ಸುದ್ದಿ

ಪ್ಲಾಸ್ಟಿಕ್‌ನಿಂದ ತಯಾರಿಗೊಂಡ ಈ ಪೆಟ್ರೋಲ್ ದರವನ್ನು ಕೇಳಿದರೆ ನೀವು ಅಚ್ಚರಿಪಡುವುದು ಕಂಡಿತ

42

ಗಗನಮುಖಿಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಿಂದಾಗಿ ಬಹುತೇಕ ವಾಹನ ಖರೀದಿದಾರರು ಇದೀಗ ಎಲೆಕ್ಟ್ರಿಕ್ ವಾಹನಗಳತ್ತ ಮುಖಮಾಡುತ್ತಿದ್ದು, ಹೀಗಿರುವಾಗ ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್‌ನಿಂದ ಪೆಟ್ರೋಲ್ ಸಿದ್ದಪಡಿಸಿರುವ ಎಂಜಿನಿಯರ್‌ ಒಬ್ಬರು ಅತಿ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದಾರೆ.

ಹೌದು, ಸದ್ಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದಿನದಿಂದ ದಿನಕ್ಕೆ ದುಬಾರಿಯಾಗುತ್ತಿರುವ ದಿನಗಳಲ್ಲಿ ಅಗ್ಗದ ಬೆಲೆಯಲ್ಲಿ ಪೆಟ್ರೋಲ್ ಉತ್ಪಾದನೆ ಮಾಡಬಲ್ಲ ಹೊಸ ತಂತ್ರಜ್ಞಾನವನ್ನು ಸಿದ್ದಪಡಿಸಿದ್ದು, ಪರಿಸರಕ್ಕೆ ಮಾರಕವಾಗಿ ಪರಿಣಮಿಸಿರುವ ಪ್ಲಾಸ್ಟಿಕ್ ಅನ್ನೇ ಬಳಕೆ ಮಾಡಿಕೊಂಡು ಈ ಹೊಸ ಆವಿಷ್ಕಾರವನ್ನು ಮಾಡಲಾಗಿದೆ. ಹೈದ್ರಾಬಾದ್ ಮೂಲದ ಮೆಕ್ಯಾನಿಕಲ್ ಎಂಜಿನಿಯರ್ ಪ್ರೋ. ಸತೀಶ್ ಎನ್ನುವರೇ ಇದರ ರೂವಾರಿಯಾಗಿದ್ದು, ನಗರದಲ್ಲಿ ದಿನಂಪ್ರತಿ ಸಂಗ್ರಹವಾಗುವ ಪ್ಲಾಸ್ಟಿಕ್ ತ್ಯಾಜ್ಯದಿಂದಲೇ ಪೆಟ್ರೋಲ್ ಸಿದ್ದಪಡಿಸುತ್ತಿದ್ದಾರೆ.

ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಸಮಸ್ಯೆಯನ್ನು ತಗ್ಗಿಸುವುದು ಹೇಗೆ ಪ್ರಶ್ನೆ ಮುಂದಿಟ್ಟು ಹೊಸ ಪ್ರಯತ್ನ ನಡೆಸುತ್ತಿದ್ದಾಗಲೇ ಪೆಟ್ರೋಲ್ ಉತ್ಪಾದನೆ ಸಾಧ್ಯತೆ ಕುರಿತು ಎಂಜಿನಿಯರ್ ಸತೀಸ್ ಅವರು ಹೊಸ ಪ್ರಯೋಗ ಮಾಡಿ ಇಂತದೊಂದು ಮಹತ್ವದ ಯೋಜನೆಯನ್ನು ಕಾರ್ಯರೂಪಕ್ಕೆ ತಂದಿದ್ದಾರೆ.ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್ ತಾಜ್ಯವನ್ನು ಪ್ರಮುಖ ಮೂರು ಹಂತಗಳಲ್ಲಿ ರಸಾಯನಿಕ ಪ್ರಕ್ರಿಯೆಗಳ ಮೂಲಕ ಸಂಸ್ಕರಿಸಿ ಮಾಡಿದ ನಂತರವಷ್ಟೇ ಪೆಟ್ರೋಲ್ ಮತ್ತು ಡೀಸೆಲ್ ಉತ್ಪನ್ನವನ್ನು ಸಿದ್ದಪಡಿಸಲಾಗಿದ್ದು, ಪರಿಸರಕ್ಕೆ ಮಾರಕವಾಗದಂತೆ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಸ್ಕರಿಸಿ ಈ ಹೊಸ ಪೆಟ್ರೋಲ್ ಮಾದರಿಯನ್ನು ಸಿದ್ದಗೊಳಿಸಲಾಗಿದೆ.

2016ರಿಂದಲೇ ಎಂಜಿನಿಯರ್ ಸತೀಶ್ ಅವರು ಈ ಪ್ರಯೋಗ ಮಾಡುತ್ತಿದ್ದು, ಪ್ರತಿ ದಿನ ಕನಿಷ್ಠ 200 ಕೆಜಿ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಸ್ಕರಿಸಿ ಕನಿಷ್ಠ 200 ಲೀಟರ್ ಪೆಟ್ರೋಲ್ ಉತ್ಪಾದನೆ ಮಾಡುತ್ತಿದ್ದಾರೆ. ಕಳೆದ ಮೂರುವರೇ ವರ್ಷಗಳಲ್ಲಿ ಬರೋಬ್ಬರಿ 50 ಟನ್ ಪ್ಲಾಸ್ಟಿಕ್ ಅನ್ನು ಪೆಟ್ರೋಲ್ ಆಗಿ ಪರಿವರ್ತನೆ ಮಾಡಿರುವ ಪ್ರೋ. ಸತೀಸ್ ಅವರು, ಅತಿ ಕಡಿಮೆ ಬೆಲೆಯಲ್ಲಿ ಸ್ಥಳೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ಉತ್ಪನ್ನವನ್ನು ಮಾರಾಟ ಮಾಡುತ್ತಿದ್ದಾರೆ.

ಪ್ರತಿ ಲೀಟರ್‌ಗೆ ರೂ. 40ರಿಂದ ರೂ. 50 ಮಾತ್ರ..! ಸದ್ಯ ಪ್ರೋ. ಸತೀಶ್ ಅವರು ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್‌ಗೆ ರೂ.40ರಿಂದ ರೂ.50ಕ್ಕೆ ಮಾರಾಟ ಮಾಡುತ್ತಿದ್ದು, ಸ್ಥಳೀಯ ಕೈಗಾರಿಕಾ ಕೇಂದ್ರಗಳೇ ಇದರ ಪ್ರಮುಖ ಗ್ರಾಹಕರಾಗಿದ್ದಾರೆ.ವಾಹನಗಳಲ್ಲಿ ಬಳಕೆ ಯೋಗ್ಯವೇ? ಪ್ಲಾಸ್ಟಿಕ್‌ನಿಂದ ತಯಾರಿಸಲಾದ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳಲ್ಲಿ ಬಳಕೆ ಕುರಿತಂತೆ ಹಲವು ಪ್ರಯತ್ನಗಳು ನಡೆದಿದ್ದರೂ ಇದುವರೆಗೂ ಅಧಿಕೃತವಾದ ಟೆಸ್ಟಿಂಗ್ ನಡೆಸಿಲ್ಲ. ಹೀಗಾಗಿ ಮುಂಬರುವ ದಿನಗಳಲ್ಲಿ ಈ ಕುರಿತು ಅಧಿಕೃತ ಟೆಸ್ಟಿಂಗ್ ನಡೆಸಿದ ನಂತರವಷ್ಟೇ ಇದು ವಾಹನಗಳಲ್ಲಿ ಬಳಕೆಗೆ ಯೋಗ್ಯವೇ ಎಂಬುದು ತಿಳಿದು ಬರಲಿದೆ.

ಸದ್ಯಕ್ಕೆ ಕೈಗಾರಿಕೊದ್ಯಮದಲ್ಲಿ ಮಾತ್ರವೇ ಈ ತೈಲ ಉತ್ಪನ್ನ ಬಳಕೆ ಮಾಡಲಾಗುತ್ತಿದ್ದು, ಒಂದು ವೇಳೆ ವಾಹನಗಳಲ್ಲಿಯೂ ಬಳಕೆಗೆ ಯೋಗ್ಯ ಎಂದಾದಲ್ಲಿ ಇದೊಂದು ಮಹತ್ವದ ಯೋಜನೆಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಯಾಕೆಂದ್ರೆ ದೇಶಾದ್ಯಂತ ದಿನಂಪ್ರತಿ ಉತ್ಪಾದನೆಯಾಗುವ ಸಾವಿರಾರು ಟನ್ ಪ್ಲಾಸ್ಟಿಕ್ ತ್ಯಾಜ್ಯಕ್ಕೂ ಮುಂದೊಂದು ದಿನ ಭಾರೀ ಬೇಡಿಕೆ ಬಂದರೂ ಅಚ್ಚರಿಯಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಕೋಲಾರದಲ್ಲಿ ಜೆಡಿಎಸ್ vs ಪಕ್ಷೇತರ- ಈ ಬಾರಿ ಜೆಡಿಎಸ್ ಅಭ್ಯರ್ಥಿ ಯಾರು? ವರ್ತೂರ್ ಪ್ರಕಾಶರ ಕೊನೆಯ ಎರಡು ಚುನಾವಣೆ ಫಲಿತಾಂಶ ನೋಡಿ

    ಜೆಡಿಎಸ್ ಪ್ರಭಾವ ಮತ್ತು ಅತಿಹೆಚ್ಚು ಒಕ್ಕಲಿಗ ಜಾತಿ ಬೆಂಬಲ ಈ ಭಾರಿ ಜೆಡಿಎಸ್? ಅಥವಾ ಕಳೆದ ಭಾರಿಯ ರೀತಿ ಈ ಭಾರಿಯೂ ಪಕ್ಷೇತರ ನ?

  • ಉಪಯುಕ್ತ ಮಾಹಿತಿ

    ಭಾರಿ ಮೊತ್ತದ ಅಪಘಾತ ವಿಮೆ ಪರಿಚಯಿಸಿದ ಅಂಚೆ ಇಲಾಖೆ

    ಬೆಂಗಳೂರು: ಜನಸಾಮಾನ್ಯರಿಗೆ ನೆರವಾಗಲೆಂದು ಭಾರತೀಯ ಅಂಚೆ ಇಲಾಖೆಯು. ಅತ್ಯಂತ ಕಡಿಮೆ. ಹಣದಲ್ಲಿ ಭಾರಿ ಮೊತ್ತದ. ಅಪಘಾತ ವಿಮೆಯನ್ನು ಪರಿಚಯಿಸಿದೆ. ಆಕಸ್ಮಿಕ ಅವಘಡಗಳಿಗೆ ತುತ್ತಾದಾಗ ಅಂಚೆ ಕಚೇರಿಯ ಈ ಅಲ್ಪ ಮೊತ್ತದ ಅಪಘಾತ ವಿಮೆ ಆರ್ಥಿಕವಾಗಿ ಸಹಾಯಕ್ಕೆ ಬರಲಿದೆ. ಕನಿಷ್ಠೆ 18ರಿಂದ ಗರಿಷ್ಠ 65ವರ್ಷದ ಒಳಗಿನವರು ಕೂಡಲೇ ಖಾತೆ 1 ತೆರೆದು ಈ ವಿಮೆಯ ಅನುಕೂಲ ಪಡೆಯಬಹುದಾಗಿದೆ. ಹತ್ತಾರು. ಆಕಸ್ಮಿಕ ಅಪಘಾತಗಳಿಗೆ ಪರಿಹಾರ ಪಡೆಯಲು ಕೂಡಲೇ ಈ ವಿಮೆಯ ಪ್ರಯೋಜನ ಪಡೆಯಬಹುದಾಗಿದೆ. ನಿಮ್ಮ ಹತ್ತಿರದ. ಅಂಚೆ ಕಚೇರಿಗೆ ತೆರಳಿ…

  • ಉಪಯುಕ್ತ ಮಾಹಿತಿ

    ಬಿಳಿ ಎಕ್ಕದ ಗಿಡದಿಂದ ಈ ರೀತಿ ಮಾಡಿದರೆ ನಿಮ್ಮ ಮನೆಯಲ್ಲಿ ಸಕಲ ಐಶ್ವರ್ಯ ವೃದ್ಧಿಸುತ್ತದೆ.!

