News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಸುದ್ದಿ

ಪತ್ನಿಗೆ ಬೆಂಕಿ ಹಚ್ಚಿ ತಾನೂ ವಿಷ ಸೇವಿಸಿದ 70 ವಯಸ್ಸಿನ ವೃದ್ಧ..!

36

ಬೆಂಗಳೂರು: 70 ವರ್ಷದ ವೃದ್ಧನೋರ್ವ ತನ್ನ 65 ವರ್ಷದ ಪತ್ನಿಯನ್ನು ಕೊಂದು ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.ಈ ಘಟನೆ ದೊಡ್ಡಬಳ್ಳಾಪುರ ಸಮೀಪದ ಚನ್ನಪುರ ಗ್ರಾಮದಲ್ಲಿ ನಡೆದಿದೆ. ವೃದ್ಧ ನಾರಾಯಣಪ್ಪ, ಪತ್ನಿ ಲಕ್ಷ್ಮಮ್ಮನ್ನು ಕೊಲೆ ಮಾಡಿದ್ದಾರೆ. ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬದೊಂದಿಗೆ ನಡೆದ ವಾಗ್ವಾದವೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ.

ಪತಿ, ಪತ್ನಿ ಬೇರೆ ಬೇರೆಯಾದ ಬಳಿಕ ನಾರಾಯಣಪ್ಪ ಅವರು ತಮ್ಮ ಬಳಿ ಇದ್ದ 32 ಗುಂಟೆ ಜಮೀನನ್ನು ಕಳೆದ ವರ್ಷ ಮಾರಾಟ ಮಾಡಿದ್ದರು. ಈ ಬಗ್ಗೆ ಮಗ ಹಾಗೂ ಮಗಳು ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಇತ್ತ ಜಾಗ ಮಾರಿ ಹೋಗಿದ್ದ ನಾರಾಯಣಪ್ಪನ ಕೈಯಲ್ಲಿ ಹಣ ಖಾಲಿಯಾದ ಬಳಿಕ ಮತ್ತೆ ತಮ್ಮ ಗ್ರಾಮಕ್ಕೆ ವಾಪಸ್ಸಾಗಿದ್ದರು. ಈ ವೇಳೆ ಪತ್ನಿ, ಮಕ್ಕಳು ಸೇರಿ ನಾರಾಯಣಪ್ಪ ಅವರನ್ನು ಮನೆಯೊಳಗೆ ಸೇರಿಸಿಕೊಂಡಿಲ್ಲ. ಹೀಗಾಗಿ ಅವರು ಅದೇ ಗ್ರಾಮದಲ್ಲಿರುವ ತಮ್ಮ ಅಣ್ಣನ ಮನೆಯಲ್ಲಿ ನಾರಾಯಣಪ್ಪ ವಾಸಿಸುತ್ತಿದ್ದರು.

15 ದಿನಗಳ ಬಳಿಕ ಮತ್ತೆ ತನ್ನ ಮನೆಯತ್ತ ಬಂದ ನಾರಾಯಣಪ್ಪ, ನಿನ್ನ ಮಕ್ಕಳಲ್ಲಿ ಕೇಸ್ ಹಿಂತೆಗೆದುಕೊಳ್ಳಲು ಹೇಳು. ಇಲ್ಲವೆಂದಲ್ಲಿ ಕೊಲ್ಲುವುದಾಗಿ ಪತ್ನಿಗೆ ಬೆದರಿಕೆ ಹಾಕಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಮಕ್ಕಳು ತನ್ನ ಕೇಸ್ ಹಾಕಲು ಪತ್ನಿಯೂ ಬೆಂಬಲ ನೀಡಿದ್ದಾಳೆ ಎಂದು ನಾರಾಯಣಪ್ಪಗೆ ಸಂಶಯ ಮೂಡಿತ್ತು. ಇದೇ ಸಿಟ್ಟಿನಲ್ಲಿ ನಾರಾಯಣಪ್ಪ ಶನಿವಾರ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಮನೆಯೊಳಗೆ ನುಗ್ಗಿದ್ದಾರೆ. ಅಲ್ಲದೆ ಹಾಲ್ ನಲ್ಲಿ ಮಲಗಿದ್ದ ಪತ್ನಿ ಮೇಲೆ ಸೀಮೆ ಎಣ್ಣೆ ಸುರಿದು, ಆಕೆ ಓಡಿ ಹೋಗುವ ಮುಂಚೆ ಬೆಂಕಿ ಹಚ್ಚಿದ್ದಾರೆ.

