ಸುದ್ದಿ

ಆನ್ಲೈನ್ ಬ್ಯಾಂಕಿಂಗ್‌ನಲ್ಲಿ ಮೋಸಕ್ಕೆ ಒಳಗಾಗುವ ಮುನ್ನ ಇದನ್ನೊಮ್ಮೆ ನೋಡಿ,.!

54

ಇತ್ತೀಚಿನ ದಿನಗಳಲ್ಲಿ ಎಲ್ಲರೂ ಆನ್ಲೈನ್ ಬ್ಯಾಂಕಿಂಗ್ ಸೇವೆಗಳನ್ನು ಬಳಸುತ್ತಿದ್ದಾರೆ, ತಂತ್ರಜ್ಙಾನ ಬೆಳೆಯುತ್ತಿದ್ದಂತೆ  ಬ್ಯಾಂಕಿಂಗ್ ವ್ಯವಹಾರಗಳು  ಸಹ ಎಲ್ಲರಿಗೂ  ಸುಲಭವಾಗುತ್ತಿದೆ. ಹಾಗೆಯೇ  ಇಂಟರ್ನೆಟ್   ಹ್ಯಾಕಿಂಗ್ , ಮೊಬೈಲ್ ಬ್ಯಾಂಕಿಂಗ್ ಸೇವೆಗಳು ಸಾರ್ವಜನಿಕರಿಗೆ ಹೆಚ್ಚು ಉಪಯುಕ್ತವಾಗುತ್ತಿವೆ.ಸಮಯದ ಉಳಿತಾಯದ ಜೊತೆಗೆ ಸುಲಭವಾಗಿ ಹಣದ ವರ್ಗಾವಣೆ, ಬಿಲ್ ಪಾವತಿಯನ್ನು ಮಾಡಬಹುದಾಗಿದೆ. ಆದರೆ ಕೆಲ ನಿಯಮಗಳನ್ನು ಪಾಲಿಸದಿದ್ದರೆ ಮೋಸಕ್ಕೂ ಒಳಗಾಗಬೇಕಾಗುತ್ತದೆ.

ಬ್ಯಾಂಕಿನಲ್ಲಿ ಸಾಲುಗಟ್ಟಿ ನಿಂತು ಹಣ ಪಾವತಿ  ಮಾಡುವುದು, ಹಣವನ್ನು  ಹಿಂತೆಗೆದುಕೊಳ್ಳುತ್ತಿದ್ದ ಕಾಲ ಬದಲಾಗಿದೆ. ATM ಮಷಿನ್ ಗಳು ಬಂದ ಮೇಲಂತೂ ಜನರು ಹಣವನ್ನು ಠೇವಣಿ ಮಾಡುವುದು, ಹಣ ಹಿಂತೆಗೆದುಕೊಳ್ಳಲು ಹೆಚ್ಚು ಸಹಾಯಕವಾಗಿದೆ. ಆದರೆ ATMನಲ್ಲಿ ಹಣಹಿಂತೆಗೆದುಕೊಳ್ಳುವ ವೇಳೆ ಕೆಲವು ಮುಂಜಾಗ್ರತಾ ಕ್ರಮ ವಹಿಸದಿದ್ದರೆ ನೀವು ಮೋಸದ ಬಲೆಯಲ್ಲಿ ಬೀಳಬಹುದು.

ಹಾಗಿದ್ದರೆ ನೀವು ATM ನಲ್ಲಿ ಹಣವನ್ನು ಹಿಂತೆಗೆದುಕೊಳ್ಳುವಾಗ ಹಾಗೂ ಮೊಬೈಲ್‌ ಬ್ಯಾಂಕಿಂಗ್‌ ವ್ಯವಹಾರ ಮಾಡುವಾಗ ಗಮನಿಸಬೇಕಾದ ಕೆಲವು ಅಂಶಗಳು ಕೆಳಗಿವೆ ನೋಡಿ

