ಸುದ್ದಿ

ನೂತನ ಸ್ಪೀಕರ್ ಆಗಿ​ ವಿಶ್ವೇಶ್ವರ ಹೆಗಡೆ ಕಾಗೇರಿ ಆಯ್ಕೆ

49

ಬಿ.ಎಸ್​.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಿನ್ನೆ ಸದನದಲ್ಲಿ ಬಹುಮತ ಕೂಡ ಸಾಬೀತು ಮಾಡಿದ್ದಾರೆ. ಬಿಎಸ್​ವೈ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸ್ಪೀಕರ್​ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ವಿಶ್ವೇಶ್ವರ ಹೆಗಡೆ ಕಾಗೇರಿ ನೂತನ ಸ್ಪೀಕರ್​ ಆಗಿ ಆಯ್ಕೆಯಾಗಿದ್ದು, ನಾಳೆ ಸದನದಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಆಗಲಿದೆ.

ಕಾಂಗ್ರೆಸ್​  ಮತ್ತು ಜೆಡಿಎಸ್​ ನಾಯಕರು ಸ್ಪೀಕರ್​ ಚುನಾವಣೆಯಿಂದ ಹಿಂದೆ ಸರಿದಿದ್ದು, ಯಾವುದೇ ನಾಮಪತ್ರ ಸಲ್ಲಿಸಿರಲಿಲ್ಲ. ಬಿಜೆಪಿಯಿಂದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರು. ಹೀಗಾಗಿ ಕಾಗೇರಿ ಅವರು ಸ್ಪೀಕರ್ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸ್ಫೀಕರ್ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಸಂತಸ ವ್ಯಕ್ತಪಡಿಸಿದ್ದಾರೆ. “ನಮ್ಮ ವರಿಷ್ಠರು, ನಮ್ಮ ನಾಯಕರು ಎಲ್ಲರೂ ಸೇರಿ ನನ್ನನ್ನು ಸ್ಪೀಕರ್​ ಆಗಿ ಆಯ್ಕೆ ಮಾಡಿದ್ದಾರೆ. ನಾನು ನಿಷ್ಠಾವಂತನಾಗಿ‌‌ ಸ್ಪೀಕರ್ ಹುದ್ದೆಯಲ್ಲಿ ನನ್ನ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ,” ಎಂದು ಕಾಗೇರಿ ಹೇಳಿದ್ಧಾರೆ.

ಈ ಬಗ್ಗೆ ಬಿಜೆಪಿ ಮುಖಂಡ ಕೆ.ಎಸ್​.ಈಶ್ವರಪ್ಪ ಮಾತನಾಡಿದ್ದಾರೆ. “ಕಾಗೇರಿ ಪಕ್ಷದ ನಿಷ್ಠಾವಂತ ಸ್ವಯಂ ಸೇವಕ. ಇಂತಹ ಸ್ವಯಂ ಸೇವಕ ಈಗ ಸ್ಪೀಕರ್ ಅಂತಹ ಉನ್ನತ ಸ್ಥಾನಕ್ಕೆ ಏರಿದ್ದಾರೆ. ಕಾಗೇರಿ ಅವರಿಗೆ ಧನ್ಯವಾದಗಳು,” ಎಂದಿದ್ದಾರೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್, ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಸುರೇಶ್ ಕುಮಾರ್ ಹೆಸರು ಸ್ಪೀಕರ್ ಸ್ಥಾನಕ್ಕೆ ಮುಂಚೂಣಿಯಲ್ಲಿ ಕೇಳಿ ಬಂದಿದ್ದವು. ನಾನು ಈ ಬಾರಿ ಸ್ಪೀಕರ್ ಆಗಿ ಕೆಲಸ ನಿರ್ವಹಿಸಲಾರೆ ಎಂದು ಈಗಾಗೇ ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ ಸ್ಪಷ್ಟಪಡಿಸಿದ್ದರು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಉಪ್ಪಿ ತಮ್ಮ ರಾಜಕೀಯ ಪಕ್ಷದ ಹೆಸರನ್ನು ಘೋಷಿಸಿದ್ದಾರೆ..!ತಿಳಿಯಲು ಇದನ್ನು ಓದಿ ..

    ನಟ ಉಪೇಂದ್ರ ರಾಜಕೀಯಕ್ಕೆ ಬರುವ ವಿಷಯ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ. ಅನೇಕರು ಉಪ್ಪಿ ರಾಜಕೀಯಕ್ಕೆ ಬರಲಿ ಎಂದು ಸ್ವಾಗತಿಸುತ್ತಿದ್ದರೇ, ಇನ್ನೂ ಕೆಲವರು ಇದು ಸಿನಿಮಾದಷ್ಟು ಸುಲಭವಲ್ಲ ಎಂದು ಹೇಳುತ್ತಿದ್ದಾರೆ.

  • ಸುದ್ದಿ

    ಜನರ ಆರೋಗ್ಯ ರಕ್ಷಣೆ, ಪ್ರವಾಸೋದ್ಯಮಕ್ಕೆ ಒತ್ತು ಮತ್ತು ಕೆಫೀನ್​ ಪೇಯಗಳ ತೆರಿಗೆ ಹೆಚ್ಚಿಸಿದಂತಹ ಜಿಎಸ್​ಟಿ ಮಂಡಳಿ,.!

    ಪಣಜಿ,  ದೇಶದ ಜನರ ಆರೋಗ್ಯ ರಕ್ಷಣೆಗೆ ಒತ್ತು ನೀಡಿರುವ ಜಿಎಸ್​ಟಿ ಮಂಡಳಿ ಕೆಫೀನ್​ ಆಧಾರಿತ ಪೇಯಗಳ ಮೇಲಿನ ತೆರಿಗೆಯನ್ನು ಹೆಚ್ಚಿಸಿದೆ. ಇದೇ ವೇಳೆ ಪ್ರವಾಸೋದ್ಯಮಕ್ಕೆ ಒತ್ತು ಕೊಡಲು ಹೋಟೆಲ್​ ಕೋಣೆಗಳ ಬಾಡಿಗೆ ಮೇಲಿನ ತೆರಿಗೆಯನ್ನು ಇಳಿಸಿದೆ. ಜಿಎಸ್​ಟಿ ಮಂಡಳಿ ಸಭೆಯ ಬಳಿಕ ಶುಕ್ರವಾರ ರಾತ್ರಿ ಸುದ್ದಿಗಾರರ ಜತೆ ಮಾತನಾಡಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​, ಒಂದು ರಾತ್ರಿ ತಂಗಲು 1 ಸಾವಿರ ರೂ.ವರೆಗಿನ ಹೋಟೆಲ್​ ಕೋಣೆಗಳ ಬಾಡಿಗೆ ಮೇಲೆ ವಿಧಿಸಲಾಗುತ್ತಿದ್ದ ತೆರಿಗೆಯನ್ನು ಸಂಪೂರ್ಣ ರದ್ದುಗೊಳಿಸಲಾಗಿದೆ. ಒಂದು…

  • ಸುದ್ದಿ

    ಬ್ರೆಕಿಂಗ್ ಸುದ್ದಿ..!ಭಾರತೀಯ ವಾಯು ಸೇನೆಯ ಪೈಲಟ್ ನ್ನು ಬಂಧಿಸಿದ್ದೇವೆಂದು ವಿಡಿಯೋ ಬಿಡುಗಡೆ ಮಾಡಿದ ಪಾಕ್?

    ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಕಾರ್ಮೋಡ ಪಸರಿಸಿರುವ ಬೆನ್ನಲ್ಲೇ ಪಾಕಿಸ್ತಾನ ಭಾರತೀಯ ಪೈಲಟ್ ರನ್ನು ಬಂಧಿಸಿರುವ ವಿಡಿಯೋವನ್ನು ಬಿಡುಗಡೆ ಮಾಡಿದೆ. ಇನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆಯ ಜೆಟ್ ವಿಮಾನ ಪತನಗೊಂಡಿದ್ದು ಇದರಲ್ಲಿದ್ದ ಪೈಲಟ್ ಗಳ ಪೈಕಿ ಒಬ್ಬರನ್ನು ಬಂಧಿಸಿದ್ದೇವೆ. ಇನ್ನೊಬ್ಬ ಪೈಲಟ್ ಆಸ್ಪತ್ರೆಯಲ್ಲಿ ದಾಖಲಿಸಿರುವುದಾಗಿ ಪಾಕಿಸ್ತಾನ ಹೇಳಿದೆ.  ಪಾಕಿಸ್ತಾನ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ನಾನು ವಿಂಗ್ ಕಮಾಂಡರ್ ಅಭಿನಂದನ್, ನಾನು ಐಎಎಫ್ ಅಧಿಕಾರಿ, ನನ್ನ ಸರ್ವಿಸ್ ನಂಬರ್ 27981. ಹೀಗೆ ಪೈಲಟ್ ಒಬ್ಬರು…

  • ಸಿನಿಮಾ

    ಸ್ಯಾಂಡಲ್ ವುಡ್ ನಟರ ಮನೆಯ ಮೇಲೆ ಐಟಿ ದಾಳಿ…ರೊಚ್ಚಿಗೆದ್ದ ಅಭಿಮಾನಿಗಳು ಮೋದಿಯವರಿಗೆ ಹೇಳಿದ್ದೇನು ಗೊತ್ತೆ?

    ಇಂದು ಮುಂಜಾನೆ ಸ್ಯಾಂಡಲ್ ವುಡ್ ಸ್ಟಾರ್ ನಟರು ಗಳಾದ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ , ಪವರ್ ಪುನೀತ್ ರಾಜಕುಮಾರ್, ರಾಕಿಂಗ್ ಸ್ಟಾರ್ ಯಶ್ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಮನೆಯ ಮೇಲೆ ಐಟಿ ದಾಳಿ ನಡೆದಿದೆ. ಅಲ್ಲದೆ ನಿರ್ಮಾಪಕರುಗಳಾದ ಕೆಜಿಎಫ್ ಖ್ಯಾತಿಯ ಸ್ಟಾರ್ ನಿರ್ಮಾಪಕರಾದ ಕಿರಂಗದೂರ್ ವಿಜಯ್, ಮನೋಹರ್, ರಾಕ್ ಲೈನ್ ವೆಂಕಟೇಶ್ ಅವರ ಮನೆಯ ಮೇಲೂ ಸಹ ದಾಳಿ ನಡೆದಿದೆ. ಸಿನಿಮಾ ಕ್ಷೇತ್ರದಲ್ಲಿ ಬ್ಲ್ಯಾಕ್ ಮನಿಯನ್ನು ವೈಟ್ ಮನಿ ಆಗಿ ಬದಲಾವಣೆ…

  • ಮನರಂಜನೆ

    ಲಕ್ಶ್ಮಿ ಹುಟ್ಟುಹಬ್ಬಕ್ಕೆ ಅನುಶ್ರಿ ಕೊಟ್ಟ ಕಾಣಿಕೆ ಏನು ಗೊತ್ತಾ..?ಹುಟ್ಟುಹಬ್ಬ ಆಚರಿಸಿಕೊಂಡ ಹಳ್ಳಿ ಹುಡುಗಿ ಲಕ್ಷ್ಮಿ ಹೇಳಿದ್ದೇನು.?ತಿಳಿಯಲು ಈ ಲೇಖನ ಓದಿ…

    ಜೀ-ಕನ್ನಡದಲ್ಲಿ ಆರಂಭವಾಗಿರುವ ‘ಸರಿಗಮಪ’ 14ನೇ ಆವೃತ್ತಿ ಈಗಾಗಲೇ ಕರುನಾಡ ಜನರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.ಪ್ರತಿಭಾನ್ವಿತ ಮಕ್ಕಳಿಗೆ ಅವಕಾಶ ನೀಡುವ ಮೂಲಕ ಜೀ-ವಾಹಿನಿ ಮತ್ತೆ ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ. ಮಕ್ಕಳ ಸಿಂಗಿಂಗ್ ಶೋ ಎಷ್ಟೋ ಜನರಿಗೆ ವೀಕೆಂಡ್ ನಲ್ಲಿ ಮನರಂಜನೆಯ ಜೊತೆಗೆ ಮನಸ್ಸಿಗೆ ನೆಮ್ಮದಿಯನ್ನು ತರುತ್ತದೆ.. ಅದರಲ್ಲೂ ಕೆಲವು ಸ್ಪರ್ಧಿಗಳು ನಮ್ಮ ಮನೆಯ ಸದಸ್ಯರಂತಾಗುತ್ತಾರೆ.ಜೀ ಕನ್ನಡ ಟಿವಿ ರಿಯಾಲಿಟಿ ಸಿಂಗಿಂಗ್ ಸರಿಗಮಪ ಶೋ ನ ಲಕ್ಷ್ಮೀ ಕೂಡ ಇದಕ್ಕೆ ಹೊರತಾಗಿಲ್ಲ.. ಹಳ್ಳಿಯಿಂದ ಬಂದ ಪ್ರತಿಭಾನ್ವಿತ ಕಲಾವಿದೆ ಈ ಲಕ್ಷ್ಮಿರಾಮಪ್ಪ.ಇವರ…

  • ಸುದ್ದಿ

    ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ವಾಹನ ಹರಿದು ನಾಲ್ಕು ಜನರ ಸಾವು…!

    ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ಅಪರಿಚಿತ ವಾಹನವೊಂದು ಹರಿದ ಪರಿಣಾಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಸೇರಿ ನಾಲ್ವರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಹುಮ್ನಾಬಾದ್‍ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 65ರ ಮಂಗಲಗಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಎಚ್ ಸಚಿನ್, ಆತನ ಗೆಳೆಯರಾದ ಕಾಶಿನಾಥ್, ಗುರುನಾಥ್ ಮತ್ತು ರಘುವೀರ್ ಮೃತಪಟ್ಟವರು. ಇವರೆಲ್ಲರೂ ಸುಮಾರು 22 ವರ್ಷ ವಯಸ್ಸಿನವರಾಗಿದ್ದು, ಹುಮ್ನಾಬಾದ್ ತಾಲೂಕಿನ ಮಂಗಲಗಿ ಗ್ರಾಮದವರು ಎಂದು ಪೊಲೀಸರು ತಿಳಿಸಿದ್ದಾರೆ. ಯುವಕರು ರಸ್ತೆಯಲ್ಲಿ…