ಪರಿಣಾಮ ಲಕ್ಷ್ಮಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂದರ್ಭದಲ್ಲಿ ಲಕ್ಷ್ಮಮ್ಮ ಮಗಳು ಮತ್ತು ಸೊಸೆ ಕೋಣೆಯಲ್ಲಿ ಮಲಗಿದ್ದರು. ಹೀಗಾಗಿ ಗಾಢ ನಿದ್ದೆಯಲ್ಲಿದ್ದ ಅವರಿಗೆ ಈ ವಿಚಾರ ಆ ಕೂಡಲೇ ತಿಳಿಯಲಿಲ್ಲ.ಇತ್ತ ಪತ್ನಿಯನ್ನು ಸಾಯಿಸಿದ ನಾರಾಯಣಪ್ಪ ತಾನೂ ವಿಷ ಸೇವಿಸಿ ಬಿದ್ದಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಾಯಿಸಿದರೂ ಅವರು ಅದಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.ದೊಡ್ಡಬಳ್ಳಾಪುರ ಗ್ರಾಮೀಣ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ, ಸರ್ಕಾರದ ಯೋಜನೆಗಳು

    24 ಗಂಟೆ ಇನ್ಮುಂದೆ ವಿದ್ಯುತ್ ಪೂರೈಕೆ, ಪವರ್ ಕಟ್ ಮಾಡಿದರೆ ವಿತರಕರಿಗೆ ದಂಡ..!ತಿಳಿಯಲು ಈ ಲೇಖನ ಓದಿ..

    ವಿದ್ಯುತ್ ಕಳ್ಳತನ ತಡೆಗೆ ಪ್ರೀಪೇಯ್ಡ್ ಅಥವಾ ಸ್ಮಾರ್ಟ್ ಮೀಟರ್ ಅಳವಡಿಸುವುದು ಕಡ್ಡಾಯಗೊಳಿಸುವುದರೊಂದಿಗೆ, ಈ ವರ್ಷದ ಅಂತ್ಯದೊಳಗೆ ತಡೆ ರಹಿತ ವಿದ್ಯುತ್ ನೀಡಲು ಸರಕಾರ ಚಿಂತಿಸಿದೆ.

  • ಸುದ್ದಿ

    ಹಸುವಿನ ಹೊಟ್ಟೆ ಮೇಲೆ ತಾಯಿಯ ಮಡಿಲಿನಲ್ಲಿ ಮಗುವಿನ ಆರೈಕೆಯ ದೃಶ್ಯ.

    ಸಾಮಾನ್ಯವಾಗಿ ಹಸುವಿನ ಹೊಟ್ಟೆ ಮೇಲೆ ಕಪ್ಪು-ಬಿಳುಪು ಬಣ್ಣವಿರುವ  ನಾನಾ ರೀತಿಯ ಚಿತ್ರಗಳು ಕಾಣಸಿಗುತ್ತವೆ. ಇದೀಗ ಇಂತದ್ದೇ ಹಸುವಿನ ಹೊಟ್ಟೆ ಮೇಲೆ ತಾಯಿಯ ಮಡಿಲಿನಲ್ಲಿ ಮಗುವಿನ ಆರೈಕೆಯ ಚಿತ್ರವೊಂದು ಮೂಡಿ ಎಲ್ಲರ ಗಮನ ಸೆಳೆದಿದೆ.  ಮೂಲತಃ ಕೃಷಿ ಜೊತೆಗೆ ಹೈನುಗಾರಿಕೆ ಮಾಡುವ ಜಾಧವ್ ಕುಟುಂಬ ನಾಲ್ಕು ವರ್ಷಗಳ ಹಿಂದೆ ಮಹಾರಾಷ್ಟ್ರದ ಮೀರಜ್ ಜಾನುವಾರು ಮಾರುಕಟ್ಟೆಯಿಂದ ಬಿಳಿ – ಕಪ್ಪು ಬಣ್ಣದ ಜರ್ಸಿ ಪ್ರಬೇಧದ ಹಸುವನ್ನು ತಂದಿದ್ದರು. ಕಳೆದ ಮೂರು ವರ್ಷಗಳಿಂದ ಹೊಟ್ಟೆಯ ಮೇಲೆ ಈ ರೀತಿ ಹಚ್ಚೆ ಮೂಡಲು ಆರಂಭವಾಗಿ…

  • ಸುದ್ದಿ

    ಪಂಜಾಬ್‍ನಲ್ಲಿ ಮತ್ತೆರಡು ಪಾಕ್ ಡ್ರೋಣ್‍ಗಳ ಹಾರಾಟ..! ಇಷ್ಟಕ್ಕೂ ಏನಿದು ಗೊತ್ತಾ,.!!

