News

ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸುದ್ದಿ

ಪತ್ನಿಗೆ ಬೆಂಕಿ ಹಚ್ಚಿ ತಾನೂ ವಿಷ ಸೇವಿಸಿದ 70 ವಯಸ್ಸಿನ ವೃದ್ಧ..!

36

ಬೆಂಗಳೂರು: 70 ವರ್ಷದ ವೃದ್ಧನೋರ್ವ ತನ್ನ 65 ವರ್ಷದ ಪತ್ನಿಯನ್ನು ಕೊಂದು ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.ಈ ಘಟನೆ ದೊಡ್ಡಬಳ್ಳಾಪುರ ಸಮೀಪದ ಚನ್ನಪುರ ಗ್ರಾಮದಲ್ಲಿ ನಡೆದಿದೆ. ವೃದ್ಧ ನಾರಾಯಣಪ್ಪ, ಪತ್ನಿ ಲಕ್ಷ್ಮಮ್ಮನ್ನು ಕೊಲೆ ಮಾಡಿದ್ದಾರೆ. ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬದೊಂದಿಗೆ ನಡೆದ ವಾಗ್ವಾದವೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ.

ಪತಿ, ಪತ್ನಿ ಬೇರೆ ಬೇರೆಯಾದ ಬಳಿಕ ನಾರಾಯಣಪ್ಪ ಅವರು ತಮ್ಮ ಬಳಿ ಇದ್ದ 32 ಗುಂಟೆ ಜಮೀನನ್ನು ಕಳೆದ ವರ್ಷ ಮಾರಾಟ ಮಾಡಿದ್ದರು. ಈ ಬಗ್ಗೆ ಮಗ ಹಾಗೂ ಮಗಳು ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಇತ್ತ ಜಾಗ ಮಾರಿ ಹೋಗಿದ್ದ ನಾರಾಯಣಪ್ಪನ ಕೈಯಲ್ಲಿ ಹಣ ಖಾಲಿಯಾದ ಬಳಿಕ ಮತ್ತೆ ತಮ್ಮ ಗ್ರಾಮಕ್ಕೆ ವಾಪಸ್ಸಾಗಿದ್ದರು. ಈ ವೇಳೆ ಪತ್ನಿ, ಮಕ್ಕಳು ಸೇರಿ ನಾರಾಯಣಪ್ಪ ಅವರನ್ನು ಮನೆಯೊಳಗೆ ಸೇರಿಸಿಕೊಂಡಿಲ್ಲ. ಹೀಗಾಗಿ ಅವರು ಅದೇ ಗ್ರಾಮದಲ್ಲಿರುವ ತಮ್ಮ ಅಣ್ಣನ ಮನೆಯಲ್ಲಿ ನಾರಾಯಣಪ್ಪ ವಾಸಿಸುತ್ತಿದ್ದರು.

15 ದಿನಗಳ ಬಳಿಕ ಮತ್ತೆ ತನ್ನ ಮನೆಯತ್ತ ಬಂದ ನಾರಾಯಣಪ್ಪ, ನಿನ್ನ ಮಕ್ಕಳಲ್ಲಿ ಕೇಸ್ ಹಿಂತೆಗೆದುಕೊಳ್ಳಲು ಹೇಳು. ಇಲ್ಲವೆಂದಲ್ಲಿ ಕೊಲ್ಲುವುದಾಗಿ ಪತ್ನಿಗೆ ಬೆದರಿಕೆ ಹಾಕಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಮಕ್ಕಳು ತನ್ನ ಕೇಸ್ ಹಾಕಲು ಪತ್ನಿಯೂ ಬೆಂಬಲ ನೀಡಿದ್ದಾಳೆ ಎಂದು ನಾರಾಯಣಪ್ಪಗೆ ಸಂಶಯ ಮೂಡಿತ್ತು. ಇದೇ ಸಿಟ್ಟಿನಲ್ಲಿ ನಾರಾಯಣಪ್ಪ ಶನಿವಾರ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಮನೆಯೊಳಗೆ ನುಗ್ಗಿದ್ದಾರೆ. ಅಲ್ಲದೆ ಹಾಲ್ ನಲ್ಲಿ ಮಲಗಿದ್ದ ಪತ್ನಿ ಮೇಲೆ ಸೀಮೆ ಎಣ್ಣೆ ಸುರಿದು, ಆಕೆ ಓಡಿ ಹೋಗುವ ಮುಂಚೆ ಬೆಂಕಿ ಹಚ್ಚಿದ್ದಾರೆ.

ಪರಿಣಾಮ ಲಕ್ಷ್ಮಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂದರ್ಭದಲ್ಲಿ ಲಕ್ಷ್ಮಮ್ಮ ಮಗಳು ಮತ್ತು ಸೊಸೆ ಕೋಣೆಯಲ್ಲಿ ಮಲಗಿದ್ದರು. ಹೀಗಾಗಿ ಗಾಢ ನಿದ್ದೆಯಲ್ಲಿದ್ದ ಅವರಿಗೆ ಈ ವಿಚಾರ ಆ ಕೂಡಲೇ ತಿಳಿಯಲಿಲ್ಲ.ಇತ್ತ ಪತ್ನಿಯನ್ನು ಸಾಯಿಸಿದ ನಾರಾಯಣಪ್ಪ ತಾನೂ ವಿಷ ಸೇವಿಸಿ ಬಿದ್ದಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಾಯಿಸಿದರೂ ಅವರು ಅದಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.ದೊಡ್ಡಬಳ್ಳಾಪುರ ಗ್ರಾಮೀಣ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ, ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892,  ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಇಂದು ಪ್ರೇಮನಿವೇದನೆ…

  • ಮನೆ

    ಗೃಹಿಣಿ ನೆನಪಿಟ್ಟುಕೊಳ್ಳಬೇಕಾದ 10 ಸಂಗತಿಗಳು ಯಾವುವು ಗೋತಾ..?ತಿಳಿಯಲು ಈ ಲೇಖನ ಓದಿ ..

    ಜಾಮ್‌ ಬಾಟ್ಲಿಯ ಮುಚ್ಚಳ ತೆಗೆಯುವುದು ಸಾಹಸದ ಕೆಲಸ. ಎರಡೂ ಕೈಗಳನ್ನು ಚೆನ್ನಾಗಿ ಸೋಪು ನೀರಿನಲ್ಲಿ ತೊಳೆದು ಒಣ ಬಟ್ಟೆಯಲ್ಲಿ ಒರೆಸಿ. ಈಗ ಒಣಗಿದ ಕೈಗಳಿಂದ ಬಾಟ್ಲಿಯ ಮುಚ್ಚಳವನ್ನು ತಿರುಗಿಸಿದರೆ ಸುಲಭವಾಗಿ ತೆರೆಯುವುದು.

  • ನೀತಿ ಕಥೆ

    ಒಬ್ಬರೊಂದಿಗೆ ಹೋಲಿಸಿಕೊಂಡು ಬದುಕಬೇಡಿ ಎಂದು ಹೇಳುವ ಸೊಗಸಾದ ಕಥೆ…!ತಿಳಿಯಲು ಈ ಲೇಖನ ಓದಿ …

    ತಮಗಿರುವ ಸೌಲಭ್ಯಗಳು, ಅವಕಾಶಗಳಿಗಿಂತ ಇತರರಿಗೆ ಉತ್ತಮವಾದ ಸೌಲಭ್ಯಗಳು ಇವೆ ಎಂದು ಕೆಲವರು ಭಾವಿಸುತ್ತಾರೆ. ಹಣ, ಸೌಂದರ್ಯ, ಓದು, ಆಸ್ತಿ, ಹುದ್ದೆ…ಹೀಗೆ ಪ್ರತಿ ವಿಷಯದಲ್ಲೂ ಇತರರ ಜತೆಗೆ ಹೋಲಿಸಿಕೊಳ್ಳುತ್ತಿರುತ್ತಾರೆ. ಈ ರೀತಿ ಇನ್ನೊಬ್ಬರ ಜತೆಗೆ ನಮ್ಮನ್ನು ಹೋಲಿಸಿಕೊಳ್ಳುವ ಅಭ್ಯಾಸ ಒಳ್ಳೆಯದಲ್ಲ.

