ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಗಳಲ್ಲಿ ಎಲ್ಲರೂ ಆನ್ಲೈನ್ ಬ್ಯಾಂಕಿಂಗ್ ಸೇವೆಗಳನ್ನು ಬಳಸುತ್ತಿದ್ದಾರೆ, ತಂತ್ರಜ್ಙಾನ ಬೆಳೆಯುತ್ತಿದ್ದಂತೆ ಬ್ಯಾಂಕಿಂಗ್ ವ್ಯವಹಾರಗಳು ಸಹ ಎಲ್ಲರಿಗೂ ಸುಲಭವಾಗುತ್ತಿದೆ. ಹಾಗೆಯೇ ಇಂಟರ್ನೆಟ್ ಹ್ಯಾಕಿಂಗ್ , ಮೊಬೈಲ್ ಬ್ಯಾಂಕಿಂಗ್ ಸೇವೆಗಳು ಸಾರ್ವಜನಿಕರಿಗೆ ಹೆಚ್ಚು ಉಪಯುಕ್ತವಾಗುತ್ತಿವೆ.ಸಮಯದ ಉಳಿತಾಯದ ಜೊತೆಗೆ ಸುಲಭವಾಗಿ ಹಣದ ವರ್ಗಾವಣೆ, ಬಿಲ್ ಪಾವತಿಯನ್ನು ಮಾಡಬಹುದಾಗಿದೆ. ಆದರೆ ಕೆಲ ನಿಯಮಗಳನ್ನು ಪಾಲಿಸದಿದ್ದರೆ ಮೋಸಕ್ಕೂ ಒಳಗಾಗಬೇಕಾಗುತ್ತದೆ.

ಬ್ಯಾಂಕಿನಲ್ಲಿ ಸಾಲುಗಟ್ಟಿ ನಿಂತು ಹಣ ಪಾವತಿ ಮಾಡುವುದು, ಹಣವನ್ನು ಹಿಂತೆಗೆದುಕೊಳ್ಳುತ್ತಿದ್ದ ಕಾಲ ಬದಲಾಗಿದೆ. ATM ಮಷಿನ್ ಗಳು ಬಂದ ಮೇಲಂತೂ ಜನರು ಹಣವನ್ನು ಠೇವಣಿ ಮಾಡುವುದು, ಹಣ ಹಿಂತೆಗೆದುಕೊಳ್ಳಲು ಹೆಚ್ಚು ಸಹಾಯಕವಾಗಿದೆ. ಆದರೆ ATMನಲ್ಲಿ ಹಣಹಿಂತೆಗೆದುಕೊಳ್ಳುವ ವೇಳೆ ಕೆಲವು ಮುಂಜಾಗ್ರತಾ ಕ್ರಮ ವಹಿಸದಿದ್ದರೆ ನೀವು ಮೋಸದ ಬಲೆಯಲ್ಲಿ ಬೀಳಬಹುದು.
ಹಾಗಿದ್ದರೆ ನೀವು ATM ನಲ್ಲಿ ಹಣವನ್ನು ಹಿಂತೆಗೆದುಕೊಳ್ಳುವಾಗ ಹಾಗೂ ಮೊಬೈಲ್ ಬ್ಯಾಂಕಿಂಗ್ ವ್ಯವಹಾರ ಮಾಡುವಾಗ ಗಮನಿಸಬೇಕಾದ ಕೆಲವು ಅಂಶಗಳು ಕೆಳಗಿವೆ ನೋಡಿ

ಕೀಪ್ಯಾಡ್ ನಲ್ಲಿ ಸ್ಕಿಮ್ಮರ್ ಇದೆಯಾ ಎಂದು ಪರೀಕ್ಷಿಸಿ ಎಟಿಎಂನಲ್ಲಿ ಹಣವನ್ನು ಹಿಂತೆಗೆದುಕೊಳ್ಳಲು ಸೀಕ್ರೆಟ್ ಪಿನ್ ನಮೂದಿಸಬೇಕಾಗುತ್ತದೆ. ಪಿನ್ ನಮೂದಿಸುವುದಕ್ಕೂ ಮುನ್ನ ಕೀಪ್ಯಾಡ್ ಸರಿಯಿದೆಯೇ ಎಂದು ಪರೀಕ್ಷಿಸಿಕೊಳ್ಳಿ. ಏಕೆಂದರೆ ಇತ್ತೀಚಿನ ದಿನಗಳಲ್ಲಿ ಸ್ಕಿಮ್ಮರ್ ಎಂಬ ಸಾಧನವನ್ನು ಬಳಸಿ ಜನರಿಗೆ ಮೋಸ ಎಸೆಗಲಾಗುತ್ತಿದೆ. ಕೀಪ್ಯಾಡ್ ರೀತಿಯಲ್ಲಿ ಇರುವ ಸ್ಕಿಮ್ಮರ್ ಸಾಧನವು ನೀವು ನಮೂದಿಸಿದ ಪಿನ್ ಸಂಖ್ಯೆ ಹಾಗೂ ವಿವರಗಳನ್ನು ದಾಖಲಿಸಿಕೊಳ್ಳುತ್ತದೆ. ಹಾಗೆಯೇ ಕಾರ್ಡ್ ಸ್ವೈಪ್ ಮಾಡುವ ಜಾಗದಲ್ಲೂ ಸ್ಕಿಮ್ಮರ್ ಅಳವಡಿಸಲಾಗುತ್ತದೆ. ಹೀಗಾಗಿ ಪ್ರತಿ ಬಾರಿ ATMಗೆ ತೆರಳಿದಾಗ ಒಮ್ಮೆ ಪರೀಕ್ಷಿಸಿ.
