ಸುದ್ದಿ

ಆನ್ಲೈನ್ ಬ್ಯಾಂಕಿಂಗ್‌ನಲ್ಲಿ ಮೋಸಕ್ಕೆ ಒಳಗಾಗುವ ಮುನ್ನ ಇದನ್ನೊಮ್ಮೆ ನೋಡಿ,.!

53

ಇತ್ತೀಚಿನ ದಿನಗಳಲ್ಲಿ ಎಲ್ಲರೂ ಆನ್ಲೈನ್ ಬ್ಯಾಂಕಿಂಗ್ ಸೇವೆಗಳನ್ನು ಬಳಸುತ್ತಿದ್ದಾರೆ, ತಂತ್ರಜ್ಙಾನ ಬೆಳೆಯುತ್ತಿದ್ದಂತೆ  ಬ್ಯಾಂಕಿಂಗ್ ವ್ಯವಹಾರಗಳು  ಸಹ ಎಲ್ಲರಿಗೂ  ಸುಲಭವಾಗುತ್ತಿದೆ. ಹಾಗೆಯೇ  ಇಂಟರ್ನೆಟ್   ಹ್ಯಾಕಿಂಗ್ , ಮೊಬೈಲ್ ಬ್ಯಾಂಕಿಂಗ್ ಸೇವೆಗಳು ಸಾರ್ವಜನಿಕರಿಗೆ ಹೆಚ್ಚು ಉಪಯುಕ್ತವಾಗುತ್ತಿವೆ.ಸಮಯದ ಉಳಿತಾಯದ ಜೊತೆಗೆ ಸುಲಭವಾಗಿ ಹಣದ ವರ್ಗಾವಣೆ, ಬಿಲ್ ಪಾವತಿಯನ್ನು ಮಾಡಬಹುದಾಗಿದೆ. ಆದರೆ ಕೆಲ ನಿಯಮಗಳನ್ನು ಪಾಲಿಸದಿದ್ದರೆ ಮೋಸಕ್ಕೂ ಒಳಗಾಗಬೇಕಾಗುತ್ತದೆ.

ಬ್ಯಾಂಕಿನಲ್ಲಿ ಸಾಲುಗಟ್ಟಿ ನಿಂತು ಹಣ ಪಾವತಿ  ಮಾಡುವುದು, ಹಣವನ್ನು  ಹಿಂತೆಗೆದುಕೊಳ್ಳುತ್ತಿದ್ದ ಕಾಲ ಬದಲಾಗಿದೆ. ATM ಮಷಿನ್ ಗಳು ಬಂದ ಮೇಲಂತೂ ಜನರು ಹಣವನ್ನು ಠೇವಣಿ ಮಾಡುವುದು, ಹಣ ಹಿಂತೆಗೆದುಕೊಳ್ಳಲು ಹೆಚ್ಚು ಸಹಾಯಕವಾಗಿದೆ. ಆದರೆ ATMನಲ್ಲಿ ಹಣಹಿಂತೆಗೆದುಕೊಳ್ಳುವ ವೇಳೆ ಕೆಲವು ಮುಂಜಾಗ್ರತಾ ಕ್ರಮ ವಹಿಸದಿದ್ದರೆ ನೀವು ಮೋಸದ ಬಲೆಯಲ್ಲಿ ಬೀಳಬಹುದು.

ಹಾಗಿದ್ದರೆ ನೀವು ATM ನಲ್ಲಿ ಹಣವನ್ನು ಹಿಂತೆಗೆದುಕೊಳ್ಳುವಾಗ ಹಾಗೂ ಮೊಬೈಲ್‌ ಬ್ಯಾಂಕಿಂಗ್‌ ವ್ಯವಹಾರ ಮಾಡುವಾಗ ಗಮನಿಸಬೇಕಾದ ಕೆಲವು ಅಂಶಗಳು ಕೆಳಗಿವೆ ನೋಡಿ

