ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಗನಮುಖಿಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಿಂದಾಗಿ ಬಹುತೇಕ ವಾಹನ ಖರೀದಿದಾರರು ಇದೀಗ ಎಲೆಕ್ಟ್ರಿಕ್ ವಾಹನಗಳತ್ತ ಮುಖಮಾಡುತ್ತಿದ್ದು, ಹೀಗಿರುವಾಗ ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್ನಿಂದ ಪೆಟ್ರೋಲ್ ಸಿದ್ದಪಡಿಸಿರುವ ಎಂಜಿನಿಯರ್ ಒಬ್ಬರು ಅತಿ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದಾರೆ.

ಹೌದು, ಸದ್ಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದಿನದಿಂದ ದಿನಕ್ಕೆ ದುಬಾರಿಯಾಗುತ್ತಿರುವ ದಿನಗಳಲ್ಲಿ ಅಗ್ಗದ ಬೆಲೆಯಲ್ಲಿ ಪೆಟ್ರೋಲ್ ಉತ್ಪಾದನೆ ಮಾಡಬಲ್ಲ ಹೊಸ ತಂತ್ರಜ್ಞಾನವನ್ನು ಸಿದ್ದಪಡಿಸಿದ್ದು, ಪರಿಸರಕ್ಕೆ ಮಾರಕವಾಗಿ ಪರಿಣಮಿಸಿರುವ ಪ್ಲಾಸ್ಟಿಕ್ ಅನ್ನೇ ಬಳಕೆ ಮಾಡಿಕೊಂಡು ಈ ಹೊಸ ಆವಿಷ್ಕಾರವನ್ನು ಮಾಡಲಾಗಿದೆ. ಹೈದ್ರಾಬಾದ್ ಮೂಲದ ಮೆಕ್ಯಾನಿಕಲ್ ಎಂಜಿನಿಯರ್ ಪ್ರೋ. ಸತೀಶ್ ಎನ್ನುವರೇ ಇದರ ರೂವಾರಿಯಾಗಿದ್ದು, ನಗರದಲ್ಲಿ ದಿನಂಪ್ರತಿ ಸಂಗ್ರಹವಾಗುವ ಪ್ಲಾಸ್ಟಿಕ್ ತ್ಯಾಜ್ಯದಿಂದಲೇ ಪೆಟ್ರೋಲ್ ಸಿದ್ದಪಡಿಸುತ್ತಿದ್ದಾರೆ.

ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಸಮಸ್ಯೆಯನ್ನು ತಗ್ಗಿಸುವುದು ಹೇಗೆ ಪ್ರಶ್ನೆ ಮುಂದಿಟ್ಟು ಹೊಸ ಪ್ರಯತ್ನ ನಡೆಸುತ್ತಿದ್ದಾಗಲೇ ಪೆಟ್ರೋಲ್ ಉತ್ಪಾದನೆ ಸಾಧ್ಯತೆ ಕುರಿತು ಎಂಜಿನಿಯರ್ ಸತೀಸ್ ಅವರು ಹೊಸ ಪ್ರಯೋಗ ಮಾಡಿ ಇಂತದೊಂದು ಮಹತ್ವದ ಯೋಜನೆಯನ್ನು ಕಾರ್ಯರೂಪಕ್ಕೆ ತಂದಿದ್ದಾರೆ.ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್ ತಾಜ್ಯವನ್ನು ಪ್ರಮುಖ ಮೂರು ಹಂತಗಳಲ್ಲಿ ರಸಾಯನಿಕ ಪ್ರಕ್ರಿಯೆಗಳ ಮೂಲಕ ಸಂಸ್ಕರಿಸಿ ಮಾಡಿದ ನಂತರವಷ್ಟೇ ಪೆಟ್ರೋಲ್ ಮತ್ತು ಡೀಸೆಲ್ ಉತ್ಪನ್ನವನ್ನು ಸಿದ್ದಪಡಿಸಲಾಗಿದ್ದು, ಪರಿಸರಕ್ಕೆ ಮಾರಕವಾಗದಂತೆ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಸ್ಕರಿಸಿ ಈ ಹೊಸ ಪೆಟ್ರೋಲ್ ಮಾದರಿಯನ್ನು ಸಿದ್ದಗೊಳಿಸಲಾಗಿದೆ.

