ಸುದ್ದಿ

ನಿಶ್ಚಿತಾರ್ಥದಲ್ಲಿ ನಿಖಿಲ್​ ಮೊದಲ ಬಾರಿಗೆ ರೇವತಿಯ ಬಗ್ಗೆ ಹೇಳಿದ್ದೇನು?

61

ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ನಿಶ್ಚಿತಾರ್ಥ ಬೆಂಗಳೂರಿನ ತಾಜ್ ವೆಸ್ಟ್​ ಎಂಡ್​ ಹೋಟೆಲ್‌ನಲ್ಲಿ ಅದ್ಧೂರಿಯಾಗಿ ನಡೆಯಿತು.

ಸಾಂಪ್ರದಾಯಿಕ ಶೈಲಿಯ ಉಡುಗೆಯಲ್ಲಿ ನಿಖಿಲ್ ಮತ್ತು ರೇವತಿ ಕಂಗೊಳಿಸಿದರು. ಪಿಂಕ್ ಕಲರ್ ಸೀರೆಯಲ್ಲಿ ರೇವತಿ ಕಂಗೊಳಿಸಿದರೆ, ಕ್ರೀಮ್ ಕಲರ್ ಕುರ್ತಾದಲ್ಲಿ ನಿಖಿಲ್ ಮಿಂಚುತ್ತಿದ್ದರು. ನಿಖಿಲ್ ಕುಮಾರ್ ಅವರ ಫೇಸ್​ಬುಕ್ ಪೇಜ್​ನಲ್ಲಿ ನಿಶ್ಚಿತಾರ್ಥದ ಕಾರ್ಯಕ್ರಮದ ಲೈವ್ ಪ್ರಸಾರ ಮಾಡಲಾಗುತ್ತಿದೆ.

ಮಾಜಿ ಪ್ರಧಾನಿ ಮತ್ತು ಅಜ್ಜ ದೇವೇಗೌಡರ ದಂಪತಿ ಸಮಕ್ಷಮದಲ್ಲಿ ವಜ್ರದುಂಗುರ ಬದಲಾಯಿಸಿಕೊಂಡರು. ದೇವೇಗೌಡರ ಅಳಿಯ ಡಾ. ಮಂಜುನಾಥ್ ಸೇರಿ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

ನಿಖಿಲ್​ ಕುಮಾರಸ್ವಾಮಿ ರೇವತಿ ನಿಶ್ಚಿತಾರ್ಥಕ್ಕೆ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್, ನಿರ್ದೇಶಕ ಸಂತೋಷ್ ಆನಂದ್ ರಾಮ್, ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್, ನಿವೃತ್ತ ಡಿಜಿ ಐಜಿಪಿ ನೀಲಮಣಿ ಎನ್. ರಾಜು, ಮಾಜಿ ಡಿಸಿಎಂ ಜಿ ಪರಮೇಶ್ವರ್, ಮಾಜಿ ಸಚಿವ ಡಿ.ಕೆ. ಶಿವಕುಮಾರ್​, ಬಸವರಾಜ​ ಹೊರಟ್ಟಿ, ಶಾಸಕ ಎಂ. ಕೃಷ್ಣಪ್ಪ ದಂಪತಿ, ಮಾಜಿ ಶಾಸಕ ಪ್ರಿಯಕೃಷ್ಣ ಕುಟುಂಬ ಮತ್ತಿತರ ಗಣ್ಯರು ಸಾಕ್ಷಿಯಾದರು.

ನನಗಿವತ್ತು ತುಂಬ ಸಂತೋಷದ ದಿನ. ಹಿರಿಯರ ಆಶಯದಂತೆ ನಿಶ್ಚಿತಾರ್ಥ ಮಾಡಿಕೊಂಡಿದ್ದೇನೆ ಎಂದು ನಿಖಿಲ್​ ಕುಮಾರಸ್ವಾಮಿ ಹೇಳಿದರು.

ತಾಜ್​ವೆಸ್ಟ್​ ಎಂಡ್​ ಹೋಟೆಲ್​ನಲ್ಲಿ ನಡೆದ ಅದ್ದೂರಿ ಸಮಾರಂಭದ ಬಳಿಕ ಮಾತನಾಡಿದ ಅವರು, ನಮ್ಮ ಅಜ್ಜಿ-ತಾತ, ಅಪ್ಪ-ಅಮ್ಮನಂತೆ ನಾವೂ ಇರುತ್ತೇವೆ. ಮದುವೆ ಎನ್ನುವುದು ಎಲ್ಲರ ಜೀವನದಲ್ಲಿ ಒಂದು ಮಹತ್ತರವಾದ ಘಟ್ಟ. ಈ ಸಂದರ್ಭದಲ್ಲಿ ನನ್ನನ್ನು ಪ್ರೀತಿಸುವ ಎಲ್ಲರಿಗೂ ಊಟ ಹಾಕಿಸಬೇಕು ಎಂಬ ಆಸೆ ಇತ್ತು. ಅದು ಈಡೇರುತ್ತಿದೆ ಎಂದರು.

ಕಳೆದ ಕೆಲವು ದಿನಗಳಿಂದ ನಾನು ರೇವತಿಯವರೊಂದಿಗೆ ಮಾತನಾಡುತ್ತಿದ್ದೇನೆ. ಸಂಪ್ರದಾಯಸ್ಥ, ಸುಸಂಸ್ಕೃತ ಗುಣಗಳಿರುವ ಹುಡುಗಿ. ತುಂಬ ಚೆನ್ನಾಗಿ ನಮ್ಮೊಂದಿಗೆ ಹೊಂದಿಕೊಂಡು ಹೋಗುತ್ತಾರೆ ಎಂಬ ನಂಬಿಕೆ ಇದೆ. ಇಂತಹ ಹುಡುಗಿ ಸಿಗಲು ನಾನು ಪುಣ್ಯ ಮಾಡಿದ್ದೆ ಎಂದು ನಿಖಿಲ್ ಹೇಳಿದರು. 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಶಿಕ್ಷಣ

    ಪಿಯುಸಿ ಬಳಿಕ ಡಿಪ್ಲೊಮಾ 2ನೇ ವರ್ಷಕ್ಕೆ ಸೇರಲು ಅವಕಾಶ…!

    ಬೆಂಗಳೂರು: ದ್ವಿತೀಯ ಪಿಯುಸಿಯನ್ನು ವಿಜ್ಞಾನ ಅಥವಾ ತಾಂತ್ರಿಕ ವಿಷಯದಲ್ಲಿ ಪೂರೈಸಿದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ 2ನೇ ವರ್ಷಕ್ಕೆ ದಾಖಲಾಗಲು ರಾಜ್ಯ ಸರಕಾರ ಅವಕಾಶ ಮಾಡಿಕೊಟ್ಟಿದ್ದು, ಇದಕ್ಕಾಗಿ ಬ್ರಿಡ್ಜ್ ಕೋರ್ಸ್‌ ಕೂಡ ಸಿದ್ಧವಾಗುತ್ತಿದೆ. ಡಿಪ್ಲೊಮಾ ಪೂರೈಸಿದ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಲ್ಯಾಟರಲ್‌ ಎಂಟ್ರಿ ಮೂಲಕ ಎಂಜಿನಿಯರಿಂಗ್‌ ಎರಡನೇ ವರ್ಷಕ್ಕೆ ಸೇರಿಕೊಳ್ಳಲು ಈ ವರೆಗೂ ಅವಕಾಶ ನೀಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ರಾಜ್ಯ ಸರಕಾರ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ ಎರಡನೇ ವರ್ಷಕ್ಕೆ ದಾಖಲಾಗಲು ಅವಕಾಶ…

  • India, tourism

    ಇದು ಭಗವಾನ ಶ್ರೀಕೃಷ್ಣನ ನಗರಿ

    ಇದನ್ನು ಜನಪ್ರೀಯವಾಗಿ ಶ್ರೀಕೃಷ್ಣನ ಸಾಮ್ರಾಜ್ಯ ಎಂತಲೆ ಕರೆಯಲಾಗುತ್ತದೆ. ಮೂಲತಃ ಇದೊಂದು ಅದ್ಭುತ ದ್ವೀಪ ಪ್ರದೇಶ ಅಥವಾ ನಡುಗಡ್ಡೆ. ಭಾರತದ ಮುಖ್ಯ ಭೂಮಿಯಿಂದ ಸಮುದ್ರದ ಮೂಲಕ ಮೂರು ಕಿ.ಮೀ ದೂರದಲ್ಲಿರುವ ಜನಪ್ರೀಯಗೊಳ್ಳುತ್ತಿರುವ ಪ್ರವಾಸಿ ತಾಣ. ವಿಶೇಷವೆಂದರೆ ದ್ವಾರಕೆಯಿಂದ ಕೇವಲ ಮೂವತ್ತೇ ಕಿ.ಮೀ ಗಳಷ್ಟು ದೂರದಲ್ಲಿದೆ. ಇದನ್ನು ದ್ವಾರಕಾ ಎಂತಲೂ ಕರೆಯುತ್ತಾರೆ ಹಾಗೂ ಇದು ಗುಜರಾತ್ ರಾಜ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಗುಜರಾತ್ ರಾಜ್ಯದ ದೇವಭೂಮಿ ದ್ವಾರಕಾ ಜಿಲ್ಲೆಯ ಓಖಾ ಎಂಬ ಕರಾವಳಿ ಪಟ್ಟಣದಿಂದ ಮೂರು ಕಿ.ಮೀ ದೂರದಲ್ಲಿ ಬೇಟ್ ದ್ವಾರಕಾ…

  • ಉಪಯುಕ್ತ ಮಾಹಿತಿ

    ಹಲಸಿನ ಹಣ್ಣಿನ ಈ ಪ್ರಯೋಜನಗಳನ್ನು ಕೇಳಿದ್ರೆ, ನೀವು ತಿನ್ನದೇ ಸುಮ್ಮನೆ ಇರಲ್ಲ…

    ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.

  • ಸಿನಿಮಾ

    ತನ್ನ ಹೆತ್ತ ತಾಯಿ ಮಾಡಿದ್ದ ಶೋಷಣೆಯನ್ನ ಬಹಿರಂಗ ಮಾಡಿದ ಫೇಮಸ್ ನಟಿ..!

    ಮಲಯಾಳಂ ಚಲನಚಿತ್ರ ನಟಿ ಸಂಗೀತ ಕ್ರಿಶ್ ತಮ್ಮ ತಾಯಿಯ ಆರೋಪಕ್ಕೆ ಟ್ವಿಟರ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಕ್ರಿಶ್ ತಾಯಿ ಇತ್ತೀಚೆಗೆ ಮಗಳು ತನ್ನನ್ನ ವೃದ್ಧಾಪ್ಯದಲ್ಲಿ ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಆಸ್ತಿಗಾಗಿ ಕ್ರಿಶ್ ನನ್ನನ್ನ ಮನೆಯಿಂದ ಹೊರ ಹಾಕಲು ಮುಂದಾಗಿದ್ದಾಳೆ ಎಂದು ಆರೋಪಿಸಿದ್ದರು. ಈ ಹೇಳಿಕೆ ಕ್ರಿಶ್ ಳನ್ನ ಹೆಚ್ಚು ಸುದ್ದಿಯಲ್ಲಿರುವ ಹಾಗೆ ಮಾಡಿತ್ತು. ಈ ಆರೋಪಗಳಿಗೆ ಕ್ರಿಶ್ ಟ್ವಟರ್ ಮೂಲಕ ಸರಿಯಾಗೇ ಉತ್ತರ ನೀಡಿದ್ದಾರೆ. ತಾನು 13 ವರ್ಷದ ಬಾಲಕಿಯಾಗಿದ್ದಾಗ ಹೇಗೆ ತನ್ನನ್ನ ಶೋಷಿಸಲಾಯಿತು ಎಂದು ವಿವರಿಸಿದ್ದಾಳೆ. ಕುಡುಕ…

  • ಸುದ್ದಿ

    18ನೇ ವೆಡ್ಡಿಂಗ್ ಡೇ ವಾರ್ಷಿಕೋತ್ಸವದಲ್ಲಿ ಸುದೀಪ್ ದಂಪತಿಯ ಸಂಭ್ರಮ…!

    ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ಪತ್ನಿ ಪ್ರಿಯಾ ಸುದೀಪ್ ಅವರು ಇಂದು ತಮ್ಮ 18ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಸುದೀಪ್ ಹಾಗೂ ಪ್ರಿಯಾ ಅಕ್ಟೋಬರ್ 18, 2001ರಲ್ಲಿ ಮದುವೆಯಾಗಿದ್ದರು. ಇಂದಿಗೆ ಸುದೀಪ್ ಮತ್ತು ಪ್ರಿಯಾ ಅವರು ಮದುವೆಯಾಗಿ 18 ವರ್ಷಗಳು ಕಳೆದಿವೆ. ಹೀಗಾಗಿ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಇಬ್ಬರಿಗೂ ಶುಭಾಶಯ ತಿಳಿಸುತ್ತಿದ್ದಾರೆ. ನೆಚ್ಚಿನ ನಟ ವಿವಾಹ ವಾರ್ಷಿಕೋತ್ಸವ ಇರುವ ಹಿನ್ನೆಲೆಯಲ್ಲಿ ಸುದೀಪ್ ಅಭಿಮಾನಿಗಳ ಸಂಘಗಳು ಸಾಮಾಜಿಕ ಜಾಲತಾಣಗಳಲ್ಲಿ ವಿಧ ವಿಧವಾದ ಪೋಸ್ಟರ್ ಗಳನ್ನು ಪೋಸ್ಟ್…

  • ಉಪಯುಕ್ತ ಮಾಹಿತಿ

    ನೀವು ರಾತ್ರಿ ಮಲಗುವ ಮುಂಚೆ ಇದನ್ನ ಮಾಡಿದ್ರೆ ಹಾರ್ಟ್ ಅಟ್ಯಾಕ್ ಆಗೋದು ತುಂಬಾ ಕಡಿಮೆ!

    ಮಲಗುವುದಕ್ಕೂ ಮುನ್ನ ಹಿತವಾದ, ಧ್ಯಾನ, ಯೋಗ ಸಂಗೀತವನ್ನು ಆಲಿಸುವುದರಿಂದ ಹೃದಯದ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಭಾರತೀಯ ಸಂಶೋಧಕರು ಹೇಳಿದ್ದಾರೆ. ಈ ರೀತಿಯ ಮ್ಯೂಸಿಕ್ ಥೆರೆಪಿಯನ್ನು ಆಸ್ಪತ್ರೆಗಳಲ್ಲಿ ಪ್ರಯೋಗಿಸಲಾಗುತ್ತಿದ್ದು, ಯೋಗ ಸಂಗೀತವನ್ನು ಮಲಗುವುದಕ್ಕೂ ಮುನ್ನ ಆಲಿಸುವುದು ಹೃದಯ ಬಡಿತದ ವ್ಯತ್ಯಾಸಗಳ ಮೇಲೆ ಪರಿಣಾಮ ಬೀರಿದೆ ಎಂದು ರಾಜಸ್ಥಾನದ ಜೈಪುರದ ಹೆಚ್ ಜಿ ಎಸ್ಎಂಎಸ್ ಆಸ್ಪತ್ರೆಯ ನರೇಶ್ ಸೇನ್ ಹೇಳಿದ್ದಾರೆ. ಈ ಅಧ್ಯಯನವನ್ನು ಜರ್ಮನಿಯಲ್ಲಿರುವ ಯುರೋಪಿಯನ್ ಸೊಸೈಟಿ ಆಫ್ ಕಾರ್ಡಿಯಾಲಜಿ ಕಾಂಗ್ರೆಸ್ 2018 ರಲ್ಲಿ ಮಂಡಿಸಲಾಗಿದೆ. ಆರೋಗ್ಯಕರವಾಗಿದ್ದ ಸುಮಾರು 149…