ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಹುಟ್ಟುವಾಗ ಒಬ್ಬರಾಗಿ ಈ ಪ್ರಪಂಚಕ್ಕೆ ಬರುತ್ತೇವೆ ಮತ್ತು ಸಾಯುವಾಗ ಒಬ್ಬರಾಗಿ ಸಾಯುತ್ತೇವೆ ಮತ್ತು ನಮ್ಮ ಸಾವನ್ನ ಯಾರಿಂದಲೂ ಕೂಡ ತಪ್ಪಿಸಲು ಸಾಧ್ಯವಿಲ್ಲ ಹಾಗೆ ನಮ್ಮ ನೋವನ್ನ ಯಾರು ಭರಿಸಲು ಕೂಡ ಸಾಧ್ಯವಿಲ್ಲ. ನಾವು ಕಷ್ಟದಲ್ಲಿ ಇದ್ದಾಗ ಒಂದು ಹಂತದ ತನಕ ಮಾತ್ರ ಯಾರಾದರೂ ಸಹಾಯ ಮಾಡಬಲ್ಲರು ಆದರೆ ಅದರಿಂದ ಆಚೆ ನಾವೇ ಹೋರಾಡಬೇಕು ಮತ್ತು ನಾವೇ ಬದುಕುವ ದಾರಿಯನ್ನ ಹುಡುಕಾಡಬೇಕು ಯಾಕೆ ಅಂದರೆ ಜೀವನ ಅನ್ನುವುದು ಪ್ರತಿ ಕ್ಷಣದ ಹೋರಾಟ. ಎಲ್ಲಾ ದಾರಿಗಳು ಮುಚ್ಚಿ ಹೋದಾಗ ತನ್ನ ಸ್ವಂತ ದಾರಿಯನ್ನ ಹುಡುಕಿದ ಈ ಮಹಿಳೆ ಈಗ ನೂರಾರು ಮಹಿಳೆಯರಿಗೆ ದಾರಿದೀಪ ಆಗಿದ್ದಾರೆ, ಹಾಗಾದರೆ ಈ ಮಹಿಳೆಯರು ಮತ್ತು ಈಕೆ ಮಾಡಿದ ಸಾಧನೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಉತ್ತರ ಪ್ರದೇಶಕ್ಕೆ ಸೇರಿದ ಕೃಷ್ಣ ಯಾದವ್ ಅನ್ನುವ ಮಹಿಳೆಗೆ ಇಬ್ಬರು ಮಕ್ಕಳು, ಜೀವನೋಪಾಯಕ್ಕಾಗಿ ಮನೆಯಲ್ಲಿ ಉಪ್ಪಿನ ಕಾಯಿಯನ್ನ ತಯಾರಿಸಿ ಮಾರಾಟ ಮಾಡುತ್ತಿದ್ದರು, ಆದರೆ ಅದರಿಂದ ಅವರಿಗೆ ಏನು ಲಾಭ ಸಿಗಲಿಲ್ಲ. ಏನು ಲಾಭ ಸಿಗದ ಕಾರಣ ಉದ್ಯಾಯೋಗವನ್ನ ಅರಸಿಕೊಂಡು ಗಂಡ ಮತ್ತು ಮಕ್ಕಳ ಜೊತೆ ದೆಹಲಿಗೆ ಬಂದು ನೆಲೆಸಿದರು ಕೃಷ್ಣ ಯಾದವ್, ಇನ್ನು ದೆಹಲಿಗೆ ಬಂದ ಕೃಷ್ಣ ಯಾದವ್ ಒಂದು ಸಂಸ್ಥೆಯಲ್ಲಿ ಅಡುಗೆಯ ತರಬೇತಿಯನ್ನ ಪಡೆದರು, ಆದರೆ ಅವರಿಗೆ ಯಾವುದೇ ಕೆಲಸ ಸಿಗಲಿಲ್ಲ. ಯಾವುದೇ ಕೆಲಸ ಸಿಗದ ಕಾರಣ ಮತ್ತೇ ಮನೆಯಲ್ಲಿ ಉಪ್ಪಿಯ ಕಾಯಿಯನ್ನ ತಯಾರು ಮಾಡಿ ಮಾರಾಟ ಮಾಡಲು ನಿರ್ಧಾರ ಮಾಡಿದರು ಕೃಷ್ಣ ಯಾದವ್.

ಉಪ್ಪಿಯ ಕಾಯಿಯನ್ನ ತಯಾರು ಮಾಡಲು ಕೈಯಲ್ಲಿ ನೂರು ರೂಪಾಯಿ ಕೂಡ ಇರಲಿಲ್ಲ, ಸ್ನೇಹಿತರ ಬಳಿ 500 ರೂಪಾಯಿ ಸಾಲ ಪಡೆದ ಕೃಷ್ಣ ಯಾದವ್ ಅದೂ ಸಾಕಾಗದೆ ಮತ್ತೇ 3000 ರೂಪಾಯಿ ಸಾಲ ಮಾಡಿ ಉಪ್ಪಿನ ಕಾಯಿಗೆ ಬೇಕಾದ ವಸ್ತುಗಳನ್ನ ತಂದು ಉಪ್ಪಿನ ಕಾಯಿಯನ್ನ ತಯಾರು ಮಾಡಿ ಮನೆಯ ಸುತ್ತಮುತ್ತ ಮಾರಾಟ ಮಾಡಿದರು ಮತ್ತು ಇದರಿಂದ ಆಕೆಗೆ 5250 ರೂಪಾಯಿ ಲಾಭ ಬಂತು. ಇನ್ನು ಈ ಲಾಭದ ಹಣವನ್ನ ಬಂಡವಾಳವಾಗಿ ಮಾಡಿಕೊಂಡ ಇವರು ಮತ್ತೇ ಉಪ್ಪಿನ ಕಾಯಿ ತಯಾರಿ ಮಾಡಿದರು, ಹೀಗೆ ಹಂತ ಹಂತವಾಗಿ ಬೆಳೆದ ಕೃಷ್ಣ ಯಾದವ್ ಮತ್ತೇ ಹಿಂತಿರುಗಿ ನೋಡಲೇ ಇಲ್ಲ, ವಿವಿಧ ರೀತಿಯ ಉಪಿನ ಕಾಯಿ ತಯಾರು ಮಾಡಿ ಮಾರುಕಟ್ಟೆಗೆ ಬಿಟ್ಟರು ಕೃಷ್ಣ ಯಾದವ್. ಹೀಗೆ ದಿನೇ ದಿನೇ ಅವರ ಲಾಭ ಕೂಡ ಹೆಚ್ಚಾಗುತ್ತಾ ಹೋಯಿತು ಮತ್ತು ಉಪ್ಪಿನ ಕಾಯಿ ಕೊಳ್ಳುವವರ ಸಂಖ್ಯೆ ಕೂಡ ಜಾಸ್ತಿ ಆಯಿತು.

ಶ್ರೀಕೃಷ್ಣ ಪಿಕಲ್ಸ್ ಅನ್ನುವ ಹೆಸರಿನಲ್ಲಿ ಕಂಪನಿಯನ್ನ ಆರಂಭ ಮಾಡಿದ ಕೃಷ್ಣ ಯಾದವ್ ಸುಮಾರು 400 ಕ್ಕೂ ಹೆಚ್ಚು ಮಹಿಳೆಯರಿಗೆ ಉದ್ಯೋಗವನ್ನ ಕೊಟ್ಟಿದ್ದಾರೆ. ಈಗಲೂ ಬೇರೆ ಬೇರೆ ರುಚಿಯಲ್ಲಿ ಉಪ್ಪಿನ ಕಾಯಿಯನ್ನ ತಯಾರು ಮಾಡುತ್ತಾ ದೆಹಲಿಯಲ್ಲಿ ದೊಡ್ಡ ಉದ್ಯಮಿಯಾಗಿ ಬೆಳೆದಿದ್ದಾರೆ ಕೃಷ್ಣ ಯಾದವ್, ಇನ್ನು ಈಕೆಯ ಪ್ರತಿಭೆಯನ್ನ ಗುರುತಿಸಿ ಹಲವಾರು ಪ್ರಶಸ್ತಿಗಳು ಅವರಿಗೆ ಬಂದಿದೆ. ಸ್ವಲ್ಪ ಮಟ್ಟಿಗೆ ವಿದ್ಯಾಭ್ಯಾಸ ಮಾಡಿರುವ ಕೃಷ್ಣ ಯಾದವ್ ಅವರು ಈಗ ಕೋಟಿ ಕೋಟಿ ವ್ಯಾಪಾರ ಮಾಡುತ್ತಿದ್ದು ಇತರೆ ಮಹಿಳೆಯರಿಗೆ ಮಾದರಿಯಾಗಿದ್ದಾರೆ. ಕಷ್ಟ ಎಂದು ಅವರಿವರನ್ನ ಮತ್ತು ದೇವರನ್ನ ದ್ವೇಷಿಸದ ಕೃಷ್ಣ ಯಾದವ್ ತನಗೆ ಗೊತ್ತಿರುವ ವಿಷಯವನ್ನೇ ಅಸ್ತ್ರವನ್ನಾಗಿ ಮಾಡಿಕೊಂಡು ಈಗ ದೊಡ್ಡ ಉದ್ಯಮಿಯಾಗಿ ಬೆಳೆದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಲಯಾಳಂನ ಖ್ಯಾತ ನಟ ದೇವನ್ ಅವರ ಬಳಿ ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅವರು ತನ್ನ ಹಳೆ ಪ್ರೇಮವನ್ನು ನೆನೆದು ಕಣ್ಣೀರಿಟ್ಟಿರಿಟ್ಟಿದ್ದಾರಂತೆ. ತೆರೆಯ ಮೇಲೆ ಲವರ್ ಬಾಯ್ ಅಗಿ ಮಿಂಚುತ್ತಿದ್ದ ರಜನಿ ಅವರ ನಿಜ ಜೀವನದಲ್ಲಿ ತನ್ನ ಮೊದಲ ಪ್ರೇಮ ವಿಫಲವಾಗಿತ್ತು. ಬೆಂಗಳೂರು ಟ್ರಾನ್ಸ್ಪೋರ್ಟ್ ಸರ್ವಿಸ್ ಬಸ್ ಕಂಡಕ್ಟರ್ ಆಗಿದ್ದ ಸಮಯದಲ್ಲಿ ರಜನಿ, ರೂಟ್ ನಂಬರ್ 10ಎ ಬಸ್ ನಲ್ಕಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ, ಎಂಬಿಬಿಎಸ್ ಓದುತ್ತಿರುವ ನಿರ್ಮಲಾ ಎಂಬುವವರನ್ನು ಪ್ರೀತಿಸುತ್ತಿದ್ದರು. ನಿರ್ಮಲಾ…
ಶನಿವಾರ ಆರಂಭವಾದ ರಾಜೀನಾಮೆ ಪರ್ವ ತಾತ್ಕಾಲಿಕ ಬ್ರೇಕ್ ಪಡೆದುಕೊಂಡಿದ್ದರೂ ಸೋಮವಾರ ಮತ್ತೆ ಮುಂದುವರಿಯುವ ಸಾಧ್ಯತೆ ಹೆಚ್ಚಾಗಿದೆ. ಅಮೆರಿಕ ಪ್ರವಾಸದಲ್ಲಿದ್ದ ಸಿಎಂ ಕುಮಾರಸ್ವಾಮಿ ಆಗಮಿಸಿದ್ದು ಡ್ಯಾಮೇಜ್ ಕಂಟ್ರೋಲ್ ಗೆ ಇರುವ ತಂತ್ರಗಳನ್ನು ಮೊದಲು ಹುಡುಕುತ್ತಿದ್ದಾರೆ. ಕುಮಾರಸ್ವಾಮಿ ವಿಮಾನ ನಿಲ್ದಾಣದಿಂದ ಬಂದವರೆ ತಕ್ಷಣ ಸಭೆ ಮೇಲೆ ಸಭೆ ಆರಂಭಿಸಿದರು. ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಮಾಜಿ ಸಿಎಂ ಸಿದ್ದರಾಮಯ್ಯ, ಸಿಎಂ ಕುಮಾರಸ್ವಾಮಿ, ಪರಮೇಶ್ವರ ಸೇರಿದಂತೆ ಎಲ್ಲ ಪ್ರಮುಖರು ಅತೃಪ್ತರ ಸವಾಲು ಮೆಟ್ಟಿ ನಿಲ್ಲಲು ಏನು ಮಾಡಬೇಕು ಎಂದು ಚರ್ಚೆ ನಡೆಸಿದರು. ಆದರೆ…
ಉಳಿತಾಯ ಖಾತೆ ತೆರೆಯಲು ಇಷ್ಟಪಡವವರಿಗೆ ಈ ವಿಧಾನ ತುಂಬಾನೇ ಸರಳ ಹಾಗು ಸೂಕ್ತ ಅನಿಸುತ್ತೆ. ಇತ್ತೀಚಿನ ದಿನಗಳಲ್ಲಿ ಉಳಿತಾಯ ಖಾತೆಯನ್ನು ತೆರೆಯಲು ಹೆಚ್ಚು ಮಂದಿ ಬಯಸುತ್ತಾರೆ. ಬಡವರು ಮಧ್ಯಮ ವರ್ಗದವರಿಗೆ ಇದು ತುಂಬಾನೇ ಅವಶ್ಯಕ. ಈ ವಿಧಾನ ಮನೆಯ ಹೆಣ್ಣು ಮಕ್ಕಳಿಗೆ ತುಂಬಾನೇ ಸಹಕಾರಿಯಾಗಿದೆ. ಈ ರೀತಿಯಲ್ಲಿ ಉಳಿತಾಯ ಮಾಡುತ್ತ ಹೋದರೆ ವರ್ಷದಲ್ಲಿ ಒಂದು ಲಕ್ಷಕ್ಕಿಂತ ಹೆಚ್ಚು ಹಣವನ್ನು ನೀವು ಸಂಪಾದಿಸಬಹುದು. ಇದರಿಂದ ನಿಮ್ಮ ಮನೆಯ ಕೆಲಸಕ್ಕೆ ಬಳಸಿ ಕೊಳ್ಳಬಹುದು. ಪ್ರತಿ ದಿನ ಯಾವ ರೀತಿಯಲ್ಲಿ ಉಳಿತಾಯ…
ಮದುವೆ ನಿಶ್ಚಯವಾದ ಬಳಿಕ, ವಧು- ವರರು ಮಂಟಪಕ್ಕೆ ಬರಲಾರದೆ , ಊಟದ ವಿಚಾರವಾಗಿ, ಅಥವಾ ಮಂಟಪದಲ್ಲಿಯೇ ಮುರಿದ ಮದುವೆಗಳು, ಹೀಗೆ ಮದುವೆ ನಿಂತು ಹೋದ ಅನೇಕ ಘಟನೆಗಳು ನಡೆದಿರುವುದನ್ನು ಕೇಳಿರ್ತೀರಿ
ಅಣ್ಣಾಮಲೈ ಅವರು ಅರಬ್ಬಿ ಎನ್ನುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದ್ದು, ಈ ಸಿನಿಮಾ ಕೆನಡಾ ಮತ್ತು ಜರ್ಮನಿಯಲ್ಲಿ ನಡೆದ ಪ್ಯಾರಾ ಈಜು ಸ್ಪರ್ಧೆಯಲ್ಲಿ ಚಿನ್ನ ಹಾಗೂ ಕಂಚು ಗೆದ್ದು ಭಾರತಕ್ಕೆ ಕೀರ್ತಿಯನ್ನು ತಂದು ಕೊಟ್ಟಂತಹ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ, ಭಾರತದ ಹೆಮ್ಮೆ ಎನಿಸಿರುವ ಪ್ಯಾರಾ ಈಜುಪಟು ಕೆ.ಎಸ್.ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ ಆಗಿದೆ. ಸಣ್ಣ ವಯಸ್ಸಿನಲ್ಲೇ ವಿದ್ಯುತ್ ಅವಘಡದಿಂದ ತನ್ನ ಕೈಗಳನ್ನು ಕಳೆದುಕೊಂಡರೂ, ಗುರಿ ಸಾಧನೆಯ ಛಲ ಬಿಡದೆ ಸಾಧಕೆನಾಗಿ ಮೆರದ ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ…
ಚಿನ್ನದ ನಾಡು ಕೆಜಿಎಫ್ ನ ಆಸ್ಪತ್ರೆಯಲ್ಲಿ ಗರ್ಭಿಣಿಯೊಬ್ಬಳು ಹೆರಿಗೆ ನೋವಿನಿಂಡ ಬಳಲುತ್ತಿದ್ದರೂ ಸೂಕ್ತ ಸಮಯಕ್ಕೆ ವೈದ್ಯರು ಶುಶ್ರೂಷೆ ಮಾಡದ ಕಾರಣ ತಾಯಿಯೊಬ್ಬಳು ತನ್ನ ಮಗುವನ್ನು ಕಳೆದುಕೊಂಡ ಅಮಾನವೀಯ ಘಟನೆ ನಡೆದಿದೆ. ಗರ್ಭಿಣಿ ಮಹಿಳೆ ಹೆರಿಗೆ ನೋವಿನಿಂದ ಒದ್ದಾಡುತ್ತಿರುವ ವೀಡಿಯೋ ದೃಶ್ಯಗಳು ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕೆಜಿಎಫ್ 8ನೇ ಬ್ಲಾಕ್ನ ರಿಯಾಜ್ ಎಂಬವರ ಪತ್ನಿ ಸಮೀನಾ ಅವರಿಗೆ ಸೋಮವ್ರ ಮಧ್ಯಾಹ್ನ ಹೆರಿಗೆ ನೋವು ಕಾಣಿಸಿದೆ. ಆಕೆಯನ್ನು ಕೆಜಿಎಫ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ…