ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಹುಟ್ಟುವಾಗ ಒಬ್ಬರಾಗಿ ಈ ಪ್ರಪಂಚಕ್ಕೆ ಬರುತ್ತೇವೆ ಮತ್ತು ಸಾಯುವಾಗ ಒಬ್ಬರಾಗಿ ಸಾಯುತ್ತೇವೆ ಮತ್ತು ನಮ್ಮ ಸಾವನ್ನ ಯಾರಿಂದಲೂ ಕೂಡ ತಪ್ಪಿಸಲು ಸಾಧ್ಯವಿಲ್ಲ ಹಾಗೆ ನಮ್ಮ ನೋವನ್ನ ಯಾರು ಭರಿಸಲು ಕೂಡ ಸಾಧ್ಯವಿಲ್ಲ. ನಾವು ಕಷ್ಟದಲ್ಲಿ ಇದ್ದಾಗ ಒಂದು ಹಂತದ ತನಕ ಮಾತ್ರ ಯಾರಾದರೂ ಸಹಾಯ ಮಾಡಬಲ್ಲರು ಆದರೆ ಅದರಿಂದ ಆಚೆ ನಾವೇ ಹೋರಾಡಬೇಕು ಮತ್ತು ನಾವೇ ಬದುಕುವ ದಾರಿಯನ್ನ ಹುಡುಕಾಡಬೇಕು ಯಾಕೆ ಅಂದರೆ ಜೀವನ ಅನ್ನುವುದು ಪ್ರತಿ ಕ್ಷಣದ ಹೋರಾಟ. ಎಲ್ಲಾ ದಾರಿಗಳು ಮುಚ್ಚಿ ಹೋದಾಗ ತನ್ನ ಸ್ವಂತ ದಾರಿಯನ್ನ ಹುಡುಕಿದ ಈ ಮಹಿಳೆ ಈಗ ನೂರಾರು ಮಹಿಳೆಯರಿಗೆ ದಾರಿದೀಪ ಆಗಿದ್ದಾರೆ, ಹಾಗಾದರೆ ಈ ಮಹಿಳೆಯರು ಮತ್ತು ಈಕೆ ಮಾಡಿದ ಸಾಧನೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಉತ್ತರ ಪ್ರದೇಶಕ್ಕೆ ಸೇರಿದ ಕೃಷ್ಣ ಯಾದವ್ ಅನ್ನುವ ಮಹಿಳೆಗೆ ಇಬ್ಬರು ಮಕ್ಕಳು, ಜೀವನೋಪಾಯಕ್ಕಾಗಿ ಮನೆಯಲ್ಲಿ ಉಪ್ಪಿನ ಕಾಯಿಯನ್ನ ತಯಾರಿಸಿ ಮಾರಾಟ ಮಾಡುತ್ತಿದ್ದರು, ಆದರೆ ಅದರಿಂದ ಅವರಿಗೆ ಏನು ಲಾಭ ಸಿಗಲಿಲ್ಲ. ಏನು ಲಾಭ ಸಿಗದ ಕಾರಣ ಉದ್ಯಾಯೋಗವನ್ನ ಅರಸಿಕೊಂಡು ಗಂಡ ಮತ್ತು ಮಕ್ಕಳ ಜೊತೆ ದೆಹಲಿಗೆ ಬಂದು ನೆಲೆಸಿದರು ಕೃಷ್ಣ ಯಾದವ್, ಇನ್ನು ದೆಹಲಿಗೆ ಬಂದ ಕೃಷ್ಣ ಯಾದವ್ ಒಂದು ಸಂಸ್ಥೆಯಲ್ಲಿ ಅಡುಗೆಯ ತರಬೇತಿಯನ್ನ ಪಡೆದರು, ಆದರೆ ಅವರಿಗೆ ಯಾವುದೇ ಕೆಲಸ ಸಿಗಲಿಲ್ಲ. ಯಾವುದೇ ಕೆಲಸ ಸಿಗದ ಕಾರಣ ಮತ್ತೇ ಮನೆಯಲ್ಲಿ ಉಪ್ಪಿಯ ಕಾಯಿಯನ್ನ ತಯಾರು ಮಾಡಿ ಮಾರಾಟ ಮಾಡಲು ನಿರ್ಧಾರ ಮಾಡಿದರು ಕೃಷ್ಣ ಯಾದವ್.

ಉಪ್ಪಿಯ ಕಾಯಿಯನ್ನ ತಯಾರು ಮಾಡಲು ಕೈಯಲ್ಲಿ ನೂರು ರೂಪಾಯಿ ಕೂಡ ಇರಲಿಲ್ಲ, ಸ್ನೇಹಿತರ ಬಳಿ 500 ರೂಪಾಯಿ ಸಾಲ ಪಡೆದ ಕೃಷ್ಣ ಯಾದವ್ ಅದೂ ಸಾಕಾಗದೆ ಮತ್ತೇ 3000 ರೂಪಾಯಿ ಸಾಲ ಮಾಡಿ ಉಪ್ಪಿನ ಕಾಯಿಗೆ ಬೇಕಾದ ವಸ್ತುಗಳನ್ನ ತಂದು ಉಪ್ಪಿನ ಕಾಯಿಯನ್ನ ತಯಾರು ಮಾಡಿ ಮನೆಯ ಸುತ್ತಮುತ್ತ ಮಾರಾಟ ಮಾಡಿದರು ಮತ್ತು ಇದರಿಂದ ಆಕೆಗೆ 5250 ರೂಪಾಯಿ ಲಾಭ ಬಂತು. ಇನ್ನು ಈ ಲಾಭದ ಹಣವನ್ನ ಬಂಡವಾಳವಾಗಿ ಮಾಡಿಕೊಂಡ ಇವರು ಮತ್ತೇ ಉಪ್ಪಿನ ಕಾಯಿ ತಯಾರಿ ಮಾಡಿದರು, ಹೀಗೆ ಹಂತ ಹಂತವಾಗಿ ಬೆಳೆದ ಕೃಷ್ಣ ಯಾದವ್ ಮತ್ತೇ ಹಿಂತಿರುಗಿ ನೋಡಲೇ ಇಲ್ಲ, ವಿವಿಧ ರೀತಿಯ ಉಪಿನ ಕಾಯಿ ತಯಾರು ಮಾಡಿ ಮಾರುಕಟ್ಟೆಗೆ ಬಿಟ್ಟರು ಕೃಷ್ಣ ಯಾದವ್. ಹೀಗೆ ದಿನೇ ದಿನೇ ಅವರ ಲಾಭ ಕೂಡ ಹೆಚ್ಚಾಗುತ್ತಾ ಹೋಯಿತು ಮತ್ತು ಉಪ್ಪಿನ ಕಾಯಿ ಕೊಳ್ಳುವವರ ಸಂಖ್ಯೆ ಕೂಡ ಜಾಸ್ತಿ ಆಯಿತು.

ಶ್ರೀಕೃಷ್ಣ ಪಿಕಲ್ಸ್ ಅನ್ನುವ ಹೆಸರಿನಲ್ಲಿ ಕಂಪನಿಯನ್ನ ಆರಂಭ ಮಾಡಿದ ಕೃಷ್ಣ ಯಾದವ್ ಸುಮಾರು 400 ಕ್ಕೂ ಹೆಚ್ಚು ಮಹಿಳೆಯರಿಗೆ ಉದ್ಯೋಗವನ್ನ ಕೊಟ್ಟಿದ್ದಾರೆ. ಈಗಲೂ ಬೇರೆ ಬೇರೆ ರುಚಿಯಲ್ಲಿ ಉಪ್ಪಿನ ಕಾಯಿಯನ್ನ ತಯಾರು ಮಾಡುತ್ತಾ ದೆಹಲಿಯಲ್ಲಿ ದೊಡ್ಡ ಉದ್ಯಮಿಯಾಗಿ ಬೆಳೆದಿದ್ದಾರೆ ಕೃಷ್ಣ ಯಾದವ್, ಇನ್ನು ಈಕೆಯ ಪ್ರತಿಭೆಯನ್ನ ಗುರುತಿಸಿ ಹಲವಾರು ಪ್ರಶಸ್ತಿಗಳು ಅವರಿಗೆ ಬಂದಿದೆ. ಸ್ವಲ್ಪ ಮಟ್ಟಿಗೆ ವಿದ್ಯಾಭ್ಯಾಸ ಮಾಡಿರುವ ಕೃಷ್ಣ ಯಾದವ್ ಅವರು ಈಗ ಕೋಟಿ ಕೋಟಿ ವ್ಯಾಪಾರ ಮಾಡುತ್ತಿದ್ದು ಇತರೆ ಮಹಿಳೆಯರಿಗೆ ಮಾದರಿಯಾಗಿದ್ದಾರೆ. ಕಷ್ಟ ಎಂದು ಅವರಿವರನ್ನ ಮತ್ತು ದೇವರನ್ನ ದ್ವೇಷಿಸದ ಕೃಷ್ಣ ಯಾದವ್ ತನಗೆ ಗೊತ್ತಿರುವ ವಿಷಯವನ್ನೇ ಅಸ್ತ್ರವನ್ನಾಗಿ ಮಾಡಿಕೊಂಡು ಈಗ ದೊಡ್ಡ ಉದ್ಯಮಿಯಾಗಿ ಬೆಳೆದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೀಶ್ ಪಾಂಡೆ ಹಾಗೂ ಆಶ್ರಿತಾ ಸುಮಾರು ದಿನಗಳಿಂದ ಡೇಟ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಆದರೆ ಈಗ ಇವರಿಬ್ಬರು ಮದುವೆಯಾಗುವ ಮೂಲಕ ಗಾಸಿಪ್ಗಳಿಗೆ ತೆರೆ ಎಳೆದಿದ್ದಾರೆ. ಹೌದು ಈಗ ಭಾರತ ತಂಡದ ಕ್ರಿಕೆಟ್ ಆಟಗಾರ ಮನೀಶ್ ಪಾಂಡೆ ಅವರು ತುಳು ಹಾಗೂ ದಕ್ಷಿಣ ಭಾರತದ ನಟಿಯಾಗಿರುವ ನಟಿ ಆಶ್ರಿತಾ ಶೆಟ್ಟಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಐಪಿಎಲ್ನಲ್ಲಿ ಮನೀಶ್ ಹೈದರಾಬಾದ್ ತಂಡದ ಪರವಾಗಿ ಆಡುತ್ತಿದ್ದಾರೆ. ಹಾಗಾಗಿ ಮನೀಶ್ ಮದುವೆಯ ಫೋಟೋವನ್ನು ಮೊದಲು ಸನ್ರೈಸರ್ಸ್ ಹೈದರಾಬಾದ್ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ….
