News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸಾಧನೆ, ಸ್ಪೂರ್ತಿ

ಮಂಗಳೂರಿನಿಂದ, ಬೆಂಗಳೂರಿಗೆ ಕೇವಲ 4 ಗಂಟೆ 32 ನಿಮಿಷದಲ್ಲಿ ಕ್ರಮಿಸಿ, ಹಸುಗೂಸು ಜೀವ ಉಳಿಸಿದ ಅಂಬುಲೆನ್ಸ್ ಚಾಲಕ.

60

ನಲ್ವತ್ತು ದಿನಗಳ ಹಸುಗೂಸನ್ನು ಹೃದಯದ ಶಸ್ತ್ರಚಿಕಿತ್ಸೆಗಾಗಿ ಮಂಗಳೂರಿನಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್ ನಲ್ಲಿ ಅಂಬುಲೆನ್ಸ್ ನಲ್ಲಿ ರವಾನಿಸಲಾಗಿದೆ. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಮಗುವಿಗೆ ತುರ್ತಾಗಿ ಶಸ್ತ್ರಚಿಕಿತ್ಸೆ ಆಗಬೇಕಿತ್ತು. ಅದಕ್ಕಾಗಿ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಮಗುವನ್ನು ರವಾನಿಸಲಾಗಿದೆ. ಚಾಲಕ ಹನೀಫ್ ಅವರು ಮಂಗಳೂರಿನಿಂದ ಆಂಬುಲೆನ್ಸ್ ಮೂಲಕ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಗುವನ್ನು ಕೇವಲ ಆರು ಗಂಟೆಯಲ್ಲಿ ಬೆಂಗಳೂರು ತಲುಪಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಉಜಿರೆ ಮೂಲದ ಸೈಫುಲ್ ಅಜ್ಮಾನ್ ಎನ್ನುವ ಈ ಮಗುವಿಗೆ ಅಂಬುಲೆನ್ಸ್ ನಲ್ಲಿ ಹೃದಯ ಪಂಪಿಂಗ್ ವ್ಯವಸ್ಥೆ ಮಾಡಿಕೊಂಡು ಕರೆದೊಯ್ಯಲಾಯ್ತು. ಮಂಗಳೂರಿನಿಂದ, ಬಿ.ಸಿ.ರೋಡ್, ಕಲ್ಲಡ್ಕ, ಮಾಣಿ, ಉಪ್ಪಿನಂಗಡಿ, ನೆಲ್ಯಾಡಿ, ಶಿರಾಡಿ, ಸಕಲೇಶಪುರ, ಹಾಸನ, ನೆಲಮಂಗಲ ಮೂಲಕ ಮಂಗಳೂರು- ಬೆಂಗಳೂರು ಹೆದ್ದಾರಿಯಲ್ಲಿ ಆಂಬುಲೆನ್ಸ್ ಬಂದಿದ್ದು ಹೆದ್ದಾರಿ ಉದ್ದಕ್ಕೂ ಜನರು ಟ್ರಾಫಿಕ್ ಸಂಚಾರ ಸುಗಮಗೊಳಿಸಿದ್ದಾರೆ. ಅಲ್ಲದೆ, ಆಯಾ ಭಾಗದ ಠಾಣೆಗಳ ವ್ಯಾಪ್ತಿಯಲ್ಲಿ ಪೊಲೀಸರು ಎಸ್ಕಾರ್ಟ್ ನೀಡಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಂಬುಲೆನ್ಸ್ ಚಾಲಕ ಹನೀಫ್, ಮಗುವಿಗೆ ಪುನರ್ ಜನ್ಮ ಸಿಗಬೇಕು ಎನ್ನುವ ಆಸೆ ನನಗೆ ಇತ್ತು. ಮಂಗಳೂರಿನಿಂದ ಬೆಂಗಳೂರನ್ನು 5 ಗಂಟೆಯಲ್ಲಿ ತಲುಪಬಹುದು ಎಂಬ ಆಲೋಚೆ ಹೊಂದಿದ್ದೆ. ಅದರಂತೆ 4 ಗಂಟೆ 32 ನಿಮಿಷದಲ್ಲಿ ಬೆಂಗಳೂರನ್ನು ತಲುಪಿದೆ. ಆದರೆ ಯಶವಂತಪುರದಿಂದ ನನಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಸಿಗಲಿಲ್ಲ. ಹೀಗಾಗಿ ಆಸ್ಪತ್ರೆಗೆ ತಲುಪಲು 15 ನಿಮಿಷ ಹೆಚ್ಚು ಸಮಯ ತೆಗೆದುಕೊಂಡೆ ಎಂದು ಹೇಳಿದ್ದಾರೆ.

ಇದೇ ವೇಳೆ ಸಾರ್ವಜನಿಕರು ಚಾಲಕ ಹನೀಫ್ ಅವರಿಗೆ ಮೈಸೂರು ಪೇಟಾ ಹಾಕಿ ಸನ್ಮಾನಿಸಿದರು. ಹನೀಫ್ ಅವರ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