  • ಸುದ್ದಿ

    ದರ್ಶನ್ ಸ್ನೇಹಿತ ಸಿನಿಮಾ ಹಾಗೂ ಕಿರುತೆರೆ ಖ್ಯಾತ ನಟ ನಿಧನ…

    ರಂಗಭೂಮಿ, ಕಿರುತೆರೆ ಹಾಗೂ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದ ಖ್ಯಾತ ನಟ ೪೮ ವರ್ಷದ ಅನಿಲ್ ಕುಮಾರ್ ವಿಧಿವಶರಾಗಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಅವರು ನಗರದ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಹೆಗ್ಗೋಡಿನ ನೀನಾಸಂನಲ್ಲಿ ಅನಿಲ್‍ಕುಮಾರ್ ತರಬೇತಿ ಪಡೆದಿದ್ದರು. ಆಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅನಿಲ್ ಅವರ ಸಹಪಾಠಿಯಾಗಿದ್ದರು. ಮೂಡಲ ಮನೆ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಟ್ಟ ಅನಿಲ್ ಅವರು, ಅನೇಕ ಸೀರಿಯಲ್, ರಂಗಭೂಮಿ ಹಾಗೂ ಸಿನಿಮಾದಲ್ಲಿ ನಟಿಸಿದ್ದಾರೆ. ಅನಿಲ್ ಕುಮಾರ್ ಅವರು…

  • ಸುದ್ದಿ

    ಬಿಪಿಎಲ್ ಕಾರ್ಡ್ ಬಳಕೆದಾರರಿಗೆ ಸರ್ಕಾರದಿಂದ ಶಾಕಿಂಗ್ ನ್ಯೂಸ್, ಎಚ್ಛೆತ್ತುಕೊಳ್ಳಿ ಇಲ್ಲವಾದರೆ ದಂಡ ಖಚಿತ.

    ಬಿಪಿಎಲ್ ಕಾರ್ಡ್ ಯಾರ ಬಳಿ ಇಲ್ಲ ಹೇಳಿ, ಸರ್ಕಾರದ ನಿಯಮ ಅನುಸಾರವಾಗಿ ಯಾರು ಬಡತನ ರೇಖೆಗಿಂತ ಕೆಳಗೆ ಇರುತ್ತಾರೋ ಮತ್ತು ಯಾವ ಕುಟುಂಬದ ಆದಾಯ ಕಡಿಮೆ ಇರುತ್ತದೋ ಅವರು ಮಾತ್ರ ಬಿಪಿಎಲ್ ಕಾರ್ಡ್ ಮಾಡಿಕೊಳ್ಳಲು ಅರ್ಹರು. ಆದರೆ ಈಗ ಕೇವಲ ಬಡವರು ಮಾತ್ರವಲ್ಲದೆ ಶ್ರೀಮಂತರು ಕೂಡ ಬಿಪಿಎಲ್ ಕಾರ್ಡುಗಳನ್ನ ಮಾಡಿಸಿಕೊಂಡಿದ್ದು ಸರ್ಕಾರಕ್ಕೆ ಮೋಸ ಮಾಡಿ ಪಡಿತರ ದಾನ್ಯಗಳನ್ನ ಪಡೆಯುತ್ತಿದ್ದಾರೆ, ಹೌದು ಸರ್ಕಾರೀ ಕೆಲಸದಲ್ಲಿ ಇರುವವರು, ಕುಟುಂಬದ ಆದಾಯ ಜಾಸ್ತಿ ಇರುವವರು ಮತ್ತು ಶ್ರೀಮಂತರು ಕೂಡ ಬಿಪಿಎಲ್ ಕಾರ್ಡುಗಳನ್ನ…

  • ಜ್ಯೋತಿಷ್ಯ

    ಗುರು ರಾಯರ ಕೃಪೆಯಿಂದ ನಿಮ್ಮ ರಾಶಿಗಳಿಗೆ ಶುಭ ಯೋಗವಿದ್ದು ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(27 ಫೆಬ್ರವರಿ, 2019) ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು -ಬಾಕಿಯಿರುವ ಸಾಲಗಳನ್ನು ಸಂಗ್ರಹಿಸಬಹುದು ಅಥವಾಹೊಸ ಯೋಜನೆಗಳಿಗೆ…