ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಗನಮುಖಿಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಿಂದಾಗಿ ಬಹುತೇಕ ವಾಹನ ಖರೀದಿದಾರರು ಇದೀಗ ಎಲೆಕ್ಟ್ರಿಕ್ ವಾಹನಗಳತ್ತ ಮುಖಮಾಡುತ್ತಿದ್ದು, ಹೀಗಿರುವಾಗ ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್ನಿಂದ ಪೆಟ್ರೋಲ್ ಸಿದ್ದಪಡಿಸಿರುವ ಎಂಜಿನಿಯರ್ ಒಬ್ಬರು ಅತಿ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದಾರೆ.

ಹೌದು, ಸದ್ಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದಿನದಿಂದ ದಿನಕ್ಕೆ ದುಬಾರಿಯಾಗುತ್ತಿರುವ ದಿನಗಳಲ್ಲಿ ಅಗ್ಗದ ಬೆಲೆಯಲ್ಲಿ ಪೆಟ್ರೋಲ್ ಉತ್ಪಾದನೆ ಮಾಡಬಲ್ಲ ಹೊಸ ತಂತ್ರಜ್ಞಾನವನ್ನು ಸಿದ್ದಪಡಿಸಿದ್ದು, ಪರಿಸರಕ್ಕೆ ಮಾರಕವಾಗಿ ಪರಿಣಮಿಸಿರುವ ಪ್ಲಾಸ್ಟಿಕ್ ಅನ್ನೇ ಬಳಕೆ ಮಾಡಿಕೊಂಡು ಈ ಹೊಸ ಆವಿಷ್ಕಾರವನ್ನು ಮಾಡಲಾಗಿದೆ. ಹೈದ್ರಾಬಾದ್ ಮೂಲದ ಮೆಕ್ಯಾನಿಕಲ್ ಎಂಜಿನಿಯರ್ ಪ್ರೋ. ಸತೀಶ್ ಎನ್ನುವರೇ ಇದರ ರೂವಾರಿಯಾಗಿದ್ದು, ನಗರದಲ್ಲಿ ದಿನಂಪ್ರತಿ ಸಂಗ್ರಹವಾಗುವ ಪ್ಲಾಸ್ಟಿಕ್ ತ್ಯಾಜ್ಯದಿಂದಲೇ ಪೆಟ್ರೋಲ್ ಸಿದ್ದಪಡಿಸುತ್ತಿದ್ದಾರೆ.

ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಸಮಸ್ಯೆಯನ್ನು ತಗ್ಗಿಸುವುದು ಹೇಗೆ ಪ್ರಶ್ನೆ ಮುಂದಿಟ್ಟು ಹೊಸ ಪ್ರಯತ್ನ ನಡೆಸುತ್ತಿದ್ದಾಗಲೇ ಪೆಟ್ರೋಲ್ ಉತ್ಪಾದನೆ ಸಾಧ್ಯತೆ ಕುರಿತು ಎಂಜಿನಿಯರ್ ಸತೀಸ್ ಅವರು ಹೊಸ ಪ್ರಯೋಗ ಮಾಡಿ ಇಂತದೊಂದು ಮಹತ್ವದ ಯೋಜನೆಯನ್ನು ಕಾರ್ಯರೂಪಕ್ಕೆ ತಂದಿದ್ದಾರೆ.ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್ ತಾಜ್ಯವನ್ನು ಪ್ರಮುಖ ಮೂರು ಹಂತಗಳಲ್ಲಿ ರಸಾಯನಿಕ ಪ್ರಕ್ರಿಯೆಗಳ ಮೂಲಕ ಸಂಸ್ಕರಿಸಿ ಮಾಡಿದ ನಂತರವಷ್ಟೇ ಪೆಟ್ರೋಲ್ ಮತ್ತು ಡೀಸೆಲ್ ಉತ್ಪನ್ನವನ್ನು ಸಿದ್ದಪಡಿಸಲಾಗಿದ್ದು, ಪರಿಸರಕ್ಕೆ ಮಾರಕವಾಗದಂತೆ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಸ್ಕರಿಸಿ ಈ ಹೊಸ ಪೆಟ್ರೋಲ್ ಮಾದರಿಯನ್ನು ಸಿದ್ದಗೊಳಿಸಲಾಗಿದೆ.

2016ರಿಂದಲೇ ಎಂಜಿನಿಯರ್ ಸತೀಶ್ ಅವರು ಈ ಪ್ರಯೋಗ ಮಾಡುತ್ತಿದ್ದು, ಪ್ರತಿ ದಿನ ಕನಿಷ್ಠ 200 ಕೆಜಿ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಸ್ಕರಿಸಿ ಕನಿಷ್ಠ 200 ಲೀಟರ್ ಪೆಟ್ರೋಲ್ ಉತ್ಪಾದನೆ ಮಾಡುತ್ತಿದ್ದಾರೆ. ಕಳೆದ ಮೂರುವರೇ ವರ್ಷಗಳಲ್ಲಿ ಬರೋಬ್ಬರಿ 50 ಟನ್ ಪ್ಲಾಸ್ಟಿಕ್ ಅನ್ನು ಪೆಟ್ರೋಲ್ ಆಗಿ ಪರಿವರ್ತನೆ ಮಾಡಿರುವ ಪ್ರೋ. ಸತೀಸ್ ಅವರು, ಅತಿ ಕಡಿಮೆ ಬೆಲೆಯಲ್ಲಿ ಸ್ಥಳೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ಉತ್ಪನ್ನವನ್ನು ಮಾರಾಟ ಮಾಡುತ್ತಿದ್ದಾರೆ.
ಪ್ರತಿ ಲೀಟರ್ಗೆ ರೂ. 40ರಿಂದ ರೂ. 50 ಮಾತ್ರ..! ಸದ್ಯ ಪ್ರೋ. ಸತೀಶ್ ಅವರು ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ಗೆ ರೂ.40ರಿಂದ ರೂ.50ಕ್ಕೆ ಮಾರಾಟ ಮಾಡುತ್ತಿದ್ದು, ಸ್ಥಳೀಯ ಕೈಗಾರಿಕಾ ಕೇಂದ್ರಗಳೇ ಇದರ ಪ್ರಮುಖ ಗ್ರಾಹಕರಾಗಿದ್ದಾರೆ.ವಾಹನಗಳಲ್ಲಿ ಬಳಕೆ ಯೋಗ್ಯವೇ? ಪ್ಲಾಸ್ಟಿಕ್ನಿಂದ ತಯಾರಿಸಲಾದ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳಲ್ಲಿ ಬಳಕೆ ಕುರಿತಂತೆ ಹಲವು ಪ್ರಯತ್ನಗಳು ನಡೆದಿದ್ದರೂ ಇದುವರೆಗೂ ಅಧಿಕೃತವಾದ ಟೆಸ್ಟಿಂಗ್ ನಡೆಸಿಲ್ಲ. ಹೀಗಾಗಿ ಮುಂಬರುವ ದಿನಗಳಲ್ಲಿ ಈ ಕುರಿತು ಅಧಿಕೃತ ಟೆಸ್ಟಿಂಗ್ ನಡೆಸಿದ ನಂತರವಷ್ಟೇ ಇದು ವಾಹನಗಳಲ್ಲಿ ಬಳಕೆಗೆ ಯೋಗ್ಯವೇ ಎಂಬುದು ತಿಳಿದು ಬರಲಿದೆ.

ಸದ್ಯಕ್ಕೆ ಕೈಗಾರಿಕೊದ್ಯಮದಲ್ಲಿ ಮಾತ್ರವೇ ಈ ತೈಲ ಉತ್ಪನ್ನ ಬಳಕೆ ಮಾಡಲಾಗುತ್ತಿದ್ದು, ಒಂದು ವೇಳೆ ವಾಹನಗಳಲ್ಲಿಯೂ ಬಳಕೆಗೆ ಯೋಗ್ಯ ಎಂದಾದಲ್ಲಿ ಇದೊಂದು ಮಹತ್ವದ ಯೋಜನೆಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಯಾಕೆಂದ್ರೆ ದೇಶಾದ್ಯಂತ ದಿನಂಪ್ರತಿ ಉತ್ಪಾದನೆಯಾಗುವ ಸಾವಿರಾರು ಟನ್ ಪ್ಲಾಸ್ಟಿಕ್ ತ್ಯಾಜ್ಯಕ್ಕೂ ಮುಂದೊಂದು ದಿನ ಭಾರೀ ಬೇಡಿಕೆ ಬಂದರೂ ಅಚ್ಚರಿಯಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಿಕ್ ಟಾಕ್ ಹಾವಳಿ ಎಲ್ಲೇ ಮೀರುತ್ತಿದೆ. ಈ ಆ್ಯಪ್ ನಿಷೇಧವಾಗಬೇಕೆಂಬ ಕೂಗು ಕೇಳಿಬರುತ್ತಿರುವ ಬೆನ್ನಲ್ಲೇ ಟಿಕ್ಟಾಕ್ ಆ್ಯಪ್ನಿಂದ ಜೀವ ಕಳೆದುಕೊಳ್ಳುತ್ತಿರುವವ ಸಂಖ್ಯೆಯೂ ಹೆಚ್ಚುತ್ತಿದೆ. ತುಮಕೂರಿನಲ್ಲಿ ಯುವಕನೊರ್ವ ಪ್ರಾಣ ಕಳೆದುಕೊಂಡ ಬೆನ್ನಲ್ಲೇ, ಇದೀಗ ಕೋಲಾರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಟಿಕ್ಟಾಕ್ ಕ್ರೇಜ್ಗೆ ಬಲಿಯಾಗಿದ್ದಾಳೆ. ಮಾಲಾಗೆ ವಿಪರೀತ ಟಿಕ್ಟಾಕ್ ಗೀಳು ಅಂಟಿಕೊಂಡಿತ್ತು. ಹೀಗಾಗಿ ಕೂತಲ್ಲಿ ನಿಂತಲ್ಲಿ ಟಿಕ್ಟಾಕ್ ಚಿತ್ರೀಕರಿಸುತ್ತಿದ್ದಳು. ಇದೇ ರೀತಿ ಅಪಾಯಕಾರಿ ಕೃಷಿ ಹೊಂಡದ ಬಳಿ ಟಿಕ್ಟಾಕ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾಳೆ. ಕೋಲಾರದ ಸರಕಾರಿ ಮಹಿಳಾ ಕಾಲೇಜಿನಲ್ಲಿ ಮಾಲಾ…
ಮನೆ ಬಾಗಿಲಿಗೆ ಆಹಾರ ವಿತರಿಸುವ ಜೊಮ್ಯಾಟೋ ವಿತರಕ ವ್ಯವಸ್ಥೆ ಆರಂಭವಾದಾಗಿನಿಂದಲೂ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇದೆ. ಇದೀಗ ಜೊಮ್ಯಾಟೋ ಡೆಲಿವರಿ ಬಾಯ್ ವಿರುದ್ಧ ವಿಚಿತ್ರ ಆರೋಪವೊಂದು ಕೇಳಿಬಂದಿದ್ದು ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಹೌದು ಮಹಾರಾಷ್ಟ್ರದ ಪುಣೆಯಲ್ಲಿ ಇಂತಹದೊಂದು ವಿಚಿತ್ರ ಘಟನೆ ನಡೆದಿದ್ದು ಫುಡ್ ಡೋರ್ ಸ್ಟೆಪ್ ಡೆಲಿವರಿ ಮಾಡುವ ಜೊಮ್ಯಾಟೋ ಡೆಲಿವರಿ ಬಾಯ್ ವಿರುದ್ಧ ನಾಯಿ ಕಳ್ಳತನದ ಆರೋಪ ಕೇಳಿ ಬಂದಿದೆ. ಪುಣೆಯ ಕಾವೇರಿ ರಸ್ತೆಯಲ್ಲಿ ವಾಸವಾಗಿರುವ ವಂದನಾ ಎಂಬಾಕೆ ಜೊಮ್ಯಾಟೋದಲ್ಲಿ ಫುಡ್ ಆರ್ಡರ್ ಮಾಡಿದ್ದು…
ಕನ್ನಡ ಪರ ಸಂಘಟನೆಗಳ ಪ್ರತಿಭಟನೆಯ ಹಿನ್ನಲೆಯಲ್ಲಿ ಬಾಹುಬಲಿ 2 ಚಿತ್ರ ರಾಜ್ಯದಲ್ಲಿ ಬಿಡುಗಡೆಯಾಗವ ಬಗ್ಗೆಯೇ ಹಲವು ಪ್ರಶ್ನೆಗಳು ಎದ್ದಿದ್ದವು. ಕಡೆಗೂ ಕಟ್ಟಪ್ಪ ಪಾತ್ರಧಾರಿ ಸತ್ಯರಾಜ್ ತಮ್ಮ ಹೇಳಿಕೆಯ ಕುರಿತು ಕ್ಷಮೆಯಾಚಿಸಿದ ಬಳಿಕ ಚಿತ್ರ ಬಿಡುಗೆಡೆಯಾಗಿ ಚಿತ್ರಮಂದಿಗಳು ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿಕೊಂಡಿದ್ದವು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(5 ಜನವರಿ, 2019) ನಿಮ್ಮಲ್ಲಿ ಸಾಮರ್ಥ್ಯದ ಕೊರತೆಯಿರದೇ ಇಚ್ಛಾಶಕ್ತಿಯ ಕೊರತೆಯಿದೆಯೆಂದು ನೀವು ಅರ್ಥಮಾಡಿಕೊಳ್ಳಬೇಕು….
ಸಾಮಾನ್ಯವಾಗಿ ಕಿಡ್ನಿ ಸ್ಟೋನ್ ಅನ್ನುವುದು ಈಗ ಎಲ್ಲರಿಗು ಸಾಮಾನ್ಯವಾದ ವಿಷಯ ಇದಕ್ಕೆ ಎಲ್ಲರು ಹಾಸ್ಪಿಟಲ್ಗೆ ಹೋಗಿ ಚಿಕಿತ್ಸೆ ಪಡೆಯುತ್ತಾರೆ ಮತ್ತು ಇನ್ನು ಸ್ವಲ್ಪ ಜನ ನಾಟಿ ಔಷದಿ ಪಡೆಯುತ್ತಾರೆ. ಆದರೆ ಇಲ್ಲಿದೆ ನೋಡಿ ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುತ್ತದೆ.ಇದಕ್ಕೆ ನೀವು ಜಾಸ್ತಿ ಏನು ಖರ್ಚು ಮಾಡಬೇಕಿಲ್ಲ. ಅದ್ಬುತವಾದ ಪಲ್ಯ ಮಾಡೊದು ಹೇಗೆ ಎಂದು ತಿಳಿಯಲು ಇದನ್ನೊಮ್ಮೆ ಓದಿ.ಬಾಳೆದಿಂಡಿನ ಪಲ್ಯವನ್ನು ಮಾಡುವುದು ಹೇಗೆ ಎಂಬುದನ್ನು ನಾನು ನಿಮಗೆ ತಿಳಿಸುತ್ತೇನೆ ಮೊದಲಿಗೆ ಬಾಳೆದಿಂಡನ್ನು…
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಉಡುಪಿ ಮೊದಲ ಸ್ಥಾನ ಪಡೆದುಕೊಂಡಿದ್ದರೆ ಚಿತ್ರದುರ್ಗ ಕೊನೆಯ ಸ್ಥಾನ ಪಡೆದು ಕಳಪೆ ಫಲಿತಾಂಶ ಪಡೆದ ಜಿಲ್ಲೆಯಾಗಿದೆ. ಈ ಸಲದ ದ್ವಿತೀಯ ಪರೀಕ್ಷೆಯಲ್ಲಿ ಕೂಡ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಅದರಲ್ಲಿಯೂ ಪಂಕ್ಚರ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಕುಸುಮ ಎಂಬುವವರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವುದು ವಿಶೇಷವಾಗಿದೆ. ಬಳ್ಳಾರಿಯ ಕೊಟ್ಟೂರಿನಲ್ಲಿ ಸೈಕಲ್ ಶಾಪ್ನಲ್ಲಿ ನಡೆಸುತ್ತಿದ್ದ ದೇವೇಂದ್ರಪ್ಪ ಮತ್ತು ಜಯಮ್ಮ ಎಂಬುವವರ ಪುತ್ರಿ ಕುಸುಮಾ ಸೈಕಲ್ ಶಾಪ್ನಲ್ಲಿ ಪಂಕ್ಚರ್ ಹಾಕುವ ಕೆಲಸ…