ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆನ್ಲೈನ್ನಲ್ಲಿ ಫುಡ್ ಆರ್ಡರ್ ಮಾಡುವ ಮುನ್ನ ಗ್ರಾಹಕರೇ ಹುಷಾರಾಗಿರಿ. ಯಾಕೆಂದರೆ ಬೆಂಗಳೂರಿನ ಹಲವೆಡೆ ಆನ್ಲೈನ್ ಫುಡ್ ಮಾಫಿಯಾ ನಡೆಯುತ್ತಿದೆ. ಇಂದಿನ ಬ್ಯುಸಿ ಶೆಡ್ಯೂಲ್ ನಲ್ಲಿ ಜನರಿಗೆ ಅಡುಗೆ ಮಾಡಿಕೊಂಡು ಊಟ ಮಾಡಲು ಸಹ ಸಮಯ ಇಲ್ಲ. ಸಿಲಿಕಾನ್ ಸಿಟಿಯಂತಹ ಮಹಾನಗರಗಳಲ್ಲಿ ಬಹುತೇಕರು ಆನ್ಲೈನ್ ಫುಡ್ ತರಿಸೋ ಮೂಲಕ ಸಮಯ ಉಳಿಸುವ ಪ್ರಯತ್ನಕ್ಕೆ ಮುಂದಾಗುತ್ತಾರೆ. ಒಮ್ಮೆ ನೀವು ಆರ್ಡರ್ ಮಾಡುವ ಆಹಾರ ತಯಾರಾಗುವ ಸ್ಥಳ ನೋಡಿದ್ರೆ ಬೇಡಪ್ಪ ಬೇಡ ಅನ್ಲೈನ್ ಅನ್ನೋದು ಗ್ಯಾರೆಂಟಿ.

ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನ ಕರಾವಳಿ ಕಿಚನ್ ಹಾಗೂ ಈಟ್ವೆಲ್ ಎಂಬ ಹೋಟೆಲ್ ಅಲ್ಲಿ ವರ್ಷಗಟ್ಟಲೇ ಪೇಂಟ್ ಬಳಿಯದ ಗೋಡೆ, ಸಿಕ್ಕಸಿಕ್ಕ ಕಡೆ ಚೆಲ್ಲಾ ಪಿಲ್ಲಿಯಾಗಿ ಬಿದ್ದಿರೋ ಪಾತ್ರೆ ಪಗಡೆ, ಕೊಳಚೆ ನೀರಿನ ನಡುವೆ ಹರಿದಾಡ್ತಿರೋ ಜಿರಳೆ, ಹುಳಹುಪ್ಪಟೆಗಳು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇಲ್ಲಿಯೇ ನೀವು ಆರ್ಡರ್ ಮಾಡೋ ವೈರೆಟಿ ವೈರೆಟಿ ಫುಡ್ ತಯಾರಾಗುತ್ತದೆ.

ಅನರ್ವ್ ಎಂಬವರು ಆನ್ಲೈನ್ ಮೂಲಕ ಇಲ್ಲಿಯ ಊಟವನ್ನು ಆರ್ಡರ್ ಮಾಡಿದ್ದರು. ಕೈ ಬಂದ ಪಾರ್ಸೆಲ್ ತೆಗೆದಾಗ ಅನರ್ವರಿಗೆ ಜಿರಳೆ ಕಾಣಿಸಿಕೊಂಡಿದೆ. ಕರಾವಳಿ ಕಿಚ್ಚನ್ ಹೆಸರಿನ ಹೋಟೆಲ್ನಿಂದ ತರಿಸಿದ್ದ ಕೊಳಕು ಆಹಾರ ಹಿಡಿದು ಹೋಟೆಲ್ ನತ್ತ ಹೆಜ್ಜೆ ಹಾಕಿದ್ದರು. ತಮ್ಮ ಹಣವನ್ನ ವಾಪಾಸ್ಸು ನೀಡುವಂತೆ ಕೇಳಿ ಹೋಟೆಲ್ ಅಡುಗೆ ಕೋಣೆ ಒಳಗೆ ಹೋದಾಗ ಅನರ್ವ್ ಒಂದು ಕ್ಷಣ ಶಾಕ್ ಆಗಿದ್ದಾರೆ. ಕೊಳಕಿನಲ್ಲೇ ಕೊಳಕು ಕೈಯ ಅಡುಗೆ ಭಟ್ಟ ಅಲ್ಲಿಲ್ಲಿ ಮುಟ್ಕೊಂಡು ಪರೋಟದ ಉಂಡೆಯನ್ನ ಕಟ್ಟುತ್ತಿದ್ದ ಎಂದು ಅನರ್ವ್ ಅವರು ಹೇಳಿದ್ದಾರೆ.

ಅದಲ್ಲದೆ ವಸಂತನಗರದಲ್ಲಿರುವ ಪ್ಯಾಸೂಸ್ ಫುಡ್ ಸರ್ವಿಸಸ್ ಕಂಪನಿಯ ತಡ್ಕವಾಲಾ ಕಿಚನ್ನಲ್ಲಿ ಸ್ವಚ್ಛತೆ ಅನ್ನೋದೆ ಇಲ್ಲ. ಫ್ರಿಜ್ನಲ್ಲಿ ಹೆಪ್ಪುಗಟ್ಟಿರುವ ಮಟನ್, ಚಿಕನ್ ಪೀಸ್ಗಳು, ಟಾಯ್ಲೆಟ್ ರೂಮಿನಲ್ಲಿ ಕಬಾಬ್ ಹಾಗೂ ರೈಸ್ ಬೇಯಿಸುವ ಕಡಾಯಿಗಳು ಹಾಗೂ ಕೊಳೆತ ಸ್ಥಿತಿಯಲ್ಲಿರುವ ಸೊಪ್ಪು ಪದಾರ್ಥಗಳು ಕಂಡು ಬಂದಿವೆ. ಫ್ಯಾಸೂಸ್ ಫುಡ್ ಸರ್ವಿಸಸ್ ಕಂಪನಿ ಮೂಲಕ ನಗರದ ಮಾರತಹಳ್ಳಿ, ಹೆಚ್ಎಸ್ಆರ್ ಲೇಔಟ್, ಬೊಮ್ಮನಹಳ್ಳಿ, ರಾಜಾಜಿನಗರ, ಬೊಮ್ಮನಹಳ್ಳಿ, ಕೆಂಗೇರಿ ಸೇರಿ20 ರಿಂದ 25 ಹೋಟೆಲ್ಗಳನ್ನ ನಡೆಸುತ್ತಿದ್ದಾರೆ.
ಒಟ್ಟಿನಲ್ಲಿ ಆನ್ಲೈನ್ ಫುಡ್ ಡೆಲಿವರಿಯ ಹೆಸರಲ್ಲಿ ಹೋಟೆಲ್ ಮಾಲೀಕರು ಸ್ವಚ್ಛತೆಯನ್ನೇ ಮರೆತಿದ್ದಾರೆ. ನೇಪಾಳಿ, ಬೆಂಗಾಳಿ ಹುಡುಗರನ್ನು ಕೆಲಸಕ್ಕೆ ಇಟ್ಟುಕೊಂಡು ಡರ್ಟಿ ಕಿಚನ್ಗಳಿಂದ ಫುಡ್ ಡಿಸ್ಟ್ರೂಬ್ಯೂಟ್ ಮಾಡುತ್ತಿದ್ದಾರೆ. ಆಹಾರ ಸುರಕ್ಷತಾ ಹಾಗೂ ಗುಣಮಟ್ಟ ಕಾಯ್ದೆಗೆ ಕ್ಯಾರೇ ಅಂತಿಲ್ಲ. ಸುರಕ್ಷತಾ ಹಾಗೂ ಗುಣಮಟ್ಟ ಕಾಯ್ದುಕೊಳ್ಳದ ಹೋಟೆಲ್ಗಳಿಗೆ ಬಿಬಿಎಂಪಿಯ ಆಹಾರ ಇಲಾಖೆ ಅಧಿಕಾರಿಗಳು ಹೇಗೆ ಲೈಸನ್ಸ್ ನ್ನು ರಿನಿವಲ್ ಮಾಡಿಕೊಟ್ಟರು ಅನ್ನೋ ಪ್ರಶ್ನೆ ಕಾಡುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಧಿಕಾರಕ್ಕೆ ಬಂದಾಗಿನಿಂದಲೂ ಚುನಾವಣೆ ವೇಳೆ ನೀಡಲಾದ ಭರವಸೆಗಳನ್ನು ಈಡೇರಿಸೋದರಲ್ಲೇ ನಿರತರಾಗಿರುವ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ, ಒಂದೇ ದಿನಕ್ಕೆ 1 ಲಕ್ಷದ 26 ಸಾವಿರ ಜನರಿಗೆ ಸರ್ಕಾರಿ ಉದ್ಯೋಗ ನೀಡುವ ಮೂಲಕ ಈ ವೇಳೆ ವಿಶ್ವದಾಖಲೆ ನಿರ್ಮಿಸಿದ್ದಾರೆ. ಚುನಾವಣೆ ವೇಳೆ ನಿರುದ್ಯೋಗಿ ಯುವ ಜನತೆಗೆ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದ ಜಗನ್ ಇದೀಗ ಒಂದೇ ಭಾರಿಗೆ 1 ಲಕ್ಷದ 26 ಸಾವಿರ ಸರ್ಕಾರಿ ಉದ್ಯೋಗಕ್ಕೆ ನೇಮಕ ನಡೆಸಿದ್ದು ನಿನ್ನೇ ನಡೆದ ಸಮಾರಂಭದಲ್ಲಿ ಸ್ವತಃ ತಾವೇ ಅಭ್ಯರ್ಥಿಗಳಿಗೆ…
ನಮ್ಮ ದೈನಂದಿನ ದಿನ ಪತ್ರಿಕೆಗಳಲ್ಲಿ ಲಕ್ಷಗಟ್ಟಲೆ ಖರ್ಚು ಮಾಡಿ ಫ್ಯಾನ್ಸಿ ನಂಬರ್ಗಳನ್ನು ಖರೀದಿಸುವ ಸುದ್ದಿಗಳನ್ನು ಓದಿರುತ್ತೇವೆ. ಆದರೇ, ಇಲ್ಲೊಬ್ಬ ಉದ್ಯಮಿ ತನ್ನ ದುಬಾರಿ ಸೂಪರ್ ಕಾರಿನ ಫ್ಯಾನ್ಸಿ ನಂಬರ್ ಪ್ಲೇಟ್ ಅನ್ನು ಮಾರಾಟ ಮಾಡಲು ನಿರ್ಧರಿಸಿದ್ದು, ಇದರ ಬೆಲೆಯು ಕೇವಲ 132 ಕೋಟಿ ಎಂದು ಹೇಳಿಕೊಂಡಿದ್ದಾನೆ.ಹೌದು, ಬ್ರಿಟನ್ನಲ್ಲಿ ಭಾರೀ ಜನಪ್ರಿಯತೆ ಗಳಿಸಿರುವ ‘ಎಫ್1’ ನಂಬರ್ ಪ್ಲೇಟ್ಗೆ ಇದೀಗ ಭಾರೀ ಬೇಡಿಕೆ ಸೃಷ್ಠಿಯಾಗಿದೆ. ಈ ಹಿಂದೆ 2008ರಲ್ಲಿ ಕೇವಲ 4.5 ಕೋಟಿ ಬೆಲೆ ಹೊಂದಿದ್ದ ಎಫ್1 ನಂಬರ್ ಪ್ಲೇಟ್ಗಳು…
