News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಪ್ಲಾಸ್ಟಿಕ್‌ನಿಂದ ತಯಾರಿಗೊಂಡ ಈ ಪೆಟ್ರೋಲ್ ದರವನ್ನು ಕೇಳಿದರೆ ನೀವು ಅಚ್ಚರಿಪಡುವುದು ಕಂಡಿತ

49

ಗಗನಮುಖಿಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಿಂದಾಗಿ ಬಹುತೇಕ ವಾಹನ ಖರೀದಿದಾರರು ಇದೀಗ ಎಲೆಕ್ಟ್ರಿಕ್ ವಾಹನಗಳತ್ತ ಮುಖಮಾಡುತ್ತಿದ್ದು, ಹೀಗಿರುವಾಗ ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್‌ನಿಂದ ಪೆಟ್ರೋಲ್ ಸಿದ್ದಪಡಿಸಿರುವ ಎಂಜಿನಿಯರ್‌ ಒಬ್ಬರು ಅತಿ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದಾರೆ.

ಹೌದು, ಸದ್ಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದಿನದಿಂದ ದಿನಕ್ಕೆ ದುಬಾರಿಯಾಗುತ್ತಿರುವ ದಿನಗಳಲ್ಲಿ ಅಗ್ಗದ ಬೆಲೆಯಲ್ಲಿ ಪೆಟ್ರೋಲ್ ಉತ್ಪಾದನೆ ಮಾಡಬಲ್ಲ ಹೊಸ ತಂತ್ರಜ್ಞಾನವನ್ನು ಸಿದ್ದಪಡಿಸಿದ್ದು, ಪರಿಸರಕ್ಕೆ ಮಾರಕವಾಗಿ ಪರಿಣಮಿಸಿರುವ ಪ್ಲಾಸ್ಟಿಕ್ ಅನ್ನೇ ಬಳಕೆ ಮಾಡಿಕೊಂಡು ಈ ಹೊಸ ಆವಿಷ್ಕಾರವನ್ನು ಮಾಡಲಾಗಿದೆ. ಹೈದ್ರಾಬಾದ್ ಮೂಲದ ಮೆಕ್ಯಾನಿಕಲ್ ಎಂಜಿನಿಯರ್ ಪ್ರೋ. ಸತೀಶ್ ಎನ್ನುವರೇ ಇದರ ರೂವಾರಿಯಾಗಿದ್ದು, ನಗರದಲ್ಲಿ ದಿನಂಪ್ರತಿ ಸಂಗ್ರಹವಾಗುವ ಪ್ಲಾಸ್ಟಿಕ್ ತ್ಯಾಜ್ಯದಿಂದಲೇ ಪೆಟ್ರೋಲ್ ಸಿದ್ದಪಡಿಸುತ್ತಿದ್ದಾರೆ.

ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಸಮಸ್ಯೆಯನ್ನು ತಗ್ಗಿಸುವುದು ಹೇಗೆ ಪ್ರಶ್ನೆ ಮುಂದಿಟ್ಟು ಹೊಸ ಪ್ರಯತ್ನ ನಡೆಸುತ್ತಿದ್ದಾಗಲೇ ಪೆಟ್ರೋಲ್ ಉತ್ಪಾದನೆ ಸಾಧ್ಯತೆ ಕುರಿತು ಎಂಜಿನಿಯರ್ ಸತೀಸ್ ಅವರು ಹೊಸ ಪ್ರಯೋಗ ಮಾಡಿ ಇಂತದೊಂದು ಮಹತ್ವದ ಯೋಜನೆಯನ್ನು ಕಾರ್ಯರೂಪಕ್ಕೆ ತಂದಿದ್ದಾರೆ.ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್ ತಾಜ್ಯವನ್ನು ಪ್ರಮುಖ ಮೂರು ಹಂತಗಳಲ್ಲಿ ರಸಾಯನಿಕ ಪ್ರಕ್ರಿಯೆಗಳ ಮೂಲಕ ಸಂಸ್ಕರಿಸಿ ಮಾಡಿದ ನಂತರವಷ್ಟೇ ಪೆಟ್ರೋಲ್ ಮತ್ತು ಡೀಸೆಲ್ ಉತ್ಪನ್ನವನ್ನು ಸಿದ್ದಪಡಿಸಲಾಗಿದ್ದು, ಪರಿಸರಕ್ಕೆ ಮಾರಕವಾಗದಂತೆ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಸ್ಕರಿಸಿ ಈ ಹೊಸ ಪೆಟ್ರೋಲ್ ಮಾದರಿಯನ್ನು ಸಿದ್ದಗೊಳಿಸಲಾಗಿದೆ.