ಯಂತ್ರದ ಹತ್ತಿರ ನಿಂತು ಸೀಕ್ರೆಟ್ ಪಿನ್ ದಾಖಲಿಸಿ ನಿಮ್ಮ ಕಾರ್ಡ್ ವಿವರಗಳನ್ನು ತಿಳಿಯಲು ಕೆಲವರು ಉತ್ಸುಕರಾಗಿರುತ್ತಾರೆ. ಹೀಗಾಗಿ ಆದಷ್ಟು ATM ಮಷಿನ್ ಗೆ ಹತ್ತಿರವಾಗಿ ನಿಂತು ಹಿಂದಿನ ವ್ಯಕ್ತಿಗೆ ಕಾಣದಂತೆ ನಿಮ್ಮ ವಿವರಗಳನ್ನ ದಾಖಲಿಸಿ. ನಿಮ್ಮ ಪಿನ್ ನಂಬರ್ ಯಾರೊಂದಿಗೂ ಹಂಚಿಕೊಳ್ಳಬೇಡಿ. ನಿಮ್ಮ ವಹಿವಾಟಿನ ನಂತರ ರಶೀದಿ ಹರಿದುಹಾಕಿ

ನೆಟ್ ಬ್ಯಾಂಕಿಂಗ್-ಮೊಬೈಲ್ ಬ್ಯಾಂಕಿಂಗ್ ಪಾಸ್ವರ್ಡ್ ಬೇರೆಯಿರಲಿ ನೀವು ನೆಟ್ ಬ್ಯಾಂಕಿಂಗ್ ಮತ್ತು ಮೊಬೈಲ್ ಬ್ಯಾಂಕಿಂಗ್ ಎರಡನ್ನೂ ಬಳಸುತ್ತಿದ್ದರೆ, ಸುರಕ್ಷತಾ ದೃಷ್ಟಿಯಿಂದ ಎರಡು ವಿಭಿನ್ನ ಪಾಸ್ವರ್ಡ್ ಇರಿಸಿಕೊಂಡರೆ ಉತ್ತಮ.ನೀವು ಮೊಬೈಲ್ ಬ್ಯಾಂಕಿಂಗ್ ಮಾಡುವಾಗ ಎಂ-ಪಿನ್ ಇರುತ್ತದೆ. ಅದನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ. ಗ್ರಾಹಕರು ಮೋಸ ಹೋಗಬಾರದೆಂದು ನೋದಾಂಯಿಸಲ್ಪಟ್ಟ ಪೋನ್ ನಂಬರ್ ಹೊಂದಿದ ಮೊಬೈಲ್ನಷ್ಟೇ ಬ್ಯಾಂಕಿಂಗ್ ಅಪ್ಲಿಕೇಷನ್ ಇನ್ಸ್ಟಾಲ್ ಮಾಡಿಕೊಳ್ಳಲು ಬ್ಯಾಂಕ್ಗಳು ಅನುಮತಿ ನೀಡುತ್ತವೆ.
ಬ್ಯಾಂಕಿನಿಂದ Notification ಬರುವುದನ್ನ ಖಚಿತಪಡಿಸಿಕೊಳ್ಳಿ ಯಾವುದೇ ಬ್ಯಾಂಕಿಂಗ್ ವ್ಯವಹಾರ ಮಾಡುವಾಗ ನಿಮ್ಮ ಬ್ಯಾಂಕಿಂಗ್ ಅಧಿಸೂಚನೆಯನ್ನು ಪಡೆದುಕೊಳ್ಳುವುದನ್ನ ಪರೀಕ್ಷಿಸಿಕೊಳ್ಳಿ. ಅಂದರೆ ನೀವು ತಪ್ಪಾಗಿಲಾಗಿನ್ ಆಗಿದ್ದಲ್ಲಿ ಅಧಿಸೂಚನೆ ಬರುತ್ತಿದೆಯಾ ಅಥವಾ ಇಲ್ಲವಾ ಎಂದು ಖಚಿತಪಡಿಸಿಕೊಳ್ಳಿ.
ಮೊಬೈಲ್ ಆ್ಯಪ್ ಅಪ್ಡೇಟ್ ಮಾಡುತ್ತಿರಬೇಕು ಆದಷ್ಟು ಮೊಬೈಲ್ ಆ್ಯಪ್ ಗಳನ್ನು ಅಪ್ಡೇಟ್ ಮಾಡುತ್ತಿರಿ ಮತ್ತು ವೈ-ಫೈ ಸಂಪರ್ಕಸಿಕ್ಕಾಗ ಅಪ್ಲಿಕೇಶನ್ಗಳು ಸ್ವಯಂಚಾಲಿತವಾಗಿ ಅಪ್ಡೇಟ್ ಆಗುವಂತೆ ನೀವು ಸೆಟ್ಟಿಂಗ್ ಗಳನ್ನು ಮಾಡಿಕೊಳ್ಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೃತ್ತಿಪರ ಕೋರ್ಸ್ಗಳ ಸರ್ಕಾರಿ ಕೋಟದ ಸೀಟುಗಳಿಗೆ ಆನ್ಲೈನ್ ನೋಂದಣಿ, ಆಪ್ಶನ್ ಎಂಟ್ರಿ, ಶುಲ್ಕಪಾವತಿ ಮಾಡುವ ಅಭ್ಯರ್ಥಿಗಳು ಮುಂದಿನ ಸಾಲಿನಿಂದ ಸೈಬರ್ ಕೆಫೆ ಸೇರಿದಂತೆ ಕಂಪ್ಯೂಟರ್ ಮೊರೆ ಹೋಗುವ ಅಗತ್ಯವಿಲ್ಲ. ಇದನ್ನೆಲ್ಲಾ ಬೆರಳ ತುದಿಯಲ್ಲೇ ಮಾಡಿ ಮುಗಿಸಬಹುದು.
ಇದೊಂದು ಖಗೋಳ ಶಾಸ್ತ್ರಕ್ಕೆ ಸಂಬಂಧಿಸಿದ ರಚನೆಗಳ ಸಂಗ್ರಹವಾಗಿದೆ. ಪ್ರಸ್ತುತ, ರಾಜಸ್ಥಾನದ ಜೈಪುರ ಹಾಗೂ ದೇಶದ ರಾಜಧಾನಿ ದೆಹಲಿಯಲ್ಲಿ ಜಂತರ್ ಮಂತರ್ ಗಳನ್ನು ಕಾಣಬಹುದಾಗಿದ್ದು, ಜೈಪುರದಲ್ಲಿರುವ ಜಂತರ್ ಮಂತರ್ ದೊಡ್ಡ ಹಾಗೂ ಹೆಚ್ಚು ಹೆಸರುವಾಸಿಯಾಗಿದೆ. ರಜಪೂತ್ ದೊರೆ ಸವಾಯ್ ಜೈಸಿಂಗ್ ಈ ರಚನೆಗಳ ನಿರ್ಮಾಣಕಾರ. ದೇಶದ ಒಟ್ಟು ಐದು ಸ್ಥಳಗಳಲ್ಲಿ ಇಂತಹ ರಚನೆಗಳನ್ನು ಈತ ನಿರ್ಮಿಸಿದ್ದಾನೆ. ದೆಹಲಿ ಹಾಗೂ ಜೈಪುರ ಹೊರತುಪಡಿಸಿ ಮಥುರಾ, ವಾರಣಾಸಿ ಹಾಗೂ ಉಜ್ಜಯಿನಿಗಳಲ್ಲಿ ಈ ರಚನೆಗಳನ್ನು ಜೈಸಿಂಗನು ನಿರ್ಮಿಸಿದ್ದು ಸುಮಾರು 1724 ರಿಂದ 1735…
ಸಾಮಾಜಿಕ ಜಾಲತಾಣದಲ್ಲಿ ಹೆಸರು ಮಾಡಿದ್ದ 24 ವರ್ಷದ ಮೋಹಿತ್ ಮೋರ್ ಅವರನ್ನು ಮೂವರು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಟಿಕ್ ಟಾಕ್ ಮೂಲಕ ಅರ್ಧ ಮಿಲಿಯನ್ ಸಂಖ್ಯೆಯ ಫಾಲೋಯರ್ಸ್ ಗಳನ್ನು ಹೊಂದಿರುವ ಮೋಹಿತ್ ಅವರು ಫಿಟ್ ನೆಸ್ ಗೆ ಸಂಬಂಧಿಸಿದಂತೆ ನಿರಂತರವಾಗಿ ವಿಡಿಯೋ ಅಪ್ ಲೋಡ್ ಮಾಡುತ್ತಿದ್ದರು. ಮಂಗಳವಾರ ಸಂಜೆ ಐದು ಗಂಟೆ ವೇಳೆಗೆ ನಜಾಫ್ ಗಡದಲ್ಲಿ ಅವರು ಗೆಳೆಯನೊಂದಿಗೆ ಮಾತನಾಡುತ್ತಿದ್ದಾಗ ಈ ಘಟನೆ ನಡೆದಿದ್ದು, ಏಕಾಏಕಿ ಮೂರು ಜನ ದಾಳಿ ಮಾಡಿದ್ದು, ಸಿಸಿ ಟಿವಿಯಲ್ಲಿ…
ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಳಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಜಿಯೋ ಗಿಗಾ ಫೈಬರ್ ಮೂಲಕ ದೊಡ್ಡ ಮಾಡಲು ಸಜ್ಜಾಗಿದ್ದು, ರಿಲಯನ್ಸ್ ಇಂಡಸ್ಟ್ರೀಸ್ ಮಾಲೀಕ ಮುಖೇಶ್ ಅಂಬಾನಿ ದೊಡ್ಡ ಬಾಂಬ್ ಸಿಡಿಸಿದ್ದಾರೆ. ಸೆಪ್ಟೆಂಬರ್ 5ರ ನಂತರ ದೇಶದಲ್ಲಿ ದೊಡ್ಡ ಕ್ರಾಂತಿ ಮಾಡಲು ಸಜ್ಜಾಗಿರುವ ಜಿಯೋ ಕಂಪನಿ ಒಡೆತನದ ಮುಖೇಶ್…
ಇದು ನಮ್ಮ ದೇಶದ ವಿರುದ್ದ ನಡೆಯುತ್ತಿರುವ ದೊಡ್ಡ ಷಡ್ಯಂತ್ರ. ಚೀನಾ ದೇಶವು ನಮ್ಮ ದೇಶದ ಗಡಿಯಲ್ಲಿ ಕೊಡುತ್ತಿರುವ ಉಪಟಳದ ಬಗ್ಗೆ ನಿವು ಮಾಧ್ಯಮಗಳಲ್ಲಿ ನೋಡಿರುತ್ತೀರಿ.
ಡ್ರಗ್ಸ್, ಆಲ್ಕೋಹಾಲ್ನಂತಹ ಕೆಟ್ಟ ಚಟಗಳಿಗೆ ಅಡಿಕ್ಟ್ ಆಗಿರುವಂತೆ ಸ್ಮಾರ್ಟ್ಫೋನ್ಗಳಿಗೆ ಇಂದಿನ ಜನ ಅಡಿಕ್ಟ್ ಆಗುತ್ತಿದ್ದಾರೆ ಎಂದು ಈಗಾಗಲೇ ಹಲವು ವರದಿಗಳು ಹೇಳಿವೆ. ಆದರೆ, ಇದೀಗ ಬಿಡುಗಡೆಯಾಗಿರುವ ನೂತನ ವರದಿಯೊಂದು ಸ್ಮಾರ್ಟ್ಫೋನ್ ಬಳಕೆಗೂ ಒಂದು ಮಿತಿ ಎನ್ನುವುದನ್ನು ಸಾರಿಸಾರಿ ಹೇಳುತ್ತಿದೆ. ಹೌದು, ಜನರಿಗೆ ಸ್ಮಾರ್ಟ್ಪೋನ್ ಸಿಕ್ಕನಂತರವಂತೂ ಪ್ರಪಂಚವೇ ಮರೆತುಹೋಗಿದ್ದಾರೆ. ರಾತ್ರಿಹಗಲೂ ಎನ್ನದೇ ಸ್ಮಾರ್ಟ್ಫೋನ್ ಬಳಕೆ ಮಾಡುತ್ತಾ ಮಾನಸಿಕ ಖಿನ್ನತೆಗೆ ತುತ್ತಾಗಿ ಆತ್ಮಹತ್ಯೆಯ ದಾರಿ ಹಿಡಿಯುವ ಪ್ರಮಾಣ ಹೆಚ್ಚಾಗಿದೆ ಎಂದು ಅಮೆರಿಕಾದ ‘ಸ್ಯಾನ್ ಡೈಗೊ ಸ್ಟೇಟ್’ ಯೂನಿವರ್ಸಿಟಿಯ ಅಧ್ಯಯನವೊಂದು ಎಚ್ಚರಿಕೆ…