News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ನೂತನ ಸ್ಪೀಕರ್ ಆಗಿ​ ವಿಶ್ವೇಶ್ವರ ಹೆಗಡೆ ಕಾಗೇರಿ ಆಯ್ಕೆ

53

ಬಿ.ಎಸ್​.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಿನ್ನೆ ಸದನದಲ್ಲಿ ಬಹುಮತ ಕೂಡ ಸಾಬೀತು ಮಾಡಿದ್ದಾರೆ. ಬಿಎಸ್​ವೈ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸ್ಪೀಕರ್​ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ವಿಶ್ವೇಶ್ವರ ಹೆಗಡೆ ಕಾಗೇರಿ ನೂತನ ಸ್ಪೀಕರ್​ ಆಗಿ ಆಯ್ಕೆಯಾಗಿದ್ದು, ನಾಳೆ ಸದನದಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಆಗಲಿದೆ.

ಕಾಂಗ್ರೆಸ್​  ಮತ್ತು ಜೆಡಿಎಸ್​ ನಾಯಕರು ಸ್ಪೀಕರ್​ ಚುನಾವಣೆಯಿಂದ ಹಿಂದೆ ಸರಿದಿದ್ದು, ಯಾವುದೇ ನಾಮಪತ್ರ ಸಲ್ಲಿಸಿರಲಿಲ್ಲ. ಬಿಜೆಪಿಯಿಂದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರು. ಹೀಗಾಗಿ ಕಾಗೇರಿ ಅವರು ಸ್ಪೀಕರ್ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸ್ಫೀಕರ್ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಸಂತಸ ವ್ಯಕ್ತಪಡಿಸಿದ್ದಾರೆ. “ನಮ್ಮ ವರಿಷ್ಠರು, ನಮ್ಮ ನಾಯಕರು ಎಲ್ಲರೂ ಸೇರಿ ನನ್ನನ್ನು ಸ್ಪೀಕರ್​ ಆಗಿ ಆಯ್ಕೆ ಮಾಡಿದ್ದಾರೆ. ನಾನು ನಿಷ್ಠಾವಂತನಾಗಿ‌‌ ಸ್ಪೀಕರ್ ಹುದ್ದೆಯಲ್ಲಿ ನನ್ನ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ,” ಎಂದು ಕಾಗೇರಿ ಹೇಳಿದ್ಧಾರೆ.

ಈ ಬಗ್ಗೆ ಬಿಜೆಪಿ ಮುಖಂಡ ಕೆ.ಎಸ್​.ಈಶ್ವರಪ್ಪ ಮಾತನಾಡಿದ್ದಾರೆ. “ಕಾಗೇರಿ ಪಕ್ಷದ ನಿಷ್ಠಾವಂತ ಸ್ವಯಂ ಸೇವಕ. ಇಂತಹ ಸ್ವಯಂ ಸೇವಕ ಈಗ ಸ್ಪೀಕರ್ ಅಂತಹ ಉನ್ನತ ಸ್ಥಾನಕ್ಕೆ ಏರಿದ್ದಾರೆ. ಕಾಗೇರಿ ಅವರಿಗೆ ಧನ್ಯವಾದಗಳು,” ಎಂದಿದ್ದಾರೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್, ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಸುರೇಶ್ ಕುಮಾರ್ ಹೆಸರು ಸ್ಪೀಕರ್ ಸ್ಥಾನಕ್ಕೆ ಮುಂಚೂಣಿಯಲ್ಲಿ ಕೇಳಿ ಬಂದಿದ್ದವು. ನಾನು ಈ ಬಾರಿ ಸ್ಪೀಕರ್ ಆಗಿ ಕೆಲಸ ನಿರ್ವಹಿಸಲಾರೆ ಎಂದು ಈಗಾಗೇ ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ ಸ್ಪಷ್ಟಪಡಿಸಿದ್ದರು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಎಸ್ಸೆಸ್ಸೆಲ್ಸಿ ಓದಿದ್ದ ಭೂಪ… 7 ಸರಕಾರಿ ಹುದ್ದೆಗಳ ಕೆಲಸಕ್ಕೆ ಸೇರಿದ್ದು ಹೇಗೆ ಗೊತ್ತಾ…?ತಿಳಿಯಲು ಈ ಲೇಖನ ಓದಿ….

    ಓದಿದ್ದು ಎಸ್ಸೆಸ್ಸೆಲ್ಸಿವರೆಗೆ. ಆದರೂ ಒಂದೇ ವರ್ಷದಲ್ಲಿ 7 ನೌಕರಿಗೆ ಅರ್ಹತೆ ಲಭಿಸಿತು. ಆಯ್ಕೆ ಮಾಡಿಕೊಂಡಿದ್ದು ಮಾತ್ರ ಪಿಎಸ್‌ಐ ಹುದ್ದೆ! ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಮುದೂರ ಗ್ರಾಮದ ಕಾನ ಗೌಡ ಪಾಟೀಲ ಎಂಬುವರ ಪುತ್ರ ಪ್ರಶಾಂತ ಪಾಟೀಲ (38) ಎಂಬುವರು 15 ದಿನಗಳ ಹಿಂದಷ್ಟೇ ಪ್ರೊಬೇಷನರಿ ಅವಧಿ ಪೂರೈಸಿ ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ಎಸ್‌ಐ ಆಗಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ.

  • inspirational

    ಗೋವಿನ ಬಾಲದ ಒಂದು ಕೂದಲಿನಿಂದ ಹೀಗೆ ಮಾಡಿದರೆ ನಿಮ್ಮ ಜೀವನವೇ ಬದಲಾಗುತ್ತದೆ, ಗೋಮಾತೆಯ ಮಹಿಮೆ.

    ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….

  • ಆರೋಗ್ಯ, ಉಪಯುಕ್ತ ಮಾಹಿತಿ

    ಒಂದು ವಾರಗಳ ಕಾಲ ಬೆಲ್ಲ ತಿಂದು ನೀರು ಕುಡಿದರೆ ಏನಾಗುತ್ತೆ ಗೊತ್ತಾ..?

    ನಮ್ಮನ್ನು ಕಾಡುವ ಬಹುತೇಕ ರೋಗಗಳಿಗೆ ಮನೆಯಲ್ಲಿಯೇ ಮದ್ದಿದೆ. ಅಡುಗೆ ಮನೆಯಲ್ಲಿರುವ ಪದಾರ್ಥಗಳಿಗೆ ನಮ್ಮ ಆರೋಗ್ಯ ಕಾಪಾಡುವ ಶಕ್ತಿ ಇದೆ. ಅದ್ರಲ್ಲಿ ಬೆಲ್ಲ ಕೂಡ ಒಂದು. ಬೆಲ್ಲ ತಿನ್ನಲ್ಲೊಂದೇ ಸಿಹಿಯಲ್ಲ. ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ 20 ಗ್ರಾಂ ಬೆಲ್ಲವನ್ನು ಸೇವನೆ ಮಾಡಬೇಕು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ.ಬೆಲ್ಲ ತಿನ್ನುವುದು ಜೀರ್ಣಕ್ರಿಯೆಗೆ ಒಳ್ಳೆಯದು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ. ಬೆಲ್ಲ ಹೊಟ್ಟೆ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಆಹಾರ ಸೇವನೆ ನಂತ್ರ ಬೆಲ್ಲ ತಿನ್ನುವುದ್ರಿಂದ ಜೀರ್ಣಕ್ರಿಯೆ ಸರಿಯಾಗುವ ಜೊತೆಗೆ ಗ್ಯಾಸ್ ಸಮಸ್ಯೆ ದೂರವಾಗುತ್ತದೆ. 7…

  • ಸುದ್ದಿ

    ಅಡುಗೆ ಮಾಡಲು ಹೊಲದಲ್ಲಿ ಕ್ಯಾರೆಟ್ ಕಿತ್ತಾಗ, ಅದರಲ್ಲಿ ಇದ್ದ ವಸ್ತುವನ್ನು ನೋಡಿ ಶಾಕ್ ಆದ ಮಹಿಳೆ.