ಕೀಪ್ಯಾಡ್ ನಲ್ಲಿ ಸ್ಕಿಮ್ಮರ್ ಇದೆಯಾ ಎಂದು ಪರೀಕ್ಷಿಸಿ ಎಟಿಎಂನಲ್ಲಿ ಹಣವನ್ನು ಹಿಂತೆಗೆದುಕೊಳ್ಳಲು ಸೀಕ್ರೆಟ್ ಪಿನ್ ನಮೂದಿಸಬೇಕಾಗುತ್ತದೆ. ಪಿನ್ ನಮೂದಿಸುವುದಕ್ಕೂ ಮುನ್ನ ಕೀಪ್ಯಾಡ್ ಸರಿಯಿದೆಯೇ ಎಂದು ಪರೀಕ್ಷಿಸಿಕೊಳ್ಳಿ. ಏಕೆಂದರೆ ಇತ್ತೀಚಿನ ದಿನಗಳಲ್ಲಿ ಸ್ಕಿಮ್ಮರ್ ಎಂಬ ಸಾಧನವನ್ನು ಬಳಸಿ ಜನರಿಗೆ ಮೋಸ ಎಸೆಗಲಾಗುತ್ತಿದೆ. ಕೀಪ್ಯಾಡ್ ರೀತಿಯಲ್ಲಿ ಇರುವ ಸ್ಕಿಮ್ಮರ್ ಸಾಧನವು ನೀವು ನಮೂದಿಸಿದ ಪಿನ್ ಸಂಖ್ಯೆ ಹಾಗೂ ವಿವರಗಳನ್ನು ದಾಖಲಿಸಿಕೊಳ್ಳುತ್ತದೆ. ಹಾಗೆಯೇ ಕಾರ್ಡ್‌ ಸ್ವೈಪ್‌ ಮಾಡುವ ಜಾಗದಲ್ಲೂ ಸ್ಕಿಮ್ಮರ್ ಅಳವಡಿಸಲಾಗುತ್ತದೆ. ಹೀಗಾಗಿ ಪ್ರತಿ ಬಾರಿ ATMಗೆ ತೆರಳಿದಾಗ ಒಮ್ಮೆ ಪರೀಕ್ಷಿಸಿ.
ಯಂತ್ರದ ಹತ್ತಿರ ನಿಂತು ಸೀಕ್ರೆಟ್ ಪಿನ್ ದಾಖಲಿಸಿ ನಿಮ್ಮ ಕಾರ್ಡ್ ವಿವರಗಳನ್ನು ತಿಳಿಯಲು ಕೆಲವರು ಉತ್ಸುಕರಾಗಿರುತ್ತಾರೆ. ಹೀಗಾಗಿ ಆದಷ್ಟು ATM ಮಷಿನ್ ಗೆ ಹತ್ತಿರವಾಗಿ ನಿಂತು ಹಿಂದಿನ ವ್ಯಕ್ತಿಗೆ ಕಾಣದಂತೆ ನಿಮ್ಮ ವಿವರಗಳನ್ನ ದಾಖಲಿಸಿ. ನಿಮ್ಮ ಪಿನ್‌ ನಂಬರ್‌ ಯಾರೊಂದಿಗೂ ಹಂಚಿಕೊಳ್ಳಬೇಡಿ. ನಿಮ್ಮ ವಹಿವಾಟಿನ ನಂತರ ರಶೀದಿ ಹರಿದುಹಾಕಿ 

ನೆಟ್‌ ಬ್ಯಾಂಕಿಂಗ್-ಮೊಬೈಲ್‌ ಬ್ಯಾಂಕಿಂಗ್ ಪಾಸ್‌ವರ್ಡ್‌ ಬೇರೆಯಿರಲಿ ನೀವು ನೆಟ್‌ ಬ್ಯಾಂಕಿಂಗ್ ಮತ್ತು ಮೊಬೈಲ್ ಬ್ಯಾಂಕಿಂಗ್  ಎರಡನ್ನೂ ಬಳಸುತ್ತಿದ್ದರೆ, ಸುರಕ್ಷತಾ ದೃಷ್ಟಿಯಿಂದ ಎರಡು ವಿಭಿನ್ನ ಪಾಸ್‌ವರ್ಡ್‌ ಇರಿಸಿಕೊಂಡರೆ ಉತ್ತಮ.ನೀವು ಮೊಬೈಲ್ ಬ್ಯಾಂಕಿಂಗ್ ಮಾಡುವಾಗ ಎಂ-ಪಿನ್ ಇರುತ್ತದೆ. ಅದನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ. ಗ್ರಾಹಕರು ಮೋಸ ಹೋಗಬಾರದೆಂದು ನೋದಾಂಯಿಸಲ್ಪಟ್ಟ ಪೋನ್ ನಂಬರ್‌ ಹೊಂದಿದ ಮೊಬೈಲ್‌ನಷ್ಟೇ ಬ್ಯಾಂಕಿಂಗ್ ಅಪ್ಲಿಕೇಷನ್ ಇನ್‌ಸ್ಟಾಲ್ ಮಾಡಿಕೊಳ್ಳಲು ಬ್ಯಾಂಕ್‌ಗಳು ಅನುಮತಿ ನೀಡುತ್ತವೆ.

