ಸುದ್ದಿ

ಪ್ಲಾಸ್ಟಿಕ್‌ನಿಂದ ತಯಾರಿಗೊಂಡ ಈ ಪೆಟ್ರೋಲ್ ದರವನ್ನು ಕೇಳಿದರೆ ನೀವು ಅಚ್ಚರಿಪಡುವುದು ಕಂಡಿತ

40

ಗಗನಮುಖಿಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಿಂದಾಗಿ ಬಹುತೇಕ ವಾಹನ ಖರೀದಿದಾರರು ಇದೀಗ ಎಲೆಕ್ಟ್ರಿಕ್ ವಾಹನಗಳತ್ತ ಮುಖಮಾಡುತ್ತಿದ್ದು, ಹೀಗಿರುವಾಗ ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್‌ನಿಂದ ಪೆಟ್ರೋಲ್ ಸಿದ್ದಪಡಿಸಿರುವ ಎಂಜಿನಿಯರ್‌ ಒಬ್ಬರು ಅತಿ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದಾರೆ.

ಹೌದು, ಸದ್ಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದಿನದಿಂದ ದಿನಕ್ಕೆ ದುಬಾರಿಯಾಗುತ್ತಿರುವ ದಿನಗಳಲ್ಲಿ ಅಗ್ಗದ ಬೆಲೆಯಲ್ಲಿ ಪೆಟ್ರೋಲ್ ಉತ್ಪಾದನೆ ಮಾಡಬಲ್ಲ ಹೊಸ ತಂತ್ರಜ್ಞಾನವನ್ನು ಸಿದ್ದಪಡಿಸಿದ್ದು, ಪರಿಸರಕ್ಕೆ ಮಾರಕವಾಗಿ ಪರಿಣಮಿಸಿರುವ ಪ್ಲಾಸ್ಟಿಕ್ ಅನ್ನೇ ಬಳಕೆ ಮಾಡಿಕೊಂಡು ಈ ಹೊಸ ಆವಿಷ್ಕಾರವನ್ನು ಮಾಡಲಾಗಿದೆ. ಹೈದ್ರಾಬಾದ್ ಮೂಲದ ಮೆಕ್ಯಾನಿಕಲ್ ಎಂಜಿನಿಯರ್ ಪ್ರೋ. ಸತೀಶ್ ಎನ್ನುವರೇ ಇದರ ರೂವಾರಿಯಾಗಿದ್ದು, ನಗರದಲ್ಲಿ ದಿನಂಪ್ರತಿ ಸಂಗ್ರಹವಾಗುವ ಪ್ಲಾಸ್ಟಿಕ್ ತ್ಯಾಜ್ಯದಿಂದಲೇ ಪೆಟ್ರೋಲ್ ಸಿದ್ದಪಡಿಸುತ್ತಿದ್ದಾರೆ.

ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಸಮಸ್ಯೆಯನ್ನು ತಗ್ಗಿಸುವುದು ಹೇಗೆ ಪ್ರಶ್ನೆ ಮುಂದಿಟ್ಟು ಹೊಸ ಪ್ರಯತ್ನ ನಡೆಸುತ್ತಿದ್ದಾಗಲೇ ಪೆಟ್ರೋಲ್ ಉತ್ಪಾದನೆ ಸಾಧ್ಯತೆ ಕುರಿತು ಎಂಜಿನಿಯರ್ ಸತೀಸ್ ಅವರು ಹೊಸ ಪ್ರಯೋಗ ಮಾಡಿ ಇಂತದೊಂದು ಮಹತ್ವದ ಯೋಜನೆಯನ್ನು ಕಾರ್ಯರೂಪಕ್ಕೆ ತಂದಿದ್ದಾರೆ.ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್ ತಾಜ್ಯವನ್ನು ಪ್ರಮುಖ ಮೂರು ಹಂತಗಳಲ್ಲಿ ರಸಾಯನಿಕ ಪ್ರಕ್ರಿಯೆಗಳ ಮೂಲಕ ಸಂಸ್ಕರಿಸಿ ಮಾಡಿದ ನಂತರವಷ್ಟೇ ಪೆಟ್ರೋಲ್ ಮತ್ತು ಡೀಸೆಲ್ ಉತ್ಪನ್ನವನ್ನು ಸಿದ್ದಪಡಿಸಲಾಗಿದ್ದು, ಪರಿಸರಕ್ಕೆ ಮಾರಕವಾಗದಂತೆ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಸ್ಕರಿಸಿ ಈ ಹೊಸ ಪೆಟ್ರೋಲ್ ಮಾದರಿಯನ್ನು ಸಿದ್ದಗೊಳಿಸಲಾಗಿದೆ.

2016ರಿಂದಲೇ ಎಂಜಿನಿಯರ್ ಸತೀಶ್ ಅವರು ಈ ಪ್ರಯೋಗ ಮಾಡುತ್ತಿದ್ದು, ಪ್ರತಿ ದಿನ ಕನಿಷ್ಠ 200 ಕೆಜಿ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಸ್ಕರಿಸಿ ಕನಿಷ್ಠ 200 ಲೀಟರ್ ಪೆಟ್ರೋಲ್ ಉತ್ಪಾದನೆ ಮಾಡುತ್ತಿದ್ದಾರೆ. ಕಳೆದ ಮೂರುವರೇ ವರ್ಷಗಳಲ್ಲಿ ಬರೋಬ್ಬರಿ 50 ಟನ್ ಪ್ಲಾಸ್ಟಿಕ್ ಅನ್ನು ಪೆಟ್ರೋಲ್ ಆಗಿ ಪರಿವರ್ತನೆ ಮಾಡಿರುವ ಪ್ರೋ. ಸತೀಸ್ ಅವರು, ಅತಿ ಕಡಿಮೆ ಬೆಲೆಯಲ್ಲಿ ಸ್ಥಳೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ಉತ್ಪನ್ನವನ್ನು ಮಾರಾಟ ಮಾಡುತ್ತಿದ್ದಾರೆ.

ಪ್ರತಿ ಲೀಟರ್‌ಗೆ ರೂ. 40ರಿಂದ ರೂ. 50 ಮಾತ್ರ..! ಸದ್ಯ ಪ್ರೋ. ಸತೀಶ್ ಅವರು ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್‌ಗೆ ರೂ.40ರಿಂದ ರೂ.50ಕ್ಕೆ ಮಾರಾಟ ಮಾಡುತ್ತಿದ್ದು, ಸ್ಥಳೀಯ ಕೈಗಾರಿಕಾ ಕೇಂದ್ರಗಳೇ ಇದರ ಪ್ರಮುಖ ಗ್ರಾಹಕರಾಗಿದ್ದಾರೆ.ವಾಹನಗಳಲ್ಲಿ ಬಳಕೆ ಯೋಗ್ಯವೇ? ಪ್ಲಾಸ್ಟಿಕ್‌ನಿಂದ ತಯಾರಿಸಲಾದ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳಲ್ಲಿ ಬಳಕೆ ಕುರಿತಂತೆ ಹಲವು ಪ್ರಯತ್ನಗಳು ನಡೆದಿದ್ದರೂ ಇದುವರೆಗೂ ಅಧಿಕೃತವಾದ ಟೆಸ್ಟಿಂಗ್ ನಡೆಸಿಲ್ಲ. ಹೀಗಾಗಿ ಮುಂಬರುವ ದಿನಗಳಲ್ಲಿ ಈ ಕುರಿತು ಅಧಿಕೃತ ಟೆಸ್ಟಿಂಗ್ ನಡೆಸಿದ ನಂತರವಷ್ಟೇ ಇದು ವಾಹನಗಳಲ್ಲಿ ಬಳಕೆಗೆ ಯೋಗ್ಯವೇ ಎಂಬುದು ತಿಳಿದು ಬರಲಿದೆ.

ಸದ್ಯಕ್ಕೆ ಕೈಗಾರಿಕೊದ್ಯಮದಲ್ಲಿ ಮಾತ್ರವೇ ಈ ತೈಲ ಉತ್ಪನ್ನ ಬಳಕೆ ಮಾಡಲಾಗುತ್ತಿದ್ದು, ಒಂದು ವೇಳೆ ವಾಹನಗಳಲ್ಲಿಯೂ ಬಳಕೆಗೆ ಯೋಗ್ಯ ಎಂದಾದಲ್ಲಿ ಇದೊಂದು ಮಹತ್ವದ ಯೋಜನೆಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಯಾಕೆಂದ್ರೆ ದೇಶಾದ್ಯಂತ ದಿನಂಪ್ರತಿ ಉತ್ಪಾದನೆಯಾಗುವ ಸಾವಿರಾರು ಟನ್ ಪ್ಲಾಸ್ಟಿಕ್ ತ್ಯಾಜ್ಯಕ್ಕೂ ಮುಂದೊಂದು ದಿನ ಭಾರೀ ಬೇಡಿಕೆ ಬಂದರೂ ಅಚ್ಚರಿಯಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಈ 5 ವಸ್ತುಗಳಿಂದ ಭಗವಾನ್ ಶಿವ ಲಿಂಗವನ್ನು ಎಂದಿಗೂ ಪೂಜಿಸಬಾರದು..!

    ಭಗವಾನ್ ಶಿವ, ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರಲ್ಲಿ ಒಬರಾಗಿದ್ದು, ತ್ರಿಮೂರ್ತಿಗಳಲ್ಲಿ ಭಗವಾನ್ ಶಿವನನ್ನು ಲಯಕರ್ತ(ವಿನಾಶಕ) ದೇವರಾಗಿ ಪರಿಗಣಿಸಲಾಗಿದೆ. ಹಿಂದೂ ಧರ್ಮದ ಪ್ರಕಾರ ಭಗವಾನ್ ಶಿವ ದೇವರನ್ನು ದೇವರ ದೇವ ಮಹಾದೇವ ಎಂದು ಹೇಳಲಾಗಿದೆ. ಮಹಾದೇವನು ಅನಂತವಾಗಿದ್ದು, ಅವರಿಗೆ ಹುಟ್ಟು ಇಲ್ಲ, ಸಾವೂ ಇಲ್ಲ ಎಂದು ಹೇಳಲಾಗಿದೆ. ನೈಜ ಪ್ರಪಂಚದಲ್ಲಿ ಮತ್ತು ಶೂನ್ಯ ಪ್ರಪಂಚದಲ್ಲಿ ಭಗವಾನ್ ಶಿವ ದೇವರು ಇದ್ದಾರೆ ಎಂದು ಹೇಳಲಾಗಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(15 ಡಿಸೆಂಬರ್, 2018) ದಿನದಲ್ಲಿ ನಂತರಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ಸಂಬಂಧಗಳೊಂದಿಗಿನ ಸಂಬಂಧಗಳು ಹಾಗೂ ಬಂಧಗಳ ನವೀಕರಣದ ಒಂದು ದಿನ. ನಿಮ್ಮಪ್ರಿಯತಮೆಯ ಜೊತೆ…

  • ಸುದ್ದಿ

    ಭರ್ಜರಿ ಶಾಪಿಂಗ್ ಸ್ಟಾರ್ಟ್ ಮಾಡಿದ ಯಶ್ ಮತ್ತು ರಾಧಿಕಾ ಪಂಡಿತ್ ಇದಕ್ಕೆ ಕಾರಣ? ಇಲ್ಲಿದೆ ನೋಡಿ,.!