2016ರಿಂದಲೇ ಎಂಜಿನಿಯರ್ ಸತೀಶ್ ಅವರು ಈ ಪ್ರಯೋಗ ಮಾಡುತ್ತಿದ್ದು, ಪ್ರತಿ ದಿನ ಕನಿಷ್ಠ 200 ಕೆಜಿ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಸ್ಕರಿಸಿ ಕನಿಷ್ಠ 200 ಲೀಟರ್ ಪೆಟ್ರೋಲ್ ಉತ್ಪಾದನೆ ಮಾಡುತ್ತಿದ್ದಾರೆ. ಕಳೆದ ಮೂರುವರೇ ವರ್ಷಗಳಲ್ಲಿ ಬರೋಬ್ಬರಿ 50 ಟನ್ ಪ್ಲಾಸ್ಟಿಕ್ ಅನ್ನು ಪೆಟ್ರೋಲ್ ಆಗಿ ಪರಿವರ್ತನೆ ಮಾಡಿರುವ ಪ್ರೋ. ಸತೀಸ್ ಅವರು, ಅತಿ ಕಡಿಮೆ ಬೆಲೆಯಲ್ಲಿ ಸ್ಥಳೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ಉತ್ಪನ್ನವನ್ನು ಮಾರಾಟ ಮಾಡುತ್ತಿದ್ದಾರೆ.

ಪ್ರತಿ ಲೀಟರ್‌ಗೆ ರೂ. 40ರಿಂದ ರೂ. 50 ಮಾತ್ರ..! ಸದ್ಯ ಪ್ರೋ. ಸತೀಶ್ ಅವರು ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್‌ಗೆ ರೂ.40ರಿಂದ ರೂ.50ಕ್ಕೆ ಮಾರಾಟ ಮಾಡುತ್ತಿದ್ದು, ಸ್ಥಳೀಯ ಕೈಗಾರಿಕಾ ಕೇಂದ್ರಗಳೇ ಇದರ ಪ್ರಮುಖ ಗ್ರಾಹಕರಾಗಿದ್ದಾರೆ.ವಾಹನಗಳಲ್ಲಿ ಬಳಕೆ ಯೋಗ್ಯವೇ? ಪ್ಲಾಸ್ಟಿಕ್‌ನಿಂದ ತಯಾರಿಸಲಾದ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳಲ್ಲಿ ಬಳಕೆ ಕುರಿತಂತೆ ಹಲವು ಪ್ರಯತ್ನಗಳು ನಡೆದಿದ್ದರೂ ಇದುವರೆಗೂ ಅಧಿಕೃತವಾದ ಟೆಸ್ಟಿಂಗ್ ನಡೆಸಿಲ್ಲ. ಹೀಗಾಗಿ ಮುಂಬರುವ ದಿನಗಳಲ್ಲಿ ಈ ಕುರಿತು ಅಧಿಕೃತ ಟೆಸ್ಟಿಂಗ್ ನಡೆಸಿದ ನಂತರವಷ್ಟೇ ಇದು ವಾಹನಗಳಲ್ಲಿ ಬಳಕೆಗೆ ಯೋಗ್ಯವೇ ಎಂಬುದು ತಿಳಿದು ಬರಲಿದೆ.

