ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡ್ರಗ್ಸ್, ಆಲ್ಕೋಹಾಲ್ನಂತಹ ಕೆಟ್ಟ ಚಟಗಳಿಗೆ ಅಡಿಕ್ಟ್ ಆಗಿರುವಂತೆ ಸ್ಮಾರ್ಟ್ಫೋನ್ಗಳಿಗೆ ಇಂದಿನ ಜನ ಅಡಿಕ್ಟ್ ಆಗುತ್ತಿದ್ದಾರೆ ಎಂದು ಈಗಾಗಲೇ ಹಲವು ವರದಿಗಳು ಹೇಳಿವೆ. ಆದರೆ, ಇದೀಗ ಬಿಡುಗಡೆಯಾಗಿರುವ ನೂತನ ವರದಿಯೊಂದು ಸ್ಮಾರ್ಟ್ಫೋನ್ ಬಳಕೆಗೂ ಒಂದು ಮಿತಿ ಎನ್ನುವುದನ್ನು ಸಾರಿಸಾರಿ ಹೇಳುತ್ತಿದೆ. ಹೌದು, ಜನರಿಗೆ ಸ್ಮಾರ್ಟ್ಪೋನ್ ಸಿಕ್ಕನಂತರವಂತೂ ಪ್ರಪಂಚವೇ ಮರೆತುಹೋಗಿದ್ದಾರೆ. ರಾತ್ರಿಹಗಲೂ ಎನ್ನದೇ ಸ್ಮಾರ್ಟ್ಫೋನ್ ಬಳಕೆ ಮಾಡುತ್ತಾ ಮಾನಸಿಕ ಖಿನ್ನತೆಗೆ ತುತ್ತಾಗಿ ಆತ್ಮಹತ್ಯೆಯ ದಾರಿ ಹಿಡಿಯುವ ಪ್ರಮಾಣ ಹೆಚ್ಚಾಗಿದೆ ಎಂದು ಅಮೆರಿಕಾದ ‘ಸ್ಯಾನ್ ಡೈಗೊ ಸ್ಟೇಟ್’ ಯೂನಿವರ್ಸಿಟಿಯ ಅಧ್ಯಯನವೊಂದು ಎಚ್ಚರಿಕೆ ನೀಡಿದೆ.

ಸ್ಮಾರ್ಟ್ಫೋನ್ ಮುಖ್ಯವಾಗಿ ಮಾನವನ ನಿದ್ದೆಯನ್ನು ಕದಿಯುತ್ತಿರುವುದರಿಂದಲೇ ಇಂತಹ ಪರಿಸ್ಥಿತಿ ಎದುರಾಗಿದೆ ಎಂದು ಅಧ್ಯಯನದಲ್ಲಿ ಹೇಳಲಾಗಿದ್ದು, ಹಾಗಾದರೆ, ಸ್ಮಾರ್ಟ್ಫೋನ್ ಹೆಚ್ಚು ಬಳಕೆಯಿಂದ ಉಂಟಾಗುವ ಪರಿಣಾಮಗಳೆನು? ಮಾನಸಿಕ ಖಿನ್ನತೆಗೆ ದಾರಿಯಾಗುತ್ತಿರುವುದು ಏಕೆ ಎಂಬುದನ್ನು ಇಂದಿನ ಲೇಖನದಲ್ಲಿ ತಿಳಿಯಿರಿ.ರಾತ್ರಿವೇಳೆ ಹೆಚ್ಚು ಮೊಬೈಲ್ ಬಳಕೆ ಇತ್ತೀಚಿನ ದಿನಗಳಲ್ಲಿ ರಾತ್ರಿ ಸಮಯದಲ್ಲಿ ಸ್ಮಾರ್ಟ್ಫೋನ್ ಬಳಕೆ ಮಾಡುವವರ ಪ್ರಮಾಣ ಹೆಚ್ಚಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಶೇ. 75 ಕ್ಕಿಂತ ಹೆಚ್ಚು ಯುವಜನರು ರಾತ್ರಿ ಸ್ಮಾರ್ಟ್ಫೋನ್ ಬಳಕೆಯಿಂದ ನಿದ್ದೆ ಮಾಡುತ್ತಿಲ್ಲ ಎಂಬ ಶಾಕಿಂಗ್ ವಿಷಯವನ್ನು ಅಧ್ಯಯನವು ತಿಳಿಸಿದೆ.

ಸಾವಿಗೆ ಸ್ಮಾರ್ಟ್ಫೋನ್ ದಾರಿ ನಿದ್ದೆ ಮಾಡುವ ಸಮಯದಲ್ಲಿ ಸ್ಮಾರ್ಟ್ಫೋನ್ ಬಳಕೆ ಮಾಡುವ ಪ್ರಮಾಣ ಹೆಚ್ಚಿರುವುದರಿಂದ ಮಾನವನ ಆರೋಗ್ಯ ಸ್ಥಿತಿ ಏರುಪೇರಾಗುತ್ತಿದೆ. ಇದು ಮಾನವನಲ್ಲಿ ಖಿನ್ನತೆ ಮೂಡಲು ಪ್ರಮುಖ ಕಾರಣವಾಗುತ್ತಿರುವ ಪರಿಣಾಮದಿಂದ ಆತ್ಮಹತ್ಯೆಯ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಹೇಳಲಾಗಿದೆ.ಖಿನ್ನತೆಗೆ ಜಾರಲು ಕಾರಣ ಏನು? ರಾತ್ರಿ ಸಮಯದಲ್ಲಿ ಸರಿಯಾಗಿ ನಿದ್ದೆ ಮಾಡದಿದ್ದರೆ ಮಾನವನ ಮೆದುಳಿನ ಮೇಲೆ ಹೆಚ್ಚು ಒತ್ತಡ ಬೀಳಲಿದೆ. ಇದರಿಂದ ನೆನಪಿನ ಶಕ್ತಿ ಮತ್ತು ಏಕಾಗ್ರತೆ ಮೇಲೆ ಪರಿಣಾಮಗಳು ಬೀರುತ್ತದೆ. ಹೀಗೆ ಪ್ರತಿದಿನವೂ ಅಭ್ಯಾಸವಾಗುತ್ತಾ ಓದರೆ ಮಾನವನ ಮೆದುಳು ಖಿನ್ನತೆಗೆ ಜಾರುತ್ತದೆ ಎಂದು ಹೇಳಲಾಗಿದೆ.

ಆರೋಗ್ಯ ಸಮಸ್ಯೆಗೆ ದಾರಿ ಮಾನವನ ದೇಹಕ್ಕೆ ಸರಿಯಾಗಿ ನಿದ್ದೆ ಸಿಗದಿದ್ದರೆ ಅವನ ಆರೋಗ್ಯದ ಮೇಲೆ ಪ್ರಭಾವ ಬೀರುತ್ತದೆ. ಮಧುಮೇಹ, ತಲೆನೊವ್ವುಗಳಂತಹ ಸಮಸ್ಯೆಗಳ ಜೊತೆಗೆ ಕ್ಯಾನ್ಸರ್ ಮತ್ತು ಬಬ್ರೈನ್ ಟ್ಯೂಮರ್ನಂತಹ ದೊಡ್ಡ ರೋಗಗಳೂ ಕೂಡ ಮಾನವನನ್ನು ಕಾಡುತ್ತವೆ ಎಂದು ವರದಿ ಹೇಳಿದೆ. ಇದು ಕೂಡ ಮುಂದೆ ಖಿನ್ನತೆಗೆ ಕಾರಣವಾಗುತ್ತದೆ. ಸ್ಮಾರ್ಟ್ಫೋನ್ ಬಳಕೆಗೆ ಮಿತಿಇದೆ ಮಾನವನಿಗೆ ಸ್ಮಾರ್ಟ್ಫೋನ್ ಬಿಟ್ಟಿರಲು ಸಾಧ್ಯವಿಲ್ಲ ಎನ್ನುವುದು ನಿಜ. ಆದರೆ, ಮಾನವನ ದೇಹಕ್ಕೆ ಮತ್ತು ಮನಸ್ಸಿಗೆ ಉಲ್ಲಾಸ ನೀಡುವ ನಿದ್ದೆಯನ್ನು ಕೂಡ ಈ ಸ್ಮಾರ್ಟ್ಫೋನ್ ಕಸಿದುಕೊಳ್ಳುತ್ತಿರುವುದು ಎಚ್ಚರಿಕೆಯ ವಿಷಯವಾಗಿದೆ. ಹಾಗಾಗಿ, ಸ್ಮಾರ್ಟ್ಫೋನ್ ಬಳಕೆಗೆ ಒಂದು ಮಿತಿಇದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಶ್ಚಿಮ ಬಂಗಾಳವನ್ನು ಹೊರತುಪಡಿಸಿ ಜುಲೈ 1 ರೊಳಗೆ ಜಿಎಸ್ಟಿ ಹೊರತರಲು ಕೇಂದ್ರ ಮತ್ತು ರಾಜ್ಯಸರ್ಕಾರಗಳು ನಿರ್ಧರಿಸಿವೆ. ಹಾಗಾದರೆ GST ಎಂದರೇನು? …
ಕಿಮೊಥೆರಪಿ ಹಾಗು ರೇಡಿಯೇಶನ್ ಥೆರಪಿ ಮಾಡಿಸಿಕೊಂಡಲ್ಲಿ ಕೂದಲು ಉದುರುವಿಕೆ ಅಥವಾ ಅಲೋಪಿಶಿಯಾವು ಒಂದು ಪ್ರಧಾನ ಅಡ್ಡ ಪರಿಣಾಮವಾಗಿ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಕೂದಲು ಉದುರುವಿಕೆಯು ಭಾಗಶಃ ಕಾಣಿಸಿಕೊಳ್ಳಬಹುದು ಅಥವಾ ಮುಖ, ಕೈ, ತಲೆ, ಕಾಲು, ಕಂಕುಳು ಹಾಗು ಜನನಾಂಗದ ಭಾಗದ ಮೇಲಿರುವ ಕೂದಲುಗಳೆಲ್ಲಾ ಸಹ ಉದುರಲು ಆರಂಭಿಸಬಹುದು.
ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿಗೆ ಸೇರಿದ ಒಂದು ಪುಣ್ಯ ಕ್ಷೇತ್ರ ರಾಮನಾಥಪುರ . ಹಾಸನದಿಂದ ದಕ್ಕಿಣಕ್ಕೆ 49ಕಿ.ಮೀ ಹಾಗೂ ತಾಲೂಕು ಕೇಂದ್ರ ಅರಕಲಗೂಡಿನಿಂದ 19ಕಿ.ಮೀ ಅಂತರದಲ್ಲಿ ಕಾವೇರಿ ನದಿ ದಡದಲ್ಲಿದೆ. ಈ ಕ್ಷೇತ್ರವು ದಕ್ಷಿಣಕಾಶಿ ಎಂದು ಪ್ರಖ್ಯಾತಿಗೊಂಡ್ಡು ರಾರಾಜಿಸುತ್ತದೆ.
ನವದೆಹಲಿ, ದೇಶಾದ್ಯಂತ ಮುಂಗಾರು ಮಳೆ ಆರ್ಭಟದಿಂದಾಗಿ ಪೂರೈಕೆ ಕುಸಿತವಾದ ಬೆನ್ನಲ್ಲೇ, ಈರುಳ್ಳಿ ದರದಲ್ಲಿ ಭಾರೀ ಹೆಚ್ಚಳವಾಗಿದ್ದು, 20-30 ರು.ಗೆ ಬಿಕರಿಯಾಗುತ್ತಿದ್ದ ಈರುಳ್ಳಿ ದರ ಒಂದೇ ವಾರದಲ್ಲಿ 70-80ರು.ಗೆ ಏರಿಕೆಯಾಗಿದೆ. ಈರುಳ್ಳಿ ಬೆಳೆಯವ ರಾಜ್ಯಗಳಲ್ಲಿ ವಿಪರೀತ ಮಳೆ ಹಾಗೂ ಪೂರೈಕೆ ಕೊರತೆಯಿಂದಾಗಿ ಬೆಲೆ ಹೆಚ್ಚಾಗಿದೆ. ಅತೀ ಹೆಚ್ಚು ಈರುಳ್ಳಿ ಬೆಳೆಯುವ ಮಹಾರಾಷ್ಟ್ರ, ಕರ್ನಾಟಕ, ಆಂಧ್ರ ಪ್ರದೇಶ, ಗುಜರಾತ್, ಪೂರ್ವ ರಾಜಸ್ತಾನ ಹಾಗೂ ಪಶ್ಚಿಮ ಮಧ್ಯಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಬೆಳೆ ನಾಶ ಹಾಗೂ ಸಾಗಣೆ ಸ್ಥಗಿತದಿಂದಾಗಿ…
ಹೌದು, ನೀವು ಕೇಳಿದ್ದು ನಿಜ…ಈ ಜಗತ್ತಿನಲ್ಲಿ ಏನೆಲ್ಲಾ ವಿಸ್ಮಯ ಅಚ್ಚರಿಗಳು ನಡೆಯುತ್ತವೆ ಎಂಬುದಕ್ಕೆ ಇದು ಒಂದು ಉದಾಹರಣೆಯಾಗಿದೆ.ನಾವೆಲ್ಲಾ ಕೋಳಿ,ಪಕ್ಷಿಗಳು,ಹಾವುಗಳು ಹಾಗೂ ಕೆಲವೊಂದು ಜೀವಿಗಳು ಮೊಟ್ಟೆ ಇಡುವುದನ್ನು ಕೇಳಿದ್ದೇವೆ.ಆದರೆ ಮನುಷ್ಯ ಮೊಟ್ಟೆ ಇದುತ್ತಾನೆಂದ್ರೆ ಇದು ಎಂತಹವರಿಗೂ ನಂಬೋದಕ್ಕೆ ಅಸಾಧ್ಯ ಆಲ್ವಾ…
ಮಾಲೂರಿನ ‘ಯಶವಂತಪುರ’ ಗ್ರಾಮ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಆಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಹಯೋಗದಲ್ಲಿ ರೂಪಿಸಿರುವ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಇದನ್ನು ಮಾಲೂರಿನ ಶಾಸಕ ಎಸ್.ಮಂಜುನಾಥ್ ಗೌಡ ಉದ್ಘಾಟನೆ ಮಾಡುವ ಮೂಲಕ ಲೋಕಾರ್ಪಣೆ ಮಾಡಿದರು.