ಸುದ್ದಿ

ಆನ್‍ಲೈನ್ ಫುಡ್ ಪ್ರಿಯರೆ ದಯವಿಟ್ಟು ಇದನ್ನೊಮ್ಮೆ ಓದಿ, ಇದನ್ನು ನೀವು ತಪ್ಪದೇ ತಿಳಿದುಕೊಳ್ಳಬೇಕು,.!

75

ಆನ್‍ಲೈನ್‍ನಲ್ಲಿ ಫುಡ್ ಆರ್ಡರ್ ಮಾಡುವ ಮುನ್ನ ಗ್ರಾಹಕರೇ ಹುಷಾರಾಗಿರಿ. ಯಾಕೆಂದರೆ ಬೆಂಗಳೂರಿನ ಹಲವೆಡೆ ಆನ್‍ಲೈನ್ ಫುಡ್ ಮಾಫಿಯಾ ನಡೆಯುತ್ತಿದೆ. ಇಂದಿನ ಬ್ಯುಸಿ ಶೆಡ್ಯೂಲ್ ನಲ್ಲಿ ಜನರಿಗೆ ಅಡುಗೆ ಮಾಡಿಕೊಂಡು ಊಟ ಮಾಡಲು ಸಹ ಸಮಯ ಇಲ್ಲ. ಸಿಲಿಕಾನ್ ಸಿಟಿಯಂತಹ ಮಹಾನಗರಗಳಲ್ಲಿ ಬಹುತೇಕರು ಆನ್‍ಲೈನ್ ಫುಡ್ ತರಿಸೋ ಮೂಲಕ ಸಮಯ ಉಳಿಸುವ ಪ್ರಯತ್ನಕ್ಕೆ ಮುಂದಾಗುತ್ತಾರೆ. ಒಮ್ಮೆ ನೀವು ಆರ್ಡರ್ ಮಾಡುವ ಆಹಾರ ತಯಾರಾಗುವ ಸ್ಥಳ ನೋಡಿದ್ರೆ ಬೇಡಪ್ಪ ಬೇಡ ಅನ್‍ಲೈನ್ ಅನ್ನೋದು ಗ್ಯಾರೆಂಟಿ.

ಬೆಂಗಳೂರಿನ ಎಚ್‍ಎಸ್‍ಆರ್ ಲೇಔಟ್‍ನ ಕರಾವಳಿ ಕಿಚನ್ ಹಾಗೂ ಈಟ್‍ವೆಲ್ ಎಂಬ ಹೋಟೆಲ್  ಅಲ್ಲಿ ವರ್ಷಗಟ್ಟಲೇ ಪೇಂಟ್ ಬಳಿಯದ ಗೋಡೆ, ಸಿಕ್ಕಸಿಕ್ಕ ಕಡೆ ಚೆಲ್ಲಾ ಪಿಲ್ಲಿಯಾಗಿ ಬಿದ್ದಿರೋ ಪಾತ್ರೆ ಪಗಡೆ, ಕೊಳಚೆ ನೀರಿನ ನಡುವೆ ಹರಿದಾಡ್ತಿರೋ ಜಿರಳೆ, ಹುಳಹುಪ್ಪಟೆಗಳು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇಲ್ಲಿಯೇ ನೀವು ಆರ್ಡರ್ ಮಾಡೋ ವೈರೆಟಿ ವೈರೆಟಿ ಫುಡ್ ತಯಾರಾಗುತ್ತದೆ.

ಅನರ್ವ್ ಎಂಬವರು ಆನ್‍ಲೈನ್ ಮೂಲಕ ಇಲ್ಲಿಯ ಊಟವನ್ನು ಆರ್ಡರ್ ಮಾಡಿದ್ದರು. ಕೈ ಬಂದ ಪಾರ್ಸೆಲ್ ತೆಗೆದಾಗ ಅನರ್ವರಿಗೆ ಜಿರಳೆ ಕಾಣಿಸಿಕೊಂಡಿದೆ. ಕರಾವಳಿ ಕಿಚ್ಚನ್ ಹೆಸರಿನ ಹೋಟೆಲ್‍ನಿಂದ ತರಿಸಿದ್ದ ಕೊಳಕು ಆಹಾರ ಹಿಡಿದು ಹೋಟೆಲ್ ನತ್ತ ಹೆಜ್ಜೆ ಹಾಕಿದ್ದರು. ತಮ್ಮ ಹಣವನ್ನ ವಾಪಾಸ್ಸು ನೀಡುವಂತೆ ಕೇಳಿ ಹೋಟೆಲ್ ಅಡುಗೆ ಕೋಣೆ ಒಳಗೆ ಹೋದಾಗ ಅನರ್ವ್ ಒಂದು ಕ್ಷಣ ಶಾಕ್ ಆಗಿದ್ದಾರೆ. ಕೊಳಕಿನಲ್ಲೇ ಕೊಳಕು ಕೈಯ ಅಡುಗೆ ಭಟ್ಟ ಅಲ್ಲಿಲ್ಲಿ ಮುಟ್ಕೊಂಡು ಪರೋಟದ ಉಂಡೆಯನ್ನ ಕಟ್ಟುತ್ತಿದ್ದ ಎಂದು ಅನರ್ವ್  ಅವರು ಹೇಳಿದ್ದಾರೆ.