ನಮ್ಮ ಕರ್ನಾಟಕಕ್ಕಿಂತ ಚಿಕ್ಕದಾಗಿರುವ ಪುಟ್ಟ ದೇಶ ಇಸ್ರೇಲ್, ಎಷ್ಟೇ ತೊಂದರೆಗಳು ಬಂದ್ರೂ ಕೂಡ ಎದೆಗುಂದದೆ, ಬಂದ ತೊಂದರೆಗಳನ್ನು ಎದುರಿಸಿ ಹೇಗೆ ಬೆಳೆದಿದೆ ಎಂದರೆ….ಆ ಇಸ್ರೇಲಿನ ಅದೆಷ್ಟೋ ಪಟ್ಟು ದೊಡ್ಡದಾಗಿರೋ ನಮ್ಮ ಭಾರತಕ್ಕೇನು ಆ ರೀತಿ ಬೆಳೆಯೋ ಅವಕಾಶಗಳೇ ಸಿಕ್ಕಿರಲಿಲ್ಲವಾ ? ಅನ್ನೋದು ನಮಗೆ ನಾವೇ ಕೇಳಿಕೊಳ್ಳಬೇಕಾದ ಮೊದಲ ಪ್ರಶ್ನೆ !
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಏಪ್ರಿಲ್, 2019) ನೀವು ಜೀವನವನ್ನು ಸಂತೋಷದಿಂದ ಅನುಭವಿಸಲು ಸಿದ್ಧವಾಗುತ್ತಿದ್ದ ಹಾಗೆ ನಿಮಗೆ ಸಂತೋಷ ಹಾಗೂ ಆನಂದ. ಇಂದು…
ಮಹಾರಾಷ್ಟ್ರ, ಹರಿಯಾಣ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಇಂದು ಘೋಷಿಸುವ ಸಾಧ್ಯತೆ ಇದೆ. ಇಂದು ಮಧ್ಯಾಹ್ನ 12 ಗಂಟೆಗೆ ಚುನಾವಣಾ ಆಯೋಗದ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿಯನ್ನು ಕರೆಯಲಾಗಿದ್ದು, ಈ ಸಂದರ್ಭದಲ್ಲಿ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಲಾಗುತ್ತದೆ ಎನ್ನಲಾಗಿದೆ. ಮಹಾರಾಷ್ಟ್ರ ವಿಧಾನಸಭಾ ಅವಧಿ ಮುಂದಿನ ತಿಂಗಳು ಅಂತ್ಯವಾಗಲಿದ್ದು, ಹರಿಯಾಣ ವಿಧಾನಸಭಾ ಅವಧಿ ನವಂಬರ್ 2 ಕ್ಕೆ ಕೊನೆಗೊಳ್ಳಲಿದೆ. ಇನ್ನು ಜಾರ್ಖಂಡ್ ವಿಧಾನಸಭಾ ಅವಧಿ ಡಿಸೆಂಬರ್ 27ಕ್ಕೆ ಅಂತ್ಯವಾಗಲಿದ್ದು, ದೀಪಾವಳಿಗೂ ಮುನ್ನ…
ದೇಶದ ರಾಜಕಾರಣದಲ್ಲಿ ತಮಿಳುನಾಡಿನ ಸೂಪರ್ ಸ್ಟಾರ್ಗಳಾದ ರಜನಿಕಾಂತ್ ಹಾಗೂ ಕಮಲಹಾಸನ್ ಅವರು ರಾಜಕೀಯಕ್ಕೆ ಬರುತ್ತಿರುವ ಬೆನ್ನಲ್ಲೇ ನಮ್ಮ ನಾಡಿನ ರಿಯಲ್ಸ್ಟಾರ್ ಉಪೇಂದ್ರ ಸಹ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.