ಸದ್ಯಕ್ಕೆ ಕೈಗಾರಿಕೊದ್ಯಮದಲ್ಲಿ ಮಾತ್ರವೇ ಈ ತೈಲ ಉತ್ಪನ್ನ ಬಳಕೆ ಮಾಡಲಾಗುತ್ತಿದ್ದು, ಒಂದು ವೇಳೆ ವಾಹನಗಳಲ್ಲಿಯೂ ಬಳಕೆಗೆ ಯೋಗ್ಯ ಎಂದಾದಲ್ಲಿ ಇದೊಂದು ಮಹತ್ವದ ಯೋಜನೆಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಯಾಕೆಂದ್ರೆ ದೇಶಾದ್ಯಂತ ದಿನಂಪ್ರತಿ ಉತ್ಪಾದನೆಯಾಗುವ ಸಾವಿರಾರು ಟನ್ ಪ್ಲಾಸ್ಟಿಕ್ ತ್ಯಾಜ್ಯಕ್ಕೂ ಮುಂದೊಂದು ದಿನ ಭಾರೀ ಬೇಡಿಕೆ ಬಂದರೂ ಅಚ್ಚರಿಯಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಕಾಫಿ,ಟೀ ಆರೊಗ್ಯಕ್ಕೆ ಒಳ್ಳೆಯದು – ಒಳ್ಳೆಯದಲ್ಲ ಯಾವುದು ಸರಿ ನಿಮಗೆ ಗೊತ್ತಾ…!ತಿಳಿಯಲು ಈ ಲೇಖನ ಓದಿ…

    ಕಾಫಿ, ಟೀಗೆ ಸಂಬಂದಿಸಿದಂತೆ ದಿನನಿತ್ಯ ಹಲವಾರು ಸುದ್ದಿಗಳು ಹರಿದಾಡುತ್ತಿರುತ್ತವೆ. ಕೆಲವರು ಕಾಫಿ,ಟೀ ಆರೊಗ್ಯಕ್ಕೆ ಒಳ್ಳೆಯದು ಎಂದರೆ ಇನ್ನು ಕೆಲವರು ಒಳ್ಳೆಯದಲ್ಲ ಎಂಬ ಅನಿಸಿಕೆಗಳನ್ನು ವ್ಯಕ್ತಪಡಿಸುತ್ತಲೇ ಇರುತ್ತಾರೆ. ಅಷ್ಟೇ ಅಲ್ಲ ಕಾಫಿ, ಟೀ ಮೇಲೆ ಆಗಾಗ ನಾನಾ ಬಗೆಯ ಸಂಶೋಧನೆಗಳೂ ನಡೆಯುತ್ತಿರುತ್ತವೆ.

  • ಆರೋಗ್ಯ

    ಬಾಳೆಹಣ್ಣಿನ ಈ ಉಪಯೋಗಗಳನ್ನು ಕೇಳಿದ್ರೇ, ನೀವು ಮರೆಯದೆ ದಿನಾ ಬಾಳೆಹಣ್ಣು ತಿಂತೀರಾ…

    ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ.

  • ವಿಚಿತ್ರ ಆದರೂ ಸತ್ಯ

    80 ಲಕ್ಷ ವರ್ಷ ಹಿಂದಿನ ಡೈನೋಸಾರ್ ಯುಗದ ತಿಮಿಂಗಿಲ ಪತ್ತೆ ..!ತಿಳಿಯಲು ಈ ಲೇಖನ ಓದಿ …

    ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.

  • ಸುದ್ದಿ

    ಲೋಕಸಭಾ ಚುನಾವಣೆಯ ಪ್ರಚಾರಕ್ಕೆ ಹೋಗದೇ ಮನೆಯಲ್ಲಿ ಕೂತಿದ್ದಾರೆ ಮಾಜಿ ಸಿಎಂ!ಕಾರಣ ಏನು ಗೊತ್ತಾ?ಈ ಸುದ್ದಿ ನೋಡಿ

    ಲೋಕಸಭಾ ಚುನಾವಣೆಯಲ್ಲಿ ತಾವು ಶಿಫಾರಸ್ಸು ಮಾಡಿದ ಅಭ್ಯರ್ಥಿಗಳಿಗೆ ಟಿಕೆಟ್ ನೀಡದೆ ಬೇರೆಯವರಿಗೆ ಮಣೆ ಹಾಕಿರುವುದರಿಂದ ಹೈಕಮಾಂಡ್ ನಾಯಕರ ವಿರುದ್ಧ ಮುನಿಸಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ತೆರಳದೆ ಕಳೆದ ಮೂರು ದಿನಗಳಿಂದ ಮನೆಯಲ್ಲಿಯೇ ಇದ್ದಾರೆಂದು ಹೇಳಲಾಗಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ತೇಜಸ್ವಿನಿ ಅನಂತಕುಮಾರ್ ಅವರ ಬದಲಿಗೆ ತೇಜಸ್ವಿ ಸೂರ್ಯ ಅವರಿಗೆ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ರಮೇಶ್ ಕತ್ತಿ ಅವರ ಬದಲಿಗೆ ಅಣ್ಣಾ ಸಾಹೇಬ ಜೊಲ್ಲೆಯವರಿಗೆ ಟಿಕೆಟ್ ನೀಡಿರುವುದು ಯಡಿಯೂರಪ್ಪನವರಿಗೆ…

  • ಸುದ್ದಿ

    5 ವರ್ಷ ಅಪಾರ್ಟ್‌ಮೆಂಟ್ ನಿಷೇಧಜ್ಞೆ……!