ಬ್ಯಾಂಕಿನಿಂದ Notification ಬರುವುದನ್ನ ಖಚಿತಪಡಿಸಿಕೊಳ್ಳಿ ಯಾವುದೇ ಬ್ಯಾಂಕಿಂಗ್ ವ್ಯವಹಾರ ಮಾಡುವಾಗ ನಿಮ್ಮ ಬ್ಯಾಂಕಿಂಗ್ ಅಧಿಸೂಚನೆಯನ್ನು ಪಡೆದುಕೊಳ್ಳುವುದನ್ನ ಪರೀಕ್ಷಿಸಿಕೊಳ್ಳಿ. ಅಂದರೆ ನೀವು ತಪ್ಪಾಗಿಲಾಗಿನ್ ಆಗಿದ್ದಲ್ಲಿ ಅಧಿಸೂಚನೆ  ಬರುತ್ತಿದೆಯಾ ಅಥವಾ ಇಲ್ಲವಾ ಎಂದು ಖಚಿತಪಡಿಸಿಕೊಳ್ಳಿ.
ಮೊಬೈಲ್ ಆ್ಯಪ್ ಅಪ್‌ಡೇಟ್  ಮಾಡುತ್ತಿರಬೇಕು ಆದಷ್ಟು ಮೊಬೈಲ್ ಆ್ಯಪ್  ಗಳನ್ನು ಅಪ್‌ಡೇಟ್ ಮಾಡುತ್ತಿರಿ ಮತ್ತು ವೈ-ಫೈ ಸಂಪರ್ಕಸಿಕ್ಕಾಗ ಅಪ್ಲಿಕೇಶನ್‌ಗಳು ಸ್ವಯಂಚಾಲಿತವಾಗಿ ಅಪ್‌ಡೇಟ್ ಆಗುವಂತೆ ನೀವು ಸೆಟ್ಟಿಂಗ್ ಗಳನ್ನು ಮಾಡಿಕೊಳ್ಳಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • budget, karnataka

    6ನೇ ವೇತನ ಆಯೋಗದ ಗಾಳಿಸುದ್ದಿಗೆ ಕಿವಿ ಕೊಡಬೇಡಿ – ಇಲ್ಲಿದೆ ನಿಜವಾದ ಭಜೆಟ್ನ ಸುದ್ದಿ

    ನೌಕರರ ಉತ್ಪಾದಕತೆ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಕಾರ್ಯದಕ್ಷತೆಯನ್ನು ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆಯೋಗ ಮುಂದಿನ ವರದಿಯಲ್ಲಿ ಶಿಫಾರಸು ಮಾಡಲಿದೆ. ವೇತನ ಹೆಚ್ಚಳ ಹಾಗೂ ಕಾರ್ಯದಕ್ಷತೆ ಮತ್ತು ಶ್ರಮತೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ. ಈ ಮೂಲಕ ತನ್ನ ಕಲ್ಯಾಣ ಕಾರ್ಯಕ್ರಮಗಳನ್ನು ಇನ್ನಷ್ಟು ಉತ್ತಮವಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗಲಿದೆ.

  • ಜ್ಯೋತಿಷ್ಯ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ..!

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ ನೀವು ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸಿದಲ್ಲಿ ಖಿನ್ನತೆಗೊಳಗಾಗಬೇಡಿ. ಆಹಾರದ ಸ್ವಾದಕ್ಕೆ ಉಪ್ಪು ಬೇಕಾದ ಹಾಗೆ ಅತೃಪ್ತಿಯಿಂದ ಮಾತ್ರ ನೀವು ಸಂತೋಷದ ಮೌಲ್ಯವನ್ನು ಅರ್ಥ ಮಾಡಿಕೊಳ್ಳುತ್ತೀರಿ. ನಿಮ್ಮ ಮನಸ್ಥಿತಿಯನ್ನು ಬದಲಾಯಿಸಲು ಕೆಲವು ಸಾಮಾಜಿಕ ಸಮಾರಂಭಗಳಿಗೆ ಹಾಜರಾಗಿ. ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಅತಿಥಿಗಳು…

  • ಆರೋಗ್ಯ

    ಬೆಳಿಗ್ಗೆದ್ದ ತಕ್ಷಣ ಟೀ ಕುಡಿಯುವ ಅಭ್ಯಾಸವಿದ್ರೆ ಇವತ್ತೇ ಬಿಟ್ಬಿಡಿ..!ಯಾಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಬೆಳಿಗ್ಗೆದ್ದ ತಕ್ಷಣ ಟೀ ಕುಡಿಯುವ ಅಭ್ಯಾಸವಿದೆಯೇ? ಅದೂ ಖಾಲಿಹೊಟ್ಟೆಯಲ್ಲಿ ಪ್ರಥಮ ಆಹಾರವಾಗಿ?ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದು ಭಾರತದ ಹಲವು ಕಡೆಗಳಲ್ಲಿ ಒಂದು ಸಂಪ್ರದಾಯವೇ ಆಗಿದೆ. ಹಿಂದೆ ಬ್ರಿಟಿಷರು ಭಾರತದಲ್ಲಿದ್ದಾಗ ಬೆಡ್ ಟೀ ಎಂದು ಟೀ ಹೀರುತ್ತಿದ್ದರು. ಟೀ ಸೇವನೆಯೂ ಒಂದು ವ್ಯಸನವಾಗಿದ್ದು ಹೀಗೇ ಮುಂಜಾನೆಯ ಪ್ರಥಮ ಆಹಾರವಾಗಿ ಟೀ ಸೇವಿಸುವ ಅಭ್ಯಾಸವಿರುವವರಿಗೆ ಇದು ವ್ಯಸನವೇ ಆಗಿ ಹೋಗಿರುತ್ತದೆ. ಟೀ ಯಲ್ಲಿರುವ ಆಂಟಿ ಆಕ್ಸಿಡೆಂಟುಗಳು ಹಾಗೂ ಟ್ಯಾನಿನ್ ಎಂಬ ಪೋಷಕಾಂಶಗಳು ಅಥವಾ ಕ್ಯಾಟೆಚಿನ್ ಎಂಬ ಕಣಗಳು ಜೀವರಾಸಾಯನಿಕ ಕ್ರಿಯೆಯನ್ನು…

  • ಆರೋಗ್ಯ

    ಹಾರ್ಟ್ ಅಟ್ಯಾಕ್ ಆಗೋ ಮುಂಚೆ ಏನಾಗುತ್ತೆ ಗೊತ್ತಾ?ತಿಳಿಯಲು ಈ ಲೇಖನಿ ಓದಿ….

    ಹಾರ್ಟ್ ಅಟ್ಯಾಕ್ ಯಾರಿಗೆ ಯಾವಾಗ ಆಗುತ್ತೋ ಗೊತ್ತಿಲ್ಲ.ಇದ್ದಕ್ಕಿದ್ದಂತೆ ಹಾರ್ಟ್ ಅಟ್ಯಾಕ್ ಆಗಿ ಹೋಗಿಬಿಟ್ಟ ಎಂದು ಹೇಳುವ ಮಾತನ್ನ ಕೇಳಿರುತ್ತೇವೆ. ಹಾರ್ಟ್ ಅಟ್ಯಾಕ್ ಆಗುವುದೇ ಹಾಗೆ.

  • ಆರೋಗ್ಯ

    ಬೆಳ್ಳುಳ್ಳಿಯನ್ನು ತಿಂದರೆ ಏನಾಗುತ್ತದೆ ಅಂತ ನಿಮಗೆ ಗೊತ್ತಾ? ಈ ಮಾಹಿತಿ ನೋಡಿ.

