ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆ ಖರೀದಿದಾರರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಹೊಸ ಶುಭ ಸಮಾಚಾರವೊಂದನ್ನು ನೀಡಿದ್ದಾರೆ. ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ಯಾಬಿನೆಟ್ ನಿರ್ಧಾರಗಳ ಬಗ್ಗೆ ಮಾದ್ಯಮಗಳಿಗೆ ವಿವರಿಸಿದ ಸೀತಾರಾಮನ್ “ಪ್ರಸ್ತುತ 1600 ಕ್ಕೂ ಹೆಚ್ಚು ವಸತಿಯೋಜನೆಗಳು ಸ್ಥಗಿತಗೊಂಡಿವೆ. ಹಾಗಾಗಿ ಸರ್ಕಾರ , ಕೈಗೆಟುಕುವ ಮತ್ತು ಮಧ್ಯಮ ಪ್ರಮಾಣದ ಪ್ರಸ್ತುತ ಸ್ಥಗಿತಗೊಂಡ ವಸತಿಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆಯ ಸಾಲ, ಹಣಕಾಸು ನೆರವು ನೀಡಲು ‘ವಿಶೇಷ ವಿಭಾಗ’ ಸ್ಥಾಪನೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದರು.

ದೇಶದಲ್ಲಿಸ್ಥ ಗಿತವಾಗಿರುವ ವಸತಿ ಯೋಜನೆಗಳನ್ನು ಪುನಾರಂಭಿಸಿ ಪೂರ್ಣಗೊಳಿಸಲು 25 ಸಾವಿರಕೋಟಿ ರೂ.ಗಳ ನಿಧಿಯನ್ನು ಸ್ಥಾಪಿಸಲು ಸರ್ಕಾರ ತೀರ್ಮಾನಿಸಿದೆ. ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಈ ನಿರ್ಧಾರವನ್ನು ಕೇಂದ್ರ ಸಚಿವ ಸಂಪುಟ ಅಂಗೀಕರಿಸಿತು. ಈ ಪರ್ಯಾಯ ಹೂಡಿಕೆ ನಿಧಿಯಲ್ಲಿ (ಎಐಎಫ್) ಸರ್ಕಾರ 10,000 ಕೋಟಿ ರೂ., ಎಸ್ಬಿಐ ಮತ್ತು ಎಲ್ಐಸಿ 15,000 ಕೋಟಿ ರೂ. ನೀಡಲಿದೆ.ಇದು ದೇಶಾದ್ಯಂತ 4.58 ಲಕ್ಷ ವಸತಿ ಘಟಕಗಳನ್ನು ಒಳಗೊಂಡ 1,600 ಸ್ಥಗಿತಗೊಂಡ ವಸತಿ ಯೋಜನೆಗಳಿಗೆ ಹಣಕಾಸು ಒದಗಿಸುತ್ತದೆ

ಈ ಉಪಕ್ರಮದಿಂದ ಉದ್ಯೋಗ ಸೃಷ್ಟಿಯಾಗುವುದು. ಜೊತೆಗೆ ಸಿಮೆಂಟ್, ಕಬ್ಬಿಣ ಮತ್ತು ಉಕ್ಕಿನ ಕೈಗಾರಿಕೆಗಳ ಬೇಡಿಕೆಯನ್ನು ಪುನರುಜ್ಜೀವನ ಆಗಲಿದೆ.ಇದು ಆರ್ಥಿಕತೆಯ ಪ್ರಮುಖ ಕ್ಷೇತ್ರಗಳಲ್ಲಿನ ಒತ್ತಡವನ್ನು ನಿವಾರಿಸುವ ಗುರಿಯನ್ನು ಹೊಂದಿದೆ. ಯೋಜನೆಯು ಸಾರ್ವಭೌಮ ಮತ್ತು ಪಿಂಚಣಿ ನಿಧಿ ಭಾಗವಹಿಸುವ ನಿರೀಕ್ಷೆಯಿರುವುದರಿಂದ ನಿಧಿಯ ಗಾತ್ರ ಹೆಚ್ಚಾಗುತ್ತದೆ. ಸರ್ಕಾರ ಪ್ರಾಯೋಜಕರಾಗಿ ಕಾರ್ಯನಿರ್ವಹಿಸುತ್ತದೆ ಮತ್ತು 10,000 ಕೋಟಿ ರೂ.ನಿಧಿಯನ್ನು ಪರಿಹಾರವಾಗಿ ನೀಡುತ್ತದೆ.

ಇದು ವಸತಿ ಕಟ್ಟಡ ಅಭಿವೃದ್ಧಿದಾರರಿಗೆ(ಡೆವಲಪರ್ಗಳಿಗೆ ) ಅನುಕೂಲ ಕಲ್ಪಿಸಲಿದ್ದು ಮನೆ ಖರೀದಿದಾರರಿಗೆ ಮನೆಗಳ ವಿತರಣೆಯನ್ನು ಖಚಿತ ಪಡಿಸುತ್ತದೆ. “ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಹೂಡಿಕೆ ಮಾಡಿದಹೆಚ್ಚಿನ ಸಂಖ್ಯೆಯ ಮಧ್ಯಮ ವರ್ಗದ ಗೃಹ ಬಳಕೆದಾರರು ಎದುರಿಸುತ್ತಿರುವ ಆರ್ಥಿಕ ಸಮಸ್ಯೆಯನ್ನು ನಿವಾರಿಸಲು ಇದರಿಂದ ಸಹಾಯವಾಗಲಿದೆ. ಜತೆಗೆ ಆರ್ಥಿಕತೆಯಲ್ಲಿ ಉತ್ಪಾದಕ ಬಳಕೆಗಾಗಿವ ದೊಡ್ಡ ಪ್ರಮಾಣದ ಹಣವನ್ನು ಸಹ ಬಿಡುಗಡೆಯಾಗಲಿದೆ” ಸಚಿವರು ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾಜಿಕ ಜಾಲತಾಣಗಳಲ್ಲಿ ಒಂದಾಗಿರುವ ವಾಟ್ಸಪ್ ಭಾರತದಲ್ಲಿ ತನ್ನ ಬಿಸಿನೆಸ್ ಆ್ಯಪ್ ಅನ್ನು ಬಿಡುಗಡೆಗೊಳಿಸಿದ ಮೊದಲ ವರ್ಷದಲ್ಲಿ 6.84 ಕೋಟಿ ರೂ. ಆದಾಯ ಗಳಿಸುವಲ್ಲಿ ಯಶಸ್ವಿಯಾಗಿದೆ. ಅತ್ಯಧಿಕ ಸಂಖ್ಯೆಯ ಬಳಕೆದಾರರನ್ನು ಹೊಂದಿರುವ ವಾಟ್ಸಪ್ ದೇಶದಲ್ಲಿ ಈಗ ಆದಾಯ ಗಳಿಕೆಯ ಹಾದಿಯತ್ತ ಹೊರಳಿದೆ. ಬಿಸಿನೆಸ್ ಆವೃತ್ತಿ ಮೂಲಕ ವಾಟ್ಸಪ್ ಮೊದಲ ವರ್ಷದ ಗಳಿಕೆಯನ್ನು ಬಹಿರಂಗಪಡಿಸಿದೆ. ರಿಜಿಸ್ಟ್ರಾರ್ ಆಫ್ ಕಂಪನೀಸ್ಗೆ ವಾಟ್ಸಪ್ ಸಲ್ಲಿಸಿರುವ ದಾಖಲಾತಿಗಳ ಪ್ರಕಾರ, 2019 ರಲ್ಲಿಕಂಪನಿ 6.84 ಕೋಟಿ ರೂ. ಆದಾಯ ಮತ್ತು 57 ಲಕ್ಷ ರೂ. ಲಾಭ ಗಳಿಸಿದೆ. ತನ್ನ…
ಭಾರತದ ಹೆಮ್ಮೆಯ ಕ್ಷಿಪಣಿ ಬ್ರಹ್ಮೋಸ್ ಗೆ ಪರ್ಯಾಯ ಎಂದೇ ಕರೆಯಲಾಗುತ್ತಿದ್ದ ನಿರ್ಭಯ್ ಕ್ಷಿಪಣಿ ಸಿದ್ಧವಾಗಿ ದಶಕಗಳೇ ಕಳೆದರೂ ಈವರೆಗೆ ನಡೆದ ಎಲ್ಲ ಪರೀಕ್ಷಾರ್ಥ ಪ್ರಯೋಗಗಳಲ್ಲಿ ಅದು ವಿಫಲವಾಗಿತ್ತು. ಈ ಹಿಂದೆ ನಡೆದ ಒಟ್ಟು ನಾಲ್ಕು ಪರೀಕ್ಷೆಗಳಲ್ಲಿ ನಿರ್ಭಯ್ ವಿಫಲವಾಗುವ ಮೂಲಕ ವಿಜ್ಞಾನಿಗಳಲ್ಲಿ ಭಾರಿ ನಿರಾಸೆ ಮೂಡಿಸಿತ್ತು.