    ಚಂಡೀಗಢ, ಅ.9-ಚೀನಾ ಡ್ರೋಣ್‍ಗಳ ಮೂಲಕ ಪಾಕಿಸ್ತಾನದ ಉಗ್ರಗಾಮಿಗಳು ಪಂಜಾಬ್ ಮತ್ತು ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯಕ್ಕಾಗಿ ಸ್ಫೋಟಕಗಳು ಮತ್ತು ಶಸ್ತ್ರಾಸ್ತ್ರಗಳನ್ನು ಗಡಿ ಭಾಗದಲ್ಲಿ ಎಸೆದ ಘಟನೆ ಬೆನ್ನಲ್ಲೇ ಮತ್ತೊಂದು ಆಘಾತಕಾರಿ ಪ್ರಕರಣ ವರದಿಯಾಗಿದೆ. ಪಂಜಾಬ್‍ನಲ್ಲಿ ಮತ್ತೆ ಪಾಕಿಸ್ತಾನ ಮೂಲದ ಎರಡು ಡ್ರೋಣ್‍ಗಳು ಹಾರಾಟ ನಡೆಸಿವೆ.ಪಂಜಾಬ್‍ನ ಫಿರೋಜ್‍ಪುರ ಜಿಲ್ಲೆಯ ಹುಸೇನಿವಾಲಾ ಗಡಿಯ ಮೂಲಕ ಡ್ರೋಣ್ ಭಾರತ ಪ್ರವೇಶಿಸುತ್ತಿರುವುದನ್ನು ಪತ್ತೆ ಮಾಡಲಾಗಿದ್ದು, ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಫೀರೋಜïಪುರ ಹುಸೇನಿವಾಲಾ ಪೋಸ್ಟ್ ನಲ್ಲಿರುವ ಗಡಿ ಭದ್ರತಾ ಪಡೆ(ಬಿಎಸ್‍ಎಫ್) ಸಿಬ್ಬಂದಿ ಪಾಕಿಸ್ತಾನದ ಕಡೆಯಿಂದ…

  • ಸುದ್ದಿ

    ಮೋದಿಗೆ ವೋಟ್ ಹಾಕಿ ನನ್ನ ಜೊತೆ ಸಮಸ್ಯೆಯನ್ನು ಬಗೆಹರಿಸಿ ಅಂತೀರಾ… ಆಕ್ರೋಶದಿಂದ ಸಿಎಂ !

    ರಾಯಚೂರು: ಗ್ರಾಮ ವಾಸ್ತವ್ಯಕ್ಕೆಂದು ಕರೇಗುಡ್ಡಗೆ ಕೆಎಸ್.ಆರ್.ಟಿ.ಸಿ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸಿಎಂ ಸಿಟ್ಟಾಗಿ ಪ್ರತಿಭಟನಾಕಾರರು ಮತ್ತು ಸಚಿವರ ವಿರುದ್ಧ ಗರಂ ಆದ ಪ್ರಸಂಗ ಇಂದು ನಡೆಯಿತು. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಯರಮರಸ್ ಸರ್ಕೀಟ್ ಹೌಸ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ, ವೈಟಿಪಿಎಸ್‍ನ ನೂರಾರು ಜನ ಕಾರ್ಮಿಕರು ಸಿಎಂ ಬಸ್‍ಗೆ ಮುತ್ತಿಗೆ ಹಾಕಿದರು. ಈ ವೇಳೆ ಸಿಟ್ಟಿಗೆದ್ದ ಮುಖ್ಯಮಂತ್ರಿಗಳು, ನರೇಂದ್ರ ಮೋದಿಗೆ ವೋಟ್ ಹಾಕಿ ನಮ್ಮತ್ರ ಸಮಸ್ಯೆ ಬಗೆಹರಿಸಿ ಅಂತೀರಾ? ನಿಮಗೆಲ್ಲಾ ಮರ್ಯಾದೆ ಕೊಡಬೇಕೇ? ಲಾಠಿಚಾರ್ಜ್ ಮಾಡ್ಬೇಕು ನಿಮಗೆ ಎಂದು…