ಕೀಪ್ಯಾಡ್ ನಲ್ಲಿ ಸ್ಕಿಮ್ಮರ್ ಇದೆಯಾ ಎಂದು ಪರೀಕ್ಷಿಸಿ ಎಟಿಎಂನಲ್ಲಿ ಹಣವನ್ನು ಹಿಂತೆಗೆದುಕೊಳ್ಳಲು ಸೀಕ್ರೆಟ್ ಪಿನ್ ನಮೂದಿಸಬೇಕಾಗುತ್ತದೆ. ಪಿನ್ ನಮೂದಿಸುವುದಕ್ಕೂ ಮುನ್ನ ಕೀಪ್ಯಾಡ್ ಸರಿಯಿದೆಯೇ ಎಂದು ಪರೀಕ್ಷಿಸಿಕೊಳ್ಳಿ. ಏಕೆಂದರೆ ಇತ್ತೀಚಿನ ದಿನಗಳಲ್ಲಿ ಸ್ಕಿಮ್ಮರ್ ಎಂಬ ಸಾಧನವನ್ನು ಬಳಸಿ ಜನರಿಗೆ ಮೋಸ ಎಸೆಗಲಾಗುತ್ತಿದೆ. ಕೀಪ್ಯಾಡ್ ರೀತಿಯಲ್ಲಿ ಇರುವ ಸ್ಕಿಮ್ಮರ್ ಸಾಧನವು ನೀವು ನಮೂದಿಸಿದ ಪಿನ್ ಸಂಖ್ಯೆ ಹಾಗೂ ವಿವರಗಳನ್ನು ದಾಖಲಿಸಿಕೊಳ್ಳುತ್ತದೆ. ಹಾಗೆಯೇ ಕಾರ್ಡ್‌ ಸ್ವೈಪ್‌ ಮಾಡುವ ಜಾಗದಲ್ಲೂ ಸ್ಕಿಮ್ಮರ್ ಅಳವಡಿಸಲಾಗುತ್ತದೆ. ಹೀಗಾಗಿ ಪ್ರತಿ ಬಾರಿ ATMಗೆ ತೆರಳಿದಾಗ ಒಮ್ಮೆ ಪರೀಕ್ಷಿಸಿ.
ಯಂತ್ರದ ಹತ್ತಿರ ನಿಂತು ಸೀಕ್ರೆಟ್ ಪಿನ್ ದಾಖಲಿಸಿ ನಿಮ್ಮ ಕಾರ್ಡ್ ವಿವರಗಳನ್ನು ತಿಳಿಯಲು ಕೆಲವರು ಉತ್ಸುಕರಾಗಿರುತ್ತಾರೆ. ಹೀಗಾಗಿ ಆದಷ್ಟು ATM ಮಷಿನ್ ಗೆ ಹತ್ತಿರವಾಗಿ ನಿಂತು ಹಿಂದಿನ ವ್ಯಕ್ತಿಗೆ ಕಾಣದಂತೆ ನಿಮ್ಮ ವಿವರಗಳನ್ನ ದಾಖಲಿಸಿ. ನಿಮ್ಮ ಪಿನ್‌ ನಂಬರ್‌ ಯಾರೊಂದಿಗೂ ಹಂಚಿಕೊಳ್ಳಬೇಡಿ. ನಿಮ್ಮ ವಹಿವಾಟಿನ ನಂತರ ರಶೀದಿ ಹರಿದುಹಾಕಿ 

ನೆಟ್‌ ಬ್ಯಾಂಕಿಂಗ್-ಮೊಬೈಲ್‌ ಬ್ಯಾಂಕಿಂಗ್ ಪಾಸ್‌ವರ್ಡ್‌ ಬೇರೆಯಿರಲಿ ನೀವು ನೆಟ್‌ ಬ್ಯಾಂಕಿಂಗ್ ಮತ್ತು ಮೊಬೈಲ್ ಬ್ಯಾಂಕಿಂಗ್  ಎರಡನ್ನೂ ಬಳಸುತ್ತಿದ್ದರೆ, ಸುರಕ್ಷತಾ ದೃಷ್ಟಿಯಿಂದ ಎರಡು ವಿಭಿನ್ನ ಪಾಸ್‌ವರ್ಡ್‌ ಇರಿಸಿಕೊಂಡರೆ ಉತ್ತಮ.ನೀವು ಮೊಬೈಲ್ ಬ್ಯಾಂಕಿಂಗ್ ಮಾಡುವಾಗ ಎಂ-ಪಿನ್ ಇರುತ್ತದೆ. ಅದನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ. ಗ್ರಾಹಕರು ಮೋಸ ಹೋಗಬಾರದೆಂದು ನೋದಾಂಯಿಸಲ್ಪಟ್ಟ ಪೋನ್ ನಂಬರ್‌ ಹೊಂದಿದ ಮೊಬೈಲ್‌ನಷ್ಟೇ ಬ್ಯಾಂಕಿಂಗ್ ಅಪ್ಲಿಕೇಷನ್ ಇನ್‌ಸ್ಟಾಲ್ ಮಾಡಿಕೊಳ್ಳಲು ಬ್ಯಾಂಕ್‌ಗಳು ಅನುಮತಿ ನೀಡುತ್ತವೆ.

