಕರಿಸಿದ ಹಸುವಿನ ಹಾಲು ತಂದರೆ ಒಳ್ಳೆಯದು. ಯಾಕಂದ್ರೆ ಬೇರೆ ಪ್ಯಾಕೆಟ್ನಲ್ಲಿ ಹಸು ಹಾಲಿನ ಜೊತೆ ಎಮ್ಮೆ ಹಾಲು ಸೇರಿಕೊಂಡಿರತ್ತೆ.

ಅನ್ನ ನೈಸರ್ಗಿಕವಾಗಿ ತಂಪು ಉಂಟುಮಾಡುತ್ತದೆ. ಬೆಳಗ್ಗೆ ರಾತ್ರಿಯ ಅನ್ನವನ್ನು ಊಟ ಮಾಡುವುದರಿಂದ ದೇಹ ತಂಪಾಗಿರುತ್ತದೆ. ರಾತ್ರಿ ಮಿಕ್ಕಿದ ಅನ್ನವನ್ನು ಬೆಳಗ್ಗೆ ಸೇವಿಸುವುದರಿಂದ ಉದರ ಸಂಬಂಧಿ ಕಾಯಿಲೆಗಳು ದೂರವಾಗುತ್ತದೆ. ದೇಹದಲ್ಲಿ ಎಲ್ಲಾದರೂ ಹುಣ್ಣುಗಳಾಗಿದ್ದರೆ ರಾತ್ರಿ ಮಿಕ್ಕಿದ ಅನ್ನವನ್ನು ಅದಕ್ಕೆ ಹಚ್ಚುವುದರಿಂದ ಹುಣ್ಣು ಬೇಗ ವಾಸಿಯಾಗುತ್ತದೆ. ರಾತ್ರಿ ಉಳಿದ ಅನ್ನವನ್ನು ಸೇವಿಸುವುದರಿಂದ ಕೊಬ್ಬು ಕಡಿಮೆಯಾಗಿ ದೇಹದ ತೂಕ ಕಡಿಮೆಯಾಗಿತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಡುಗೆ ಮಾಡಲು ಹೊಲದಲ್ಲಿ ಕ್ಯಾರೆಟ್ ಕಿತ್ತಾಗ, ಅದರಲ್ಲಿ ಇದ್ದ ವಸ್ತುವನ್ನು ನೋಡಿ ಶಾಕ್ ಆದ ಮಹಿಳೆ.

    ಸ್ವೀಡನ್ ದೇಶಕ್ಕೆ ಸೇರಿದ ಲೀನಾ ಅನ್ನುವ ಮಹಿಳೆ 16 ವರ್ಷಗಳ ಹಿಂದೆ ತನ್ನ ಮನೆಯಲ್ಲಿ ಇದ್ದಾಗ ತನ್ನ ಮದುವೆಯ ದಿನ ಗಂಡ ಕೊಡಿಸಿದ್ದ ಅಮೂಲ್ಯವಾದ ವಸ್ತುವನ್ನ ಕಳೆದುಕೊಳ್ಳುತ್ತಾಳೆ. ಇನ್ನು ಅದೂ ವೆಡ್ಡಿಂಗ್ ರಿಂಗ್ ಮತ್ತು ದುಬಾರಿ ಬೆಲೆಯ ವಜ್ರದ ಉಂಗುರ ಆದ್ದರಿಂದ ತುಂಬಾ ಬೇಜಾರು ಮಾಡಿಕೊಂಡು ಕಣ್ಣೀರು ಹಾಕುತ್ತ ಮಕ್ಕಳ ಜೊತೆ ಮನೆಯ ತುಂಬಾ ಹುಡುಕಿದಳು ಲೀನಾ, ಆದರೆ ಎಷ್ಟೇ ಹುಡುಕಿದರೂ ಕೂಡ ಆ ಉಂಗುರ ಮಾತ್ರ ಸಿಗಲೇ ಇಲ್ಲ. ಹೀಗೆ 16 ವರ್ಷ ಕಳೆದ ನಂತರ…