    ಬೆಳ್ಳುಳ್ಳಿಯನ್ನು ನಾವು ನಿತ್ಯ ಆಹಾರದಲ್ಲಿ ಬಳಸುತ್ತೇವೆ. ಇದರಲ್ಲಿ ಆಂಟಿ ಬ್ಯಾಕ್ಟೀರಿಯಾ, ಆಂಟಿ ವೈರಲ್, ಆಂಟಿ ಫಂಗಲ್ ಗುಣಗಳ ಜತೆಗೆ ಇನ್ನೂ ನಮ್ಮ ದೇಹಕ್ಕೆ ಪ್ರಯೋಜವಾಗುವ ಅನೇಕ ಔಷಧಿ ಗುಣಗಳಿವೆ. ಹಾಲನ್ನೂ ಅಷ್ಟೇ ನಾವು ದಿನನಿತ್ಯ ಬಳಸುತ್ತಿರುತ್ತೇವೆ. ಹಾಲು ಸಂಪೂರ್ಣ ಪೌಷ್ಟಿಕ ಆಹಾರ ಎಂದು ಹೇಳುತ್ತಾರೆ. ಆದರೆ ಕೆಲವೊಂದು ಬೆಳ್ಳುಳ್ಳಿ ಎಸಳನ್ನು ತೆಗೆದುಕೊಂಡು ಜಜ್ಜಿ ಹಾಲಿನಲ್ಲಿ ಹಾಕಿ ಕಾಯಿಸಿ ಕುಡಿದರೆ? ಏನಾಗುತ್ತದೆ ಅಂತ ನಿಮಗೆ ಗೊತ್ತಾ? ಇದರಿಂದ ಸಾಕಷ್ಟು ಪ್ರಯೋಜನಗಳಿವೆ. ಅವು ಏನು ಎಂದು ಈಗ ತಿಳಿದುಕೊಳ್ಳೋಣ. 1….

  • ಸುದ್ದಿ

    ಈ ಪ್ರದೇಶದಲ್ಲಿ ಗಂಡಂದಿರು ತಮ್ಮ ಪತ್ನಿಯರನ್ನು ಬಾಡಿಗೆಗೆ ನೀಡುತ್ತಾರಂತೆ..!ಮುಂದೆ ಓದಿ ಶಾಕ್ ಆಗ್ತೀರಾ…

    ಹಸಿವು, ಬಡತನ ಅನ್ನೋದು ಯಾರಿಂದ ಎಂಥ ಕೆಲಸ ಬೇಕಾದರೂ ಮಾಡಿಸುತ್ತೆ. ಕೀನ್ಯಾ ದೇಶಲ್ಲಿ ಬಡತನದಿಂದಾಗಿ ಕೆಲವರು ತಂತಮ್ಮ ಪತ್ನಿಯರನ್ನೇ ಬಾಡಿಗೆಗೆ ನೀಡುವಂಥ ದುಃಸ್ಥಿತಿ ಅಲ್ಲಿದೆ. ಕೀನ್ಯಾದಲ್ಲಿ ಬಡತನದ ಪ್ರಮಾಣ ಎಷ್ಟಿದೆಯೆಂದರೆ ನಮ್ಮಲ್ಲಿ ಗಂಡ ಹಾಗೂ ಹೆಂಡತಿ ಕೆಲಸಕ್ಕೆಂದು ಆಫೀಸಿಗೆ ಹೋದಂತೆ ಅಲ್ಲಿ ಪ್ರವಾಸಿಗರಿಗೆ ಮೈಮಾರಿಕೊಳ್ಳಲು ಹೋಗುತ್ತಾರೆ. ಶ್ರೀಮಂತ ವಿದೇಶಿ ಪ್ರವಾಸಿಗರಿಂದ ಸಾಕಷ್ಟು ಹಣ ಪಡೆದು ಹೊಟ್ಟೆ ಬಟ್ಟೆ ಕಟ್ಟಿಕೊಳ್ಳುತ್ತಾರೆ.ದುಡಿದು ಗಳಿಸುವ ಹಣ ಊಟಕ್ಕೂ ಸಾಲುತ್ತಿಲ್ಲವಾದಾಗ ಗಂಡನೇ ಪತ್ನಿಯನ್ನು ಈ ದಂಧೆಗೆ ಕಳುಹಿಸುವುದು ಅಲ್ಲಿ ಕಾಮನ್. ಹಾಗೆಯೇ ಪತ್ನಿಗೂ ಬೇರೆ…