    ಈ ಒಂದು ಗಿಡದ ಬಗ್ಗೆ ನಮ್ಮ ಪೂರ್ವಜರು ಹೇಳುವ ಹಾಗೆ ಬಿಳಿ ಎಕ್ಕದ ಗಿಡವೊಂದು ಮನೆಯಲ್ಲಿ ಇದ್ದರೆ ಸಕಲ ಐಶ್ವರ್ಯ, ಅಂತಸ್ತು ವೃದ್ಧಿಯಾಗುತ್ತದೆ, ಹಣಕಾಸಿನ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ ಎಂಬ ಮಾತಿದೆ. ಮನೆಯಲ್ಲಿ ಶಾಂತಿ, ನೆಮ್ಮದಿ, ಹಣಕಾಸಿನ ವ್ಯವಹಾರಗಳು ಇಂಥ ಎಲ್ಲಾ ತೊಂದರೆಗಳಿಗೆ ಬಿಳಿ ಎಕ್ಕದ ಗಿಡ ರಾಮಬಾಣ ಎಂದೇ ಹೇಳಬಹುದು. ಆನೇಕ ಜನರು ತಮ್ಮ ವ್ಯವಹಾರ, ವಹಿವಾಟುಗಳಲ್ಲಿ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿರುತ್ತಾರೆ. ಜೊತೆಗೆ ಹಣಕಾಸಿನ ವಿಚಾರಗಳಲ್ಲಿ ಹಿನ್ನಡೆಯನ್ನು ಅನುಭವಿಸುತ್ತ ಸಾಲಭಾದೆಯಲ್ಲಿ ಸಿಲುಕಿ ಕಷ್ಟದ ಪರಿಸ್ಥಿತಿಯಲ್ಲಿ ಇರುತ್ತಾರೆ….

  • ಸಂಬಂಧ

    ನಾಗಿಣಿ ಡ್ಯಾನ್ಸ್ ಮಾಡಿದ್ರಿಂದ, ಆಗಬೇಕಿದ್ದ ಮದುವೇನೇ ನಿಂತುಹೋಯಿತು!ಶಾಕ್ ಆಗ್ಬೇಡಿ,ಈ ಲೇಖನಿ ಓದಿ..

    ಈಗಿನ ಮದುವೆಗಳ ಟ್ರೆಂಡೇ ಬದಲಾಗಿದೆ.ಮದುವೆ ಸಮಾರಂಭಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸುವುದರ ಜೊತೆಗೆ,ವಧು-ವರರು ಡ್ಯಾನ್ಸ್ ಮಾಡುವುದು ಸಾಮಾನ್ಯ.ಆದ್ರೆ ಇಲ್ಲೊಂದು ಮದುವೆಯಲ್ಲಿ ವರ ಡ್ಯಾನ್ಸ್ ಮಾಡಿದ್ದರಿಂದ, ವಧು ಮದುವೆಯನ್ನೇ ತಿರಸ್ಕರಿಸಿದ ಘಟನೆ ನಡೆದಿದೆ.

  • ಸುದ್ದಿ

    ‘ಸರ್ಕಾರಿ ಆಸ್ಪತ್ರೆ’ ವೈದ್ಯರಿಗೆ ಖಡಕ್ ಹೆಚ್ಚರಿಕೆ ನೀಡಿದ ಬಿ.ಶ್ರೀರಾಮುಲು…!

    ಈ ಸರ್ಕಾರದಲ್ಲಿ ನಾನು ಆರೋಗ್ಯ ಮಂತ್ರಿಯಾಗಿ ಕೆಲಸ ಮಾಡುತ್ತಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡೋಕ್ಕೆ ನಿಮಗೆ ಆಗಲ್ಲ ಎಂದ್ರೆ ಇಲ್ಲಿಂದ ತೊಲಗಿ ಎಂದು ಕೊಡಗು ಜಿಲ್ಲೆಯ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ವೈದ್ಯರಿಗೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಖಡಕ್ ಎಚ್ಚರಿಕೆ ನೀಡಿದ್ದಾರೆ. ರಾತ್ರಿ ವೇಳೆಯಲ್ಲಿ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ಆಗಮಿಸಿ, ಆಸ್ಪತ್ರೆಯ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ಹಾಗೂ ವಾಸ್ತವ್ಯ ಹೂಡಲು ಭೇಟಿ ನೀಡಿದ ಆರೋಗ್ಯ ಮಂತ್ರಿ ಶ್ರೀರಾಮುಲುರವರು, ಆಸ್ಪತ್ರೆಯ ಒಳಗೆ ಪರಿಶೀಲನೆ ನಡೆಸಿ ಆಸ್ಪತ್ರೆಯಲ್ಲಿ ಇದ್ದಂತಹ ರೋಗಿಗಳನ್ನು…

  • ಜ್ಯೋತಿಷ್ಯ

    ಸ್ವಾಮಿ ಅಯ್ಯಪ್ಪನನ್ನು ಈ ದಿನ ಭಕ್ತಿಯಿಂದ ಸ್ಮರಿಸುತ್ತಾ, ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಬಾಲ್ಯದ…