ಕೇದಾರನಾಥ ಗುಹೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ಯಾನ ಮಾಡುವ ಮೂಲಕ ಹೊಸ ಟ್ರೆಂಡ್ ಸೃಷ್ಟಿಸಿದ್ದರು. ಈಗ ಪ್ರಧಾನಿ ಅವರ ನಡೆಯನ್ನೇ ಇಲ್ಲಿಗೆ ಬರುವ ಯಾತ್ರಿಕರು ಅನುಸರಿಸುತ್ತಿದ್ದಾರೆ.ಹೌದು, ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಕ್ಕೂ ಮೊದಲು ಮೇ 18ರಂದು ಮೋದಿ ಅವರು ಕೇದಾರನಾಥದಲ್ಲಿರುವ ಗುಹೆಯಲ್ಲಿ 24 ಗಂಟೆಗಳು ಸುದೀರ್ಘ ಧ್ಯಾನ ಮಾಡಿ ಎಲ್ಲೆಡೆ ಸುದ್ದಿಯಾಗಿದ್ದರು. ಹಾಗೆಯೇ ಹಲವರ ಗಮನ ಸೆಳೆದಿದ್ದರು. ಈಗ ಈ ಗುಹೆಯಲ್ಲಿ ಧ್ಯಾನ ಮಾಡಲು ಯಾತ್ರಿಕರು ತಾ ಮುಂದು ನಾ ಮುಂದು ಅಂತ ಮುಗಿಬಿದ್ದಿದ್ದಾರೆ. ಕೇದಾರನಾಥ ಗುಹೆಯಲ್ಲಿ…
ಬೆಂಗಳೂರು, ಮಹತ್ವಾಕಾಂಕ್ಷಿ ಚಂದ್ರಯಾನ-2 ನೌಕೆಯ ಸಂಪರ್ಕ ಕೊನೆ ಕ್ಷಣದಲ್ಲಿ ಕಡಿತಗೊಂಡಿದೆ. ಇದರಿಂದಾಗಿ ಭೂಮಿಯ ನೈಸರ್ಗಿಕ ಉಪಗ್ರಹ ಚಂದ್ರನ ಒಡಲಲ್ಲಿ ಅಡಗಿರುವ ಅನೂಹ್ಯ ರಹಸ್ಯಗಳನ್ನು ಭೇದಿಸುವ ಗುರಿ ಹೊಂದಿದ್ದ ಇಸ್ರೋಗೆ ಕೊಂಚ ಹಿನ್ನಡೆಯಾಗಿದೆ. ಚಂದ್ರನ ಅಂಗಳದ ಮೇಲೆ ಲ್ಯಾಂಡರ್ ಅನ್ನು ಇಳಿಸುವ ಕೊನೆಯ 15ನಿಮಿಷ ಭಾರೀ ಕಷ್ಟದ ಕ್ಷಣಗಳು ಎಂದು ಇಸ್ರೋ ಈ ಮೊದಲೇ ಹೇಳಿತ್ತು. ಹೀಗಾಗಿ ಮೊದಲ ಕೆಲವು ಕ್ಷಣಗಳು ಸುಸೂತ್ರವಾಗಿ ನೆರವೇರಿದರೂ ಇನ್ನೇನು ಚಂದ್ರನ ಅಂಗಳ 2.1 ಕಿ.ಮೀ ದೂರ ಇರುವಂತೆ ಲ್ಯಾಂಡರ್ ನೌಕೆ ಸಂಪರ್ಕ…
ನಮ್ಮನ್ನು ಕಾಡುವ ಬಹುತೇಕ ರೋಗಗಳಿಗೆ ಮನೆಯಲ್ಲಿಯೇ ಮದ್ದಿದೆ. ಅಡುಗೆ ಮನೆಯಲ್ಲಿರುವ ಪದಾರ್ಥಗಳಿಗೆ ನಮ್ಮ ಆರೋಗ್ಯ ಕಾಪಾಡುವ ಶಕ್ತಿ ಇದೆ. ಅದ್ರಲ್ಲಿ ಬೆಲ್ಲ ಕೂಡ ಒಂದು. ಬೆಲ್ಲ ತಿನ್ನಲ್ಲೊಂದೇ ಸಿಹಿಯಲ್ಲ. ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ 20 ಗ್ರಾಂ ಬೆಲ್ಲವನ್ನು ಸೇವನೆ ಮಾಡಬೇಕು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ.ಬೆಲ್ಲ ತಿನ್ನುವುದು ಜೀರ್ಣಕ್ರಿಯೆಗೆ ಒಳ್ಳೆಯದು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ. ಬೆಲ್ಲ ಹೊಟ್ಟೆ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಆಹಾರ ಸೇವನೆ ನಂತ್ರ ಬೆಲ್ಲ ತಿನ್ನುವುದ್ರಿಂದ ಜೀರ್ಣಕ್ರಿಯೆ ಸರಿಯಾಗುವ ಜೊತೆಗೆ ಗ್ಯಾಸ್ ಸಮಸ್ಯೆ ದೂರವಾಗುತ್ತದೆ. 7…
ವ್ಹಾವ್…ಇಂತಹ ದೃಶ್ಯಗಳು ಎಲ್ಲಾ ಕಡೆ ಕಾಣಿಸುವುದಿಲ್ಲ, ಎಲ್ಲರ ಮನಸ್ಸನ್ನು ಸೆಳೆಯುವ ನೋಟ… ನೋಡಿದ ಅರೆಕ್ಷಣದಲ್ಲಿಯೇ ಮನಸ್ಸು ಹಕ್ಕಿಯಂತೆ ಹಾರುತ್ತದೆ ಎಂದರೆ ತಪ್ಪೇನಿಲ್ಲ… ಅಂತಹ ಮನಮೋಹಕ ದೃಶ್ಯವಿದು… ತಕ್ಷಣಕ್ಕೆ ನೀರು ಹಾಲ್ನೊರೆಯುನ್ನುಕ್ಕಿಸಿ ಧುಮ್ಮಿಕ್ಕುವಂತೆ ಕಾಣುತ್ತದೆ. ಆದರೆ, ನಿಜವಾಗಿಯೂ ಇದು ಜಲಪಾತವೇ ಅಲ್ಲ…! ನಮ್ಮ ಕಣ್ಣನ್ನೇ ನಂಬದಂತೆ ಮಾಡುವ ಇಂತಹ ಅದ್ಭುತ ದೃಶ್ಯ ಸೆರೆಯಾಗಿದ್ದು ಮಿಜೋರಾಂನ ಐಜಾಲ್ ನಗರದಲ್ಲಿ. ಮಿಜೋರಾಂ ಪ್ರಕೃತಿಯ ರಮಣೀಯ ತಾಣಗಳಲ್ಲಿ ಒಂದು. ಇಲ್ಲಿನ ಬೆಟ್ಟ ಗುಡ್ಡಗಳನ್ನು ನೋಡುವುದೆಂದರೆ ಕಣ್ಣಿಗದು ಹಬ್ಬ. ಇದೇ ಬೆಟ್ಟದ ನಡುವೆ ಕಂಡದ್ದು…
ಸಾಮಾನ್ಯವಾಗಿ ನಾವು ಮನೆಯಲ್ಲಿ ಅನ್ನ ಮಾಡುವಾಗ ಅಕ್ಕಿಯನ್ನು ತೊಳೆದು ಆ ನೀರನ್ನು ಚೆಲ್ಲುತ್ತೇವೆ ಅಥವಾ ಹಸುಗಳಿಗೆ ಕುಡಿಸುತ್ತೇವೆ. ಇದು ಎಲ್ಲರೂ ಮಾಡುವುದೇ… ಆದರೆ ಆ ನೀರಿನಿಂದ ನಮ್ಮ ಮುಖದ ಮೇಲಿನ ಮೊಡವೆಗಳನ್ನು ದೂರ ಮಾಡಿಕೊಳ್ಳುಬಹುದಲ್ಲದೇ ನಮ್ಮ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಬಹುದಂತೆ.