ಉಪಯುಕ್ತ ಮಾಹಿತಿ

ಜನಸಂಖ್ಯೆಯನ್ನು ನಿಯಂತ್ರಿಸಲು ಈ ಸಲಹೆ ನೀಡಿದ ಬಾಬಾ ರಾಮ್‌ ದೇವ್…!

34

ದೇಶದಲ್ಲಿ ಹೊಸ ಸರ್ಕಾರ ರಚನೆಗೂ ಮುನ್ನ ಯೋಗ‌ ಗುರು ಬಾಬಾ ರಾಮ್‌ ದೇವ್ ದೇಶದ ಜನಸಂಖ್ಯೆ ನಿಯಂತ್ರಣದ ಬಗ್ಗೆ ಸಲಹೆಯೊಂದನ್ನು ನೀಡಿದ್ದಾರೆ.

ದೇಶದ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿಗೆ ಬರಬೇಕೆಂದಿರುವ ಬಾಬಾ ರಾಮ್‌ ದೇವ್, ಎರಡು ಮಕ್ಕಳ ನಂತ್ರ ಮೂರನೇ ಮಗುವಿಗೆ ಮತದಾನದ ಹಕ್ಕು ನೀಡಬಾರದು. ಜೊತೆಗೆ ಯಾವುದೇ ಸರ್ಕಾರಿ ಸೌಲಭ್ಯವನ್ನು ನೀಡಬಾರದು ಎಂದು ಹೇಳಿದ್ದಾರೆ.

ಹೆಚ್ಚಾಗುತ್ತಿರುವ ಜನಸಂಖ್ಯೆಗೆ ಭಾರತ ಸಿದ್ಧವಿಲ್ಲ. ಭಾರತದಲ್ಲಿ 150 ಕೋಟಿಗಿಂತ ಹೆಚ್ಚು ಜನಸಂಖ್ಯೆ ಇರಬಾರದು ಎಂದು ಯೋಗ ಗುರು ಹೇಳಿದ್ದಾರೆ. ಈ ಬಗ್ಗೆ ಕಠಿಣ ಕಾನೂನು ಜಾರಿಗೆ ತಂದಾಗ ಮಾತ್ರ ಜನಸಂಖ್ಯೆ ನಿಯಂತ್ರಣ ಸಾಧ್ಯ. ಮೂರನೇ ಮಗುವಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು, ಮತದಾನ ಮಾಡಲು ಅವಕಾಶ ನೀಡಬಾರದು. ಆಗ ಮಾತ್ರ ಜನಸಂಖ್ಯೆ ನಿಯಂತ್ರಣಕ್ಕೆ ಬರುತ್ತದೆ ಎಂದಿದ್ದಾರೆ.

ಗೋ ರಕ್ಷಣೆ ಬಗ್ಗೆಯೂ ಮಾತನಾಡಿದ ಬಾಬಾ ರಾಮ್‌ ದೇವ್, ಗೋ ರಕ್ಷಕರು ಹಾಗೂ ಭಕ್ಷಕರ ಮಧ್ಯೆ ಗಲಾಟೆ ನಿಲ್ಲಬೇಕೆಂದ್ರೆ ಗೋಮಾಂಸವನ್ನು ಸಂಪೂರ್ಣ ನಿಷೇಧಿಸಬೇಕೆಂದಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಮಗನ ಟಿಕ್‌ಟಾಕ್ ಹುಚ್ಚು – ಸಾಸ್ ಚೆಲ್ಲಿ ಅಮ್ಮನಿಗೆ ಕಣ್ಣೀರು ಬರುವಂತೆ ಮಾಡಿದ ಪುತ್ರ..!

    ಟಿಕ್ ಟಾಕ್ ಮಾಡಲು ಹೋದ ಯುವಕನಿಗೆ ಮನೆಯವರು ಸಖತ್ ಗೂಸಾ ನೀಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಗುತ್ತಿದೆ. ಯುವಕನೊಬ್ಬ ಟಿಕ್ ಟಾಕ್ ಮಾಡಲು ನೆಲದ ಮೇಲೆ ಮಲಗಿ ರಕ್ತವಾಂತಿ ಮಾಡುವಂತೆ ನಟಿಸುತ್ತಿದ್ದನು. ಈ ವೇಳೆ ಸ್ಥಳಕ್ಕೆ ಬಂದ ತಾಯಿ ಮಗನ ಸ್ಥಿತಿನೋಡಿ ಗಾಬರಿಗೊಂಡು ಜೋರಾಗಿ ಕಿರುಚಾಡುತ್ತಾ ಮನೆಯ ಸದಸ್ಯರಿಗೆ ಕರೆಯಲು ಹೋಗುತ್ತಾರೆ. ಮಹಿಳೆ ಕಿರುಚಾಟದ ಶಬ್ದ ಕೇಳಿ ಮನೆಯವರು ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ನೆಲದ ಮೇಲೆ ಮಲಗಿಕೊಂಡು ನಟಿಸುತ್ತಿದ್ದ ಯುವಕ ನಗುತ್ತಾ ಎದ್ದುಕುಳಿತಿದ್ದಾನೆ. ಮಗನ…

  • ಉದ್ಯೋಗ

    ಯುವ ಪರಿವರ್ತಕರಿಗಾಗಿ ಅರ್ಜಿ ಆಹ್ವಾನ

    ಬೆಂಗಳೂರು ನಿಮ್ಹಾನ್ಸ್‌ನ ಜನ ಆರೋಗ್ಯ ಕೇಂದ್ರದ ಎಪಿಡೀಮಿಯಾಲಜಿ ವಿಭಾಗದ ವತಿಯಿಂದ ಅನುಷ್ಠಾನಗೊಂಡಿರುವ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ  ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ರಾಷ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ನಾನ ಸಂಸ್ದೆ (ನಿಮ್ಹಾನ್ಸ್) ಬೆಂಗಳೂರು ಇಲ್ಲಿ ತರಬೇತಿ…

  • ಸಿನಿಮಾ

    ಭಾರತದ ಸಾವಿರಾರು ತಿಯೇಟರ್ ಗಳಲ್ಲಿ ರಿಲೀಜ್ ಆಗುತ್ತಿರುವ KGF ಚಿತ್ರಕ್ಕೆ, ಚಿತ್ರೀಕರಣ ನಡೆದ KGFನಲ್ಲೇ ಈ ಚಿತ್ರದ ಬಿಡುಗಡೆ ಭಾಗ್ಯವಿಲ್ಲ..!

    ಭಾರತದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿರುವ ಯಶ್ ಅಭಿನಯದ ‘ಕೆಜಿಎಫ್’ ಚಿತ್ರ ದೇಶಾದ್ಯಂತ ಪಂಚ ಭಾಷೆಯಲ್ಲಿ ನಾಳೆ ಬಿಡುಗಡೆಯಾಗಲಿದೆ. ಆದರೆ ಚಿತ್ರೀಕರಣ ನಡೆದ ಕೆಜಿಎಫ್ ನಲ್ಲಿ ಈ ಚಿತ್ರದ ಬಿಡುಗಡೆಗೆ ಭಾಗ್ಯವಿಲ್ಲದಂತಾಗಿದೆ. ಕೆಜಿಎಫ್‍ನಲ್ಲಿ ಸಿನಿಮಾ ಚಿತ್ರೀಕರಣಗೊಂಡರೂ ಚಿತ್ರಮಂದಿರದ ಮಾಲೀಕರು ಚಿತ್ರದ ಬಾಕ್ಸ್ ಬಜೆಟ್ ನಿಂದ ದೂರ ಸರಿದಿದ್ದಾರೆ. ಚಿತ್ರಮಂದಿರದಲ್ಲಿ ಚಿತ್ರ ಬಿಡುಗಡೆ ಮಾಡಲು ಮಾಲೀಕ 25 ಲಕ್ಷ ರೂ. ಕೇಳಿದ್ದಾರೆ. ಹಾಗಾಗಿ ಕೆಜಿಎಫ್‍ನ ಲಕ್ಷ್ಮೀ ಮತ್ತು ಒಲಿಂಪಿಯಾ ಚಿತ್ರಮಂದಿರಗಳಲ್ಲಿ ಚಿತ್ರದ ಬಿಡುಗಡೆಯಾಗುತ್ತಿಲ್ಲ. ಈ ಸುದ್ದಿ ಕೇಳಿ ಯಶ್…

  • ಸುದ್ದಿ

    ನಿರ್ದೇಶಕ ಮಿಲನ ಪ್ರಕಾಶ್‌ ಮತ್ತೊಮ್ಮೆ ದರ್ಶನ್‌ ಜತೆ ಸಿನಿಮಾ ಮಾಡುವ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ‘ತಾರಕ್‌’ ಚಿತ್ರದ ನಂತರ ಈ ಜೋಡಿ ಜತೆಯಾಗುತ್ತಿದೆ…!

    ಈಗಾಗಲೇ ಮಿಲನ ಪ್ರಕಾಶ್‌ ಅವರು ಕತೆ ಓಕೆ ಮಾಡಿಕೊಂಡಿದ್ದು, ಆ ಬಗ್ಗ ದರ್ಶನ್‌ ಅವರೊಂದಿಗೆ ಒಂದು ಸುತ್ತಿನ ಮಾತುಕತೆ ಕೂಡ ಮಾಡಿದ್ದಾರೆ. ಸದ್ಯಕ್ಕೆ ದರ್ಶನ್‌ ಅವರು ‘ಒಡೆಯ’ ಚಿತ್ರದ ಬಾಕಿ ದೃಶ್ಯಗಳು ಹಾಗೂ ‘ರಾಬರ್ಟ್‌’ ಚಿತ್ರದ ಶೂಟಿಂಗ್‌ನಲ್ಲಿದ್ದಾರೆ. ಕುರುಕ್ಷೇತ್ರ ಅಬ್ಬರವೇ ಕಮ್ಮಿಯಾಗಿಲ್ಲ ಆಗಲೇ  ‘ಒಡೆಯಾ’ ರಿಲೀಸ್ ಡೇಟ್ ಫಿಕ್ಸ್,ಇದರ ನಡುವೆ ‘ಗಂಡುಗಲಿ ಮದಕರಿನಾಯಕ’ ಸಿನಿಮಾ. ಈ ಮೂರೂ ಚಿತ್ರಗಳ ನಂತರ ಪ್ರಕಾಶ್‌ ಅವರ ಸಿನಿಮಾ ಸೆಟ್ಟೇರುತ್ತಾ ಅಥವಾ ಇವುಗಳ ನಡುವೆಯೇ ಇವರ ಎರಡನೇ ಸಿನಿಮಾ ಶುರುವಾಗುತ್ತದ ಎಂಬುದು…

  • ಸುದ್ದಿ

    ಇಂದು ಮಧ್ಯಾಹ್ನ ಗುಜರಾತಿಗೆ ಅಪ್ಪಳಿಸಲಿದೆ ವಾಯು – 3 ಲಕ್ಷ ಜನ ಶಿಫ್ಟ್, 500 ಗ್ರಾಮಗಳ ತೆರವು

    ಗಾಂಧಿನಗರ: ಅರಬ್ಬಿ ಸಮುದ್ರದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಚಂಡಮಾರುತ ವಾಯು ಇದೀಗ ಗುಜರಾತ್‍ನತ್ತ ಪಯಣಿಸಿದೆ. ಹವಾಮಾನ ಇಲಾಖೆ ಪ್ರಕಾರ ಇಂದು ಮಧ್ಯಾಹ್ನದ ಹೊತ್ತಿಗೆ ದಕ್ಷಿಣ ಗುಜರಾತ್‍ನ ಕರಾವಳಿಗೆ ಅಪ್ಪಳಿಸಲಿದೆ. ಹವಾಮಾನ ಇಲಾಖೆ ಪ್ರಕಾರ, ವಾಯು ಚಂಡಮಾರುತ ವೆರಾವಲ್‍ನಿಂದ 180 ಕಿ.ಮೀ ಹಾಗೂ ಪೋರ್ ಬಂದರ್ ನಿಂದ 260 ಕಿ.ಮೀ ದೂರದಲ್ಲಿದೆ. ಪ್ರಸ್ತುತ ವಾಯು ಸೈಕ್ಲೋನ್ ತೀವ್ರ ಸ್ವರೂಪ ಪಡೆದಿದ್ದು, ಗಂಟೆಗೆ 170 ರಿಂದ 185 ಕಿ.ಮೀ. ವೇಗದಲ್ಲಿ ಪೋರ್ ಬಂದರ್ ನತ್ತ ಪಯಣಿಸುತ್ತಿದೆ. ಮುಂಬೈನಿಂದ ಮುಂದೆ ಸಾಗಿದ…

  • ಸುದ್ದಿ

    ಪತ್ನಿಯನ್ನು ಮತ್ತು ತನ್ನ ಮೂರೂ ಮಕ್ಕಳನ್ನು ಕೊಂದು ತಾನು ನೇಣಿಗೆ ಶರಣಾದ,.. ಕಾರಣ ಇಲ್ಲಿದೆ ನೋಡಿ…!

    ಲಕ್ನೋ: ತನ್ನ ಮೂರು ಚಿಕ್ಕ ಮಕ್ಕಳು ಮತ್ತು ತನ್ನ ಹೆಂಡತಿಯನ್ನು ಕೊಂದು ಪತಿಯೂ ನೇಣಿಗೆ ಶರಣಾದ ಘಟನೆ ಉತ್ತರ ಪ್ರದೇಶದ ಘಜಿಯಾಬಾದ್‍ನ ಮಸೂರಿ ಎಂಬ ಗ್ರಾಮದಲ್ಲಿ ನಡೆದಿದೆ. ಪತ್ನಿ ಮತ್ತು ಮಕ್ಕಳನ್ನು ಕೊಂದು ನೇಣು ಹಾಕಿಕೊಂಡ ಪತಿಯನ್ನು 37 ವರ್ಷದ ಪ್ರದೀಪ್ ಎಂದು ಗುರುತಿಸಲಾಗಿದೆ. ಇನ್ನು ಕೊಲೆಯದ ಪತ್ನಿಯೂ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದಳು ಎನ್ನಲಾಗಿದೆ. ಈ ಘಟನೆಯಲ್ಲಿ ಎಂಟು ವರ್ಷ, ಐದು ವರ್ಷ ಮತ್ತು ಮೂರು ವರ್ಷದ ಮಕ್ಕಳನ್ನು ಹತ್ಯೆ ಮಾಡಿದ್ದಾನೆ. ಈ ಘಟನೆ ಗುರುವಾರ ರಾತ್ರಿ…