    ರಾಧಿಕಾ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದು . ಅಕ್ಟೋಬರ್ ಮೊದಲ ವಾರದಲ್ಲಿ ಅವರ ಮನೆಗೆ ತುಂಟ ಕೃಷ್ಣನೋ ಅಥವಾ ಮಹಾಲಕ್ಷ್ಮೀಯೋ ಬರುತ್ತಾರೆ. ಇತ್ತೀಚೆಗಷ್ಟೇ ಯಶ್ ಮಗಳ ಜೊತೆಗಿನ ವಿಡಿಯೋ ಶೇರ್ ಮಾಡಿದ್ದರು. ಆ ವಿಡಿಯೋದಲ್ಲಿ ಆಯ್ರಾ ಕ್ಯಾಮೆರಾ ನೋಡಿ, ತಂದೆ ಯಶ್ ಹೇಳಿಕೊಟ್ಟಂತೆ ಟಾಟಾ ಮಾಡುತ್ತಿದ್ದಳು. ಇವಳ ಚೂಟಿತನ ಕಂಡು ಎಲ್ಲರೂ ಆಶ್ಚರ್ಯಚಕಿತರಾಗಿದ್ದರು.  ಸ್ಯಾಂಡಲ್‌ವುಡ್‌ನ ಬೆಸ್ಟ್ಬ್ಯೂಟಿಫುಲ್ ದಂಪತಿ ಯಶ್ ಹಾಗೂರಾಧಿಕಾ ಪಂಡಿತ್. ಮದುವೆಯ ನಂತರದಲ್ಲಿರಾಧಿಕಾ ಸದ್ಯ ಸಿನಿಮಾಗಳಿಂದ ದೂರವಿದ್ದಾರೆ.ಯಶ್ ‘ಕೆಜಿಎಫ್ 2’ ಸಿನೆಮಾದಲ್ಲಿ ಬಿಜಿಯಿದ್ದಾರೆ. ಇವರಿಬ್ಬರಿಗೂ ಮುದ್ದಾದ ಆಯ್ರಾ ಎಂಬಮಗಳಿರೋದು ಗೊತ್ತೇ ಇದೆ. ಆಗಾಗದಂಪತಿ…

  • ದೇವರು

    ಈ ದೇವಾಲಯಕ್ಕೆ 12 ವರ್ಷಗಳಿಗೊಮ್ಮೆ ಸಿಡಿಲು ಬಡಿಯುತ್ತೆ..!ನಿಮಗೆ ಗೊತ್ತಾ..?ತಿಳಿಯಲು ಇದನ್ನುಓದಿ…

    ಕೆಲವು ರಹಸ್ಯಗಳನ್ನು ಎಂದಿಗೂ ಭೇದಿಸಲಾಗುವುದಿಲ್ಲ. ಪ್ರತೀ 12 ವರ್ಷಗಳಿಗೊಮ್ಮೆ ಮಹಾದೇವನ ಮಂದಿರಕ್ಕೆ ಸಿಡಿಲು ಬಡಿಯುತ್ತೆ. ಅದರ ಹೊಡೆತಕ್ಕೆ ಶಿವಲಿಂಗ ಛಿದ್ರವಾಗುತ್ತೆ. ಆದರೆ ಬೆಳಗಾಗುವಷ್ಟರಲ್ಲಿ ಮತ್ತೆ ಒಂದಾಗಿರುತ್ತದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಸರ್ಕಾರದ ಯೋಜನೆಗಳು

    ಪ್ರಧಾನಿ ನರೇಂದ್ರ ಮೋದಿಯವರಿಂದ ರೇಷನ್ ಕಾರ್ಡುದಾರರಿಗೆ ಸಿಹಿ ಸುದ್ದಿ ..!ತಿಳಿಯಲು ಈ ಲೇಖನ ಓದಿ..

    ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಭಾರತದ ರಾಜ್ಯಗಳ ಬಿಜೆಪಿ ಸಂಸದರ ಜತೆ ಸಭೆ ನಡೆಸಿ, ಪಡಿತರ ವ್ಯವಸ್ಥೆಯ ಮೂಲಕ ಫಲಾನುಭವಿಗಳಿಗೆ ನ್ಯಾಯಬೆಲೆ ಅಂಗಡಿಗಳ ಮೂಲಕ ರಿಯಾಯಿತಿ ದರದಲ್ಲಿ ಆಹಾರ ಪದಾರ್ಥ ನೀಡುವ ಬದಲಿಗೆ ಅದರ ಸಬ್ಸಿಡಿ ಹಣವನ್ನು ನೇರವಾಗಿ ನೀಡುವ ಕುರಿತು ಚರ್ಚೆ ನಡೆಸಿದ್ದಾರೆ.ಇದು ರೇಷನ್ ಕಾರ್ಡುದಾರರಿಗೆ ಲಾಭದಾಯಕವಾದರೆ ಕಾಳಸಂತೆಕೋರರ ಮೇಲೆ ನಿಯಂತ್ರಣ ಹಾಕಲಿದೆ.