ಅದಲ್ಲದೆ  ವಸಂತನಗರದಲ್ಲಿರುವ ಪ್ಯಾಸೂಸ್ ಫುಡ್ ಸರ್ವಿಸಸ್ ಕಂಪನಿಯ ತಡ್ಕವಾಲಾ ಕಿಚನ್‍ನಲ್ಲಿ ಸ್ವಚ್ಛತೆ ಅನ್ನೋದೆ ಇಲ್ಲ. ಫ್ರಿಜ್‍ನಲ್ಲಿ ಹೆಪ್ಪುಗಟ್ಟಿರುವ ಮಟನ್, ಚಿಕನ್ ಪೀಸ್‍ಗಳು, ಟಾಯ್ಲೆಟ್ ರೂಮಿನಲ್ಲಿ ಕಬಾಬ್ ಹಾಗೂ ರೈಸ್ ಬೇಯಿಸುವ ಕಡಾಯಿಗಳು ಹಾಗೂ ಕೊಳೆತ ಸ್ಥಿತಿಯಲ್ಲಿರುವ ಸೊಪ್ಪು ಪದಾರ್ಥಗಳು ಕಂಡು ಬಂದಿವೆ. ಫ್ಯಾಸೂಸ್ ಫುಡ್ ಸರ್ವಿಸಸ್ ಕಂಪನಿ ಮೂಲಕ ನಗರದ ಮಾರತಹಳ್ಳಿ, ಹೆಚ್‍ಎಸ್‍ಆರ್ ಲೇಔಟ್, ಬೊಮ್ಮನಹಳ್ಳಿ, ರಾಜಾಜಿನಗರ, ಬೊಮ್ಮನಹಳ್ಳಿ, ಕೆಂಗೇರಿ ಸೇರಿ20 ರಿಂದ 25 ಹೋಟೆಲ್‍ಗಳನ್ನ ನಡೆಸುತ್ತಿದ್ದಾರೆ.

ಒಟ್ಟಿನಲ್ಲಿ ಆನ್‍ಲೈನ್ ಫುಡ್ ಡೆಲಿವರಿಯ ಹೆಸರಲ್ಲಿ ಹೋಟೆಲ್ ಮಾಲೀಕರು ಸ್ವಚ್ಛತೆಯನ್ನೇ ಮರೆತಿದ್ದಾರೆ. ನೇಪಾಳಿ, ಬೆಂಗಾಳಿ ಹುಡುಗರನ್ನು ಕೆಲಸಕ್ಕೆ ಇಟ್ಟುಕೊಂಡು ಡರ್ಟಿ ಕಿಚನ್‍ಗಳಿಂದ ಫುಡ್ ಡಿಸ್ಟ್ರೂಬ್ಯೂಟ್ ಮಾಡುತ್ತಿದ್ದಾರೆ. ಆಹಾರ ಸುರಕ್ಷತಾ ಹಾಗೂ ಗುಣಮಟ್ಟ ಕಾಯ್ದೆಗೆ ಕ್ಯಾರೇ ಅಂತಿಲ್ಲ. ಸುರಕ್ಷತಾ ಹಾಗೂ ಗುಣಮಟ್ಟ ಕಾಯ್ದುಕೊಳ್ಳದ ಹೋಟೆಲ್‍ಗಳಿಗೆ ಬಿಬಿಎಂಪಿಯ ಆಹಾರ ಇಲಾಖೆ ಅಧಿಕಾರಿಗಳು ಹೇಗೆ ಲೈಸನ್ಸ್ ನ್ನು ರಿನಿವಲ್ ಮಾಡಿಕೊಟ್ಟರು ಅನ್ನೋ ಪ್ರಶ್ನೆ ಕಾಡುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಕೆಟ್ಟ ದೃಷ್ಟಿ ಇದ್ದರೆ ತಪ್ಪದೆ ವಿಳ್ಳೆದೆಲೆಯಿಂದ ಹೀಗೆ ಮಾಡಿ ಸಾಕು.

