News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ನಿಮ್ಮ ಬ್ಯಾಂಕ್ ಖಾತೆಯಲ್ಲಿ ಇರುವ ಹಣ ಎಷ್ಟು ಎಂದು ಅಕ್ಷಯ್ ಕುಮಾರ್ ಕೇಳಿದ ಪ್ರಶ್ನೆಗೆ ಮೋದಿ ಹೇಳಿದ್ದೇನು ಗೊತ್ತಾ?

156

ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಬಾಲಿವುಡ್ ನಟ ಅಕ್ಷಯ್ ಕುಮಾರ್ ಜೊತೆ ಮೊದಲ ಬಾರಿಗೆ ತಮ್ಮ ವೈಯುಕ್ತಿಕ ಜೀವನ ಅನುಭವಗಳೊಂದಿಗೆ, ತಮ್ಮ ಜೀವನಕ್ಕೆ ಸಂಬಂಧಿಸಿದ ಹಲವಾರು ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಈವರೆಗೆ ಯಾರಿಗೂ ತಿಳಿದಿರದ ಕೆಲ ಮಾಹಿತಿಗಳನ್ನೂ ಮೋದಿ ನಟ ಅಕ್ಷಯ್ ಜೊತೆಗೆ ಹಂಚಿಕೊಂಡಿದ್ದಾರೆ.

1 ಗಂಟೆ 10 ನಿಮಿಷದ ಈ ಸಂದರ್ಶನದಲ್ಲಿ ಮೋದಿ ಹೇಳಿದ ಕೆಲ ಆಸಕ್ತಿಕರ ವಿಚಾರಗಳು ಇವೆ.ನಿಮಗೆ ಮಾವಿನ ಹಣ್ಣು ಇಷ್ಟವೇ ಎಂದು ಅಕ್ಷಯ್ ಕುಮಾರ್ ಕೇಳಿದ್ದಕ್ಕೆ ನಾನು ಮಾವಿನ ಹಣ್ಣು ತಿನ್ನುತ್ತೇನೆ ಹಾಗೂ ಮಾವು ನನಗೆ ಬಹಳ ಇಷ್ಟ. ನಾನು ಚಿಕ್ಕವನಿದ್ದಾಗ ನನ್ನ ಕುಟುಂಬದ ಆರ್ಥಿಕ ಸ್ಥಿತಿ ಉತ್ತಮವಾಗಿರಲಿಲ್ಲ.

ಮಾವಿನ ಹಣ್ಣು ಖರೀದಿಸುವುದು ಅಸಾಧ್ಯವಾಗಿತ್ತು. ಆದರೆ ನಾವು ಮಾವಿನ ತೋಪಿಗೆ ತೆರಳಿ ಮರ ಹತ್ತಿ ತಾಜಾ ಹಣ್ಣುಗಳನ್ನು ತಿನ್ನುತ್ತಿದ್ದೆವು.ಚಿಕ್ಕವನಿದ್ದಾಗ ಗಣ್ಯ ವ್ಯಕ್ತಿಗಳ ಜೀವನಾಧಾರಿತ ಪುಸ್ತಕ ಓದುವ ಹವ್ಯಾಸ ನನಗಿತ್ತು.ಸೈನಿಕರನ್ನು ನೋಡಿದರೆ ನಾನು ಕೂಡಾ ಅವರಿಗೆ ಸೆಲ್ಯೂಟ್ ಹೊಡೆಯುತ್ತಿದ್ದೆ. ಸೇನೆಗೆ ಸೇರಿ ದಂಡನಾಯಕನಾಗಬೇಕೆಂಬ ಕನಸು ಕೂಡ ಇದ್ದಿತ್ತು. ನಾನು ಪ್ರಧಾನಿಯಾಗಬೇಕೆಂಬ ಯೋಚನೆ ಮಾಡಿರಲಿಲ್ಲ.

