ಸುದ್ದಿ

ನಿತ್ಯಾನಂದನ ಆಶ್ರಮದಲ್ಲಿ ಸ್ವ ಇಚ್ಛೆಯಿಂದ ಸನ್ಯಾಸತ್ವ ಸ್ವೀಕರಿಸಿದ್ದೇನೆ. ಫೇಸ್‍ಬುಕ್ ಲೈವಿನಲ್ಲಿ ತಂದೆಗೆ ಮಗಳ ಖಡಕ್ ಉತ್ತರ.

76

ನಿತ್ಯಾನಂದನ ಆಶ್ರಮದಲ್ಲಿದ್ದ ಯುವತಿ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಸ್ವತಃ ಯುವತಿಯೇ ಫೇಸ್ಬುಕ್ ನಲ್ಲಿ ಲೈವ್ ವಿಡಿಯೋ ಮಾಡುವ ಮೂಲಕ ಎಲ್ಲ ವಿಚಾರಗಳನ್ನು ಸ್ಪಷ್ಟಪಡಿಸಿದ್ದಾಳೆ.

ಅಪಹರಣಗೊಂಡಿದ್ದಾಳೆ ಎಂಬ ಆರೋಪ ಕೇಳಿಬಂದ ಯುವತಿ ಫೇಸ್ಪುಕ್ ನಲ್ಲಿ ಪ್ರತ್ಯಕ್ಷವಾಗಿ ತಂದೆಯ ವಿರುದ್ಧವೇ ಕಿಡಿಕಾರಿದ್ದಾಳೆ. ಲೈವ್ ವಿಡಿಯೋ ಮೂಲಕ ತಮ್ಮನ್ನು ಯಾರೂ ಅಪಹರಿಸಿಲ್ಲ. ಆದರೆ ಸುಖಾಸುಮ್ಮನೆ ನಮ್ಮ ಗುರುಗಳಾದ ನಿತ್ಯಾನಂದ ಸ್ವಾಮೀಜಿ ಮೇಲೆ ಆರೋಪಿಸಿದ್ದಾರೆ. ಅಲ್ಲದೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇದು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯಾಗಿದೆ. ಆದರೆ ಸ್ವಾಮೀಜಿ ನಮಗೆ ತಂದೆ ಸಮಾನರು, ಈ ರೀತಿ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ. ವಿಡಿಯೋದಲ್ಲಿ ತನ್ನ ಹೆಸರನ್ನು ಮಾ ನಿತ್ಯ ತತ್ವಪ್ರಿಯ ಆನಂದ ಎಂದು ಹೇಳಿಕೊಂಡಿದ್ದಾಳೆ.

ನನ್ನನ್ನು ಯಾರೂ ಅಪಹರಿಸಿಲ್ಲ. ನನ್ನ ವೈಯಕ್ತಿಕ ಕಾರಣ, ಕುಟುಂಬದಲ್ಲಿ ವೈಮನಸ್ಸು ಇರುವುದರಿಂದ ಹೆತ್ತವರ ಜೊತೆ ಇರಲಾರದೆ ಆಶ್ರಮದಲ್ಲಿದ್ದೇನೆ. ನಾನು ಸ್ವ ಇಚ್ಛೆಯಿಂದ ಸನ್ಯಾಸತ್ವ ಸ್ವೀಕರಿಸಿದ್ದೇನೆ. ಇದು ನನ್ನ ಬದುಕು, ನಾನು ಇಚ್ಛೆ ಪಟ್ಟು ಈ ಬದುಕನ್ನು ಬದುಕುತ್ತಿದ್ದೇನೆ ಎಂದು ತಿಳಿಸಿದ್ದಾಳೆ. 
ಸ್ವಾಮೀಜಿಯ ಮೇಲೆ ವೈಯಕ್ತಿಕ ಕಾರಣಗಳಿಂದ ವ್ಯರ್ಥ ಆರೋಪ ಮಾಡುತ್ತಿದ್ದಾರೆ. ಅಲ್ಲದೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಅವರು ಆರೋಪಿಸಿರುವುದು ಸುಳ್ಳು, ದೂರಿನಲ್ಲಿ ಉಲ್ಲೇಖಿಸಿರುವುದು ಸಹ ಸುಳ್ಳು. ನಮ್ಮನ್ನು ಸ್ವಾಮೀಜಿ ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ. ನಾನು ಹಾಗೂ ನನ್ನ ಸಹೋದರಿ ಜೊತೆಗೆ ಇದ್ದೇವೆ. ಹೆತ್ತವರು ಖಾವಿ ಬಿಟ್ಟು ಬನ್ನಿ ಅಂತಿದ್ದಾರೆ. ಆದರೆ ನಾವು ಇದಕ್ಕೆ ತಯಾರಿಲ್ಲ ಎಂದು ಹೇಳಿದ್ದಾಳೆ.

ಪೊಲೀಸರು, ಮಾಧ್ಯಮದವರು ಎಲ್ಲರೂ ನಮಗೆ ಚಿತ್ರ ಹಿಂಸೆ ನೀಡುತ್ತಿದ್ದಾರೆ. ಸುಖಾಸುಮ್ಮನೆ ಆಶ್ರಮದಲ್ಲಿರುವವರನ್ನು ಬಂಧಿಸುತ್ತಿದ್ದಾರೆ. ಇದು ಕುಟುಂಬದ ಸಮಸ್ಯೆ, ಇದಕ್ಕೂ ಆಶ್ರಮಕ್ಕೂ ಸಂಬಂಧವಿಲ್ಲ. ನನಗೆ ಖಾವಿ ಬಿಟ್ಟು ಬದುಕು ಇಲ್ಲ. ನಿತ್ಯಾನಂದ ಸ್ವಾಮೀಜಿ ನಮ್ಮನ್ನು ಮಕ್ಕಳಂತೆ ನೋಡಿಕೊಳ್ಳುತ್ತಾರೆ. ನೈಜ ಪರಿಸ್ಥಿತಿ ಬಗ್ಗೆ ಎಷ್ಟೇ ಹೇಳಿದದರೂ ಪೊಲೀಸರು ಕೇಳುತ್ತಿಲ್ಲ ಎಂದು ಹೇಳಿದ್ದಾಳೆ.

ಏನಿದು ಪ್ರಕರಣ?
ನಿತ್ಯಾನಂದನ ಬಿಡದಿ ಆಶ್ರಮದಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಜನಾರ್ದನ ಶರ್ಮಾ ತನ್ನ ಮಕ್ಕಳನ್ನು ನಿತ್ಯಾನಂದನ ಆಶ್ರಮಕ್ಕೆ ಬಿಟ್ಟಿದ್ದರು. ನಿತ್ಯಾನಂದನ ಮಾತಿಗೆ ಮರುಳಾಗಿ ತನ್ನ ನಾಲ್ವರು ಮಕ್ಕಳನ್ನು ಆಶ್ರಮದಲ್ಲಿ ಇಟ್ಟಿದ್ದರು. ಆಶ್ರಮದಲ್ಲಿನ ಅಕ್ರಮಗಳ ಬಗ್ಗೆ ತಿಳಿದು ಶರ್ಮಾ ಆಶ್ರಮದ ಕೆಲಸ ಬಿಟ್ಟು ಹೊರಗೆ ಬಂದಿದ್ದರು. ಬಟ್ಟು ಬರುವ ವೇಳೆ ನಾಲ್ವರು ಮಕ್ಕಳ ಪೈಕಿ 18 ವರ್ಷದ ಯುವತಿ ನಾಪತ್ತೆಯಾಗಿದ್ದಾಳೆ ಎಂದು ಶರ್ಮಾ ಆರೋಪಿಸಿದ್ದರು. ಇವಳನ್ನು ಅಪಹರಿಸಿ, ನಮಗೆ ತಿಳಿಯದಂತೆ ಬಿಡದಿಯ ನಿತ್ಯಾನಂದ ಆಶ್ರಮದಿಂದ ಅಹಮದಾಬಾದ್ ಆಶ್ರಮಕ್ಕೆ ನನ್ನ ಮಕ್ಕಳನ್ನು ಕಳುಹಿಸಲಾಗಿದೆ ಎಂದು ಜನಾರ್ದನ ಶರ್ಮಾ ಆರೋಪಿಸಿದ್ದರು. ಅಲ್ಲದೆ ಮಕ್ಕಳನ್ನು ಹುಡುಕಿಕೊಡುವಂತೆ ಯುವತಿಯ ತಂದೆ ನಿತ್ಯಾನಂದನ ವಿರುದ್ಧ ಗುಜರಾತ್ ನಲ್ಲಿ ದೂರು ದಾಖಲಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಾಧನೆ

    ಸಿವಿಲ್ ಕೋರ್ಟ್‌ನ ನ್ಯಾಯಾಧೀಶೆಯಾಗಿ ಕೋಲಾರ ಗಾಯಿತ್ರಿ ಆಯ್ಕೆ

    ಕರ್ನಾಟಕ ಹೈ ಕೋರ್ಟ್‌ನ ಸಿವಿಲ್ ನ್ಯಾಯಾಧೀಶೆಯಾಗಿ ಬಂಗಾರಪೇಟೆಯ ಎನ್.ಗಾಯಿತ್ರಿ ರವರು ಆಯ್ಕೆಯಾಗಿ ಕೋಲಾರ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. 2021ರಲ್ಲಿ ಕಾನೂನು ಪದವಿ ಪಡೆದುಕೊಂಡಿರುವ ಗಾಯತ್ರಿರವರು ತಾವು ಕಂಡ ಕನಸನ್ನು ನನಸು ಮಾಡಿಕೊಳ್ಳುವ ನಿಟ್ಟಿನಲ್ಲಿ ಸತತ ಮತ್ತು ಸರಿಯಾದ ಪ್ರಯತ್ನದ ಮೂಲಕ 25ನೇ ವಯಸ್ಸಿಗೆ ಕರ್ನಾಟಕ ಸಿವಿಲ್ ಕೋರ್ಟ್‌ನ  ನ್ಯಾಯಾಧೀಶರಾಗಿ ಆಯ್ಕೆಯಾಗುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕ ಉಚ್ಛ ನ್ಯಾಯಾಲಯವು ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿತ್ತು.  ಇದೀಗ ಫಲಿತಾಂಶ ಪ್ರಕಟಗೊಂಡಿದ್ದು ಗಾಯತ್ರಿ ಅವರು ಆಯ್ಕೆಯಾಗಿದ್ದಾರೆ….

  • ಸುದ್ದಿ

    ಸರ್ಕಾರದಿಂದ ಗುಡ್ ನ್ಯೂಸ್. ಸ್ವಂತ ಮನೆ ಮತ್ತು ಜಾಗ ಇಲ್ಲದವರಿಗೆ ಬಂದಿದೆ ಹೊಸ ಮನೆಗಳು.

    ಈಗಿನ ಪರಿಸ್ಥಿತಿಯಲ್ಲಿ ಅದೆಷ್ಟೋ ಜನರು ಸ್ವಂತ ಮನೆ ಇಲ್ಲದೆ ಬಾಡಿಗೆ ಮನೆಯಲ್ಲಿ ವಾಸ ಇದ್ದಾರೆ ಮತ್ತು ಕೆಲವು ಜನರು ಸ್ವಂತ ಜಾಗ ಇಲ್ಲದೆ ಕೂಡ ಬಾಡಿಗೆ ಮನೆಯಲ್ಲಿ ವಾಸ ಇದ್ದಾರೆ, ಇನ್ನು ಈಗ ಸ್ವಂತ ಮನೆ ಇಲ್ಲದವರಿಗೆ, ಬಾಡಿಗೆ ಮನೆಯಲ್ಲಿ ವಾಸ ಇರುವವರಿಗೆ ಕೇಂದ್ರ ಸರ್ಕಾರವು ಮತ್ತೇ ಬಂಪರ್ ಕೊಡುಗೆಯನ್ನ ನೀಡಿದೆ. ಹಲವು ಜನರಿಗೆ ನಗರ ಪ್ರದೇಶದಲ್ಲಿ ಮನೆಯನ್ನ ಖರೀದಿ ಮಾಡಬೇಕು ಅನ್ನುವ ಆಸೆ ಇದ್ದೆ ಇರುತ್ತದೆ ಮತ್ತು ನಗರ ಪ್ರದೇಶದಲ್ಲಿ ಮನೆ ಖರೀದಿ ಮಾಡಬೇಕು ಅಂದು…

  • ಸುಳ್ಳು ಸುದ್ದಿ

    ಹೋಟಲ್ನಲ್ಲಿ ಊಟ ಆರ್ಡರ್ ಮಾಡೋದಕ್ಕೆ ಮುಂಚೆ, ನಿಮ್ಮ ಹೊಟ್ಟೆಯ ಸುತ್ತಳತೆ ನೀಡಲೇಬೇಕು..!

    ಹೋಟೆಲ್‌ ಹಾಗೂ ರೆಸ್ಟೋರೆಂಟ್‌ಗಳಲ್ಲಿ ಗ್ರಾಹಕರಿಗೆ ನೀಡಲಾಗುವ ಆಹಾರಕ್ಕೆ ಮಿತಿ ಹೇರಲು ಕೇಂದ್ರ ಸರ್ಕಾರ ಮುಂದಾಗಿದೆ. ಅಲ್ಲದೇ, ಒಬ್ಬ ವ್ಯಕ್ತಿ ಗರಿಷ್ಠ ಎಷ್ಟುಆಹಾರ ಸೇವಿಸಬಲ್ಲ ಎಂಬುದನ್ನು ಹೋಟೆಲ್‌ನವರೇ ತಿಳಿಸಬೇಕು ಹೇಳಿದೆ.

  • ಸಿನಿಮಾ, ಸ್ಪೂರ್ತಿ

    ಲ್ಯಾಟಿನ್ ಅಮೆರಿಕದಲ್ಲಿ ಬಿಹಾರದ ಈ ಹುಡುಗ ಹಾಲಿವುಡ್ ಸೂಪರ್ ಸ್ಟಾರ್‌‌‌..!ತಿಳಿಯಲು ಈ ಲೇಖನ ಓದಿ..

    ಸಿನಿಮಾದಲ್ಲಿ ಸೂಪರ್ ಸ್ಟಾರ್‌ ಎನಿಸಿಕೊಳ್ಳುವುದು ನಿಜವಾಲೂ ಕಷ್ಟದ ವಿಚಾರ. ಪರಿಶ್ರಮ, ಟ್ಯಾಲೆಂಟ್‌‌‌, ಲುಕ್ ಎಲ್ಲದರ ಜೊತೆ ಲಕ್ ಕೂಡಾ ಅಷ್ಟೇ ಮುಖ್ಯ.ಬಿಹಾರ ರಾಜಧಾನಿ ಪಾಟ್ನಾದಲ್ಲಿ ಹುಟ್ಟಿ ಬೆಳೆದ ಪ್ರಭಾಕರ್ ಶರಣ್‌‌ಗೆ ಬಾಲಿವುಡ್‌‌ನಲ್ಲಿ ವಿಲನ್ ಪಾತ್ರದಲ್ಲಿ ಹೆಸರು ಮಾಡಬೇಕೆಂದು ಮೊದಲಿನಿಂದಲೂ ಆಸೆ ಇತ್ತು.

  • ಸಿನಿಮಾ

    ಕನ್ನಡದ ಈ ಸಿನಿಮಾ ಇದೇ ಮೊದಲ ಬಾರಿಗೆ ದಾಖಲೆ ಮಟ್ಟದಲ್ಲಿ ಪರಭಾಷೆಗೆ ಡಬ್ಬಿಂಗ್ ಮಾರಾಟ..!ಶಾಕ್ ಆಗ್ತೀರಾ…ಮುಂದೆ ಓದಿ…

    ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟವಾಗಿದೆ. ಕುರುಕ್ಷೇತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 50ನೇ ಸಿನಿಮಾ ವಾಗಿದ್ದು, ದರ್ಶನ್ ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ.

  • ಸುದ್ದಿ

    ಡಾರ್ಲಿಂಗ್ ಪ್ರಭಾಸ್ ಮನ ಕದ್ದ ಚೆಲುವೆ ಇವರೇನಾ..?

    ಟಾಲಿವುಡ್ ನ ಮೋಸ್ಟ್ ಹ್ಯಾಂಡ್ ಸಮ್ ಹಾಗೂ ಎಲಿಜಿಬಲ್ ಬ್ಯಾಚುಲರ್ ನಟ ಪ್ರಭಾಸ್ ಮದುವೆ ಯಾವಾಗ ಯಾವಾಗ ಎಂದು ಕೇಳುತ್ತಿದ್ದ, ಟಾಲಿವುಡ್ ಮಂದಿಗೆ ಡಾರ್ಲಿಂಗ್ ಪ್ರಭಾಸ್ ಮದುವೆ ವಿಚಾರವಾಗಿ ಸಣ್ಣದೊಂದು ಕ್ಲೂ ಸಿಕ್ಕಿದೆ ಹೌದು ಬಾಹುಬಲಿ ಸಿನಿಮಾದ ನಂತರ ನಟ ಪ್ರಭಾಸ್ ನಟಿ ಅನುಷ್ಕಾ ಶೆಟ್ಟಿಯನ್ನು ಮದುವೆಯಾಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿತ್ತು, ಜೊತೆಗೆ ಇದಕ್ಕೆ ಪುಷ್ಠಿ ನೀಡುವಂತೆ ಈ ಬಾಹುಬಲಿ ಜೋಡಿ ಹಲವು ಸಮಾರಂಭಗಳಲ್ಲಿ, ಅಲ್ಲಿ ಇಲ್ಲಿ ಒಟ್ಟಾಗಿ ಸುತ್ತಾಡಿದ್ದರು.  ಅಷ್ಟೇಲ್ಲದೆ ಕೆಲ ದಿನಗಳ ಹಿಂದೆ…