    ಮಕ್ಕಳು ಎಂದರೆ ಎಲ್ಲರಿಗೂ ಕೂಡ ಬಹಳನೇ ಪ್ರೀತಿ ಪ್ರತಿಯೊಬ್ಬರ ಮನೆಯಲ್ಲಿ ಕೂಡ ಸಣ್ಣ ಪುಟ್ಟ ಮಕ್ಕಳು ಇರುತ್ತಾರೆ ನಾವು ಬೆಳಿಗ್ಗೆ ಎದ್ದಾಗಿನಿಂದ ಹಿಡಿದು ಸಂಜೆವರೆಗೂ ಒಂದಲ್ಲ ಒಂದು ಕೆಲಸದಲ್ಲಿ ತೊಡಗಿ ಆಯಾಸ ಬೇಜಾರು ಬೇಸರ ಇದರಲ್ಲಿ ಮುಳುಗಿ ಹೋಗಿರುತ್ತದೆ ಇಂತಹ ಸಂದರ್ಭದಲ್ಲಿ ಮನೆಯಲ್ಲಿ ಪುಟ್ಟ ಮಕ್ಕಳು ಜೊತೆ ಒಂದಷ್ಟು ಸಮಯ ಕಳೆದರೆ ಆಯಾಸ ಹೋಗುತ್ತದೆ ಮನೆಯಲ್ಲಿರುವ ಮಕ್ಕಳು ದೇವರಿಗೆ ಸಮಾನ ಅವು ಯಾವಾಗಲೂ ನಗುನಗುತ್ತಾ ಖುಷಿಯಿಂದ ಇರಬೇಕು. ಆದರೆ ಸಾಮಾನ್ಯವಾಗಿ ಪುಟ್ಟಮಕ್ಕಳು ರಾತ್ರಿಯ ವೇಳೆ ಚಿಕ್ಕ ಪುಟ್ಟ…

  • ಸುದ್ದಿ

    ಈ ಒಂದು ಆಪ್ ನಿಂದ ನಿಮ್ಮ ಮೊಬೈಲ್ ನಲ್ಲಿ ಇರುವ ಚೀನಾ ಆ್ಯಪ್‌ಗಳನ್ನು ಪತ್ತೆ ಮಾಡಿ, ಅವುಗಳನ್ನು ಡಿಲೀಟ್ ಮಾಡಬಹುದು.

    ಚೀನಾ  ವಿರುದ್ಧದ ಜನಸಾಮಾನ್ಯರ ಆಕ್ರೋಶ ವಿಭಿನ್ನ ರೀತಿಯಲ್ಲಿ ವ್ಯಕ್ತವಾಗುತ್ತಿದ್ದು, ದಿನೇ ದಿನೇ ಹೆಚ್ಚಾಗುತ್ತಿದೆ. ಪ್ರಸ್ತುತ ಚೀನಾದ ಆ್ಯಪ್‌ಗಳು, ಚೀನಾ ಮೂಲದ ಕಂಪನಿ ಒಡೆತನ ಹೊಂದಿರುವ ಮತ್ತು ಚೀನಾ ಮೂಲದ ಡೆವಲಪರ್‌ಗಳು ಅಭಿವೃಧಿಪಡಿಸಿರುವ ಆ್ಯಪ್ ವಿರುದ್ಧ ಜನರು ಸಿಡಿದೆದ್ದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಚೀನಾ ಆ್ಯಪ್ ಬ್ಯಾನ್ ಮಾಡಿ ಎನ್ನುವ ಸಂದೇಶ ವ್ಯಾಪಕವಾಗಿ ಹರಿದಾಡಿದೆ. ಅದರ ಜತೆಗೆ ರಿಮೋವ್ ಚೀನಾ ಆ್ಯಪ್ಸ್ ಎನ್ನುವ ಆ್ಯಪ್ ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಟ್ರೆಂಡ್ ಸೃಷ್ಟಿಸಿದೆ. ಈ ಆ್ಯಪ್ ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ನಲ್ಲಿ ಇರುವ ಚೀನಾ ಮೂಲದ ಆ್ಯಪ್‌ಗಳನ್ನು…

  • ಸುದ್ದಿ

    ರಿಯಲ್ ಸ್ಟಾರ್ ಉಪ್ಪಿ ಅಭಿಮಾನಿಗಳಿಗೊಂದು ಸಂತಸದ ಸುದ್ದಿ…!

    ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಿರ್ದೇಶಕ ಆರ್. ಚಂದ್ರು ಕಾಂಬಿನೇಷನ್ ನಲ್ಲಿ ಮೂಡಿಬಂದಿದ್ದ ‘ಐ ಲವ್ ಯು’ ಭರ್ಜರಿ ಯಶಸ್ಸು ಕಂಡಿದೆ. ಈ ಕಾಂಬಿನೇಷನ್ ನಲ್ಲಿ ಮತ್ತೊಂದು ಚಿತ್ರ ಮೂಡಿಬರಲಿದೆ. ಈ ಹಿಂದೆ ಉಪೇಂದ್ರ ಅಭಿನಯದ ಆರ್. ಚಂದ್ರು ನಿರ್ದೇಶನದ ಬ್ರಹ್ಮ, ನಂತರ ‘ಐ ಲವ್ ಯು’ ಯಶಸ್ಸು ಕಂಡಿದ್ದು, ಮುಂದಿನ ಚಿತ್ರ ಭಾರಿ ನಿರೀಕ್ಷೆ ಮೂಡಿಸಿದೆ. ಅಂದ ಹಾಗೆ, ಈ ಹೊಸ ಚಿತ್ರ ಭೂಗತ ಜಗತ್ತಿನ ಕಥಾಹಂದರವನ್ನು ಹೊಂದಿದ್ದು, ಘಟಾನುಘಟಿ ಕಲಾವಿದರು ಅಭಿನಯಿಸಲಿದ್ದಾರೆ. ಹೈಬಜೆಟ್ ನಲ್ಲಿ…

  • Place, ಸಿನಿಮಾ

    KGF ಈ ದೇಶವನ್ನು ಹೇಗೆ ಉಳಿಸಿದೆ ನೋಡಿ ಅಂದು ನೆಹರೂ ಸರ್ಕಾರವನ್ನು ಮತ್ತು ಭಾರತವನ್ನು ಹೇಗೆ ಕಾಪಾಡಿತು ನೋಡಿ

    ಭಾರತದಲ್ಲೇ ಮೊದಲ ವಿದ್ಯುತ್ ಪಡೆದ ನಗರ
    ಭಾರತದಲ್ಲೇ ಅತಿ ಹೆಚ್ಚು ಚರ್ಚ್ಗಳನ್ನ ಒಂದಿರೊ ನಗರ
    ರೈಲ್ವೆಯನ್ನು ಹೊಂದಿದ ಕರ್ನಾಟಕದ ಮೊದಲ ನಗರ

  • ಸುದ್ದಿ

    ನರೇಂದ್ರ ಮೋದಿ ವಿರುದ್ದ ಚುನಾವಣಾ ಆಯೋಗಕ್ಕೆ ದೂರು ಕೊಟ್ಟ ರಮ್ಯಾ.!ಆ ದೂರಿನಲ್ಲಿ ಏನಿದೆ ಗೊತ್ತಾ..?

    ಮಾಜಿ ಸಂಸದೆ ನಟಿ ರಮ್ಯ ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ, ‘ಮೈ ಫಸ್ಟ್ ವೋಟ್ ಫಾರ್ ಮೋದಿ’ ಎಂಬ ಫೇಸ್ಬುಕ್ ಖಾತೆ ಮೂಲಕ ಬ್ಯಾಡ್ಜ್, ಟೀ ಶರ್ಟ್, ಫೋನ್ ಕವರ್, ಟೋಪಿ ಮೊದಲಾದ ಉಚಿತ ಉಡುಗೊರೆಗಳಿಗಾಗಿ ನರೇಂದ್ರ ಮೋದಿಯವರಿಗೆ ವೋಟ್ ಮಾಡಿ ಎಂದು ಮತದಾರರಿಗೆ ಆಮಿಷ ಒಡ್ಡಲಾಗಿದೆ. ಅಲ್ಲದೆ ವೆಬ್ ಸೈಟ್ ಒಂದರ ಮೂಲಕ ಈ ವಸ್ತುಗಳನ್ನು…