ಸುದ್ದಿ

ಮೋದಿ ಹೆಲಿಕಾಪ್ಟರ್ ಚೆಕ್ ಮಾಡಿ ಅಮಾನತು ಆಗಿದ್ದ ಚುನಾವಣಾ ಅಧಿಕಾರಿ..!ಅಮಾನತು ಆದೇಶ ಏನಾಯ್ತು..?

276

ಒರಿಸ್ಸಾದ ಸಂಬಲ್ ಪುರದಲ್ಲಿ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ಮಾಡಿದ್ದ ಕರ್ನಾಟಕದ ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ ಅಮಾನತು ಆದೇಶವನ್ನು ತಡೆ ಹಿಡಿಯಲಾಗಿದೆ.ಏಪ್ರಿಲ್ 18ರಂದು ಮೊಹಮ್ಮದ್ ಮೊಹ್ಸಿನ್ ಒರಿಸ್ಸಾದಲ್ಲಿ ಚುನಾವಣಾ ವೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಚುನಾವಣಾ ಪ್ರಚಾರಕ್ಕೆಂದು ಆಗಮಿಸಿದ್ದ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ನಡೆಸಿದ್ದರು.

ಎಸ್ಪಿಜಿಯಿಂದ ವಿಶೇಷ ರಕ್ಷಣೆ ಪಡೆದಿರುವವರ ವಾಹನಗಳನ್ನು ತಪಾಸಣೆ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂಬ ಆರೋಪದ ಮೇಲೆ ಚುನಾವಣಾ ಆಯೋಗ ಮೊಹ್ಸಿನ್ ಅವರನ್ನು ಅಮಾನತು ಮಾಡಿತ್ತು. 

ಅಮಾನತಿನ ಬಳಿಕ ಮೊಹ್ಸಿನ್ ಚುನಾವಣೆ ಸಂದರ್ಭದಲ್ಲಿ ಎಲ್ಲರ ವಾಹನವನ್ನೂ ತಪಾಸಣೆ ಮಾಡಬೇಕಾಗುತ್ತದೆ ಎಂದು ತಮ್ಮ ಕೆಲಸವನ್ನು ಸಮರ್ಥಿಸಿಕೊಂಡಿದ್ದರು. ಕೆಲ ದಿನಗಳ ನಂತರ ಅವರನ್ನು ಬೆಂಗಳೂರಿನ ಮುಖ್ಯ ಚುನಾವಣಾಧಿಕಾರಿಯ ಕಚೇರಿಗೆ ವರ್ಗಾವಣೆ ಮಾಡಲಾಗಿತ್ತು. 

ಮೊಹ್ಸಿನ್ ಅವರನ್ನು ಅಮಾನತುಗೊಳಿಸಿದ್ದ ಚುನಾವಣಾ ಆಯೋಗದ ಆದೇಶಕ್ಕೆ ತಡೆ ನೀಡಿರುವ ಕೇಂದ್ರ ಆಡಳಿತ ನ್ಯಾಯಮಂಡಳಿ (ಸಿಎಟಿ) ಮೊಹ್ಸಿನ್ ಅವರು ಕೆಲಸದಲ್ಲಿ ಮುಂದುವರಿಯಬಹುದು. ಅವರ ಮೇಲೆ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳುವ ಅಗತ್ಯವಿಲ್ಲ. ಎಸ್ಪಿಜಿ ಭದ್ರತೆಯಲ್ಲಿದ್ದಾರೆ ಎಂದ ಮಾತ್ರಕ್ಕೆ ಅವರು ಏನು ಬೇಕಾದರೂ ಮಾಡಬಹುದು ಎಂದು ಅರ್ಥವಲ್ಲ ಎಂದು ಹೇಳಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಚಿತ್ರೀಕರಣದ ಸೆಟ್ ನಲ್ಲೇ ಕುರಿ ಬಲಿ ನೀಡಿದ್ರಾ ರಾಧಿಕಾ ಕುಮಾರಸ್ವಾಮಿ!ಕಾರಣ ಏನು ಗೊತ್ತಾ?

    ನಟಿ ರಾಧಿಕಾ ಕುಮಾರಸ್ವಾಮಿ ಭೈರಾದೇವಿ ಚಿತ್ರೀಕರಣದ ವೇಳೆ ಸ್ಮಶಾನದಲ್ಲಿ ಬಿದ್ದು ಏಟು ಮಾಡಿಕೊಂಡಿದ್ದು  ಇದೀಗ ಶೂಟಿಂಗ್ ಸೆಟ್ ನಲ್ಲೇ ಕುರಿಬಲಿ ನೀಡಿದ್ದಾರೆ ಎಂಬ ಸುದ್ದಿ ಚರ್ಚೆಗೆ ಗ್ರಾಸವಾಗಿದೆ. ಚಿತ್ರದಲ್ಲಿ ಕಾಳಿಮಾತೆಯ ಅವತಾರ ತಾಳಿದ್ದ ರಾಧಿಕಾ ಶಾಂತಿನಗರದ ಸ್ಮಶಾನದಲ್ಲಿ ಚಿತ್ರೀಕರಣ ನಡೆಯುವ ವೇಳೆ ಗೋರಿ ಮೇಲಿಂದ ಬಿದ್ದು ಸ್ಪೈನಲ್ ಕಾರ್ಡ್ ಗೆ ಏಟು ಮಾಡಿಕೊಂಡಿದ್ದರು. ಅಂದು ಅಮಾವಾಸ್ಯೆಯಾಗಿದ್ದು ರಾಧಿಕಾ ಕುಮಾರಸ್ವಾಮಿ ಬಿದ್ದು ಪೆಟ್ಟು ಮಾಡಿಕೊಂಡ ಬಳಿಕ ಚಿತ್ರತಂಡಕ್ಕೆ ಅಡ್ಡಿಯಾಗಿದೆ. ಹೀಗಾಗಿ ಚಿತ್ರೀಕರಣದ ಸೆಟ್ ನಲ್ಲೇ ಕುರಿಬಲಿ ನೀಡಲಾಗಿದೆ ಎಂಬ ಸುದ್ದಿ…

  • ಸಿನಿಮಾ

    ವಿಷ್ಣು-ಸೌಂದರ್ಯ ಸಾವಿಗೆ ಇವಳೇ ಕಾರಣನಾ..!ಮತ್ತೆ ಸುದ್ದಿಯಾಗುತ್ತಿದೆ ನಾಗವಲ್ಲಿ..!ತಿಳಿಯಲು ಈ ಲೇಖನ ಓದಿ…

    ನಾಗವಲ್ಲಿ ಪಾತ್ರ ಜನಪ್ರಿಯವಾದ ಕಾರಣ ಅದೇ ಹೆಸರಿನಲ್ಲಿ ಸಿನಿಮಾ ಸಹ ಆಗಿದೆ. ಆದರೆ, ಚಿತ್ರರಂಗದವರು ಅಷ್ಟಕ್ಕೇ ಬಿಡುವ ಹಾಗೆ ಕಾಣುತ್ತಿಲ್ಲ. ವಿಷ್ಣುವರ್ಧನ್ ಮತ್ತು ಸೌಂದರ್ಯ ಅವರ ಸಾವಿಗೆ ಅದೇ ನಾಗವಲ್ಲಿ ಕಾರಣನಾ ಎಂಬ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನ ಸದ್ದಿಲ್ಲದೆ ಕನ್ನಡ ಚಿತ್ರರಂಗದಲ್ಲಿ ಆಗಿದೆ.

  • govt

    2000 ರೂ ನೋಟಿನ ಮುದ್ರಣವನ್ನು ಸ್ಥಗಿತಗೊಳಿಸಿದ ರಿಸರ್ವ್ ಬ್ಯಾಂಕ್,..!ಯಾಕೆ ಗೊತ್ತಾ,.??

    ರಿಸರ್ವ್  ಬ್ಯಾಂಕ್  ಆಫ್ ಇಂಡಿಯಾ 2 ಸಾವಿರರೂಪಾಯಿ ಮುಖಬೆಲೆಯ ನೋಟು ಮುದ್ರಣವನ್ನು ಸ್ಥಗಿತಗೊಳಿಸಿದೆ.ಪ್ರಸಕ್ತ ವರ್ಷ ನೋಟು ಮುದ್ರಣಇಲಾಖೆ 2 ಸಾವಿರ ಮುಖಬೆಲೆಯ ಒಂದುನೋಟನ್ನೂ ಮುದ್ರಿಸಿಲ್ಲ ಎಂದು ಆರ್​ಬಿಐಆರ್​ಟಿಐ ಅರ್ಜಿಗೆ ನೀಡಿರುವಉತ್ತರದಲ್ಲಿ ಸ್ಪಷ್ಟಪಡಿಸಿದೆ. ಆದರೆ ಹಾಲಿ ಇರುವ ನೋಟುಗಳ ಚಲಾವಣೆಗೆ ಸಮಸ್ಯೆಯೇನಿಲ್ಲ. ಆರ್​ಬಿಐ ಮಾಹಿತಿ ಪ್ರಕಾರ ನೋಟು ಮುದ್ರಣ ಇಲಾಖೆ 2016-17ನೇ ಹಣಕಾಸು ವರ್ಷದಲ್ಲಿ 2 ಸಾವಿರ ಮುಖಬೆಲೆಯ ಒಟ್ಟು 3,54,29,91,000 ನೋಟುಗಳನ್ನು ಮುದ್ರಣ ಮಾಡಿತ್ತು. 2017-18 ರಲ್ಲಿ 11,15,07,000 ನೋಟು ಹಾಗೂ 2018-19ನೇ ಸಾಲಿನಲ್ಲಿ ಕೇವಲ4,66,90,000 ನೋಟುಗಳನ್ನು…