2016ರಿಂದಲೇ ಎಂಜಿನಿಯರ್ ಸತೀಶ್ ಅವರು ಈ ಪ್ರಯೋಗ ಮಾಡುತ್ತಿದ್ದು, ಪ್ರತಿ ದಿನ ಕನಿಷ್ಠ 200 ಕೆಜಿ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಸ್ಕರಿಸಿ ಕನಿಷ್ಠ 200 ಲೀಟರ್ ಪೆಟ್ರೋಲ್ ಉತ್ಪಾದನೆ ಮಾಡುತ್ತಿದ್ದಾರೆ. ಕಳೆದ ಮೂರುವರೇ ವರ್ಷಗಳಲ್ಲಿ ಬರೋಬ್ಬರಿ 50 ಟನ್ ಪ್ಲಾಸ್ಟಿಕ್ ಅನ್ನು ಪೆಟ್ರೋಲ್ ಆಗಿ ಪರಿವರ್ತನೆ ಮಾಡಿರುವ ಪ್ರೋ. ಸತೀಸ್ ಅವರು, ಅತಿ ಕಡಿಮೆ ಬೆಲೆಯಲ್ಲಿ ಸ್ಥಳೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ಉತ್ಪನ್ನವನ್ನು ಮಾರಾಟ ಮಾಡುತ್ತಿದ್ದಾರೆ.
ಪ್ರತಿ ಲೀಟರ್ಗೆ ರೂ. 40ರಿಂದ ರೂ. 50 ಮಾತ್ರ..! ಸದ್ಯ ಪ್ರೋ. ಸತೀಶ್ ಅವರು ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ಗೆ ರೂ.40ರಿಂದ ರೂ.50ಕ್ಕೆ ಮಾರಾಟ ಮಾಡುತ್ತಿದ್ದು, ಸ್ಥಳೀಯ ಕೈಗಾರಿಕಾ ಕೇಂದ್ರಗಳೇ ಇದರ ಪ್ರಮುಖ ಗ್ರಾಹಕರಾಗಿದ್ದಾರೆ.ವಾಹನಗಳಲ್ಲಿ ಬಳಕೆ ಯೋಗ್ಯವೇ? ಪ್ಲಾಸ್ಟಿಕ್ನಿಂದ ತಯಾರಿಸಲಾದ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳಲ್ಲಿ ಬಳಕೆ ಕುರಿತಂತೆ ಹಲವು ಪ್ರಯತ್ನಗಳು ನಡೆದಿದ್ದರೂ ಇದುವರೆಗೂ ಅಧಿಕೃತವಾದ ಟೆಸ್ಟಿಂಗ್ ನಡೆಸಿಲ್ಲ. ಹೀಗಾಗಿ ಮುಂಬರುವ ದಿನಗಳಲ್ಲಿ ಈ ಕುರಿತು ಅಧಿಕೃತ ಟೆಸ್ಟಿಂಗ್ ನಡೆಸಿದ ನಂತರವಷ್ಟೇ ಇದು ವಾಹನಗಳಲ್ಲಿ ಬಳಕೆಗೆ ಯೋಗ್ಯವೇ ಎಂಬುದು ತಿಳಿದು ಬರಲಿದೆ.

ಸದ್ಯಕ್ಕೆ ಕೈಗಾರಿಕೊದ್ಯಮದಲ್ಲಿ ಮಾತ್ರವೇ ಈ ತೈಲ ಉತ್ಪನ್ನ ಬಳಕೆ ಮಾಡಲಾಗುತ್ತಿದ್ದು, ಒಂದು ವೇಳೆ ವಾಹನಗಳಲ್ಲಿಯೂ ಬಳಕೆಗೆ ಯೋಗ್ಯ ಎಂದಾದಲ್ಲಿ ಇದೊಂದು ಮಹತ್ವದ ಯೋಜನೆಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಯಾಕೆಂದ್ರೆ ದೇಶಾದ್ಯಂತ ದಿನಂಪ್ರತಿ ಉತ್ಪಾದನೆಯಾಗುವ ಸಾವಿರಾರು ಟನ್ ಪ್ಲಾಸ್ಟಿಕ್ ತ್ಯಾಜ್ಯಕ್ಕೂ ಮುಂದೊಂದು ದಿನ ಭಾರೀ ಬೇಡಿಕೆ ಬಂದರೂ ಅಚ್ಚರಿಯಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಬಾಲಿವುಡ್ ನಟ ಅಕ್ಷಯ್ ಕುಮಾರ್ ಜೊತೆ ಮೊದಲ ಬಾರಿಗೆ ತಮ್ಮ ವೈಯುಕ್ತಿಕ ಜೀವನ ಅನುಭವಗಳೊಂದಿಗೆ, ತಮ್ಮ ಜೀವನಕ್ಕೆ ಸಂಬಂಧಿಸಿದ ಹಲವಾರು ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಈವರೆಗೆ ಯಾರಿಗೂ ತಿಳಿದಿರದ ಕೆಲ ಮಾಹಿತಿಗಳನ್ನೂ ಮೋದಿ ನಟ ಅಕ್ಷಯ್ ಜೊತೆಗೆ ಹಂಚಿಕೊಂಡಿದ್ದಾರೆ. 1 ಗಂಟೆ 10 ನಿಮಿಷದ ಈ ಸಂದರ್ಶನದಲ್ಲಿ ಮೋದಿ ಹೇಳಿದ ಕೆಲ ಆಸಕ್ತಿಕರ ವಿಚಾರಗಳು ಇವೆ.ನಿಮಗೆ ಮಾವಿನ ಹಣ್ಣು ಇಷ್ಟವೇ ಎಂದು ಅಕ್ಷಯ್ ಕುಮಾರ್ ಕೇಳಿದ್ದಕ್ಕೆ ನಾನು ಮಾವಿನ ಹಣ್ಣು…
ನಮ್ಮ ಭಾರತ ಶಾಂತಿ ಪ್ರಿಯ ರಾಷ್ಟ್ರ. ಪಕ್ಕದ ಶತ್ರು ರಾಷ್ಟ್ರಗಳು ಏನೇ ಮಾಡಿದರೂ,ಅವರಿಗೆ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ.ಇನ್ನೊಮ್ಮೆ ಹೀಗೆ ಮಾಡಿದ್ರೆ ನಾವು ಸುಮ್ಮನಿರಲ್ಲ ಅಂತ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ. ಆದ್ರೆ ಕೆಲವೊಂದು ರಾಷ್ಟ್ರಗಳು ಇದಕ್ಕೆ ತದ್ವಿರುದ್ದ.ಏಕೆಂದರೆ ಅವರು ನಮ್ಮ ತರ ಎಚ್ಚರಿಕೆ ಮಾತ್ರ, ಯಾವುದೋ ಒಂದು ರೀತಿ ಸೇಡು ತೀರಿಸಿಕೊಳ್ಳುತ್ತವೆ
