ಸುದ್ದಿ

ನಿತ್ಯಾನಂದನ ಆಶ್ರಮದಲ್ಲಿ ಸ್ವ ಇಚ್ಛೆಯಿಂದ ಸನ್ಯಾಸತ್ವ ಸ್ವೀಕರಿಸಿದ್ದೇನೆ. ಫೇಸ್‍ಬುಕ್ ಲೈವಿನಲ್ಲಿ ತಂದೆಗೆ ಮಗಳ ಖಡಕ್ ಉತ್ತರ.

78

ನಿತ್ಯಾನಂದನ ಆಶ್ರಮದಲ್ಲಿದ್ದ ಯುವತಿ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಸ್ವತಃ ಯುವತಿಯೇ ಫೇಸ್ಬುಕ್ ನಲ್ಲಿ ಲೈವ್ ವಿಡಿಯೋ ಮಾಡುವ ಮೂಲಕ ಎಲ್ಲ ವಿಚಾರಗಳನ್ನು ಸ್ಪಷ್ಟಪಡಿಸಿದ್ದಾಳೆ.

ಅಪಹರಣಗೊಂಡಿದ್ದಾಳೆ ಎಂಬ ಆರೋಪ ಕೇಳಿಬಂದ ಯುವತಿ ಫೇಸ್ಪುಕ್ ನಲ್ಲಿ ಪ್ರತ್ಯಕ್ಷವಾಗಿ ತಂದೆಯ ವಿರುದ್ಧವೇ ಕಿಡಿಕಾರಿದ್ದಾಳೆ. ಲೈವ್ ವಿಡಿಯೋ ಮೂಲಕ ತಮ್ಮನ್ನು ಯಾರೂ ಅಪಹರಿಸಿಲ್ಲ. ಆದರೆ ಸುಖಾಸುಮ್ಮನೆ ನಮ್ಮ ಗುರುಗಳಾದ ನಿತ್ಯಾನಂದ ಸ್ವಾಮೀಜಿ ಮೇಲೆ ಆರೋಪಿಸಿದ್ದಾರೆ. ಅಲ್ಲದೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇದು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯಾಗಿದೆ. ಆದರೆ ಸ್ವಾಮೀಜಿ ನಮಗೆ ತಂದೆ ಸಮಾನರು, ಈ ರೀತಿ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ. ವಿಡಿಯೋದಲ್ಲಿ ತನ್ನ ಹೆಸರನ್ನು ಮಾ ನಿತ್ಯ ತತ್ವಪ್ರಿಯ ಆನಂದ ಎಂದು ಹೇಳಿಕೊಂಡಿದ್ದಾಳೆ.

ನನ್ನನ್ನು ಯಾರೂ ಅಪಹರಿಸಿಲ್ಲ. ನನ್ನ ವೈಯಕ್ತಿಕ ಕಾರಣ, ಕುಟುಂಬದಲ್ಲಿ ವೈಮನಸ್ಸು ಇರುವುದರಿಂದ ಹೆತ್ತವರ ಜೊತೆ ಇರಲಾರದೆ ಆಶ್ರಮದಲ್ಲಿದ್ದೇನೆ. ನಾನು ಸ್ವ ಇಚ್ಛೆಯಿಂದ ಸನ್ಯಾಸತ್ವ ಸ್ವೀಕರಿಸಿದ್ದೇನೆ. ಇದು ನನ್ನ ಬದುಕು, ನಾನು ಇಚ್ಛೆ ಪಟ್ಟು ಈ ಬದುಕನ್ನು ಬದುಕುತ್ತಿದ್ದೇನೆ ಎಂದು ತಿಳಿಸಿದ್ದಾಳೆ. 
ಸ್ವಾಮೀಜಿಯ ಮೇಲೆ ವೈಯಕ್ತಿಕ ಕಾರಣಗಳಿಂದ ವ್ಯರ್ಥ ಆರೋಪ ಮಾಡುತ್ತಿದ್ದಾರೆ. ಅಲ್ಲದೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಅವರು ಆರೋಪಿಸಿರುವುದು ಸುಳ್ಳು, ದೂರಿನಲ್ಲಿ ಉಲ್ಲೇಖಿಸಿರುವುದು ಸಹ ಸುಳ್ಳು. ನಮ್ಮನ್ನು ಸ್ವಾಮೀಜಿ ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ. ನಾನು ಹಾಗೂ ನನ್ನ ಸಹೋದರಿ ಜೊತೆಗೆ ಇದ್ದೇವೆ. ಹೆತ್ತವರು ಖಾವಿ ಬಿಟ್ಟು ಬನ್ನಿ ಅಂತಿದ್ದಾರೆ. ಆದರೆ ನಾವು ಇದಕ್ಕೆ ತಯಾರಿಲ್ಲ ಎಂದು ಹೇಳಿದ್ದಾಳೆ.

ಪೊಲೀಸರು, ಮಾಧ್ಯಮದವರು ಎಲ್ಲರೂ ನಮಗೆ ಚಿತ್ರ ಹಿಂಸೆ ನೀಡುತ್ತಿದ್ದಾರೆ. ಸುಖಾಸುಮ್ಮನೆ ಆಶ್ರಮದಲ್ಲಿರುವವರನ್ನು ಬಂಧಿಸುತ್ತಿದ್ದಾರೆ. ಇದು ಕುಟುಂಬದ ಸಮಸ್ಯೆ, ಇದಕ್ಕೂ ಆಶ್ರಮಕ್ಕೂ ಸಂಬಂಧವಿಲ್ಲ. ನನಗೆ ಖಾವಿ ಬಿಟ್ಟು ಬದುಕು ಇಲ್ಲ. ನಿತ್ಯಾನಂದ ಸ್ವಾಮೀಜಿ ನಮ್ಮನ್ನು ಮಕ್ಕಳಂತೆ ನೋಡಿಕೊಳ್ಳುತ್ತಾರೆ. ನೈಜ ಪರಿಸ್ಥಿತಿ ಬಗ್ಗೆ ಎಷ್ಟೇ ಹೇಳಿದದರೂ ಪೊಲೀಸರು ಕೇಳುತ್ತಿಲ್ಲ ಎಂದು ಹೇಳಿದ್ದಾಳೆ.

ಏನಿದು ಪ್ರಕರಣ?
ನಿತ್ಯಾನಂದನ ಬಿಡದಿ ಆಶ್ರಮದಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಜನಾರ್ದನ ಶರ್ಮಾ ತನ್ನ ಮಕ್ಕಳನ್ನು ನಿತ್ಯಾನಂದನ ಆಶ್ರಮಕ್ಕೆ ಬಿಟ್ಟಿದ್ದರು. ನಿತ್ಯಾನಂದನ ಮಾತಿಗೆ ಮರುಳಾಗಿ ತನ್ನ ನಾಲ್ವರು ಮಕ್ಕಳನ್ನು ಆಶ್ರಮದಲ್ಲಿ ಇಟ್ಟಿದ್ದರು. ಆಶ್ರಮದಲ್ಲಿನ ಅಕ್ರಮಗಳ ಬಗ್ಗೆ ತಿಳಿದು ಶರ್ಮಾ ಆಶ್ರಮದ ಕೆಲಸ ಬಿಟ್ಟು ಹೊರಗೆ ಬಂದಿದ್ದರು. ಬಟ್ಟು ಬರುವ ವೇಳೆ ನಾಲ್ವರು ಮಕ್ಕಳ ಪೈಕಿ 18 ವರ್ಷದ ಯುವತಿ ನಾಪತ್ತೆಯಾಗಿದ್ದಾಳೆ ಎಂದು ಶರ್ಮಾ ಆರೋಪಿಸಿದ್ದರು. ಇವಳನ್ನು ಅಪಹರಿಸಿ, ನಮಗೆ ತಿಳಿಯದಂತೆ ಬಿಡದಿಯ ನಿತ್ಯಾನಂದ ಆಶ್ರಮದಿಂದ ಅಹಮದಾಬಾದ್ ಆಶ್ರಮಕ್ಕೆ ನನ್ನ ಮಕ್ಕಳನ್ನು ಕಳುಹಿಸಲಾಗಿದೆ ಎಂದು ಜನಾರ್ದನ ಶರ್ಮಾ ಆರೋಪಿಸಿದ್ದರು. ಅಲ್ಲದೆ ಮಕ್ಕಳನ್ನು ಹುಡುಕಿಕೊಡುವಂತೆ ಯುವತಿಯ ತಂದೆ ನಿತ್ಯಾನಂದನ ವಿರುದ್ಧ ಗುಜರಾತ್ ನಲ್ಲಿ ದೂರು ದಾಖಲಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಫಲಾ ಫಲಗಳ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 21 ಜನವರಿ, 2019 ಪೂರ್ವಜರ ಆಸ್ತಿಯ ಉತ್ತರಾಧಿಕಾರಿತ್ವದಸುದ್ದಿ ಇಡೀ ಕುಟುಂಬವನ್ನು ಸಂತುಷ್ಟಗೊಳಿಸಬಹುದು. ನೀವು ಇನ್ನು ಮುಂದೆ…

  • ಸ್ಪೂರ್ತಿ

    51ವರ್ಷದ ಮಹಿಳೆ ಮಾಡಿರುವ ಸಾಧನೆಯ ಬಗ್ಗೆ ನೀವು ತಿಳಿದ್ರೆ ಅಚ್ಚರಿ ಪಡೋದ್ರಲ್ಲಿ ಡೌಟ್ ಇಲ್ಲ.!

    ಸಾಧನೆ ಅನ್ನೋದು ಸುಲಭದ ಮಾತಲ್ಲ. ‘ಆಗುವುದಿಲ್ಲ ಅನ್ನೋ ಮಾತನ್ನು ಬಿಟ್ಟು ಆಗುತ್ತೆ’ ಅನ್ನೋ ದಾರಿಯನ್ನು ಹುಡುಕಿದಾಗ ಮಾತ್ರ ಆ ಸಾಧನೆಯನ್ನು ಮಾಡಲು ಸಾಧ್ಯವಾಗುವುದು ಹಾಗು ಅದಕ್ಕೆ ಪ್ರತಿಫಲ ಸಿಗುವುದು.ಕಣ್ರೀ ನಾವು ನಿಮಗೆ ಹೇಳಲು ಹೊರಟಿರುವ ಕಥೆ ಎಲ್ಲರ ಕಣ್ಣು ಹುಬ್ಬೇರಿಸುವ ರೀತಿಯಲ್ಲಿರುವ ಕಥೆ ಇದು.

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಕಾರ್ಯಗಳು ಯಶಸ್ಸಿನತ್ತ ಪಯಣಿಸುವವು. ಬಂಧುವರ್ಗ ಮತ್ತು ಸ್ನೇಹಿತವರ್ಗವೂ ನಿಮ್ಮನ್ನು ಪ್ರಶಂಸಿಸುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    ಹಿರಿಯ ಸಾಹಿತಿ ,ಜ್ಞಾನಪೀಠ ಪ್ರಶಸ್ತಿ ವಿಜೇತ ಶ್ರೀ ಗಿರೀಶ್ ಕಾರ್ನಡ್ ಇನ್ನಿಲ್ಲ….

    ಹಿರಿಯ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದಾರೆ. ನಟ ಹಾಗೂ ಸಾಹಿತಿ [81]ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಿರೀಶ್ ಕಾರ್ನಾಡ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ.ಗಿರೀಶ್ ಕಾರ್ನಾಡ್ 1938 ಮೇ 19 ರಂದು ಮಹಾರಾಷ್ಟ್ರದ ಮಥೇರಾನ್ ನಲ್ಲಿ ಜನಿಸಿದ್ದರು. ತಂದೆ ಡಾ.ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಪ್ರಗತಿ ಪರ ಮನೋಭಾವದ ಡಾ.ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು…

  • ಕಾನೂನು, ದೇವರು-ಧರ್ಮ

    ಈ ಹಂತಕ ಮೂಗನಂತೆ ನಟಿಸಿ ಕೊನೆಗು ಆಗಿದ್ದೇನೆ ಗೂತ್ತಾ..?ತಿಳಿಯಲು ಈ ಲೇಖನ ಓದಿ..

    ಝೆಜಿಯಾಂಗ್ ಗ್ರಾಮದ ನಿವಾಸಿ ಜೆಂಗ್, 2005ರಲ್ಲಿ ತನ್ನ ಪತ್ನಿಯನ್ನೇ ಕೊಲೆ ಮಾಡಿ ಊರು ಬಿಟ್ಟಿದ್ದ. 76 ಡಾಲರ್ ಬಾಡಿಗೆ ಹಣಕ್ಕೆ ಸಂಬಂಧಿಸಿದ ಜಟಾಪಟಿ ಕೊಲೆಯಲ್ಲಿ ಅಂತ್ಯವಾಗಿತ್ತು. ಬೇರೆ ಊರಿಗೆ ತೆರಳಿದ ಜೆಂಗ್ ಮೂಗನಂತೆ ನಟಿಸಿ, ಕಟ್ಟಡ ಕಾರ್ಮಿಕನಾಗಿ ಕೆಲಸಕ್ಕೆ ಸೇರಿಕೊಂಡಿದ್ದ.

  • ಸುದ್ದಿ

    ಪ್ರವಾಹದಲ್ಲಿ ಕೊಚ್ಚಿ ಹೋದ ಅರ್ಚಕ , ಎರಡು ದಿನ ಸೇತುವೆ ಕೆಳಗೆ ಇದ್ದು ಬದುಕಿ ಬಂದಿದ್ಹೇಗೆ..?

    ಎರಡು ದಿನಗಳ ಹಿಂದೆ ಕಪಿಲಾ ನದಿಗೆ ಜಿಗಿದಿದ್ದ ವೃದ್ಧ, ಎಲ್ಲರಲ್ಲೂ ಭಯ ಹುಟ್ಟಿಸಿದ್ದರು. ಎರಡು ದಿನವಾದರೂ ಮರಳದ ಕಾರಣ, ಅವರ ಪ್ರಾಣಕ್ಕೇನಾದ್ರೂ ಅಪಾಯವಾಗಿತ್ತಾ ಎಂದು ಮನೆಮಂದಿಯಲ್ಲಿ ಆತಂಕ ಮನೆ ಮಾಡಿತ್ತು. ಆದ್ರೆ ಎರಡು ದಿನಗಳ ಕಾಲ ಊಟ-ತಿಂಡಿ ಬಿಟ್ಟು ನೀರಿನಲ್ಲಿ ಕುಳಿತು, ಇಂದು ಈಜಿ ಹೊರಬಂದಿದ್ದಾರೆ. ನಂಜನಗೂಡಿನ ರೈಲ್ವೆ ಸೇತುವೆ ಮೇಲಿಂದ ಜಿಗಿದಿದ್ದ ವೆಂಕಟೇಶ್ ಎಂಬ ವೃದ್ದರು, ಎರಡು ದಿನದ ಬಳಿಕ ಈಜಿ ದಡ ಸೇರಿದ್ದಾರೆ. ಟಿವಿ5 ಜೊತೆ ಈ ಬಗ್ಗೆ ಮಾತನಾಡಿದ ವೆಂಕಟೇಶ್, ರೋಚಕ ಕ್ಷಣಗಳನ್ನ…