ಬ್ಯಾಂಕಿನಿಂದ Notification ಬರುವುದನ್ನ ಖಚಿತಪಡಿಸಿಕೊಳ್ಳಿ ಯಾವುದೇ ಬ್ಯಾಂಕಿಂಗ್ ವ್ಯವಹಾರ ಮಾಡುವಾಗ ನಿಮ್ಮ ಬ್ಯಾಂಕಿಂಗ್ ಅಧಿಸೂಚನೆಯನ್ನು ಪಡೆದುಕೊಳ್ಳುವುದನ್ನ ಪರೀಕ್ಷಿಸಿಕೊಳ್ಳಿ. ಅಂದರೆ ನೀವು ತಪ್ಪಾಗಿಲಾಗಿನ್ ಆಗಿದ್ದಲ್ಲಿ ಅಧಿಸೂಚನೆ  ಬರುತ್ತಿದೆಯಾ ಅಥವಾ ಇಲ್ಲವಾ ಎಂದು ಖಚಿತಪಡಿಸಿಕೊಳ್ಳಿ.
ಮೊಬೈಲ್ ಆ್ಯಪ್ ಅಪ್‌ಡೇಟ್  ಮಾಡುತ್ತಿರಬೇಕು ಆದಷ್ಟು ಮೊಬೈಲ್ ಆ್ಯಪ್  ಗಳನ್ನು ಅಪ್‌ಡೇಟ್ ಮಾಡುತ್ತಿರಿ ಮತ್ತು ವೈ-ಫೈ ಸಂಪರ್ಕಸಿಕ್ಕಾಗ ಅಪ್ಲಿಕೇಶನ್‌ಗಳು ಸ್ವಯಂಚಾಲಿತವಾಗಿ ಅಪ್‌ಡೇಟ್ ಆಗುವಂತೆ ನೀವು ಸೆಟ್ಟಿಂಗ್ ಗಳನ್ನು ಮಾಡಿಕೊಳ್ಳಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ವೈದ್ಯಕೀಯ ಪವಾಡದಿಂದ ವರ್ಷದಲ್ಲಿ ‘ಎರಡು ಬಾರಿ ಹುಟ್ಟುಹಬ್ಬ’ ಆಚರಿಸುತ್ತಿರುವ ಮಗು..!ತಿಳಿಯಲು ಈ ಲೇಖನ ಓದಿ..

    ಒಂದು ವರ್ಷದ ಹಿಂದೆ ಅಧಿಕೃತವಾಗಿ ಈ ಧರೆಯಲ್ಲಿ ಅವತರಿಸಿರುವ ಪುಟ್ಟ ಬಾಲಕಿಯೀಗ ಆರೋಗ್ಯವಂತಳಾಗಿ ಬೆಳೆಯುತ್ತಿದ್ದಾಳೆ. ಇದರಲ್ಲೇನು ವಿಶೇಷ ಎನ್ನುತ್ತೀರಾ? ಈ ಮಗು ಎರಡು ಬಾರಿ ಜನಿಸಿದ್ದು, ಇದಕ್ಕಾಗಿ ಆಧುನಿಕ ವೈದ್ಯಕೀಯಕ್ಕೆ ಕೃತಜ್ಞತೆಗಳನ್ನು ಹೇಳಬೇಕಾಗಿದೆ.