    ಸ್ವೀಡನ್ ದೇಶಕ್ಕೆ ಸೇರಿದ ಲೀನಾ ಅನ್ನುವ ಮಹಿಳೆ 16 ವರ್ಷಗಳ ಹಿಂದೆ ತನ್ನ ಮನೆಯಲ್ಲಿ ಇದ್ದಾಗ ತನ್ನ ಮದುವೆಯ ದಿನ ಗಂಡ ಕೊಡಿಸಿದ್ದ ಅಮೂಲ್ಯವಾದ ವಸ್ತುವನ್ನ ಕಳೆದುಕೊಳ್ಳುತ್ತಾಳೆ. ಇನ್ನು ಅದೂ ವೆಡ್ಡಿಂಗ್ ರಿಂಗ್ ಮತ್ತು ದುಬಾರಿ ಬೆಲೆಯ ವಜ್ರದ ಉಂಗುರ ಆದ್ದರಿಂದ ತುಂಬಾ ಬೇಜಾರು ಮಾಡಿಕೊಂಡು ಕಣ್ಣೀರು ಹಾಕುತ್ತ ಮಕ್ಕಳ ಜೊತೆ ಮನೆಯ ತುಂಬಾ ಹುಡುಕಿದಳು ಲೀನಾ, ಆದರೆ ಎಷ್ಟೇ ಹುಡುಕಿದರೂ ಕೂಡ ಆ ಉಂಗುರ ಮಾತ್ರ ಸಿಗಲೇ ಇಲ್ಲ. ಹೀಗೆ 16 ವರ್ಷ ಕಳೆದ ನಂತರ…

  • ಸುದ್ದಿ

    ಹುಲ್ಲು ಮೆಯಾದ ಹಸುವಿನ ಹೊಟ್ಟೆಯಲ್ಲಿ ಸಿಕ್ಕಿದ್ದೇನು? ಅದನ್ನು ನೋಡಿ ಬೆರಗಾದ ವೈದ್ಯರು…

    ಸರಿಯಾಗಿ ಮೇವು ಸೇವಿಸದೆ ಸಗಣಿ ಮತ್ತು ಮೂತ್ರ ವಿಸರ್ಜನೆಯಲ್ಲಿ ತೊಂದರೆ ಅನುಭವಿಸುತ್ತಿದ್ದ ಆರು ವರ್ಷದ ಹಸುವಿನ ಹೊಟ್ಟೆಯಲ್ಲಿ ಆಶ್ಚರ್ಯಕರ ವಸ್ತುಗಳು ಪತ್ತೆಯಾಗಿವೆ.ಪಶುವೈದ್ಯರ ತಂಡವೊಂದು ಹಸುವಿನ ಹೊಟ್ಟೆಯಲ್ಲಿದ್ದ ಬರೋಬ್ಬರಿ 52 ಕೆ.ಜಿ ಪ್ಲಾಸ್ಟಿಕನ್ನು ಶಸ್ತ್ರ ಚಿಕಿತ್ಸೆಯ ಮೂಲಕ ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ. ತಮಿಳುನಾಡಿನ ಪಶುವೈದ್ಯ ಹಾಗೂ ಪಶುವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದ ಸರ್ಜನ್ ಗಳು ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸುವ ಮೂಲಕ ಮೂಕ ಪ್ರಾಣಿಯ ಜೀವ ಉಳಿಸಿದ್ದಾರೆ. ಆರು ವರ್ಷದ ಹಸುವಿನ ಹೊಟ್ಟೆಯಿಂದ ಆಹಾರವನ್ನು ಪ್ಯಾಕ್ ಮಾಡಲು ಬಳಸುವ 52 ಕೆಜಿ…