ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಹುಟ್ಟುವಾಗ ಒಬ್ಬರಾಗಿ ಈ ಪ್ರಪಂಚಕ್ಕೆ ಬರುತ್ತೇವೆ ಮತ್ತು ಸಾಯುವಾಗ ಒಬ್ಬರಾಗಿ ಸಾಯುತ್ತೇವೆ ಮತ್ತು ನಮ್ಮ ಸಾವನ್ನ ಯಾರಿಂದಲೂ ಕೂಡ ತಪ್ಪಿಸಲು ಸಾಧ್ಯವಿಲ್ಲ ಹಾಗೆ ನಮ್ಮ ನೋವನ್ನ ಯಾರು ಭರಿಸಲು ಕೂಡ ಸಾಧ್ಯವಿಲ್ಲ. ನಾವು ಕಷ್ಟದಲ್ಲಿ ಇದ್ದಾಗ ಒಂದು ಹಂತದ ತನಕ ಮಾತ್ರ ಯಾರಾದರೂ ಸಹಾಯ ಮಾಡಬಲ್ಲರು ಆದರೆ ಅದರಿಂದ ಆಚೆ ನಾವೇ ಹೋರಾಡಬೇಕು ಮತ್ತು ನಾವೇ ಬದುಕುವ ದಾರಿಯನ್ನ ಹುಡುಕಾಡಬೇಕು ಯಾಕೆ ಅಂದರೆ ಜೀವನ ಅನ್ನುವುದು ಪ್ರತಿ ಕ್ಷಣದ ಹೋರಾಟ. ಎಲ್ಲಾ ದಾರಿಗಳು ಮುಚ್ಚಿ ಹೋದಾಗ ತನ್ನ ಸ್ವಂತ ದಾರಿಯನ್ನ ಹುಡುಕಿದ ಈ ಮಹಿಳೆ ಈಗ ನೂರಾರು ಮಹಿಳೆಯರಿಗೆ ದಾರಿದೀಪ ಆಗಿದ್ದಾರೆ, ಹಾಗಾದರೆ ಈ ಮಹಿಳೆಯರು ಮತ್ತು ಈಕೆ ಮಾಡಿದ ಸಾಧನೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಉತ್ತರ ಪ್ರದೇಶಕ್ಕೆ ಸೇರಿದ ಕೃಷ್ಣ ಯಾದವ್ ಅನ್ನುವ ಮಹಿಳೆಗೆ ಇಬ್ಬರು ಮಕ್ಕಳು, ಜೀವನೋಪಾಯಕ್ಕಾಗಿ ಮನೆಯಲ್ಲಿ ಉಪ್ಪಿನ ಕಾಯಿಯನ್ನ ತಯಾರಿಸಿ ಮಾರಾಟ ಮಾಡುತ್ತಿದ್ದರು, ಆದರೆ ಅದರಿಂದ ಅವರಿಗೆ ಏನು ಲಾಭ ಸಿಗಲಿಲ್ಲ. ಏನು ಲಾಭ ಸಿಗದ ಕಾರಣ ಉದ್ಯಾಯೋಗವನ್ನ ಅರಸಿಕೊಂಡು ಗಂಡ ಮತ್ತು ಮಕ್ಕಳ ಜೊತೆ ದೆಹಲಿಗೆ ಬಂದು ನೆಲೆಸಿದರು ಕೃಷ್ಣ ಯಾದವ್, ಇನ್ನು ದೆಹಲಿಗೆ ಬಂದ ಕೃಷ್ಣ ಯಾದವ್ ಒಂದು ಸಂಸ್ಥೆಯಲ್ಲಿ ಅಡುಗೆಯ ತರಬೇತಿಯನ್ನ ಪಡೆದರು, ಆದರೆ ಅವರಿಗೆ ಯಾವುದೇ ಕೆಲಸ ಸಿಗಲಿಲ್ಲ. ಯಾವುದೇ ಕೆಲಸ ಸಿಗದ ಕಾರಣ ಮತ್ತೇ ಮನೆಯಲ್ಲಿ ಉಪ್ಪಿಯ ಕಾಯಿಯನ್ನ ತಯಾರು ಮಾಡಿ ಮಾರಾಟ ಮಾಡಲು ನಿರ್ಧಾರ ಮಾಡಿದರು ಕೃಷ್ಣ ಯಾದವ್.

ಉಪ್ಪಿಯ ಕಾಯಿಯನ್ನ ತಯಾರು ಮಾಡಲು ಕೈಯಲ್ಲಿ ನೂರು ರೂಪಾಯಿ ಕೂಡ ಇರಲಿಲ್ಲ, ಸ್ನೇಹಿತರ ಬಳಿ 500 ರೂಪಾಯಿ ಸಾಲ ಪಡೆದ ಕೃಷ್ಣ ಯಾದವ್ ಅದೂ ಸಾಕಾಗದೆ ಮತ್ತೇ 3000 ರೂಪಾಯಿ ಸಾಲ ಮಾಡಿ ಉಪ್ಪಿನ ಕಾಯಿಗೆ ಬೇಕಾದ ವಸ್ತುಗಳನ್ನ ತಂದು ಉಪ್ಪಿನ ಕಾಯಿಯನ್ನ ತಯಾರು ಮಾಡಿ ಮನೆಯ ಸುತ್ತಮುತ್ತ ಮಾರಾಟ ಮಾಡಿದರು ಮತ್ತು ಇದರಿಂದ ಆಕೆಗೆ 5250 ರೂಪಾಯಿ ಲಾಭ ಬಂತು. ಇನ್ನು ಈ ಲಾಭದ ಹಣವನ್ನ ಬಂಡವಾಳವಾಗಿ ಮಾಡಿಕೊಂಡ ಇವರು ಮತ್ತೇ ಉಪ್ಪಿನ ಕಾಯಿ ತಯಾರಿ ಮಾಡಿದರು, ಹೀಗೆ ಹಂತ ಹಂತವಾಗಿ ಬೆಳೆದ ಕೃಷ್ಣ ಯಾದವ್ ಮತ್ತೇ ಹಿಂತಿರುಗಿ ನೋಡಲೇ ಇಲ್ಲ, ವಿವಿಧ ರೀತಿಯ ಉಪಿನ ಕಾಯಿ ತಯಾರು ಮಾಡಿ ಮಾರುಕಟ್ಟೆಗೆ ಬಿಟ್ಟರು ಕೃಷ್ಣ ಯಾದವ್. ಹೀಗೆ ದಿನೇ ದಿನೇ ಅವರ ಲಾಭ ಕೂಡ ಹೆಚ್ಚಾಗುತ್ತಾ ಹೋಯಿತು ಮತ್ತು ಉಪ್ಪಿನ ಕಾಯಿ ಕೊಳ್ಳುವವರ ಸಂಖ್ಯೆ ಕೂಡ ಜಾಸ್ತಿ ಆಯಿತು.

ಶ್ರೀಕೃಷ್ಣ ಪಿಕಲ್ಸ್ ಅನ್ನುವ ಹೆಸರಿನಲ್ಲಿ ಕಂಪನಿಯನ್ನ ಆರಂಭ ಮಾಡಿದ ಕೃಷ್ಣ ಯಾದವ್ ಸುಮಾರು 400 ಕ್ಕೂ ಹೆಚ್ಚು ಮಹಿಳೆಯರಿಗೆ ಉದ್ಯೋಗವನ್ನ ಕೊಟ್ಟಿದ್ದಾರೆ. ಈಗಲೂ ಬೇರೆ ಬೇರೆ ರುಚಿಯಲ್ಲಿ ಉಪ್ಪಿನ ಕಾಯಿಯನ್ನ ತಯಾರು ಮಾಡುತ್ತಾ ದೆಹಲಿಯಲ್ಲಿ ದೊಡ್ಡ ಉದ್ಯಮಿಯಾಗಿ ಬೆಳೆದಿದ್ದಾರೆ ಕೃಷ್ಣ ಯಾದವ್, ಇನ್ನು ಈಕೆಯ ಪ್ರತಿಭೆಯನ್ನ ಗುರುತಿಸಿ ಹಲವಾರು ಪ್ರಶಸ್ತಿಗಳು ಅವರಿಗೆ ಬಂದಿದೆ. ಸ್ವಲ್ಪ ಮಟ್ಟಿಗೆ ವಿದ್ಯಾಭ್ಯಾಸ ಮಾಡಿರುವ ಕೃಷ್ಣ ಯಾದವ್ ಅವರು ಈಗ ಕೋಟಿ ಕೋಟಿ ವ್ಯಾಪಾರ ಮಾಡುತ್ತಿದ್ದು ಇತರೆ ಮಹಿಳೆಯರಿಗೆ ಮಾದರಿಯಾಗಿದ್ದಾರೆ. ಕಷ್ಟ ಎಂದು ಅವರಿವರನ್ನ ಮತ್ತು ದೇವರನ್ನ ದ್ವೇಷಿಸದ ಕೃಷ್ಣ ಯಾದವ್ ತನಗೆ ಗೊತ್ತಿರುವ ವಿಷಯವನ್ನೇ ಅಸ್ತ್ರವನ್ನಾಗಿ ಮಾಡಿಕೊಂಡು ಈಗ ದೊಡ್ಡ ಉದ್ಯಮಿಯಾಗಿ ಬೆಳೆದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಕ್ಕಮಗಳೂರಿನ ಖ್ಯಾತ ಉದ್ಯಮಿಯಾದ ಸಿದ್ದಾರ್ಥ್ ರವರು ನಿಗೂಢವಾಗಿ ಕಣ್ಮರೆಯಾಗಿರುವುದು ಅವರ ಹುಟ್ಟೂರು ಚಿಕ್ಕಮಗಳೂರಿನ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸಿದ್ಧಾರ್ಥ್ ಅವರ ಸಂಸ್ಥೆಯಲ್ಲಿ ಮೊದಲಿನಿಂದಲೂ ವಿದ್ಯುತ್ ಕಂಟ್ರಾಕ್ಟರ್ ಆಗಿ ಕೆಲಸ ಮಾಡುತ್ತಿರುವ ರುದ್ರೇಶ್ ಕಡೂರು ಕೆಲವೊಂದು ವಿಚಾರಗಳನ್ನು ನಮ್ಮ ಜೊತೆಗೆ ಹಂಚಿಕೊಂಡು ಕಣ್ಣೀರನ್ನು ಹಾಕಿದ್ದಾರೆ. ಸಿದ್ಧಾರ್ಥ್ ಅವರ ತಂದೆ ನೀಡಿದ ಮಾಹಿತಿ ಪ್ರಕಾರ, 1983ರಲ್ಲಿ ಸಿದ್ಧಾರ್ಥ್ 2 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದರು. ಅಲ್ಲಿ ಉದ್ಯಮ ಆರಂಭಿಸಿ ನಷ್ಟ ಅನುಭವಿಸಿ ಮನೆಗೆ ವಾಪಸ್ ಬಂದಿದ್ದರು. ಕೆಲ ದಿನಗಳ…
ಅನೇಕ ಏಡ್ಸ್ ರೋಗಿಗಳು ಹಸುವಿನ ಮೂತ್ರ ಚಿಕಿತ್ಸೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಕಳೆದ 15 ವರ್ಷಗಳಿಂದ ಮೈಗ್ರೇನ್ ಮತ್ತು ತಲೆನೋವಿನ ಬಳಲುತ್ತಿರುವ ಜನರು ಈ ಚಿಕಿತ್ಸೆಯನ್ನು ತೆಗೆದುಕೊಂಡು ಆರು ತಿಂಗಳೊಳಗೆ ಚೇತರಿಸಿಕೊಂಡಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ಹಸುವಿನ ಮೂತ್ರ ಚಿಕಿತ್ಸೆ ಮತ್ತು ಸಂಶೋಧನಾ ಕೇಂದ್ರ ಇಂದೋರ್ ಸುಮಾರು ಒಂದೂವರೆ ಲಕ್ಷ ಜನರನ್ನು ಚಿಕಿತ್ಸೆಗೆ ಒಳಪಡಿಸಿದ್ದು 85 ರಿಂದ 90 ರಷ್ಟು ಮಲಬದ್ಧತೆ ತೊಂದರೆ ಇರುವ ರೋಗಿಗಳಲ್ಲಿ ಹೊಟ್ಟೆನೋವು ಹಾಗು ಮಲಬದ್ಧತೆ ತಿಳಿದುಬಂದಿದೆ.
ನಮ್ಮ ದೇಶದಲ್ಲಿ ಹಣ್ಣಿನ ತೋಟಗಳು, ಕೈತೋಟಗಳು, ಸಸ್ಯೋದ್ಯಾನ, ದೊಡ್ಡ ಕಟ್ಟಡಗಳ ಪೌಳಿಗೋಡೆಯ ಆವರಣ, ಸಾಲುಮರವಾಗಿ, ತೋಟಗಾರಿಕೆ ಸಸಿಮಡಿಗಳು ಮುಂತಾದೆಡೆ ಈ ಹಣ್ಣಿನ ಮರವನ್ನು ಕಾಣಬಹುದು.ಒಂದು ರಸವತ್ತಾದ ಮೃದು ಹಣ್ಣು. ನಮ್ಮಲ್ಲಿ ಇದನ್ನು ಇತರ ದೇಶಗಳಲ್ಲಿದ್ದಂತೆ ವಾಣಿಜ್ಯವಾಗಿ ಯಾರೂ ಬೆಳೆಯುತ್ತಿಲ್ಲ. ಕ್ಯಾಲಿಫೋರ್ನಿಯಾ, ಹವಾಯ್, ಚೀನಾ ತೈವಾನ್, ಕ್ವೀನ್ಸ್ಲ್ಯಾಂಡ್ ಮುಂತಾದೆಡೆ ಕಮರಾಕ್ಷಿಯ ಮರಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತವೆ.
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 2 ಸಾವಿರರೂಪಾಯಿ ಮುಖಬೆಲೆಯ ನೋಟು ಮುದ್ರಣವನ್ನು ಸ್ಥಗಿತಗೊಳಿಸಿದೆ.ಪ್ರಸಕ್ತ ವರ್ಷ ನೋಟು ಮುದ್ರಣಇಲಾಖೆ 2 ಸಾವಿರ ಮುಖಬೆಲೆಯ ಒಂದುನೋಟನ್ನೂ ಮುದ್ರಿಸಿಲ್ಲ ಎಂದು ಆರ್ಬಿಐಆರ್ಟಿಐ ಅರ್ಜಿಗೆ ನೀಡಿರುವಉತ್ತರದಲ್ಲಿ ಸ್ಪಷ್ಟಪಡಿಸಿದೆ. ಆದರೆ ಹಾಲಿ ಇರುವ ನೋಟುಗಳ ಚಲಾವಣೆಗೆ ಸಮಸ್ಯೆಯೇನಿಲ್ಲ. ಆರ್ಬಿಐ ಮಾಹಿತಿ ಪ್ರಕಾರ ನೋಟು ಮುದ್ರಣ ಇಲಾಖೆ 2016-17ನೇ ಹಣಕಾಸು ವರ್ಷದಲ್ಲಿ 2 ಸಾವಿರ ಮುಖಬೆಲೆಯ ಒಟ್ಟು 3,54,29,91,000 ನೋಟುಗಳನ್ನು ಮುದ್ರಣ ಮಾಡಿತ್ತು. 2017-18 ರಲ್ಲಿ 11,15,07,000 ನೋಟು ಹಾಗೂ 2018-19ನೇ ಸಾಲಿನಲ್ಲಿ ಕೇವಲ4,66,90,000 ನೋಟುಗಳನ್ನು…
ಇತ್ತೀಚೆಗಷ್ಟೇ S.S.L.C.ಪಲಿತಾಂಶ ಪ್ರಕಟವಗಿದ್ಧು ಪೇಲ್ ಆದ ವಿದ್ಯಾರ್ಥಿಗಳ ಪೂರಕ ಪರೀಕ್ಷೆ ಜೂನ್ 21 ರಿಂದ 28 ರವರೆಗೆ ನಡೆಯಲಿದೆ . ಮೇ 10 ಪೂರಕ ಪರೀಕ್ಷೆ ಕಟ್ಟಲು ಕೊನೆಯ ದಿನವಾಗಿದೆ. 200 ರೂ. ದಂಡ ಶುಲ್ಕದೊಂದಿಗೆ ಮೇ 15 ರ ವರೆಗೆ ಪೂರಕ ಪರೀಕ್ಷೆ ಕಟ್ಟಬಹುದಾಗಿದೆ.ಪೇಲ್ ಆಗಿರುವಂಥಹ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದವರು ಕೂಡ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಉತ್ತರ ಪತ್ರಿಕೆಗಳ ಛಾಯಾ ಪ್ರತಿ ಪಡೆಯಲು ಮೇ 13 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಛಾಯಾಪ್ರತಿಗೆ ಒಂದು…
ಯಶಸ್ಸು ಯಾರಿಗೆ ಬೇಡ ಹೇಳಿ? ಎಷ್ಟೇ ಶ್ರಮವಹಿಸಿದ್ರೂ ಕೆಲವರಿಗೆ ಯಶಸ್ಸು ಲಭಿಸುವುದಿಲ್ಲ. ಜೀವನದಲ್ಲಿ ಒಂದಾದ ಮೇಲೆ ಒಂದು ಕಷ್ಟಗಳು ಬರ್ತಾನೆ ಇರುತ್ವೆ. ಮಾಡಿದ ಕೆಲಸಕ್ಕೆ ಯಶಸ್ಸು ಸಿಗಲಿ, ಜೀವನದಲ್ಲಿ ಸಫಲತೆ ಕಾಣಲಿ ಅಂತಾ ಎಲ್ಲರೂ ಬಯಸ್ತಾರೆ. ಯಶಸ್ಸಿನ ವಿಧಾನ ಹಾಗೂ ವಿಷಯಗಳು ಬೇರೆ ಬೇರೆಯಾದರೂ ಹೋರಾಟ ಮಾತ್ರ ತಪ್ಪಿದ್ದಲ್ಲ. ಕೆಲವರಿಗೆ ಬೇಗನೆ ಯಶಸ್ಸು ದೊರೆತರೆ ಇನ್ನು ಕೆಲವರು ಪಡಬಾರದ ಪಾಡೆಲ್ಲ ಪಡುತ್ತಾರೆ.