  • Home quarantine, Lockdown, Top News

    ಕ್ವಾರಂಟೀನ್ ನಲ್ಲಿದ್ದರೂ ಒಂದುಗೂಡಿ ನಮಾಜ್…!! ಮೂರ್ಖತನ

    ಮೂರ್ಖತನ ಹಾಗೂ ಉಗ್ಘಟತನದ ಪರಮಾವಧಿ ಎಂದರೆ ಇದೇ ಅಲ್ಲವೇ?
    ಸರ್ಕಾರ ಕೊರೋನಾ ಹಿನ್ನಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕಠಿಣ ನಿರ್ದೇಶನ ನೀಡಿದ್ದರೂ ಈ ಮೂರ್ಖರು ಏನು ಮಾಡಿದ್ದಾರೆ ಎಂಬುದನ್ನು ನೋಡಿ.

  • ಸುದ್ದಿ

    ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ನಗರ ಸಭೆ ಸಂಸ್ಥೆಗಳಿಗೆ 40 ಕೋಟಿ ರೂ. ಬಿಡುಗಡೆ…!

    ರಾಜ್ಯದ ಬರಪೀಡಿತ ತಾಲೂಕುಗಳ ವ್ಯಾಪ್ತಿಯಲ್ಲಿ ಬರುವ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ 40 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ನಗರಾಭಿವೃದ್ಧಿ ಇಲಾಖೆ ಆದೇಶಿಸಿದೆ. ನಗರ ಸ್ಥಳೀಯ ಸಂಸ್ಥೆಗಳು, ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಪೋರ್ಸ್ ರಚಿಸಲಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಅವಶ್ಯವಿರುವ ಕಾಮಗಾರಿಗಳ ಕ್ರಿಯಾ ಯೋಜನೆಯನ್ನು ತಯಾರಿಸಿ, ಜಿಲ್ಲಾಧಿಕಾರಿಗಳಿಂದ ಅನುಮೋದನೆ ಪಡೆದು ತುರ್ತಾಗಿ ಅನುಷ್ಠಾನಗೊಳಿಸಬೇಕು. ಬಿಡುಗಡೆ ಮಾಡಿರುವ ಅನುದಾನದಡಿ ಕೊಳವೆ ಬಾವಿಗಳನ್ನು ಆಳಗೊಳಿಸುವ, ಸ್ವಚ್ಛಗೊಳಿಸುವುದು ಹಾಗೂ ಹೈಡ್ರೋಫ್ರಾಕ್ಚರಿಂಗ್ ಕೈಗೊಳ್ಳುವುದು. ನೀರು…

  • ಸಿನಿಮಾ, ಸ್ಪೂರ್ತಿ

    ಕಾರು ಕ್ಲೀನರ್ ಆಗಿ ಕೆಲಸಕ್ಕೆ ಸೇರಿದ ಈ ವ್ಯಕ್ತಿ ,ಸೂಪರ್ ಸ್ಟಾರ್ ಆಗಿದ್ದು ಹೇಗೆ..?ತಿಳಿಯಲು ಈ ಲೇಖನ ಓದಿ..

    ರಾಘವ ಲಾರೆನ್ಸ್ ಈಗ ಟಾಲೀವುಡ್, ಕೋಲೀವುಡ್ ನಲ್ಲಿ ಉತ್ತಮ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ. ಇವರು ನಿರ್ದೇಶಕರಾಗುವ ಮೊದಲು ಕೊರಿಯಾಗ್ರಾಫರ್ ಆಗಿ ತನ್ನ ಜೀವನವನ್ನು ಆರಂಭಿಸಿದ್ದರು. ಪ್ರಭುದೇವಾ ಟ್ರೂಪ್ ನಲ್ಲಿ ಒಬ್ಬನಾಗಿದ್ದು..ಎಲ್ಲರನ್ನೂ ಆಕರ್ಷಿಸುವಂತೆ ನೃತ್ಯ ಅಭಿನಯಿಸಿ ಮೆಗಾಸ್ಟಾರ್ ಗಮನ ಸೆಳೆದಿದ್ದೇ ತಡ ಮೆಗಾಸ್ಟಾರ್ ರವರ ಹಿಟ್ಲರ್ ಚಿತ್ರದಲ್ಲಿ ಅವಕಾಶ ನೀಡಿದರು.

  • ಸುದ್ದಿ

    150 ವರ್ಷ ಬದುಕಬೇಕೆಂಬ ಮೈಕಲ್ ಜಾಕ್ಸನ್ ಬಗ್ಗೆ ನಿಮಗೆಷ್ಟು ಗೊತ್ತು,.??

    ಮೈಕಲ್ ಜಾಕ್ಸನ್ ಎಂಬ ಮಹಾನ್ ಗಾಯಕ ಪ್ರತಿಭೆಯು 150 ವರ್ಷಗಳ ಕಾಲ ಬದುಕಬೇಕೆಂದು ಬಯಸಿದ, ಅದಕ್ಕಾಗಿ ತಲೆ ಕೂದಲಿಂದ ಹಿಡಿದು ಕಾಲಿನ ಬೆರಳುಗಳವರೆಗೆ ದಿನ ನಿತ್ಯ ಪರೀಕ್ಷಿಸಲು 12 ನುರಿತ ಡಾಕ್ಟರ್ ಗಳನ್ನು ತನ್ನ ಮನೆಯಲ್ಲಿ ನೇಮಿಸಿದ್ದ. ಆತ ಆಹಾರವನ್ನು ಸೇವಿಸುವುದಕ್ಕೆ ಮುಂಚೆ ಆತನ ಆಹಾರಗಳನ್ನು ಲ್ಯಾಬ್ ನಲ್ಲಿ ಟೆಸ್ಟ್ ಮಾಡುತ್ತಿದ್ದರು. ಆತನ ದೈನಂದಿನ ವ್ಯಾಯಾಮ ಮತ್ತು ಇತರ ದೇಹ ಸಂರಕ್ಷಣೆಗಾಗಿ ಮತ್ತೆ 15 ಜನರನ್ನು ಕೂಡಾ ನೇಮಿಸಿದ್ದ. ಆಕ್ಸಿಜನ್ ನ ಅಳತೆಯನ್ನು ನಿಯಂತ್ರಿಸುವ ತಂತ್ರಜ್ಞಾನವಿರುವ ಬೆಡ್ಡನ್ನು…

  • ಸುದ್ದಿ

    ʼಚಿನ್ನʼ ಪ್ರಿಯರಿಗೆ ಬಿಗ್‌ ಶಾಕ್: 39 ಸಾವಿರ‌ ರೂ. ಗಡಿ ದಾಟಿದ ಚಿನ್ನದ ಬೆಲೆ

    ಚಿನ್ನ ಜನಸಾಮಾನ್ಯರಿಗೆ ಕೈಗೆಟುಕುತ್ತಿಲ್ಲ. ನಿರಂತರವಾಗಿ ಬಂಗಾರದ ಬೆಲೆ ಏರಿಕೆಯಾಗ್ತಿದೆ. ಸತತ 6ನೇ ದಿನವೂ ಬಂಗಾರದ ಬೆಲೆ ಹೆಚ್ಚಾಗಿದೆ. ಚಿನ್ನ ಈವರೆಗೆ ಶೇಕಡಾ 25 ರಷ್ಟು ಏರಿಕೆ ಕಂಡಿದ್ದು, ಸೋಮವಾರ 10 ಗ್ರಾಂ ಚಿನ್ನದ ಬೆಲೆ 39,196 ರೂಪಾಯಿಯಾಗಿದೆ. ಇನ್ನು ಬೆಳ್ಳಿ ಬೆಲೆಯಲ್ಲೂ ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆ ಶೇಕಡಾ 1ರಷ್ಟು ಹೆಚ್ಚಳ ಕಂಡಿದೆ. ಸೋಮವಾರ ಬೆಳ್ಳಿ ಬೆಲೆ ಕೆ.ಜಿ.ಗೆ 45,058 ರೂಪಾಯಿಗೆ ಮಾರಾಟವಾಗ್ತಿದೆ. ಶುಕ್ರವಾರ ಕೆ.ಜಿ. ಬೆಳ್ಳಿ 45,148 ರೂಪಾಯಿಯಿತ್ತು. ಇದು 2016ರ ನಂತ್ರ ಗರಿಷ್ಠ…