ಇಂದು ಶುಕ್ರವಾರ, 23/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಬಿಸಿಸಿಐ ರಣಜಿ ಟ್ರೋಫಿ, ಕರ್ನಲ್ ಸಿ ಕೆ ನಾಯುಡು ಟ್ರೋಫಿ ಮತ್ತು ಸೀನಿಯರ್ ವುಮೆನ್ಸ್ ಟಿ 20 ಲೀಗ್ ಅನ್ನು 2021-22 ಋತುವಿಗೆ ಮುಂದೂಡಿದೆ ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಹಿನ್ನೆಲೆಯಲ್ಲಿ 2021-22ರ ಸೀಸನ್ಗಾಗಿ ರಣಜಿ ಟ್ರೋಫಿ, ಕರ್ನಲ್ ಸಿ ಕೆ ನಾಯುಡು ಟ್ರೋಫಿ ಮತ್ತು ಸೀನಿಯರ್ ಮಹಿಳಾ ಟಿ20 ಲೀಗ್ ಅನ್ನು ಮುಂದೂಡುವುದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಂಗಳವಾರ ಪ್ರಕಟಿಸಿದೆ. ರಣಜಿ ಟ್ರೋಫಿ ಮತ್ತು ಕರ್ನಲ್ ಸಿ ಕೆ ನಾಯುಡು ಟ್ರೋಫಿ ಈ…
![]()
ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಅಭ್ಯರ್ಥಿಗಳು ತಮ್ಮ ಚಿಹ್ನೆಯೊಂದಿಗೆ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಮಂಡ್ಯ ಲೋಕಸಭಾ ಚುನಾವಣಾ ಕಣದಲ್ಲಿ ಅಭ್ಯರ್ಥಿಗಳಿಗೆ ಇವಿಎಂನಲ್ಲಿ ಸ್ಥಾನ ನೀಡಲಾಗಿದೆ. ಅದರಲ್ಲಿ ಮೊದಲ ಹೆಸರೇ ಮುಖ್ಯಮಂತ್ರಿ ಪುತ್ರ ನಿಖಿಲ್ ಕುಮಾರಸ್ವಾಮಿಯವರದ್ದಾದ್ರೆ, ಕೊನೆಯಿಂದ ಎರಡನೇಯವರಾಗಿ ಸುಮಲತಾ ಹೆಸರಿದೆ…! ಇವಿಎಂನ ಕ್ರಮ ಸಂಖ್ಯೆ 1 ರಲ್ಲೇ ನಿಖಿಲ್ ಕುಮಾರಸ್ವಾಮಿಯವರ ಹೆಸರು ನೀಡಲಾಗಿದೆ. ಆದ್ರೆ ಸುಮಲತಾ ಅಂಬರೀಷ್ ಹೆಸರನ್ನು ಇವಿಎಂನಲ್ಲಿ ಕೊನೆಯಿಂದ ಎರಡನೇಯದಾಗಿ ಹಾಕಲಾಗಿದೆ. ಅಲ್ಲದೆ ಸುಮಲತಾ ಅಂಬರೀಷ್ ಹೆಸರಿನ ಮೊದಲು ಮತ್ತು ಕೊನೆಗೆ…
ಉತ್ತರ ಕೊರಿಯಾ ಎರಡನೇ ಬಾರಿಗೆ ಅಂತರ ಖಂಡಾತರ ಕ್ಷಿಪಣಿ ICBM (ಇಂಟರ್ ಕಾಂಟಿನೆಂಟಲ್ ಬ್ಯಾಲಿಸ್ಟಿಕ್ ಮಿಸೈಲ್-ಐಸಿಬಿಎಂ) ಪ್ರಯೋಗ ಮಾಡಿದ್ದು, ಇದೆ ಸಮಯದಲ್ಲಿ ಉತ್ತರ ಕೊರಿಯಾದ ಅಧ್ಯಕ್ಷ ಕಿಮ್ ಜಾಂಗ್ ಉನ್ ಸದ್ಯ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.