ನಾನೇನು ಯೋಚಿಸಿರಲಿಲ್ಲವೋ ಆ ಸ್ಥಾನಕ್ಕೇರಿದ್ದೇನೆ. ಸುತ್ತಾಡುತ್ತಾ ಇಲ್ಲಿಗೆ ತಲುಪಿದ್ದೇನೆ ಎಂದರು.ನಿಮ್ಮ ಅಕೌಂಟ್ ನಲ್ಲಿ ಎಷ್ಟು ಹಣವಿದೆ ಎಂದು ಅಕ್ಕಿ ಕೇಳಿದ್ದಕ್ಕೆ ನಾನು ಗುಜರಾತ್ ಸಿಎಂ ಆಗಿದ್ದಾಗ ನನ್ನ ಬಳಿ ಬ್ಯಾಂಕ್ ಅಕೌಂಟ್ ಇರಲಿಲ್ಲ. ಶಾಸಕನಾದ ಮೇಲೆ ಸಂಬಳ ಬರಲಾರಂಭಿಸಿತು. ಶಾಲೆಯಲ್ಲಿದ್ದಾಗ ದೇನಾ ಬ್ಯಾಂಕ್ ಸಿಬ್ಬಂದಿ ಬಂದು ಎಲ್ಲಾ ಮಕ್ಕಳಿಗೆ ಹಣ ಸಂಗ್ರಹಿಸುವ ಹುಂಡಿ ನೀಡಿ, ಇದರಲ್ಲಿ ಹಣ ಕೂಡಿಟ್ಟು ಬ್ಯಾಂಕ್ ನಲ್ಲಿ ಜಮೆ ಮಾಡಿ ಎಂದಿದ್ದರು.

ಆದರೆ ನಮ್ಮ ಬಳಿ ಹುಂಡಿಗೆ ಹಾಕಲು ಹಣವಿರಬೇಕಲ್ಲವೇ? ಅಂದಿನಿಂದ ಅಕೌಂಟ್ ನಿಷ್ಕ್ರಿಯವಾಗಿ ಬಿದ್ದಿತ್ತು. ಸರ್ಕಾರದ ಪರವಾಗಿ ಒಂದು ಫ್ಲ್ಯಾಟ್ ಸಿಗುತ್ತದೆ, ಕಡಿಮೆ ಬೆಲೆಗೆ ಸಿಗುವ ಈ ಫ್ಲ್ಯಾಟ್ ನಾನು ನನ್ನ ಪಕ್ಷಕ್ಕೆ ನೀಡಿದೆ. ಆ ಫ್ಲ್ಯಾಟ್ ವಿಚಾರವಾಗಿ ಸುಪ್ರಿಂ ಕೋರ್ಟ್ ನಲ್ಲಿ ಇನ್ನೂ ಪ್ರಕರಣ ನಡೆಯುತ್ತಿದೆ, ಅದು ಕ್ಲಿಯರ್ ಆದ ಬಳಿಕ ಫ್ಲ್ಯಾಟ್ ಪಕ್ಷದ ಹೆಸರಿಗೆ ಮಾಡುತ್ತೇನೆ.ಅವರು ಪ್ರಧಾನಿಯಾದ ಬಳಿಕ ಅವರ ವೇತನದಿಂದ ಬಂದ 21 ಲಕ್ಷ ರೂ.ಗಳನ್ನು ಡ್ರೈವರ್ ಗಳ ಮಕ್ಕಳಿಗೆ ಮೋದಿ ನೀಡಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ವಿದೇಶಗಳಲ್ಲಿರುವ ಭಾರತೀಯರ ಮಾನಸಿಕ ಸಮಸ್ಯೆಗಳು

    – ಮಯೂನ್ ಎನ್ ಉದ್ಯೋಗವನ್ನೂ, ಒಳ್ಳೆಯ ಭವಿಷ್ಯವನ್ನೂ ಅರಸುತ್ತಾ, ತಾಯ್ನಾಡನ್ನು ಬಿಟ್ಟು, ಹೊರದೇಶಗಳಿಗೆ ಹೋಗುವ ಭಾರತೀಯರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿಭೆಗೆ ಮನ್ನಣೆ, ಕೈತುಂಬಾ ಸಂಬಳ, ಉತ್ತಮ ಮಟ್ಟದ ಜೀವನ ವಿಧಾನಗಳಿರುವ ವಿದೇಶಗಳಲ್ಲಿರುವ ಭಾರತೀಯರು ಸಂತೋಷ, ತೃಪ್ತಿಯಿಂದ ಇರುವರು ಎಂದು ಹೇಳಲಾದೀತೇ? `ನಾವು ಕನಸು ಮನಸಿನಲ್ಲಿ ಊಹಿಸಲಾಗದಷ್ಟು ವೈಭೋಗವನ್ನು ಇಲ್ಲಿ ಕಂಡಿದ್ದೇವೆ. ಹಣವಿದೆ. ಸುಖಕೊಡುವ ವಸ್ತುಗಳಿವೆ. ವಿಸ್ಮಯ ಪಡುವ ವೈಜ್ಞಾನಿಕ ಸಲಕರಣೆಗಳಿವೆ. ಆದರೇನು ಮನಸ್ಸಿಗೆ ನೆಮ್ಮದಿ ಇಲ್ಲ. ಏನೋ ಅತೃಪ್ತಿ ನಮ್ಮನ್ನೂ ಕಾಡುತ್ತದೆ’ ಎಂದು ವಿದೇಶಗಳಲ್ಲಿರುವ…

  • ಸುದ್ದಿ

    ರಿಯಲ್ ಸ್ಟಾರ್ ಉಪ್ಪಿ ಅಭಿಮಾನಿಗಳಿಗೊಂದು ಸಂತಸದ ಸುದ್ದಿ…!

    ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಿರ್ದೇಶಕ ಆರ್. ಚಂದ್ರು ಕಾಂಬಿನೇಷನ್ ನಲ್ಲಿ ಮೂಡಿಬಂದಿದ್ದ ‘ಐ ಲವ್ ಯು’ ಭರ್ಜರಿ ಯಶಸ್ಸು ಕಂಡಿದೆ. ಈ ಕಾಂಬಿನೇಷನ್ ನಲ್ಲಿ ಮತ್ತೊಂದು ಚಿತ್ರ ಮೂಡಿಬರಲಿದೆ. ಈ ಹಿಂದೆ ಉಪೇಂದ್ರ ಅಭಿನಯದ ಆರ್. ಚಂದ್ರು ನಿರ್ದೇಶನದ ಬ್ರಹ್ಮ, ನಂತರ ‘ಐ ಲವ್ ಯು’ ಯಶಸ್ಸು ಕಂಡಿದ್ದು, ಮುಂದಿನ ಚಿತ್ರ ಭಾರಿ ನಿರೀಕ್ಷೆ ಮೂಡಿಸಿದೆ. ಅಂದ ಹಾಗೆ, ಈ ಹೊಸ ಚಿತ್ರ ಭೂಗತ ಜಗತ್ತಿನ ಕಥಾಹಂದರವನ್ನು ಹೊಂದಿದ್ದು, ಘಟಾನುಘಟಿ ಕಲಾವಿದರು ಅಭಿನಯಿಸಲಿದ್ದಾರೆ. ಹೈಬಜೆಟ್ ನಲ್ಲಿ…

  • ಸುದ್ದಿ

    ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯಲ್ಲಿ 9 ನಕಲಿ ವಿದ್ಯಾರ್ಥಿಗಳು ಅರೆಸ್ಟ್……!

    ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯಲ್ಲಿ ಅಭ್ಯರ್ಥಿ ಬದಲಾಗಿ ಪರೀಕ್ಷೆ ಬರೆಯುತ್ತಿದ್ದ 9 ನಕಲಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಶಿವರಾಜ ಜಾಳಿಹಾಳ, ಮಂಜುನಾಥ ಕಡೆಮನಿ, ನಿಂಗಪ್ಪ ಕಂಬಳಿ, ಮೈಲಾರಪ್ಪ, ಫಕೀರಪ್ಪ ಸೇರಿದಂತೆ 9 ಮಂದಿ ನಕಲಿ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯಲ್ಲಿ ಅವರು ಬೇರೆಯವರ ಹೆಸರಲ್ಲಿ ಪರೀಕ್ಷೆ ಬರೆದ ಹಿನ್ನೆಲೆಯಲ್ಲಿ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪರೀಕ್ಷಾ ಅಧೀಕ್ಷಕರು, ಕೊಠಡಿ ಮೇಲ್ವಿಚಾರಕರು ಕೊಠಡಿ ಮೇಲ್ವಿಚಾರಕರು ಸೇರಿ ನಾಲ್ವರು ಅಧಿಕಾರಿಗಳನ್ನು ಪರೀಕ್ಷೆ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದ್ದು, ಕ್ರಮಕ್ಕೆ ಆದೇಶಿಸಲಾಗಿದೆ ಎಂದು…