  • ಸುದ್ದಿ

    12 ಕಿರು ಬಂದರುಗಳನ್ನು ಅಭಿವೃದ್ಧಿಪಡಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ ಮುಖ್ಯಮಂತ್ರಿ ಕುಮಾರಸ್ವಾಮಿ

    ರಾಜ್ಯದ 12 ಕಿರುಬಂದರುಗಳನ್ನು ಅಭಿವೃದ್ಧಿಪಡಿಸಿ ಆ ಮೂಲಕ ಉದ್ಯೋಗ ಸೃಜನೆಯನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಲೋಕೋಪಯೋಗಿ , ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಾರವಾರ ಮತ್ತು ಮಂಗಳೂರು ಬಂದರುಗಳನ್ನು ಹೊರತುಪಡಿಸಿದರೆ ಉಳಿದ ಕಿರು ಬಂದರುಗಳಲ್ಲಿ ಹೆಚ್ಚಿನ ವಾಣಿಜ್ಯ ಚಟುವಟಿಕೆಗಳು ನಡೆಯಬೇಕು, ಮೀನುಗಾರಿಕೆ ಸೇರಿದಂತೆ ಇತರೆ ವಾಣಿಜ್ಯ ಚಟುವಟಿಕೆಗಳಿಗೂ ಆದ್ಯತೆ ನೀಡಿ ರಾಜ್ಯದ ಎಲ್ಲ ಬಂದರುಗಳ ಸಂಪೂರ್ಣ ಸಾಮರ್ಥ್ಯವನ್ನು ಬಳಸಿಕೊಳ್ಳುವಂತೆ ಮುಖ್ಯಮಂತ್ರಿಗಳು…

  • ಸುದ್ದಿ

    ಎಲ್ಲರಿಗೂ ಟಾರ್ಗೆಟ್ ಆದ ‘ರಾಧಾ ರಮಣ’ ಸೀರಿಯಲ್ ನಟಿ ಸುಜಾತ…!

    ‘ರಾಧಾರಮಣ’ ಧಾರಾವಾಹಿಯಲ್ಲಿ ಸಿತಾರಾ ದೇವಿ ಆಗಿ ಅಭಿನಯಿಸುತ್ತಿದ್ದ ಸುಜಾತ ನಿಜ ಜೀವನದಲ್ಲಿ ‘ವಿಲನ್’ಅಲ್ಲ. ಆಕೆ ಅನ್ನಪೂರ್ಣೇಶ್ವರಿ ಅಂತೆಲ್ಲಾ ‘ಅಗ್ನಿಸಾಕ್ಷಿ’ ಚಂದ್ರಿಕಾ ಖ್ಯಾತಿಯ ಪ್ರಿಯಾಂಕಾ ಹಾಡಿ ಹೊಗಳುತ್ತಿದ್ದರು. ಯಾಕಂದ್ರೆ, ಅಡುಗೆ ಮನೆಯ ನೇತೃತ್ವ ವಹಿಸಿಕೊಂಡಿದ್ದ ಸುಜಾತಾ ರುಚಿರುಚಿಯಾಗಿ ಮಾಡುತ್ತಿದ್ದ ಅಡುಗೆ ಪ್ರಿಯಾಂಕಾಗೆ ಇಷ್ಟ ಆಗಿತ್ತು. ಮೊದಲವಾರ ಸುಜಾತ ಜೊತೆ ಕ್ಲೋಸ್ ಆಗಿದ್ದವರು ಪ್ರಿಯಾಂಕಾ. ಇದೀಗ ಅದೇ ಪ್ರಿಯಾಂಕಾ ಎರಡನೇ ವಾರದ ನಾಮಿನೇಷನ್ ನಲ್ಲಿ ಸುಜಾತಾರನ್ನ ಟಾರ್ಗೆಟ್ ಮಾಡಿದ್ದಾರೆ.ಅವಶ್ಯಕತೆ ಇಲ್ಲದೇ ಇದ್ದರೂ ಸುಜಾತಾ ಕೂಗಾಡಿದ್ರಂತೆ. ಇದನ್ನೇ ನೆಪ ಮಾಡಿಕೊಂಡು ಸುಜಾತಾ…