ಹುಟ್ಟುಹಬ್ಬ ಆಚರಿಸುವಾಗ ಕೇಕ್ ಮೇಲೆ ಕ್ಯಾಂಡಲ್ ಗಳನ್ನು ಉರಿಸಿ ಅದನ್ನು ಆರಿಸೋದು ಕಾಮನ್. ಎಲ್ಲರೂ ಖುಷಿ ಖುಷಿಯಾಗಿ ಮೋಂಬತ್ತಿಗಳನ್ನು ಆರಿಸಿ ನಂತರ ಆ ಕೇಕ್ ಅನ್ನು ಕತ್ತರಿಸ್ತಾರೆ. ಆದ್ರೆ ಹೀಗೆ ಮಾಡೋದ್ರಿಂದ ಕೇಕ್ ನಲ್ಲಿ ಬ್ಯಾಕ್ಟೀರಿಯಾಗಳು ತುಂಬಿಕೊಳ್ಳುತ್ತವೆ. ದಕ್ಷಿಣ ಕೆರೊಲಿನಾದ ಕ್ಲೆಮ್ಸನ್ ಯೂನಿವರ್ಸಿಟಿ ವಿಜ್ಞಾನಿಗಳು ನಡೆಸಿದ ಸಂಶೋಧನೆಯಲ್ಲಿ ಈ ವಿಷಯ ಬಹಿರಂಗವಾಗಿದೆ. ಮೋಂಬತ್ತಿ ಆರಿಸುವ ವೇಳೆ ಉಗುಳು ಕೂಡ ಕೇಕ್ ಮೇಲೆ ಬೀಳುತ್ತದೆ. ಇದರಿಂದಾಗಿ ಕೇಕ್ ನಲ್ಲಿ ಬ್ಯಾಕ್ಟೀರಿಯಾಗಳ ಸಂಖ್ಯೆ ಶೇ. 1400 ರಷ್ಟು ಜಾಸ್ತಿಯಾಗುತ್ತದೆ. ಕ್ಯಾಂಡಲ್…
ಸಾರಾಹ್ ಇದು ಒಂದು ಅನಾಮಧೇಯ ಮೆಸೇಜಿಂಗ್ ಅಪ್ಲಿಕೇಶನ್ ಆಗಿದ್ದು ಕಳೆದ ಒಂದು ವಾರದಿಂದ ಸಾರಾಹ್ ಅಪ್ಲಿಕೇಷನ್ ಅತಿ ವೇಗವಾಗಿ ತನ್ನ ನೆಲೆಯನ್ನು ಪಡೆಯುತ್ತಿದೆ, ಇದು ಕೆಲವೇ ವಾರಗಳಲ್ಲಿ ಇರುತ್ತೋ ಇಲ್ಲ ಹೋಗುತ್ತೋ ಅಂತ ಯಾರೂ ಯೋಚನೆ ಸಹ ಮಾಡಿರಲಿಲ್ಲ. ಆದ್ರೆ ಈಗ ಇದರ ಹವಾ ಹೇಗಿದೆ ಎಂದರೆ ನಿಮ್ಮ ಫೇಸ್ಬುಕ್ ನ್ಯೂಸ್ ಫೀಡ್’ನ್ನು ನೋಡುವುದು ಸಹ ಕಷ್ಟ ವಾಗಿದೆ.
ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.
ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಪ್ರಪಂಚದ ಸೃಷ್ಟಿಕರ್ತ ಬ್ರಹ್ಮ ದೇವನಿಗೂ ಕೂಡ ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ, ಹೆಣ್ಣು ಚಂಚಲೆ ಎಂದು ಹೇಳಿದರೆ ತಪ್ಪಾಗಲ್ಲ. ಹಾಗಾದರೆ ಬ್ರಹ್ಮ ದೇವಾ ಹೆಣ್ಣನ್ನ ಸೃಷ್ಟಿ ಮಾಡಿದ್ದು ಯಾಕೆ ಮತ್ತು ಹೆಣ್ಣನ್ನ ಸೃಷ್ಟಿ ಮಾಡಲು ಬ್ರಹ್ಮ ದೇವನು ತುಂಬಾ ಸಮಯವನ್ನ ತೆಗೆದುಕೊಳ್ಳಲು ಕಾರಣ ಏನು ಮತ್ತು ಸ್ತ್ರೀ ರಚನೆಯ ವೇಳೆಯಲ್ಲಿ ಬ್ರಹ್ಮ ದೇವಾ ಮತ್ತು ದೇವದೂತರ ನಡುವೆ ನಡೆದ ಮಾತುಕತೆ ಏನು ಎಂದು ತಿಳಿದರೆ ನೀವು ಕೂಡ ಶಾಕ್…