  • ರೆಸಿಪಿ

    106 ವರ್ಷದ ಈ ಅಜ್ಜಿ ವಿಶ್ವದ ಹಿರಿಯ ಯೂಟ್ಯೂಬ್ ಸ್ಟಾರ್..!ಈ ಅಜ್ಜಿ ಯೂಟ್ಯೂಬ್ ಸ್ಟಾರ್ ಆಗಿದ್ದು ಹೇಗೆ ಗೊತ್ತಾ?

    ಜಗತ್ತಿನಲ್ಲಿ ಯೂಟ್ಯೂಬ್ ವಿಡಿಯೋಗಳು ಸಖತ್ ಸದ್ದು ಮಾಡುತ್ತಿದ್ದು, ಯೂಟ್ಯೂಬ್‍ನಲ್ಲಿ ವಿವಿಧ ಬಗೆಯ ಅಡುಗೆಗಳನ್ನು ಹೇಳಿಕೊಡುವ ಅನೇಕ ಚಾನಲ್‍ಗಳಿವೆ. ಚೆಫ್‍ಗಳಿಂದ ಹಿಡಿದು ಗೃಹಿಣಿಯರೂ ಕೂಡ ಯೂಟ್ಯೂಬ್‍ನಲ್ಲಿ ಅಡುಗೆ ವಿಡಿಯೋಗಳನ್ನ ಹಾಕ್ತಿರ್ತಾರೆ. ಇಲ್ಲಿ ಯಾರ ಸಹಾಯವೂ ಇಲ್ಲದೇ ಸ್ಟಾರ್ ಆಗಬಹುದು. ತಮ್ಮದೇ ಚಾನಲ್ ಶುರು ಮಾಡಬಹುದು, ಹಣವನ್ನು ಸಂಪಾದನೆ ಮಾಡಬಹುದು. ಇದೇ ಮಾದರಿಯಲ್ಲಿ ಆಂಧ್ರ ಶತಾಯುಷಿ, 106 ವರ್ಷದ ಅಜ್ಜಿಯೊಬ್ಬರು ಹಳ್ಳಿ ಸ್ಟೈಲ್ ಅಡುಗೆಗಳ ಮೂಲಕ ಇಂಟರ್ನೆಟ್ ಸ್ಟಾರ್ ಆಗಿದ್ದಾರೆ.

  • ರೆಸಿಪಿ

    ಮೈಸೂರು ಶೈಲಿಯಲ್ಲಿ ಬಿಸಿ ಬಿಸಿ ‘ಚಿಲ್ಲಿ ಚಿಕನ್’ ಮಾಡಿ…

    ಚಿಲ್ಲಿ ಚಿಕನ್ ಹೆಸರು ಕೇಳದವರೇ ಇಲ್ಲ. ಹೆಸರು ಕೇಳಿದ ಕೂಡಲೇ ಬಾಯಲ್ಲಿ ನೀರೂರಿಸುವ ಚಿಲ್ಲಿ ಚಿಕನ್ ಕಣ್ಣ ಮುಂದೆ ಬರುತ್ತದೆ. ನಿಮಗಾಗಿ ಬಾಯಿಲ್ಲಿ ನೀರಿರುವ, ಮೈಸೂರು ಶೈಲಿಯ ಚಿಲ್ಲಿ ಚಿಕನ್ ರೆಸಿಪಿ …