  • ರಾಜಕೀಯ

    ಬಳ್ಳಾರಿ ಬ್ರದರ್ಸ್ಗೆ ಕೊಟ್ಟ ಮಾತಿನಂತೆ, ನಡೆಯದ ಸುಷ್ಮಾ ಸ್ವರಾಜ್..!ಏನು ಗೊತ್ತಾ…

    ಶ್ರಾವಣ ಶುಕ್ರವಾರ ನಡೆಯುವ ವರಮಹಾಲಕ್ಷ್ಮಿ ಪೂಜೆಯಲ್ಲಿ ಭಾಗವಹಿಸಲು ಪ್ರತಿ ವರ್ಷ ಬಳ್ಳಾರಿಗೆ ಬರುತ್ತಿದ್ದ ಭಾರತ ಸರಕಾರದ ಸಚಿವೆಯಾಗಿರುವ ಸುಷ್ಮಾ ಸ್ವರಾಜ್’ರವರು ಈ ವರ್ಷವಾದರೂ ಬಳ್ಳಾರಿಗೆ ಬರುತ್ತಾರೆಯೇ?

  • ಸುದ್ದಿ

    ಹೈಕೋರ್ಟ್ ಮಹತ್ವದ ತೀರ್ಪು:LLR ಇದ್ದರೂ ಅಪಘಾತವಾದ ವೇಳೆ ಪರಿಹಾರ ನೀಡಬೇಕು…!

    ವಾಹನ ಕಲಿಕಾ ಪರವಾನಗಿ (ಎಲ್ಎಲ್ಆರ್) ಹೊಂದಿದ್ದು, ಅಂತಹ ಸಂದರ್ಭದಲ್ಲಿ ಅಪಘಾತವಾದರೆ ವಿಮಾ ಕಂಪನಿಗಳು ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹತ್ತು ವರ್ಷಗಳ ಹಿಂದಿನ ಪ್ರಕರಣವೊಂದರ ತೀರ್ಪು ಈಗ ಹೊರಬಿದ್ದಿದ್ದು, ಎಲ್ಎಲ್ಆರ್ ಇದ್ದ ವೇಳೆ ಅಂತವರು ವಾಹನ ಚಾಲನೆ ಮಾಡುವಾಗ ಡಿಎಲ್ ಹೊಂದಿದ ಪರಿಣಿತರು ಇರಬೇಕೆಂಬ ನಿಯಮವಿದೆ. ಆದರೆ ಇದು ದ್ವಿಚಕ್ರವಾಹನಕ್ಕೋ ಅಥವಾ ನಾಲ್ಕು ಚಕ್ರ ವಾಹನಕ್ಕೋ ಎಂಬುದರ ಕುರಿತು ಸ್ಪಷ್ಟತೆ ಇಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ನಿಯಮ ನಾಲ್ಕು ಚಕ್ರ ವಾಹನಗಳಿಗೆ…

  • ಸುದ್ದಿ

    ಎಲ್ಐಸಿ ಪಾಲಿಸಿ ಹೊಂದಿರುವವರಿಗೆ ಇಲ್ಲಿದೆ ಒಂದು ಸಂತಸದ ಸುದ್ದಿ…!ಇದನ್ನೊಮ್ಮೆ ಓದಿ..,

    ಭಾರತೀಯ ಜೀವ ವಿಮಾ ನಿಗಮ ಪಾಲಿಸಿ ಹೂಡಿಕೆದಾರರ  ಹಣ ಭದ್ರವಾಗಿದೆ.ಸುಳ್ಳು ವದಂತಿಗಳನ್ನು  ನಂಬಬೇಡಿ ಎಂದು ನಿಗಮದಿಂದ ಸ್ಪಷ್ಟನೆ ನೀಡಲಾಗಿದೆ. ಭಾರತೀಯ ವಿಜಯ ವಿಮಾ ನಿಗಮ(ಎಲ್ಐಸಿ) ನಷ್ಟದಲ್ಲಿದೆ ನಡೆಯುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ  ಸುಳ್ಳು ಸುದ್ದಿಗಳು ಹರಿದಾಡುತ್ತಿರುವುದರ  ಕುರಿತಾಗಿ ಸ್ಪಷ್ಟನೆ ನೀಡಿರುವ ಎಲ್ಐಸಿ ಇದು ಸಂಪೂರ್ಣ ಸುಳ್ಳು ಎಂದು ಹೇಳಿಕೆ ನೀಡಿದೆ. ಎಲ್ಐಸಿ ಭಾರಿ ನಷ್ಟದಲ್ಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸಂಪೂರ್ಣ ಸುಳ್ಳಾಗಿದೆ.ಪಾಲಿಸಿದಾರರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಸಂಸ್ಥೆಯ ಆರ್ಥಿಕ ಶಕ್ತಿ ಉತ್ತಮವಾಗಿದೆ ಎಂದುಹೇಳಲಾಗಿದೆ,ಸುಳ್ಳು…

  • ಸುದ್ದಿ

    ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಸ್ಮಾರ್ಟ್ ವಾಚ್ ಕಟ್ಟಿಕೊಂಡು ಎಕ್ಸಾಂ ಹಾಲ್‍ನಲ್ಲಿ ಕಾಪಿ, ಈ ಸುದ್ದಿ ನೋಡಿ.