  • ಉಪಯುಕ್ತ ಮಾಹಿತಿ

    ರಾಜ್ಯಸರ್ಕಾರದಿಂದ ಗರ್ಭಿಣಿ ಮತ್ತು ಬಾಣಂತಿಯರಿಗೆ “ಮಾತೃಪೂರ್ಣ”ಯೋಜನೆ ಬಾಗ್ಯ!ಇದರ ಬಗ್ಗೆ ನೀವೂ ತಿಳಿಯಿರಿ ಮತ್ತು ನಿಮ್ಮವರಿಗೆ ಶೇರ್ ಮಾಡಿ ತಿಳಿಸಿ…

    ಗರ್ಭಾವಸ್ಥೆಯಲ್ಲಿ ಅಪೌಷ್ಠಿಕತೆಯಿಂದಾಗಿ ಗರ್ಭಿಣಿಯ ಆರೋಗ್ಯ ಹಾಗೂ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಬೆಳವಣಿಗೆಯಲ್ಲಿ ಹಲಾವಾರು ತೊಂದರೆಗಳು ಉಂಟಾಗಿ ಜನಿಸುವ ಮಗುವಿನ ತೂಕ ಕಡಿಮೆ ಇರುವುದು, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ಹೆರಿಗೆಯ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ.

  • ದೇಶ-ವಿದೇಶ

    ಭಾರತದಲ್ಲಿ ಪತ್ನಿಯನ್ನು ಬಿಟ್ಟು ವಿದೇಶಗಳಿಗೆ ಹೋಗುವ ಪತಿಯರಿಗೆ ದೊಡ್ಡ ಶಾಕ್..!ತಿಳಿಯಲು ಈ ಲೇಖನ ಓದಿ…

    ವಿದೇಶಗಳಲ್ಲಿ ಉದ್ಯೋಗ ಮಾಡುತ್ತಾ.. ಕೋಟ್ಯಂತರ ಆಸ್ತಿ ಸಂಪಾದಿಸಿದ್ದೇವೆ… ಎಂದು ಬಹಳಷ್ಟು ಮಂದಿ ಎನ್‌ಆರ್‌ಐಗಳು ನಮ್ಮ ದೇಶದ ಯುವತಿಯನ್ನು ಮದುವೆಯಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯುವತಿಯರ ತಂದೆತಾಯಿ ಸಹ ಆ ಯುವಕ ಎಂತಹವನು ಎಂದು ಆಲೋಚಿಸದೆ, ಹಿಂದೆ ಮುಂದೆ ನೋಡದೆ ಲಕ್ಷಾಂತರ ವರದಕ್ಷಿಣೆ ಸುರಿದು ತಮ್ಮ ಹೆಣ್ಣುಮಕ್ಕಳ ಮದುವೆ ಮಾಡುತ್ತಿದ್ದಾರೆ. ಆದರೆ ಇದೆಲ್ಲಾ ಚೆನ್ನಾಗಿದೆ. ಆದರೆ ಆ ಎನ್‌ಆರ್‌ಐ ಅಳಿಯ, ತಮ್ಮ ಮಗಳನ್ನು ಗರ್ಭಿಣಿ ಮಾಡಿ, ಅಥವಾ ಇನ್ಯಾವುದೋ ಕಾರಣಗಳಿಂದ ಆಕೆಯನ್ನು ಬಿಟ್ಟುಬಿಟ್ಟು ವಿದೇಶಗಳಿಗೆ ಹೋಗುತ್ತಿದ್ದಾನೆ. ಅಂತಹ ಸಮಯದಲ್ಲಾಗುತ್ತದೆ ಅವಸ್ಥೆ. ಇಂದಿನ ಬಹಳಷ್ಟು ಹೆಣ್ಣುಮಕ್ಕಳು ಇಂತಹ ತೊಂದರೆ ಅನುಭವಿಸುತ್ತಿದ್ದಾರೆ.

  • ಸುದ್ದಿ

    2ನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರಕ್ಕೆ ಹೊಗುವಮುನ್ನ ನರೇಂದ್ರ ಮೋದಿ ಮೃತ ಯೋಧರ ಸ್ಮಾರಕಗಳಿಗೆ ಭೇಟಿ…….

    ಎರಡನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಗುರುವಾರ ನರೇಂದ್ರ ಮೋದಿಯವರು ಸಾಯಂಕಾಲ 7 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.ಇದಕ್ಕೂ ಮುನ್ನ ಇಂದು ಮುಂಜಾನೆ ದೆಹಲಿಯಲ್ಲಿ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಸ್ವಾತಂತ್ರ್ಯ ನಂತರ ಹುತಾತ್ಮರಾದ ಯೋಧರಿಗೆ ನರೇಂದ್ರ ಮೋದಿ ಪುಷ್ಪ ನಮನ ಸಲ್ಲಿಸಿದರು. ನರೇಂದ್ರ ಮೋದಿಯವರ ಜೊತೆ ನಿರ್ಗಮಿತ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಸುನಿಲ್ ಲಂಬಾ ಮತ್ತು ವಾಯುಪಡೆಯ ಉಪ ಮುಖ್ಯಸ್ಥ ಏರ್ ಮಾರ್ಷಲ್ ಆರ್…