    ಮುಂದಿನ ಐದು ವರ್ಷ ಬೆಂಗಳೂರಿನಲ್ಲಿ ಅಪಾರ್ಟ್‌ಮೆಂಟ್ಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಚಿಂತನೆ ನಡೆದಿದೆ ಎಂದು ಹೇಳುವ ಮೂಲಕ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಶಾಕ್‌ ನೀಡಿದ್ದಾರೆ. ನಗರದಲ್ಲಿ ಅಪಾರ್ಟ್‌ಮೆಂಟ್‌ಗಳ ಸಂಸ್ಕೃತಿ ಹೆಚ್ಚುತ್ತಿದ್ದು, ಸಮಸ್ಯೆಗಳೂ ಬೆಳೆಯುತ್ತಿವೆ. ಕುಡಿಯುವ ನೀರಿನ ಸಮಸ್ಯೆ, ಒಳ ಚರಂಡಿ ವ್ಯವಸ್ಥೆ ಸರಿಯಾಗಿ ನಿರ್ವಹಣೆ ಆಗುವುದಿಲ್ಲ. ಖಾಸಗಿಯವರು ಮೂಲ ಸೌಲಭ್ಯ ಒದಗಿಸುವ ಭರವಸೆ ನೀಡದೇ ಅಪಾರ್ಟ್‌ಮೆಂಟ್‌ಗಳನ್ನು ನಿರ್ಮಾಣ ಮಾಡಿ, ಮಾರಾಟ ಮಾಡುತ್ತಾರೆ. ಈಗ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಹೀಗಾಗಿ ಐದು ವರ್ಷ…

  • govt

    ಸುಪ್ರೀಂ ಕೋರ್ಟ್ ನ ಆದೇಶವನ್ನು ಪಾಲಿಸದ 32 ಕಂಪನಿಗಳ ವಿರುದ್ಧ ಜಾಮೀನು ರಹಿತ ವಾರೆಂಟ್,..!!

    ಮುಂಬೈ ಮೂಲದ 32 ಕಂಪನಿಗಳ ನಿರ್ವಾಹಕ ನಿರ್ದೇಶಕರಿಗೆ ಬಂಧನದಭೀತಿ ಎದುರಾಗಿದೆ. ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸದ ಈ 32 ಕಂಪನಿಗಳ ಉನ್ನತಾಧಿಕಾರಿಗಳಿಗೆ ಸುಪ್ರೀಂ ಕೋರ್ಟ್  ಜಾಮೀನು ರಹಿತ ವಾರಂಟ್ ಸೂಚಿಸಿದೆ . ಮೂರು ವರ್ಷಗಳ ಹಿಂದೆ ನೀಡಿದ ಆದೇಶವನ್ನು ಇವರು ಪಾಲಿಸಿಲ್ಲ ಎಂಬುದು ಇದಕ್ಕೆ ಮುಖ್ಯ ಕಾರಣವಾಗಿದೆ . ಮುಂಬೈ ಮೂಲದ ಕಂಪನಿಗಳಾದ ಅಕ್ಷರ್ ಮರ್ಸಾಂಟೈಲ್, ಬೀಟಾ ಟ್ರೇಡಿಂಗ್, ಅನ್​ಶುಲ್ ಮೆರ್ಸಾಂಟೈಲ್, ಎವರ್​ಫ್ರೇಮ್ ಟ್ರೇಡಿಂಗ್, ಹೈಝೋನ್ ಟ್ರೇಡಿಂಗ್, ಇನಾರ್ಬಿಟ್ ಟ್ರೇಡಿಂಗ್, ಲಕ್ಷ್ ಮರ್ಸಾಂಟೈಲ್, ಮ್ಯಾಜಿನೋಟ್ ಟ್ರೇಡಿಂಗ್, ಮಾಂಟ್ರಿಯಲ್…