    ಸ್ಮಾರ್ಟ್ ವಿದ್ಯಾರ್ಥಿಯೊಬ್ಬ ಸ್ಮಾರ್ಟ್ ಆಗಿ ನಕಲು ಮಾಡಲು ಹೋಗಿ ಸಿಕ್ಕಿಹಾಕಿಕೊಂಡ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ. ಎಂಐಟಿ ಕಾಲೇಜು ಎಂಜಿನಿಯರ್ ವಿದ್ಯಾರ್ಥಿ ಸ್ಮಾರ್ಟ್ ವಾಚ್ ಕಟ್ಟಿಕೊಂಡು ಹೋಗಿ ಪರೀಕ್ಷೆಯಲ್ಲಿ ನಕಲು ಮಾಡಿದ್ದಾನೆ. ಸ್ಮಾರ್ಟ್ ವಾಚ್ ಕಟ್ಟಿದ್ದ ವಿದ್ಯಾರ್ಥಿಯನ್ನು ಪರೀಕ್ಷೆ ಹಾಲ್ ನಿಂದ ಎಬ್ಬಿಸಿ ಹೊರಗೆ ಕಳುಹಿಸಿದ್ದಾರೆ. ಈ ಸ್ಮಾರ್ಟ್ ವಾಚ್ ಎಷ್ಟು ತಂತ್ರಜ್ಞಾನದಿಂದ ಕೂಡಿದೆ ಎಂದರೆ ಇಡೀ ಪುಸ್ತಕವನ್ನು ಇದರೊಳಗೆ ಅಪ್ಲೋಡ್ ಮಾಡಬಹುದು. ಪರೀಕ್ಷೆಗೆ ಸಂಬಂಧಪಟ್ಟ ಎಲ್ಲಾ ಪ್ರೋಗ್ರಾಂಗಳು, ಅದರ ಸೂತ್ರಗಳು, ಕೆಲ ಉತ್ತರಗಳು ಮೆಮೋರಿ…

  • ಸಿನಿಮಾ

    ಮಂಡ್ಯ ಲೋಕಸಭಾ ಕ್ಷೇತ್ರದ ಮತದಾರರಾಗಿರುವ ರಮ್ಯಾ ಈ ಬಾರಿಯಾದ್ರೂ ತಮ್ಮ ವೋಟ್ ಹಾಕಿದ್ರಾ..?

    ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಸದ್ಯ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಉಸ್ತುವಾರಿಯನ್ನು ನಿರ್ವಹಿಸುತ್ತಿದ್ದು, ಕೇರಳದ ವಯನಾಡಿನಲ್ಲಿ ಸ್ಪರ್ಧಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರ ಪ್ರಚಾರ ಕಾರ್ಯದಲ್ಲೂ ಪಾಲ್ಗೊಂಡಿದ್ದಾರೆ. ಮಂಡ್ಯ ಚುನಾವಣೆಯಲ್ಲಿ ಸೋತ ಬಳಿಕ ರಮ್ಯಾ ರಾಜ್ಯ ರಾಜಕಾರಣದಿಂದ ದೂರವಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲೂ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ಕೈಗೊಂಡಿರಲಿಲ್ಲ. ಅಷ್ಟೇ ಅಲ್ಲ, ಮಂಡ್ಯ ಕ್ಷೇತ್ರದಲ್ಲಿ ಮತದಾನ ಮಾಡುವ ಗೋಜಿಗೂ ರಮ್ಯಾ ಹೋಗಿರಲಿಲ್ಲ. ಇದೀಗ ಗುರುವಾರದಂದು ರಾಜ್ಯದಲ್ಲಿ ಮೊದಲ ಹಂತದ…